Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕಲ್ಲಾಪು: ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿದ್ದು, ಸಹಸವಾರ ಮೃತನ ಸಹೋದರ ಗಂಭೀರ ಗಾಯಗೊಂಡಿದ್ದಾರೆ. ತೊಕ್ಕೊಟ್ಟು ಟಿ.ಸಿ.ರೋಡಿನ ಅಕ್ಕರೆಕೆರೆ ನಿವಾಸಿ ಮಯ್ಯದ್ದಿ ಎಂಬವರ ಪುತ್ರ ಸಂಶುದ್ದೀನ್ (23) ಮೃತರು. ಸಹೋದರ ಸಹಸವಾರ ವಾಸಿಂ (16) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿದ್ದಾರೆ. ಬೆಳಿಗ್ಗೆ ಮನೆಯಿಂದ ಸಹೋದರನ ಜತೆಗೆ ಧಕ್ಕೆಗೆ ಕೆಲಸಕ್ಕೆ ತೆರಳುವ ಸಂದರ್ಭ ಘಟನೆ ಸಂಭವಿಸಿದೆ. ಸ್ಕೂಟರಿನಲ್ಲಿ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಶುದ್ದೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಸಹಸವಾರನನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಶುದ್ದೀನ್ ಅವಿವಾಹಿತರಾಗಿದ್ದು, ಧಕ್ಕೆಯಲ್ಲಿ ಬಾಕ್ಸ್ ಮಾರಾಟದ ಕೆಲಸ ನಿರ್ವಹಿಸುತ್ತಿದ್ದರು. ಸಹೋದರ ವಾಸಿಂ ಧಕ್ಕೆಯಲ್ಲಿ ಅವರ ತಂದೆಗಿರುವ ಸ್ವಂತ ಹೊಟೇಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಐವರು ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಮತ್ತು ತಂದೆ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಭೇಟಿ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಜಿಲ್ಲೆಯಾದ್ಯಂತ ಕರೆ ನೀಡಿರುವ ಮಂಗಳೂರು ಬಂದ್ ಹಿನ್ನೆಲೆಯಲ್ಲಿ ಉಳ್ಳಾಲ, ಕೊಣಾಜೆ ಹಾಗೂ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಕೃತ್ಯವನ್ನು ಮುಂದುವರಿಸಿದ್ದು, ಮೂರು ಕರ್ನಾಟಕ ಸಾರಿಗೆ ಸೇರಿದಂತೆ ಒಂದು ಖಾಸಗಿ ಬಸ್ಸುಗಳಿಗೆ ಕಲ್ಲುತೂರಾಟ ನಡೆಸಿರುವ ಘಟನೆಯಲ್ಲಿ ಚಾಲಕರಿಬ್ಬರು ಗಾಯಗೊಂಡಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ತಲಪಾಡಿ ಎಂಬಲ್ಲಿ ಪೊಲೀಸ್ ಗಸ್ತು ನಿರತ ಕರ್ನಾಟಕ ಸಾರಿಗೆ ಬಸ್ಸಿಗೆ ಕಲ್ಲೆಸೆಯಲಾಗಿತ್ತು. ಮಂಗಳೂರಿನಿಂದ ತಲಪಾಡಿ ಕಡೆಗೆ ತೆರಳುತ್ತಿದ್ದಾಗ ದುಷ್ಕøತ್ಯ ಎಸೆಯಲಾಗಿದೆ. ಪರಿಣಾಮ ಗಾಜು ಸಂಪೂರ್ಣ ಪುಡಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಮಧ್ಯಾಹ್ನ 11ರ ವೇಳೆಗೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ಗ್ರಾಮಾಂತರ ಸಾರಿಗೆ ಬಸ್ಸಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುವ ಸಂದರ್ಭ ಘಟನೆ ನಡೆದಿದೆ. ಬಳಿಕ .11.30 ಸುಮಾರಿಗೆ ತಲಪಾಡಿಯಿಂದ ಮಂಗಳೂರಿಗೆ ಹೊರಟಿದ್ದ ಖಾಸಗಿ ಮರೋಳಿ ಬಸ್ಸಿನ ಗಾಜನ್ನು 6 ಮಂದಿಯ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತಲಪಾಡಿ: ಕೇರಳ ಸಾರಿಗೆಯ ಎರಡು ಬಸ್ಸುಗಳಿಗೆ ದುಷ್ಕರ್ಮಿಗಳು ಶುಕ್ರವಾರ ತಡರಾತ್ರಿ ಕಲ್ಲೆಸೆದು ಹಾನಿ ಮಾಡಿರುವ ಘಟನೆ ಕೇರಳ -ಕರ್ನಾಟಕ ಗಡಿ ಪ್ರದೇಶ ತೂಮಿನಾಡು ಮತ್ತು ಕೋಟೆಕಾರು ಬೀರಿ ಸಮೀಪ ನಡೆದಿದೆ. ಇಂದು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರು ಮಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಬಂದ್ ಗೆ ಕರೆ ನೀಡಿದೆ. ಶುಕ್ರವಾರದಂದು ಭೇಟಿ ವಿರೋಧಿಸಿ ಹರತಾಳವನ್ನು ಆಯೋಜಿಸಿತ್ತು. ಇದೇ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲೆಸೆದಿರುವ ಶಂಕೆ ಇದೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ವೇಳೆ ತೂಮಿನಾಡು ಸಮೀಪ 9.00 ಗಂಟೆಯ ವೇಳೆ ಕಲ್ಲೆಸೆದರೆ ಇನ್ನೊಂದೆಡೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಬೀರಿ ಎಂಬಲ್ಲಿ ಕಲ್ಲೆಸೆಯಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕೇರಳ ಹಾಗೂ ಕರ್ನಾಟಕ ಪೊಲೀಸರ ಬಿಗಿ ಬಂದೋಬಸ್ತಿನ ನಡುವೆ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಸೆಕ್ಷನ್ ಜಾರಿಯಲ್ಲಿದ್ದರೂ ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಉಳ್ಳಾಲ ಹಾಘೂ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಫೆ.25ರಂದು ಮಂಗಳೂರಿನಲ್ಲಿ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸಾಮರಸ್ಯದಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ ಎಂದು ಬದ್ರಿಯ ಕಾಲೇಜಿನ ಪ್ರಾಚಾರ್ಯರಾಗಿರುವ ಡಾ| ಇಸ್ಮಾಯಿಲ್ ಎಸ್. ಅಬಿಪ್ರಾಯಪಟ್ಟರು. ಅವರು ಕಿನ್ಯಾದಲ್ಲಿ ಸಾಮರಸ್ಯದ ಸಾಹಿತಿ ಗುಣವತಿ ಕಿನ್ಯಾ ಅವರು ಹಮ್ಮಿಕೊಂಡಿದ್ದ `ಸಾಮರಸ್ಯ ಸಾಹಿತ್ಯೋತ್ಸವ’ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚುಟುಕು ಸಾಹಿತಿ ಗಣೇಶ್ ಪ್ರಸಾದ್ ವಹಿಸಿದ್ದರು. ಒಲವಿನ ಚರ್ಚ್‍ನ ಧರ್ಮಗುರು ರೆ| ಫಾ| ಲಾರೆನ್ಸ್ ಡಿ’ಸೋಜಾ ಶುಭಹಾರೈಸಿದರು. ಹಿರಿಯ ಸಾಹಿತಿ ಚಂದ್ರಕಲಾ ನಂದಾವರ, ಪ್ರಸಾದ್ ನೇತ್ರಾಲಯದ ಅಬ್ದುಲ್ ಖಾದರ್ ನೇತ್ರದಾನದ ಬಗ್ಗೆ ಮಾಹಿತಿ ನೀಡಿದರು. ಕವಿ ಸಾಹಿತಿಗಳಾದ ಅಶೋಕ್ ಕುಮಾರ್ , ಜನಶಿಕ್ಷಣ ಟ್ರಸ್ಟ್‍ನ ಶೀನ ಶೆಟ್ಟಿ, ಕೃಷ್ಣಮೂಲ್ಯ, ಕಾರ್ಯಕ್ರಮದ ಸಂಘಟಕಿ ಸಾಹಿತಿ ಗುಣವತಿ ಉಪಸ್ಥಿತರಿದ್ದರು. ಸುಧಾ ನಾಗೇಶ್ ವಂದಿಸಿದರು. ನಳಿನಾಕ್ಷಿ ಬಿಜೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಕುಂತಲಾ ನಾಡಗೀತೆ ಪ್ರಸ್ತುತ ಪಡಿಸಿದರು. ಶ್ರೀಕಾಂತ್ ಕೊಂಡಾಣ ತಂಡದಿಂದ ನೃತ್ಯ ಕಾರ್ಯಕ್ರಮ ನಡೆಯಿತು.

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ರಾಣಿಪುರ: ರಾಣಿಪುರ ವಿಶ್ವಮಾತೆ ಮರಿಯಮ್ಮನವರ ದೇವಾಲಯಕ್ಕೆ ಒಳಪಟ್ಟ ರೆಜಿನಾ ಚೇಲಿ ಕಾನ್ವೆಂಟಿನ ಸುವರ್ಣ ಮಹೋತ್ಸವ ಇತ್ತಿಚೇಗೆ ನಡೆಯಿತು. ಮಂಗಳೂರು ದಕ್ಷಿಣ ವಲಯದ ಮುಖ್ಯ ಗುರುಗಳಾದ ಜೆ.ಬಿ. ಸಲ್ದಾನ ಪೆರ್ಮನ್ನೂರು , ರಾಣಿಪುರ ಇಗರ್ಜಿಯ ಧರ್ಮಗುರು ಸಂತೋಷ್ ಡಿ’ಸೋಜಾ, ಮತ್ತು ರಿಶಿವನದ ಗುರು ಅಲ್ವಿಟೊ ದಿವ್ಯ ಬಲಿಪೂಜೆ ಅರ್ಪಿಸಿದರು. ಸನ್ಮಾನ ಸಮಾರಂಭದಲ್ಲಿ ಬೆಥನಿ ಸಂಸ್ಥೆಯ ಸಹಾಯಕಿ ಮಹಾಮಾತೆ ಭಗಿನಿ ಲಿಲ್ಲಿಸ್ ಬಿ.ಎಸ್. ಹಾಗೂ ಪೆÇ್ರವಿನ್ ಶಿಯಲ್ ಸುಪೀರಿಯರ್ ಸಿಸ್ಟರ್ ಸಿಸಿಲಿಯಾ ಮೆಂಡೊನ್ಸಾ ಬಿ.ಎಸ್ ಇವರನ್ನು ಸನ್ಮಾನಿಸಲಾಯಿತು. ಕಾನ್ವೆಂಟಿನ ಸುಪೀರಿಯರ್ ಸಿಸ್ಟರ್ ಮೀನಾರವರು ಸ್ವಾಗತಿಸಿದರು. ಭಗಿನಿ ಅಮಲ ವಂದಿಸಿದರು. ಹೋಲಿ ಏಂಜಲ್ಸ್ ಶಾಲೆ ಪೆರ್ಮನ್ನೂರಿನ ಭಗಿನಿ ಸಿಸ್ಟರ್ ಸೆನ್ರಿನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು.

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿಕೊಂಡು ತಮ್ಮ ರೇಷನ್ ಕಾರ್ಡನ್ನು ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ತಿಳಿಸಿದರು. ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಮದೀನಾ ಸೆಕ್ಟರ್ ವತಿಯಿಂದ ಮದೀನಾದ ಕೆ.ಸಿ.ಎಫ್ ಭವನದಲ್ಲಿ ನಡೆದ ಅಸುಪ್ಪಾ 2ನೇ ಆವೃತ್ತಿಯ ಸ್ಪೋಕನ್ ಇಂಗ್ಲೀಷ್ ತರಗತಿ ಉದ್ಘಾಟಿಸಿ ಮಾತನಾಡಿದರು. ರೇಷನ್ ಕಾರ್ಡ್ ಇಲ್ಲದೆ ವಿದೇಶದಲ್ಲಿರುವ ರಾಜ್ಯದ ಪ್ರತಿಯೊಬ್ಬರು ತಾವು ಅರ್ಜಿ ಸಲ್ಲಿಸಿದ ತಿಂಗಳೊಳಗೆ ರೇಷನ್ ಕಾರ್ಡ್ ಅರ್ಜಿದಾರರ ಕೈ ಸೇರಲಿದೆ ಎಂದ ಅವರು ಕೆಸಿಎಫ್‍ನ ಮದೀನಾ ಸೆಕ್ಟರ್ ಅಂಗ್ಲ ಭಾಷೆ ಕಲಿಕೆಗೆ ವ್ಯವಸ್ಥೆ ಮಾಡುವ ಮೂಲಕ ಉತ್ತಮ ಕಾರ್ಯ ನಡೆಸುತ್ತಿದ್ದು, ನಮ್ಮ ಮಾತೃಭಾಷೆಯೊಂದಿಗೆ ಇತರ ಭಾಷೆಗಳಿಗೆ ಆದ್ಯತೆ ನೀಡಿದರೆ ಭಾಷಾ ಸಮಸ್ಯೆಯಿಂದ ಮುಕ್ತಿ ಹೊಂದಲು ಸಾಧ್ಯ. ಪ್ರಸಕ್ತ ಸನ್ನಿವೇಶದಲ್ಲಿ ಇಂಗ್ಲೀಷ್ ಭಾಷೆ ಅತ್ಯಗತ್ಯವಾಗಿದ್ದು, ನಾವು ಇತರೆ ಭಾಷೆಗಳನ್ನು ಕಲಿತಂತೆ ನಮ್ಮ ವ್ಯಕ್ತಿತ್ವವು ಕೂಡ ಬೆಳೆಯುತ್ತಾ ಹೋಗುತ್ತದೆ ಎಂದರು. ಇದೇ ವೇಳೆ ಕರ್ನಾಟಕ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಪೊಯ್ಯತ್ತಬೈಲ್: ಉತ್ತಮ ಪಾಂಡಿತ್ಯವನ್ನು ಹೊಂದಿದ ಮಣವಾಠಿ ಬೀವಿಯವರು ಪವಾಢದಿಂದ ಪೊಯ್ಯತ್ತಬೈಲ್ ಎಂಬ ಕುಗ್ರಾಮ ಅಭಿವೃದ್ಧಿಯತ್ತ ಹೆಜ್ಜೆ ಇಟ್ಟು ಈಗಲೂ ಹೆಸರು ಉಳಿಸಿಕೊಂಡಿದೆ. ಇಲ್ಲಿನ ಉರೂಸ್ ಕಾರ್ಯಕ್ರಮದಲ್ಲಿ ಯಾವುದೇ ಭಿನ್ನಮತ ತೋರದೇ ಎಲ್ಲರೂ ಸಹಮತದಿಂದ ವರ್ತಿಸಿ ಕಾರ್ಯನಿರ್ವಹಿಸಬೇಕಾದ ಅಗತ್ಯತೆ ಇದೆ ಎಂದು ಮಂಜೇಶ್ವರ ಸಂಯುಕ್ತ ಜಮಾಅತ್ ಅಧ್ಯಕ್ಷ ಅಸ್ಸಯ್ಯದ್ ಅತ್ತಾವುಲ್ಲ ತಂಙಳ್ ಹೇಳಿದರು. ಅವರು ಪೊಯ್ಯತ್ತಬೈಲ್ ನಲ್ಲಿರುವ ಮಣವಾಠಿಬೀವಿ ದರ್ಗಾದ ಉರೂಸ್ ಕಾರ್ಯಕ್ರಮವನ್ನು ಶುಕ್ರವಾರ ಧ್ವಜಾರೋಹಣ ನಡೆಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಉಳ್ಳಾಲದ ನಂತರ ಸ್ಥಾನ ಈ ದರ್ಗಾಕ್ಕಿದೆ. ಅದನ್ನು ಎಲ್ಲರೂ ಒಗ್ಗಟ್ಟಿನಿಂದ ಇದ್ದುಕೊಂಡು ಉಳಿಸಿಕೊಂಡು ಬರಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಮಾಅತ್ ಸಮಿತಿ ಅಧ್ಯಕ್ಷ ವಿ. ಅಹಮದ್ ಕುಂಞ  ಓಡಂಗಳ, ಜಮಾಅತ್‍ನ ಮಾಜಿ ಅಧ್ಯಕ್ಷ ರಾದ ನಡಿಬೈಲ್ ಅಹ್ಮದ್ ಕುಂಞ ಪಿ.ಕೆ.ಕುಂಞ ಅಹ್ಮದ್ ಮುಸ್ಲಿಯಾರ್, ಟಿ. ಅಹ್ಮದ್, ಟಿ. ಇಸ್ಮಾಯಿಲ್ ಮಾಸ್ಟರ್, ಎಸ್.ಎಂ ಅಬ್ದುಲ್ ಖಾದರ್ ಮೊದಲಾದವರು ಉಪಸ್ಥಿತರಿದ್ದರು. ಜಮಾಅತ್ ಸಮಿತಿ ಕಾರ್ಯದರ್ಶಿ ಪಿ.ಕೆ. ಇಬ್ರಾಹಿಂ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್  ತೊಕ್ಕೊಟ್ಟು: ನಗರಸಭೆಯಲ್ಲಿ ಉತ್ತಮ ಕೆಲಸ ಮಾಡಿದರೆ ಮತದಾರರು ಸದಾ ಬೆಂಬಲಿಸುತ್ತಾರೆ ಎನ್ನುವುದಕ್ಕೆ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನ ಅಭೂತಪೂರ್ವ ಗೆಲವು ಉದಾಹರಣೆಯಾಗಿದ್ದು, ನೂತನವಾಗಿ ಚುನಾಯಿತರಾದ ಸದಸ್ಯರು ಇನ್ನಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳವ ಮೂಲಕ ಜನರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಉಳ್ಳಾಲ್ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉಳ್ಳಾಲ ನಗರಸಭೆ ಎರಡು ವಾರ್ಡುಗಳಿಗೆ ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಉಳ್ಳಾಲ ಕಾಂಗ್ರೇಸ್ ನೂತನ ನಗರ ಸಭಾ ಸದಸ್ಯರಾಗಿ ಚುನಾಯಿತರಾದ ಬಾಝಿಲ್ ಡಿ’ಸೋಜಾ ಮತ್ತು ಉಸ್ಮಾನ್ ಕಲ್ಲಾಪು ರವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹರ್ಷರಾಜ್ ಮುದ್ಯ, ನಗರಸಭಾ ಅಧ್ಯಕ್ಷ ಹುಸೇನ್ ಕುಂಇïಮೋನು, ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಮುಸ್ತಾಫ ಹರೇಕಳ, ಟಿ.ಸಿ. ಅಬ್ದುಲ್ಲ, ರಮೇಶ್ ಕೊಲ್ಯ, ಸುರೇಶ್ ಭಟ್ನಗರ, ಮಹಿಳಾ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ:ಎಲ್ಲ ಧರ್ಮ ಸಾರುವ ತತ್ವ ಒಂದೇ ಎಂಬ ಕಲ್ಪನೆಯನ್ನು ಪ್ರತಿಯೊಬ್ಬರು ಅನುಸರಿಸುವ ಮೂಲಕ ಧರ್ಮ ಮಧ್ಯೆ ಮನುಷ್ಯ ಸೃಷ್ಟಿಸಿದ ಗೋಡೆಯನ್ನು ಕಿತ್ತು ಹಾಕುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟುವಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಮಹಾಶಿವರಾತ್ರಿಯ ಪ್ರಯುಕ್ತ ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ ಆಯೋಜಿಸಿದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗದ ಪ್ರದರ್ಶನ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಅದೆಷ್ಟೋ ಧರ್ಮಪ್ರಚಾರಕರೂ ಬಂದರೂ ಯಾರು ಧರ್ಮವನ್ನು ಸ್ಥಾಪನೆ ಮಾಡಿಲ್ಲ. ಅದರ ಬದಲು ಸಮಾಜದಲ್ಲಿರುವ ಸಮಸ್ಯೆಗಳನ್ನು ಬೋಧನೆಯ ಮೂಲಕ ಜನರಿಗೆ ಅರ್ಥವಾಗುವ ರೀತಿಯಲ್ಲಿ ತಿಳಿಸಿದರು. ಆದರೆ ಅದರ ನಂತರ ಬಂದ ಅವರ ಅನುಯಾಯಿಗಳು ಧರ್ಮ ಎಂಬ ಹೆಸರಿನಲ್ಲಿ ಗೋಡೆಗಳನ್ನು ಕಟ್ಟಲು ಶುರುಮಾಡಿದರು. . ಭಗವಂತ ಒಬ್ಬನೇ ಆದರೆ ಅವರ ನಾಮ ಹಲವು ಈ ನಿಟ್ಟಿನಲ್ಲಿ ಎಲ್ಲ ಧರ್ಮಗಳು ಸಾರಿದ ಒಳ್ಳೆಯ ವಿಚಾರಗಳನ್ನು ಪಾಲಿಸಬೇಕು. ಹಾಗೇ ಮಾಡುವ ಮನುಷ್ಯ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಅಲ್ಲಿ ಆದೆಷ್ಟೋ ವರ್ಷಗಳ ನಂತರದ ಭೇಟಿಯ ಸಂಭ್ರಮವಿತ್ತು, ಸಹಪಾಠಿಗಳ ಜೊತೆ ಕಾಲೇಜು ದಿನಗಳಲ್ಲಿ ಬೆರೆತ ಆದೆಷ್ಟೋ ನೆನಪುಗಳನ್ನು ಮೆಲುಕು ಹಾಕುತ್ತಾ, ನೆನಪಿನ ಜೊತೆಗೆ ಕಣ್ಣಂಚಿನಲ್ಲಿ ಅದೆಲ್ಲೋ ಅಲ್ಪ ಸಲ್ಪ ಕಣ್ಣೀರು, ಹಳೆಯ ಗೆಳತನದ ಜೊತೆಗೆ ಹೊಸ ನಗುವಿನೊಂದಿಗೆ ಎಲ್ಲೋ ಇದ್ದ ಸಹಪಾಠಿಗಳ ಪುನರ್ ಮಿಲನಕ್ಕೆ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮಂಗಳ ಸಭಾಂಗಣ ದಲ್ಲಿ ಭಾನುವಾರ ಜರಗಿದ `ಸಂಗಮಾ’ ಮಂಗಳೂರು ವಿ.ವಿಯ ಹಳೇ ವಿದ್ಯಾರ್ಥಿಗಳ ಮಂಗಳ ಅಲ್ಯುಮಿನಿ ಅಸೋಸಿಯೇಷನ್ ಆಯೋಜಿಸಿದ್ದ ಕಾರ್ಯಕ್ರಮ ಸಾಕ್ಷಿಯಾಯಿತು. ವಜ್ರೇಶ್ವರಿ ತಪ್ಪಿದಲ್ಲಿ ಜ್ಯೋತಿ ಬಸ್ಸಿನ ಮೂಲಕ ಪ್ರಯಾಣ. ಮಂಗಳೂರಿನಿಂದ ಕೊಣಾಜೆಯವರೆಗೆ ಪ್ರಯಾಣಿಸಿದವರು ರಾಮಣ್ಣನ ಹೊಟೇಲಿನಲ್ಲಿ ಚಹಾ ಸವಿದು ಪಾಠವನ್ನು ಆಲಿಸುತ್ತಿದ್ದೆವು. ಇದೀಗ ಅದೆಲ್ಲಾ ನೆನಪು ಮಾತ್ರ. ಇಂತಹ ಸವಿನೆನಪುಗಳನ್ನು ಮೆಲುಕು ಹಾಕುತ್ತಲೇ ಸಂಗಮ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಕಾರ್ಯಕ್ರವನ್ನು ಉದ್ಘಾಟಿಸಿದ ಕಲ್ಲಿಕೋಟೆ ಹಾಗೂ ಕಣ್ಣೂರು ವಿಶ್ವವಿದ್ಯಾಲಯದ ನ ವಿಶ್ರಾಂತ ಕುಲಪತಿ ಪ್ರೊ.ಅಬ್ದುಲ್ ರೆಹೆಮಾನ್ ಬಹಳ ವರ್ಷಗಳ ಹಿಂದೆ ಸ್ಥಾಪನೆಗೊಂಡ ಮಂಗಳೂರು…

Read More