Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು: ಯುವಜನತೆ ಶಕ್ತಿಯನ್ನು ಧನಾತ್ಮಕ ಚಿಂತನೆಗಳಿಗೆ ಉಪಯೋಗಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕುತ್ತಾರು ಬಾಲಸಂರಕ್ಷಣಾ ಕೇಂದ್ರದ ಸಂಚಾಲಕ ಡಾ.ಪಿ.ಅನಂತಕೃಷ್ಣ ಭಟ್ ಅಭಿಪ್ರಾಯಪಟ್ಟರು. ಅವರು ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ಪಜೀರು ಬೀಜಗುರಿಯ ಗೋವನಿತಾಶ್ರಯ ಟ್ರಸ್ಟಿನ 16 ನೇ ವರ್ಷಾಚರಣೆ ಜ್ಯೋತಿಷ್ಯಜ್ಞರ-ವೈದಿಕರ ಸಮಾವೇಶ ಹಾಗೂ ಚತುರ್ಥ ಗೋಶಾಲಾ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಹಿಂದು ಸಂಸ್ಕøತಿ ಉಳಿವಿಗಾಗಿ ಯುವಜನತೆ ಧನಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುಂದೆ ಸಾಗಬೇಕಿದೆ. ಈ ಮೂಲಕ ಹಿಂದು ಸಮಾಜದ ಆಚಾರ ವಿಚಾರ ಹಾಗೂ ಸೊತ್ತುಗಳನ್ನು ಭದ್ರವಾಗಿಸಿಕೊಳ್ಳಬಹುದು ಎಂದರು. ವಿಶ್ವ ಹಿಂದು ಪರಿಷತ್ ಪ್ರಾಯೋಜಿತ ಸಂಸ್ಥೆ ಮಂಗಳೂರು ಗೋವನಿತಾಶ್ರಯ ಟ್ರಸ್ಟ್‍ನ ಪಜೀರು ಬೀಜಗುರಿ ಗೋಶಾಲಾ ವಠಾರದಲ್ಲಿ ಮಾ.5,6 ರಂದು 16 ನೇ ನಡೆಯಲಿರುವ ವರ್ಷಾಚರಣೆಯ ಮಾಹಿತಿ ನೀಡಿದರು. . ನಿವೃತ್ತ ಸೇನಾನಿ ಅಪ್ಪು ಶೆಟ್ಟಿ, ನಿವೃತ್ತ ಸೇನಾನಿ ಪ್ರವೀಣ್ ಶೆಟ್ಟಿ ಪಿಲಾರ್, ವಿಶ್ವ ಹಿಂದುಪರಿಷತ್ ಉಳ್ಳಾಲ ಪ್ರಖಂಡದ ಅಧ್ಯಕ್ಷ ಹರಿದಾಸ್ ಮಾಡೂರು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ದೇರಳಕಟ್ಟೆ ರೋಟರಿ ಕ್ಲಬ್ ಮತ್ತು ಕೆಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವತಿಯಿಂದ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ಭಾನುವಾರ ನಡೆಯಿತು. ರೋಟರಿಕ್ಲಬ್ ನಿರ್ದೇಶಕರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಮ್ಮ ದೇಶದಲ್ಲಿ ಪೋಲಿಯೋ ನಿರ್ಮೂಲನಾ ಹಂತದಲ್ಲಿದ್ದರೂ ನೆರೆ ರಾಷ್ಟ್ರದಿಂದ ನಮ್ಮಲ್ಲಿಗೆ ಹರಡದಂತೆ ಮುನ್ನಚ್ಚೆರಿಕೆ ಕ್ರಮವಾಗಿ ನಮ್ಮಲ್ಲಿ ಲಸಿಕೆ ಹಾಕಲಾಗುವುದು. ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿಯ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ದೊಡ್ಡ ಬಸವ, ರೋಟರಿ ಕ್ಲಬ್ ದೇರಳಕಟ್ಟೆ ಅಧ್ಯಕ್ಷ ಡಿ.ಎನ್. ರಾಘವ, ನಿಯೋಜಿತ ಅಧ್ಯಕ್ಷ ಎನ್. ಟಿ. ರಾಮಕೃಷ್ಣ, ಕಾರ್ಯದರ್ಶಿ ಚಂದ್ರಶೇಖರ್ ಮತ್ತು ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ದೇಶದ ಭವಿಷ್ಯವನ್ನು ನಿರ್ಧರಿಸುವಲ್ಲಿ ವಿದ್ಯಾರ್ಥಿ ಸಮೂಹ ನಮ್ಮ ಆಸ್ತಿಯಾಗಿದ್ದು ಅವರಿಂದಲೇ ನಡೆಯುವ ಜಾಗೃತಿ ಕಾರ್ಯಕ್ರಮಗಳು ಸಮಾಜವನ್ನು ಪರಿವರ್ತಿಸುವುದರಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ ಎಂದು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಡಾ. ಎಂ.ಎಸ್. ಮೂಡಿತ್ತಾಯ ಅಭಿಪ್ರಾಯಪಟ್ಟರು. ದೇರಳಕಟ್ಟೆಯ ಯೇನೆಪೋಯ ವಿಶ್ವವಿದ್ಯಾಲಯದ ಯೆನ್‍ಡ್ಯೂರೆನ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಸರ್ವೋ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಜಾಗತೀಕರಣದ ಪ್ರಭಾವದಿಂದ ತಂತ್ರe್ಞÁನ್ ಬಹಳಷ್ಟು ಮುಂದುವರಿದಿದ್ದರೂ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಸಾಂಸ್ಕ ೃತಿಕ ಹಾಗೂ ಬಹುಮುಖ್ಯವಾಗಿ ಆರೋಗ್ಯ ಕ್ಷೇತ್ರದಲ್ಲಿ ಅಭದ್ರತೆ ಕಾಡುತ್ತಿದೆ. ಸುಭದ್ರ ಸ್ವಾಸ್ಥ ್ಯ ಸಮಾಜಕ್ಕೆ ಆರೋಗ್ಯವೂ ಮುಖ್ಯ. ಆ ನಿಟ್ಟಿನಲ್ಲಿ ಆರೋಗ್ಯದ ಕುರಿತಾದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು. ಯೇನೆಪೋಯ ಸಮೂಹ ಸಂಸ್ಥೆಗಳ ಅಧ್ಯಕ್ಷ ವೈ. ಮಹಮ್ಮದ್ ಕುಂಞ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಕೇಬಲ್ ಆಪರೇಟರ್‍ಗೆ ವಿದ್ಯುತ್ ತಗಲಿ ತಂತಿಯಿಂದ ಕೆಳಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ತೊಕ್ಕೊಟ್ಟು ಕೃಷ್ಣನಗರ ನಿವಾಸಿ ನಿಶಾಂತ್ (23) ಗಾಯಾಳು. ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಿರುವ ವಿದ್ಯುತ್ ತಂತಿಗೆ ಹತ್ತಿ ಕೇಬಲ್ ಕಟ್ಟುತ್ತಿದ್ದ ಸಂದರ್ಭ ಹೈಟೆನ್ಶನ್ ನಲ್ಲಿದ್ದ ವಿದ್ಯುತ್ ಪ್ರವಹಿಸಿ ನಿಶಾಂತ್ ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡರು. ಕೂಡಲೇ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು: ಕೈಬೆರಳುಗಳೆಲ್ಲಾ ಸವೆಯುತ್ತದೆ, ಹಸಿವು ಆದರೂ ತಿನ್ನಲು ಆಗುವುದಿಲ್ಲ, ಜನರ ಕಣ್ಣಲ್ಲಿ ಅದು ಸ್ವರ್ಗ ಅನಿಸಿದರೂ ನಮ್ಮ ಪಾಲಿಗೆ ಅದು ಅಕ್ಷರಶ: ನರಕ.ಇದು ಇತ್ತೀಚೆಗೆ ಸಿಯಾಚೀನ್ ನಲ್ಲಿ ಮಂಜಿನಡಿ ಸಿಲುಕಿ ಮೃತಪಟ್ಟ ಯೋಧರಿಗೆ ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ಭಾನುವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾಜಿ ಯೋಧರೊಬ್ಬರು ಹಂಚಿಕೊಂಡ ಅನುಭವದ ಮಾತು. ಇದು ಮಾಜಿ ಯೋಧ ಪಿಲಾರು ಪ್ರವೀಣ್ ಶೆಟ್ಟಿ ಅವರು 2003 ರಲ್ಲಿ ಭೂಸೇನೆಯಲ್ಲಿದ್ದ ವೇಳೆ ಸಿಯಾಚಿನ್‍ನಲ್ಲಿ ತಿಂಗಳುಗಳ ಕಾಲ ನಡೆಸಿದ ಕರ್ತವ್ಯದ ವೇಳೆ ಅನುಭವಿಸಿದ ಕ್ಷಣಗಳು. ಶೂನ್ಯ ತಾಪಮಾನದಲ್ಲಿ ಮಂಜಿನ ನಡುವಿನ ದಿನಗಳು, ಕೈ ಕಾಲುಗಳನ್ನು ಸವೆಸುತ್ತವೆ. ತಿಂಗಳ ಕಾಲ ಅಲ್ಲೇ ಇದ್ದು, ವಾತಾವರಣಕ್ಕೆ ಅನುಗುಣವಾದ ಕ್ರಮಗಳನ್ನು ಕೈಗೊಂಡದೇ ಇದ್ದಲ್ಲಿ ಅಡ್ಡ ಪರಿಣಾಮಗಳು ಆಗುತಿತ್ತು. ಅಲ್ಲಿ ತಿನ್ನುವಂತಹ ಹಣ್ಣುಗಳು ಬೆಳೆದರೂ ಹಸಿವಾದಾರೂ ತಿನ್ನಲು ಆಗುತ್ತಿರಲಿಲ್ಲ. ವಿರೋಧಿಗಳ ಜತೆ ಯುದ್ಧ ಮಾಡಲು ಇರದಿದ್ದರೂ, ಚೀನಾ ದೇಶದ ವಿರೋಧಿಗಳ ಚಲನ ವಲನಗಳ ಬಗ್ಗೆ ನಿಗಾ ಇಡುವುದು ಸಿಯಾಚಿನ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಮಕ್ಕಳ ಹೆರಿಗೆ ವಿಚಾರದಲ್ಲಿ ವಿಶೇಷ ಕಾರ್ಯಕ್ರಮವನ್ನು ಕಣಚೂರು ಆಸ್ಪತ್ರೆ ಹಮ್ಮಿಕೊಂಡಿದ್ದು, ಕಣಚೂರು ಶಿಶು ಭವಿಷ್ಯ ನಿಧಿಯನ್ನು ಆಸ್ಪತ್ರೆಯಲ್ಲಿ ಹೆರಿಗೆಯಾದ ತಾಯಂದಿರಿಗೆ ನೀಡಲಾಗುವುದು ಎಂದು ಕಣಚೂರು ಆಸ್ಪತ್ರೆಯ ನಿರ್ದೇಶಕ ಅಬ್ದುಲ್ ರಹಿಮಾನ್ ಅಭಿಪ್ರಾಯಪಟ್ಟರು. ರೆಂಜಾಡಿಯ ಎಸ್ ಎಸ್ ಎಫ್ ಬೆಳ್ಮ ಶಾಖೆ ಮತ್ತು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಭಾನುವಾರ ರೆಂಜಾಡಿ ಶಾಲಾ ವಠಾರದಲ್ಲಿ ಜರಗಿದ 21ನೇ ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಉಚಿತ ಆರೋಗ್ಯ ಶಿಬಿರದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಣಚೂರು ಆಸ್ಪತ್ರೆ ಕಳೆದ ಹಲವು ಸಮಯದಿಂದ ಸ್ಕ್ಯಾನಿಂಗ್ ನಿಂದ ಹಿಡಿದು ಉಚಿತ ಶುಶ್ರೂಷೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಾರ್ಚ್ ತಿಂಗಳವರೆಗೆ ಕಾರ್ಯಕ್ರಮ ಇರುವುದರಿಂದ ಎಲ್ಲರೂ ಇದನ್ನು ವಿನಿಯೋಗಿಸಬೇಕು ಎಂದರು. ಬೆಳ್ಮ ಕೇಂದ್ರ ಮಸೀದಿಯ ಪಿ.ಎ.ಉಸ್ಮಾನ್ ಮದನಿ ದುಆ ನೆರವೇರಿಸಿದರು. ಕಣಚೂರು ಆಸ್ಪತ್ರೆ ಚೇರ್ ಮೆನ್ ಯು.ಕಣಚೂರು ಮೋನು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸತೀಶ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೆ.ಸಿರೋಡು: ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಸಹಾಯ ಮಾಡುವಂತಹ ಮನೋಭಾವ ಹುಟ್ಟಿಕೊಂಡಾಗ ಜೀವನ ಅರ್ಥಪೂರ್ಣವಾಗುತ್ತದೆ. ತೀಯ ಸಮಾಜದಿಂದ ನಡೆದಿರುವ ಕಾರ್ಯಕ್ರಮ ಸಮಾಜಕ್ಕೆ ಮಾರ್ಗದರ್ಶನ ನೀಡಿದಂತಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ತೀಯ ಸಮಾಜ ಉಳ್ಳಾಲ ವಲಯದ ಪದಾಧಿಕಾರಿಗಳು ಹಾಗೂ ದಾನಿಗಳ ನೆರವಿನಿಂದ ರೂ.ನಾಲ್ಕು ಲಕ್ಷ ವೆಚ್ಚದಲ್ಲಿ ತಲಪಾಡಿ ಕೆ.ಸಿರೋಡು ಸಮೀಪದ ಕಾಟುಂಗರೆಗುಡ್ಡೆಯಲ್ಲಿ ಆರ್ಥಿಕವಾಗಿ ಹಿಂದುಳಿದ ದೇವಕಿ ಬೆಳ್ಚಾಡ್ತಿ ಅವರಿಗೆ ನಿರ್ಮಿಸಿದ ಮನೆಯ ಗೃಹಪ್ರವೇಶ ಮತ್ತು ಕೀಲಿ ಕೈ ಹಸ್ತಾಂತರ ಸಮಾರಂಭದಲ್ಲಿ ಭಾನುವಾರ ಭಾಗವಹಿಸಿ ಮಾತನಾಡಿದರು. ಒಬ್ಬರು ಇನ್ನೊಬ್ಬರ ಕಷ್ಟದಲ್ಲಿ ಫಾಲ್ಗೊಳ್ಳುವುದು ಸಮಾಜಕ್ಕೆ ಪೂರಕ ಹಾಗೂ ಮಾರ್ಗದರ್ಶನ ನೀಡುವ ಕಾರ್ಯಕ್ರಮವಾಗಿದೆ. ಈ ನಿಟ್ಟಿನಲ್ಲಿ ಉಳ್ಳಾಲ ವಲಯದ ತೀಯ ಸಮಾಜದ ಕಾರ್ಯ ಶ್ಲಾಘನೀಯವಾದುದು ಎಂದರು. ಭಾರತೀಯ ತೀಯ ಸಮಾಜದ ಅಧ್ಯಕ್ಷ ಸದಾಶಿವ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ದಾಮೋದರ್ ಉಳ್ಳಾಲ್ , ರಾಘವ ಗುರಿಕಾರ, ಚಂದ್ರಕಾಂತ್, ಅಬೂಬಕರ್ ಹಾಜಿ, ರವೀಂದ್ರ ಉಳ್ಳಾಲ್, ಸತೀಶ್ ಕುಂಪಲ, ಸುರೇಶ ಭಟ್ನಗರ ಮೊದಲಾದವರು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ:ಶ್ರೀ ನಾಗಬ್ರಹ್ಮ ಭಜನಾ ಮಂಡಳಿ ಪಟ್ಟೋರಿ(ರಿ) ಕೊಣಾಜೆ ಇದರ ವಾರ್ಷಿಕ ಮಹಾಸಭೆಯು ಶ್ರೀ ನಾಗಬ್ರಹ್ಮ ಉಳ್ಳಾಲ್ತಿ ದೈವಸ್ಥಾನದಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ 2016-17ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಗಂಗಾಧರ ಎಂ. ಪಟ್ಟೋರಿ ಹಾಗೂ ಪ್ರದಾನ ಕಾರ್ಯದರ್ಶಿಯಾಗಿ ಮೋಹನ ಕಾಟುಕೋಡಿ ಅವರು ಆಯ್ಕೆಯಾದರು. ಗೌರವ ಅಧ್ಯಕ್ಷರಾಗಿ ಸತ್ಯನಾರಾಯಣ ಭಟ್ ಕೊಣಾಜೆ, ರಘುರಾಮ ಕಾಜವ ಪಟ್ಟೋರಿ, ಗೌರವ ಸಲಹೆಗಾರರಾಗಿ ಬಂಟು ಕೆ, ಕರುಣಾಕರ ಕಾನ, ಶ್ರೀನಿವಾಸ ಕಾಜವ, ದಿವಾಕರ ಭಂಡಾರಿ, ರಾಮಕೃಷ್ಣ ಪಟ್ಟೋರಿ, ಉಪಾಧ್ಯಕ್ಷರಾಗಿ ಸದಾಶಿವ ಪಟ್ಟೋರಿ, ಹರೀಶ್ ನಡುಪದವು, ಜೊತೆಕಾರ್ಯದರ್ಶಿಗಳಾಗಿ ರಾಕೇಶ್ ಪಟ್ಟೋರಿ, ಯತೀನ್ ಮದಕ, ಕೋಶಾಧಿಕಾರಿಯಾಗಿ ರಾಧಾಕೃಷ್ಣ ಕಲಾಯಿ, ಸಂಘಟನಾ ಕಾರ್ಯದರ್ಶಿಗಳಾಗಿ ಸಂತೋಷ್ ಪಟ್ಟೋರಿ, ನವೀನ್ ಪಟ್ಟೋರಿ, ಲೆಕ್ಕ ಪರಿಶೋಧಕರಾಗಿ ಬಂಟು ಕೆ.ಕಾಟುಕೋಡಿ, ಮಾಧ್ಯಮ ಸಲಹೆಗಾರರಾಗಿ ಸತೀಶ್, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಮೋಹನ್ ಶಿರ್ಲಾಲ್ ಆಯ್ಕೆಯಾದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಇಸ್ಲಾಂ ಎಂದರೆ ಶಾಂತಿಯಂದರ್ಥ. ಅಶಾಂತಿಗೆ ಇಸ್ಲಾಂ ಪ್ರೋತ್ಸಾಹ ನೀಡುವುದಿಲ್ಲ. ಶಾಂತಿ ಸೌಹಾರ್ದತೆಯಿಂದ ಬದುಕು ನಮ್ಮದಾಗಬೇಕು ಎಂದು ಮೂಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಹೇಳಿದರು. ಅವರು ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ವತಿಯಿಂದ ಭಯೋತ್ಪಾದನೆ ವಿರುದ್ಧ ಜಿಹಾದ್ ಜನಾಂದೋಲನ ಕಾಲ್ನಾಡಿಗೆ ಜಾಥಾದ ಧ್ವಜ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಭಯೋತ್ಪಾದನೆ, ಉಗ್ರವಾದ ಇಸ್ಲಾಂ ವಿರೋಧಿ ಚಟುವಟಿಕೆಯಾಗಿದೆ. ಭಯೋತ್ಪಾದನೆಯನ್ನು ಎಲ್ಲಿಯೋ ಕಲಿಸಿಕೊಡಲಾಗುವುದಿಲ್ಲ. ಆದರೆ ನಿರ್ದಿಷ್ಟ ಸಂಘಟನೆಗಳು ಮುಸ್ಲಿಮರನ್ನು ಭಯೋತ್ಪಾದಕರ ದೃಷ್ಟಿಯಲ್ಲಿ ನೊಡುತ್ತಿರುವುದು ಖೇದಕೆ ಎಂದರು. ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಮಜೀದ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದರು. ದ.ಕ ಜಿಲ್ಲಾ ಎಸ್ಸೆಸ್ಸೆಫ್ ಉಪಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ ಸಂದೇಶ ಭಾಷಣ ಮಾಡಿದರು. ಮಾಜಿ. ತಾ.ಪಂ ಸದಸ್ಯ ಮುಹಮ್ಮದ್ ಮುಸ್ತಫ ಮಲಾರ್, ಎಸ್ಸೆಸ್ಸೆಫ್ ಕೊಣಜೆ ಸೆಕ್ಟರ್ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಮದನಿ, ಸುನ್ನಿ ಸಂಯುಕ್ತ ಜಮಾಅತ್ ಅಧ್ಯಕ್ಷ ಬಿ. ಖಾಲಿದ್, ಎಸ್.ಎಂ.ಎ ದೇರಳಕಟ್ಟೆ ಶಾಖಾಧ್ಯಕ್ಷ ಅಬ್ದುರ್ರಝಾಕ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಮಕ್ಕಳ ದೇಹ ಬೆಳವಣಿಗೆಯಾಗಬೇಕು ಎಂಬ ಆಸೆ ಎಲ್ಲಾ ತಾಯಂದಿರದ್ದು ಅದರೆ ಬೆಳವಣಿಗೆ ಜಾಸ್ತಿಯಾದರೆ ಯಾವ ಯಾವ ರೋಗಗಳು ಎದುರಾಗಬಹುದು ಎನ್ನುವುದನ್ನು ಯಾರೂ ಕೂಡಾ ಚಿಂತಿಸುವುದಿಲ್ಲ. ನಮ್ಮ ಊರಿನ ಸಂಘ ಸಂಸ್ಥೆಗಳು ಇಂತಹ ಶಿಬಿರಗಳನ್ನು ನಡೆಸಿದರೆ ರೋಗ ಬರುವುದರ ಬಗ್ಗೆ ಮತ್ತಾವುದರ ಮುಂಜಾಗ್ರತೆಯ ಕುರಿತು ಮಾಹಿತಿ ನೀಡಿ, ರೋಗಿಗಳಿಗೆ ಔಷದಿ ವಿತರಣೆ ಮಾಡುವ ಮೂಲಕ ರೋಗಗಳನ್ನು ತಡೆಯಲು ಸಾಧ್ಯ ಎಂದು ರಾಜ್ಯ ಅರೋಗ್ಯ ಸಚಿವ ಯು.ಟಿ ಖಾದರ್ ಅಭಿಪ್ರಾಯಪಟ್ಟರು. ಅವರು ಎಸ್ಸೆಸ್ಸೆಫ್ ಬೆಳ್ಮ ರೆಂಜಾಡಿ ಶಾಖೆ 21ನೇ ವಾರ್ಷಿಕ ಪ್ರಯುಕ್ತ 21 ಕಾರ್ಯಕ್ರಮಗಳ ಪೈಕಿ 15ನೇ ಕಾರ್ಯಕ್ರಮವಾದ ಸಾರ್ವಜನಿಕ ಉಚಿತ ಆರೋಗ್ಯ ಶಿಬಿರವು ದೇರಳಕಟ್ಟೆ ಕಣಚೂರು ಅಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಣಚೂರು ಅಸ್ಪತ್ರೆ ಮತ್ತು ಸಂಶೋಧನಾ ಕೆಂದ್ರದ ನಿರ್ದೇಶಕ ಅಬ್ದುಲ್ ರಹಿಮಾನ್ ಮಾತನಾಡಿ ಈ ಶಿಬಿರದಲ್ಲಿ ಭಾಗವಹಿಸುವ ಎಲ್ಲಾ ರೋಗಿಗಳಿಗೆ ಫೆಬ್ರವರಿ 21ರಿಂದ ಮಾರ್ಚ್ 31ರ ತನಕ…

Read More