ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ಟೂರಿಸ್ಟ್ ವಾಹನ ಅಪಘಾತಕ್ಕೀಡಾಗಿ ವೃದ್ಧೆಯೊಬ್ಬರು ಮಗಳ ಎದುರಲ್ಲೇ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯದಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಕೊಲ್ಯ ಸಾರಸ್ವತಿಕುಮೇರು ನಿವಾಸಿ ದಿ. ಮೋಹನ್ ಪೂಜಾರಿ ಎಂಬವರ ಪತ್ನಿ ನಾಗಮ್ಮ (70) ಮೃತರು. ಒಂಭತ್ತುಕೆರೆಯಲ್ಲಿ ನಡೆಯುತ್ತಿದ್ದ ಸಂಬಂಧಿಕರ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಾಗಮ್ಮ ಮಗಳನ್ನು ಕಾಸರಗೋಡು ಕಡೆಗೆ ಬಿಡಲೆಂದು ಕೊಲ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ 66 ನ್ನು ದಾಟುವ ಸಂದರ್ಭ ಕೇರಳ ಕಡೆಯಿಂದ ಬರುತ್ತಿದ್ದ ಟೂರಿಸ್ಟ್ ವಾಹನ ಢಿಕ್ಕಿ ಹೊಡೆದು, ಅವರ ಮೇಲೆಯೇ ಚಲಿಸಿತ್ತು. ಪರಿಣಾಮ ನಾಗಮ್ಮ ಅವರ ದೇಹ ಛಿದ್ರಗೊಂಡು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಗಮ್ಮ ಅವರು ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಉಳ್ಳಾಲದ ಸಮ್ಮರ್ ಸ್ಯಾಂಡಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಸೀಮಂತ ಕಾರ್ಯಕ್ರಮಕ್ಕೆ ರಜೆಯನ್ನು ಪಡೆದಿದ್ದರು. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆ ದಾಟುವಾಗ ನಾಗಮ್ಮ ಅವರ ಮಗಳ ಕೈಯನ್ನೇ ಹಿಡಿದು ದಾಟುತ್ತಿದ್ದರು. ಆದರೆ ಅಪಘಾತವೂ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು: ಮುನ್ನೂರು ತಾಲೂಕು ಪಂಚಾಯಿತಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಿಪಿಎಂ ಅಭ್ಯರ್ಥಿಯಲ್ಲೇ ತಿಳಿಯದೆ ಮತಯಾಚಿಸಿದ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಬಳಿಕ ತಬ್ಬಿಬಾದ ಪ್ರಸಂಗ ಕುತ್ತಾರು ಪದವಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಸೋಮೇಶ್ವರ ಹಾಗೂ ಕೊಣಾಜೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಚುನಾವಣಾ ಕಾವು ಏರುತ್ತಿದ್ದಂತೆ ಅದಕ್ಕೆ ಮೆರುಗು ನೀಡಿ ಮತಯಾಚಿಸುವ ಸಲುವಾಗಿ ಪೂಜಾರಿ ಕುತ್ತಾರು ಜಂಕ್ಷನ್ ಹಾಗೂ ಬೆಳ್ಮ ತಾ.ಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸುವ ಸಂದರ್ಭ ಅದೇ ಪ್ರದೇಶದಲ್ಲಿ ಸಿಪಿಎಂ ಅಭ್ಯರ್ಥಿ ಹಾಗೂ ಹಾಲಿ ಮುನ್ನೂರು ಪಂಚಾಯಿತಿ ಸದಸ್ಯೆ ಶಶಿಕಲಾ ಅವರು ಮತಯಾಚಿಸುತ್ತಿದ್ದರು. ಈ ವೇಳೆ ಪೂಜಾರಿ ಅವರು ಎದುರಾದಾಗ ಶಶಿಕಲಾ ಅವರ ಕೈಗೂ ಭಿತ್ತಿಪತ್ರವನ್ನು ನೀಡಿ ` ಬಡವರ ಪಾಲಿನ ಪಕ್ಷ ಕಾಂಗ್ರೆಸ್, ಅದನ್ನು ಗೆಲ್ಲಿಸಿದರೆ ಮಾತ್ರ ನೀವು ಶಾಂತಿಯಿಂದ ಬದುಕಲು ಸಾಧ್ಯ. ಹಾಗೆ ಮಾತನ್ನು ಮುಂದುವರಿಸುತ್ತಿದ್ದಂತೆ ಶಶಿಕಲಾ ಅವರು ಅಭ್ಯರ್ಥಿ ಎಂದು ಹೇಳಲು ಮುಂದಾಗುವಾಗ `ಒಮ್ಮೆ ನಿಲ್ಲಿ’ ಎಂದು ಮಾತನ್ನು ನಿಲ್ಲಿಸುತ್ತಿದ್ದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು :ಜಿಲ್ಲೆಯ ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿಯವರು ನಡೆಸಿರುವ ಅಭಿವೃದ್ಧಿ ಹೀನ ಕೆಲಸಗಳಿಂದ , ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಜಯಭೇರಿ ಬಾರಿಸಲಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ಧುರೀಣ ಹಾಗೂ ಮಾಜಿ ಕೇಂದ್ರ ಸಚಿವ.ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ. ಸೋಮೇಶ್ವರ ಹಾಗೂ ಕೊಣಾಜೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಚುನಾವಣಾ ಕಾವು ಏರುತ್ತಿದ್ದಂತೆ ಅದಕ್ಕೆ ಮೆರುಗು ನೀಡಿ ಮತಯಾಚಿಸುವ ಸಲುವಾಗಿ ಪೂಜಾರಿ ಕುತ್ತಾರು ಜಂಕ್ಷನ್ ಹಾಗೂ ಬೆಳ್ಮ ತಾ.ಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸುವ ಸಂದರ್ಭ ಮಾತನಾಡಿದರು. ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಪಟಾಕಿ ಬಿಡುವ ಪರಿಸ್ಥಿಯಲ್ಲಿ ಯಾವ ಪಕ್ಷದವರೂ ಇಲ್ಲ. ಬಿಜೆಪಿಗೆ ಎರಡು ಹಿಂದೆ ಇದ್ದುದೇ ಸಿಕ್ಕಿದೆ. ಕಾಂಗ್ರೆಸ್ಗೂ ಅದೇ ಸಿಕ್ಕಿದೆ. ದಿಕ್ಸೂಚಿ ವಾತಾವರಣ ಕಾಣಿಸುತ್ತದೆ. ವಿಧಾನಸಭೆಯಲ್ಲಿ ಅದೇ ಕಾಂಗ್ರೆಸ್ನ ಸಂಖ್ಯೆ ಅಷ್ಟೇ ಇದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನ ಸರಕಾರವೇ ಬರುತ್ತದೆ. ಇದು ಸ್ಪಷ್ಟ. ಜನತಾದಳದ ಯಾವ ಅಭ್ಯರ್ಥಿಗಳು ಗೆಲುವು…
ಕೋಸ್ಟಲ್ ವುಡ್ ಸಿನೆಮಾ ರಂಗದಲ್ಲಿ ಇದೀಗ ಡಿಫರೆಂಟ್ ಕಥೆಗಳನ್ನಾಧರಿಸಿದ ಚಿತ್ರಗಳು ಬಿಡುಗಡೆಯಾಗುತ್ತಿದೆ. ಒಂದರ ಮೇಲೊಂದರಂತೆ ಸಾಲು ಸಾಲು ಚಿತ್ರಗಳು ಬೆಳ್ಳಿ ತೆರೆಯಮೇಲೆ ಬರುತ್ತಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದಕ್ಕೆ ಉತ್ತಮ ಉದಾಹರಣೆ ವಿಭಿನ್ನ ಕಥೆಯನ್ನಾಧರಿಸಿದ ಹೊಸ ಚಿತ್ರ. ತಮಗೆ ಆಶ್ರಯವಾದ ವಸ್ತುವನ್ನು ಉಳಿಸುವ ಸಲುವಾಗಿ, ಆಟವೊಂದರಲ್ಲಿ ಗೆದ್ದು ಹಣ ಸಂಪಾದಿಸುವುದು, ಆ ವೇಳೆ ನಡೆಯುವ ಹೋರಾಟ ಎಲ್ಲವೂ ಟೋಟಲಿ ಡಿಫರೆಂಟ್ ಆಗಿ ಮೂಡಿಬಂದಿರುವುದು ಇತ್ತೀಚೆಗೆ ತೆರೆಕಂಡ ಕುಡ್ಲಕೆಫೆ ಸಿನೆಮಾದಲ್ಲಿ ರಂಜನ್ ಶೆಟ್ಟಿ ಹಾಗೂ ಸೂರ್ಯಮೆನನ್ ನಿರ್ದೇಶನದಲ್ಲಿ ಮೂಡಿಬಂದಿರುವ ಕುಡ್ಲಕೆಫೆ ವಿನೂತನವಾದ ಕಥೆಯನ್ನು ಆಧರಿಸಿದೆ. ಕರಾವಳಿಯಾದ್ಯಂತ 13 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ಚಿತ್ರದ ಶಿರೋನಾಮಕ್ಕೂ ಚಿತ್ರದ ಕಥೆಗೆ ಏನು ಸಂಬಂಧ ಅನ್ನೋರು ಈ ಚಿತ್ರವನ್ನು ಒಮ್ಮೆ ನೋಡಲೇ ಬೇಕು. ಶಾಲಾ ದಿನಗಳಲ್ಲಿ ಒಂದಾಗಿ ಇರುತ್ತಿದ್ದ ಮೂವರು ಗೆಳೆಯರು. ತಮ್ಮ ಶಾಲಾ ದಿನಗಳಲ್ಲಿ ಸಮಯ ಕಳೆಯುತ್ತಿದ್ದ ನೆಚ್ಚಿನ ಅಡ್ಡ ಇನ್ನೇನು ಬೇರೆಯವರ ಪಾಲಾಗುತ್ತದೆ ಅನ್ನೋ ಸಂದರ್ಭದಲ್ಲಿ ಅದನ್ನು ಉಳಿಸಿಕೊಳ್ಳಲು ಸ್ನೇಹಿತರೆಲ್ಲ ಲಕ್ಷಾಂತರ ಹಣ ಒಟ್ಟುಗೂಡಿಸಲು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕಳೆದ ಒಂದು ದಶಕಗಳಿಂದ ನಾದುರಸ್ತಿಯಲ್ಲಿರುವ ರಸ್ತೆಯನ್ನು ದುರಸ್ತಿ ಪಡಿಸುವಂತೆ ಆಗ್ರಹಿಸಿ ನಾಗರಿಕರ ಬೇಡಿಕೆಯನ್ನು ಜನಪ್ರತಿನಿದಿಗಳು, ಸಚಿವರು ಕಡೆಗಣಿಸುತ್ತಿದ್ದು, ಇದರಿಂದ ಆಕ್ರೋಶಗೊಂಡ ನಾಗರಿಕರು ಅಡ್ಕರೆ ಪಡ್ಪು ನಾಗರಿಕ ಹಿತರಕ್ಷಣಾ ಸಮಿತಿಯ ಆಶ್ರಯದಲ್ಲಿ ಸೋಮವಾರ ರಾತ್ರಿಯೇ ಪ್ರತಿಭಟನೆ ನಡೆಸಿ ಚುನಾವಣಾ ಬಹಿಷ್ಕಾರ ಮಾಡಲು ನಿರ್ಧರಿಸಿದ ಘಟನೆ ದೇರಳಕಟ್ಟೆ ಸಮೀಪ ಅಡ್ಕರೆಪಡ್ಪುವಿನಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಕೊಣಾಜೆ ಗ್ರಾ.ಪಂ. ಮಾಜಿ ಸದಸ್ಯ ಉಸ್ಮಾನ್ ಅಡ್ಕರೆರವರು,ದೇರಳಕಟ್ಟೆಯಿಂದ ಬದ್ಯಾರ್, ಪ್ಯೊದೇಲ್, ಪೆಲತ್ತಡಿ, ಅಡ್ಕರೆ ಪಡ್ಪು ಮೂಲಕ ಕೊಣಾಜೆ ಕೊಣಾಜೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಒಂದು ದಶಕಗಳಿಂದ ಹದಗೆಟ್ಟು ಹೋಗಿದ್ದು, ಇದನ್ನು ದುರಸ್ತಿ ಮಾಡಲು ಸಂಬಂಧಪಟ್ಟ ಜನಪ್ರತಿನಿಧಿಗಳು ಹಿಂದೇಟು ಹಾಕುತ್ತಿದ್ದಾರೆ. ಕೇವಲ ಭರವಸೆಗಳ ಮಾತುಗಳ ಮೂಲಕ ಇಲ್ಲಿನ ಜನರನ್ನು ವಂಚಿಸುವ ಕಾರ್ಯವನ್ನು ಇಲ್ಲಿನ ರಾಜಕಾರಣಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕೊಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳ ಪಡುವ ಅಡ್ಕರೆ ಪಡ್ಪು ಎಂಬ ಈ ಪ್ರದೇಶದಲ್ಲಿ ಶಾಲಾ ಕಾಲೇಜು, ಧಾರ್ಮಿಕ ಕೇಂದ್ರಗಳಿದ್ದು,…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ವಿದ್ಯಾರ್ಥಿಗಳಿಗೆ ಜಾತಿಯಿಲ್ಲ, ಸಮುದಾಯವೇ ಜಾತಿ. ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ ಜಾತೀ ರಹಿತ, ವರ್ಗ ರಹಿತವಾಗಿ ಎಲ್ಲಾ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಹೋರಾಡಬೇಕಾದ ಅಗತ್ಯ ಇದೆ ಮಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರಘು ಹೇಳಿದ್ದಾರೆ. ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಅಸಹಜ ಸಾವಿನ ಕುರಿತು ಉನ್ನತಮಟ್ಟದ ತನಿಖೆ ಹಾಗೂ ಹತ್ಯೆಗೆ ಕಾರಣರಾದವರನ್ನು ಬಂಧಿಸಲು ಒತ್ತಾಯಿಸಿ ಮತೀಯವಾದ ಅಳಿಯಲಿ, ಕ್ಯಾಂಪಸ್ ಡೆಮಾಕ್ರಸಿ ಉಳಿಯಲಿ ಎಂಬ ಧ್ಯೇಯ ವಾಕ್ಯದೊಂದಿಗೆ ರೋಹಿತ್ ವೇಮುಲ ಪರ ನ್ಯಾಯಕ್ಕಾಗಿ ಜಂಟಿ ಹೋರಾಟ ಸಮಿತಿಯ ವಿದ್ಯಾರ್ಥಿ, ಯುವಜನ, ಅಧ್ಯಾಪಕ ಮತ್ತು ಪ್ರಗತಿಪರ ಸಂಘಟನೆಗಳು ಕರೆ ನೀಡಿರುವ ರಾಜ್ಯವ್ಯಾಪಿ ವಿಶ್ವವಿದ್ಯಾಲಯ ಬಂದ್ನ ಅಂಗವಾಗಿ ಕೊಣಾಜೆ ವಿಶ್ವವಿದ್ಯಾಲಯದ ಮುಖ್ಯದ್ವಾರದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಮೇಲ್ಜಾತಿಗಳ ವಿದ್ಯಾರ್ಥಿಗಳಿಗೂ ಸಮಸ್ಯೆಗಳಾದಾಗ ಎಲ್ಲಾ ಜಾತಿಯವರು ವಿದ್ಯಾರ್ಥಿಗಳು ಸೇರಿ ಪ್ರತಿಭಟಿಸಬೇಕಾಗಿದೆ. ಈ ನಲೆಯಲ್ಲಿ ವಿಶ್ವವಿದ್ಯಾನಿಲಯ ಎಂಬ ಪರಿಕಲ್ಪನೆಯನ್ನು ಕಲ್ಪಿಸಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ರೋಹಿತ್ ವೇಮುಲ ಅವರ ಸಾವಿನ ಬಗೆಗಿನ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಲ್ಲಾಪು: `ಮಾನವ ತನಗಾಗಿ ಬದುಕದೆ, ಇತರರಿಗಾಗಿ ಬದುಕುವಂತಾಗಬೇಕು, ಮಾನವೀಯ ಸೇವೆಗೆ ಒಂದಲ್ಲ ಒಂದು ದಿನ ಪ್ರತಿಫಲ ನಿಶ್ಚಿತ’ ಹೀಗೆಂದು ಪ್ರತಿಪಾದಿಸಿದವರು ಆರೋಗ್ಯ ಸಚಿವ ಯು.ಟಿ.ಖಾದರ್. ಕಲ್ಲಾಪು ಸೇವಾ ಸಮಿತಿ ಆಶ್ರಯದಲ್ಲಿ ಕಲ್ಲಾಪು ಮೈದಾನದಲ್ಲಿ ಮಾಜಿ ಕೌನ್ಸಿಲರ್ ಉಸ್ಮಾನ್ ಕಲ್ಲಾಪು ನೇತೃತ್ವದಲ್ಲಿ ನಡೆದ ಬಡ ರೋಗಿಗಳಿಗೆ ಸಹಾಯಧನ ವಿತರಿಸಿ ಅವರು ಮಾತನಾಡಿದರು. ರೋಗಕ್ಕೆ ಶ್ರೀಮಂತ, ಬಡವ ಎನ್ನುವ ಭೇದವಿಲ್ಲ. ಎಪಿಎಲ್ ಕಾರ್ಡುದಾರರಿಗೆ ಕ್ಯಾನ್ಸರ್, ಕಿಡ್ನಿ ವೈಫಲ್ಯದಂತಹ ಮಾರಕ ರೋಗ ಬಂದಾಗ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಾಗ ಬಿಪಿಎಲ್ ಕಾರ್ಡುದಾರರಾಗಿ ಬದಲಾಗುವ ಸ್ಥಿತಿ ಇದೆ. ಇದನ್ನು ಮನಗಂಡು ಬಿಪಿಎಲ್ ಕಾರ್ಡುದಾರರಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆ ಸರ್ಕಾರ ಮಾಡಿದ್ದು ಮುಖ್ಯಮಂತ್ರಿ ಇದಕ್ಕಾಗಿ 350 ಕೋಟಿ ಹೆಚ್ಚುವರಿ ಅ ಅನುದಾನ ಬಿಡುಗಡೆಗೊಳಿಸಿದ್ದಾರೆ. ಬಿಪಿಎಲ್ ಕಾರ್ಡುದಾರರಿಗೂ ಈ ಯೋಜನೆ ಸಿಗಬೇಕು ಎನ್ನುವ ಚಿಂತನೆ ನಡೆದಿದ್ದು ಈ ಸಂಬಂಧ ಸರ್ಕಾರಿ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ ಎಂದು ಹೇಳಿದರು. 40 ವರ್ಷ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುರ್ನಾಡು: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರಚಾರ ಕಾರ್ಯವೂ ಬಿರುಸಿನಿಂದ ಸಾಗುತ್ತಿದ್ದು ಸೋಮವಾರ ಸಚಿವ ಯು.ಟಿ.ಖಾದರ್ ಅವರು ಕಾಂಗ್ರೆಸ್ನ ಇನ್ನಿತರ ಮುಖಂಡರುಗಳೊಂದಿಗೆ ಕುರ್ನಾಡು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು. ಕುರ್ನಾಡು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮುಡಿಪು, ಕೈರಂಗಳ, ನರಿಂಗಾನ, ಮೂಳೂರು, ಬಂಗಾರು ಗುಡ್ಡೆ, ತೌಡುಗೊಳಿ, ಮೋಂಟುಗೋಳಿ, ನೆತ್ತಿಲಪದವು ಇನ್ನಿತರ ಕಡೆಗಳಲ್ಲಿ ಮನೆಮನೆ ತೆರಳಿ ಮತಯಾಚನೆಗೈದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಶಾಂತ್ ಕಾಜವ, ಜಿಲ್ಲಾ ಪಂಚಾಯಿತಿ ಅಭ್ಯರ್ಥಿ ಮಮತಾ ಡಿ.ಎಸ್.ಗಟ್ಟಿ, ತಾಲೂಕು ಪಂಚಾಯಿತಿ ಅಭ್ಯರ್ಥಿ ಹೈದರ್ ಕೈರಂಗಳ, ಚುನಾವಣಾ ವೀಕ್ಷಕರಾದ ಅಪ್ಪಿ ಮಂಗಳೂರು, ಕಾಂಗ್ರೆಸ್ ಮುಖಂಡರುಗಳಾದ ಸುದೀರ್ ಟಿ.ಕೆ, ರಮಾನಂದ ಪೂಜಾರಿ, ಸಿದ್ದೀಕ್ ಪಾರೆ, ಇಸ್ಮಾಯಿಲ್ ಮೀನಂಕೋಡಿ, ಚಂದ್ರಹಾಸ್ ಮೋರ್ಲ, ಜಲೀಲ್ ಮೋಂಟುಗೋಳಿ, ಪದ್ಮನಾಭ ನರಿಂಗಾನ, ನಾಸೀರ್ ನಡುಪದವು ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಎರಡು ದಶಕಗಳ ಹಿಂದೆ ಡಾಮರೀಕರಣಗೊಂಡ ಕುತ್ತಾರು ಮದಕ, ಅಗೆಲ, ಕಂಪ, ಬೊಳ್ಯ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಇಲ್ಲಿನ ಸಾರ್ವಜಿನಿಕರು ಚುನಾವಣಾ ಬಹಿಷ್ಕಾರ ಮಾಡಿದರು. ಈ ಬಗ್ಗೆ ವರ್ಷಗಳ ಹಿಂದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಜನಪ್ರತಿನಿಧಿಗಳ ಗಮನಸೆಳೆದರೂ ಯಾವುದೆ ಪ್ರಯೋಜನ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಪ್ರತಿಭಟನೆ ನಡೆಸಿ ಚುನಾವಣಾ ಬಹಿಷ್ಕಾರ ನಡೆಸಿದರು. ಚುನಾವಣೆ ಸಂದರ್ಭದಲ್ಲಿ ವಿವಿಧ ರೀತಿಯ ಭರವಸೆಗಳನ್ನು ನೀಡಿ ಮತ ಸೆಳೆಯುವ ಪಕ್ಷಗಳು ಮತ್ತು ಅಭ್ಯರ್ಥಿಗಳು ಗೆದ್ದ ಬಳಿಕ ಭರವಸೆಗಳ ಪಟ್ಟಿಯನ್ನು ಮೂಲೆಗೆ ಸೇರಿಸಿ ಬಿಡುತ್ತಾರೆ. ಈ ರಸ್ತೆಗೆ ಡಾಮರೀಕರಣ ಮಾಡುತ್ತೇವೆ ಎಂದು ಭರವಸೆಯ ಮಾತು ಸಿಕ್ಕಿದೆ. ಅಭಿವೃದ್ದಿ ಮತ್ತು ಮೂಲಭೂತ ಸೌರ್ಕಯ ಇಲ್ಲದೆ ಈ ಪ್ರದೇಶದ ನಾಗರಿಕರು ಪರದಾಡುತ್ತಿದ್ದಾರೆ. 500ಕ್ಕೂ ಹೆಚ್ಚು ಮನೆಗಳಿದ್ದು ಎಲ್ಲರೂ ಈ ಬಾರಿ ನಡೆಯುವ ತಾ.ಪಂ. ಮತ್ತು ಜಿ.ಪಂ. ಚುನಾವಣೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ನಾಗರಿಕರು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಸಮುದ್ರಪಾಲಾದ ಹಾಸನ ಹುಣಸೀಕೆರೆಯ ಮಿರ್ಜಾ ಮೊಹಲ್ಲಾ ವಲ್ಲಭಬಾಯಿ ರಸ್ತೆಯ ನಾಲ್ವರು ಸ್ನೇಹಿತರ ಮೃತದೇಹ ಸೋಮವಾರ ಬೆಳಿಗ್ಗೆ ಮತ್ತು ಭಾನುವಾರ ತಡರಾತ್ರಿ ವೇಳೆ ಪತ್ತೆಯಾಗಿದೆ. ಭಾನುವಾರ ತಡರಾತ್ರಿ ವೇಳೆ ಸಯ್ಯದ್ ಖಲೀಲ್ (19) ಮೃತದೇಹ ಪತ್ತೆಯಾಗಿದ್ದರೆ, ಇಮ್ರಾನ್ ಪಾಷಾ(19), ಮಹಮ್ಮದ್ ಶಿಯಾಬ್ (19), ಮಹಮ್ಮದ್ ಹನೀಫ್(20) ಎಂಬವರ ಸೋಮೇಶ್ವರ ಸಮುದ್ರದಲ್ಲಿ ಜಲ ಸಮಾಧಿಯಾಗಿದ್ದರು. ಘಟನೆಯ ಬಳಿಕ ಸ್ಥಳೀಯ ಈಜುಗಾರರ ತಂಡ ಸೇರಿದಂತೆ ಅಗ್ನಿಶಾಮಕ ದಳ, ಕೋಸ್ಟ್ಗಾರ್ಡ್ನವರು ಹುಡುಕಾಟ ನಡೆಸಿದ್ದರು. ರವಿವಾರ ತಡರಾತ್ರಿ ಇಬ್ಬರ ಮೃತದೇಹ ಪತ್ತೆಯಾಗಿದ್ದು ರಾತ್ರಿಯೇ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಹಾಸನಕ್ಕೆ ಕಳುಹಿಸಿಕೊಡಲಾಗಿತ್ತು. ಸೋಮವಾರ ಬೆಳಗ್ಗೆ ಮತ್ತಿಬ್ಬರ ಮೃತದೇಹ ಪತ್ತೆಯಾಗಿದ್ದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷ ನಡೆಸಿ ಹೆತ್ತವರಿಗೆ ಬಿಟ್ಟುಕೊಡಲಾಯಿತು. ಸಮುದ್ರ ಪಾಲಾದ ನಾಲ್ವರು ಸೇರಿದಂತೆ ಆರು ಮಂದಿ ಸ್ನೇಹಿತರು ರವಿವಾರ ಹಾಸನದಿಂದ ಮೂರು ಬೈಕ್ಗಳಲ್ಲಿ ಹೊರಟು ಉಳ್ಳಾಲ ಸೈಯಿದ್ ಮದನಿ ದರ್ಗಾ ವೀಕ್ಷಣೆಗೆಂದು ಬಂದಿದ್ದರು. ಮಧ್ಯಾಹ್ನವಾದ್ದರಿಂದ ನೇರವಾಗಿ ಸೋಮೇಶ್ವರ…

