ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಎರಡು ವಾರಗಳ ಹಿಂದೆ ಅಪಹರಣಕ್ಕೊಳಗಾಗಿದ್ದ ಮಂಜನಾಡಿ ಕಲ್ಕಟ್ಟ ನಿವಾಸಿ ಆರೀಫ್(೨೪) ಪತ್ತೆಯಾಗಿದ್ದು, ಅಪಹರಣಕಾರರೇ ಬಸ್ಸಿಗೆ ಹಣ ಕೊಟ್ಟು ಸುಳ್ಯ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆಂದು ಕೊಣಾಜೆ ಪೊಲೀಸ್ ಠಾಣೆಗೆ ಗುರುವಾರ ಬಂದಿರುವ ಆರೀಫ್ ತಿಳಿಸಿದ್ದಾರೆ. ವಿದೇಶದಲ್ಲಿದ್ದ ಆರೀಫ್ ಕೆಲ ತಿಂಗಳುಗಳ ಹಿಂದೆ ಊರಿಗೆ ಮರಳಿದ್ದರು. ಬಳಿಕ ಮೀನಿನ ವ್ಯಾಪಾರ ಆರಂಭಿಸಿದ್ದ ಅವರು ಚೆಂಬುಗುಡ್ಡೆ ಸಮೀಪ ಮೀನು ವ್ಯಾಪಾರ ನಡೆಸುತ್ತಿದ್ದರು.ವಾರದ ಹಿಂದೆ ಮೀನು ತರಲೆಂದು ಮಂಗಳೂರಿನ ಧಕ್ಕೆಗೆ ತೆರಳುವ ಸಂದಭ೯ ಸ್ಕಾಪಿ೯ಯೋ ವಾಹನದಲ್ಲಿ ಬಂದಿದ್ದ ತಂಡ ನಸುಕಿನ ಜಾವ ಕಲ್ಕಟ್ಟ ದಿಂದ ಅಪಹರಣ ನಡೆಸಿತ್ತು. ಬಳಿಕ ಮನೆ ಮಂದಿ ಗೆ ವಿದೇಶದ ದೂರವಾಣಿ ಸಂಖ್ಯೆ ಮೂಲಕ ಬಂದ ಕರೆಯಲ್ಲಿ ರೂ.೧.೫ ಕೋಟಿ ಹಣದ ಬೇಡಿಕೆ ಮುಂದಿಟ್ಟಿತ್ತು. ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಹಾಕಿತ್ತು. ಅದರಂತೆ ಮನೆಮಂದಿ ಬೆದರಿ ರೂ.೨೫ ಲಕ್ಷ ರೂ ಹಣ ಕೊಡುವ ವಿಶ್ವಾಸ ನೀಡಿದರೂ ಅಪಹರಣಕಾರರು ಒಪ್ಪಿರಲಿಲ್ಲ. ಇದರಿಂದ ದ ಕುಟುಂಬ ತಡವಾಗಿ ಕೊಣಾಜೆ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚಿತ್ರ: ತನುಂಜಯರಾವ್ ಕೊಲ್ಯ ಕುಂಪಲ: ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಾಂಸ್ಕøತಿಕ ಕಾರ್ಯಕ್ರಮ ಮತ್ತು ಶೋಭಯಾತ್ರೆಯೊಂದಿಗೆ ವಿಜೃಂಭಣೆಯಿಂದ ಜರಗಿತು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚಿತ್ರ: ಯಶು ಪಕ್ಕಳ ತೊಕ್ಕೊಟ್ಟು: ತುಳುನಾಡಿನ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯ ಯುವಸಮುದಾಯದಿಂದ ಆಗಬೇಕಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನು ಆಯೋಜಿಸುವುದರಿಂದ ತುಳು ಜನರ ಆಚಾರ ವಿಚಾರಗಳನ್ನು ದೇಶದಾದ್ಯಂತ ಪರಿಚಯಿಸಲು ಸಹಕಾರಿ ಎಂದು ರಾಜ್ಯ ಸರಕಾರದ ಮುಖ್ಯ ಸಚೇತಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಬಸ್ ನಿಲ್ದಾಣದ ಭವ್ಯ ವೇದಿಕೆಯಲ್ಲಿ ಬುಧವಾರ ಟೀಮ್ ಜಿಮ್ ಆಯೋಜಿಸಿದ ಪಿಲಿಗೊಬ್ಬು 2016 ಹುಲಿವೇಷಧಾರಿಗಳ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ ಸಂಸ್ಕøತಿಯನ್ನು ವೈಶಿಷ್ಟ್ಯತೆಯನ್ನು ಹೊಂದಿದೆ. ಆದರೆ ಆಧುನಿಕ ಯುಗದಲ್ಲಿ ಅದನ್ನು ಆಚರಿಸುವ , ಆರಾಧಿಸುವ ಕಾರ್ಯ ಯುವಸಮುದಾಯದಿಂದ ಸರಿಯಾಗಿ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಅಗತ್ಯ ಎಂದರು. ಮಾಜಿ ಸಚಿವ ಕೃಷ್ಣ.ಜೆ.ಪಾಲೇಮಾರ್ ಮಾತನಾಡಿ ತುಳುನಾಡಿನ ಸಂಸ್ಕøತಿಯನ್ನು ಪರಿಚಯಿಸಿ, ಅದರಲ್ಲಿ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಸಂಸ್ಕøತಿಯನ್ನು ಉಳಿಸಲು ವಿಶಿಷ್ಟ ರೀತಿಯ ಪ್ರಯತ್ನ ನಡೆಸುವ ಸಂಘಟಕರ ಕಾರ್ಯ ಶ್ಲಾಘನೀಯ ಎಂದರು. ಶ್ರೀ ದೇವಿ ಎಜ್ಯುಕೇಷನ್…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಬಲಿದಾನ ಸ್ಮರಣೆಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರಪ್ರೇಮದ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ರಾಜಕೀಯದ ಬಣ್ಣ ಬಳಿಯುತ್ತಿದೆ. ಅಲ್ಲದೇ ತಿರಂಗ ಯಾತ್ರೆಗೆ ಸಭಾಂಗಣ ಒದಗಿಸಿದ ವಿಶ್ವವಿದ್ಯಾನಿಲಯದ ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ ನೀಡುವ ಕೆಲಸ ಮಾಡುತ್ತಿದೆ. ತಾಕತ್ತಿದರೆ ವಿವಿ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಸವಾಲು ಹಾಕಿದ್ದಾರೆ. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯ ದೇಶದ್ರೋಹಿ ಧೋರಣೆ ಮತ್ತು ಅದನ್ನು ಸಮರ್ಥಿಸಿದ ರಾಜ್ಯ ಸರಕಾರದ ವಿರುದ್ಧ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಸ್ವಾತಂತ್ರ್ಯೋತ್ಸವಕ್ಕಾಗಿ ಹೋರಾಡಿದವರನ್ನು ಸ್ಮರಿಸುವ ಸಲುವಾಗಿ ರಾಷ್ಟ್ರಪ್ರೇಮದ ಕಾರ್ಯಕ್ರಮವಾಗಿ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅದನ್ನೇ ರಾಜಕೀಯ ಕಾರ್ಯಕ್ರಮ ಎಂದು ಬಣ್ಣಿಸಿ, ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಸಂಸ್ಥೆಗಳನ್ನು ಬೆಂಬಲಿಸುವ ಕಾಂಗ್ರೆಸ್ನ ಮನಸ್ಥಿತಿ ಯಾವ ರೀತಿಯಲ್ಲಿದೆ ಅನ್ನುವುದು ಗೊತ್ತಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಮಿತ್ ಷಾ ನೇತೃತ್ವದಲ್ಲಿ ತಿರಂಗಾ ಯಾತ್ರೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಅಬ್ಬಕ್ಕನ ನಾಡು ಇಂದು ಅಕ್ಷರಶಃ ಕೇಸರಿ ಪಡೆಯ ತಿರಂಗ ಯಾತ್ರೆಯಲ್ಲಿ ಮುಳುಗಿ ಹೋಗಿತ್ತು. ಬಿಜೆಪಿಯ ಮಾಸ್ಟರ್ ಮೈಂಡ್ ಅಮಿತ್ ಶಾ ಆಗಮನದ ಮೂಲಕ ಕಡಲತಡಿ ದೇಶಭಕ್ತರ ಬಲಿದಾನ ಸ್ಮರಣೆಗೆ ಸಾಕ್ಷಿಯಾಗಿತ್ತು. ಒಂದಷ್ಟು ವಿರೋಧದ ಮಧ್ಯೆಯೂ ಅದ್ದೂರಿಯಾಗಿ ನಡೆದ ತಿರಂಗ ಯಾತ್ರೆಯಲ್ಲಿ ಉಳ್ಳಾಲದ ರಾಣಿ ಅಬ್ಬಕ್ಕಳಿಗೆ ಸಂಭ್ರಮದ ಗೌರವ ಸಲ್ಲಿಕೆಯಾಗಿದೆ. ಕೇಸರಿ ಪಡೆ ಬಿಜೆಪಿ ಧ್ವಜ ತ್ಯಜಿಸಿ ಮೋದಿ ಆಶಯದಂತೆ ತ್ರಿವರ್ಣ ಧ್ವಜದಡಿ ದೇಶಭಕ್ತಿ ಮೆರೆದಿದೆ….. ದೇಶದ ಪ್ರಧಾನಿ ನರೇಂದ್ರ ಮೋದಿಯ ಆಶಯಕ್ಕೆ ತಕ್ಕಂತೆ ಕಡಲತಡಿಯ ಅಬ್ಬಕ್ಕನ ನಾಡಲ್ಲಿ ಇಂದು ಅದ್ದೂರಿ ತಿರಂಗ ಯಾತ್ರೆ ಸಮಾವೇಶ ನಡೆದಿದೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವ್ರೇ ಸ್ವತಃ ಅಬ್ಬಕ್ಕನ ನಾಡಾದ ಉಳ್ಳಾಲಕ್ಕೆ ಆಗಮಿಸೋ ಮೂಲಕ ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿಗೆ ಅರ್ಥಪೂರ್ಣ ಗೌರವ ಸಲ್ಲಿಸಿದ್ದಾರೆ. ಗೋವಾದಿಂದ ಮಂಗಳೂರಿಗೆ ಆಗಮಿಸಿದ ಶಾ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟು ಸಾಂಕೇತಿಕವಾಗಿ ಗಿಡ ನೆಟ್ರು. ನಂತ್ರ ಅಲ್ಲಿಂದ ನೇರವಾಗಿ ಪಂಪ್ ವೆಲ್…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸ್ವಾತಂತ್ರ್ಯೋತ್ಸವದ ದಿನದಂದು ಅಬ್ಬಕ್ಕಳನ್ನು ಸ್ಮರಿಸುವ ಕಾರ್ಯ ಶ್ಲಾಘನೀಯ. ಅಬ್ಬಕ್ಕಳ ನಾಡಿನಲ್ಲಿ ಸರ್ವಧರ್ಮೀಯರು ಶಾಂತಿ ನೆಮ್ಮದಿಯಿಂದ ಬದುಕಿ ಜೀವಿಸುವ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಉಳ್ಳಾಲ ಬಿಲ್ಲವ ವೇದಿಕೆ ಅಧ್ಯಕ್ಷ ಕೆ.ಟಿ.ಸುವರ್ಣ ಹೇಳಿದರು. ಅವರು ಉಳ್ಳಾಲದ ಕರಾವಳಿ ಸಾಂಸ್ಕøತಿಕ ಪರಿಷತ್ ವತಿಯಿಂದ 70 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಳ್ಳಾಲದಲ್ಲಿರುವ ವೀರರಾಣಿ ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರಾವಳಿ ಸಾಂಸ್ಕøತಿಕ ಪರಿಷತ್ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಅಬ್ಬಕ್ಕಳ ಹೆಸರಿನಲ್ಲಿ ರಾಷ್ಟ್ರಮಟ್ಟದ ಗುರುತಿಸುವ ಕೆಲಸವನ್ನು ಸರಕಾರ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಬಹುಮುಖ್ಯ ಎಂದು ಹೇಳಿದರು. ಬಿಜೆಪಿ ಹಿರಿಯ ಮುಖಂಡ ಸೀತಾರಾಮ ಬಂಗೇರ, ರೈಲ್ವೇ ಸಲಹಾ ಸಮಿತಿ ಸದಸ್ಯ ಚಂದ್ರಹಾಸ ಅಡ್ಯಂತಾಯ, ಮೊಗವೀರಸಮಾಜ ಉಳ್ಳಾಲದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್, ಉಳ್ಳಾಲ ವಿದ್ಯಾರಣ್ಯ ಕಲಾವೃಂದದ ಅಧ್ಯಕ್ಷ ಚೂಡಪ್ಪ ಉಳ್ಳಾಲ್, ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, …
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಲ್ಲಾಪು :ಕಲ್ಲಾಪು ನಾಗರಿಕರು ಮಧ್ಯರಾತ್ರಿ ಧ್ವಜಾರೋಹಣ ನೆರವೇರಿಸುವ ಮೂಲಕ ೭೦ ನೇ ಸ್ವಾತಂತ್ರೋತ್ಸವ ಆಚರಿಸಿದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಕ್ಷೇತ್ರ ಬಿಜೆಪಿ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತಿರಂಗಾ ರ್ಯಾಲಿ ನಡೆಯಿತು
ಉಳ್ಳಾಲ್ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಸ್ವತಂತ್ರ ಭಾರತದ ಪ್ರಥಮ ಗೃಹ ಸಚಿವರಾಗಿ ಸರ್ದಾರ್ ವಲ್ಲಭಬಾಯಿ ಪಟೇಲ್ ದಿಟ್ಟ ನಿಲುವು ತೆಗೆದುಕೊಂಡ ಹಿನ್ನಲೆಯಲ್ಲಿ ನಮ್ಮ ದೇಶ ಇಷ್ಟು ಉಳಿದಿದ್ದು, ನೆಹರೂ ಮಾತು ಕೇಳುತ್ತಿದ್ದರೆ ಭಾರತ ಇನ್ನಷ್ಟು ಛಿದ್ರವಾಗಿ ಹೋಗುತ್ತಿತ್ತು ಎಂದು ವಿಶ್ವಹಿಂದೂ ಪರಿಷತ್ನ ವಿಭಾಗ ಸಹ ಕಾರ್ಯದರ್ಶಿ ಪ್ರಕಾಶ್ ಮಲ್ಪೆ ಅಭಿಪ್ರಾಯಪಟ್ಟರು. ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡದ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆಯ ಸಮಾರೋಪ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಬಾರತದ ಪ್ರಥಮ ಪ್ರಧಾನ ಮಂತ್ರಿಯಾಗುವ ನಿಟ್ಟಿನಲ್ಲಿ ನೆಹರೂರವರು ದೇಶದ ವಿಭಜನೆಗೆ ಮೂಲ ಕಾರಣರಾದರು. ಸ್ವತಂತ್ರ ಭಾರತದ ಪೂರ್ವದಲ್ಲಿ ಭಗವಾಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿತ್ತು. ಆದರೆ ಮುಸ್ಲಿಂರ ಓಲೈಕೆಗಾಗಿ ಧರ್ಮಕ್ಕೊಂದು ಬಣ್ಣ ನೀಡಿ ರಾಷ್ಟ್ರ ಧ್ವಜವನ್ನು ತುಂಡು ಮಾಡಲಾಯಿತು. ರಘುಪತಿ ರಾಘವ ಹಾಡಿನಲ್ಲಿ ಅಲ್ಲಾನನ್ನು ಸೇರಿಸಲಾಯಿತು. ಯಾವ ಹಾಡು ಸ್ವತಂತ್ರಯದ ರಣಕಹಳೆಗೆ ಸ್ಪೂರ್ತಿಯಾಗಿತ್ತೋ ಅಂತಹ ವಂದೇ ಮಾತರಂ ಹಾಡನ್ನು ಹಾಡಬಾರದು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಹರೇಕಳ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದ ಹಾಜಬ್ಬರ ಶಾಲೆ ಮುಚ್ಚಿಸುವುದಕ್ಕೆ ಸರ್ಕಾರ ಸಿದ್ಧತೆ ನಡೆಸಿದ್ದು, ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಹೆಸರಿನಲ್ಲಿ ಹರೇಕಳದ ಸರ್ಕಾರಿ ಶಾಲೆ ಮುಚ್ಚಿಸಲು ಸರ್ಕಾರ ಹೊರಟಿದೆ ಎಂದು ಎಸ್ ಎಫ್ ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಆರೋಪಿಸಿದ್ದಾರೆ. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಆದೇಶ ವಿರೋಧಿಸಿ ಹರೇಕಳದ ಹಿರಿಯ ಪ್ರಾಥಮಿಕ ಶಾಲೆಯಲ್ಕಿ ಎಸ್ ಎಫ್ ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ನಡೆಸಿದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಶಾಲೆಗೆ ಐತಿಹಾಸಿಕ ಹಿನ್ನಲೆಯಿದ್ದು, ಕಿತ್ತಳೆ ಹಣ್ಣಿನ ವ್ಯಾಪಾರಿಯಾಗಿದ್ದ ಹರೇಕಳ ಹಾಜಬ್ಬರು ನ್ಯೂ ಪಡ್ಪು ಸರ್ಕಾರಿ ಶಾಲೆಯನ್ನು ಸ್ಥಾಪಿಸಿದ್ದರು. ಖಾಸಗಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸದೇ ಎಲ್ಲರಿಗೂ ಉಚಿತ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಈ ಶಾಲೆ ಆರಂಭಿಸಿದ್ದರು. ಆದರೆ ಸರ್ಕಾರ ಶಿಕ್ಷಕಿಯನ್ನು ವರ್ಗಾಯಿಸುವ ಮೂಲಕ ಶಾಲೆಯನ್ನು ಮುಚ್ಚಲು ಹೊರಟಿದೆ. ಆದ್ದರಿಂದ ಹಾಜಬ್ಬರಿಗಿರುವ ಕಾಳಜಿ…

