ಉಳ್ಳಾಲ ನ್ಯೂಸ್ ನೆಟ್ ವರ್ಕ್ ಬೆಳ್ಮ: ಬೆಳ್ಮ ಗ್ರಾಮ ಪಂಚಾಯತಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸಿಕೊಡುವಂತೆ ಹೋರಾಟ ನಡೆಸಿದ್ದರೂ ಪ್ರಯೋಜನವಿಲ್ಲ. ಹಕ್ಕುಪತ್ರಕ್ಕಾಗಿ 400ಕ್ಕೂ ಹೆಚ್ಚು ಅರ್ಜಿ ನೀಡಿದ್ದರೂ ಸ್ಪಂಧನೆ ದೊರೆಯದಿರುವುದನ್ನು ಖಂಡಿಸಿ ನಿವೇಶನರಹಿತರು ಸೋಮವಾರ ಬೆಳ್ಮ ಗ್ರಾಮ ಪಂಚಾಯಿತಿ ಎದುರು ಅನಿರ್ಧಿಷ್ಟಾವಧಿ ಧರಣಿಯನ್ನು ಆರಂಭಿಸಿದ್ದಾರೆ. ದಲಿತ ಹಕ್ಕುಗಳ ಹೋರಾಟ ಸಮಿತಿ, ಕೋಟೆಕಾರ್ ಸರ್ಕಲ್ ಕರ್ನಾಟಕ ಪ್ರಾಂತ್ಯ, ಸಂಚಾಲನ ಸಮಿತಿ ಬೆಳ್ಮ ಗ್ರಾಮ ಇದರ ನೇತೃತ್ವದಲ್ಲಿ ನಿವೇಶನ ರಹಿತರು ಅನಿರ್ಧಿಷ್ಟಾವಧಿ ಧರಣಿಯನ್ನು ನಡೆಸುತ್ತಿದ್ದಾರೆ. ಮಂಗಳೂರು ತಾಲೂಕಿನ ಬೆಳ್ಮ ಗ್ರಾಮದಲ್ಲಿ ಸರ್ವೆ ನಂಬರ್ 93, 51, 45, 48 ಮತ್ತು ಸರಕಾರಿ ಖಾಲಿ ಸ್ಥಳ 54 ವಿಸ್ತೀರ್ಣ 12 ಎಕ್ರೆ 35 ಸೆಂಟ್ಸ್ , ಸ.ನಂಬರ್ 33ರಲ್ಲಿ 7 ಎಕ್ರೆ 13ಸೆಂಟ್ಸ್ ಖಾಲಿ ಸ್ಥಳವಿದ್ದು, ಸರ್ವೆ ನಂಬರ್ 54ರಲ್ಲಿ 3 ಎಕ್ರೆ ಸ್ಥಳವನ್ನು ನಿವೇಶನಕ್ಕೆ ಹಸ್ತಾಂತರಿಸಲಾಗಿದ್ದರೂ ಸುಮಾರು 400ಕ್ಕೂ ಮಿಕ್ಕಿ ನಿವೇಶನ ಅರ್ಜಿಗಳು ಬಾಕಿ ಉಳಿದಿವೆ. ನಿವೇಶನ ರಹಿತರಿಗೆ ನಿವೇಶನ ಒದಗಿಸಿಕೊಡುವಂತೆ ಹೋರಾಟ ಮಾಡಿಕೊಂಡು…
Author: UllalaVani
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ರಿಕ್ಷಾ ಬ್ರೇಕ್ ವೈಫಲ್ಯಕ್ಕೀಡಾಗಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಚಾಲಕ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೆಳಗೆಡೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ರಿಕ್ಷಾ ಚಾಲಕ ಅಬ್ದುಲ್ ಖಾದರ್ (42) ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಾದ ಆರೀಫ್ (16) ಮತ್ತು ಸುಹೈಲ್ (17) ಗಾಯಗೊಂಡವರು. ಉಳ್ಳಾಲದಿಂದ ತೊಕ್ಕೊಟ್ಟು ಒಳಪೇಟೆಗೆ ಪಾರ್ಕಿಗೆ ಬರುವ ಸಂದರ್ಭ ಓವರ್ ಬ್ರಿಡ್ಜ್ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಬ್ರೇಕ್ ವೈಫಲ್ಯಕ್ಕೀಡಾಗಿತ್ತು. ಪರಿಣಾಮ ಕೆಳಗಿದ್ದ ರಾಘವ.ಯಸ್.ಉಚ್ಚಿಲ್ ಎಂಬವರ ವಾಚ್ ರಿಪೇರಿ ಅಂಗಡಿಯೊಳಗೆ ನುಗ್ಗಿದ ರಿಕ್ಷಾ , ಅಂಗಡಿ ಷೋಕೇಸಿಗೆ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಶಾಲೆಗೆ ಬರುವವರಿದ್ದ ವಿದ್ಯಾರ್ಥಿಗಳನ್ನು ರಿಕ್ಷಾ ಚಾಲಕ ಕರೆತಂದಿದ್ದರು.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ದಾರಿಬದಿಯಲ್ಲಿದ್ದ ಒಣ ಮೀನು ಮಾರಾಟ ಮತ್ತು ಹೂವಿನ ಮಾರಾಟದ ಮೂರು ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ತೊಕ್ಕೊಟ್ಟು ಸಮೀಪ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಮಹಮ್ಮದ್ ಹನೀಫ್ , ಹೆಚ್.ಮನ್ಸೂರ್, ಅಬೂಬಕರ್ ಎಂಬವರ ಸೇರಿದ ಅಂಗಡಿಗಳಿಗೆ ಹಾನಿಗೀಡಾಗಿದೆ. ಭಾನುವಾರ ಸಂಜೆಯೂ ನಡೆದ ಘಟನೆಯಲ್ಲಿ ರೆಡು ಅಂಗಡಿಗಳಿಗೆ ಬೆಂಕಿ ತಗಲಿರುವುದನ್ನು ಕಂಡು ಸ್ಥಳೀಯರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು. ಆದರೂ ಅಂಗಡಿಯೊಳಗಿದ್ದ ಒಣಮೀನು ಮತ್ತು ಹೂವು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಸಾವಿರಾರು ರೂ ನಷ್ಟ ಸಂಭವಿಸಿದೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಇಲ್ಲಿನ ಗೂಡಂಗಡಿಗಳು ಬೆಂಕಿ ಅನಾಹುತಕ್ಕೆ ಒಳಗಾಗುತ್ತಿದೆ. ಕಳೆದ ವರ್ಷ ರಸ್ತೆಬದಿಯಲ್ಲಿದ್ದ ಎಂಟು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಘಟನೆಯಲ್ಲಿ ಅಂಗಡಿಯಲ್ಲಿದ್ದ ಸಾಮಗ್ರಿಗಳೆಲ್ಲವೂ ಸುಟ್ಟು ಲಕ್ಷಾಂತರ ನಷ್ಟ ಉಂಟಾಗಿತ್ತು. ಸಂಶಯಾಸ್ಪದವಾಗಿ ಸ್ಥಳದಲ್ಲಿ ತಿರುಗಾಡುತ್ತಿದ್ದ ಬೇರೆ ರಾಜ್ಯದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಮಲಗಿದ್ದ ಭಿಕ್ಷುಕರು ನೀಡಿದ ಮಾಹಿತಿಯಂತೆ ಆತನನ್ನು ವಶಕ್ಕೆ…
ವಿಜಯವಾಡ :ಸೇತುವೆಯಿಂದ ಬಸ್ ನದಿಗೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, 40 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ದಿವಾಕರ್ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ವೈಜಾಗ್ ನಿಂದ ಹೈದರಾಬಾದ್ ಗೆ ತೆರಳುವಾಗ ಘಟನೆ ನಡೆದಿದ್ದು, ಗಾಯಾಳುಗಳಲ್ಲಿ 17 ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಇನ್ನು ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಕೃಪೆ: ನ್ಯೂಸ್ ಕನ್ನಡ
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಬಂದ್ ಮಾಡುವವರು ಕೇರಳ ಸಿ ಎಂ ಚಪ್ಪಲಿಗೂ ಸಮಾನರಲ್ಲ ಎಂಬ ಹೇಳಿಕೆಯನ್ನು ನಾನು ಯಾರನ್ನೂ ಅವಮಾನಿಸಲು ಮತ್ತು ಅವರ ಮನಸ್ಸನ್ನು ನೋಯಿಸಲು ಹೇಳಿಕೆ ನೀಡಿಲ್ಲ .ಅಚಾತುರ್ಯದಿಂದ ಚಪ್ಪಲಿ ಎಂಬ ಶಬ್ದ ಬಂದಿದೆ. ಕ್ಷಮೆ ಕೇಳಲ್ಲ, ಈ ಬಗ್ಗೆ ವಿಷಾದವಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಸ್ಪಷ್ಟಪಡಿಸಿದ್ದಾರೆ. ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಅರ್ಥದ ಉದ್ದೇಶ ಹೇಳಿಕೆಯಲ್ಲಿ ಇರಲಿಲ್ಲ .ಸಂವಿಧಾನ ವಿರೋಧಿಗಳಿಗೆ ನೀಡಿದ ಹೇಳಿಕೆ ಬಾಯಿ ತಪ್ಪಿ ಬಂದಿದೆ. ಹಿರಿಯ ಜನಾರ್ದನ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಸಣ್ಣ ಮಗಳು ಕೂಡ ಇದನ್ನು ತಪ್ಪು ಎಂದು ಹೇಳಿದ್ದಾಳೆ. ಮುಂದೆ ಈ ರೀತಿ ಮಾತಾಡುವುದಿಲ್ಲ.ಇದನ್ನು ಕೆಲವರು ರಾಜಕೀಯ ಮಾಡುತ್ತಿದ್ದಾರೆ. ವಾಟ್ಸಪ್ ನಲ್ಲಿ ತಿರುಚುತ್ತಿದ್ದಾರೆ ಎಂದು ಹೇಳಿದರು. ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹೋಗಿ ಚಹಾ ಕುಡಿದು ಬಂದಾಗ ಯಾರು ಮಾತನಾಡಲಿಲ್ಲ. ಆದರೆ ಹಿರಿಯರು, ದೇಶದ ಏಕೈಕ ಬಿಲ್ಲವ ಸಿ ಎಂ ದಕ್ಷಿಣ ಕನ್ನಡಕ್ಕೆ ಬಂದಾಗ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಂಗಳೂರು ಬಂದ್ ಹಿನ್ನಲೆಯಲ್ಲಿ ಕೇರಳ ಸಾರಿಗೆ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿದ 5 ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಚೆಂಬುಗುಡ್ಡೆ ನಿವಾಸಿ ರಜೀತ್(19), ತೊಕ್ಕೊಟ್ಟು ಭಟ್ನಗರ ನಿವಾಸಿ ಆತೀಶ್(22), ಮಂಜೇಶ್ವರ ನಿವಾಸಿಗಳಾದ ದಿನೇಶ್(25) ಸಂತೋಷ್ ಕುಮಾರು(28) ನವೀನ್(25) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳೆಲ್ಲರೂ ಮಂಗಳೂರು ಬಂದ್ ನ ಹಿಂದಿನ ದಿನವಾದ ಫೆ.24ರ ತಡ ರಾತ್ರಿ ಕೋಟೆಕಾರು ಬೀರಿ ಮತ್ತು ತಲಪಾಡಿಯಲ್ಲಿ ಕೇರಳ ಸಾರಿಗೆ ಬಸ್ಸುಗಳಿಗೆ ಕಲ್ಲೆಸೆದು ಹಾನಿಗೊಳಿಸಿದ್ದರು. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ತನಿಖೆ ಕೈಗೆತ್ತಿಗೊಂಡು ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕಿನ್ಯಾ:ಕಿನ್ಯಾದಲ್ಲಿ ರೇಷನ್ ವಿತರಣೆಯಲ್ಲಿ ಬಹಳಷ್ಟು ತೊಂದರೆಯಾಗಿ, ಗ್ರಾಮಸ್ಥರು ಕೆಲಸ ಬಿಟ್ಟು ಅಂಗಡಿ ಎದುರು ಸಾಲಿನಲ್ಲಿ ನಿಲ್ಲುವಂತಾಗಿದೆ. ಸಮರ್ಪಕವಾಗಿ ಅಕ್ಕಿಯ ಪೂರೈಕೆಯಾಗದೇ ಜನ ಬಹಳಷ್ಟು ತೊಂದರೆಗೀಡಾಗಿದ್ದಾರೆ. ಇದನ್ನು ಅಧಿಕಾರಿಯ ಜತೆ ಹೇಳೋಣವೆಂದರೆ ಅಧಿಕಾರಿಯೇ ಬಂದಿಲ್ಲ. ಇದರಿಂದ ಗ್ರಾಮಸಭೆ ನಡೆಯುವುದು ಸಮಂಜಸವಲ್ಲ ಎಂಬ ಗ್ರಾಮಸ್ಥರ ಒಮ್ಮತದ ಅಭಿಪ್ರಾಯದ ಮೂಲಕ ಇಡೀ ಗ್ರಾಮಸಭೆ ಗೊಂದಲದಲ್ಲಿ ಮುಂದುವರಿದ ಪ್ರಸಂಗ ಕಿನ್ಯಾ ಗ್ರಾಮಸಭೆಯಲ್ಲಿ ನಡೆಯಿತು. ಕಿನ್ಯಾದ ಸರಕಾರಿ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2016-17 ನೇ ಸಾಲಿನ ಗ್ರಾಮಸಭೆ ಸಮರ್ಪಕ ರೇಷನ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರ ವಾದ-ವಿವಾದಗಳ ನಡುವೆ ಮುಗಿಯಿತು. ಹಿಂದಿನ ಗ್ರಾಮಸಭೆಯಲ್ಲಿ ಅಧಿಕಾರಿಗಳ ಅನುಪಸ್ಥಿತಿಯಿಂದ ಗ್ರಾಮಸ್ಥರು ಗ್ರಾಮಸಭೆಯನ್ನೇ ರದ್ದುಗೊಳಿಸುವಂತೆ ಆಗ್ರಹಿಸಿ ಹೊರನಡೆದಿದ್ದರು. ಕಳೆದ ಗ್ರಾಮಸಭೆಯಲ್ಲಿ ಆಹಾರ ಇಲಾಖೆಯ ಅಧಿಕಾರಿ ಮುಂದಿನ ಗ್ರಾಮಸಭೆಯಲ್ಲಿ ಬರಿಸುವಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ ಇಂದು ನಡೆದ ಸಭೆಯಲ್ಲೂ ಆಹಾರ ಇಲಾಖೆಯ ಯಾವುದೇ ಅಧಿಕಾರಿಯ ಉಪಸ್ಥಿತಿ ಇರಲಿಲ್ಲ. ಕಿನ್ಯಾದಲ್ಲಿ ರೇಷನ್ ಅಂಗಡಿಯಲ್ಲಿ ಸಮರ್ಪಕವಾಗಿ ಅಕ್ಕಿಯ ಪೂರೈಕೆಯಾಗದೇ ಜನ ಬಹಳಷ್ಟು ತೊಂದರೆಗೀಡಾಗಿದ್ದಾರೆ.…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ:ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಜನಸೇವೆ ನಡೆಸಿದ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಆಡಳಿತ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು ಹೇಳಿದರು. ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಸೋಮನಾಥೇಶ್ವರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ಹಿಂದಿನ ಹುಟ್ಟುಹಬ್ಬದ ಸಂದರ್ಭ ಸೋಮನಾಥ ದೇವರಿಗೆ ಪೂಜೆ ಸಲ್ಲಿಸಿದಂತೆ ಅವರು ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಬಾರಿ ಪೂಜೆ ಸಲ್ಲಿಸಿದ ಫಲವಾಗಿ ಮುಂದೆ ರಾಜ್ಯದ ಮುಖ್ಯಮಂತ್ರಿಯಾಗಿ ಚುನಾಯಿತರಾಗಲಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕವನ್ನು ರೂಪಿಸಲಿದ್ದಾರೆ ಎಂದರು. ಈ ಸಂದರ್ಭ ಸೌಮ್ಯಾ.ಆರ್.ಶೆಟ್ಟಿ, ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗೋಪಾಲ ಕುತ್ತಾರ್, ಬಿಜೆಪಿ ಮುಖಂಡರಾದ ಚಮದ್ರಶೇಖರ್ ಉಚ್ಚಿಲ್, ಯಶವಂತ ಅಮೀನ್, ಉದಯ ಶೆಟ್ಟಿ ಸೊಳ್ಳೆಂಜೀರು, ಸುಜಿತ್ ಮಾಡೂರು, ಗೋಪಿನಾಥ್ ಬಗಂಬಿಲ, ದಯಾನಂದ ತೊಕ್ಕೊಟ್ಟು, ಶಿವಪ್ರಸಾದ್ ಕಿನ್ಯಾ, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು. ಜಾನುವಾರು ಪೋಷಣೆ, ಕೆರೆ ಅಭಿವೃದ್ಧಿಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಪ್ರತಿಭಟಿಸುವುದು ಸಂವಿಧಾನಾತ್ಮಕ ಹಕ್ಕು, ಅದನ್ನು ವಿರೋಧಿಸಿ ಕೀಳುಮಟ್ಟದ ಹೇಳಿಕೆಯನ್ನು ನೀಡಿರುವ ಜವಾಬ್ದಾರಿಯುತ ಸಚಿವರು ತಮ್ಮ ಸ್ಥಾನಕ್ಕೆ ಯೋಗ್ಯರಲ್ಲ, ಈ ಕೂಡಲೇ ಕ್ಷಮೆ ಯಾಚಿಸದೇ ಇದ್ದಲ್ಲಿ ಹಿರಿಯರ ಜತೆಗೆ ಚರ್ಚಿಸಿ ಮುಂದಿನ ಹೋರಾಟದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದ್ದಾರೆ. ಸಚಿವ ಖಾದರ್ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ತೊಕ್ಕೊಟ್ಟುವಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಕೇರಳ ರಾಜ್ಯದಲ್ಲಿ ನೂರಾರು ಹಿಂದು ಸಂಘಟನೆಯ ಕಾರ್ಯಕರ್ತರ ಹತ್ಯೆಗೆ ಕಾರಣರಾಗಿರುವ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮಿಸಿ ಸೌಹಾರ್ದ ರ್ಯಾಲಿಯಲ್ಲಿ ಭಾಗವಹಿಸುವುದಕ್ಕೆ ಜಿಲ್ಲೆಯಲ್ಲಿ ಸಂಘಪರಿವಾರದವರು ಕರೆ ನೀಡಿದ್ದ ಹರತಾಳಕ್ಕೆ ಸಂಪೂರ್ಣ ಬೆಂಬಲ ಸಿಕ್ಕಿದೆ. ಇದು ಹಿಂದುಗಳ ನೋವನ್ನು ವ್ಯಕ್ತಪಡಿಸಿದೆ. ಅದನ್ನು ಬಿಜೆಪಿ ಕೂಡಾ ಬೆಂಬಲಿಸಿದೆ. ಹೊರಜಿಲ್ಲೆಯ ಕಾಂಗ್ರೆಸ್ ಮುಖಂಡರ ಮಾತಿಗೆ ಹಿಡಿತವಿಲ್ಲ ಆದರೆ ಜಿಲ್ಲೆಯ ಸಚಿವನಾಗಿ , ಉಳ್ಳಾಲ ಭಾಗದ ಶಾಸಕರಾಗಿದ್ದುಕೊಂಡು ಸಂವಿಧಾನವನ್ನು ತಿಳಿಯದೆ ಮಾತನಾಡಿರುವುದು ಕಳವಳಕಾರಿ. ಇದು ಅವರ ಯೋಗ್ಯತೆಯನ್ನು ಪ್ರಶ್ನಿಸುವಂತಾಗಿದೆ. ಈ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಲ್ಯ: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಚಪ್ಪಲಿಗೆ ಹೋಲಿಸಿದ ಹಿನ್ನಲೆಯಲ್ಲಿ ಕೊಲ್ಯ ಸಮೀಪ ಕಾರ್ಯಕ್ರಮಕ್ಕೆಂದು ಭಾಗವಹಿಸಲಿದ್ದ ಸಚಿವ ಯು.ಟಿ.ಖಾದರ್ ವಿರುದ್ದ ಹಿಂದು ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಘೇರಾವ್ ಹಾಕಲು ನಿರ್ಧರಿಸಿದ್ದ ಘಟನೆ ಕೊಲ್ಯ ಸಮೀಪ ಭಾನುವಾರ ಸಂಜೆ ನಡೆದಿದೆ. ಕೊಲ್ಯದಲ್ಲಿ ನಡೆಯುತ್ತಿದ್ದ ಖಾಸಗಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಲು ಸಚಿವ ಖಾದರನ್ನು ಆಹ್ವಾನಿಸಲಾಗಿತ್ತು. ಆದರೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮಿಸಿ ಶನಿವಾರ ನಡೆಸಿದ ಸೌಹಾರ್ದ ರ್ಯಾಲಿಯನ್ನು ಖಂಡಿಸಿ ಸಂಘ ಪರಿವಾರಗಳು ಮಂಗಳೂರು ಬಂದ್ಗೆ ಕರೆ ನೀಡಿದ್ದವು . ಇದಕ್ಕೆ ಪ್ರತಿಕ್ರಿಯಿಸಿ ಸಚಿವ ಖಾದರ್ ಹಿಂದು ಸಂಘಟನೆಯ ಕಾರ್ಯಕರ್ತರನ್ನು ಪಿಣರಾಯಿ ಚಪ್ಪಲಿಗೆ ಹೋಲಿಸಿದ್ದರು. ಇದನ್ನು ಖಂಡಿಸಿ ಭಾನುವಾರ ಹಿಂದು ಸಂಘಟನೆಯ ಕಾರ್ಯಕರ್ತರುನ ಕೊಲ್ಯದಲ್ಲಿ ಆಗಮಿಸಲಿದ್ದ ಖಾದರ್ಗೆ ಘೇರಾವ್ ಹಾಕಲು ಜಮಾಯಿಸಿದ್ದರು. ಆದರೆ ಸಚಿವ ಖಾದರ್ ಕಾರ್ಯಕ್ರಮಕ್ಕೆ ಬಾರದೆ ಇದ್ದ ಕಾರಣ ಹಿಂದು ಸಂಘಟನೆಯ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಹಿಂದುರುಗಿದ್ದಾರೆ.

