ಉಳ್ಳಾಲ, ಡಿ.18: ಕರಾವಳಿ ಕರ್ನಾಟಕ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ ನಾಡು ನುಡಿ ವೈಭವದ ರತ್ನೋತ್ಸವ -2025, ಡಿ.20ರಂದು ಗ್ರೀನ್ ಗ್ರೌಂಡ್ ದೇರಳಕಟ್ಟೆಯಲ್ಲಿ ನಡೆಯಲಿದೆ ಎಂದು ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ. ಇವರು ಉಳ್ಳಾಲದ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ರತ್ನೋತ್ಸವ ಬೆಳಿಗ್ಗೆ 9ಗಂಟೆಗೆ ಆರಂಭವಾಗಲಿದ್ದು, ಸಮ್ಮೇಳನ ಅಧ್ಯಕ್ಷರಾದ ಹಿರಿಯ ಸಾಹಿತಿಗಳು, ವಿಶ್ರಾಂತ ಪ್ರಾಧ್ಯಪಕದ ಡಾ. ನರೇಂದ್ರ ರೈ ದೇರ್ಲರವರನ್ನು ದೇರಳಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಪಂಚಾಯತ್ ವಠಾರದಿಂದ ಪೂರ್ಣ ಕುಂಭ ಕಲಸ,ಚೆಂಡೆ ವಾದನ, ಕೊಂಬು ಕಹ ವೀರಗಾಸೆ, ಕಂಸಾಲೆ, ಹಾಲಕ್ಕಿ, ಹುಲಿವೇಷ, ಪೂಜಾ ಕುಣಿತ, ಬಣ್ಣದ ಕೊಡೆ, ಸೌತ ಗೈಡ್ಸ್ ವಿದ್ಯಾರ್ಥಿಗಳ ಜೊತೆಗೆ ಮೆರವಣಿಗೆಯೊಂದಿಗೆ ದೇರಳಕಟ್ಟೆ ಗ್ರೀನ್ ಗೌಂಡ್ಗ ಕರೆತರಲಾಗುವುದು. ಬಳಿಕ ರತ್ನ ಎಜುಕೇಶನ್ ಟ್ರಸ್ಟ್ನ ಕೋಶಾಧಿಕಾರಿ ರತ್ನವತಿ ಶೆಟ್ಟಿ ದ್ವಜಾರೋಹಣ ಮಾಡಿ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಧರ್ಮದರ್ಶಿ ಹರಿಕೃಷ್ಣ ಪುನರೂರು,…
Author: UllalaVani
ಉಳ್ಳಾಲ: ಬೀರಿ ಜಂಕ್ಷನ್, ಕೊಲ್ಯದಲ್ಲಿ ಶಾಶ್ವತವಾಗಿ ಸಂಚಾರಿ ಪೊಲೀಸ್ ಅಧಿಕಾರಿಯನ್ನು ನೇಮಿಸುವಂತೆ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಇವರಿಗೆ ಮನವಿಯನ್ನು ಸಲ್ಲಿಸಲಾಯಿತು. ಸೋಮೇಶ್ವರ ಪುರಸಭೆ ಮತ್ತು ಕೋಟೆಕಾರ್ ಪಟ್ಟಣ ಪಂಚಾಯತ್ ನ ವ್ಯಾಪ್ತಿಯಲ್ಲಿನ 13 ಕ್ಕೂ ಹೆಚ್ಚು ಸಂಘ ಸಂಸ್ಥೆಗಳ 350 ಕ್ಕೂ ಹೆಚ್ಚು ಜನಗಳ ಸಹಿ ಸಂಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೀರಿಯಲ್ಲಿ ವಾಹನದಟ್ಟಣೆ ಹೆಚ್ಚಿದ್ದು, ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರಿಗೆ ರಸ್ತೆ ದಾಟುವುದಕ್ಕೂ ಕಷ್ಟಕರವಾಗುತ್ತಿದೆ. ಶಾಲಾ ಕಾಲೇಜುಗಳು, ವಾಣಿಜ್ಯ ಸಂಕೀರ್ಣಗಳು, ಮಳಿಗೆಗಳು, ಬ್ಯಾಂಕ್ ಸೇರಿದಂತೆ ಧಾರ್ಮಿಕ ಕೇಂದ್ರಗಳಿರುವ ಪ್ರದೇಶವಾಗಿರುವ ಬೀರಿಯಲ್ಲಿ ಸಂಚಾರಿ ಪೊಲೀಸ್ ಅಧಿಕಾರಿ ನೇಮಿಸಿದಲ್ಲಿ ಸಾರ್ವಜನಿಕರಿಗೆ ಸಹಕಾರಿಯಾಗಬಹುದು. ಈ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರನ್ನು ಕೇಳಿಕೊಂಡರು. ಈ ಸಂದರ್ಭ ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷರಾದ ರವಿ ಶಂಕರ್ ಸೋಮೇಶ್ವರ, ಕೋಟೆಕಾರ್ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಪ್ರವೀಣ್ ಬಗಂಬಿಲ, ಶ್ರೀ ಗಣೇಶ ಭಜನಾ ಮಂದಿರ ಬೀರಿ ಇದರ ಗೌರವಾಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಆಶಿಕ್ ಗೋಪಾಲಕೃಷ್ಣ, ಸದಸ್ಯರಾದ ಅಶೋಕ್…
ಮುಂಬೈ, ಡಿ. 18; ಮುಂಬೈ ಯ ಖ್ಯಾತ ಉದ್ಯಮಿ ಟಿ. ಆರ್. ಪೂಂಜಾ ಅವರು ಡಿ. 17ರಂದು ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ. ಅವರ ಅಂತ್ಯ ಕ್ರಿಯೆ ಡಿ. 19ರಂದು ಮುಂಬೈ ಮುಲುಂದ್ ನಲ್ಲಿ ನಡೆಯಲಿದೆ. ಇವರ ನಿಧನಕ್ಕೆ ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ, ವಿಧಾನಸಭಾಧ್ಯಕ್ಷ ಯು. ಟಿ. ಖಾದರ್, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕರಾದ ಜೆ. ಆರ್. ಲೋಬೊ, ವಿಜಯ ಕುಮಾರ್ ಶೆಟ್ಟಿ, ಶ್ರೀ ದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಆಳ್ವ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಮೋಹನ್ ಆಳ್ವ, ಕಾಂಗ್ರೆಸ್ ಮುಖಂಡರಾದ ಕಳ್ಳಿಗೆ ತಾರಾನಾಥ್ ಶೆಟ್ಟಿ, ಎಂ. ಜಿ. ಹೆಗ್ಡೆ, ಟಿ. ಕರುಣಾಕರ ಶೆಟ್ಟಿ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಡಿ.17, ಮಂಗಳೂರು: ಇತ್ತೀಚೆಗೆ ಮಂಗಳೂರು ಜಂಕ್ಷನ್ ರೈಲ್ವೇ ಸ್ಟೇಷನ್ ಸಮೀಪ ಬಾಡಿಗೆ ಸ್ಕೂಟರ್ ಸೇವೆಗಳನ್ನು ಆರಂಭಿಸಿದ್ದ ಆದೇಶ್ ಮತ್ತು ರಜನೀಶ್ ಅಮೀನ್ ಮಾಲಕತ್ವದ ಸ್ಕೂಟ್ಝ್ ಸಂಸ್ಥೆ ಇದೀಗ ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ಸಮೀಪ ನೂತನ ಶಾಖೆಯನ್ನು ಲೋಕಾರ್ಪಣೆಗೊಳಿಸಿದೆ. ಸಭಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವುದರ ಮೂಲಕ ಗಣ್ಯರು ಚಾಲನೆಯನ್ನು ನೀಡಿದ್ರು. ಬಳಿಕ ಪಾಲಕ್ಕಾಡ್ ರೈಲ್ವೇ ಸ್ಟೇಷನ್ ಸೀನಿಯರ್ ಡಿವಿಶನಲ್ ಕಮರ್ಷಿಯಲ್ ಮ್ಯಾನೇಜರ್ ಡಾ.ಅರುಣ್ ಥೋಮಾಸ್ ಮಾತನಾಡಿ, ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಶಾಖೆ ಹೊಂದಿದ್ದು, ಇದೀಗ ಸೆಂಟ್ರಲ್ನಲ್ಲಿ ಎರಡನೇ ಶಾಖೆಯನ್ನು ಆರಂಭಿಸಿದೆ. ಉದ್ಯಮಿಗಳಿಗೆ, ಪ್ರವಾಸಿಗರಿಗೆ ಇದೊಂದು ಉತ್ತಮ ವ್ಯವಸ್ಥೆಯಾಗಿದೆ. ಆರಾಮದಾಯಕವಾಗಿ ಓಡಾಡಲು ಸ್ಕೂಟರ್ ಬೆಸ್ಟ್ ಒಪ್ಶಂಗ್ ಆಗಿದ್ದು, ಪ್ರೇಕ್ಷಣಿಯ ಸ್ಥಳಗಳಿಗೆ ತಲುಪಲು ಪೂರಕವಾಗಿದೆ. ಇವಿ ಸ್ಕರ್ಸ್ ಲಭ್ಯವಿದ್ದು, ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕಾರಿಯಾಗತ್ತೆ, ಜೊತೆಗೆ ಬೆಸ್ಟ್ ಮೆಮೋರಿಸ್ ನಿಮ್ಮದಾಗತ್ತೆಅಂತ ಹೇಳಿದ್ದಾರೆ. ಬಳಿಕ ವಕೀಲರಾದ ಶ್ರೀಧರ್ ಶೆಟ್ಟಿ ಪುಲ್ಲಿಂಚ ಅವರು ಮಾತನಾಡಿ, ಆದೇಶ್ ಅವರನ್ನು ಬಹಳ ಹತ್ತಿರದಿಂದ ಬಲ್ಲವನು. ಯಾವುದೇ ವ್ಯವಹಾರಗಳನ್ನು ನಡೆಸುವುದು…
ಬೆಳ್ತಂಗಡಿ, ಡಿ. 17: ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯಿಂದಾಗಿ ದಿನೇ ದಿನೇ ಸಮಸ್ಯೆಗಳು ಎದುರಾಗುತ್ತಿದ್ದು, ಯಾವ ಅಧಿಕಾರಿಗಳು, ಶಾಸಕರು, ಮಂತ್ರಿಗಳು ಇದರತ್ತ ಗಮನಹರಿಸದಿರುವುದು ಈ ದುಸ್ಥಿತಿಗೆ ಕಾರಣವಾಗಿದೆ ಎಂದು ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಸಮಿತಿ ಆರೋಪಿಸಿದೆ. ಈ ರಸ್ತೆಯ ಮರು ಡಾಮರೀಕರಣಕ್ಕೆ ಆಗ್ರಹಿಸಿ ಡಿ.ವೈ.ಎಫ್.ಐ. ಡಿ.ವೈ.ಎಫ್.ಐ. ಸರಕಾರಕ್ಕೆ ಮನವಿ ನೀಡಿದರು. ಇಲ್ಲಿನ ರಸ್ತೆ ಹೊಂಡ-ಗುಂಡಿಗಳನ್ನು ಒಳಗೊಂಡು ಮರಣ ಬಾವಿಯಂತೆ ಬಾಯಿ ಬಿಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಡಿ.ವೈ.ಎಫ್.ಐ. ತಾಲೂಕು ಅಧ್ಯಕ್ಷರಾದ ಅಧಿತಿ ಕೊಯ್ಯೂರು ಹಾಗೂ ಕಾರ್ಯದರ್ಶಿ ಅಭಿಷೇಕ್ ಪದ್ಮುಂಜ ಅವರು ಇದೇ ಮಾರ್ಗದಲ್ಲಿ ಇತ್ತೀಚಿಗೆ ಬಂದ ನಮ್ಮ ಮೈಸೂರು ಮಹಾರಾಜರು ಅದು ಹೇಗೆ ಬಂದರೋ ಯಾರಿಗೂ ತಿಳಿದಿಲ್ಲ ಎಂದು ಹೇಳಿದರು. ಇಲ್ಲಿನ ಜನರು ಇಲ್ಲಿನ ಗುಂಡಿಗಳಲ್ಲಿ ಬಾಳೆ ಗಿಡಗಳನ್ನು ನೆಟ್ಟು ತಮ್ಮ ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.ಅದಲ್ಲದೆ ರಸ್ತೆ ಬದಿಯ ಅಂಗಡಿ ವ್ಯಾಪಾರಸ್ಥರ ಪಾಡು ಯಾರಿಗೂ ಬೇಡ. ತಮ್ಮಲ್ಲಿರುವ ವಸ್ತುಗಳನ್ನು ವ್ಯಾಪಾರ ಮಾಡಲು ಅವರಿಗೆ ಇದು ಹೊಸತು ಎಂಬುದನ್ನು ಹೇಳಲು…
ಮಂಗಳೂರು, ಡಿ. 17 : ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನೆಲೆ ಮಂಗಳೂರು ನಗರ ಪೊಲೀಸರು ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆಯನ್ನು ಆಯೋಜನೆ ಮಾಡಲಾಗುವ ಹೋಟೆಲ್ಗಳು, ರೆಸ್ಟೋರೆಂಟ್ಗಳು, ರೆಸಾರ್ಟ್ಗಳು ಮತ್ತು ಇತರ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯಕ ಪೊಲೀಸ್ ಆಯುಕ್ತರುಗಳ ಕಛೇರಿಯಿಂದ ಕಡ್ಡಾಯವಾಗಿ ಪೂರ್ವ ಅನುಮತಿ ಪಡೆಯಬೇಕು. ಈ ಅರ್ಜಿಗಳನ್ನು ಡಿಸೆಂಬರ್ 23 ರಂದು ಸಂಜೆ 5:00 ಗಂಟೆಯ ಒಳಗಾಗಿ ಸಲ್ಲಿಸಿ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಪೂರ್ವ ಅನುಮತಿ ಇಲ್ಲದ ಹೊಸ ವರ್ಷದ ಆಚರಣೆಗಳನ್ನು ಆಯೋಜಿಸಲು ಅನುಮತಿ ಕಾನೂನು ಕ್ರಮಗಳನ್ನು ನೀಡಲಾಗುವುದಿಲ್ಲ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕೈಗೊಳ್ಳಲಾಗುತ್ತದೆ.ಹೊಸ ವರ್ಷದ ಕಾರ್ಯಕ್ರಮವು ರಾತ್ರಿ 12:30 ಒಳಗಾಗಿ ಪೂರ್ಣಗೊಳ್ಳಬೇಕು. ಈ ಸಮಯದ ಬಳಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿಸಲಾಗುವುದಿಲ್ಲ.ಧ್ವನಿಮುದ್ರಣ ವ್ಯವಸ್ಥೆಗಳು, ಲೌಡ್ ಸ್ಪೀಕರ್ಗಳನ್ನು ಬಳಸಲು ಸಂಬಂಧಪಟ್ಟ ಪ್ರಾಧಿಕಾರದಿಂದ ಪೂರ್ವ ಅನುಮತಿಯನ್ನು ಪಡೆಯಬೇಕು. ಧ್ವನಿಯ ಮಟ್ಟವು ಶಬ್ದ ಮಾಲಿನ್ಯ ನಿಯಮಗಳು ೨೦೦೦…
ಮಂಗಳೂರು, ಡಿ. 16 : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿತರನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ ವಾಸವಿರುವ ವೃದ್ಧೆ ಜಲಜ ( 85 ವರ್ಷ) ಅವರ ಮನೆಗೆ ನುಗ್ಗಿ ದರೋಡೆ ನಡೆಸಿದ ಘಟನೆ ಡಿಸೆಂಬರ್ 3ರಂದು ನಡೆದಿತ್ತು. ಅಪರಿಚಿತರು ಕುಡಿಯಲು ನೀರು ಬೇಕೆಂದು ಬಾಗಿಲು ತೆರೆಯುವಂತೆ ಹೇಳಿದ್ದು, ಬಾಗಿಲು ತೆಗೆಯದ ಕಾರಣ ಮನೆಯ ಹಂಚು ತೆಗೆದು ಒಳಪ್ರವೇಶಿಸಿದ್ದಾರೆ. ಆರೋಪಿತರು ತುಳುವಿನಲ್ಲಿ ಜೋರಾಗಿ ಬೆದರಿಸಿ, ವೃದ್ಧೆಯ ಕುತ್ತಿಗೆಗೆ ಬೈರಾಸು ಬಿಗಿದು, ಗೋಡ್ರೇಜ್ನಲ್ಲಿದ್ದ ಸುಮಾರು 16 ಗ್ರಾಂ ಚಿನ್ನದ ಸರ, 20 ಗ್ರಾಂ ತೂಕದ ಎರಡು ಚಿನ್ನದ ಬಳೆ, ಹಾಗೂ 14 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಘಟನೆ ಬಳಿಕ ಕಾರ್ಯಪ್ರವೃತ್ತರಾದ ಪೊಲೀಸರು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಶೈನ್…
ಡಿ.16: ಉದಯ ಚಂದ್ರ ಡಿ ಸುವರ್ಣರ ಮಾಲಕತ್ವದ ಸುವರ್ಣ ವಿಸ್ತಾರ ಲಾಡ್ಜಿಂಗ್, ಬಾರ್ ಅಂಡ್ ರೆಸ್ಟೋರೆಂಟ್ ಹೊಂದಿರುವ 3 ಸ್ಟಾರ್ ಗ್ರೇಡ್ ಹೊಟೇಲ್ ಹಾಗೂ ಕಮರ್ಷಿಯಲ್ ಕಾಂಪ್ಲೆಕ್ಸ್ ಬಹು ಮಹಡಿ ಕಟ್ಟಡವು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಶುಭಾರಂಭಗೊoಡಿದೆ. ಈ ಸಂದರ್ಭದಲ್ಲಿ ಕೆ.ಟಿ ಸುವರ್ಣ ಹಾಗೂ ಬಂಧು ಮಿತ್ರರನ್ನು ಉದಯ ಚಂದ್ರ ಡಿ ಸುವರ್ಣರು ಸ್ವಾಗತಿಸಿ, ಸಂತಸವನ್ನು ಹಂಚಿಕೊ0ಡರು.
ಉಳ್ಳಾಲ,ಡಿ.16: ಕಾಮಗಾರಿ ಸಂದರ್ಭ ಗುಡ್ಡ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಸೇವಂತಿಗುತ್ತು ಸಮೀಪ ಸಂಭವಿಸಿದೆ. ಹುನಗುಂದ ತಾಲೂಕು ನಿವಾಸಿ ಬಾಳಪ್ಪ (45) ಮೃತ ಕಾರ್ಮಿಕ. ಐದು ಮಂದಿ ಕಾರ್ಮಿಕರು ಒಟ್ಟಾಗಿ ರಿಟೈನಿಂಗ್ ವಾಲ್ ಕಾಮಗಾರಿಯನ್ನು ನಡೆಸುತ್ತಿದ್ದು, ಈ ಸಂದರ್ಭ ಅವಘಢ ಸಂಭವಿಸಿ ಬಾಳಪ್ಪ ಮಣ್ಣಿನಡಿಗೆ ಸಿಲುಕಿದ್ದಾರೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಖಾಸಗಿ ಜಾಗದ ರಿಟೈನಿಂಗ್ ವಾಲ್ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಜೆಸಿಬಿ ಮೂಲಕ ಗುಡ್ಡವನ್ನು ಅಗೆಯಲಾಗುತಿತ್ತು. ಇದೇ ಸಂದರ್ಭ ಗಾರೆ ಹಿಡಿದುಕೊಂಡು ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ಬಾಳಪ್ಪ ಮೇಲೆ ಏಕಾಏಕಿ ಗುಡ್ಡ ಕುಸಿದಿದೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೆತ್ತಿಕೊಂಡದ್ದಾರೆ.
ತಲಪಾಡಿ,ಡಿ.16: ತಲಪಾಡಿ ಸಮೀಪ ಕಾರೊಂದು ಟ್ಯಾಂಕರ್ಗೆ ಹಿಂಬದಿಯಿ0ದ ಗುದ್ದಿದ ಘಟನೆ ನಡೆದಿದೆ. ಪರಿಣಾಮ ಕಾರಿನಲ್ಲಿದ್ದ ಉಪ್ಪಳ ಮೂಲದ ಸಿದ್ದೀಕ್ ಮತ್ತು ಆದಂ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಅಪಘಾತ ನಡೆದ ಕಾರಿನಲ್ಲಿ ಅಪಾರ ಪ್ರಮಾಣದ ಎಂಡಿಎ0ಎ ಇತ್ತು ಎಂದು ಶಂಕಿಸಲಾಗಿದೆ. ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಪೋಲಿಸರು ಪರಿಶೀಲನೆ ನಡೆಸಿ ನಿಜಾಂಶವನ್ನು ಬಿಚ್ಚಿಡಬೇಕಾಗಿದೆ.

