Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ತೊಕ್ಕೊಟ್ಟು ರೈಲ್ವೇ ಹಳಿ ಸಮೀಪ ಇರುವ ಮಸೀದಿಗೆ ಕಿಡಿಗೇಡಿಯೋವ೯ ಕಲ್ಲೆಸೆದು ಹಾನಿಗೊಳಿಸಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ನಡೆದಿದ್ದು, ಆರೋಪಿಯನ್ನು ಸಾವ೯ಜನಿಕರು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ತೊಕ್ಕೊಟ್ಟು ಮಸ್ಜಿದುಲ್ ಹುದಾ ಮಸೀದಿಗೆ ಹಾನಿಯಾಗಿದೆ. ಮಸೀದಿಯ ಕಿಟಕಿಯ ಮೂರು ಗಾಜುಗಳು ಪುಡಿಯಾಗದೆ. ಮಸೀದಿಯೊಳಗೆ ಧಮ೯ ಗುರುಗಳು ಇರುವ ಸಂದಭ೯ ಒಳಪೇಟೆಯಿಂದಾಗಿ ರೈಲ್ವೇ ಕೆಳ ಸೇತುವೆ ಮೂಲಕ ಮಸೀದಿ ಹತ್ತಿರ ಬಂದ ಕಿಡಿಗೇಡಿ ಮೂರು ಕಲ್ಲುಗಳನ್ನು ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯನ್ನು ಮಸೀದಿಯೊಳಗಿದ್ದ ಧಮ೯ಗುರುಗಳು ನೋಡಿ ಕೆಳಗಿಳಿದು ಇತರರಲ್ಲಿ ವಿಷಯ ತಿಳಿಸಿದ್ದು, ಅವರು ಕಿಡಿಗೇಡಿಗೆ ಹುಡುಕಾಡಿದಾಗ, ಭಟ್ನಗರ ನಿವಾಸಿ ಗಾಂಜಾ ವ್ಯಸನಿ ಸಾಗರ್ ಪತ್ತೆಯಾಗಿದ್ದಾನೆ. ಈತನ ಕೈಯಿಂದ ಗಾಂಜಾ, ಕಲ್ಲು ಪತ್ತೆಯಾಗಿದ್ದು ಉಳ್ಳಾಲ ಪೊಲೀಸರುಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉತ್ತರಕರ್ನಾಟಕ ಮೂಲದ ಯುವತಿಯರು ನಿಗೂಢವಾಗಿ ನಾಪತ್ತೆಯಾಗುತ್ತಿದ್ದು, ಉಳ್ಳಾಲಕ್ಕೆಂದು ಕೆಲಸಕ್ಕೆ ಬಂದವರನ್ನು ಮಾರಾಟ ಮಾಡಲಾಗುತ್ತಿದೆ ಎಂದು ಹಳಿಯಾಳ ರಾಯಪಟ್ಟಣದಿಂದ ಉಳ್ಳಾಲದ ಕೈಕೋ ಸಮೀಪ ಕಂಪೆನಿಗೆ ಕೆಲಸಕ್ಕೆ ಬಂದು ನಾಪತ್ತೆಯಾದ ಯುವತಿಯನ್ನು ಹುಡುಕುತ್ತಾ ಶುಕ್ರವಾರ ಉಳ್ಳಾಲ ಪೊಲೀಸ್ ಠಾಣೆಗೆ ಯುವತಿ ಸಂಬಂಧಿಕರು ಹಾಗೂ ಸಾಮಾಜಿಕ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ. ಹಳಿಯಾಳದ ರಾಯಪಟ್ಟಣದ ಸಿದ್ದಿ ಜನಾಂಗದ ಬಾಬು ಚಿಮನು ಬಾಜಾರಿ ಅವರ ಪುತ್ರಿ ದೊಂಡಿಬಾಯಿ ಚಿಮನು ಬಾಜಾರಿ(20) ನಾಪತ್ತೆಆದ ಯುವತಿಯಾಗಿದ್ದು, ಈಕೆ ಉಳ್ಳಾಲದ ಕೈಕೋ ಫಿಶ್‍ಮಿಲ್‍ಗೆ ಎಂಟು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದಳು. ಈಕೆಯನ್ನು ಯಲ್ಲಾಪುರದ ಸುನಿತಾ ದುಳು ಬಿಚ್ಚಕಲೆ ಉಳ್ಳಾಲಕ್ಕೆ ಕೆಲಸಕ್ಕೆ ಸೇರಿಸಿದ್ದಳು. ಹೋಳಿಗೆ ಬಂದಿರಲಿಲ್ಲ : ಉಳ್ಳಾಲದಲ್ಲಿ ಕೆಲಸ ಮಾಡುತ್ತಿದ್ದ ದೊಂಡಿ ಬಾಯಿ ಹೋಳಿಗೆ ಊರಿಗೆ ಬರುವವಳಿದ್ದಳು ಅದರೆ ಈಕೆ ಹೋಳಿ ಹಬ್ಬಕ್ಕೆ ಬಾರದೆ ಇದ್ದಾಗ ಮನೆಯವರು ದೂರವಾಣಿ ಕರೆ ಮಾಡಿದ್ದು, ದೂರವಾಣಿ ಕರೆ ಸ್ವೀಕರಿಸಿರಲಿಲ್ಲ. ಬಳಿಕ ಕೆಲಸಕ್ಕೆ ಕರೆದುಕೊಂಡು ಹೋಗಿದ್ದ ಸುನಿತಾಳಿಗೆ ಕರೆ ಮಾಡಿದಾಗ ಅಕೆಯೂ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಮೋದಿ ಸರಕಾರ ಆಡಳಿತ ಚುಕ್ಕಾಣಿ ಹಿಡಿದ ನಂತರ ಮಹಿಳೆಯರು ಕಷ್ಟದ ದಿನಗಳನ್ನೇ ಎದುರಿಸುತ್ತಿದ್ದಾರೆ ಎಂದು ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಜಯಂತಿ ಶೆಟ್ಟಿ ಹೇಳಿದ್ದಾರೆ. ಅವರು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ಗುರುವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಯುವ ಜನಾಂಗ ಇಂದು ದಿಕ್ಕೆಟ್ಟು ಹೋಗಿದೆ. ಬದುಕಿಗೆ ಆಸರೆ, ನೆಮ್ಮದಿ ಸಿಗುತ್ತಿಲ್ಲ. ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಬಡ ಯುವತಿಯರು ಉದ್ಯೋಗ ವಂಚಿತರಾಗಿದ್ದಾರೆ. ಉದ್ಯೋಗದ ಹಕ್ಕಿಗಾಗಿ ಎಲ್ಲರೂ ಹೋರಾಡಬೇಕಾಗಿದೆ. ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪೆಟ್ರೋಲ್, ಡಿಸೀಲ್ ಬೆಲೆಯೂ ನಿರಂತರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರ ಪರವಾಗಿ ಕಾರ್ಯಾಚರಿಸುತ್ತಿರುವ ಸರಕಾರಗಳ ವಿರುದ್ಧ ಎಚ್ಚೆತ್ತು ಜನ ಹೋರಾಡದಿದ್ದಲ್ಲಿ, ಮುಂದಿನ ದಿನಗಳಲ್ಲಿ ಎಲ್ಲರೂ ಬೀದಿಪಾಲಾಗುವುದರಲ್ಲಿ ಸಂಶಯವಿಲ್ಲ ಎಂದರು. ಜೆ.ಎಂ.ಎಸ್ ಜಿಲ್ಲಾ ಸಂಚಾಲಕಿ ಪದ್ಮಾವತಿ.ಯಸ್.ಶೆಟ್ಟಿ ಮಾತನಾಡಿ ಜಾತ್ಯಾತೀತ ಪಕ್ಷಗಳು ಬೆಲೆ ಏರಿಕೆಯನ್ನು ನಡೆಸುತ್ತಲೇ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಪ್ರಧಾನಿ ಮೋದಿ ವಿಮಾನದಲ್ಲಿ ಹಾರಾಡಿ ಉತ್ಕøಷ್ಟ ಆಹಾರ ತಿನ್ನುವುದರಲ್ಲೇ ನಿರತರಾಗಿದ್ದಾರೆ. ಇಲ್ಲಿ ಬಡ ಜನತೆ ಊಟವಿಲ್ಲದೆ ಉಪವಾಸ ಸತ್ತರೂ, ಅವರು ಕಾರ್ಪೊರೇಟ್ ಸಂಸ್ಥೆಗಳ ಏಳಿಗೆಗಾಗಿ ಮಾತ್ರ ದುಡಿಯುತ್ತಿದ್ದಾರೆ ಎಂದು ಎಸ್‍ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಹೇಳಿದ್ದಾರೆ. ಅವರು ಕೇಂದ್ರ ಸರಕಾರದ ಜನವಿರೋಧಿ ಮತ್ತು ಬೆಲೆ ಏರಿಕೆಯ ವಿರುದ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ಮೋದಿ ಸರಕಾರ ದೇಶವನ್ನು ಅವನತಿಯತ್ತ ಕೊಂಡೊಯ್ಯುತ್ತಿದೆ. ಬಡಜನರಿಗೆ ಜೀವನ ನಡೆಸುವಂತಹ ವಾತಾವರಣ ನಿರ್ಮಿಸುತ್ತಿಲ್ಲ. ಕಾರ್ಪೊರೇಟ್ ಕುಳಗಳ ಪರವಾಗಿ ಆಡಳಿತ ನಡೆಸುತ್ತಿರುವ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತಿಬೇಕಾದ ಪ್ರತಿಪಕ್ಷಗಳು ಮೌನಸಮ್ಮತಿಯನ್ನು ವಹಿಸಿರುವುದು ದುರಾದೃಷ್ಟ. ಬೀದಿಗಳಲ್ಲಿ ಪ್ರತಿಭಟಿಸಿ ಜನರನ್ನು ಮೋಸಗೊಳಿಸುವ ಬದಲು ಪಾರ್ಲಿಮೆಂಟಿನ ಒಳಗಡೆ ದನಿ ಎತ್ತಿ ಪ್ರತಿಭಟಿಸಲು ಮುಂದಾಗದೇ ಮೋದಿ ಪರವಾಗಿಯೇ ಪ್ರತಿಪಕ್ಷಗಳು ನಿಂತಿದೆ ಅನ್ನುವುದನ್ನು ಸಾಬೀತುಪಡಿಸುತ್ತದೆ. ದಿನಬಳಕೆ ವಸ್ತುಗಳ ಬೆಲೆ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮಂಗಳೂರು: ರಾಜ್ಯದ ವಿಚಾರವಾದಿ ಕಲಬುರ್ಗಿ ಹತ್ಯೆ ಬಳಿಕ ಇದೀಗ ಮತ್ತೆ ಮಂಗಳೂರಲ್ಲಿ ಮತ್ತೊಬ್ಬ ವಿಚಾರವಾದಿಯ ಹತ್ಯೆ ಯತ್ನ ನಡೆದಿದೆ. ಅಪರಿಚಿತರ ತಂಡವೊಂದು ಖ್ಯಾತ ವಿಚಾರವಾದಿ ನರೇಂದ್ರ ನಾಯಕ್ ಹತ್ಯೆಗೆ ವಿಫಲ ಯತ್ನ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ವಿಚಾರವಾದಿಗಳಿಗೆ ಭದ್ರತೆ ಇಲ್ಲ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ. ಕಲಬುರ್ಗಿ ಹತ್ಯೆಯ ಆರೋಪಿಗಳು ವರ್ಷ ಕಳೆದರೂ ಪತ್ತೆಯಾಗದೇ ಇರುವುದು ಪೊಲೀಸ್ ಇಲಾಖೆಗೂ ಸವಾಲಾಗಿದ್ದು ಇದೀಗ ನರೇಂದ್ರ ನಾಯಕ್ ಹತ್ಯೆಗೆ ಸಂಚು ನಡೆದಿದೆ. ನಗರದ ಲೇಡಿಹಿಲ್ ಬಳಿ ವಾಸವಾಗಿರುವ ವಿಚಾರವಾದಿ ನರೇಂದ್ರ ನಾಯಕ್ ಅವರನ್ನು ಬುಧವಾರ ಬೆಳಿಗ್ಗಿನ ಜಾವ ಆರು ಘಂಟೆ ಸುಮಾರಿಗೆ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಲಾಗಿದೆ. ಬೈಕಿನನಲ್ಲಿ ಬಂದ ಇಬ್ಬರು ಅಪರಿಚಿತರು ಕಾರಿನ ಟೈರ್ ಪಂಕ್ಚರ್ ಆಗಿದೆ ಎಂದು ಹೇಳಿದ್ದಾರೆ. ಆದರೆ ನಾಯಕ್ ಅನುಮಾನಗೊಂಡು ಕಾರನ್ನು ನಿಲ್ಲಿಸದೇ ತೆರಳಿದ್ದಾರೆ ನಂತರ ಹತ್ತಿರದಲ್ಲಿದ್ದ ಪೆಟ್ರೋಲ್ ಪಂಪ್ ಗೆ ತೆರಳಿ ಕಾರಿನ ಗಾಳಿ ಪರೀಕ್ಷಿಸಿದಾಗ ಕೊಂಚವೂ…

Read More

Ullal news network Deralakatte: There is a lack of multiplexes in rural areas. If multiplexes are opened in these regions it will help Kannada film industry to grow further said Sandalwood actor-director Rakshit Shetty. He was speaking in a national level seminar and Beacon-2K17 media festival held at Nitte college of communication at Paneer campus at Deralakatte here on Tuesday. People of Puttur could not watch Kirik Party as it was screened there. Kannada films don’t get screened other states, he said. Rakshit Shetty spoke about his experiences after donning director’s cap. He put forth several questions before students like,…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯದ ಅರಣ್ಯ ಸಚಿವ ರಮಾನಾಥ್ ರೈ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಅಸ್ಪತ್ರೆಗೆ ಗುರುವಾರ ದಾಖಲಿಸಿರುವ ಬಗ್ಗೆ ವರದಿಯಾಗಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರೈ ಅವರು ರಕ್ತದೊತ್ತಡ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಾಖಲು ಮಾಡಲಾಗಿದೆ ಹೊರತು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಹೆಚ್ಚಿನ ಸಮಸ್ಯೆಯಿಲ್ಲ. ಬೇಗನೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಸಹೋದರ ದಶರಥ ರೈ ಹೇಳಿಕೆ ನೀಡಿದ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆ.

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮುಂಬಯಿ: ಟಿಬಿ, ಪೋಲಿಯೋ ರೋಗಗಳ ವಿರುದ್ದ ದ ಅಭಿಯಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಬಿಗ್ ಬಿ ಇದೀಗ ಮಹಿಳೆಯರನ್ನು ಕಾಡುವ ಸ್ತನದ ಕ್ಯಾನ್ಸರ್ ಬಗ್ಗೆಯೂ ಜಾಗೃತಿಯನ್ನು ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹೌದು ಸ್ತನ ಕ್ಯಾನ್ಸರ್ ಬಗ್ಗೆ “ಎಬಿಸಿ ಆಫ್ ಬ್ರೆಸ್ಟ್ ಕ್ಯಾನ್ಸರ್’ ಎಂಬ ಮೊಬೈಲ್ ಆಪ್ಲಿಕೇಶನ್ ಬಿಡುಗಡೆಯನ್ನು ಮಾಡಿದ ನಂತರ ಮಾತನಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಸ್ತನ ಕ್ಯಾನ್ಸರ್‍ನಂತಹ ವ್ಯಾದಿಯ ಬಗ್ಗೆ ಮಹಿಳೆಯರು ಮುಜುಗರ ಹಾಗೂ ಕೀಳರಿಮೆಯನ್ನು ಇಟ್ಟುಕೊಳ್ಳದೇ ಸ್ವಸ್ಥ ಮನೋಭಾವದಿಂದ ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಮಹಿಳೆಯರಲ್ಲಿ ಧೈರ್ಯ ತುಂಬಿದ್ದಾರೆ. ವ್ಯಾದಿಗೆ ತುತ್ತಾದ ಮಹಿಳೆಯರು ಇತರ ಯಾವುದೇ ಬಗೆಯ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುವ ಹಾಗೆ ಸ್ತನ ಕ್ಯಾನ್ಸರ್‍ಗೂ ಯಾವುದೇ ರೀತಿಯ ಮುಜುಗರವನ್ನು ಪಡದೇ ಧೈರ್ಯದಿಂದ ಚಿಕಿತ್ಸೆಯನ್ನು ಪಡೆಯಬೇಕು. “ಎಬಿಸಿ ಆಫ್ ಬ್ರೆಸ್ಟ್ ಕ್ಯಾನ್ಸರ್’ ಮೊಬೈಲ್ ಆಪ್ಲಿಕೇಶನ್ ಈ ರೋಗದ ಬಗೆಗಿನ ಮಾಹಿತಿಗಳನ್ನು ಆಮೂಲಾಗ್ರವಾಗಿ ಒದಗಿಸುತ್ತದೆ ಎಂದರು. ಕ್ಯಾನ್ಸರ್ ನಂತಹ ರೋಗಗಳ ಬಗ್ಗೆ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ತುಳುನಾಡ ರಕ್ಷಣಾ ವೇದಿಕೆ ಇದರ ಮಂಗಳೂರು ವಿಧಾನಸಭಾ ಕ್ಷೇತ್ರದ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅಸಂಘಟಿತ ಕಾರ್ಮಿಕರಿಗೆ ವಿಮಾ ಕಾರ್ಡು ವಿತರಣಾ ಕಾರ್ಯಕ್ರಮ ಹಾಗೂ ಅಪಘಾತ ಜೀವರಕ್ಷಕ ಯೋಜನೆಯ ಮಾಹಿತಿ ಶಿಬಿರ ಮಾ.17ರ ಸಂಜೆ 4.00ಕ್ಕೆ ದೇರಳಕಟ್ಟೆಯಲ್ಲಿ ನಡೆಯಲಿದೆ ಎಂದು ತು.ರ.ವೇ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಹೇಳಿದ್ದಾರೆ. ತೊಕ್ಕೊಟ್ಟು ಖಾಸಗಿ ಹೊಟೇಲಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಸಾರ್ವಜನಿಕ ಜೀವನದಲ್ಲಿ ಬೇಧ ಭಾವ ರಹಿತರಾಗಿ ಸಮಾಜದಲ್ಲಿ ಸಾಮರಸ್ಯ ತರಲು ತು.ರ.ವೇ ಶ್ರಮಿಸುತ್ತಾ ಬಂದಿದೆ. ಪತ್ರಕರ್ತರ ಹಲ್ಲೆ ಖಂಡಿಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಹೋರಾಟ, ಮೆಡಿಕ್ಲೈಮ್ ಕಂಪೆನಿಗೆ ಮುತ್ತಿಗೆ, ಮುಡಿಪು ಇನ್ಫೋಸಿಸ್ ವಠಾರದಲ್ಲಿ ಕೊಳವೆ ಬಾವಿ ವಿರೋಧಿಸಿ ಹೋರಾಟ, ಕಲ್ಲಾಪುವಿನಿಂದ ತಲಪಾಡಿವರೆಗೆ ಹೆದ್ದಾರಿ ಪ್ರಾಧಿಕಾರ 60 ಮೀ. ಹೆಚ್ಚುವರಿ ಅಗಲೀಕರಣದ ವಿರುದ್ಧ ಹೋರಾಟ, ಹೆದ್ದಾರಿ ವಶಪಡಿಸಿಕೊಂಡ ಜಾಗದ ಮಾರುಕಟ್ಟೆ ದರ ಹೆಚ್ಚಳ, ಜೆಪ್ಪು…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಬೆಂಗಳೂರು: ರಾಜ್ಯ ವಿಧಾನಮಂಡಲ ಸಭೆಯಲ್ಲಿ ಬುಧವಾರ ನಡೆದ 2017-18ರ ಬಜೆಟಿನಲ್ಲಿ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನಾಗಿ ಮಾಡುವ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ರಾಜ್ಯದ ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ. ದಕ್ಷಿಣ ಕನ್ನಡ- ಮೂಡಬಿದರೆ, ಕಡಬ ಉಡುಪಿ-ಬ್ರಹ್ಮಾವರ, ಕಾಪು, ಬೈಂದೂರು ಕೊಪ್ಪಳ-ಕುಕನೂರು, ಕನಕಗಿರಿ, ಕಾರಟಗಿ ಬಾಗಲಕೋಟೆ-ಗುಳೇದ ಗುಡ್ಡ, ರಬಕವಿ, ಬನಹಟ್ಟಿ, ಬೆಳಗಾವಿ-ನಿಪ್ಪಾಣಿ, ಮೂಡಲಗಿ, ಕಾಗವಾಡ ಚಾಮರಾಜನಗರ-ಹನೂರು ದಾವಣಗೆರೆ-ನ್ಯಾಮತಿ ಬೀದರ್-ಚಿಟಗುಪ್ಪ, ಹುಲಸೂರು, ಕಮಲಾನಗರ ಬಳ್ಳಾರಿ-ಕುರುಗೋಡು, ಕೊಟ್ಟೂರು, ಕಂಪ್ಲಿ ಧಾರವಾಡ-ಅಣ್ಣಿಗೇರಿ, ಅಳ್ನಾವರ, ಹುಬ್ಬಳ್ಳಿ ನಗರ ಗದಗ-ಗಜೇಂದ್ರಗಡ, ಲಕ್ಷ್ಮೇಶ್ವರ ಕಲಬುರಗಿ-ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಭಾದ್ ಯಾದಗಿರಿ-ಹುಣಸಗಿ, ವಡಗೆರ, ಗುರುಮಿಟ್ಕಲ್ ರಾಯಚೂರು – ಮಸ್ಕಿ, ಸಿರಾವರ ಬೆಂಗಳೂರು ನಗರ -ಯಲಹಂಕ ವಿಜಯಪುರ-ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ, ತಾಳಿಕೋಟೆ, ಚಡಚಣ, ಕೋಲ್ಹಾರ ಹಾವೇರಿ-ರಟ್ಟಿಹಳ್ಳಿ ಮೈಸೂರು-ಸರಗೂರು ಚಿಕ್ಕಮಗಳೂರು-ಅಜ್ಜಂಪುರ ಉತ್ತರ ಕನ್ನಡ-ದಾಂಡೇಲಿ ಕೋಲಾರ – ಕೆಜಿಎಫ್ ತಾಲೂಕು ಕೇಂದ್ರಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ.

Read More