ಉಳ್ಳಾಲ್ನ್ಯೂಸ್ ನೆಟ್ವರ್ಕ್ ಉಳ್ಳಾಲ; ಅಂದಿನ ಕಾಲದಲ್ಲಿ ತಂತ್ರಜ್ಞಾನದಂತಹ ವ್ಯವಸ್ಥೆ ಇಲ್ಲದಿದ್ದರೂ ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರ ವಿರುದ್ದ ಒಗ್ಗಟ್ಟು ಹಾಗೂ ಸಾಹಸದಿಂದ ಹೋರಾಡಿದ ಮಹಿಳೆಯಾಗಿದ್ದಾರೆ. ಅವರ ಆದರ್ಶ, ಸಾಹಸ, ಮಾನವೀಯ ಮೌಲ್ಯಗಳು ನಮಗೆಲ್ಲರಿಗೂ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಹಂಪಿ, ಸಂಗೊಳ್ಳಿ ರಾಯಣ್ಣಸ ಸಹಿತ ರಾಜ್ಯದಲ್ಲಿ ನಡೆಯುತ್ತಿರುವ ದೊಡ್ಡ ಮಟ್ಟದ ಉತ್ಸವದಂತೆಯೇ ಅಬ್ಬಕ್ಕ ಉತ್ಸವ ನಡೆಯಲಿದೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಸರ್ಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಅಸೈಗೋಳಿ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ವೀರರಾಣಿ ಅಬ್ಬಕ್ಕ ಉತ್ಸವ-2017 ಉದ್ಘಾಟಿಸಿ ಅವರು ಮಾತನಾಡಿದರು. ಅಬ್ಬಕ್ಕನ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪ್ರಚುರಪಡಿಸಲು ಬೆಂಗಳೂರು ಮಾತ್ರವಲ್ಲದೆ ದೆಹಲಿಯಲ್ಲಿಯೂ ಕೂಡಾ ಕನ್ನಡ ಸಂಘ ಸಂಸ್ಥೆಗಳ ಸಹಕಾರದಿಂದಲೂ ನಡೆಸಲು ತೀರ್ಮಾನಿಸಲಾಗಿದೆ. ಅಲ್ಲದೆ ತೊಕ್ಕೊಟ್ಟಿನಲ್ಲಿ ಅಬ್ಬಕ್ಕ ಭವನ ನಿರ್ಮಾಣಗೊಳ್ಳುತ್ತಿದ್ದು ಇದು ಎಂಟು ಕೋಟಿ ಅನುದಾನದಲ್ಲಿ ಸುಸಜ್ಜಿತ ಕಟ್ಟಡವಾಗಿ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದರು. ಅಬ್ಬಕ್ಕ ಎಲ್ಲರಿಗೂ ಪ್ರೇರಣಾ ಶಕ್ತಿಯಾಗಿರಬೇಕು, ಸಮಸ್ಯೆ ಬಂದಾಗ ಮುಂದೆ ನಿಂತು ನ್ಯಾಯ ಕೊಡುವ ಶಕ್ತಿ ಆಗಬೇಕು.…
Author: UllalaVani
ಉಳ್ಳಾಲ್ನ್ಯೂಸ್ ನೆಟ್ವರ್ಕ್ ದೇರಳಕಟ್ಟೆ : ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮುಂಭಾಗದಲ್ಲಿ ಆಧುನಿಕ ಸೌಲಭ್ಯಗಳುಳ್ಳ, ಹವಾನಿಯಂತ್ರಿತ ` ದ ಕಂಫಟ್ರ್ಸ್ ಇನ್’ ವಸತಿಗೃಹ ಗುರುವಾರ ಶುಭಾರಂಭಗೊಂಡಿತು. ವಸತಿಗೃಹ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ದೇವಿ ಎಜ್ಯುಕೇಷನ್ ಟ್ರಸ್ಟಿನ ಚೇರ್ ಮೆನ್ ಎ.ಸದಾನಂದ ಶೆಟ್ಟಿ ಮಾತನಾಡಿ ದೈವ ಬಲದೊಂದಿಗೆ ಮನಸ್ಥೈರ್ಯವೊಂದಿದ್ದರೆ ಉದ್ಯಮದಲ್ಲಿ ಯಶಸ್ಸು ಸಾಧ್ಯ. ವಸತಿಗೃಹಕ್ಕೆ ಬರುವ ಗ್ರಾಹಕರ ಸೇವೆ ಉತ್ತಮ ಜನಸಂಪರ್ಕ ನೀಡುವ ಮೂಲಕ ಈ ಸಂಸ್ಥೆ ಇನ್ನಷ್ಟು ಅಭಿವೃದ್ಧಿಯಾಗಲಿ ಎಂದರು. ವಸತಿ ಗೃಹವನ್ನು ಉದ್ಘಾಟಿಸಿದ ನಿಟ್ಟೆ ವಿಶ್ವವಿದ್ಯಾಲಯದ ಎನ್.ವಿನಯ ಹೆಗ್ಡೆ ಮಾತನಾಡಿ ಯಶಸ್ಸಿನ ಹಿಂದೆ ದೇರಳಕಟ್ಟೆ ಪರಿಸರದ ಕೊಡುಗೆ ಅಪಾರವಿದ್ದು, ಅದಕ್ಕಾಗಿ ತನ್ನ ಯಶಸ್ಸನ್ನು ಪರಿಸರಕ್ಕೆ ಅರ್ಪಿಸುತ್ತೇನೆ. ಕಷ್ಟಪಟ್ಟಲ್ಲಿ ಪ್ರತಿ ಉದ್ಯಮದಲ್ಲಿ ಯಶಸ್ಸಿದೆ. ದೇರಳಕಟ್ಟೆ ಎಂಬ ಊರು ದೇವರ ಕಟ್ಟೆಯಾಗಿದೆ. ಪ್ರತಿಯೊಬ್ಬರು ಇಲ್ಲಿಗೆ ಬಂದವರು ಅವರವರ ಧರ್ಮದ ನಂಬಿಕೆಯಂತೆ ಯಶಸ್ಸು ಗಳಿಸಿದ್ದಾರೆ ಎಂದರು. ದ ಕಂಫಟ್ಸ್ ್ ಇನ್ ವಸತಿಗೃಹದ ಮಾಲೀಕ ಚಂದ್ರಹಾಸ್ ಶೆಟ್ಟಿ ಮಾತನಾಡಿ ಶೈಕ್ಷಣಿಕ ಕೇಂದ್ರವಾಗಿ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಫಿಸಿಯೋಥೆರಪಿಸ್ಟ್ಗಳಿಗೆ ಸ್ಫೂರ್ತಿ, ಹುರಿದುಂಬಿಸುವ ಸಲುವಾಗಿ ಆಯೋಜಿಸಿರುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಎಲ್ಲರೂ ಜತೆಯಾಗುವುದರ ಮೂಲಕ ಕ್ಷೇತ್ರದಲ್ಲಿ ವೇಗದ ಬೆಳವಣಿಗೆ ಜತೆಗೆ ಬಲವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಯೋಥೆರಫಿಸ್ಟ್ ಇದರ ಅಧ್ಯಕ್ಷ ಡಾ.ಉಮಾಶಂಖರ್ ಮೊಹಂತಿ ಅಭಿಪ್ರಾಯಪಟ್ಟರು. ಅವರು ನಿಟ್ಟೆ ವಿಶ್ವವಿದ್ಯಾಲಯದ ಫಿಸಿಯೋಥೆರಪಿ ವಿಭಾಗ ಆಯೋಜಿಸಿದ್ದ `ಫಿಸಿಯೋ-ಕಾನ್ -2017′ ಎರಡು ದಿನಗಳ ಅಂತಾರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನಕ್ಕೆ ದೇರಳಕಟ್ಟೆಯ ಕ್ಷೇಮ ಆಡಿಟೋರಿಯಂನಲ್ಲಿ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಆರೋಗ್ಯ ಕ್ಷೇತ್ರದಲ್ಲಿ ಫಿಸಿಯೋಥೆರಪಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಫಿಸಿಯೋಥೆರಪಿಗಳು ಎಲ್ಲರೂ ಜತೆಯಾದಾಗ ಕ್ಷೇತ್ರದ ಪ್ರಗತಿಯನ್ನು ನಿರ್ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದಂತಾಗುತ್ತದೆ. ವೃತ್ತಿಯಲ್ಲಿ ವೇಗದ ಬದಲಾವಣೆಗೆ ದೇಶಾದ್ಯಂತ ಫಿಸಿಯೋಥೆರಪಿಗಳ ಚಿಂತನೆಗಳ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ದೇಶದ 7 ಲಕ್ಷ ಫಿಸಿಯೋಥೆರಪಿಗಳು ಸಂಪರ್ಕದಲ್ಲಿದ್ದು, ಅವರಲ್ಲಿ ಓರ್ವ ಯಶಸ್ಸು ಗಳಿಸಿದರೂ ಇಡೀ ಕ್ಷೇತ್ರದ ಕೀರ್ತಿ ಉಳಿಸಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಡಾ. ಎಸ್…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಎಲ್ಲವೂ ಡಿಜಿಟಲೀಕರಣ ಆಗುತ್ತಿದೆ. ಇದಕ್ಕೆ ಪೂರಕವಾಗಿ ಸಂಘ ಸಂಸ್ಥೆಗಳು ವಿವಿಧ ರೀತಿಗಳಲ್ಲಿ ಜನರನ್ನು ಸುಶಿಕ್ಷಿತರನ್ನಾಗಿಸುತ್ತಿದ್ದರೆ, ಇತ್ತ ಗ್ರಾಮಾಂತರ ಭಾಗಕ್ಕೆ ಚಲಿಸುವ ಖಾಸಗಿ ಬಸ್ಸಿನಲ್ಲಿ ಉಚಿತ ವೈಫೈ ಸೌಲಭ್ಯವನ್ನು ನೀಡುವ ಮೂಲಕ ಬಸ್ ಮಾಲೀಕರು ಗ್ರಾಮೀಣ ಭಾಗದ ಜನರಿಗೆ ಹಾಗೂ ಬಸ್ಸಿನಲ್ಲಿ ಚಲಿಸುವ ಪ್ರಯಾಣಿಕರಿಗೆ ಉಚಿತ ಇಂಟರ್ನೆಟ್ ನೀಡಲು ಆರಂಭಿಸಿದ್ದಾರೆ. ನಾಟೆಕಲ್ ನಿವಾಸಿ ಎ.ಬಿ.ಇಬ್ರಾಹಿಂ ಮಾಲೀಕತ್ವದ ಗೋಲ್ಡನ್ ಲೈನ್ ಬಸ್ಸಿನಲ್ಲಿ ಉಚಿತ ವೈಫೈ ಸೌಲಭ್ಯವನ್ನು ಆರಂಭಿಸಲಾಗಿದೆ. ಅವರ ಪುತ್ರ ಅಬ್ದುಲ್ ರೆಹಮಾನ್ ಎಂಬವರು ಚಾಲಕನಾಗಿರುವ ಬಸ್ಸಿನಲ್ಲಿ ಉಚಿತ ಅಂತರ್ಜಾಲ ಅಳವಡಿಸಲು ರೆಹಮಾನ್ ಪುತ್ರ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿ ಆಗಿರುವ ಯುವಕನಾಗಿರುವ ಮನಸ್ಸು ಮಾಡಿದ್ದರು. ಅವರ ಅಭಿರುಚಿಯಂತೆ ಕಳೆದ ಎರಡು ದಿನಗಳಿಂದ ಮಂಗಳೂರಿನಿಂದ ಹೂಹಾಕುವಕಲ್ಲು ಕಡೆಗೆ ಚಲಿಸುವ 54 ನಂಬರಿನ ಸಿಟಿ ಬಸ್ಸಿನಲ್ಲಿ ಉಚಿತ ವೈಫೈ ಸೌಲಭ್ಯವನ್ನು ಪ್ರಯಾಣಿಕರಿಗೆ ಒದಗಿಸಲಾಗಿದೆ. ವೈಫೈ ಹೆಸರು ಮತ್ತು ಅದರ ಪಾಸ್ವರ್ಡ್ ನ್ನು ಬಸ್ಸಿನ ಒಳಭಾಗದಲ್ಲಿ ಸ್ಟಿಕರ್ ಮೂಲಕ ಅಂಟಿಸಲಾಗಿದೆ. ಎರಡು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಸೈಗೋಳಿ: ಕಳೆದ ಹಲವು ವರ್ಷಗಳಿಂದ ರಾಜ್ಯ ಸರಕಾರ ಅಬ್ಬಕ್ಕ ಉತ್ಸವಕ್ಕೆ ಅನುದಾನ ಪೂರೈಸುವುದರಿಂದ ಸರಕಾರಿ ಉತ್ಸವವಾಗಿ ಆಚರಿಸಲಾಗುತ್ತಿದ್ದು, ಈ ಬಾರಿ ಅಸೈಗೋಳಿಯಲ್ಲಿ ನಡೆಯಲಿರುವ ಉತ್ಸವದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಹೇಳಿದರು. ಅವರು ಅಸೈಗೋಳಿ ಮುಖ್ಯಪೇಟೆಯಲ್ಲಿ ಫೆ.4 ಮತ್ತು 5 ರಂದು ನಡೆಯಲಿರುವ ಅಬ್ಬಕ್ಕ ಉತ್ಸವದ ಚಪ್ಪರ ಮುಹೂರ್ತದಲ್ಲಿ ಭಾಗವಹಿಸಿ ಮಾತನಾಡಿದರು. 1992 ರಿಂದ ಉಳ್ಳಾಲದಲ್ಲಿ ಅಬ್ಬಕ್ಕ ಉತ್ಸವ ಆರಂಭವಾಗಿತ್ತು. ಕೆಲ ವರ್ಷಗಳಿಂದ ರಾಜ್ಯ ಸರಕಾರ ಅನುದಾನ ಪೂರೈಸುತ್ತಿದ್ದು, ಸರಕಾರಿ ಉತ್ಸವವಾಗಿ ಆಚರಿಸಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಅಬ್ಬಕ್ಕ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ದಿನಕರ್ ಉಳ್ಳಾಲ್ ಮಾತನಾಡಿ ಎರಡನೇ ಬಾರಿ ಅಸೈಗೋಳಿಯಲ್ಲಿ ಅಬ್ಬಕ್ಕ ಉತ್ಸವವನ್ನು ಆಚರಿಸಲಾಗುತ್ತಿದ್ದು, ಹಿಂದೆ ನಡೆದಾಗ ಸಾರ್ವಜನಿಕರಿಂದ ಉತ್ತಮ ಸ್ಪಂಧನೆ ಹಾಗೂ ಪ್ರಶಂಸೆಯೂ ವ್ಯಕ್ತವಾಗಿತ್ತು. ಅಸೈಗೋಳಿ, ಮುಡಿಪು, ಕೊಣಾಜೆ ಭಾಗದ ಮಂದಿ ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸುಮಾರು 3,000 ಮಂದಿಯ ವ್ಯವಸ್ಥೆಯನ್ನು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುರ್ನಾಡು : ಭವಿಷ್ಯದ ಪ್ರಜೆಗಳಿಗೆ ಉತ್ತಮವಾದ ಆರೋಗ್ಯಕ್ಕೆ ಪೂರಕವಾದ ಸಮಾಜ ನಿರ್ಮಿಸುವುದು ಹಿರಿಯರ ಜವಾಬ್ದಾರಿಯಾಗಿದೆ.ಈ ನಿಟ್ಟಿನಲ್ಲಿ ಘನ ತ್ಯಾಜ್ಯದಂತಹ ಸಮಸ್ಯೆಯನ್ನು ದೂರ ಮಾಡಲು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಬೇಕಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಜಿಲ್ಲಾ ಪಂಚಾಯತ್, ಜಿಲ್ಲಾ ನೆರವು ಘಟಕ, ಸ್ವಚ್ಛ ಭಾರತ್ ಮಿಷನ್, ಬಂಟ್ವಾಳ ತಾಲೂಕು ಪಂಚಾಯತ್, ಕುರ್ನಾಡು ಗ್ರಾಮ ಪಂಚಾಯಿತಿ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ನಿಯಂತ್ರಣ ಹಾಗೂ ಸಮರ್ಪಕ ಘನ ತ್ಯಾಜ್ಯ ವಿಲೇವಾರಿ ಬೃಹತ್ ಜನಾಂದೋಲನಕ್ಕೆ ಮುಡಿಪುವಿನ ಕುರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಚಾಲನೆ ನೀಡಿ ಮಾತನಾಡಿದರು. ಸಮಾಜಕ್ಕೆ ಆಗುವ ಸಮಸ್ಯೆ ಜನಸಾಮಾನ್ಯರಿಗೆ ಆಗುವ ಸಮಸ್ಯೆಯಾಗಿದೆ. ವ್ಯಾಪಾರಸ್ಥರು ವ್ಯಾಪಾರದ ಜತೆಗೆ ಆಸ್ತಿ ಸಂಪತ್ತು ಜಾಸ್ತಿ ಮಾಡುವ ಮೂಲಕ ಭವಿಷ್ಯದ ಪ್ರಜೆಗಳಿಗೆ ಮಾರಕವಾದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸಬಾರದು. ಹಂತಗಳಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ತರಲು ಮುಖ್ಯಮಂತ್ರಿಗಳು ಹೆಚ್ಚಿನ ಒತ್ತು…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಸ್ವಾಮಿ ವಿವೇಕಾನಂದರು ಒಬ್ಬ ಶ್ರೇಷ್ಠ ಭಾರತೀಯರಾಗಿದ್ದು ಸದೃಢ ಭಾರತ ನಿರ್ಮಾಣದಲ್ಲಿ ಇವರ ಆದರ್ಶ ಹಾಗೂ ಚಿಂತನೆಗಳು ಮಹತ್ವವಾದ ಪಾತ್ರವನ್ನು ವಹಿಸಿದೆ. ದೇಶದ ಸಂಸ್ಕøತಿಯನ್ನು ವಿದೇಶದಲ್ಲಿ ಪಸರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಮಂಗಳೂರು ವಿ.ವಿಯ ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ಇತಿಹಾಸ ತಜ್ಞ ಪ್ರೊ. ಸುರೇಂದ್ರ ರಾವ್ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಸಭಾಂಗಣದಲ್ಲಿ ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಆಶ್ರಯದಲ್ಲಿ ಮಂಗಳವಾರ ನಡೆದ ಸ್ವಾಮಿ ವಿವೇಕಾನಂದ 154ನೇ ಜನ್ಮದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರು ತಮ್ಮ ಸಣ್ಣ ವಯಸ್ಸಿನಲ್ಲಿಯೇ ಸಂಸ್ಕ ೃತ, ಬಂಗಾಳಿ, ಆಂಗ್ಲ, ಸ್ಪಾನಿಷ್, ಫ್ರೆಂಚ್, ಹಿಂದಿ ಸೇರಿದಂತೆ ಬಹುಭಾಷೆಯಲ್ಲಿ ವಿಶೇಷ ಪಾಂಡಿತ್ಯವನ್ನು ಪಡೆದಿದ್ದರು. ಪ್ರಪಂಚ ಸುತ್ತುತ್ತಿದ್ದಾಗ ವಿವೇಕಾನಂದರ ಆಕರ್ಷಕ ವ್ಯಕ್ತಿತ್ವ ಹಾಗೂ ಅವರ ಮಾತಿನ ಗಾಂಭೀರ್ಯತೆ ಎಲ್ಲರನ್ನು ಆಕರ್ಷಿಸುತ್ತಿತ್ತು. ವರ್ಣ, ಭಾಷೆ, ದೇಶದ ಹಂಗಿಲ್ಲದೆ ಜನರು ಅವರನ್ನು ನೋಡಲು ಮುಗಿಬೀಳುತ್ತಿದ್ದರು. ಪರಕೀಯರು ದೇಶವನ್ನು ಆಳುತ್ತಿದ್ದ ಸಂದರ್ಭದಲ್ಲಿ ದೇಶದ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಇನ್ನೂ ರೂ. 2,000 ದ ನೋಟನ್ನು ಕಂಡವರಿಲ್ಲ, ಆದರೆ ಅಷ್ಟರಲ್ಲೇ ತೊಕ್ಕೊಟ್ಟು ಕಲ್ಲಾಪು ಸಮೀಪ ಮೀನು ವ್ಯಾಪಾರಿಗೆ ರೂ. 2,000 ನಕಲಿ ನೋಟು ನೀಡಿ ವಂಚಿಸಿರುವ ಘಟನೆ ಸೋಮವಾರ ನಡೆದಿದೆ. ಕಲ್ಲಾಪು ಬಳಿ ಟೆಂಪೋದಲ್ಲಿ ಮೀನು ಮಾರಾಟ ನಡೆಸುವ ಉಳ್ಳಾಲದ ಮುಸ್ತಾಫ ಎಂಬವರಿಗೆ ವಂಚಿಸಲಾಗಿದೆ. ಮಧ್ಯಾಹ್ನ ವೇಳೆ ಮೀನು ಖರೀದಿಸಲು ಹಲವು ಗ್ರಾಹಕರಿದ್ದು, ಅವರಲ್ಲಿ ಹಲವರು ಹೊಸ 2000 ನೋಟು ನೀಡಿ 500 ರೂ.ಗಳ ಮೀನು ಖರೀದಿಸಿ, ಉಳಿದ ಚಿಲ್ಲರೆ ಹಣವನ್ನು ಪಡೆಯುತ್ತಿದ್ದರು. ಈ ನಡುವೆ ಗೊತ್ತಿಲ್ಲದೆ ಹಣ ಪಡೆದುಕೊಂಡ ಮುಸ್ತಾಫ ಅವರು ಸಂಜೆ ವೇಳೆ ಹಣ ಎಣಿಸುವ ಸಂದರ್ಭ ನೋಡು ನಕಲಿಯಾಗಿರುವುದು ಬೆಳಕಿಗೆ ಬಂದಿದೆ. ಕಲರ್ ಪ್ರಿಂಟರ್ ಮೂಲಕ ನೋಟನ್ನು ಮುದ್ರಿಸಲಾಗಿದ್ದು, ಅದಕ್ಕೆ ನೀರು ತಾಗಿ ಬಣ್ಣವೂ ಅಳಿಸಿ ಹೋಗಿದೆ. ನೂತನ ನೋಟಿನ ಭಾವಚಿತ್ರವನ್ನು ವಾಟ್ಸ್ಯಾಪ್ , ಅಂತರ್ಜಾಲದ ಮುಖೇನ ಪಡೆದು , ಕಲರ್ ಪ್ರಿಂಟರ್ ಮೂಲಕ ಅದನ್ನು ಮುದ್ರಿಸುವ ಜಾಲ ಸಕ್ರಿಯವಾಗಿದೆ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ವೈದ್ಯಕೀಯ ಸೇವೆಯಲ್ಲಿರುವ ಯುವಸಮುದಾಯ ವೇಗವಾಗಿ ಹಣಗಳಿಸುವಲ್ಲಿ ನಿರತವಾಗಿದ್ದು, ತಾಳ್ಮೆ, ಅನುಭವ, ಪರಿಣತಿಯೊಂದಿಗೆ ಹೆಚ್ಚಿನ ಸಮಯ ಪಡೆದು ವೃತ್ತಿಯಲ್ಲಿ ತೊಡಗಿಕೊಂಡಲ್ಲಿ ಯಶಸ್ವಿ ವೈದ್ಯರಾಗಲು ಸಾಧ್ಯ ಎಂದು ಬೆಂಗಳೂರಿನ ಖ್ಯಾತ ಕರ್ಣತಜ್ಞ ಡಾ.ಹೆಚ್.ವಿಜಯೇಂದ್ರ ಅಭಿಪ್ರಾಯಪಟ್ಟರು ಅವರು ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯ ಕಿವಿ, ಮೂಗು, ಕುತ್ತಿಗೆ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಆಸ್ಪತ್ರೆ ಆಡಿಟೋರಿಯಂನಲ್ಲಿ ಶುಕ್ರವಾರ ಆಯೋಜಿಸಿದ್ದ `ಯೆನ್ ಓಟೊ-ಫೆಸ್ 2016′ ಶಸ್ತ್ರಚಿಕಿತ್ಸೆಯ ನೇರಪ್ರಸಾರದ ಕಾರ್ಯಗಾರ ಹಾಗೂ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರವನ್ನು ಉದ್ಘಾಟಿಸಿದರು. ಹಿಂದೆ ಸ್ನಾತಕೋತ್ತರ ವಿಭಾಗದ ವೈದ್ಯರಿಗೆ ಮೈಕ್ರೋಸ್ಕೋಪ್ ಮುಟ್ಟಲು ಬಿಡುತ್ತಿರಲಿಲ್ಲ. ಆದರೆ 1987ರಲ್ಲಿ ಪ್ರಥಮ ಬಾರಿ ಶಸ್ತ್ರಚಿಕಿತ್ಸೆ ನೇರಪ್ರಸಾರ ಕಾರ್ಯಗಾರ ಆರಂಭದಿಂದಾಗಿ ಕ್ಷೇತ್ರದಲ್ಲಿ ಬಹಳ ಅನುಭವ ಪಡೆಯುವಂತಾಯಿತು. ಸದ್ಯ ಪ್ರತೀ ವಾರದಲ್ಲಿ ಇಂತಹ ಶಸ್ತ್ರಚಿಕಿತ್ಸಾ ಕಾರ್ಯಗಾರಗಳು ನಿರಂತರವಾಗಿ ನಡೆಯುತ್ತಿದೆ. ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಯುವವೈದ್ಯರು ಹಣದ ಹಿಂದೆ ಹೋಗದೇ, ಪರಿಣತಿ, ಉತ್ಸಾಹ, ಆನಂದ ಭಾವದೊಂದಿಗೆ ವೃತ್ತಿಯನ್ನು ನಿರ್ವಹಿಸುವ ಮೂಲಕ ಯಶಸ್ವಿ ವೈದ್ಯರಾಗಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಮತ್ತು ಕೊಣಾಜೆ ಠಾಣಾ ವ್ಯಾಪ್ತಿಗಳಲ್ಲಿ ನಡೆಯುತ್ತಿರುವ ಅಹಿತಕರ ಕೃತ್ಯ ಎಸಗುತ್ತಿರುವವರಿಗೆ ಭಯೋತ್ಪಾಧಕರ ನಂಟು ಇದೆ. ಕೂಡಲೇ ಅಂತಹ ಚಟುವಟಿಕೆಗಳ ಮಟ್ಟ ಹಾಕುವ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಬೇಕಿದೆ. ಇಲ್ಲವಾದಲ್ಲಿ ನ.15 ರ ಒಳಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಆಗ್ರಹಿಸಿದ್ದಾರೆ. ಆರ್ ಎಸ್ ಎಸ್ ಕಾರ್ಯಕರ್ತರ ರಾಮಮೋಹನ್ ಕೊಲೆಯತ್ನ ದ ಹಿನ್ನೆಲೆಯಲ್ಲಿ ಉಳ್ಳಾಲ ಠಾಣೆಗೆ ಬಿಜೆಪಿ ಮುಖಂಡರು ಹಾಗೂ ಹಿಂದು ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ ಸಂದರ್ಭ ಆಗ್ರಹ ವ್ಯಕ್ತವಾಯಿತು. ಉಳ್ಳಾಲ, ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ, ಕೊಲೆಯತ್ನ ಹಾಗೂ ಚೂರಿ ಇರಿತ ಪ್ರಕರಣಗಳ ಆರೋಪಿಗಳ ಪತ್ತೆ ಈವರೆಗೂ ಆಗಿಲ್ಲ. ಹಿಂದು ಸಮುದಾಯದ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದ್ದರೂ , ಪೊಲೀಸರು ಮಾತ್ರ ಆರೋಪಿಗಳ ಬಂಧನ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ. ಇಲ್ಲಿ ನಡೆಯುವ ಕೃತ್ಯಗಳು ಭಯೋತ್ಪಾದಕರ ಚಟುವಟಿಕೆಗಳಂತೆ ಕಾಣುತ್ತಿವೆ. ಇಲ್ಲವಾದಲ್ಲಿ ದುಷ್ಕರ್ಮಿಗಳಿಗೆ ಭಯೋತ್ಪಾಧಕ ನಂಟು ಇರುವುದು…

