Author: UllalaVani

Kannada News From Coastal Karnataka

ಕನೋ: ನೈಜೀರಿಯಾದ ಈಶಾನ್ಯ ಭಾಗದಲ್ಲಿ ಬುಧವಾರ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 13 ಮಂದಿ ದುರ್ಮರಣ ಹೊಂದಿರುವ ಘಟನೆ ನಡೆಸಿದೆ. ನೈಜೀರಿಯಾದ ಈಶಾನ್ಯ ರಾಜ್ಯ ಚಿಬೋಕ್ ನಲ್ಲಿರುವ ಮಾರುಕಟ್ಟೆಗೆ ಪ್ರವೇಶಿದ್ದ ಐವರು ಉಗ್ರರು ಪೈಕಿ ಮೂವರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ 13 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಯಾಚರಣೆ ನಡೆಸಿ 28ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ : ಕೇಂದ್ರ ಸರಕಾರದಿಂದ ಬೀಡಿ ಕಾರ್ಮಿಕರಿಗೆ ಆಪತ್ತು ಬಂದಿದೆ. ಕೂಡಲೇ ಅವರಿಗೆ ಪರ್ಯಾಯ ಕೆಲಸ ಒದಗಿಸದೇ ಇದ್ದಲ್ಲಿ 3,000 ಕೋಟಿ ಮಂದಿ ಬೀದಿಗೆ ಬೀಳಲಿದ್ದಾರೆ ಎಂದು ಬೀಡಿ ಫೆಡರೇಶನ್ನಿನ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಸಿಐಟಿಯು ವತಿಯಿಂದ ಕೋಟೆಕಾರು ಸರ್ಕಲ್ ಬೀಡಿ ಲೇಬರ್ ಯೂನಿಯನ್ ಆಶ್ರಯದಲ್ಲಿ ಬೀಡಿ ಕೈಗಾರಿಕೆ ಮುಚ್ಚಲ್ಪಟ್ಟರೆ ಬದಲಿ ಪರಿಹಾರ ಒದಗಿಸಿರಿ ಕುರಿತು ಸೋಮೇಶ್ವರ ಗ್ರಾಮ ಪಂಚಾಯತ್‍ನಲ್ಲಿ ನಡೆಸಿದ ಸರಕಾರದ ಸ್ಥಳೀಯ ಸಂಸ್ಥೆಗಳಲ್ಲಿ ಹೆಸರು ನೋಂದಾಯಿಸಲು ಅರ್ಜಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 2003ರಿಂದ ದೇಶದಲ್ಲಿ ತಂಬಾಕು ಉತ್ಪನ್ನಗಳ ನಿಷೇಧ ಕಾರ್ಯಕ್ರಮ ನಡೆಯುತ್ತಾ ಬಂದಿದೆ. ಇದರಿಂದ ಕಾರ್ಮಿಕರು ಕೆಲಸಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಕೇಂದ್ರ ಸರಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಕಾರ್ಮಿಕರ ಜೀವನವನ್ನು ಆಪತ್ತಿನಲ್ಲಿ ತಂದಿಟ್ಟಿದೆ. ರಾಜ್ಯದ ಅತಿದೊಡ್ಡ ಪಂಚಾಯಿತಿ ಅನಿಸಿಕೊಂಡಿರುವ ಸೋಮೇಶ್ವರ ಪಂ. ವ್ಯಾಪ್ತಿಯಲ್ಲಿ ಸಾವಿರಾರು ಕಾರ್ಮಿಕರಿದ್ದಾರೆ. ಅವರ ಗಣತಿಯನ್ನು ನಡೆಸಿ ಪಂಚಾಯಿತಿ ವತಿಯಿಂದ ಸರಕಾರಕ್ಕೆ ಮನವಿ ಸಲ್ಲಿಸಬೇಕಿದೆ.…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಸೋಮೇಶ್ವರ ಗ್ರಾಮದ ಕೊಲ್ಯ ಶ್ರೀ ನಾಗಬ್ರಹ್ಮ ಅನ್ನಪೂರ್ಣೇಶ್ವರೀ ಕ್ಷೇತ್ರದಲ್ಲಿ ಜ. 26ರಿಂದ 30ರವರೆಗೆ ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿಯಾಗಿ ತೊಕ್ಕೊಟ್ಟು ಬಳಿಯ ಶ್ರೀ ನಾಗ ಸಾನಿಧ್ಯದಿಂದ ಶ್ರೀಕ್ಷೇತ್ರಕ್ಕೆ ಹಸಿರು ಹೊರೆಕಾಣಿಕೆಯ ಶೋಭಾಯಾತ್ರೆ ಮೆರವಣಿಗೆ ನಡೆಯಿತು ಹೊರೆಕಾಣಿಕೆಗೆ ಕೊಲ್ಯ ಶ್ರೀ ರಮಾನಂದ ಸ್ವಾಮೀಜಿ ಚಾಲನೆ ನೀಡಿದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮುಂಬೈಯ ರಂಗೋತ್ಸವ ಸಂಸ್ಥೆ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕಲರಿಂಗ್ ಮತ್ತು ಕೈಬರಹ ಸ್ಪರ್ಧೆ `ಆರ್ಟ್ ಫೆಸ್ಟ್’ನಲ್ಲಿ ಭಾಗವಹಿಸಿದ್ದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‍ನ ಹೃತಿಕ್‍ಚಂದ್’ ಅಖಿಲ ಭಾರತದಲ್ಲಿ ದ್ವಿತೀಯ ಸ್ಥಾನಿಯಾಗಿ  `ಗೋಲ್ಡನ್ ಆರ್ಟ್ ಪ್ರಶಸ್ತಿ’ಯನ್ನು ಪಡೆದುಕೊಂಡಿದ್ದಾರೆ. ಇವರು ಮಾಡೂರಿನ ಚಾಂದಿನಿ ಹರೀಶ್ ಅವರ ಪುತ್ರ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ವಠಾರದಲ್ಲಿ 67ನೇ ಗಣರಾಜ್ಯೋತ್ಸವವನ್ನು ದರ್ಗಾ ಅಧ್ಯಕ್ಷ ಯು.ಎಸ್ ಹಂಝ ದ್ವಜಾರೋಹಣಗೈದರು. ಖತೀಬರಾದ ಅಬ್ದುಲ್ ರವೂಫ್ ಮುಸ್ಲಿಯಾರ್‍ರವರು ದುಆಮಾಡಿದರು, ದರ್ಗಾ ಪ್ರಧಾನ ಕಾರ್ಯದರ್ಶಿ ಯು.ಟಿ ಇಲ್ಯಾಸ್, ಜತೆ ಕಾರ್ಯದರ್ಶಿ ಫಾರೂಕ್ ಮಾರ್ಗತಲೆ, ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ನಾಝಿಮ್, ಹಾಗೂ ದರ್ಗಾ ಮತ್ತು ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಣಚೂರು : ಕಣಚೂರು ಶಿಕ್ಷಣ ಸಂಸ್ಥೆಯಲ್ಲಿ ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಕಣಚೂರು ಮೋನು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಕಣಚೂರು ಮೆಡಿಕಲ್ ಕಾಲೇಜಿನ ಅನಾಟಮಿ ವಿಭಾಗದ ಮುಖ್ಯಸ್ಥ ಡಾ| ಅರುಣಾಚಲಂ ಕುಮಾರ್, ಶಾಲಾ ಸಂಚಾಲಕ ಅಬ್ದುಲ್ ರಹೆಮಾನ್, ಕಣಚೂರು ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ| ಖಾಝಾ ನಸೀರುದ್ಧೀನ್, ಆಡಳಿತಾ„ಕಾರಿ ಡಾ| ರೋಹನ್ ಮೋನಿಸ್, ಕಣಚೂರು ಪದವಿ ಕಾಲೇಜಿನ ಪೆÇ್ರ| ಇಕ್ಬಾಲ್ ಅಹಮ್ಮದ್ ಯು.ಟಿ., ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ, ಶಾಲಾ ಪ್ರಾಂಶುಪಾಲ ರಾಮಚಂದ್ರ ಭಟ್, ಪಬ್ಲಿಕ್ ಸ್ಕೂಲ್ ಮುಖ್ಯೋಪಾಧ್ಯಾಯಿನನಿ ಆನಂದಿ, ಪ್ರಿ ಪ್ರೈಮರಿ ಶಾಲಾ ಮುಖ್ಯಶಿಕ್ಷಕಿ ಲಿನೆಟ್ ಡಿ.ಸೋಜ ಉಪಸ್ಥರಿದ್ದರು. ವಿದ್ಯಾರ್ಥಿನಿ ರುಖಿಯಾ ಶಫ್ನಾಝ್ ಗಣರಾಜ್ಯೋತ್ಸವದ ಕುರಿತು ಮಾತನಾಡಿದರು, ನಿಹಾ ಮಿತ್ತಲ್ ಕಾರ್ಯಕ್ರಮ ನಿರ್ವಹಿಸಿದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಹಿರಾ : ಗಣರಾಜ್ಯೋತ್ಸವದ ಅಂಗವಾಗಿ ಬಬ್ಬುಕಟ್ಟೆಯ ಹಿರಾ ಶಿಕ್ಷಣ ಸಂಸ್ಥೆಯಲ್ಲಿ ಇಸ್ಲಾಮಿಕ್ ಚಾರಿಟೇಬಲ್ ಟ್ರಸ್ಟ್‍ನ ಸ್ಥಾಪಕ ಸದಸ್ಯ ಮಹಮ್ಮದ್ ಅನ್ವರ್ ಧ್ವಜಾರೋಹಣಗೈದರು. ಶಾಂತಿ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷ ಅಬ್ದುಲ್ ರಹೆಮಾನ್, ಸಂಚಾಲಕ ರಹಮತುಲ್ಲ, ಸದಸ್ಯರಾದ ಉಮ್ಮರ್ ಬಾವ, ಅಬ್ದುಲ್ ಖಾದರ್, ಅಬ್ದುಲ್ ಕರೀಂ, ಹಸನ್ ಪಿಲಾರ್, ಮಹಮ್ಮದ್ ಸಮೀರ್, ಹಿರಾ ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ  ನಝೀರ್ ಉಳ್ಳಾಲ್, ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಇಲಿಯಾಸ್, ಹಿರಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎ.ಕೆ. ಕುಕ್ಕಿಲ ಗಣರಾಜ್ಯೋತ್ಸವದ ಮಹತ್ವ ತಿಳಿಸಿದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಾವೂರು : ಪಾವೂರು ಗ್ರಾಮದ ಮಲಾರ್ ಬದ್ರಿಯಾ ನಗರ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಗಣಿತ ಮೇಳದೊಂದಿಗೆ ವಿಶಿಷ್ಟವಾಗಿ ಆಚರಿಸಲಾಯಿತು. ಶಾಲೆಯ ಶಿಕ್ಷಕ-ಶಿಕ್ಷಕಿಯರು, ಹೆತ್ತವರ ನೆರವಿನಿಂದ ವಿದ್ಯಾರ್ಥಿ0ಗಳು ತರಕಾರಿ ಅಂಗಡಿ, ಚಹಾ, ತಿಂಡಿ-ತಿನಿಸುಗಳು ಕ್ಯಾಂಟೀನ್ ಜೊತೆ ಇತರ ಸಾಮಗ್ರಿಗಳನ್ನು ಮಾರಾಟ ಮಾಡುವ ಮೂಲಕ ವ್ಯವಹಾರ ಜ್ಞಾನ ಪಡೆದರು. ಅಲ್ಲದೆ ಗಣಿತದ ಮೂಲ ಕ್ರಿಯೆಗಳು, ಆಕೃತಿಗಳು, ಔಪಚಾರಿಕ ಮತ್ತು ಅನೌಪಚಾರಿಕ ಅಳತೆಗೋಳು, ರೇಖಾಗಣಿತ, ಭಿನ್ನರಾಶಿ, ಕೋನಗಳ ರಂಗೋಲಿಗಳು-ಆಕೃತಿಗಳ ಪ್ರದರ್ಶನ ನಡೆಸಿ ಗ್ರಾಮಸ್ಥರನ್ನು ಪುಳಕಗೊಳಿಸಿದರು. ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಿನಾರಾಯಣ ಭಟ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗೀತಾ ಶ್ಯಾನ್‍ಭಾಗ್, ಕೊಣಾಜೆ ಪದವು ಸಿಆರ್‍ಪಿ ಸುಗುಣಾ, ಮುನ್ನೂರು ಸಿಆರ್‍ಪಿ ವತ್ಸಲಾ ಜೋಗಿ, ತಾ.ಪಂ. ಸದಸ್ಯ ಮುಹಮ್ಮದ್ ಮೋನು, ಗ್ರಾ.ಪಂ. ಸದಸ್ಯ ಎಂ.ಪಿ.ಹಸನ್, ಗ್ರಾಪಂ ಮಾಜಿ ಸದಸ್ಯ ಮುಹಮ್ಮದ್ ಬದ್ರಿಯಾನಗರ, ಪತ್ರಕರ್ತ ಹಂಝ ಮಲಾರ್, ಉದ್ಯಮಿಗಳಾದ ಇಸ್ಮಾಯಿಲ್ ಎಸ್.ಎಂ., ಅಸ್ಲಾಂ, ಎಸ್‍ಡಿಎಂಸಿ ಅಧ್ಯಕ್ಷ ಆರ್.ಮಜೀದ್ ಉಪಸ್ಥಿತರಿದ್ದು ಪ್ರೋತ್ಸಾಹ ನೀಡಿದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಜಮಾಹಿತುಲ್ ಮೊಹಲ್ಲಿಮೀನ್ ಇದರ ವತಿಯಿಂದ ದೇರಳಕಟ್ಟೆಯ ಸಿಟಿ ಗ್ರೌಂಡ್‍ನಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ವಿದ್ಯಾರತ್ನ ಆಂಗ್ಲ ಮಾದ್ಯಮ ಶಾಲಾ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ, ಸುರೇಶ್ ಬಿ. ಶೆಟ್ಟಿ, ಕಿನ್ಯಾ ಗ್ರಾಮ ಪಂಚಾಯತ್ ಸದಸ್ಯ ಮಹಾಬಲ ಪೂಂಜಾ, ಬೆಳ್ಮ ಗ್ರಾಮ ಪಂಚಾಯತ್ ಸದಸ್ಯ ಕಬೀರ್ ಡಿ, ಕೇಂದ್ರ ಬದ್ರಿಯಾ ಜುಮಾ ಮಸೀದಿಯ ಮಾಜಿ ಆದ್ಯಕ್ಷ ಇಸ್ಮಾಯಿಲ್, ಅಧ್ಯಕ್ಷ ಅಬೂಬಕ್ಕಾರ್, ಕೆ.ಎಸ್. ಎಸ್‍ಕೆಎಸ್‍ಎಸ್‍ಎಫ್ ಜಿಲ್ಲಾ ಉಪಾಧ್ಯಕ್ಷ ಫಾರೂಕ್ ಕಲ್ಲಡ್ಕ, ಸಂಶುಲ್ಲಾ ಉಲಮಾ ಇಸ್ಲಾಮಿಕ್ ದೇರಳಕಟ್ಟೆ ಇದರ ಅಧ್ಯಕ್ಷ ಅಹಮ್ಮದ್ ಸಿರಾಜ್ ತಾಜ್, ಮಹಮ್ಮದ್ ಪನೀರ್, ಲತೀಫ್ ದಾರಿಮಿ, ಫಾರೂಕ್ ದಾರಿಮಿ, ಯಾಸರ್ ಅರಾಫತ್, ಕೆ.ಯು. ಖಲೀಲ್ , ರಹಮಾನ್ ಅರ್ಷದಿ ಉಪಸ್ಥಿತರಿದ್ದರು.

Read More