ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಇಲ್ಲಿಗೆ ಸಮೀಪದ ಇನ್ಫೋಸಿಸ್ ಬಳಿಯ ಪುಚ್ಚೆಕಟ್ಟೆ ಎಂಬಲ್ಲಿ ಕಳೆದ ಮೂರು ವರ್ಷದ ಹಿಂದೆ ಪತ್ತೆಯಾಗಿದ್ದ ಗುಹೆಯೊಂದು ಇದೀಗ ಭಾನುವಾರ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದಾಗ ಅದೇ ಗುಹೆಯೂ ಮತ್ತೊಂದು ಭಾಗದಿಂದ ಮತ್ತೆ ಪತ್ತೆಯಾಗಿ ಆತಂಕ ವ್ಯಕ್ತವಾಯಿತು. ಕಳೆದ ಮೂರು ವರ್ಷಗಳ ಹಿಂದೆ ಪೈಪ್ಲೈನ್ ಕಾಮಗಾರಿ ನಡೆಯುತ್ತಿದ್ದಾಗ ಮುಡಿಪುವಿನ ಪುಚ್ಚೆಕಟ್ಟೆ ಬಳಿ ಗುಹೆ ಪತ್ತೆಯಾಗಿತ್ತು. ಬಳಿಕಮುಚ್ಚಲಾಗಿತ್ತು. ಅಂದು ಪತ್ತೆಯಾದ ಗುಹೆಯ ಬಳಿಯೇ ಇದೀಗ ಮತ್ತೊಂದು ಭಾಗದಲ್ಲಿ ಇದೇ ಗುಹೆಯು ಮತ್ತೆ ಪ್ರತ್ಯಕ್ಷವಾಗಿದೆ. ಮುಡಿಪು ರಸ್ತೆಯ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಇನ್ಫೋಸಿಸ್ ಬಳಿಯ ಪುಚ್ಚೆಕಟ್ಟೆ ಬಳಿ ಜೆಸಿಬಿ ಯಂತ್ರದ ಮೂಲಕ ರಸ್ತೆ ಬದಿಯನ್ನು ಅಗೆಯುತ್ತಿದ್ದಾಗ ಗುಹೆ ಪತ್ತೆಯಾಗಿದೆ. ಇದರೊಳಗೆ ಇಳಿದ ಕೆಲವರು ಗುಹೆಯು ವಿಶಾಲವಾಗಿದ್ದು ಎರಡು ಕಡೆಗಳಲ್ಲಿ ಸುರಂಗ ಮಾರ್ಗದ ರೀತಿಯಲ್ಲಿ ಕಂಡು ಬರುತ್ತಿದೆ ಎಂದಿದ್ದಾರೆ. ಗುಹೆ ಪತ್ತೆಯಾದ ಸುದ್ದಿ ತಿಳಿದ ನಾಗರಿಕರು ಗುಹೆಯ ಬಳಿ ಜಮಾಯಿಸಿದಾಗ ಕೆಲ ಹೊತ್ತು ಇಲ್ಲಿ ರಸ್ತೆಸಂಚಾರ ಅಸ್ತವ್ಯಸ್ತವಾಗಿತ್ತು. ರಸ್ತೆ ಸಮೀಪವೇ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಳೇಕಲ : ಎಸ್ಸೆಸ್ಸೆಫ್ ರಾಜ್ಯ ಸಮಿತಿ ಘೋಷಿಸಿರುವ ಭಯೋತ್ಪಾದನೆ ವಿರುದ್ದ ಜನಾಂದೊಲನ ಜನವರಿ 30ರಿಂದ ಮಾರ್ಚ್ 20 ವರೆಗೆ ಇದರ ಪ್ರಯುಕ್ತ ಎಸ್ಸೆಸ್ಸೆಫ್ ಅಳೇಕಲ ಶಾಖೆಯ ವತಿಯಿಂದ ವಿದ್ಯಾರ್ಥಿಗಳಿಂದ ಸೈಕಲ್ ರ್ಯಾಲಿ ಶನಿವಾರ ಉಳ್ಳಾಲ ಅಳೇಕಲದಲ್ಲಿ ನಡೆಯಿತು. ಅಬೂಝಿಯಾದ್ ಮದನಿ ಪಟ್ಟಾಂಬಿರವರು ಅಳೇಕಲ ಹಝ್ರತ್ ಅಚ್ಚೆಸಾಹಿಬ್ ವಲಿಯುಲ್ಲಾಹಿ ದರ್ಗಾ ಝೀಯಾತ್ ನೆರವೇರಿಸಿ ಸೈಕಲ್ ರ್ಯಾಲಿಗೆ ಚಾಲನೆ ನೀಡಿದರು. ಎಸ್ಸೆಸ್ಸೆಫ್ ತೊಕ್ಕೋಟ್ಟು ಸೆಕ್ಟರ್ ಪ್ರ.ಕಾರ್ಯದರ್ಶಿ ಜಾಫರ್ ಯು.ಎಸ್, ಎಸ್ಸೆಸ್ಸೆಫ್ ಅಳೆಕಲ ಶಾಖೆಯ ಪ್ರ.ಕಾರ್ಯದರ್ಶಿ ಅರೀಫ್, ಸ್ಥಳಿಯರಾದ ಫಾರೂಕ್ ಯು.ಡಿ, ಇಬ್ರಾಹಿಂ ಯು.ಡಿ, ಅಶ್ರಫ್, ಲತೀಫ್, ರಿಯಾನ್, ಹನೀಫ್ ಮುಸ್ಲಿಯಾರ್, ಶಫೀಕ್, ನಾಫಿ, ಆಶಿಕ್, ಶಾಕಿರ್ ಮುಂತಾದವರು ಈ ಸಂದರ್ಭ ಉಪಸ್ಥಿತರಿದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸಮುದ್ರದಲ್ಲಿ ಸ್ನಾನಕ್ಕೆಂದು ಹಾಸನ ಮೂಲದ ಆರು ಮಂದಿ ಯುವಕರ ಪೈಕಿ ನಾಲ್ವರು ಸಮುದ್ರಪಾಲಾಗಿ ನಾಪತ್ತೆಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಭಾನುವಾರ ಸಂಜೆ ವೇಳೆ ನಡೆದಿದ್ದು, ನಾಲ್ವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರನ್ನು ಹಾಸನದ ಹುಣಸೀಕೆರೆ ರಸ್ತೆಯ ಮಿರ್ಜಾ ಮೊಹಲ್ಲಾ ನಿವಾಸಿಗಳಾದ ಇಕ್ಬಾಲ್ ಪಾಶಾ ಎಂಬವರ ಪುತ್ರ ಇಮ್ರಾನ್ ಪಾಶಾ(19) ಖಲಂದರ್ ಎಂಬವರ ಮಹಮ್ಮದ್ ಸಿಯಾಬ್(19), ಮಹಮ್ಮದ್ ಶಬೀರ್ ಎಂಬವರ ಪುತ್ರ ಮಹಮ್ಮದ್ ಹನೀಫ್ (20), ಮಹಮ್ಮದ್ ಫಿರೋಝ್ ಎಂಬವರ ಪುತ್ರ ಸೈಯ್ಯದ್ ಖಲೀಲ್ (19) ಗುರುತಿಸಲಾಗಿದೆ. ಬಶೀರ್ ಅಹಮ್ಮದ್ ಎಂಬವರ ಪುತ್ರ ಸಕಲೆಂ ಸಾಹಿಲ್ ಮತ್ತು ಮಹಮ್ಮದ್ ಫಾಝಿಲ್ ಪುತ್ರ ಸಾದಿಕ್ ಪಾಶಾ ಬದುಕುಳಿದವರಾಗಿದ್ದಾರೆ. ಹಾಸನದಿಂದ ಮೂರು ಬೈಕುಗಳಲ್ಲಿ ಉಳ್ಳಾಲ ದರ್ಗಾ ಸಂದರ್ಶನ ಮತ್ತು ಸಮುದ್ರ ವಿಹಾರಕ್ಕೆಂದು ಬಂದಿದ್ದ ಆರು ಜನರ ತಂಡ ದರ್ಗಾ ಹೋಗುವ ಮುನ್ನ ಸೋಮೇಶ್ವರ ಸಮುದ್ರ ತೀರಕ್ಕೆ ಮಧ್ಯಾಹ್ನ 1.30ರ ಹೊತ್ತಿಗೆ ಆಗಮಿಸಿದ್ದರು. 2.30ರ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ದಿನಕಳೆದಂತೆ ಅಪಘಾತ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಚಾಲಕರು ನಿಯಮ ಪಾಲಿಸುವ ಜತೆಗೆ ಮೂಲಸೌಕರ್ಯದ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡಬೇಕು ಎಂದು ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಡಾ.ರಮಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ನಿಟ್ಟೆ ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ಹಾಗೂ ಯೆನೆಪೋಯ ದಂತ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಮೌಖಿಕ ಮತ್ತು ಮ್ಯಾಕ್ಸಿಲೋಫೇಷಿಯಲ್ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಶನಿವಾರ ದೇರಳಕಟ್ಟೆಯ ವಿಂಶತಿ ಭವನದಲ್ಲಿ ಜರಗಿದ ಮ್ಯಾಕ್ಸಿಲೋಫೇಷಿಯಲ್ ಡೇ- ಫೆ.13 ರಲ್ಲಿ ಭಾಗವಹಿಸಿ ಮಾತನಾಡಿದರು. ಕ್ರಿಯಾಶೀಲತೆ ಧಿಕ್ಕಿನಲ್ಲಿ ಜಗತ್ತು ಬದಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದ ಬದಲಾವಣೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವಿನ ಕೊರತೆ ಇದೆ. ಅಪಘಾತದ ಬಳಿಕ ಗಾಯಾಳುಗಳಿಗೆ ನೀಡಬೇಕಾದ ಚಿಕಿತ್ಸೆಯ ಬಗ್ಗೆ ಅರಿವು ವೈದ್ಯರಿಂದ ಆಗಬೇಕಿದೆ ಎಂದರು. ಈ ಸಂದರ್ಭ ಜಿಲ್ಲಾ ಸಾರಿಗೆ ಅಧಿಕಾರಿ ಜಿ.ಯಸ್.ಹೆಗ್ಡೆ ಮಾತನಾಡಿ ಯುವಕರೇ ಹೆಚ್ಚಾಗಿ ಅಪಘಾತಗಳಲ್ಲಿ ಬಲಿಯಾಗುತ್ತಿದ್ದಾರೆ. ಇನ್ನೊಬ್ಬರನ್ನು ಮೆಚ್ಚಿಸುವ ಸಲುವಾಗಿ ನಡೆಸುವ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯಾ: ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿ ದುಡಿಯುತ್ತಿದ್ದ, ತಾ.ಪಂ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಕಿನ್ಯಾ ಪಂಚಾಯಿತಿ ಸದಸ್ಯ ಹಮೀದ್ ಕಿನ್ಯಾ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ನಲ್ಲಿ ಸಕ್ರಿಯ ಕಾರ್ಯಕರ್ತನಾಗಿ ದುಡಿದು ನಾಲ್ಕು ಬಾರಿ ಕಿನ್ಯಾ ಪಂಚಾಯಿತಿ ಸದಸ್ಯರಾಗಿ ಹಾಗೂ ಎರಡು ಬಾರಿ ಉಪಾಧ್ಯಕ್ಷರಾಗಿ ಹಾಗೂ ಒಂದು ಬಾರಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದ ಹಮೀದ್ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂ ಡಿದ್ದರು. ಈ ಹಿನ್ನೆಲೆಯಲ್ಲಿ ಕಿನ್ಯಾ ಭಾಗದಲ್ಲಿ ಚಿರಪರಿಚಿತರು. ಕಡೆಯ ಕ್ಷಣದವರೆಗೂ ತಲಪಾಡಿ -ಕಿನ್ಯಾದಲ್ಲಿ ತಾ.ಪಂ ಅಭ್ಯರ್ಥಿ ಸ್ಥಾನ ಅವರಿಗೆ ಸಿಗುವ ನಿರೀಕ್ಷೆಯಿದ್ದರೂ ಅದು ಕೊನೆ ಪಕ್ಷದಲ್ಲಿ ಹುಸಿಯಾಗಿದೆ. ಪಕ್ಷಕ್ಕಾಗಿ ನಡೆಸಿದ ಶ್ರಮವನ್ನಾದರೂ ಗುರುತಿಸುತ್ತಾರೆಂಬ ವಿಶ್ವಾಸ ಇತ್ತು. ಆದರೆ ಪಕ್ಷದ ಒಳಗಿದ್ದವರೇ ಅದನ್ನು ತಪ್ಪಿಸಿದ್ದಾರೆ. ಆದರೂ ಪಕ್ಷ ಬಿ.ಫಾರಂ ಸಲ್ಲಿಕೆ ವೇಳೆ ಬದಲಾವಣೆಯ ನಿರೀಕ್ಷೆ ಇದೆ ಅನ್ನುವ ಅಭಿಪ್ರಾಯ ಹಮೀದ್ ಬೆಂಬಲಿಗರದ್ದಾಗಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಮೂರು ವರ್ಷಗಳಿಂದ ಮಡಿಕೇರಿ ಮತ್ತು ಉಳ್ಳಾಲದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಶೀದಾ ಭಾನು ಇದೀಗ ಜಿಲ್ಲಾ ಪಂಚಾಯಿತಿ ಅಭ್ಯರ್ಥಿಯಾಗಿ ಕೊಣಾಜೆ ಕ್ಷೇತ್ರದಿಂದ ಕಣದಲ್ಲಿದ್ದಾರೆ. ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ರಶೀದಾ ಫೀಲ್ಡ್ ಮಾರ್ಷಿಯಲ್ ಕಾರಿಯಪ್ಪ ಕಾಲೇಜು ಮಡಿಕೇರಿ ಇಲ್ಲಿ 2 ವರ್ಷ ಹಾಗೂ ಸದ್ಯ ಒಂದು ವರ್ಷದಿಂದ ಹಝ್ರತ್ ಸೈಯ್ಯಿದ್ ಮದನಿ ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶೈಕ್ಷಣಿಕವಾಗಿ ಎಲ್ಲಾ ಧರ್ಮದ ಮಹಿಳೆಯರು ಬೆಳೆಯಬೇಕು. ಶಿಕ್ಷಣ ಪಡೆದು ಸ್ವಂತ ಕಾಲಿನಲ್ಲಿ ನಿಲ್ಲುವಂತಾಗಬೇಕು. ಅದರ ಜತೆಗೆ ಕುಟುಂಬ ನಿರ್ವಹಣೆ ಮಾತ್ರವಲ್ಲ, ರಾಜಕೀಯ ಪ್ರವೇಶ ಮಾಡಿ ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಅನ್ನುವ ಉದ್ದೇಶದೊಂದಿಗೆ ರಾಜಕೀಯ ಪ್ರವೇಶಿಸುತ್ತಿದ್ದೇನೆ ಅನ್ನುವ ರಶೀದಾ ಮಲಾರ್ ಮೂಲದವರಾಗಿದ್ದಾರೆ. ಅವರನ್ನು ಉಳ್ಳಾಲಕ್ಕೆ ವಿವಾಹ ಮಾಡಿಕೊಡಲಾಗಿದ್ದು, ಅವರ ತಂದೆ ಮುಸ್ತಾಫ ಈ ಹಿಂದೆ ಪಾವೂರು ಕ್ಷೇತ್ರದ ತಾ. ಪಂ ಸದಸ್ಯರಾಗಿದ್ದರು. ಅವರ ಪ್ರೇರಣೆಯಿಂದಲೇ ರಾಜಕೀಯ ಪ್ರವೇಶ ಮಾಡಿರುವ ರಶೀದಾ ಅವರು ವಿವಾಹಿತೆಯಾಗಿದ್ದು,…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯವು ಕಳೆದ ಡಿಸೆಂಬರ್ನಲ್ಲಿ ನಡೆಸಿದ ಪದವಿ ಪರೀಕ್ಷೆಗಳ ಪರೀಕ್ಷಾ ಫಲಿತಾಂಶವು ವಿಶ್ವವಿದ್ಯಾನಿಲಯದ ವೆಬ್ಸೈಟ್ನಲ್ಲಿ ಫೆ.12ರಂದು(ಇಂದು) ಲಭ್ಯವಾಗಲಿದೆ. ಪ್ರಥಮವಾಗಿ ಬಿ.ಎಡ್. ಬಿ.ಎಚ್.ಎಮ್., ಬಿ.ಎಚ್.ಎಸ್. ಮತ್ತು ಬಿ.ಎ.ಎಸ್.ಎಲ್.ಪಿ. ಪದವಿಗಳ ಫಲಿತಾಂಶವನ್ನು ಪ್ರಕಟಿಸಿ ಬಳಿಕ ಪೆ. 15ರಂದು ಉಳಿದ ಎಲ್ಲಾ ಕೋರ್ಸುಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಮಂಗಳೂರು ಪರೀಕ್ಷಾಂಗ ಕುಲಸಚಿವಾಲಯದ ಪ್ರಕಟನೆ ತಿಳಿಸಿದೆ. ಈ ವರ್ಷದಿಂದ ಪರೀಕ್ಷಾ ಕಾರ್ಯಗಳಿಗೆ ಹೊಸ ಆಧುನಿಕ ಸಾಪ್ಟವೇರ್ ಅಳವಡಿಸಿದ್ದು ಅದನ್ನು ಪರೀಕ್ಷಿಸಿ ವಿಶ್ವವಿದ್ಯಾನಿಲಯದ ನಿಯಾಮಾನುಸಾರ ಸರಿ ಇದೆಯೋ ಎಂದು ಪರಾಮರ್ಶಿಸಲು ಪರೀಕ್ಷೆಗೊಳಪಡಿಸಿ ಫಲಿತಾಂಶಗಳನ್ನು ಪ್ರಕಟಿಸಬೇಕಾಗಿರುತ್ತದೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಈ ಫಲಿತಾಂಶಗಳು ಪ್ರಥಮ, ತೃತೀಯ ಮತ್ತು ಪಂಚಮ ಸೆಮಿಸ್ಟರ್(odd semester) ಪರೀಕ್ಷೆಗಳ ಫಲಿತಾಂಶ ವಾಗಿರುವುದರಿಂದ ಈ ಸಾಪ್ಟವೇರ್ ಅಳವಡಿಸಿ ಪರೀಕ್ಷಿಸಲಾಗುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಳೆದ ಶೈಕ್ಷಣಿಕ ವರ್ಷದಿಂದ odd ಮತ್ತು even ಎರಡೂ ಸೆಮಿಸ್ಟರ್ನ ಪರೀಕ್ಷೆಗಳು ಜೊತೆಗೆ ನಡೆಸಲಾಗಿದ್ದು ಪರೀಕ್ಷಾಕಾರ್ಯ ಮುಗಿಸುವಲ್ಲಿ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳಲಾಗಿತ್ತು. ಜೊತೆಗೆ ಕೆಲ ಸಮಯಗಳ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಾಚಾರು: ಆರು ತಿಂಗಳಿನಿಂದ ಜತೆಗಿದ್ದ ವಿವಾಹಿತೆ ಪ್ರಿಯತಮೆಯನ್ನು ಪ್ರಿಯಕರ ಹತ್ಯೆಗೈದಿರುವ ಘಟನೆ ಬೀರಿ ಸಮೀಪದ ಮಾಡೂರು ಕಾಚಾರು ಬಳಿ ನಿನ್ನೆ ಸಂಜೆ ಬೆಳಕಿಗೆ ಬಂದಿದ್ದು, ಕೊಲೆಗೈದಾತನನ್ನು ಪೊಲೀಸರು ಶವ ಪತ್ತೆಯಾದ ಕ್ಷಣದಲ್ಲೇ ಪತ್ತೆಹಚ್ಚಿ ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಶೋಭಾ (22) ಹತ್ಯೆಯಾದವಳು. .ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಳೆಗೇರಿ ಮೂಲದ ಮುತ್ತಪ್ಪ ದಾಟಿನಾಳ ಹಾಗೂ ಶೋಭಾ ಕಳೆದ ನಾಲ್ಕು ತಿಂಗಳ ಹಿಂದೆ ಬೀರಿ ಆಸಿಯಾ ಕಂಪೌಂಡಿನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮುತ್ತಪ್ಪ ಕೂಲಿ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದರೆ, ಶೋಭಾ ಮನೆಯಲ್ಲೇ ಇರುತ್ತಿದ್ದಳು. ಆರು ತಿಂಗಳ ಹಿಂದೆ ಕೂಳೂರು ಸಮೀಪ ಶೋಭಾಳ ಪರಿಚಯವಾಗಿದ್ದ ಮುತ್ತಪ್ಪ ಆಕೆಯನ್ನು ತನ್ನ ಜತೆಗೇ ಇರಿಸಿಕೊಂಡಿದ್ದ. ಶೋಭಾ ವಿಪರೀತ ಕುಡಿತದ ಚಟ ಹೊಂದಿದ್ದ ಕಾರಣ ಇಬ್ಬರ ನಡುವೆ ಆಗಾಗ್ಗ ಜಗಳಗಳು ನಡೆಯುತ್ತಿತ್ತು. ವಿವಾಹಿತಳಾಗಿರುವ ಶೋಭಾಳಿಗೆ ಪತಿ ಹಾಗೂ ಒಂದು ಮಗು ಇದೆ. ಅವರನ್ನು ವರ್ಷದ ಹಿಂದೆಯೇ ತೊರೆದ ಶೋಭಾ ಕೂಳೂರು ಬಳಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ನಕಲಿ ದಾಖಲೆಗಳನ್ನು ನೀಡಿ ಪಾಸ್ಪೋರ್ಟ್ ಪಡೆಯಲು ಯತ್ನಿಸಿದ ಹಳೇ ಪ್ರಕರಣದ ಆರೋಪಿಯನ್ನು ಉಳ್ಳಾಲ ಪೊಲೀಸರು ಬುಧವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಿನ್ಯಾ ಉಕ್ಕುಡದ ಹಿದಾಯತ್ತುಲ್ಲಾ ಮದರಸ ಬಳಿಯ ಮಹಮ್ಮದ್ ಮುದಸ್ಸಿರ್ (22) ಬಂಧಿತ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಉಳ್ಳಾಲ ಠಾಣೆಯಲ್ಲಿ ಪರಿಶೀಲನೆಗಾಗಿ ಬಂದ ಸಂದರ್ಭ ಶಂಕೆ ವ್ಯಕ್ತಪಡಿಸಿದ ಉಳ್ಳಾಲ ಪೊಲೀಸರು ತನಿಖೆ ನಡೆಸಿ ಬಂಧಿಸಿದ್ದಾರೆ. ಸೊತ್ತು ನಾಶ ಹಾಗೂ ಹಲ್ಲೆ ಪ್ರಕರಣದ ಆರೋಪಿಯಾಗಿದ್ದ ಮುದಸ್ಸಿರ್ ಉಳ್ಳಾಲ ಮೇಲಂಗಡಿ ದರ್ಗಾ ರಸ್ತೆಯ ನಕಲಿ ವಿಳಾಸದೊಂದಿಗೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್ಪೋರ್ಟ್ ಕಚೇರಿಯಲ್ಲಿ ನೀಡಿದ್ದನು. ಅಲ್ಲಿಂದ ಪೊಲೀಸರ ಪರಿಶೀಲನೆಗಾಗಿ ಉಳ್ಳಾಲ ಠಾಣೆಗೆ ಬಂದಿದ್ದ ಸಂದರ್ಭ ದಾಖಲೆಗಳಿಂದ ಶಂಕೆ ವ್ಯಕ್ತಪಡಿಸಿ ವಿಚಾರಣೆ ನಡೆಸಿದಾಗ ಹಳೇ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ. ನಕಲಿ ಪಾಸ್ ಪೋರ್ಟ್ ಸೃಷ್ಟಿಸಿ ವಿದೇಶಕ್ಕೆ ಪಲಾಯನಗೈದು ವಿಧ್ವಂಸಕ ಕೃತ್ಯ , ಸಮಾಜಘಾತುಕ ಶಕ್ತಿಗಳೊಂದಿಗೆ ಕೈಜೋಡಿಸುವ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಅಭ್ಯರ್ಥಿಗಳ ಗೆಲುವು ಮತದಾರರಲ್ಲಿ ಆಡುವ ಮಾತು, ನಡವಳಿಕೆಯಿಂದಲೇ ನಿರ್ಧಾರವಾಗುತ್ತದೆ. ಆರೋಪಗಳು ಸ್ವಾಭಾವಿಕ ಅದಕ್ಕೆಲ್ಲಾ ಎದೆಗುಂದದೇ ಮತದಾರರ ಮನವೊಲಿಸುವಲ್ಲಿ ಯಶಸ್ವಿಯಾಗಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ತೊಕ್ಕೊಟ್ಟುವಿನ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಮಂಗಳೂರು ಕ್ಷೇತ್ರ ವ್ಯಾಪ್ತಿಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮುನ್ನ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೆಲ ಪಕ್ಷಗಳಲ್ಲಿ ಇನ್ನೂ ಅಭ್ಯರ್ಥಿಗಳು ಸಿಗದೇ ಹುಡುಕಾಟದಲ್ಲಿದ್ದಾರೆ. ಆದರೆ ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿ ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ಸಿಗದವರು ಬೇಸರಗೊಳ್ಳದೆ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ಎಂದರು. ಬಿಜೆಪಿ ಮುಖಂಡ ಕಾಂಗ್ರೆಸ್ ಅಭ್ಯರ್ಥಿ ! ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಬಾಲ್ಯದಿಂದಲೇ ಕಾರ್ಯಕರ್ತನಾಗಿದ್ದು, ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಉಳ್ಳಾಲ ಭಾಗದ ಮುಖಂಡನಾಗಿದ್ದ ರಮೇಶ್ ಕೊಲ್ಯ ಅವರು ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಬಾರಿಯ ಸೋಮೇಶ್ವರ (1) ರಲ್ಲಿ ತಾಲೂಕು ಪಂಚಾಯಿತಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.…

