ಸೋಮೇಶ್ವರ: ಸಾವಿರಾರು ಜನರ ಭವಿಷ್ಯ ಮತ್ತು ಸಾವಿನ ಭವಿಷ್ಯ ಹೇಳಿ ರಾಜ್ಯಾದ್ಯಂತ ಖ್ಯಾತಿ ಗಳಿಸಿದ್ದ ಮೂಲತ: ಮಂಗಳೂರಿನ ಬಜಾಲ್ ನಿವಾಸಿ ಉಳ್ಳಾಲ ಸೋಮೇಶ್ವರದಲ್ಲಿ ನೆಲೆಸಿದ್ದ ಜೀವನ್ ವಿಜಯಾನಂದ ಗುರೂಜಿ (ವಿಜಯ)(47) ಮಂಗಳವಾರ ಬೆಳಿಗ್ಗೆ 11.00 ತೊಕ್ಕೊಟ್ಟು ಖಾಸಗಿ ಆಸ್ಪತ್ರೆ ನಿಧನ ಹೊಂದಿದ್ದಾರೆ. ದೀರ್ಘ ಕಾಲದ ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಚಿಕಿತ್ಸೆಗೆ ಸ್ಪಂಧಿಸದೆ ಸಾವನ್ನಪ್ಪಿದ್ದಾರೆ. ಗುರೂಜಿ ಪವಾಡಗಳ ಬಗ್ಗೆ ತಿಳಿದಿದ್ದ ರಾಜ್ಯದ ಜನ ಪ್ರತಿ ನಿತ್ಯ ನೂರಾರು ಸಂಖ್ಯೆಯಲ್ಲಿ ಗುರೂಜಿಯವರ ಸೋಮೇಶ್ವರದ ನಿವಾಸಕ್ಕೆ ಬರುತ್ತಿದ್ದರು. ಯಾವುದೇ ಫಲಾಪೇಕ್ಷೆಯೇ ಇಲ್ಲದೇ ಜನರ ಭವಿಷ್ಯ ನುಡಿಯುತ್ತಿದ್ದರು. ಪತ್ನಿ ಮತ್ತು ಮಕ್ಕಳಿದ್ದರೂ ಹತ್ತು ವರ್ಷಗಳ ಹಿಂದೆಯೇ ತನ್ನ ಕುಟುಂಬ ತ್ಯಜಿಸಿ ಸೋಮೇಶ್ವರಕ್ಕೆ ಬಂದಿದ್ದರು. ಈ ವೇಳೆ ಸ್ಮಶಾನದಲ್ಲಿ ಗುರೂಜಿಗೆ ವಿಶೇಷ ಶಕ್ತಿಯೊಂದು ಅವಾಹನೆಯಾದ ಪರಿಣಾಮ ಅವರು ಹೇಳುತ್ತಿದ್ದ ವಿಚಾರಗಳೆಲ್ಲಾ ನಿಜವಾಗುತಿತ್ತು. ಹೀಗಾಗಿ ಸುತ್ತಮುತ್ತಲಿನ ಜನ ಗುರೂಜಿ ಬಳಿ ಭವಿಷ್ಯ ಕೇಳಲು ಆರಂಭಿಸಿದ್ದರು. ಸುಮಾರು 78 ಮಂದಿಯ ಸಾವಿನ ದಿನಾಂಕವನ್ನು ನಿಖರವಾಗಿ ತಿಳಿಸಿದ್ದರು. ಕಳೆದ ಒಂದು ವಾರದಿಂದ ಆರೋಗ್ಯದಲ್ಲಿ…
Author: UllalaVani
ಉಳ್ಳಾಲ: ಸಮಸ್ತ ನಾಗರಿಕರ ಒಳಿತಿಗೆ ಈದ್ ಹಬ್ಬ ಪೂರಕವಾಗಿರಲಿ, ತ್ಯಾಗ ಬಲಿದಾನದ ಹಬ್ಬದ ಸಂದೇಶವನ್ನು ಎಲ್ಲೆಡೆ ಸಾರಿ ಐಕ್ಯತೆ ಜೀವಿಸುವ ವ್ಯವಸ್ಥೆ ನಮ್ಮದಾಗಲಿ ಎಂದು ದರ್ಗಾ ಅಧ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ ರವರು ನಾಡಿನ ಸರ್ವ ಜನತೆಗೆ ಈದ್ ಶುಭಹಾರೈಸಿದರು. ಸಚಿವರಾದ ಯು.ಟಿ ಖಾದರ್, ಖತೀಬರಾದ ಹಾಜಿ ಅಬ್ದುಲ್ ರವೂಫ್ ಮುಸ್ಲಿಯಾರ್, ದರ್ಗಾ ಉಪಾಧ್ಯಕ್ಷರಾದ ಯು.ಕೆ ಮೋನು, ಬಾವ ಮುಹಮ್ಮದ್, ಪ್ರದಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ ಹಾಜಿ, ಅಡಿಟರ್ ಯು.ಟಿ ಇಲ್ಯಾಸ್ ತೋಟ, ಕೋಶಾಧಿಕಾರಿ ಯು.ಕೆ ಇಲ್ಯಾಸ್ ಬಸ್ತಿಪಡ್ಪು, ಜತೆ ಕಾರ್ಯದರ್ಶಿ ನೌಷಾದ್ ಮೇಲಂಗಡಿ, ಆಝಾದ್ ಇಸ್ಮಾಯೀಲ್, ಸದಸ್ಯರಾದ ಫಾರೂಕ್ ಉಳ್ಳಾಲ್, ಆಸಿಫ್ ಅಬ್ದುಲ್ಲ, ಮುಹಮ್ಮದ್ ಹಾಜಿ, ಮುಸ್ತಫ ಮಂಚಿಲ, ಯು.ಕೆ ಮುಹಮ್ಮದ್ ಮುಸ್ತಫ, ಅಲಿ ಮೋನು, ಅಬೂಬಕ್ಕರ್ ಅಲಿನಗರ, ಮಯ್ಯದ್ದಿ ಕೋಡಿ, ಮೊಯ್ದಿನಬ್ಬ ಉಳ್ಳಾಲಬೈಲು ಬೊಟ್ಟು, ಇಬ್ರಾಹೀಮ್ ಹಾಜಿ ಉಳ್ಳಾಲ ಬೈಲು, ಹಮಿದ್ ಕೋಡಿ ಉಳ್ಳಾಲ ನಗರಸಭೆ ಅಧ್ಯಕ್ಷ ಕುಂಞÂಮೋನು, ಮಾಜಿ ಪುರಸಭಾಧ್ಯಕ್ಷ ಬಾಝಿಲ್ ಡಿಸೋಜ ನಗರ ಸಭೆ ಸದಸ್ಯರಾದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೂರಲ್ಪಾಡಿಯಲ್ಲಿ ಪತ್ರಕರ್ತರ ಮೇಲೆ ನಡೆದ ಅಮಾನವೀಯ ದಾಳಿಯ ಬಗ್ಗೆ ಪ್ರತ್ಯಕ್ಷ ದರ್ಶಿ ಬರಹ ಭರತ್ ರಾಜ್ ವರದಿಗಾರ, ಬಿಟಿವಿ ನ್ಯೂಸ್, ಮಂಗಳೂರು ಪತ್ರಕರ್ತನಾಗಿ ಆರು ವರ್ಷಗಳಲ್ಲಿ ಈವರೆಗೆ ಯಾರ ವಿರುದ್ದವೂ ಪೊಲೀಸ್ ಠಾಣೆಗೆ ದೂರು ಕೊಟ್ಟವನಲ್ಲ. ಸುದ್ದಿ ಮಾಡಲು ಹೋದಾಗ ಮತ್ತು ಸುದ್ದಿ ಮಾಡಿದ ನಂತರ ಅಷ್ಟೂ ಆತಂಕಗಳನ್ನು ಸಹಜ ಎಂಬಂತೆ ಎದುರಿಸಿದ್ದೆ. ಆದರೆ ಇವತ್ತು ಮಾತ್ರ ಅಂತಿಮವಾಗಿ `ಅವರ’ ವಿರುದ್ದ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಕೊನೆಗೂ ಪೊಲೀಸರು ಕೂಡ ಪ್ರಕರಣ ದಾಖಲಿಸಿದ್ದಾರೆ. ಮುಂದಿನದ್ದು ಕಾನೂನು ಹೋರಾಟವಷ್ಟೇ. ಹೌದು, ನಿನ್ನೆ ಸೂರಲ್ಪಾಡಿ ಮಸೀದಿಯಲ್ಲಿ ಪತ್ರಕರ್ತರ ಮೇಲೆ ನಡೆದ ಹಲ್ಲೆ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನನಗೆ ಮತ್ತು ನನ್ನ ಮಿತ್ರರಿಗೆ ದೂರು ನೀಡುವುದು ಅನಿವಾರ್ಯವಾಗಿತ್ತು. ಈ ಹಿಂದೆ ಎಲ್ಲಾ ಆತಂಕಗಳನ್ನು ಸಹಜ ಎಂಬಂತೆ ಎದುರಿಸಿದ್ದ ನನ್ನನ್ನು ಸೂರಲ್ಪಾಡಿ ಘಟನೆ ಮಾತ್ರ ಕೊನೆಗೂ ಪೊಲೀಸ್ ದೂರು ನೀಡುವಷ್ಟರ ಮಟ್ಟಿಗೆ ತಂದು ನಿಲ್ಲಿಸಿದೆ. ಅಷ್ಟರ ಮಟ್ಟಿಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ದೇಶವ್ಯಾಪಿ ಬಂದ್ಗೆ ಉಳ್ಳಾಲ ನಗರ ಪ್ರದೇಶದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ ಗ್ರಾಮೀಣ ಪ್ರದೇಶದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ, ತೊಕ್ಕೊಟ್ಟು ಸೇರಿದಂತೆ ಪ್ರಮುಖ ಪಟ್ಟಣಗಳಲ್ಲಿ ಹೆಚ್ಚಿನ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದರೆ, ತಲಪಾಡಿ, ದೇರಳಕಟ್ಟೆ ಕೋಟೆಕಾರು, ದೇರಳಕಟ್ಟೆ, ಕುತ್ತಾರು, ಅಸೈಗೋಳಿ, ಮುಡಿಪು, ಕೊಣಾಜೆ, ಗ್ರಾಮಚಾವಡಿ, ಪಾವೂರು, ಕೈರಂಗಳ, ಹರೇಕಳ, ನರಿಂಗಾನ ಸೇರಿದಂತೆ ಹೆಚ್ಚಿನ ಪ್ರದೇಶದಲ್ಲಿ ಕೆಲವೊಂದು ಅಂಗಡಿಗಳು ತೆರೆಯುವ ಮೂಲಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್ ಸಂಚಾರ ಸಂಪೂರ್ಣ ಬಂದ್ : ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಪಾವೂರು ಹರೇಕಳ, ಇನೋಳಿ, ಕೊಣಾಜೆ ಮಾರ್ಗವಾಗಿ ಸಂಚರಿಸುವ ಖಾಸಗಿ ಸಿಟಿ ಬಸ್ಸುಗಳು. ಬಿ.ಸಿ.ರೋಡ್, ವಿಟ್ಲ, ಪುತ್ತೂರು ಸೇರಿದಂತೆ ತೌಡುಗೋಳಿ, ಮುಡಿಪು ಮಾರ್ಗವಾಗಿ ಸಂಚರಿಸುವ ಸರ್ವಿಸ್ ಬಸ್ಗಳು ಸಂಚಾರ ಸ್ಥಗಿತಗೊಳಿಸಿದ್ದರಿಂದ ತೊಕ್ಕೊಟ್ಟು -ಕೊಣಾಜೆ ಮಂಗಳೂರು ವಿ.ವಿ. ಸಂಪರ್ಕಿಸುವ ರಸ್ತೆಯಲ್ಲಿ ಯಾವುದೇ ಬಸ್ಸುಗಳು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಅದು ಈ ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಜ್ಞಾನ ದೇಗುಲ. ಆದ್ರೆ ಇದೀಗ ಇಂಥದ್ದೊಂದು ಪ್ರತಿಷ್ಠಿತ ವಿವಿಯಲ್ಲಿ ಆತಂಕಕಾರಿ ವಿದ್ಯಮಾನವೊಂದು ನಡೆದು ಹೋಗಿದೆ. ವಿದ್ಯಾರ್ಥಿನಿಯರ ಟಾಯ್ಲೆಟ್ ನಲ್ಲಿ ಮೊಬೈಲ್ ಕ್ಯಾಮಾರ ಇಟ್ಟು ರಹಸ್ಯ ಚಿತ್ರೀಕರಣಕ್ಕೆ ಮುಂದಾಗಿರೋದು ಬೆಳಕಿಗೆ ಬಂದಿದೆ. ಈ ಮೂಲಕ ವಿವಿ ಆವರಣದಲ್ಲೇ ಹೆಣ್ಮಕ್ಕಳ ಮರ್ಯಾದೆ ಹರಾಜು ಹಾಕೋ ಗಂಭೀರ ಪ್ರಕರಣಕ್ಕೆ ಮಂಗಳೂರು ವಿವಿ ಸಾಕ್ಷಿಯಾಗಿದೆ…… ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳ ಸಾಲಿಗೆ ಸೇರೋ ವಿವಿಗಳಲ್ಲಿ ಮಂಗಳೂರು ವಿವಿ ಕೂಡ ಒಂದು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಹೆಗ್ಗಳಿಗೆ ಹೊಂದಿರೋ ಮಂಗಳೂರು ವಿವಿ ಇದೀಗ ಆತಂಕಕಾರಿ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ವಿವಿ ಅಂಗಳದಲ್ಲೇ ಹೆಣ್ಮಕ್ಕಳ ಮರ್ಯಾದೆಯನ್ನ ಹರಾಜು ಹಾಕೋ ಕೀಳು ಮಟ್ಟದ ಘಟನೆಯೊಂದು ನಡೆದಿರೋದು ಬೆಳಕಿಗೆ ಬಂದಿದೆ. ವಿವಿಯ ಬಯೋ ಸೈನ್ಸ್ ವಿಭಾಗದ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಕ್ಯಾಮಾರ ಇಟ್ಟು ರಹಸ್ಯವಾಗಿ ಚಿತ್ರೀಕರಿಸ್ತಾ ಇರೋದು ಬಹಿರಂಗವಾಗಿದೆ. ಅಸಲಿಗೆ ಘಟನೆ ನಡೆದು ವಾರಗಳೇ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಅದು ಭಾರತದ ದ್ವಾದಶ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಪವಿತ್ರ ಧಾರ್ಮಿಕ ಕ್ಷೇತ್ರ. ಸಾಕ್ಷಾತ್ ಶಿವನೇ ಲಿಂಗರೂಪದಲ್ಲಿ ನೆಲೆಸಿರೋ ಪುರಾಣ ಪ್ರಸಿದ್ದ ತಾಣ. ಇವತ್ತು ಈ ಇತಿಹಾಸ ಪ್ರಸಿದ್ದ ಕ್ಷೇತ್ರದಲ್ಲಿ ಪವಿತ್ರ ಸಮುದ್ರ ಸ್ನಾನದ ಸಂಭ್ರಮ ಮನೆಮಾಡಿತ್ತು. ಸಾವಿರಾರು ಭಕ್ತರು ಶ್ರಾವಣ ಮಾಸದ ಪ್ರಯುಕ್ತ ಸೋಮನಾಥನ ಕ್ಷೇತ್ರದಲ್ಲಿ ತೀರ್ಥಸ್ನಾನಗೈದು ಪುನೀತರಾದ್ರು…. ಸೋಮೇಶ್ವರ….ಭಾರತ ದೇಶದ ಇತಿಹಾಸ ಪ್ರಸಿದ್ದ ಪವಿತ್ರ ಪುಣ್ಯ ಕ್ಷೇತ್ರ. ಅಬ್ಬರಿಸೋ ಕಡಲಿನ ಮಧ್ಯೆಯೇ ಬಂಡೆಗಲ್ಲಿನ ಮೇಲೆ ಸಾಕ್ಷಾತ್ ಶಿವನೇ ನೆಲೆನಿಂತಿರೋ ನಂಬಿಕೆಯ ತಾಣ. ಶ್ರಾದ್ದ ಪ್ರಯೋಗಕ್ಕೆ ದೇಶದಲ್ಲಿರೋ ದ್ವಾದಶ ಪುಣ್ಯ ಕ್ಷೇತ್ರಗಳಲ್ಲಿ ಕಡಲತಡಿಯ ಸೋಮನಾಥೇಶ್ವರನ ಸನ್ನಿಧಾನವೂ ಒಂದು. ಹೀಗಾಗಿ ಸೋಮೇಶ್ವನ ಸನ್ನಿಧಾನದಲ್ಲಿ ನಡೆಯೋ ಶ್ರಾವಣ ಮಾಸದ ಅಮಾವಾಸ್ಯೆ ತೀರ್ಥ ಸ್ನಾನಕ್ಕೆ ಆದರದ್ದೇ ಆದ ಪ್ರಾಮುಖ್ಯತೆಯಿದೆ. ಹೀಗಾಗಿಯೇ ಶ್ರಾವಣ ಮಾಸದ ಇಂದು ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಸಮುದ್ರ ಸ್ನಾನ ಗೈದು ಪುನೀತರಾದ್ರು. ಅಮಾವಾಸ್ಯೆಯ ದಿನವಾದ ಇಂದು ಸಮುದ್ರಕ್ಕೆ ವೀಳ್ಯದೆಳೆ ಮತ್ತು ಅಡಿಕೆಯನ್ನ ಅರ್ಪಿಸಿ ಸಮುದ್ರಲ್ಲಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನ ಭಕ್ತರು ಕೊಲ್ಯ ಶ್ರೀ ಸೌಭಾಗ್ಯ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರೀ ಕಟೀಲು ದೇವರ ಮೇಲೆ ಅವಹೇಳನ ಮಾಡಿರುವ ಬಗ್ಗೆ ಧಾರ್ಮಿಕ ಜಾಗೃತಿ ಮತ್ತು ಖಂಡನಾ ಸಭೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಅನಂತಪದ್ಮನಾಭ ಅಸ್ರಣ್ಣ ಬಾವುಕರಾಗಿ ಕಣ್ಣೀರಿಟ್ಟ ಘmನೆ ನಡೆಯಿತು. ದೇಶದ ಸಂಸ್ಕøತಿಯಲ್ಲಿ ಅನಾದಿ ಕಾಲದಿಂದಲೂ ತಾಯಿಗೆ ಅತ್ಯಂತ ಮಹತ್ತರತೆಯನ್ನು ಕೊಡಲಾಗಿದೆ. ಜಿಲ್ಲೆಯಲ್ಲಿ ಕಟೀಲಿನ ದೇವಿಗೆ ಸ್ವಂತ ಅಮ್ಮನಷ್ಟು ಪ್ರಾತಿನಿಧ್ಯ ಕೊಡಲಾಗುತ್ತಿದೆ. ಅಂತಹ ನಾಡಿನಲ್ಲೇ ಇದ್ದುಕೊಂಡು ಕ್ಷೇತ್ರದ ತಾಯಿಗೆ ಅವಹೇಳನಕಾರಿಯಾಗಿ ಬರೆಯುವ ಮೂಲಕ ಧರ್ಮವನ್ನು ಉರಿಸುವ ಕೆಲಸ ಆಗುತ್ತಿದೆ. ಇದರ ವಿರುದ್ಧ ಹೋರಾಡದೇ ಇದ್ದಲ್ಲಿ ಹುಟ್ಟಿರುವುದು ವ್ಯರ್ಥ. ತಪ್ಪು ಎಂದು ತಿಳಿದರೂ ಪ್ರತಿಭಟಿಸದೇ ಇದ್ದಲ್ಲಿ ಧರ್ಮ ಉಳಿಯಲು ಸಾಧ್ಯವಿಲ್ಲ. ತಪ್ಪಿನ ಅರಿವು ಲೋಕಕ್ಕೆ ತಿಳಿಸುವ ಕೆಲಸ ಆಗಬೇಕಿದೆ. ಶ್ರೀ ಕ್ಷೇತ್ರ ಕಟೀಲಿಗೆ ಮುಸ್ಲಿಂ, ಕ್ರಿಶ್ಚಿಯನ್ನರು ಬಂದು ಪೂಜೆ ಸಲ್ಲಿಸಿ ಹೋಗುತ್ತಾರೆ. ಸಮಾರಸ್ಯದ ಕ್ಷೇತ್ರವೆನಿಸಿರುವ ಕಟೀಲಿನ ಹೆಸರಿಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು: ಸಮಸ್ತ ಹಿಂದು ಬಾಂಧವರು ನಂಬಿಕೊಂಡು ಬಂದಿರುವ ಶ್ರೀ ಕ್ಷೇತ್ರ ಕಟೀಲಿನ ದೇವಿ ಹಾಗೂ ಹಿಂದೂ ದೇವರಿಗೆ ಅವಹೇಳನಕಾರಿಯಾಗಿ ಬರೆದಿರುವುದು ಆಘಾತವನ್ನು ಉಂಟುಮಾಡಿದೆ. ಇದು ಧರ್ಮಗಳ ನಡುವೆ ಕಲಹಕ್ಕೆ ನಡೆಸಿರುವ ಷಡ್ಯಂತ್ರವಾಗಿದೆ ಎಂದು ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್ ಹೇಳಿದ್ದಾರೆ. ಅವರು ಕಟೀಲು ಶ್ರೀದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಜಬ್ಬಾರ್ ಬಿ.ಸಿ.ರೋಡು ಎಂಬಾತ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಹಾಗೂ ಅಶ್ಲೀಲವಾಗಿ ಬರೆದಿರುವುದನ್ನು ಖಂಡಿಸಿ ಉಳ್ಳಾಲ ಭಾಗದ ಹಿಂದೂ ಬಾಂಧವರು ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಬುಧವಾರ ಸಾಮೂಹಿಕ ಪ್ರಾರ್ಥನೆ ನಡೆಸಿ ಶ್ರೀ ಕ್ಷೇತ್ರ ಕಟೀಲಿನಲ್ಲಿ ಪೂಜೆ ಸಲ್ಲಿಸಿ ತಪ್ಪಿತಸ್ಥನಿಗೆ ತಪ್ಪಿನ ಅರಿವಾಗುವಂತೆ ಪ್ರಾರ್ಥಿಸಿದರು. ತಾಯಿಗೆ ಅಶ್ಲೀಲ ಶಬ್ದಗಳಿಂದ ಬೈಯ್ದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸುತ್ತಿರುವುದು ತೀರಾ ಖಂಡನಾರ್ಹ. ಇಂತಹ ಮತಾಂಧ ಯುವಕರಿಗೆ ತಪ್ಪಿನ ಅರಿವಾಗುವಂತೆ ಅವರ ಧರ್ಮದ ಬಾಂಧವರೇ ಒಳ್ಳೆಯ ನುಡಿಗಳನ್ನು ಹೇಳಬೇಕು. ಅಂತಹ ಯುವಕರ ಮನಸ್ಸಿನಲ್ಲಿರುವ ದುಗುಡನ್ನು ದೂರವಾಗಿಸಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲದ ಯುವಕನೋರ್ವ ಬೆಂಗಳೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ವೇಳೆ ನಡೆದಿದ್ದು, ಮಂಗಳವಾರ ಮುಂಜಾನೆ ಮನೆಮಂದಿಗೆ ಮಾಹಿತಿ ಲಭಿಸಿದೆ. ಅಕ್ಕರಕೆರೆ ಮಸೀದಿ ಬಳಿ ನಿವಾಸಿ ಅಬ್ದುಲ್ ಲತೀಫ್ ಎಂಬವರ ಪುತ್ರ ನಶಾಲ್ ಇಸ್ಮಾಯಿಲ್(20)ನಿಗೂಢ ಸಾವನ್ನಪ್ಪಿದ್ದಾನೆ. ಮಂಗಳೂರಿನ ಪಿವಿಎಸ್ನಲ್ಲಿರುವ ಸಬ್ಡೀನ್ ಸಂಸ್ಥೆಯಲ್ಲಿ ಬಿಟೆಕ್ ಪದವಿ ಮುಗಿಸಿದ್ದ ಈತ ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಕಂಪೆನಿ ಒಂದಕ್ಕೆ ಸಂದರ್ಶನಕ್ಕಾಗಿ ತೆರಳಿದ್ದ. ಅಲ್ಲಿ ಇದೀಗ ನಿಗೂಢವಾಗಿ ಸಾನನ್ನಪ್ಪಿರುವ ಕುರಿತು ಬೆಂಗಳೂರಿನ ಪೊಲೀಸರಿಂದ ಸಂಬಂಧಿಕರಿಗೆ ತಿಳಿದುಬಂದಿದೆ. ಕೊಲೆ ಶಂಕೆ: ನಶಾಲ್ ಬೆಂಗಳೂರಿನ ಎಚ್ಏಎಲ್ ನ ಹಳೇ ವಿಮಾಣ ನಿಲ್ದಾಣದ ಸಮೀಪದ ಕಟ್ಟಡವೊಂದರಲ್ಲಿ ಗೆಳೆಯರೊಂದಿಗೆ ನೆಲೆಸಿದ್ದ. ಈತನ ಜೊತೆಗಿದ್ದ ಇಬ್ಬರು ಗೆಳೆಯರಿಗೆ ಅಲ್ಲಿಯದ್ದೇ ಆದ ಯುವಕರ ತಂಡದ ಜೊತೆಗೆ ವೈಷಮ್ಯವಿತ್ತು. ಸೋಮವಾರ ಸಂಜೆ ಇವರು ನೆಲೆಸಿದ್ದ ಕಟ್ಟಡದ ಸಮೀಪ ನಿರ್ಮಾಣ ಹಂತದ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ನಶಾಲ್ ಸಹಿತ ಇಬ್ಬರು ಗೆಳೆಯರು ಕುಳಿತಿದ್ದರು. ಇದೇ ವೇಳೆ ಅಲ್ಲಿಗೆ ವೈಷಮ್ಯ ಹೊಂದಿದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು : ತೊಕ್ಕೊಟ್ಟು ಶ್ರೀ ಜೈ ವೀರ ಮಾರುತಿ ವ್ಯಾಯಾಮ ಶಾಲೆ ವತಿಯಿಂದ ಶ್ರೀ ಕೃಷ್ಣ ಜನಮಾಷ್ಠಮಿ ಪ್ರಯುಕ್ತ ನಡೆಯುವ ಮೊಸರುಕುಡಿಕೆ ಉತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಆಕರ್ಷಕ ಟ್ಯಾಬ್ಲೋಗಳು , ಹುಲಿ ವೇಷ ಧಾರಿಗಳು ಗಮನ ಸೆಳೆಯಿತು. ಎಬಿಸಿ ಕ್ಲಬ್ ( ಅಗ್ನಿ ಭಾಯ್ಸ್ ಸರ್ಕಲ್), ತೊಕ್ಕೊಟ್ಟು ಇವರಲ್ಲಿ ಸದಸ್ಯರೋರ್ವರ ಕಾರೊಂದಕ್ಕೆ ಹುಲಿಯ ಬಣ್ಣ ಅಂಟಿಸಿರುವುದು ಆಕರ್ಷಣೆಯ ಬಿಂದು ಆಗಿತ್ತು. ತುಂತುರು ಮಳೆಯ ನಡುವೆ ಆರಂಭಗೊಂಡ ಉತ್ಸವದಲ್ಲಿ ನಿರೀಕ್ಷೆಯಷ್ಟು ಜನ ಭಾಗವಹಿಸಿರಲಿಲ್ಲ. ಆದರೂ ಕಳೆದ ವರ್ಷಗಿಂತ ಅಧಿಕ ಜನ ಭಾಗವಹಿಸಿ ಉತ್ಸವವನ್ನು ಯಶಸ್ವಿಯನ್ನಾಗಿಸಿದ್ದಾರೆ ಅನ್ನುತ್ತಾರೆ ಸಂಘಟಕರು. ಟ್ಯಾಬ್ಲೋಗಳಲ್ಲಿ ಒಂದಕ್ಕಿಂತ ಒಂದು ವಿಭಿನ್ನವಾಗಿತ್ತು.

