Author: UllalaVani

Kannada News From Coastal Karnataka

UN NETWORKS ಉಳ್ಳಾಲ: ನಗರಸಭೆ ಸ್ವಚ್ಛ ಭಾರತ ಅಭಿಯಾನದಡಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು, ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಂಡಿದೆ ಎಂದು ಉಳ್ಳಾಲ ನಗರಸಭೆಯ ಪೌರಾಯುಕ್ತೆ ವಾಣಿ.ವಿ.ಆಳ್ವ ಹೇಳಿದ್ದಾರೆ. ಅವರು ಗಾಂಧಿ ಜಯಂತಿ ಪ್ರಯುಕ್ತ ಉಳ್ಳಾಲ ನಗರಸಭೆ ವತಿಯಿಂದ ಸ್ವಚ್ಛ ಭಾರತ ಮಿಷನ್ ಅಭಿಯಾನದಡಿ ನಗರಸಭೆಯ 27 ವಾರ್ಡುಗಳಲ್ಲಿ ಹಮ್ಮಿಕೊಂಡ “ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ” “ನಮ್ಮ ಉಳ್ಳಾಲ ಸ್ವಚ್ಛ ಸುಂದರ ಉಳ್ಳಾಲ ಇರಲಿ ನಿಮ್ಮ ಸಹಕಾರ” ಎಂಬ ಸ್ವಚ್ಛತೆ ಕುರಿತ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಚಿವರ ಸಂಪೂರ್ಣ ಸಹಕಾರದೊಂದಿಗೆ ಸ್ವಚ್ಛತ ಅಭಿಯಾನ ಕಾರ್ಯಕ್ರಮ ಉಳ್ಳಾಲದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಸ್ವಚ್ಛತೆಗೆ ಎಲ್ಲರೂ ಕೈಜೋಡಿಸುವ ಮೂಲಕ ಸ್ಥಳದ ಉತ್ತಮ ವಾತಾವರಣವನ್ನು ಕಾಪಾಡಬೇಕಿದೆ. ಇದರಲ್ಲಿ ಸಾರ್ವಜನಿಕರ ಸಹಕಾರವು ಅಗತ್ಯ ಬೇಕಿದೆ ಎಂದರು. ನಗರಸಭೆಯ ಅಧ್ಯಕ್ಷರಾದ ಹುಸೈನ್ ಕುಂಞ ಮೋನು ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಸ್ವಚ್ಚತಾ ಪ್ರತಿಜ್ಞೆಯನ್ನು…

Read More

UN NETWORKS ಪಾನೀರು: ಅಹಿಂಸೆ, ಸರಳತೆ ಹಾಗೂ ಸೇವಾ ಮನೋಭಾವನೆಯುಳ್ಳ ಬದುಕು ಮನುಷ್ಯನನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂಬುದಕ್ಕೆ ಮಹಾತ್ಮಾ ಗಾಂಧೀಜಿ. ಲಾಲ್ ಬಹದ್ದೂರ್ ಶಾಸ್ತ್ರಿ, ಮದರ್ ತೆರೆಸಾ ಅವರ ಬದುಕು ಮಾದರಿ ಎಂದು ಮೂಡ ಅಧ್ಯಕ್ಷ ಸುರೇಶ್ ಬಲ್ಲಾಳ್ ಹೇಳಿದರು. ಪಾನೀರು ಆಶ್ರಮ ಶಾಲೆಯಲ್ಲಿ ದ.ಕ. ಜಿಲ್ಲಾ `ಡಿ’ ವರ್ಗ ಸರಕಾರಿ ನೌಕರರ ಸಂಘದ ವಜ್ರ ಮಹೋತ್ಸವ ಪ್ರಯುಕ್ತ ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ವಾಹನ ಚಾಲಕರ ಕೇಂದ್ರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಜಂಟಿ ಆಶ್ರಯದಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಅಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಈ ದೇಶಕ್ಕೆ ಅಹಿಂಸೆಯ ಮೂಲಕ ಸ್ವಾತಂತ್ರ್ಯ ಗಳಿಸಿಕೊಟ್ಟ ಗಾಂಧೀಜಿ ಅವರಿಗೆ ದೇಶದ ಏಕೈಕ ಮಹಾತ್ಮನ ಸ್ಥಾನ, ಕೇವಲ ಎರಡು ಜೊತೆ ಬಟ್ಟೆ ಹೊಂದಿದ್ದಂತಹ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಹಾಗೂ ಪ್ರಾಮಣಿಕತೆಗೆ ಪ್ರಧಾನ ಮಂತ್ರಿ ಸ್ಥಾನ ಹಾಗೂ ಕೊಲ್ಕೊತ್ತಾದಲ್ಲಿ ಯಾವ ಸೌಲಭ್ಯವೂ ಇಲ್ಲದ ಚಿಕ್ಕ ಕೊಠಡಿಯಲ್ಲಿ…

Read More

UN NETWORKS ಬಂಟ್ವಾಳ : ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ಕೂರಿಯಾಳ ದುರ್ಗಾನಗರದ ಶ್ರೀ ದುರ್ಗಾ ಫ್ರೆಂಡ್ಸ್ ವತಿಯಿಂದ ಕೂರಿಯಾಳದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಜರಗಿತು. ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಜಗದೀಶ್ ಭಂಡಾರಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Read More

UN NETWORKS ಉಳ್ಳಾಲ: ಸಮಯ ಅತೀ ವೇಗವಾಗಿ ಹೋಗುತ್ತಿದೆ, ಇದರ ಮಹತ್ವ ಅರಿತವರು ಒಂದು ಕ್ಷಣವನ್ನೂ ವ್ಯಯಿಸಲು ಅಸಾಧ್ಯ, ಶ್ರೀಮಂತರಾವರೆಲ್ಲರೂ ಪ್ರತೀ ನಿಮಿಷದ ಲೆಕ್ಕಾಚಾರ ಹಾಕಿ ದೊಡ್ಡ ಸ್ಥಾನ ತಲುಪಿದ್ದಾರೆ ಎಂದು ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮಸ್ಲಿಯಾರ್ ಅಭಿಪ್ರಾಯಪಟ್ಟರು. ಮೇಲಂಗಡಿ ಮುಹಿಯುದ್ದೀನ್ (ಹೊಸಪಳ್ಳಿ) ಮಸೀದಿಯಲ್ಲಿ ಶುಕ್ರವಾರದ ನಮಾಝ್ ಆರಂಭಗೊಂಡು ನಾಲ್ಕು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ನಮಾಝ್‍ಗೆ ನೇತೃತ್ವ ನೀಡಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುಹರ್ರಂ ಇಸ್ಲಾಮಿಕ್ ಕ್ಯಾಲೆಂಡರ್‍ನ ಹೊಸ ವರ್ಷ ಆರಂಭದ ತಿಂಗಳಾಗಿವೆ, ಕಳೆದು ದಿನಗಳ ಕಹಿ ನೆನಪುಗಳನ್ನು ಮರೆತು ಮುಂದಿನ ದಿನಗಳಲ್ಲಿ ಪ್ರತಿ ಕ್ಷಣವನ್ನೂ ವ್ಯಯಿಸದೆ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ, ವ್ಯಾಜ್ಯ, ಘರ್ಷಣೆಯಿಂದ ಯಾರೂ ಏನನ್ನೂ ಸಾಧಿಸಲು ಅಸಾಧ್ಯ. ಯಾವುದೇ ಉತ್ತಮ ಕೆಲಸ ಬಿಕ್ಕಟ್ಟಿನಿಂದ ಆರಂಭಗೊಂಡರೂ ಬಳಿಕ ವಿಜಯದತ್ತ ಸಾಗಲು ಸಹಕಾರಿಯಾಗುತ್ತದೆ ಎನ್ನುವುದಕ್ಕೆ ಮೇಲಂಗಡಿಯಲ್ಲಿ ಆರಂಭಗೊಂಡ ಜುಮಾ ನಮಾಝ್ ಸಾಕ್ಷಿ.…

Read More

UN NETWORKS ಕುತ್ತಾರು: ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮಹಿಳೆಯರಿಗೆ ಸ್ವಾವಲಂಬಿಯಾಗಲು ದಾರಿ ತೋರಿಸುವ ಕುತ್ತಾರಿನ ದುರ್ಗಾವಾಹಿನಿ ಮಹಿಳಾ ಮಂಡಲ ಬಡ ಹೆಣ್ಮಕ್ಕಳ, ನಿರ್ಗತಿಕರಿಗೆ ಸಹಾಯ ಮಾಡುವುದರ ಜತೆಗೆ ಸಾಮಾಜಿಕವಾಗಿ ತೊಡಗಿಸಿಕೊಂಡು ಸಮಾಜಮುಖಿಯಾಗಿದೆ ಎಂದು ಪೊಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಪವಿತ್ರ ಕುಮಾರ್ ಗಟ್ಟಿ ಹೇಳಿದ್ದಾರೆ. ಅವರು ಕುತ್ತಾರು ದುರ್ಗಾವಾಹಿನಿ ಮಹಿಳಾ ಮಂಡಲದಲ್ಲಿ ಒಂದು ತಿಂಗಳ ಅವಧಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿಂದುಸ್ತಾನ್ ಲಿವರ್ ಲಿ. ಇದರ ಲೇಬರ್ ನೆಟ್ ಪ್ರಭಾತ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ಅಡಿಯಲ್ಲಿ ನಡೆದ ಎಂಬ್ರಾಯಿಡರಿ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಯಕ್ಷಗಾನ ಕಲಾವಿದ ಹಾಗೂ ತರಬೇತುದಾರ ದಯಾನಂದ ಗಟ್ಟಿ ಪಿಲಿಕೂರು ಮಾತನಾಡಿ ಮಹಿಳಾ ಮಂಡಲದಲ್ಲಿ ಯಕ್ಷಗಾನ ತರಬೇತಿ ಮುಂದೆ ನಡೆಯಲಿದ್ದು, ಗಂಡು ಕಲೆ ಯಕ್ಷಗಾನ ಆಗಿದ್ದರೂ ಮಹಿಳೆಯರು, ಹೆಣ್ಮಕ್ಕಳು ಕಲೆಯಲ್ಲಿ ಭಾಗವಹಿಸುವುದರಿಂದ ದೇಹಕ್ಕೆ ವ್ಯಾಯಾಮ ಸಿಗಲು ಸಾಧ್ಯ ಎಂದರು. ಲೇಬರ್ ನೆಟ್ ಇದರ ಸಂಯೋಜಕ ಸತ್ಯೇಂದ್ರ ಪ್ರಕಾಶ್ ಮಾತನಾಡಿ ಮಹಿಳೆಯರು ಸ್ವಾವಲಂಬಿಯಾಗಬೇಕು…

Read More

UN NETWORKS  ಕಿನ್ಯ: ಕಿನ್ಯ ಕೀಶವ ಶಿಶು ಮಂದಿರ ಕೊಂಡಾಣ ಮಂಗಳೂರು ವುಡ್ ಇಂಡಸ್ಟ್ರೀಸ್ ವತಿಯಿಂದ  ಧ್ವನಿವರ್ದಕವನ್ನು ಕಂಪೆನಿಯ ಪಾಲುದಾರರಾದ  ಶ್ರೀದರ ಹೆಗಡೆಯವರು ನೀಡಿದರು. ಶಿಶು ಮಂದಿರದಲ್ಲಿ ನಡೆದ ಶಾರದಾ ಪೂಜಾ ಸಂಧರ್ಭ ಪುಟಾಣಿ ಮಕ್ಕಳಿಂದ ಹಂಸರಾಗ ಭಜನೆಯೊಂದಿಗೆ ಉದ್ಘಾಟಿಸಲಾಯಿತು. ಈ ಸಂಧರ್ಭ ಶಿಶು ಮಂದಿರ ವಿಶ್ವಸ್ಥ ಮಂಡಳಿಯ ಪ್ರ.ಕಾರ್ಯದರ್ಶಿ ಮೋಹನ್ದಾಸ್ ಶೆಟ್ಟಿ, ವ್ಯವಸ್ಥಾಪಕ ನಾರಾಯಣ ಕಜೆ,ಕಾರ್ಯದರ್ಶಿ ಚೇತನ್ ಪಿಲಿಕೂರು,ಕಿನ್ಯ ಗ್ರಾಮ ಬಿಜೆಪಿ ಅಧ್ಯಕ್ಷ ಪಾರ್ಥ ಸಾರಥಿ,ಸದಾಶಿವ ಆಚಾರ್ಯ,ರಮಾನಾಥ ಮಿತ್ತಡ,ಪುರುಷೋತ್ತಮ ಮಿತ್ತಡ ಮೊದಲಾದವರು ಉಪಸ್ಥಿತರಿದ್ದರು

Read More

UN NETWORKS ಉಳ್ಳಾಲ: ನಮ್ಮ ದೇಶೀಯ ಕ್ರೀಡೆಯಾಗಿರುವ ಕುಸ್ತಿ ಪಂದ್ಯಾಟಕ್ಕೆ ಸರಕಾರ ಹೆಚ್ಚಿನ ಒತ್ತು ನೀಡಬೇಕಾಗಿದ್ದು, ತುಳುನಾಡಿನ ಯುವಜನರು ಈ ಕಲೆಯನ್ನು ಕಲಿತು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ಉಳ್ಳಾಲ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಶ್ರೀಕರ ಕಿಣಿ ಅಭಿಪ್ರಾಯಪಟ್ಟರು. ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ಹಾಗೂ ಮೊಗವೀರ ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ, ಬ್ರದರ್ಸ್ ಸ್ಪೋಟ್ರ್ಸ್ ಕ್ಲಬ್ ಮೊಗವೀರಪಟ್ಣ, ಉಳ್ಳಾಲ, ಇದರ 70ನೇ ಉಳ್ಳಾಲ ದಸರಾ ಪ್ರಯುಕ್ತ ದಿ| ಪೈಲ್ವಾನ್ ಮೋತಿ ಪುತ್ರನ್ ಉಳ್ಳಾಲ ಇವರ ಸ್ಮರಣಾರ್ಥವಾಗಿ ಉಳ್ಳಾಲ ಶ್ರೀ ಶಾರದಾ ನಿಕೇತನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೆಳ್ಳಿಗದೆಯ 17ನೇ ವರ್ಷದ ಕುಸ್ತಿ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಳ್ಳಾಲ ಶ್ರೀ ವ್ಯಾಘ್ರ ಚಾಮುಂಡೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ಸುಭಾಷ್ ಅಮಿನ್ ಕಾರ್ಯಕ್ರಮ ಉದ್ಘಾಟಿಸಿದರು. ಕುಸ್ತಿ ಪಂದ್ಯಾಟದ ಅಖಾಡ ಉದ್ಘಾಟನೆಯನ್ನು ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಕಾಶಿನಾಥ್ ಪುತ್ರನ್ ಉದ್ಘಾಟಿಸಿದರು.…

Read More

UN NETWORKS ಕೋಟೆಕಾರು: ಹಿ0ದೂಗಳಾದ ಎಲ್ಲರೂ ಇನ್ನಷ್ಟೂ ಧಾರ್ಮಿಕ ಚಿಂತನೆಗಳನ್ನು ಮಾಡುವುದರ ಮೂಲಕ ಮಕ್ಕಳಲ್ಲಿ ಧಾರ್ಮಿಕ ಮನೋಭಾವನೆ ಮೂಡಿಸುವ ಕೆಲಸ ಮಾಡಬೇಕಾಗಿದೆ , ಸರಕಾರ ದೇವಸ್ಥಾನ ದೈವಸ್ಥಾನಗಳಿ0ದ ಬರುವ ಆದಾಯಗಳನ್ನು ಶ್ರದ್ಧಾ ಕೇ0ದ್ರಗಳಿಗೆ ಸರಿಯಾಗಿ ಬಳಸುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ ಹೇಳಿದ್ದಾರೆ. ಅವರು ಶ್ರಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ0, ಶ್ರೀ ಶಾರದಾ ಪೀಠ0, ಶೃ0ಗೇರಿ ಇದರ ಕೋಟೆಕಾರು ಶಾಖಾ ಮಠದಲ್ಲಿ ಶರನ್ನವರಾತ್ರಿ ಮಹೋತ್ಸವದ ” ದಸರಾ ನಾಡಹಬ್ಬ ಕಾರ್ಯಕ್ರಮ ” ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿದ್ದರು. ಧಾರ್ಮಿಕ ಪರಿಷತ್ ನ ಸದಸ್ಯರಾದ ಪಿ.ಕೃಷ್ಣ ಗಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಉತ್ಸವ ಸಮಿತಿ ಅಧ್ಯಕ್ಷರಾದ ರವೀ0ದ್ರ ಶೆಟ್ಟಿ ಉಳಿದೊಟ್ಟು ಅಧ್ಯಕ್ಷತೆ ವಹಿಸಿದ್ದರು. ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್, ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ , ಬಂಟರ ಸಂಘ ಉಳ್ಳಾಲ ವಲಯ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು , ರಾಮರಾಜ ಕ್ಷತ್ರೀಯ…

Read More

UN NETWORKS ಕೊಣಾಜೆ: ಕಾಲೇಜು ವಿದ್ಯಾರ್ಥಿಗಳ ಜತೆಗೆ ಗದ್ದೆಯಲ್ಲಿ ನಾಟಿ ಕಾರ್ಯ ನಡೆಸಿದ್ದ ಸಚಿವರು ಇಂದು ಕೂಡಾ ಅದನ್ನೇ ಮುಂದುವರಿಸಿ ಟಿಲ್ಲರ್ ಚಲಾಯಿಸಿದರಲ್ಲದೆ ವಿದೇಶಿ ವಿದ್ಯಾರ್ಥಿಗಳಿಗೆ ಕೃಷಿಪಾಠ ನೀಡುವುದರ ಜತೆಗೆ ವಿದ್ಯಾರ್ಥಿಗಳ ಜತೆಗೆ ಗದ್ದೆಯಲ್ಲಿ ಓಟ ನಡೆಸಿ ಅತಿಸಾಮಾನ್ಯರಂತೆ ಕಂಡುಬಂದ ಆಹಾರ ಸಚಿವರು ಆಹಾರ ಬೆಳೆಸುವ ಕಾಯಕಕ್ಕೆ ಪ್ರೋತ್ಸಾಹ ನೀಡಿದರು. ಇದು ಡಾ.ಪಿ. ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ರಥಬೀದಿ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು, ರೆಡ್ ರಿಬ್ಬನ್, ಕೊಣಾಜೆ ಗ್ರಾಮ ಪಂಚಾಯತ್, ರೈತ ಸಂಘ ಹಸಿರುಸೇನೆ , ಮಾಧ್ಯಮ ಕೇಂದ್ರ ತೊಕ್ಕೊಟ್ಟು ಹಾಗೂ ಮಂಗಳೂರು ವಿ.ವಿಯ ಅಂತರಾಷ್ಟ್ರೀಯ ವಿದ್ಯಾರ್ಥಿ ಕೇಂದ್ರ ಮಂಗಳಗಂಗೋತ್ರಿ ಇವುಗಳ ಜಂಟಿ ಆಶ್ರಯದಲ್ಲಿ ಕೊಣಾಜೆ ಗಟ್ಟಿಮೂಲೆ ಮೇಲ್ಮನೆಯಲ್ಲಿ ವಿದ್ಯಾರ್ಥಿಗಳ ನಡಿಗೆ ರೈತರ ಹಡಿಲು ಭೂಮಿಯ ಕಡೆಗೆ ಇದರ ಅಂಗವಾಗಿ ಕೃಷಿ ಸಂವಾದ ಮುಂಗಾರಿನ ನಾಟಿಯ ಅಂತಿಮ ಸುತ್ತಿನ ಕಾರ್ಯಕ್ರಮದಲ್ಲಿ ಸಚಿವರ ವಿವಿಧ ಚಟುವಟಿಕೆಗಳು ರೈತರಿಗೆ ಪ್ರೋತ್ಸಾಹ ನೀಡಿತು. ಕೊಣಾಜೆ ಎರಡನೇ…

Read More

UN NETWORKS ಉಳ್ಳಾಲ: ಕಲ್ಮಶವಿಲ್ಲದಂತೆ ಆಶ್ರಮದಲ್ಲಿ ಇರುವ ಹಿರಿಯರ ಮಧ್ಯೆ ಆಡಿಯೋ ಬಿಡುಗಡೆ ನಡೆಸಿರುವ ಕಾರ್ಯ ಅರ್ಥಪೂರ್ಣವಾಗಿದ್ದು, ಚಿತ್ರ ತಂಡ ಪ್ರತಿಭಾವಂತರಾಗಿದ್ದು, ಭವಿಷ್ಯದಲ್ಲಿ ಗೆಲುವು ಖಚಿತ ಎಂದು ಕಾರ್ಕಳದ ಮಾಜಿ ಶಾಸಕ ಹೆಚ್. ಗೊಪಾಲ ಭಂಡಾರಿ ಹೇಳಿದರು. ಅವರು ಅಸೈಗೋಳಿಯ ಅಭಯಾಶ್ರಮದಲ್ಲಿ ಶುಕ್ರವಾರ ನಾಗೇಶ್ವರ ಸಿನಿ ಕಂಬೈನ್ಸ್ ಇವರ ಮೊದಲ ತುಳು ಚಲನಚಿತ್ರ ಅಂಬರ್ ಕ್ಯಾಟರರ್ಸ್ ಇದರ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಪಂಚತಾರಾ ಹೊಟೇಲುಗಳಲ್ಲಿ ನಡೆಯುವಂತಹ ಕಾರ್ಯಕ್ರಮವನ್ನು ವೃದ್ಧಾಶ್ರಮದಲ್ಲಿ ನಡೆಸಿರುವುದು ಇತರರಿಗೆ ಮಾದರಿ. ತುಳು ಚಲನಚಿತ್ರಗಳ ರಚನೆಯ ಮೂಲಕ ವಿಶ್ವದಾದ್ಯಂತ ಇರುವ ತುಳು ಅಭಿಮಾನಿಗಳ ಗಮನ ಸೆಳೆಯುವಂತಾಗಲಿ ಎಂದರು. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್ ಮಾತನಾಡಿ ಎಲ್ಲರೂ ನೋಡುವಂತಹ ಚಿತ್ರವಾಗಿ ಹೊರಹೊಮ್ಮಲಿ. ಚಿತ್ರದ ನಾಯಕನಟ ರಾಜ್ಯ ಮಾತ್ರವಲ್ಲ ದೇಶದಲ್ಲಿಯೇ ನಾಯಕನಟನಾಗಿ ಭವಿಷ್ಯ ರೂಪಿಸುವಂತಾಗಲಿ ಎಂದ ಅವರು ರಾಜಕೀಯ ನಟರಿಗಿಂತ ಚಿತ್ರ ನಟರು ಒಳ್ಳೆಯವರು , ಅವರಿಗೆ ಪ್ರೋತ್ಸಾಹ ಅಭಿಮಾನಿಗಳು ನೀಡಬೇಕಾಗಿದೆ ಎಂದರು. ಬಿಜೆಪಿ…

Read More