Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮುಡಿಪು: ಕೊಣಾಜೆ-ಪುರುಷಕೋಡಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷವನ್ನು ಖಂಡಿಸಿ ಪುರುಷಕೋಡಿ ನಾಗರಿಕರು ಸೋಮವಾರ ಪುರುಷಕೋಡಿ ಬಳಿ ಪ್ರತಿಭಟನೆ ನಡೆಸಿ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಆದರೆ ಪ್ರತಿಭಟನೆಗೆ ಮುನ್ನ ಚುನಾವಣಾ ಬಹಿಷ್ಕಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರಲ್ಲಿ ಭಿನ್ನಮತ ಸ್ಪೋಟಗೊಂಡು ವಾಗ್ವಾದ ನಡೆದು ಬಳಿಕ ಒಂದು ಗುಂಪು ಚುನಾವಣಾ ಬಹಿಷ್ಕಾರ ತೀರ್ಮಾಣಕ್ಕೆ ಒಪ್ಪದೆ ಪ್ರತಿಭಟನೆಯನ್ನು ನಡೆಸಿದರೆ ಇನ್ನೊಂದು ಗುಂಪು ಚುನಾವಣೆಯನ್ನು ಬಹಿಷ್ಕರಿಸುವ ತೀರ್ಮಾಣವನ್ನು ಕೈಗೊಂಡು ರಸ್ತೆಯಲ್ಲಿ ಪ್ರತಿಭಟನೆಯನ್ನು ನಡೆಸಿದರು. ಮಂಗಳೂರು ವಿವಿ ಬಳಿಯಿಂದ ಪುರುಷಕೋಡಿಯ ಸುಮಾರು ಎರಡು ಕಿ.ಮೀ ವ್ಯಾಪ್ತಿಯ ರಸ್ತೆಯು ಕಳೆದ ಹಲವಾರು ವರ್ಷದಿಂದ ಹದಗೆಟ್ಟು ಹೋಗಿ ಈ ಭಾಗದ ಜನರು ಸಂಕಷ್ಟವನ್ನು ಎದುರಿಸುತ್ತಿದ್ದರು. ಅಲ್ಲದೆ ಈ ರಸ್ತೆಯ ಒಂದು ಕಿ.ಮೀ ವ್ಯಾಪ್ತಿಗೆ ಡಾಂಬಾರು ಹಾಕಿದ್ದು ಅದೀಗ ಎದ್ದು ಹೋಗಿ ನಡೆದಾಡಲೂ ಜನರು ತೊಂದರೆ ಎದುರಿಸುವಂತಾಗಿತ್ತು. ಇದರಿಂದ ಬೇಸತ್ತ ಪುರುಷಕೋಡಿಯ ನಾಗರಿಕರು ಚುನಾವಣೆ ಬಹಿಷ್ಕರಿಸಿ ಪ್ರತಿಭಟನೆ ನಡೆಸುವ ತೀರ್ಮಾನವನ್ನು ಕಳೆದ ವಾರ ತೆಗೆದುಕೊಂಡಿದ್ದರು. ಇದರಂತೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ತಲಪಾಡಿ ಪಂಜಾಳ ಸೂರ್ಯ ಚಂದ್ರ ಜೋಡುಕೆರೆ ಕಂಬಳ ಇದರ ಸಮಾರೋಪ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಶಾಂತಾರಾಮ ಶೆಟ್ಟಿ ಬಾರ್ಕೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಂಗಳೂರು ಶಾರದಾ ಸಮೂಹ ಸಂಸ್ಥೆಯ ಅಧ್ಯಕ್ಷ ಎಮ್.ಬಿ. ಪುರಾಣಿಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಂಬಳ ಕೋಣಗಳ ಯಜಮಾನ ಸಾಣೂರು ಸುಂದರ ಕೊಗ್ಗು ಆಚಾರ್ಯ ಅವರನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಸನ್ಮಾನಿಸಿದರು. ಮುಖ್ಯ ಅತಿಥಿಗಳಾಗಿ ಆರಣ್ಯ ಮತ್ತು ಪರಿಸರ ಸಚಿವ ಬಿ. ರಮಾನಾಥ ರೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ರೈ ಬೋಳಿಯಾರ್, ಎ.ಜೆ. ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ| ಮೋಹನ್‍ದಾಸ್ ರೈ, ಕೋಟೆಕಾರು ವ್ಯವಸಾಯ ಸೇವಾ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು: ಆಟದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ಇಬ್ಬರು ಪರಸ್ಪರ ಹೊಡೆದಾಡಿಕೊಂಡು ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಾಗುವ ಮೂಲಕ ಪರ್ಯಾವಸನಗೊಂಡ ಘಟನೆ ಸೋಮವಾರ ಸಂಜೆ ಪಂಡಿತ್ ಹೌಸಿನ ಪ್ರಕಾಶನಗರದಲ್ಲಿ ಸಂಭವಿಸಿದೆ. ಪ್ರಕಾಶನಗರದ ಮಹಮ್ಮದ್ ಅಬೀದ್ (25) ಹಾಗೂ ಸ್ಥಳೀಯ ನಿವಾಸಿ ಸುನಿಲ್ (23) ಪರಸ್ಪರ ಹೊಡೆದಾಡಿಕೊಂಡು ಗಾಯಗೊಂಡವರು. ಇಬ್ಬರು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ವಿವರ: ಭಾನುವಾರ ಸಂಜೆ ಪ್ರಕಾಶನಗರದ ಸುಮಾರು 20 ಕ್ಕೂ ಅಧಿಕ ಮಂದಿ ಕ್ರಿಕೆಟ್ ಗ್ರೌಂಡಿನಲ್ಲಿ ಹೌಸಿ ಹೌಸಿ ಆಟವನ್ನಾಡುತ್ತಿದ್ದರು. ಈ ಸಂದರ್ಭ ಜತೆಯಾಗಿಯೇ ಆಟವಾಡುತ್ತಿದ್ದ ಖಲಂದರ್ ಮತ್ತು ವಜ್ರೇಶ್ ಯಾನೆ ಚಿನ್ನು ಎಂಬವರ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಅಲ್ಲಿ ಸೇರಿದ್ದ ಯುವಕರೆಲ್ಲರೂ ಅವರನ್ನು ಸಮಾಧಾನಗೊಳಿಸಿದ್ದರು. ಘಟನೆ ಅಲ್ಲಿಗೆ ಸುಖಾಂತ್ಯಗೊಂಡಿದ್ದರೆ ಮತ್ತೆ ಸೋಮವಾರ ಬೆಳಿಗ್ಗೆ ಖಲಂದರ್ ನನ್ನು ಸುನಿಲ್ ಎಂಬಾತ ಪ್ರಶ್ನಿಸಿದ್ದನು. ಈ ಬಗ್ಗೆ ಖಲಂದರ್ ಗೆಳೆಯ ಮಹಮ್ಮದ್ ಆಬೀದ್ ಬಳಿ ವಿಷಯ ತಿಳಿಸಿದ್ದನು. ಅದನ್ನು ಮತ್ತೆ ಆಬೀದ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು : ಒಂದು ಲಕ್ಷಕ್ಕೂ ಅಧಿಕ ತೆರಿಗೆಯನ್ನು ಪಾವತಿಸದ ತೊಕ್ಕೊಟ್ಟು ನಗರಸಭೆ ಕಟ್ಟಡದಲ್ಲಿರುವ ಆರು ಅಂಗಡಿಗಳಿಗೆ ನಗರಸಭೆ ಪೌರಾಯುಕ್ತೆ ಹಾಗೂ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಅಂಗಡಿಗಳಿಗೆ ಬೀಗ ಜಡಿದ ಪ್ರಸಂಗ ಸೋಮವಾರ ನಡೆಯಿತು. ತೊಕ್ಕೊಟ್ಟು ನಗರಸಭೆ ಕಟ್ಟಡದಲ್ಲಿರುವ ಅಂಗಡಿ ಸಂಖ್ಯೆ 7,26,30,38, 40, 48 ದಾಳಿ ನಡೆಸಿ ಮುಚ್ಚಿಸಿ ನಗರಸಭೆಯ ಬೀಗ ಹಾಕಲಾಯಿತು. ಅಂಗಡಿಗಳ ಮಾಲೀಕರಾದ ರಾಜೇಶ್ ಸಾಲ್ಯಾನ್ ಕೋಡಿಕಲ್ -1,14,830, ಹಸನ್ ಶಾಫಿ – 1,59,400, ಪೃಥ್ವಿರಾಜ್ ಸಾಲಿಯಾನ್ -2,12,520, ಹಂಝ ಇಂತಿಯಾಝ್ -2,24,380, ಮಹಮ್ಮದ್ ಹನೀಫ್ 2,83,200 ಹಾಗೂ ಮಹಮ್ಮದ್ ಝೀನತ್ ಕಾಮ್ -2,17,540 ರೂ. ತೆರಿಗೆ ಹಣವನ್ನು ಬಾಕಿಯಿರಿಸಿದ್ದರು. ಈ ಬಗ್ಗೆ ಆರು ತಿಂಗಳಿನಿಂದ ನಗರಸಭೆಯಿಂದ ನೋಟೀಸುಗಳನ್ನು ನೀಡುತ್ತಾ ಬಂದರೂ, ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿಸದೇ ತೆರಿಗೆಯನ್ನು ಪಾವತಿಸಿರಲಿಲ್ಲ. ಅದಕ್ಕಾಗಿ ಪೌರಾಯುಕ್ತ ನೇತೃತ್ವದಲ್ಲಿ ದಾಳಿ ನಡೆಸಿ ಮುಚ್ಚಿಸಲಾಗಿದೆ. ಅಭಿವೃದ್ಧಿ ಕುಂಠಿತ ಹಿನ್ನೆಲೆ ದಾಳಿ: ಪೌರಾಯುಕ್ತೆ ರೂಪಾ ನಗರಸಭೆ ಕಟ್ಟಡದಲ್ಲಿ ಸುಮಾರು 48…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ : ಜಾನಪದ ಸಂಸ್ಕøತಿಗಳನ್ನು ಅರ್ಥ ಮಾಡಿಕೊಂಡು ಅದನ್ನು ಶಾಶ್ವತವಾಗಿ ನೆಲೆ ನಿಲ್ಲಿಸುವ ಪ್ರಯತ್ನ ಯುವಜನತೆಯಿಂದ ಆಗಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ತಲಪಾಡಿ ಪಂಜಾಳದಲ್ಲಿ ಭಾನುವಾರ ಜರಗಿದ ಹೊನಲು ಬೆಳಕಿನ ಸೂರ್ಯ ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯ ಜಾನಪದ ಕಲೆ ಹಾಗೂ ಕ್ರೀಡೆಗಳು ಸೌಹಾರ್ದಯುತ ಕೇಂದ್ರಗಳಾಗಿವೆ. ಕಂಬಳದ ಸಂಘಟಕರಿಂದ ಜಿಲ್ಲೆಯ ಇತಿಹಾಸ ಮತ್ತು ಸಂಸ್ಕøತಿಯನ್ನು ಚಿರಪರಿಚಿತವಾಗಿಸುವ ಕಾರ್ಯ ಆಗಿದೆ, ಆಧುನಿಕ ತಂತ್ರಜ್ಞಾನಗಳು ಬದಲಾದಂತೆ ಕಾನೂನುಗಳ ಬದಲಾವಣೆಗಳು ಆಗುತ್ತಿದೆ. ರಾಜ್ಯ ಸರಕಾರದಿಂದ ಕ್ರೀಡೆಗಳಿಗೆ ನಿರಂತರ ಪ್ರೋತ್ಸಾಹ ನೀಡುವ ಕೆಲಸ ಆಗುತ್ತಿದ್ದು, ಕಂಬಳಕ್ಕೆ ಕಾನೂನು ಅಡ್ಡಿಯಾದರೂ ರಾಜ್ಯ ಸರಕಾರ ಅದನ್ನು ಸಡಿಲುಗೊಳಿಸುವಲ್ಲಿ ಯಶಸ್ವಿಯಾಗಿದೆ. ಸುಪ್ರೀಂ ಕೋರ್ಟಿನಲ್ಲಿ ವ್ಯಾಜ್ಯ ಇರುವುದರಿಂದ ಜಿಲ್ಲೆಯ ಜನತೆ ಮತ್ತು ಸರಕಾರ ಮನೇಕಾ ಗಾಂಧಿ ಮನವೊಲಿಸಿ ಕ್ರೀಡೆಯ ಬಗ್ಗೆ ಸಮಗ್ರ ವರದಿ ನೀಡುವ ಅಗತ್ಯ ಇದೆ ಎಂದರು. ಈ ಸಂದರ್ಭ ಕಂಬಳದ ಸಾಂಪ್ರದಾಯಿಕ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಹರೇಕಳ: ಅಕ್ಷರ ಸಂತ ಹಾಜಬ್ಬರಿಗೆ ಹರೇಕಳದ ನ್ಯೂಪಡ್ಪುವಿನಲ್ಲಿ ಸುಮಾರು 15 ಲಕ್ಷ ರೂ ವೆಚ್ಚದಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಶನ್, ಮಂಗಳೂರು ಇವರು ನಿರ್ಮಿಸಿಕೊಟ್ಟ ನೂತನ ಥಾರಸಿ ಮನೆಯ ಹಸ್ತಾಂತರ ಕಾರ್ಯಕ್ರಮ ಮತ್ತು ಗೃಹಪ್ರವೇಶವು ಭಾನುವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಮಾಜಸೇವೆಯಲ್ಲಿ ತೊಡಗಿಸಿಕೊಂಡವರನ್ನು ಒಂದಲ್ಲ ಒಂದು ದಿನ ಸಮಾಜವೇ ಗುರುತಿಸುತ್ತದೆ. ಸಮಾಜಸೇವೆಯೊಂದಿಗೆ ಅವಿದ್ಯಾವಂತನಾಗಿದ್ದರೂ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಹರೇಕಳ ಹಾಜಬ್ಬರನ್ನು ಸಮಾಜವು ಗುರುತಿಸಿದ್ದು ಮಾತ್ರವಲ್ಲ ಅವರಿಗೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಶನ್‍ನವರು ಮನೆ ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯವಾಗಿದ್ದು ಇದೊಂದು ಪುಣ್ಯದ ಕೆಲಸ ಮತ್ತು ಮಾದರಿಯಾಗಿದೆ ಎಂದು ಹೇಳಿದರು. ಬಡವರ ಕಣ್ಣೀರೊರೆಸುವ ಕೆಲಸ ಎಂದರೆ ದೇವರ ಕೆಲಸ. ಕಿತ್ತಲೆ ಮಾರಾಟ ಮಾಡಿ ಜೀವನ ಸಾಗಿಸುವ ವ್ಯಕ್ತಿಯೊಬ್ಬ ಶಾಲೆಯೊಂದನ್ನು ನಿರ್ಮಿಸಲು ಹೋರಾಟ ಮಾಡಿ ಯಶಸ್ಸನು ಕಂಡಿದ್ದಾರೆ. ಹಾಜಬ್ಬರ ಶಿಕ್ಷಣ ಸಂಸ್ಥೆಯು ಹಂತ ಹಂತವಾಗಿ ಬೆಳೆದು ವಿಶ್ವವಿದ್ಯಾನಿಲಯವಾಗಿ ಬೆಳೆಯಲಿ ಹಾಗೂ ದೇವರು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ಭಾರತದ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ನಿಧಿ ಸಂಗ್ರಹಿಸಲು ಆಸ್ಟ್ರೇಲಿಯಾದ ಮ್ಯಾರಥಾನ್ ಓಟಗಾರ ಹಾಗೂ ಮಾಜಿ ಸಂಸದ ಪ್ಯಾಟ್ರಿಕ್ ಫಾರ್ಮರ್ ಹಮ್ಮಿಕೊಂಡಿರುವ ಕನ್ಯಾಕುಮಾರಿಯಿಂದ ಕಾಶ್ಮೀರ ತನಕ ಮ್ಯಾರಥಾನ್ ಓಟ ಗುರುವಾರ ಬೆಳಿಗ್ಗೆ ಕರ್ನಾಟಕ-ಕೇರಳ ಗಡಿ ಪ್ರದೇಶ ತಲಪಾಡಿಯನ್ನು ಪ್ರವೇಶಿಸಿ ದ.ಕ ಜಿಲ್ಲೆಗೆ ಆಗಮಿಸಿದರು. ದ.ಕ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶರಣಪ್ಪ ಅವರು ಹೂಗುಚ್ಛ ನೀಡುವುದರ ಮೂಲಕ ಪ್ಯಾಟ್ರಿಕ್ ಫಾರ್ಮರ್ ಹಾಗೂ ಅವರ ತಂಡವನ್ನು ಸ್ವಾಗತಿಸಿದರು. ಗಣರಾಜ್ಯೋತ್ಸವದಂದು ಆರಂಭಿಸಿರುವ ದೇಶದುದ್ದಕ್ಕೂ 4,600 ಕಿ.ಮೀ ಮ್ಯಾರಥಾನ್ ಓಟದ ಹತ್ತನೇ ದಿನವಾದ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದೆ. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ತಲಪಾಡಿ ದೇವಿನಗರದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆ, ಉಳ್ಳಾಲದ ಸೈಯ್ಯದ್ ಮದನಿ ಹಾಗೂ ಎಕ್ಕೂರು ಯೆನೆಪೋಯ ಶಾಲಾ ವಿದ್ಯಾರ್ಥಿಗಳು ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡರು. ಜಿಲ್ಲಾಧಿಕಾರಿಗಳು ನೀಡಿದ ಸಿಯಾಳ ಕುಡಿಯುತ್ತಾ ಮಾತನಾಡಿದ ಪ್ಯಾಟ್ರಿಕ್ ಅವರು ` ಭಾರತದಂತಹ ವೈಭವಪೂರಿತ ದೇಶ ಬೇರೊಂದಿಲ್ಲ.…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕನೀರುತೋಟ: ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೈದಿರುವ ಘಟನೆ ಕನೀರುತೋಟದ ಬಂಡಿಕೊಟ್ಯ ಎಂಬಲ್ಲಿ ಗುರುವಾರ ಮುಂಜಾನೆ ವೇಳೆ ನಡೆದಿದೆ. ಕುಂಪಲದ ಕುಜುಮಗದ್ದೆ ನಿವಾಸಿ ಸುಂದರ್ ಪೂಜಾರಿ ಎಂಬವರ ಪುತ್ರಿ ಮೋಹಿನಿ(55) ಆತ್ಮಹತ್ಯೆಗೈದವರು. ಮನೆಯಿಂದ ತುಸು ದೂರದಲ್ಲಿರುವ ಕನೀರುತೋಟದ ಮಾವನ ಮನೆಯಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾವನ ಮನೆಯಲ್ಲಿ ಯಾರೂ ಇಲ್ಲದ ಬಗ್ಗೆ ತಿಳಿದುಕೊಂಡಿದ್ದ ಮೋಹಿನಿಯವರು ಅವರ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ ವರ್ಷದ ಹಿಂದೆ ಪತಿ ಸಾವನ್ನಪ್ಪಿದ ಬಳಿಕ ಮಾನಸಿಕವಾಗಿ ಕಿನ್ನತೆಗೆ ಒಳಗಾಗಿದ್ದ ಇವರು, ಅದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯೊಬ್ಬಳಿದ್ದಾಳೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯ : ಜೀವನದಲ್ಲಿ ಸ್ವಾವಲಂಬಿಯಾಗಿ ತನ್ನ ಕಾಲ ಮೇಲೆ ನಿಂತು ಉತ್ತಮ ಸಾಧನೆ ಮಾಡಬೇಕು, ಫಲಾನುಭವಿಗಳು ತಮ್ಮ ಮೂರು ತಿಂಗಳ ತರಬೇತಿ ಅವಧಿಯಲ್ಲಿ ಕೇವಲ ಅಡಿಪಾಯವನ್ನು ಮಾತ್ರಾ ಅರ್ಥ ಮಾಡಿಕೊಂಡಿರುತ್ತಾರೆ. ಆದರೆ ಅದರಲ್ಲಿ ಕಟ್ಟಡ ಕಟ್ಟುವ ವಿನ್ಯಾಸಗೊಳಿಸುವ ಕಲೆಯನ್ನು ತನ್ನ ಸ್ವ ಸಾಮರ್ಥ್ಯದಿಂದಲೇ ಭರಿಸಿಕೊಳ್ಳಬೇಕು ಎಂದು ಸಿ.ಡಿ.ಟಿ.ಪಿ ಕೆ.ಪಿ.ಟಿ ಸಂಯೋಜಕಿ ಹಾಗೂ ಪ್ರಾಂಶುಪಾಲರಾದ ಸುಶೀಲ ಅಭಿಪ್ರಾಯಪಟ್ಟರು. ಅವರು ಕೇಶವ ಶಿಶುಮಂದಿರ ಕಿನ್ಯ ಹಾಗೂ ಸಿ.ಡಿ.ಟಿ.ಪಿ. ಕೆಪಿಟಿ ಇದರ ಜಂಟಿ ಆಶ್ರಯದಲ್ಲಿ ನಡೆದ ಮೂರು ತಿಂಗಳ ಉಚಿತ ಫ್ಯಾಶನ್ ಡಿಸೈನ್ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆ.ಪಿ.ಟಿ. ಸಿ.ಡಿ.ಟಿ.ಪಿ ಆಂತರಿಕ ಸಂಯೋಜಕ ಸುಶಾಂತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ತರಬೇತಿಯ ಪ್ರಯೋಜನ, ಯಾವ ರೀತಿ ಸ್ವದ್ಯೋಗವನ್ನು ಜೀವನದಲ್ಲಿ ಅಳವಡಿಸಬಹುದು ಎಂದು ಮಾರ್ಗದರ್ಶನ ನೀಡಿದರು. ಮುಖ್ಯ ಅತಿಥಿಗಳಾಗಿ ಸಿಡಿಟಿಪಿ ಕೆಪಿಟಿಯ ಸುಧೀರ್, ಕೇಶವ ಶಿಶುಮಂದಿರದ ಕಾರ್ಯದರ್ಶಿ ಚೇತನ್ ಪಿಲಿಕೂರು, ತರಬೇತಿ ಶಿಕ್ಷಕಿ ಕಾಂಚನ ಸೋಮೇಶ್ವರ ಉಪಸ್ಥಿತರಿದ್ದರು.…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ದ್ವಾರದ ಮುಖಮಂಟಪ ಶಿಖಿರ ಗೋಪುರದ ಪಾದುಕನ್ಯಾಸವು ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ವೆಂಕಟಕೃಷ್ಣ ಅಡಿಗರ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನದೊಂದಿಗೆ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಳ್ಳಾಲ ಪದ್ಮಶಾಲಿ ಸಮಾಜದ ಅಧ್ಯಕ್ಷ ನ್ಯಾಯವಾದಿ ವಿಜಯ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದೇರಳಕಟ್ಟೆ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ನಿರ್ದೇಶಕ ರವೀಂದ್ರ ಶೆಟ್ಟಿ ಉಳಿದೊಟ್ಟು, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಉಪಾಧ್ಯಕ್ಷ ಸುರೇಶ್ ಭಟ್ನಗರ, ನಿವೃತ್ತ ಸೇನಾನಿ ಕೃಷ್ಣಗಟ್ಟಿ ಸೋಮೇಶ್ವರ, ಧಾರ್ಮಿಕ ಪರಿಷತ್ತು ಸದಸ್ಯ ಮಹಾಬಲ ಚೌಟ, ಕಾರ್ತಿಕ್ ಕರ್ಕೇರ ಮೊಗವೀರ ಪಟ್ಣ ಉಳ್ಳಾಲ, ಕಿಶೋರ್ ಡಿ. ಶೆಟ್ಟಿ, ಲೀಡ್ಸ್ ಗ್ರೂಪ್ ಮಂಗಳೂರು. ಪ್ರಧಾನ ಕಾರ್ಯದರ್ಶಿ ಐತಪ್ಪ ನೆಟ್ಟಿಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೀತಾರಾಮ ದಂಪತಿ ಮುಳಿಹಿತ್ಲು ಮಂಗಳೂರು ಇವರು ವಿಜ್ಞಾಪನ ಪತ್ರವನ್ನು ಬಿಡುಗಡೆ ಮಾಡಿದರು. ಪದ್ಮಶಾಲಿ ಸಮಾಜದ ಕಾರ್ಯದರ್ಶಿ ನಾಗಪ್ಪ ನೆಟ್ಟಿಗಾರ ವಂದಿಸಿದರು. ಚೆಲುವಯ್ಯ ನೆಟ್ಟಿಗಾರ ಕುಂಪಲ ಕಾರ್ಯಕ್ರಮ…

Read More