UN NETWORKS ಸೋಮೇಶ್ವರ: ಸೋಮೇಶ್ವರ ಗ್ರಾಮದಲ್ಲಿ ಧಾರ್ಮಿಕ ಸ್ಥಳಗಳ ಸಮೀಪ ಕಾನೂನು ಬಾಹಿರವಾಗಿ ಮಧ್ಯದ ಅಂಗಡಿ ಕಟ್ಟಡ ನಿರ್ಮಾಣಾಗುತ್ತಿದ್ದು, ಇದಕ್ಕೆ ತಡೆ ಹೇರಬೇಕು ಎಂದು ಒತ್ತಾಯಿಸಿ ಕಾಟುಂಗರೆ ಡೈಮಂಡ್ ವೆಲ್ಫೇರ್ ಅಸೋಸಿಯೇಶನ್ ಜಿಲ್ಲಾಧಿಕಾರಿ, ಅಬಕಾರಿ ಇಲಾಖೆ ಹಾಗೂ ಸೋಮೇಶ್ವರ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದೆ. ಸೋಮೇಶ್ವರ ಗ್ರಾಮದ 18ನೇ ವಾರ್ಡ್ ಕದಿ ಎಂಬಲ್ಲಿ ವಿಷ್ಣುಮೂರ್ತಿ ದೇವಸ್ಥಾನ, ಮುಹಿಯುದ್ದೀನ್ ಜುಮಾ ಮಸೀದಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಶಾಲೆ ಸಹಿತ 200ಕ್ಕೂ ಅಧಿಕ ಮನೆಗಳಿಂದ ಜನನಿಬಿಡ ಪ್ರದೇಶವಾಗಿದೆ. ಆದರೆ 100 ಮೀಟರ್ ಅಂತರದಲ್ಲಿ ವೈನ್ಶಾಪ್ ಕಟ್ಟಡ ನಿರ್ಮಾಣವಾಗುತ್ತಿದ್ದು ಅಬಕಾರಿ ನಿಯಮದ ಉಲ್ಲಂಘನೆಯಾಗಿರುವುದರಿಂದ ಇದಕ್ಕೆ ಅನುಮತಿ ನೀಡಬಾರದು ಎಂದು ಡೈಮಂಡ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಸಂಶುದ್ದೀನ್ ಉಚ್ಚಿಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಉಚ್ಚಿಲ್ ಹಾಗೂ ಅಬಕಾರಿ ಇಲಾಖೆಯ ಉಪನಿರೀಕ್ಷಕಿ ಶೈಲಜಾ ಮನವಿ ಸ್ವೀಕರಿಸಿದ್ದಾರೆ.
Author: UllalaVani
UN NETWORKS ಕಿನ್ಯ : ದೇರಳಕಟ್ಟೆಯ ಬ್ಯಾರಿ ಲೇಖಕರು ಮತ್ತು ಕಲಾವಿದರ ಬಳಗವಾದ `ಮೇಲ್ತೆನೆ’ ಸಂಘಟನೆಯ ವತಿಯಿಂದ ಮಂಗಳವಾರ ಕಿನ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ `ಮೇಲ್ತೆನೆ’ಯ ಅಧ್ಯಕ್ಷ ಆಲಿಕುಂಞ ಪಾರೆ ನಾಡಿನ ಎಲ್ಲೆಡೆ ಬ್ಯಾರಿ ಭಾಷಾ ದಿನ ಆಚರಿಸುತ್ತಿರುವುದು ಸಂತಸದ ವಿಚಾರ. ಬ್ಯಾರಿಗಳ ಪಾಲಿಗೆ ಈ ದಿನ ಹಬ್ಬದ ದಿನವಾಗಿ ಮಾರ್ಪಾಡು ಆಗಲಿ. ಭವಿಷ್ಯ ದಿನಗಳಲ್ಲಿ ಅ.3ರಂದು ಮನೆ ಮನೆಗಳಲ್ಲಿ ಬ್ಯಾರಿ ಭಾಷಾ ದಿನದ ಸಂಭ್ರಮ ಕಂಡು ಬರಲಿ ಎಂದು ಆಶಿಸಿದರು. ಮೇಲ್ತೆನೆಯ ಉಪಾಧ್ಯಕ್ಷ ಇಸ್ಮತ್ ಪಜೀರ್, ಪ್ರಧಾನ ಕಾರ್ಯದರ್ಶಿ ಟಿ. ಇಸ್ಮಾಯೀಲ್, ಜೊತೆ ಕಾರ್ಯದರ್ಶಿ ಬಶೀರ್ ಕಲ್ಕಟ್ಟ, ಸದಸ್ಯರಾದ ಬಶೀರ್ ಅಹ್ಮದ್ ಕಿನ್ಯ, ನಿಯಾಝ್ ಪಿ., ರಫೀಕ್ ಪಾಣೇಲ, ಆರೀಫ್ ಕಲ್ಕಟ್ಟ, ಮುಹಮ್ಮದ್ ಬಾಷಾ, ಹಂಝ ಮಲಾರ್ ಉಪಸ್ಥಿತರಿದ್ದರು.
UN NETWORKS ಉಳ್ಳಾಲ: ಬೈಕಿನಲ್ಲಿ ಬಂದ ಆಗಂತುಕರಿಬ್ಬರು ತಲವಾರು ದಾಳಿ ನಡೆಸಿ ವ್ಯಕ್ತಿಯೋರ್ವನ ಹತ್ಯೆ ನಡೆಸಿ, ಇನ್ನೋರ್ವನ ಮೇಲೆ ದಾಳಿಗೈದು ಪರಾರಿಯಾದ ಘಟನೆ ಉಳ್ಳಾಲದ ಮುಕ್ಕಚ್ಚೇರಿ ಮಸೀದಿ ಗೇಟಿನ ಎದುರುಗಡೆ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ. ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಜುಬೈರ್ (39) ಹತ್ಯೆಯಾದವರು. ಇವರ ಜತೆಗಿದ್ದ ಮಾರ್ಗತಲೆ ನಿವಾಸಿ ಇಲ್ಯಾಸ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಸಂಜೆ ಮುಕ್ಕಚ್ಚೇರಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದಂತೆ ಬೈಕಿನಲ್ಲಿ ಬಂದ ಇಬ್ಬರು ಆಗಂತುಕರು ತಲವಾರಿನಿಂದ ಜುಬೈರ್ ಅವರ ತಲೆಯ ಭಾಗಕ್ಕೆ ಕಡಿದಿದ್ದಾರೆ. ಇದನ್ನು ಇಲ್ಯಾಸ್ ಅವರು ತಡೆಯಲು ಬಂದಾಗ ಅವರ ಕೈ ಮತ್ತು ಕಾಲಿನ ಭಾಗಕ್ಕೆ ಇಬ್ಬರು ಕಡಿದು , ಬೈಕಿನ ಮೂಲಕ ಪರಾರಿಯಾಗಿದ್ದಾರೆ. ಉಳ್ಳಾಲದ ಫಿಶ್ಮಿಲ್ನಲ್ಲಿ ಇಲೆಕ್ಟ್ರೀಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜುಬೈರ್ ಅವರು ವಿವಾಹಿತರಾಗಿದ್ದು, ನಾಲ್ವರು ಶಾಲೆ ಕಲಿಯುವ ಮಕ್ಕಳಿದ್ದಾರೆ. ಹತ್ಯೆಗೀಡಾದ ಜುಬೈರ್ ಈವರೆಗೂ ಯಾವುದೇ ಸಂಘಟನೆಗಳಲ್ಲಿ ತೊಡಗಿಸಿಕೊಂಡಿಲ್ಲ. ವೈಯಕ್ತಿಕ ದ್ವೇಷ ಸಾಧ್ಯತೆ : ಜುಬೈರ್…
UN NETWORKS ತಲಪಾಡಿ: ಕೇರಳದಲ್ಲಿ ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ ಜನ ಸುರಕ್ಷಾ ಯಾತ್ರೆ ಮುಗಿಸಿ ದೆಹಲಿಗೆ ವಾಪಸ್ಸಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಗಡಿನಾಡು ತಲಪಾಡಿಯಲ್ಲಿ ಹೂಹಾರ ಹಾಕುವ ಮೂಲಕ ಸ್ವಾಗತಿಸಿದರು.
UN NETWORKS ಉಜಿರೆ: ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ವತಿಯಿಂದ ” ಉನ್ನತ ಗುರಿಗಾಗಿ ಉತ್ತಮ ಮಾರ್ಗದರ್ಶನ” ಎಂಬ ಘೋಷ ವಾಕ್ಯದಲ್ಲಿ ಯುನಿಟ್ ಮಟ್ಟದಲ್ಲಿ ಸಕ್ರೀಯ ಕಾರ್ಯಕರ್ತರನ್ನು ಸೃಷ್ಟಿಸುವ ನಿಟ್ಟಿನಲ್ಲಿ ನಡೆದ 4ಜಿ ಕ್ಯಾಂಪ್ ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನರವರ ಅಧ್ಯಕ್ಷತೆಯಲ್ಲಿ ಉಜಿರೆ ಮಲ್ಜ ಅ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಅಕ್ಟೋಬರ್ 1 ಆದಿತ್ಯವಾರ ಮಧ್ಯಾಹ್ನ ಗಂಟೆಗೆ ಮಲ್ಜ ಅ ವಿದ್ಯಾ ಸಂಸ್ಥೆಯ ಶಿಲ್ಪಿ ಸಯ್ಯದ್ ಜಲಾಲುದ್ದೀನ್ ತಂಙಳ್ ರವರ ದುಆ:ದೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ರವರ ಉದ್ಘಾಟನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ವಿವಿಧ ಅವಧಿಗಳಲ್ಲಿ ನಡೆದ ತರಗತಿಯಲ್ಲಿ ಉಮರ್ ಸಖಾಫಿ ಎಡಪ್ಪಾಲ,ಎಸ್ ಪಿ ಹಂಝ ಸಖಾಫಿ ಬಂಟ್ವಾಳ,ಅಬ್ದುಸ್ಸಲಾಂ ಮುಸ್ಲಿಯಾರ್ ದೇವರಶೋಲ,ರಫೀಕ್ ಸ ಅದಿ ಬಾಕಿಮಾರ್ ಉಸ್ತಾದರುಗಳಿಂದ ಸಾಂಘಿಕ ತರಗತಿಗಳು,ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್ ರವರಿಂದ ಬ್ರೈನ್ ಜಿಮ್ಎಂಬ ಪ್ರಾಯೋಗಿಕ…
UN NETWORKS ಕಿನ್ಯಾ: ಕಿನ್ಯಾದ ಫಲಾಹ್ ವಿದ್ಯಾ ಸಂಸ್ಥೆಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಹಾಜಿ.ಯು.ಬಿ.ಮೊಹಮ್ಮದ್, ಉಪಾಧ್ಯಕ್ಷರಾದ ಟಿ.ಎಂ.ಅಬ್ಬಾಸ್, ಕಾರ್ಯದರ್ಶಿಯವರಾದ ಟಿ.ಎಂ.ಬಶೀರ್, ಖಜಾಂಜಿಯಾದ ಇಸ್ಮಾಯಿಲ್ ನಾಗತೋಟ, ಸಲಹೆಗಾರ ಹಾಗೂ ಸದಸ್ಯರಾದ ಅಬ್ಬಾಸ್ ಉಚ್ಚಿಲ್, ಪ್ರಾಂಶುಪಾಲರಾದ ಅಬ್ದುಲ್ ಖಾದರ್ ಹುಸೈನ್, ಫಲಾಹ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಮಹಮ್ಮದ್ ರಫೀಕ್, ಫಲಾಹ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಯಿಶಾ ಸಬೀನ ಕೈಸೀರನ್ ಉಪಸ್ಥಿತರಿದ್ದರು. ಎಲ್ಲಾ ಶಿಕ್ಷಕ – ಶಿಕ್ಷಕೇತರ ಹಾಗೂ ವಿದ್ಯಾರ್ಥಿಗಳೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
UN NETWORKS ಪಾವೂರು: ಗರ್ಭಿಣಿಯರು ಹಾಗೂ ಬಾಣಂತಿಯರು ಸಂಕಷ್ಟ ಎದುರಿಸಬಾರದು ಎನ್ನುವ ನೆಲೆಯಲ್ಲಿ ಮಹತ್ವಪೂರ್ಣ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿ ಮಹಾತ್ಮಾ ಗಾಂಧಿ ಜನ್ಮ ದಿನದಂದು ಫಲಾನುಭವಿಗಳಿಗೆ ಸಮರ್ಪಿಸಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು ತಿಳಿಸಿದರು. ಪಾವೂರು ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತೃತ್ವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ ಸಹಿತ ಮಾನವ ಜೀವ ಉಳಿಸುವುದೂ ಸರ್ಕಾರದ ಗುರಿ. ಮಾತೃತ್ವ ಯೋಜನೆ ರಾಜ್ಯದಾದ್ಯಂತ ಚಾಲನೆ ದೊರೆತಿದ್ದು, ದ.ಕ.ಜಿಲ್ಲೆಯಲ್ಲಿ ಮೂಡಬಿದಿರೆ, ಮಂಗಳೂರು ಉತ್ತರ ಹಾಗೂ ಮಂಗಳೂರು ಕ್ಷೇತ್ರದಲ್ಲಿ ಪಾವೂರಿನಲ್ಲಿ ಸಾಂಕೇತಿಕ ಕಾರ್ಯಕ್ರಮದ ಮುಖಾಂತರ ಉದ್ಘಾಟಿಸಲಾಗಿದೆ ಎಂದು ಹೇಳಿದರು. ಮಂಗಳೂರು ಸಹಾಯಕ ಆಯುಕ್ತ ರೇಣಿಕಾ ಪ್ರಸಾದ್ ಮಾತನಾಡಿ, ಗರ್ಭಿಣಿಯರಲ್ಲಿ ಕಬ್ಬಿಣಾಂಶ, ಪ್ರೊಟೀನ್ ಕೊರತೆ ಹಾಗೂ ಮಕ್ಕಳಲ್ಲಿ ಪೌಷ್ಠಿಕಾಂಶ ಕೊರತೆ ಸರ್ವೇ ಸಂದರ್ಭ ಕಂಡು ಬಂದಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳ ಜೊತೆ ಮಾತೃತ್ವ ಯೋಜನೆ ಜಾರಿಗೆ ತಂದಿದ್ದು,…
UN NETWORKS ಕೊಣಾಜೆ: ವಿಶ್ವಮಂಗಳ ವಿದ್ಯಾಸಂಸ್ಥೆ ಕೊಣಾಜೆ ಇಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾಸಂಸ್ಧೆಯ ಸ್ಕೌಟ್ ಮತ್ತು ಗೈಡ್ಸ್ನ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆಯನ್ನು ಮಾಡಿದರು. ಪ್ರೌಢಶಾಲಾ ವಿದ್ಯಾರ್ಥಿ ಎಡನ್ ಡಿಸೋಜಾರವರು ದಿನದ ಮಹತ್ವದ ಬಗ್ಗೆ ಮಾತಾನಾಡಿದರು ಹಾಗೂ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರೊ. ಇಸ್ಮಾಯಿಲ್ ಬಿ, ಕಾರ್ಯದರ್ಶಿಗಳಾದ ಭೋಜ ಪೂಜಾರಿ, ಖಜಾಂಚಿಯಾದ ಡಾ.ಪರಮೇಶ್ವರ್ ಹಾಗೂ ಸದಸ್ಯರು, ರಕ್ಷಕ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರೌಢಶಾಲಾ ಮುಖ್ಯಶಿಕ್ಷಕಿ ಪ್ರಿಯಾ ಎನ್. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೋಭಾವತಿ ಹಾಗೂ ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಪೂರ್ಣಿಮಾ ಡಿ. ಶೆಟ್ಟಿ, ಶಿಕ್ಷಕ ಶಿಕ್ಷಕೇತರ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು. ದಿನದ ಅಂಗವಾಗಿ ಶಾಲಾ ಪರಿಸರ ಶುಚಿತ್ವ ಮಾಡಲಾಯಿತು.
UN NETWORKS ಮಂಗಳೂರು: ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಕ್ಟೋಬರ್ 1 ಇದರ ಅಂಗವಾಗಿ ಶ್ರೀ ಭಾರತಿ ಕಾಲೇಜು ನಂತೂರು ಇಲ್ಲಿ ರಕ್ತದಾನ ಶಿಬಿರ 1/10/2017ನೇ ಭಾನುವಾರದಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು, ಹವ್ಯಕ ಸಭಾ ಮಂಗಳೂರು ಇದರ ಆಶ್ರಯದಲ್ಲಿ ತೇಜಸ್ವಿನಿ ಆಸ್ಪತ್ರೆ ಮಂಗಳೂರು ಇದರ ಸಹಕಾರದೊಂದಿಗೆ ಈ ರಕ್ತದಾನ ಶಿಬಿರ ನಡೆಯಿತು. ಚೂಂತಾರು ಪ್ರತಿಷ್ಠಾನ ಕಾರ್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು ಇವರು ದೀಪ ಬೆಳಗಿಸುದರ ಮುಖಾಂತರ ಶಿಬಿರವನ್ನು ಉದ್ಘಾಟಿಸಿದರು. ರಕ್ತದಾನಕ್ಕಿಂತ ಮಿಗಿಲಾದ ದಾನ ಇನ್ನೊಂದು ಇಲ್ಲ. ರಕ್ತದಾನ ಹೃದಯಗಳನ್ನು ಬೆಸೆಯುತ್ತದೆ ಜಾತಿ, ಮತ, ಧರ್ಮಗಳ ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸಂಕೇತ ರಕ್ತದಾನದಿಂದ ರವಾನೆಯಾಗುತ್ತದೆ ಎಂದು ಅಭಿಪ್ರಾಯಿಸಿದ್ದರು. ಮಂಗಳೂರು ಹವ್ಯಕ ಸಭಾವ ಅಧ್ಯಕ್ಷರಾದ ಶ್ರೀ ಕೃಷ್ಣ ನೀರಮೂಲೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹವ್ಯಕ ಸಭಾದ ನಿಕಟ ಪೂರ್ವ ಅದ್ಯಕ್ಷ ಮೆದು ತಿರುಮಲೇಶ್ವರ ಭಟ್ ಅವರು ಉಪಸ್ಥಿತರಿದ್ದರು. ಪೋಲಿಸ್ ಇಲಾಖೆಯ ಬಾಲಕೃಷ್ಣ ಭಟ್ ಕೊಂಚಾಡಿ ಇವರು…
UN NETWORKS ಉಳ್ಳಾಲ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸಾವಿರಾರು ರೂ ಬೆಲೆಬಾಳುವ ಸೊತ್ತುಗಳನ್ನು ಕಳವುಗೈದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ತಲಪಾಡಿ ಕೆ.ಸಿ.ನಗರದ ಜುಬೈನ್ ಕ್ವಾಟೇಜ್ ನ ಟಿ.ಉಸ್ಮಾನ್ ಎಂಬವರ ಮನೆಯಲ್ಲಿ ಕಳವು ನಡೆದಿದೆ. ವಿದೇಶದಲ್ಲಿರುವ ಉಸ್ಮಾನ್ ಅವರ ಮನೆಯಲ್ಲಿ ಯಾರೂ ಇರದ ಸಮಯದಲ್ಲಿ ಕಳವು ನಡೆದಿದೆ. ಮುಂಬಾಗಿಲ ಚಿಲಕ ಮುರಿದು ಒಳನುಗ್ಗಿದ ಕಳ್ಳಲು ಕಪಾಟಿನಲ್ಲಿದ್ದ ಸೊತ್ತುಗಳನ್ನು ಕಳವು ನಡೆಸಿದ್ದಾರೆ. ಎಟಿಎಂನಲ್ಲಿ ಹಣ ಡ್ರಾ ಮಾಡಿದರು ! : ಕಳ್ಳರು ಮನೆಯಲ್ಲಿದ್ದ ಲ್ಯಾಪ್ ಟಾಪ್, ಐಫೋನ್, ರೂ. 600 ನಗದು ಮತ್ತು ಎಟಿಎಂ ನ್ನು ಕಳವು ನಡೆಸಿದ್ದಾರೆ. ಕಳವು ನಡೆಸಿದ ಎರಡು ದಿನಗಳ ನಂತರ ಭಾನುವಾರ ಎಟಿಎಂ ನಿಂದ ರೂ. 30,000 ಹಣ ಡ್ರಾ ಮಾಡಿರುವ ಸಂದೇಶ ವಿದೇಶದಲ್ಲಿರುವ ಉಸ್ಮಾನ್ ಅವರಿಗೆ ಹೋಗಿತ್ತು. ಈ ಕೂಡಲೇ ಅವರು ಪತ್ನಿಯನ್ನು ಪ್ರಶ್ನಿಸಿದಾಗ ಅವರು ತಾಯಿ ಮನೆಗೆ ತೆರಳಿರುವುದಾಗಿ ತಿಳಿಸಿದ್ದು, ಬಳಿಕ ಮನೆಗೆ ಬಂದು…

