Author: UllalaVani

Kannada News From Coastal Karnataka

ಮಂಗಳೂರು: ದೇವರು ಕೊಟ್ಟ ಪಾಲು ಅಲ್ಪವಾಗಿದ್ದರೂ, ಅದರಲ್ಲೊಂದು ಭಾಗವನ್ನು ಸಮಾಜಕ್ಕೆ ನೀಡುವ ಕಾರ್ಯ ದೇವರಿಗೆ ಮೆಚ್ಚುಗೆಯಾದದ್ದು. ಸಮಾಜಕ್ಕೆ ಪಾಲು ಕೊಡುವ ಸಂಸ್ಕೃತಿ ಪಡೆದುಕೊಂಡವರಲ್ಲಿಯೂ ಬೆಳೆಯಬೇಕು ಎಂದು ನಾಡೋಜ ಡಾ| ಜಿ.ಶಂಕರ್‌ ಅಭಿಪ್ರಾಯಪಟ್ಟರು. ಮೊಗವೀರ್ಸ್ ಬೆಹ್ರೈನ್‌ ವತಿಯಿಂದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಚಾಲನೆಯನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನಗೈದು ಮಾತನಾಡಿದರು. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಸೇರಿದಂತೆ ಮಾರುತಿ ಜನಸೇವಾ ಸಂಘ, ಉಚ್ಚಿಲ, ಬೆಣ್ಣೆಕುದ್ರು, ಉರ್ವ ಮಾರಿಯಮ್ಮ ಕ್ಷೇತ್ರದ ಆಶ್ರಯದಲ್ಲಿ ನಿರಂತರವಾಗಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುತ್ತಿರುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಶಿಕ್ಷಣ ಪಡೆಯುವ ಜವಾಬ್ದಾರಿ ಮಾತ್ರ ಮಕ್ಕಳಲ್ಲಿ ಬೇಕಿದೆ. ಹಿಂದಿನಂತೆ ಶಿಕ್ಷಣ ಪಡೆಯುವ ಕಷ್ಟ ಇಂದಿನ ದಿನಗಳಲ್ಲಿ ಇಲ್ಲ. ಅದನ್ನು ಅರಿತುಕೊಂಡು , ಸಮಾಜದಲ್ಲಿ ವಿವಿದೆಡೆ ಸಿಗುವಂತಹ ವಿದ್ಯಾರ್ಥಿವೇತನಗಳನ್ನು ವಿನಿಯೋಗಿಸಿಕೊಂಡು ಶಿಕ್ಷಣದಿಂದ ವಂಚಿತರಾಗದೇ ಮುಂದುವರಿಯಿರಿ. ಇದೇ ಸುದುದ್ದೇಶದೊಂದಿಗೆ ಬಹರೈನ್‌ ಮೊಗವೀರ್ಸ್‌ ಸಂಘ ಕೂಡಾ ತಾವು ಬಂದ ದಾರಿಯನ್ನು ಮರೆಯದೇ ಮತ್ತೆ ಸಮಾಜದತ್ತ…

Read More

ಸಾಲೆತ್ತೂರು: ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಮಾವೆಯ ಶ್ರೀ ಚಾಮುಂಡೇಶ್ವರಿ ರಕ್ತೇಶ್ವರಿ ಕ್ಷೇತ್ರದ ಆಡಳಿತ ಸಮಿತಿ ವತಿಯಿಂದ “ಸಹಕಾರ ರತ್ನ” ಪ್ರಶಸ್ತಿ ಪುರಸ್ಕೃತರಾದ ಟಿ.ಜಿ. ರಾಜಾರಾಮ ಭಟ್ ಅವರನ್ನು ಶಾಲು ಹೊದಿಸಿ, ಫಲಪುಷ್ಟ ನೀಡಿ ಅಭಿನಂದಿಸಲಾಯಿತು. ಕರ್ನಾಟಕ ಘನ ಸರಕಾರದ ವತಿಯಿಂದ ಕೊಡಮಾಡುವ ಸಹಕಾರ ರತ್ಮ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಬೆಂಗಳೂರು ಅಖಿಲ ಭಾರತ ಸಹಕಾರ ಸಪ್ತಾಹ ಇದರ ವತಿಯಿಂದ ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿದ ಸೇವೆಯ ಮೂಲಕ ಭಾಜನರಾಗಿ, ಇಂದು ಸಹಕಾರ ರತ್ನ ಪುರಸ್ಕೃತರಾದವರು ಟಿ.ಜಿ ರಾಜಾರಾಮ ಭಟ್. ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ರಕ್ತೇಶ್ವರಿ ಕ್ಷೇತ್ರದ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಉಪಾಧ್ಯಕ್ಷರು ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Read More

ಉಡುಪಿ;ಹಾಸನ ಸಕಲೇಶಪುರ ವಿಭಾಗಗಳಲ್ಲಿ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿAದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ÷್ಸ ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎ0ದು ಕೇಂದ್ರ ರೈಲ್ವೇ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ರೈಲ್ವೇ ಸಚಿವರನ್ನು ಭೇಟಿಯಾಗಿ ಈ ಸಂಬ0ದ ಒಂದು ಮನವಿ ಪತ್ರವನ್ನು ಸಲ್ಲಿಸಿ ,ಈ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಓಡಿಸುವ ಅಗತ್ಯವನ್ನು ವಿವರಿಸಿದರು. ಮನವಿಗೆ ಸ್ಪಂದಿಸಿದ ರೈಲ್ವೇ ಸಚಿವರು, ಸಕಲೇಶಪುರ ಘಾಟ್ ವಿಭಾಗದಲ್ಲಿ ರೈಲ್ವೇ ಹಳಿ ವಿದ್ಯುದೀಕರಣ ಪೂರ್ಣಗೊಂಡ ನಂತರ ಬೆಂಗಳೂರಿನಿAದ ಕಾರವಾರಕ್ಕೆ ರೈಲು ಸೇವೆಗಳನ್ನು ಸುಧಾರಿಸಲಾಗುವುದು. ಮತ್ತು ಈ ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಪರಿಚಯಿಸುವ ಯೋಜನೆಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

Read More

ರಾಮನಗರ,ಡಿ. 13 : ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟ ಹೊಸ ಹೊಸ ತಿರುವು ಪಡೆಯುತ್ತಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್‌ ಹುಸೇನ್‌ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು, ಅವರಿಗೆ ಅವಕಾಶ ಸಿಗಬೇಕು.ಇದಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜ.6ರಂದು ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆಯಿದ್ದು ನನಗೆ ಶೇ.99ರಷ್ಟು ವಿಶ್ವಾಸ ಇದೆ ಎಂದು ಹೇಳಿದರು.ಡಿಕೆ ಶಿವಕುಮಾರ್‌ ಅವರಿಗೆ ಜ.6 ಮತ್ತು ಜ. 9 ಅದೃಷ್ಟ ಸಂಖ್ಯೆ. ನಮ್ಮಲ್ಲಿ ಯಾವುದೇ ಬಣ ಇಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಜ್ಯದ ಆಸ್ತಿ. ಡಿಕೆಶಿ ಅವರ ಹೋರಾಟಕ್ಕೆ, ಶ್ರಮಕ್ಕೆ ಪ್ರತಿಫಲ ಸಿಗಬೇಕು ಎನ್ನುವುದು ನಮ್ಮ ಬೇಡಿಕೆ ಎಂದರು.ನಾಳೆ ನಾನು ಡಿಕೆಶಿವಕುಮಾರ್‌ ನೇತೃತ್ವದಲ್ಲಿ ದೆಹಲಿಗೆ ಹೋಗಿ ವೋಟ್‌ ಚೋರಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ. ದೆಹಲಿ ಭೇಟಿ ಸಮಯದಲ್ಲಿ ನಾವು ಯಾವುದೇ ವರಿಷ್ಠರನ್ನ ಭೇಟಿ ಮಾಡುವುದಿಲ್ಲ. ಈಗಾಗಲೇ ನಮ್ಮ ಮನವಿಯನ್ನ ವರಿಷ್ಠರಿಗೆ…

Read More

ಮಂಗಳೂರು; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರ ವಲಯದ ಪಡೀಲ್‌ನಲ್ಲಿ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್ (26) ಎಂದು ಗುರುತಿಸಲಾಗಿದೆ. ಅವರ ಮೃತದೇಹ ಪಡೀಲ್ ಕೊಡೆಕ್ಕಲ್ ಬಳಿಯ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕಂಕನಾಡಿ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ತಂದೆಯವರಾದ ಕೀರ್ತಿಶೇಷ ದಾಮೋದರ ಸುವರ್ಣ ಅವರ ಸ್ಮರಣಾರ್ಥವಾಗಿ ಸ್ಥಾಪಿತವಾದ ದಾಮೋದರ ಸುವರ್ಣ ಚಾರಿಟೇಬಲ್ ಟ್ರಸ್ಟ್ ಮೂಲಕ ಡಾ. ಉದಯ ಚಂದ್ರ ಸುವರ್ಣ ಅವರು ಸಮಾಜಸೇವೆಗೆ ಹೊಸ ಆಯಾಮ ನೀಡುತ್ತಿದ್ದಾರೆ. ಟ್ರಸ್ಟ್‌ನ ಸಮಾಜಮುಖಿ ಕಾರ್ಯಕ್ರಮಗಳಲ್ಲಿನ ಅತ್ಯಂತ ಪ್ರಮುಖ ಭಾಗವಾಗಿರುವ ಪ್ರತಿಭಾ ಪುರಸ್ಕಾರ ಯೋಜನೆಗೆ ಅವರು ಪ್ರತಿವರ್ಷವೂ ರೂ. 50 ಲಕ್ಷ ವೆಚ್ಚವನ್ನು ನಿರಂತರವಾಗಿ ಭರಿಸುತ್ತಾ ಬಂದಿರುವುದು ಗಮನಾರ್ಹ. ಶಿಕ್ಷಣ, ಸಾಧನೆ ಮತ್ತು ಪ್ರತಿಭೆಗಳ ಗೌರವೀಕರಣವೇ ಸಾಮಾಜಿಕ ಪ್ರಗತಿಗೆ ಮೂಲ ಎಂಬ ನಂಬಿಕೆಯಿಂದ, ಅರ್ಹ ವಿದ್ಯಾರ್ಥಿಗಳು ಹಾಗೂ ಸಾಧಕರಿಗೆ ಪ್ರೋತ್ಸಾಹ ನೀಡುವ ಈ ಯೋಜನೆಯನ್ನು ಅವರು ನಿರಂತರವಾಗಿ ಮುನ್ನಡೆಸಿದ್ದಾರೆ. ಈ ವರ್ಷ ಅದರಲ್ಲೂ ವಿಶೇಷವಾಗಿ, ರೂ. 60 ಲಕ್ಷ ಮೊತ್ತವನ್ನು ಪ್ರತಿಭಾ ಪುರಸ್ಕಾರಕ್ಕಾಗಿ ಒಬ್ಬರೇ ವೈಯಕ್ತಿಕವಾಗಿ ವ್ಯಯಿಸಿರುವುದು ಅವರ ಸಮಾಜಪರ ನಿಷ್ಠೆ, ಉದಾರ ಮನೋಭಾವ ಮತ್ತು ಶಿಕ್ಷಣದ ಮೇಲಿನ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ಅಪಾರ ಯಶಸ್ಸು ಸಾಧಿಸಿದರೂ, ಅದರ ಫಲವನ್ನು ಸಮಾಜದ ಹಿತಕ್ಕಾಗಿ ಹಂಚುವ ಡಾ. ಉದಯ ಚಂದ್ರ ಸುವರ್ಣ ಅವರ…

Read More

ಮಂಗಳೂರು: ಗ್ರಾಹಕರಿಗೆ ನಗುಮೊಗದ ಸೇವೆಗಳನ್ನು ನೀಡುತ್ತಾ ಬಂದಿರುವ ಅಮ್ಮ ಜ್ಯುವೆಲ್ಲರ್ಸ್, ಮಂಗಳೂರು (ಅಮ್ಮ ಸೇವಾ ಪ್ರತಿಷ್ಠಾನ (ರಿ.) ಮಂಗಳೂರು) ಸಂಸ್ಥೆಯು ಶ್ರೀ ದೇವಿಯ ಅನುಗ್ರಹ ಹಾಗೂ ಗ್ರಾಹಕ ಬಂಧುಗಳ ಪ್ರೋತ್ಸಾಹದಿಂದ ತನ್ನ ಸೇವೆಯ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಮಹತ್ವದ ಸಂದರ್ಭದಲ್ಲಿ ಗ್ರಾಹಕರು, ಸದಸ್ಯರು ಹಾಗೂ ಹಿತೈಷಿಗಳ ಸೇವಾಬದ್ಧತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ‘ಅಮ್ಮ ಶ್ರೀ ರಕ್ಷಾ ನಿಧಿ’ ಎಂಬ ವಿನೂತನ ಪರಸ್ಪರ ಸಹಾಯಕ ಯೋಜನೆಯನ್ನು ಸಂಸ್ಥೆ ಪರಿಚಯಿಸಿದೆ. ಈ ಯೋಜನೆಯಡಿ ಸುಲಭ ಕಂತು ವ್ಯವಸ್ಥೆ ಒದಗಿಸಲಾಗಿದ್ದು, ಒಟ್ಟು ಪಾವತಿ ರೂ. 11,000 ಆಗಿರುತ್ತದೆ. ಗ್ರಾಹಕರು ಈ ಮೊತ್ತವನ್ನು ಒಂದೇ ಕಂತಿನಲ್ಲಿ ಅಥವಾ 11 ಕಂತುಗಳಲ್ಲಿ ಪಾವತಿಸುವ ಅವಕಾಶವಿದೆ. ಈ ಯೋಜನೆಯ ಮೂಲಕ ಕನಿಷ್ಠ ರೂ. 25,000/- ರಿಂದ ಗರಿಷ್ಠ ರೂ. 50,000/- ವರೆಗೆ ಪ್ರಯೋಜನವನ್ನು ಪಡೆಯಬಹುದಾಗಿದೆ. ಸಾರ್ವಜನಿಕರು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9448261091, 9844706865, 7760215601, 9008502919

Read More

ಮಂಗಳೂರು; ದಾಮೋದರ್ ಆರ್ ಸುವರ್ಣ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪ, ಕುದ್ರೋಳಿ, ಮಂಗಳೂರು ಇಲ್ಲಿ ಡಿ.21 ರಂದು ಬೆಳಿಗ್ಗೆ 10.00 ಕ್ಕೆ ವಿದ್ಯಾರ್ಥಿ ವೇತನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಸಮಾರಂಭ ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯರು ಬಿ.ಕೆ. ಹರಿಪ್ರಸಾದ್ ನೆರವೇರಿಸಲಿದ್ದು, ವಿದ್ಯಾರ್ಥಿ ವೇತನವನ್ನು ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ವಿತರಿಸಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಲಿರುವರು. ಸಭಾಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರು ಶ್ರೀ ನವೀನ್ ಚಂದ್ರ ಸುವರ್ಣ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಮೂಡಬಿದ್ರೆ ಶಾಸಕ ಉಮಾನಾಥ ಎ. ಕೋಟ್ಯಾನ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಹಿಸಲಿದ್ದಾರೆ. ಸರ್ವರನ್ನು ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ನವೀನ್ ಚಂದ್ರ ಸುವರ್ಣ,…

Read More

ಕಾಪಿಕಾಡ್; ಉಮಾಪುರಿ ಕಾಪಿಕಾಡ್ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿರುವ ಹಿನ್ನಲೆ ಡಿ.14 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಲಿದೆ.

Read More

ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರ ಉಳಿಯ- ಉಳ್ಳಾಲ ಸಮಾಜದ ವತಿಯಿಂದ ವರ್ಷಂಪ್ರತಿಯ0ತೆ ನಡೆಸಿಕೊಂಡು ಬರುತ್ತಿರುವ ಸೋಮೇಶ್ವರ ಶ್ರೀ ಸೋಮನಾಥ ದೇವರಿಗೆ ಸಿಯಾಳ ಅಭಿಷೇಕ ಡಿ.15ರಂದು ನೆರವೇರಲಿದೆ. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 10;30ಕ್ಕೆ ಸಿಯಾಳ ಅಭಿಷೇಕ ನಡೆದು ಮಧ್ಯಾಹ್ನ 12ಗಂಟೆಗೆ ಮಹಾಪೂಜೆ, ಪ್ರಸಾದ ನಡೆದು ಬಳಿಕ ಅನ್ನಸಂತರ್ಪಣೆ ಮೂಲಕ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

Read More