ಉಳ್ಳಾಲ್ ನ್ಯೂಸ್ನೆಟ್ ವರ್ಕ್ ಅಡ್ಕ: ಕಾರು, ಬಸ್ಸು ಮತ್ತು ಬೈಕ್ ಮಧ್ಯೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮಾಡೂರು ಕೊಂಡಾಣದ ಸಾಯಿಧಾಮ ಬಡಾವಣೆಯ ನಿವಾಸಿ ನವೀನ್(51) ಮೃತ ದುರ್ದೈವಿ. ಮಂಗಳೂರು ಕಡೆಯಿಂದ ಕೇರಳದ ಕಡೆಗೆ ಅತೀ ವೇಗವಾಗಿ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಾಜಕಕ್ಕೆ ಹೊಡೆದು ಪಲ್ಟಿಯಾಗಿ ರಸ್ತೆಯ ಇನ್ನೊಂದು ಬದಿಯಲ್ಲಿಚಲಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಈ ವೇಳೆ ತಲಪಾಡಿಯಿಂದ ಸ್ಟೇಟ್ಬ್ಯಾಂಕಿಗೆ ತೆರಳುತ್ತಿದ್ದ ಬಸ್ಸಿನ ಚಕ್ರದಡಿಗೆ ಬೈಕ್ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನವೀನ್ ಮಂಗಳೂರಿನಲ್ಲಿ ಈಜು ತರಬೇತುದಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತÀ ಮೂರು ಮಂದಿ ಇದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ನಿವೇಶನ ರಹಿತರ ಸಮಸ್ಯೆ, ಕೊಳವೆ ಬಾವಿ ಸಮಸ್ಯೆ, ಕಳವು ಪ್ರಕರಣಗಳ ತಡೆಗಟ್ಟುವಿಕೆಗೆ ಕುರಿತ ಚರ್ಚೆ ಹಾಗೂ ಕ್ರಮ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಜರಗಿದ ಸೋಮೇಶ್ವರ ಪಂಚಾಯಿತಿನ 2015-16 ನೇ ಸಾಲಿನ ಗ್ರಾಮಸಭೆಯಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಉಚ್ಚಿಲ್ ಅಧ್ಯಕ್ಷತೆ ವಹಿಸಿದ್ದರು. ಅಕ್ಷರ ದಾಸೋಹÀ ಸಹಾಯಕ ನಿರ್ದೇಶಕ ಜೆ. ಯಶೋಧರ್ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ನಿವೇಶನ ರಹಿತರ 3,500 ಅರ್ಜಿಗಳು ಪಂಚಾಯಿತಿನಲ್ಲಿದೆ. ಆದರೆ ಈವರೆಗೆ ಯಾವುದೇ ನಿವೇಶನ ದೊರೆತಿಲ್ಲ. ಸರಕಾರಿ ಜಾಗ ಗುರುತಿಸುವಿಕೆ ಆಗಿ ಸರ್ವೇ ಕಾರ್ಯ ನಡೆದರೂ ಫಲಾನುಭವಿಗಳಿಗೆ ದೊರೆತಿಲ್ಲ. ಹಲವು ಮನೆಗಳಿಗೆ ವಿತರಿಸುವ ನೀರಿನ ಕೊಳವೆಬಾವಿ ಸಮೀಪವೇ ಮತ್ತೊಂದು ಕೊಳವೆ ಬಾವಿಯನ್ನು ಕೊರೆಯಲಾಗಿದೆ. ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅನುಮತಿ ನೀಡಿರುವುದು ತಪ್ಪು. ಅಲ್ಲದೆ ಕೊಳವೆ ಬಾವಿ ಕುರಿತ ಮಾಹಿತಿ ದೊರೆತಿಲ್ಲ ಅನ್ನುವ ಆರೋಪ ಗ್ರಾಮಸ್ಥರೋರ್ವರಿಂದ ಕೇಳಿಬಂತು. ಕಳವು ಪ್ರಕರಣಗಳು ಹೆಚ್ಚುತ್ತಿವೆ, ಈ ಬಗ್ಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಹಳೆ ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ನೇತ್ರಾವತಿಯ ನೂತನ ಸೇತುವೆಯನ್ನು ಲೋಡ್ ಟೆಸ್ಟಿಂಗ್ಗಾಗಿ ವಾಹನ ಸಂಚಾರಕ್ಕೆ ಸ್ಥಗಿತಗೊಳಿಸಲಾಗುವುದು ಎಂದು ಹೆದ್ದಾರಿ ಕಾಮಗಾರಿ ವಹಿಸಿರುವ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ. ಹೆದ್ದಾರಿಯ ಹಳೆ ಸೇತುವೆಯಲ್ಲಿ ಮುಂದಿನ ಐದು ದಿನಗಳ ಕಾಲ ದ್ವಿಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಐದು ದಿನಗಳೊಳಗಾಗಿ ನೂತನ ಸೇತುವೆಯ ಲೋಡ್ ಟೆಸ್ಟಿಂಗ್ ಕಾರ್ಯವನ್ನು ಮುಗಿಸಲಾಗುವುದು ಬಳಿಕ ವಾಹನ ಸಂಚಾರಕ್ಕೆ ತೆರವುಗೊಳಿಸಲಾಗುವುದು. ಈ ಸಂದರ್ಭದಲ್ಲಿ ವಾಹನಗಳು ಅಡ್ಡಾದಿಡ್ಡಿ ಚಲಿಸದೆ 30 ಕಿ.ಮೀ. ವೇಗ ಮಿತಿಯಲ್ಲಿ ಚಲಿಸಿದರೆ ಹೆದ್ದಾರಿಯಲ್ಲಿ ಸುಗಮ ಸಂಚಾರ ನಡೆಸಬಹುದು ಎಂದು ಹೆದ್ದಾರಿ ನಿರ್ಮಾಣದ ಕಾರ್ಯ ನಡೆಸುತ್ತಿರುವ ಸಂಸ್ಥೆಯ ಮುಖ್ಯಸ್ಥರಾದ ದಿನಕರ್ ತಿಳಿಸಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕುಂಪಲ: ಕುಂಪಲ ಕೇಸರಿ ಮಿತ್ರವೃಂದ ಮತ್ತು ಕೇಸರಿ ಮಾತೃ ಮಂಡಳಿಯ ವತಿಯಿಂದ ಆಟಿ ಸಮ್ಮನ ಮತ್ತು ಆಟಿದ ವನಸ್ ತೆನಸ್ ಕಾರ್ಯಕ್ರಮ ಜು. 24ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಕೇಸರಿ ಸಭಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉಮೇಶ್ ಗಾಂಬೀರ್ ಬಲ್ಯ ಬಾಳಿಕೆ ಕೃಷಿಕೆರೆ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಬು ಶ್ರೀ ಶಾಸ್ತ ಕಿನ್ಯಾ ವಹಿಸಲಿದ್ದು , ಹೊಸದಿಗಂತ ಪತ್ರಿಕೆಯ ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ತುಳು ಮದಿಪು ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಕರ್ನಾಟಕ ರಾಜ್ಯ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಮಹಾ ಮಂಡಲದ ಉಪಾಧ್ಯಕ್ಷ ಮಯೂರ್ ಉಳ್ಳಾಲ್, ಮಂಗಳೂರು ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ್ ಪೈ, ಕೇಸರಿ ಮಾತೃಮಂಡಳಿ ಗೌರವ ಸಲಹೆಗಾರರಾದ ಜಯಲಕ್ಷ್ಮೀ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬೋಳಿಯಾರ್: ಬಲಿಷ್ಠ ರಾಷ್ಟ್ರವನ್ನು ಕಟ್ಟುವ ಜನರ ಕನಸ್ಸನ್ನು ಮೋದಿ ನೇತೃತ್ವದ ಕೇಂದ್ರ ಸರಕಾರ ನನಸು ಮಾಡುತ್ತಿದ್ದು, ದೇಶದ ಅಭಿವೃದ್ಧಿಯ ಜೊತೆಗೆ ಅಂತರಾಷ್ಟ್ರೀಯ ಸಂಬಂಧಗಳನ್ನು ಬೆಳೆಸುವ ಮೂಲಕ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸುತ್ತಿದ್ದಾರೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದರು. ಅವರು ಬೋಳಿಯಾರ್ನಲ್ಲಿ ಭಾನುವಾರ ನಡೆದ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಿಕಾಸ ಪರ್ವ ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆಯವರು ಸಭೆಯೊಂದರಲ್ಲಿ ಮೂಢನಂಬಿಕೆಯ ಹೆಸರಿನಲ್ಲಿ ನರಬಲಿ ನಡೆಯುತ್ತಿದೆ ಎಂದು ಹೇಳಿದ್ದರು. ಕಾಂಗ್ರೆಸ್ ಸರಕಾರ ನರಬಲಿಯ ಮೂಲಕ ರಾಜ್ಯವನ್ನು ಹದಗೆಡಿಸುತ್ತಿದೆ. ಜಪಾನ್ಗೆ ಭಗವದ್ಗೀತೆಯ ಚಿಂತನೆ ಹಾಗೂ ಅರಬ್ ರಾಷ್ಟ್ರದಲ್ಲಿ ದೇವಸ್ಥಾನ ಕಟ್ಟುವ ಮೂಲಕ ವಿದೇಶಗಳಲ್ಲಿ ದೇಶದ ಸಂಸ್ಕøತಿ ಹಾಗೂ ಸಂಬಂಧವನ್ನು ಬೆಸೆಯುವಂತೆ ಮಾಡಿದ್ದಾರೆ. ಆದ್ದರಿಂದ ಪಕ್ಷದ ಸಾಧನೆಯಿಂದ ದೇಶ ಬೆಳೆಯಬೇಕು ಎನ್ನುವುದೇ ಬಿಜೆಪಿಯ ಗುರಿ ಎಂದರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ ಮಂಗಳೂರು ವಿಧಾನಸಭಾ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಜಿಲ್ಲೆಯ ಸಂಸ್ಕøತಿಯನ್ನು ಉಳಿಸಲು ಹಾಗೂ ಬೆಳೆಸಲು ಆಟಿದ ಗಮ್ಮತ್ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ವಿದೇಶಿಯರು ತುಳುನಾಡಿನ ಕಲೆಯನ್ನು ಮೆಚ್ಚಿ ಅದರ ಕುರಿತು ಅಧ್ಯಯನ ನಡೆಸುವುದರಿಂದ ಕಲೆಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯ ಇದೆ ಎಂದು ಜಿಲ್ಲಾ ಪಂಚಾಯತ್ನ ಉಪ ಕಾರ್ಯದರ್ಶಿ ಎನ. ಆರ್. ಉಮೇಶ್ ಅಭಿಪ್ರಾಯಪಟ್ಟರು. ಅವರು ಕುಂಪಲ ಶ್ರೀ ಬಾಲಕೃಷ್ಣ ಮಂದಿರ, ಶ್ರೀ ಬಾಲಕೃಷ್ಣ ಮಹಿಳಾ ಸೇವಾ ಸಮಿತಿ ಇದರ ಆಶ್ರಯದಲ್ಲಿ ನಡೆದ ಗ್ರಾಮೀಣ ಕ್ರೀಡೋತ್ಸವ ಮತ್ತು `ಆಟಿದ ಗಮ್ಮತ್ ‘ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವಂತಹ ಸಂಸ್ಕøತಿ ಬೇರೆಲ್ಲೂ ಇಲ್ಲ. ಆದರೆ ಸದ್ಯ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಸಂಸ್ಕøತಿ ಉಳಿದಿದೆ. ಇದನ್ನು ಎಲ್ಲಾ ಭಾಗದ ಮಕ್ಕಳಿಗೆ ತಿಳಿಸುವ ಪ್ರಯತ್ನ ಮಾಡುವುದರಿಂದ ಕಲೆಗಳನ್ನು ನಡೆಸಿಕೊಂಡು ಹೋಗುವ ಚಿಂತನೆ ಎಲ್ಲರೂ ಮಾಡಬೇಕಿದೆ. ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮಗಳು ಶಾಂತಿಯನ್ನು ಕಾಪಾಡುವುದರಿಂದ ಎಲ್ಲೆಡೆ ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದರು. ಕಿಂಡಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಗಳೂರು: ಬಹು ನಿರೀಕ್ಷೆಯ ‘ದಬಕ್ ದಬಾ ಐಸಾ’ ಸಿನಿಮಾವು ಆಗಸ್ಟ್ 5ರಂದು ತೆರೆ ಕಾಣಲಿದ್ದು, ಕೆಲವು ಸಮಯದಿಂದ ಮಂಕು ಬಡಿದಂತಿರುವ ಕೋಸ್ಟಲ್ವುಡ್ನಲ್ಲಿ ಮತ್ತೆ ಹೊಸ ಸಂಚಲನ ಮೂಡಿಸಲಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಬಿಡುಗಡೆಯಾಗಲಿರುವ ಈ ಸಿನಿಮಾವು ಮತ್ತೊಂದು ಹೊಸ ದಾಖಲೆಯತ್ತ ತುಳು ಚಿತ್ರರಂಗವನ್ನು ಕೊಂಡೊಯ್ಯಲು ಸಮರ್ಥವಿರುವ ಚಿತ್ರವಾಗಿದೆ. ಜಯಕಿರಣ ಫಿಲಂಸ್ನಡಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವು ತನ್ನ ಹಿರಿಯ ಸೋದರ ಚಾಲಿಪೆÇೀಲಿಲು ಅನ್ನು ಹಿಂದಿಕ್ಕುವ ರೀತಿಯಲ್ಲಿ ಮೂಡಿ ಬಂದಿದೆ. ಪ್ರಕಾಶ್ ಪಾಂಡೇಶ್ವರ ಅವರ ಚೊಚ್ಚಲ ನಿರ್ದೇಶನವಿರುವ ‘ದಬಕ್ ದಬ ಐಸಾ’ವು ಸಂಪೂರ್ಣ ಹಾಸ್ಯಮಯ ಹಾಗೂ ಉತ್ತಮ ಸಾಮಾಜಿಕ ಸಂದೇಶವಿರುವ ಚಿತ್ರವಾಗಿದ್ದು, ಕುಟುಂಬ ಸಮೇತ ವೀಕ್ಷಿಸುವಂಥ ಸಿನಿಮಾ ಆಗಿದೆ. ತುಳು ಚಿತ್ರರಂಗದಲ್ಲೇ 511 ದಿನಗಳ ಪ್ರದರ್ಶನ ಕಾಣುವ ಮೂಲಕ ಒಂದು ಅದ್ಭುತ ದಾಖಲೆ ಬರೆದಿರುವ ‘ಚಾಲಿಪೆÇೀಲಿಲು’ ತಂಡದ ಹೆಚ್ಚಿನೆಲ್ಲ ಕಲಾವಿದರು ಈ ಚಿತ್ರದಲ್ಲೂ ಇದ್ದಾರೆ. ಉತ್ಪಲ್ ನಾಯನಾರ್ ಅವರ ಕೆಮರಾ ಕೈಚಳಕ ‘ದಬಕ್ ದಬಾ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಯುವಕನೋರ್ವನ ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಹಾಡಹಗಲೇ ನಡೆದಿದ್ದು, ಮೂವರ ತಂಡದಿಂದ ಕೃತ್ಯ ನಡೆದು ಆರೋಪಿಯೋರ್ವನ ತಂದೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಳೇಕಲ ನಿವಾಸಿ ನಾಸೀರ್ ಎಂಬವರ ಪುತ್ರ ಮಹಮ್ಮದ್ ಖಮಾಲುದ್ದೀನ್ (25) ಕೊಲೆ ಯತ್ನಕ್ಕೆ ಒಳಗಾದವರು. ಮಾಸ್ತಿಕಟ್ಟೆಯ ಬೀಫ್ ಸ್ಟಾಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಉಳ್ಳಾಲ ನಿವಾಸಿಗಳಾದ ಅರ್ಫಾನ್, ಮಿತ್ತ ನಿಸಾರ್ ಹಾಗೂ ಜಾಫರ್ ಎಂಬವರ ತಂಡ ಏಕಾಏಕಿ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿತ್ತು. ಬಳಿಕ ಖಮಾಲುದ್ದೀನ್ ಅವರಿಗೆ ಚೂರಿ, ಸೋಡಾ ಬಾಟಲಿ ಹಾಗೂ ರಾಡಿನಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿರುವ ಖಮಾಲುದ್ದೀನ್ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಂಗಳ ಹಿಂದೆ ದರೋಡೆ ನಡೆಸಿದ್ದ ತಂಡ : ರಂಝಾನ್ ಉಪವಾಸದ ಸಂದರ್ಭ ಅರ್ಫಾನ್, ನಿಸಾರ್, ಜಾಫರ್ ಸೇರಿದಂತೆ ಮುಖ್ತಾರ್ ಎಂಬವರ ತಂಡ ಇದೇ ಮಾಸ್ತಿಕಟ್ಟೆಯ ಬೀಫ್ ಸ್ಟಾಲಿಗೆ ನುಗ್ಗಿ ಖಮಾಲುದ್ದೀನ್ ಅವರಿಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ, ಬಂಟ್ವಾಳದ ಹರೀಶ್ ಪೂಜಾರಿ ಕೊಲೆ , ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಗಳಲ್ಲಿ ಬಿಜೆಪಿ ಹಾಗೂ ಸಂಘಪರಿವಾರದವರು ನೇರ ಭಾಗಿಯಾಗಿದ್ದು, ಇದರ ವಿರುದ್ಧ ಪ್ರತಿಭಟಿಸದ ಬಿಜೆಪಿ ಪಕ್ಷದವರಿಗೆ ಡಿವೈಎಸ್ ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಪ್ರತಿಭಟಿಸಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್ ಹೇಳಿದ್ದಾರೆ. ತೊಕ್ಕೊಟ್ಟು ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಅವರು ಹೇಳಿದ್ದಾರೆ. ಎಂ.ಕೆ.ಗಣಪತಿ ಉಳ್ಳಾಲದಲ್ಲಿ ಎಸ್.ಐ ಆಗಿ ಜಿಲ್ಲೆಯಾದ್ಯಂತ ನಿಷ್ಠಾವಂತರಾಗಿ ಕಾರ್ಯ ನಿರ್ವಹಿಸಿದವರು. ಮುಖ್ಯಮಂತ್ರಿಗಳು ಪ್ರಕರಣವನ್ನು ಶೀಘ್ರವೇ ಸಿಓಡಿಗೆ ವಹಿಸಬೇಕು. ಆದರೆ ಅವರ ಅಂತಿಮ ಸಂಸ್ಕಾರದ ವೇಳೆ ಮೃತದೇಹವನ್ನು ಪತ್ನಿ ಹಾಗೂ ಕುಟುಂಬಸ್ಥರ ಮುಂದೆಯೇ ಎರಡು ಗಂಟೆಗಳ ಕಾಲ ರಸ್ತೆ ಬದಿಯಲ್ಲಿಟ್ಟು ಜವಾಬ್ದಾರಿಯುತ ಶಾಸಕರ ಸಮ್ಮುಖದಲ್ಲಿ ಇರಿಸಿ ಪ್ರತಿಭಟಿಸಿರುವುದು ಸಮಂಜಸವಲ್ಲ. ಸಿಬಿಐ ಗೆ ಕೊಟ್ಟಂತಹ ಪ್ರಕರಣಗಳು ಎಲ್ಲವೂ ಹಳ್ಳ ಹಿಡಿದಿರುವುದರಿಂದ ಗಣಪತಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಂಗಳೂರು ಕ್ಷೇತ್ರದ 25 ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶೀಘ್ರವೇ ಸ್ಥಾಪಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಇನೋಳಿ ದೇವಂದಬೆಟ್ಟುವಿನ ಶ್ರೀ ಸೋಮನಾಥ ದೇವಸ್ಥಾನಕ್ಕೆ ಹೋಗುವ ಕಾಂಕ್ರೀಟಿಕರಣ ರಸ್ತೆ ಹಾಗೂ ಇನೋಳಿ ಸಂಪರ್ಕಿಸುವ ರಸ್ತೆಯ ಡಾಮರೀಕರಣವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ಜನರ ಆರೋಗ್ಯ ಉತ್ತಮವಾಗಿ ಇಡುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಸರಕಾರ ಕಲ್ಪಿಸಿದ್ದು, ಈ ನಿಟ್ಟಿನಲ್ಲಿ ಕ್ಷೇತ್ರದ 25 ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗುವುದು. ಅತೀ ಶೀಘ್ರದಲ್ಲೇ ಪಾವೂರು ಪಂಚಾಯಿತಿ ವ್ಯಾಪ್ತಿಯಲ್ಲೂ ಘಟಕವನ್ನು ಸ್ಥಾಪಿಸಿ 20 ಲೀ. ನೀರಿಗೆ 10 ರೂ. ನಂತೆ ಪಡೆದುಕೊಳ್ಳಲಾಗುವುದು. ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬಹುದು ಎಂದ ಅವರು ಮಂಗಳೂರು ಕ್ಷೇತ್ರಾದ್ಯಂತ ಬಹುತೇಕ ರಸ್ತೆಗಳನ್ನು ವಿವಿಧ ಯೋಜನೆಗಳಡಿ ಬರುವ ಅನುದಾನಗಳ ಮೂಲಕ ಕಾಂಕ್ರೀಟಿಕರಣ ಹಾಗೂ ಡಾಮರೀಕರಣವನ್ನು ಮಾಡಲಾಗಿದೆ. ಬಹಳ ವರ್ಷಗಳಿಂದ ನಾದುರಸ್ತಿಯಲ್ಲಿದ್ದ ಇನೋಳಿ ದೇವಸ್ಥಾನದ…

