Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ವಿದ್ಯಾರ್ಥಿ ಜೀವನದಲ್ಲಿ ಕಾಲೇಜಿನ ಕ್ಲಾಸ್ ರೂಂ ಮತ್ತು ಪುಸ್ತಕದಲ್ಲಿ ಸಿಗುವ ಜ್ಞಾನದೊಂದಿಗೆ ಕ್ರೀಡಾಂಗಣದಲ್ಲಿ ಸಿಗುವ ಜ್ಞಾನವು ಸೇರಿದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾ„ಪತಿ ಪ್ರೊ. ಡಾ| ಶಾಂತಾರಾಮ ಶೆಟ್ಟಿ ಅಬಿಪ್ರಾಯಪಟ್ಟರು. ಅವರು ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಆಡಿಟೋರಿಯಂನಲ್ಲಿ ದಕ್ಷಿಣ ಭಾರತ ಮಟ್ಟದ ದಂತ ಮತ್ತು ವೈದ್ಯಕೀಯ ವಿಜ್ಞಾನ ಕಾಲೇಜುಗಳ ಅಂತರ್ ಕಾಲೇಜು ಕ್ರೀಡಾಕೂಟ ` 6ನೇ ನಿಟ್ಟೆ ಎಕೋಲೇಟ್ಸ್ 2016′ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಪುಸ್ತಕಗಳು ನಮ್ಮ ಜೀವನದಲ್ಲಿ ಅತೀ ಮುಖ್ಯ ಅಲ್ಲ. ಹೊಸ ಹೊಸ ತಂತ್ರಜ್ಞಾನಗಳ ಜ್ಞಾನ ಅಗತ್ಯ ಅದರೊಂದಿಗೆ ಕ್ರೀಡಾಕೂಟದಲ್ಲಿ ಬೇರೆ ಬೇರೆ ಕಾಲೇಜುಗಳ ವಿದ್ಯಾರ್ಥಿಗಳು, ಒದೆಡೆ ಸೇರಿದಾಗ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು, ಸೋಲು, ಗೆಲುವಿನ ಬಗ್ಗೆ ಚಿಂತನೆ ನಡೆಸಲು ಸಹಕಾರಿ. ಕ್ರೀಡೆಯಲ್ಲಿ ಸೂಲು ಗೆಲವು ಸಹಜ ಆದರೆ ಅದರೊಂದಿಗೆ ಮುಂದಿನ ದಿನಗಳಲ್ಲಿ ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವು ಸಾ„ಸುವ ಪ್ರಯತ್ನ ಅತೀ ಮುಖ್ಯ ಎಂದರು.…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಟೂರಿಸ್ಟ್ ವಾಹನಗಳಿಗೆ ಸಿಗುವ ಬಾಡಿಗೆಗೆ ಕಲ್ಲು ಹಾಕುವ ಕೆಲಸವನ್ನು ಪರ್ಮಿಟ್ ಇರುವ ವಾಹನಗಳು ಮಾಡುತ್ತಿದ್ದರೂ, ಅದರ ವಿರುದ್ಧ ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳು ಅವರ ಜತೆಗೆ ಶಾಮೀಲಾಗಿ ಸರಕಾರಕ್ಕೆ ಮೋಸ ಮಾಡುತ್ತಿದ್ದಾರೆ. ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡುವುದರ ಜತೆಗೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ನಿನ ಜಿಲ್ಲೆ ಅಧ್ಯಕ್ಷ ಮೋನಪ್ಪ ಭಂಡಾರಿ ಹೇಳಿದ್ದಾರೆ. ಅವರು ತೊಕ್ಕೊಟ್ಟು ಟೂರಿಸ್ಟ್ ಕಾರು ಮತ್ತು ವ್ಯಾನ್ ಚಾಲಕ ಮಾಲಕರ ಸಂಘದ ವತಿಯಿಂದ ಪರವಾನಿಗೆ ಇಲ್ಲದ ಬಸ್ಸುಗಳು ಮತ್ತು ಖಾಸಗಿ ಕಾರುಗಳು ಪ್ರವಾಸಿ ಬಾಡಿಗೆ ಮಾಡುವುದರ ವಿರುದ್ಧವಾಗಿ ಮಂಗಳವಾರ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಹಮ್ಮಿಕೊಂಡ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದರು. ಟ್ರಿಪ್ ನಿಲ್ಲಿಸಿ ಬಾಡಿಗೆ ನಡೆಸುವ ಬಸ್ಸುಗಳ ಪರ್ಮಿಟ್ ರದ್ದುಗೊಳಿಸಬೇಕಾದ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಸರಕಾರಿ ಅಧಿಕಾರಿಗಳು ಬಸ್ಸು ಮಾಲೀಕರ ಜತೆಗೆ ಶಾಮೀಲಾಗಿ ಲಂಚ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದೇರಳಕಟ್ಟೆ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೇರಳ ಕಣ್ಣೂರಿನ ಪಯ್ಯಂಬಲ್ ರಾಯಲ್ ಹೆಲೆನ್ ಫ್ಲಾಟಿನ ನಿವಾಸಿ ವಿನೋದ್ ವರ್ಗೀಸ್ ಎಂಬವರ ಪುತ್ರ ಮ್ಯಾಥ್ಯಿವ್ ವರ್ಗೀಸ್ (20) ಮೃತ ವಿದ್ಯಾರ್ಥಿ. ಇವರು ದೇರಳಕಟ್ಟೆ ಖಾಸಗಿ ಕಾಲೇಜಿನಲ್ಲಿ ತೃತೀಯ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ಮಾ.4 ಶುಕ್ರವಾರ ದೇರಳಕಟ್ಟೆಯಿಂದ ಕುತ್ತಾರು ಕಡೆಗೆ ತೆರಳುತ್ತಿದ್ದಾಗ ಮ್ಯಾಥಿವ್ ಚಲಾಯಿಸುತ್ತಿದ್ದ ಕಾರು ನಿತ್ಯಾನಂದನಗರ ಸಮೀಪ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಮ್ಯಾಥಿವ್ ಮತ್ತು ಸಂಶಾದ್ ಎಂಬವರು ಗಂಭೀರವಾಗಿ ಗಾಯಗೊಂಡರೆ, ಜಾರ್ಜ್ ರೋಹನ್, ಕೌಶಿಕ್ ಥೋಮಸ್, ರಾಜು ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸುತ್ತಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿ ಹೆತ್ತವರು ವಿನೋದ್ ವರ್ಗೀಸ್ ದಂಪತಿ ಇಬ್ಬರು ಕೇರಳದಲ್ಲಿ ಖ್ಯಾತ ವೈದ್ಯರಾಗಿದ್ದು, ಕಿರಿಯ ಸಹೋದರಿ ದೇರಳಕಟ್ಟೆಯಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯನ್ನು ಅಗಲಿದ್ದಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಸೋಮೇಶ್ವರದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಸಾವಿರಾರು ಭಕ್ತರು ಬೆಳಗ್ಗಿನಿಂದ ದೇವರ ದರ್ಶನ ಪಡೆದು ರಾತ್ರಿ ಜಾಗರಣೆಯಲ್ಲಿ  ಪಾಲ್ಗೊಳ್ಳಲಿದ್ದಾರೆ. ವಿವಿಧ ಸಂಘದ ಹಾಗೂ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸಜಿಪ: ಮಂಗಳೂರು ವಿಧಾನಸಭಾ ಕ್ಷೇತ್ರದ ಸಜಿಪನಡು ಗ್ರಾಮದ ಅತೀ ಎತ್ತರವಾದ ಪ್ರದೇಶದಲ್ಲಿರುವ ಕಂಚಿನಡ್ಕ ಪದವು ಸೈಟ್ ನಿವಾಸಿಗಳಿಗೆ ಮೂಲಭೂತ ಸೌಕರ್ಯದ ಕೊರತೆಯನ್ನು ಹಂತ ಹಂತವಾಗಿ ಅಭಿವೃದ್ಧಿ ಮಾಡುತ್ತಿದ್ದು, ರಸ್ತೆ ನಿರ್ಮಾಣ ಸೇರಿದಂತೆ ಕೆಲವೊಂದು ಮೂಲಭೂತ ಸೌಕರ್ಯವನ್ನು ಈಗಾಗಲೇ ಯಶಸ್ವಿಯಾಗಿ ನಡೆಸಿದೆ. ಆದರೆ ನೀರಿನ ಸಮಸ್ಯೆ ಪರಿಹಾರವಾಗಿರಲಿಲ್ಲ. ಹೆಲ್ಪ್ ಇಂಡಿಯಾ ಸಂಸ್ಥೆಯ ರಾಝಿಕ್ ಉಳ್ಳಾಲ್ ಸಮಾಜಕ್ಕೆ ಕೊಡುಗೆಯಾಗಿ ದಾನಿಯೋರ್ವರು ನೀರಿನ ಶಾಶ್ವತ ಯೋಜನೆಯನ್ನು ಮಾಡುವ ಇರಾದೆಯನ್ನು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ರಾಝಿಕ್ ಅವರಿಗೆ ಈ ಸ್ಥಳದಲ್ಲಿ ನೀರಿನ ಶಾಶ್ವತ ಯೋಜನೆ ನಡೆಸಲು ಕೇಳಿಕೊಂಡತೆ ಬಾವಿ ನಿರ್ಮಾಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಸೈಟ್ ನಿವಾಸಿಗಳ ಉಪಯೋಗಕ್ಕೆ ಬಿಟ್ಟು ಕೊಟ್ಟಿದ್ದು, ಈ ಬಾವಿಯನ್ನು ಇಲ್ಲಿನ ನಿವಾಸಿಗಳು ಸಮಾಜದ ಆಸ್ತಿ ಸಂಪತ್ತಿನಂತೆ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಆಭಿಪ್ರಾಯಪಟ್ಟರು. ಅವರು ಸಜಿಪ ಗ್ರಾಮದ ಕಂಚಿನಡ್ಕಪದವು ಸೈಟ್ ನಿವಾಸಿಗಳಿಗೆ ಹೆಲ್ಪ್ ಇಂಡಿಯಾ ಫೌಂಡೇಶನ್ ವತಿಯಿಂದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಜೀರು: ದೇಶದಲ್ಲಿ ಅನಾದಿಕಾಲದಿಂದಲೂ ಗೋವಿನ ಬಗ್ಗೆ ಪೂಜ್ಯನೀಯ ಭಾವವನ್ನು ಬೆಳೆಸಿಕೊಂಡು ಬಂದ ಸಂಸ್ಕøತಿ ನಮ್ಮದು. ತಾಯಿಯ ರೂಪದಲ್ಲಿ ನಾವು ಕಾಣುವ ಗೋವು ಅದು ದೇಶದ ಸಂಪತ್ತು ಆಗಿದೆ. ಆದರೆ ನಾವು ಗೋವಿನ ಬದಲು ಹುಲಿಯನ್ನು ರಾಷ್ಟ್ರೀಯ ಪ್ರಾಣಿ ಎಂದು ಕರೆದಿರುವುದು ವಿಪರ್ಯಾಸ. ಇನ್ನಾದರೂ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವ ಕೆಲಸ ಆಗಬೇಕಾಗಿದೆ ಜೊತೆಗೆ ಗೋಹತ್ಯೆ ನಿಷೇದ ಕಾನೂನನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ವಿಶ್ವಹಿಂದೂ ಪರಿಷತ್‍ನ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಗೋಪಾಲ್‍ಜೀ ಅವರು ಹೇಳಿದರು. ಅವರು ಪಜೀರು ಬೀಜಗುರಿಯ ಗೋವನಿತಾಯ ಟ್ರಸ್ಟ್‍ನ 16 ನೇ ವರ್ಷಾಚರಣೆ ಅಂಗವಾಗಿ ನೂತನ ಗೊಶಾಲೆಯ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ಸ¨ssÁ ಕಾರ್ಯಕ್ರಮದಲ್ಲಿ `ಗೋ ಸಂತತಿಯ ಅಭಿವೃದ್ದಿಯಲ್ಲಿ ಸಂಘ ಸಂಸ್ಥೆಗಳ ಪಾತ’್ರ ಎಂಬ ವಿಷಯದಲ್ಲಿ ಅವರು ಮಾತನಾಡಿದರು. ದೇಶೀ ಹಸುವಿನ ಹಾಲು ಅದು ಅಮೃತ ಇದ್ದ ಹಾಗೆ. ಆದ್ದರಿಂದ ದೇಶಿ ಹಸುಗಳ ಸಂರಕ್ಷಣೆಯ ಜೊತೆಗೆ ಗೋವಿನ ಮಹತ್ವದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಸೈಗೊಳಿ: ಇತ್ತೀಚಿಗೆ ಫೇಸ್‍ಬುಕ್, ವಾಟ್ಸ್ ಆ್ಯಪ್ ಮುಂತಾದ ಸಾಮಾಜಿಕ ಜಾಲತಾಣಗಳ ಮೂಲಕ ಯುವಕರು ತಪ್ಪು ದಾರಿ ಹಿಡಿಯುವುತ್ತಿರುವ ಉದಾಹರಣೆ ಬಹಳಷ್ಟು ಇದೆ. ಆದರೆ ಕೆಲವೊಮ್ಮೆ ಇಂತಹ ಸಾಮಾಜಿಕ ಜಾಲತಾಣಗಳು ಸಮಾಜದಲ್ಲಿ ಕಷ್ಟದಲ್ಲಿರುವವರ ಕಣ್ಣೀರೊರೆಸುವ ಕೆಲಸಗಳಿಗೆ ಉಪಯೋಗವಾಗುತ್ತಿರುವುದನ್ನು ನಾವು ಕಾಣಬಹುದು. ಕಳೆದ ಕೆಲವು ದಿನಗಳ ಹಿಂದೆ ಬೈಕ್ ಅಪಘಾತವಾಗಿ ಆಸ್ಪತ್ರೆಯಲ್ಲಿ ಗಂಭೀರವಾಗಿದ್ದ ಬಡ ಕುಟುಂಬದ ಯುವಕನಿಗೆ ಹತ್ತಾರು ಯುವಕರು ಸೇರಿಕೊಂಡು ರಚಿಸಿದ್ದ ವಾಟ್ಸ್ ಆ್ಯಪ್ ಬಳಗವೊಂದು ಮಾನವೀಯತೆಯ ನೆಲೆಯಲ್ಲಿ ಆತನ ನೆರವಿಗೆ ನಿಂತು ಆರ್ಥಿಕ ಸಹಾಯ ಮಾಡಿದೆ. ಅಸೈಗೊಳಿಯ ಫರ್ನಿಚರ್ ಅಂಗಡಿಯೊಂದರಲ್ಲಿ ಮರದ ಕೆಲಸ ಮಾಡಿಕೊಂಡಿದ್ದ ಪಾವೂರಿನ ದೀಕ್ಷಿತ್ ಎಂಬ ಯುವಕ ಇತ್ತೀಚೆಗೆ ಬೈಕ್ ಅವಘಡ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿದ್ದ. ಅಪಘಾತದಲ್ಲಿ ತಲೆಯ ಭಾಗಕ್ಕೆ ಬಲವಾದ ಏಟು ಬಿದ್ದು ಗಂಭೀರ ಗಾಯವಾಗಿತ್ತು. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದೀಕ್ಷಿತ್‍ನನ್ನು ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೊಲಸೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಹಣ ಕಟ್ಟಲು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಹಾರ್ಡ್‍ವೇರ್ ಅಂಗಡಿ ಮಾಲೀಕನಿಗೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಮುಡಿಪು ಕೈರಂಗಳದ ನವಾಝ್ (28) ಬಂಧಿತ. ಫೆ.23 ರಂದು ಮುಡಿಪು ಪೇಟೆಯಲ್ಲಿ ಅರಫಾ ಹಾರ್ಡ್‍ವೇರ್ ಅಂಗಡಿ ಮಾಲೀಕರಾದ ಮಹಮ್ಮದ್ ಹನೀಫ್ ಎಂಬವರಿಗೆ ತಲೆಗೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ್ದರು. ಕೃತ್ಯ ಎಸಗಿದ ತಂಡದಲ್ಲಿ ನವಾಝ್ ಮತ್ತು ಆತನ ಸಹಚರರು ಭಾಗಿಯಾಗಿದ್ದರು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದ ಕೊಣಾಜೆ ಪೊಲೀಸರು ಪ್ರಮುಖ ಆರೋಪಿ ನವಾಜ್ ನನ್ನು ಬಂಧಿಸಿ, ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳ ಅಪಹರಣಕಾರ: ಆರೋಪಿ ನವಾಝ್ ರಾಜ್ಯಾದ್ಯಂತ ಸುದ್ಧಿ ಗಳಿಸಿದ್ದ ದೇರಳಕಟ್ಟೆ ವೈದ್ಯ ವಿದ್ಯಾರ್ಥಿ-ವಿದ್ಯಾರ್ಥಿನಿ ಅಪಹರಣ ನಡೆಸಿ ಲೈಂಗಿಕ ಶೋಷಣೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಜೈಲಿನಿಂದ ಬಿಡುಗಡೆಗೊಂಡ ಈತ ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದಾನೆ. ಈ ಹಿಂದೆ ಮುಡಿಪುವಿನಲ್ಲಿ ನಡೆದ ಗಲಭೆ ಪ್ರಕರಣದಲ್ಲಿಯೂ ಆರೋಪಿಯಾಗಿದ್ದಾನೆ. ಪೊಲೀಸ್ ಆಯುಕ್ರ ಚಂದ್ರಶೇಖರ್, ಡಿಸಿಪಿಗಳಾದ ಶಾಂತರಾಜು…

Read More

ವಜ್ರ ಗುಜರನ್, ಮಾಡೂರು ಉಳ್ಳಾಲ: ಅಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನಗಳು ಹೋಗುವುದೇ ಕಷ್ಟದಾಯಕ. ಆದರೆ ವಿಳಂಬವಾದರೂ ಕುಂದಾಪುರ -ತಲಪಾಡಿ ಹೆದ್ದಾರಿ ಅಗಲೀಕರಣ ಕಾಮಗಾರಿಯ ಕೊನೆ ಹಂತದಲ್ಲಿ ಅತಿ ಉದ್ದನೆಯ ನೂತನ ನೇತ್ರಾವತಿ ಸೇತುವೆ ಕೆಲಸ ಪೂರ್ಣಗೊಂಡು ಇದೀಗ ಸುಗಮ ಸಂಚಾರಕ್ಕೆ ಯೋಗ್ಯವಾಗಿದೆ. ಆದರೆ ರಾತ್ರಿ ಸಮಯದಲ್ಲಿ ಹಳೇಯ ಮತ್ತು ನೂತನ ಸೇತುವೆಯುದ್ದಕ್ಕೂ ದಾರಿದೀಪಗಳು ಇಲ್ಲದೇ ಇರುವುದರಿಂದ ದುರ್ಘಟನೆಗಳು ಸಂಭವಿಸುವ ಭೀತಿಯ ವಾತಾವರಣ ವಾಹನ ಸವಾರರಲ್ಲಿ ಹಾಗೂ ಪಾದಚಾರಿಗಳಲ್ಲಿ ಮನೆ ಮಾಡಿದೆ. ಬ್ರಿಟೀಷ್ ಕಾಲದಿಂದ ಹಳೇಯ ಸೇತುವೆ ಆರಂಭಗೊಂಡಿದೆ. ಅದರ ದಾರಿಯುದ್ಧಕ್ಕೂ ಒಂದು ಸಮಯದಲ್ಲಿ ಸೋಡಿಯಂ ದಾರಿದೀಪಗಳನ್ನು ಅಳವಡಿಸಲಾಗಿತ್ತು. ಆದರೆ ನೂತನ ಸೇತುವೆ ಶುಭಾರಂಭಗೊಂಡ ನಂತರದ ದಿನಗಳಲ್ಲಿ ಒಂದು ಕಿ.ಮೀ ಅಂತರದ ಎರಡು ಸೇತುವೆಯೂ ರಾತ್ರಿ ಸಂದರ್ಭ ಕಗ್ಗತ್ತಲಲ್ಲಿ ಮುಳುಗುತ್ತಿದೆ. ಪಾದಚಾರಿಗಳಲ್ಲಿ ಭೀತಿ : ಹಳೇಯ ಸೇತುವೆಯಲ್ಲಿ ಪಾದಚಾರಿಗಳಿಗೆ ಹೋಗಲು ಫುಟ್‍ಪಾತ್ ಇದೆ. ಅದರಲ್ಲಿ ನಸುಕಿನ ಜಾವ ಮತ್ತು ಸಂಜೆ ವೇಳೆ ವಾಕಿಂಗ್ ಮತ್ತು ಪಾದಚಾರಿಗಳು ಹೋಗುವವರಿದ್ದಾರೆ. ಆದರೆ ದಾರಿದೀಪಗಳು ಇಲ್ಲದೇ…

Read More

ಉಳ್ಳಾಲ್  ನ್ಯೂಸ್ ನೆಟ್ ವರ್ಕ್ ಕೊಣಾಜೆ: ರಿಕ್ಷಾದಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಂಜನಾಡಿಯ ಉರುಮನೆ ಎಂಬಲ್ಲಿಂದ ಮಂಗಳವಾರ ಬಂಧಿಸಿ ಸುಮಾರು 450 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮಂಜನಾಡಿ ನೆತ್ತಿಲಪದವು ನಿವಾಸಿ ಆತಿಂ(28) ಬಂಧಿತ. ಮಂಜನಾಡಿ ಕಡೆಯಿಂದ ರಿಕ್ಷಾದಲ್ಲಿ ಗಾಂಜಾ ಸಾಗಾಟ ನಡೆಸುತ್ತಿರುವ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ ರಿಕ್ಷಾ , 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕೊಣಾಜೆ ಠಾಣಾಧಿಕಾರಿ ಅಶೋಕ್ ಮತ್ತು ಪಿಎಸ್‍ಐ ಸುಧಾಕರ್ ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More