ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ದೇಶದ ಅಭಿವೃದ್ಧಿಯಲ್ಲಿ ಎನ್ಎಸ್ಎಸ್ ನ ಪಾತ್ರ ಮಹತ್ವದಾಗಿದೆ. ಇದರಲ್ಲಿ ಭಾಗವಹಿಸುವ ಪ್ರತಿಯೊಬ್ಬರಲ್ಲೂ ನಾಯಕತ್ವ ಗುಣ ಬೆಳೆಸುವುದರ ಜೊತೆಗೆ ವೈಯಕ್ತಿಕ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಕೇವಲ ತರಗತಿಯ ಕೊಠಡಿಯಲ್ಲಿ ಸಿಗುವ ಶಿಕ್ಷಣಕ್ಕೆ ಜೋತುಬೀಳದೆ ಮಾನವೀಯ ಶಿಕ್ಷಣವನ್ನು ತಮ್ಮದಾಗಿಸಿಕೊಳ್ಳಬೇಕು. ಈ ಮೂಲಕ ಸಮಾಜಕ್ಕೆ ಏನಾದರೂ ಕೊಡುಗೆಯನ್ನು ನೀಡುವುದರ ಜೊತೆಗೆ ಸಮಾಜಿಮುಖಿ ಕಾರ್ಯಗಳು ಇಂದಿನ ಯುವ ಸಮುದಾಯಗಳಿಂದ ನಡೆಯಬೇಕಿದೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕೆ. ಪಾಂಡ್ಯರಾಜ ಬಲ್ಲಾಳ್ ಟ್ರಸ್ಟ್ನ ಮೆನೇಜಿಂಗ್ ಟ್ರಸ್ಟಿ ಡಾ. ಪ್ರಿಯಾ ಕೆ. ಬಲ್ಲಾಳ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಕೆ. ಪಾಂಡ್ಯರಾಜ ಬಲ್ಲಾಳ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶರ್ಮಿಳಾ ಮುಖೇಶ್ ರಾವ್ ಉಪಸ್ಥಿತರಿದ್ದರು. ಬಿ.ಎಸ್ಸಿ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿನಿ ಮೇರಿ ಪೀಟರ್ ಸ್ವಾಗತಿಸಿದರು. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಕೈನಿ ಸಿಸಿಲಿಯಾ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು ಪರಿಚಯಿಸಿದರು. ಚೈತ್ರಾ ನಾಯಕ್…
Author: UllalaVani
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ರಸ್ತೆ ಅಭಿವೃದ್ಧಿ ಸರಕಾರದ ಉದ್ದೇಶವಾಗಿದ್ದು, ಅದರ ಗುಣಮಟ್ಟದ ಪರಿಶೀಲನೆ ಹಾಗೂ ಕಾಪಾಡುವುದು ನಾಗರೀಕರ ಜವಾಬ್ದಾರಿಯಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಉಳ್ಳಾಲ ನಗರಸಭೆ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಹೊಸಗದ್ದೆ ಅಡ್ಡರಸ್ತೆ ಮತ್ತು ನಿತ್ಯಾಧರನಗರ ಸೈಟಿನಿಂದ ದಾರಂದಬಾಗಿಲು ಸಂಪರ್ಕಿಸುವ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಪೆರ್ಮನ್ನೂರು ಗ್ರಾಮದ ಅಡ್ಡರಸ್ತೆ ಹೊಸಗದ್ದೆ ನಾದುರಸ್ತಿಯಲ್ಲಿತ್ತು. ಜನರ ಬೇಡಿಕೆಗೆ ಸ್ಪಂಧಿಸಿ ವಿಶೇಷ ಅನುದಾನ ಒದಗಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿ ಸಂದರ್ಭ ಗುಣಮಟ್ಟವನ್ನು ಕಾಪಾಡುವ ಜವಾಬ್ದಾರಿ ಸ್ಥಳೀಯರ ಮೇಲಿದ್ದು, ಅನುಮಾನಗಳಿದ್ದಲ್ಲಿ ತಕ್ಷಣವೇ ಸಂಬಂಧಿಸಿದ ಗುತ್ತಿಗೆದಾರರನ್ನು ಪ್ರಶ್ನಿಸಿ ಸರಿಪಡಿಸಿಕೊಳ್ಳಿ ಎಂದ ಅವರು ದಾರಂದಬಾಗಿಲು ಸಂಪರ್ಕಿಸುವ ರಸ್ತೆಗೆ ರೂ. 50 ಲಕ್ಷ ಅನುದಾನ ಮಂಜೂರು ಮಾಡಲಾಗಿದ್ದು, ಹಂತ ಹಂತದಲ್ಲೇ ಶಾಶ್ವತ ರಸ್ತೆಯನ್ನುನಿರ್ಮಿಸಲಾಗುವುದು. ಹೊಸಗದ್ದೆಯ ಒಳರಸ್ತೆಗಳ ಅಭಿವೃದ್ಧಿಯನ್ನು ಅನುದಾನ ಬಿಡುಗಡೆಯಾದ ತಕ್ಷಣವೇ ನಡೆಸಲಾಗುವುದು ಎಂದರು. ಈ ಸಂದರ್ಭ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಮೋನು, ಉಪಾಧ್ಯಕ್ಷೆ ಚಿತ್ರಾ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಪಜೀರು: ಚೀನಾ ವಸ್ತುಗಳನ್ನು ಧಿಕ್ಕರಿಸಿ ಗೋವಿನ ಉತ್ಪನ್ನಗಳನ್ನು ದೇಶಾದ್ಯಂತ ಹೆಚ್ಚು ಬಳಸುವ ಮೂಲಕ ದ್ರೋಹಿ ರಾಷ್ಟ್ರಗಳಿಗೆ ಬುದ್ದಿ ಕಲಿಸಬೇಕಿದೆ ಎಂದು ಉತ್ತರಕಾಶಿ ಕಪಿಲಾಶ್ರಮದ ಸ್ವಾಮೀಜಿ ಶ್ರೀ ರಾಮಚಂದ್ರ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು. ಅವರು ಪಜೀರು ಬೀಜಗುರಿಯ ಗೋವನಿತಾಶ್ರಯ ಟ್ರಸ್ಟ್ನಲ್ಲಿ ಭಾನುವಾರ ನಡೆದ ಬನಶಂಕರಿಯ ಆರಾಧನೆ ಕಾರ್ಯಕ್ರಮ ಮತ್ತು ನಂದಿನಿ ಪುಷ್ಕರಣಿ ಕೆರೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಗೋವನ್ನು ರಾಷ್ಟ್ರಪ್ರಾಣಿಯನ್ನಾಗಿ ಘೋಷಣೆ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ. ಇದು ಸಾಧ್ಯವಾಗದಿದ್ದರೂ ಗೋವನ್ನು ಮಾತೆಯ ರೂಪದಲ್ಲಿ ಕಾಣುತ್ತಿರುವುದರಿಂದ ಸರಕಾರವು ಗೋವನ್ನು ರಾಷ್ಟ್ರಮಾತೆಯಾಗಿ ಘೋಷಣೆ ಮಾಡಬೇಕಾದ ಅಗತ್ಯತೆ ಇದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸೋಮೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವಿಶ್ವನಾಥ ಗಟ್ಟಿ ವಗ್ಗ ಅವರು, ಪಜೀರಿನ ಗೋವನಿತಾಶ್ರಯ ಟ್ರಸ್ಟ್ ಕಳೆದ ಹದಿನೆಂಟು ವರ್ಷಗಳಿಂದ ಗೋಪಾಲಕೃಷ್ಣನ ಆರಾಧನೆಯೊಂದಿಗೆ ಗೋವುಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದೆ. ಆದ್ದರಿಂದ ನಾವೆಲ್ಲರೂ ಗೋವಿನ ಸೇವೆಗೆ ಕೈಯಿಂದಾಗುವ ಸಹಕಾರ ಮಾಡಬೇಕಾಗಿದೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟಿ ಶ್ರೀಧರ್…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕುಂಪಲ: ಮಕ್ಕಳಿಗೆ ಮೌಲ್ಯಯುತವಾದ ಶಿಕ್ಷಣದ ಜೊತೆಗೆ ದೇಶದ ಐಕ್ಯತೆಯನ್ನು ಕಾಪಾಡುವ ಕುರಿತ ಜಾಗೃತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವುದು ಹೆತ್ತವರ ಹಾಗೂ ಶಿಕ್ಷಣ ಸಂಸ್ಥೆಯ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸಮಾಜಕ್ಕೆ ಪೂರಕವಾದ ಶಿಕ್ಷಣ ಸಿಗುವ ಮೂಲಕ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ದೇರಳಕಟ್ಟೆ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಸಂಸ್ಥೆಯ ಸ್ಥಾಪಕಾಧ್ಯಕ್ಷ ಯು.ಕೆ.ಮೋನು ಅಭಿಪ್ರಾಯಪಟ್ಟರು. ಅವರು ಕುಂಪಲ ಶ್ರೀ ಬಾಲಕೃಷ್ಣ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಜರಗಿದ ಜ್ಞಾನ ದೀವಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರಧಾನವನ್ನು ನೆರವೇರಿಸಿ ಮಾತನಾಡಿದರು ವಿದ್ಯಾಭ್ಯಾಸವನ್ನು ಪಡೆದು ಹೆತ್ರವರ ಆಸೆಯಂತೆ ಉನ್ನತ ಹುದ್ದೆಯನ್ನು ಅಲಂಕರಿಸುವುದು ಎಷ್ಟು ಮುಖ್ಯವೋ ಅದರ ಜೊತೆಯಲ್ಲಿ ದೇಶಕ್ಕೆ ಏನಾದರೂ ಕೊಡುಗೆಯನ್ನು ನೀಡುವ ಮನೋಭಾವನೆ ಎಲ್ಲರಲ್ಲಿಯೂ ಮೂಡಬೇಕು. ಪ್ರಸುತ್ತ ಶಿಕ್ಷಣ ಎಂಬುವುದು ಬಂಡವಾಳಶಾಹಿಗಳ, ರಾಜಕೀಯದವರ ಹಿಡಿತದಲ್ಲಿದ್ದು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಂತಹ ಮಕ್ಕಳಿಗೆ ದಾರಿ ತೋರಿಸುವಂತಹ ಕೆಲಸ ಕುಂಪಲದ ಶ್ರೀ ಬಾಲಕೃಷ್ಣ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ :ಸಸ್ಯರಾಶಿಯೇ ಅಭಿವೃದ್ಧಿಗೆ ಅನಿವಾರ್ಯ, ಯೋಜನೆಗಳಿಗಾಗಿ ಕಾಡುಗಳ ನಾಶ ಸಲ್ಲ:ಪಿ.ಎಸ್ ಪ್ರಕಾಶ್ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ಸಮರ್ಥಭಾರತ ಕೋಟಿ ವೃಕ್ಷಾರೋಹಣ ಅಭಿಯಾನಯೋಜನೆಗಳ ಹೆಸರಲ್ಲಿ ಕಾಡನ್ನು ನಾಶಪಡಿಸುವುದರಿಂದ ಸಸ್ಯರಾಶಿಯು ನಶಿಸಿ ಹೋಗುತ್ತಿದ್ದು, ಭವಿಷ್ಯದ ಅಭಿವೃದ್ಧಿಯ ದೃಷ್ಟಿ ಇರಿಸಿ ಸಸ್ಯರಾಶಿಯನ್ನು ಉಳಿಸಿ ಬೆಳೆಸುವ ಅನಿವಾರ್ಯತೆ ಇದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಪ್ರಮುಖ್ ಪಿ.ಎಸ್ ಪ್ರಕಾಶ್ ಅವರು ಅಭಿಪ್ರಾಯಪಟ್ಟರು. ಪ್ರಧಾನಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ಜೂನ್ 5ರಿಂದ-ಆಗಸ್ಟ್ 15ರ ವರೆಗೆ ದೇಶದಲ್ಲೆಡೆ ನಡೆಯಲಿರುವ ಸಮರ್ಥಭಾರತ ಕೋಟಿ ವೃಕ್ಷಾರೋಹಣ ಅಭಿಯಾನದ ಅಂಗವಾಗಿ ಆದಿತ್ಯವಾರದಂದು ಕುತ್ತಾರುವಿನ ಬಾಲಸಂರಕ್ಷಣಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಇಂದು ದೇಶದಲ್ಲೆಡೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಜಾಗತಿಕ ತಾಪಮಾನವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮೂವತ್ತು ವರುಷಗಳ ಹಿಂದೆ ದೆಹಲಿಯಲ್ಲಿ ಬಾಟಲಿಯಲ್ಲಿ ನೀರು ಮಾರಾಟ ಮಾಡುತ್ತಿದ್ದಾರೆಂಬ ಸುದ್ದಿ ಕೇಳಿ ನಾವೆಲ್ಲರೂ ಆಶ್ಚರ್ಯ ಪಟ್ಟಿದ್ದೆವು.ಆದರೆ ಭವಿಷ್ಯದಲ್ಲಿ ಕಾಡುಗಳ ನಾಶದಿಂದಾಗಿ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಪಜೀರು : ಗೋವು ರಾಷ್ಟ್ರ ಪ್ರಾಣಿಯಾಗಿರುವುದು ಬೇಡ, ಆ ಸ್ಥಾನ ಹುಲಿಗೇ ಇರಲಿ, ಆದರೆ ಗೋವನ್ನು ರಾಷ್ಟ್ರ ಮಾತೆ ಎಂದು ಸರ್ಕಾರ ಘೋಷಿಸಬೇಕು ಎಂದು ಉತ್ತರ ಕಾಶಿ ಕಪಿಲಾಶ್ರಮದ ಸ್ವಾಮಿ ರಾಮಚಂದ್ರ ಅವರು ಅಭಿಪ್ರಾಯಪಟ್ಟರು. ಪಜೀರು ಗೋವನಿತಾಶ್ರಯದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಸ್ಯಕಾಶಿಗೆ ಅಂಕುರಾರ್ಪಣೆ, ಬನಶಂಕರಿ ಆರಾಧನೆ ಹಾಗೂ ನೂತನ ಕೆರೆ ನಂದಿನಿ ಪುಷ್ಕರಣಿ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಸಂಸ್ಕøತಿ ಮತ್ತು ಸಂಸ್ಕಾರ ಬಿಟ್ಟವರಿಂದ ಬೀಫ್ ಫೆಸ್ಟ್ನಂತಹ ಕಾರ್ಯಕ್ರಮಗಳು ನಡೆಯುತ್ತವೆ, ಭಾರತದೊಗಳಗೆ ಗೋವನ್ನು ಹತ್ಯೆ ಮಾಡುವವರು ದೇಶದ್ರೋಹಿಗಳು, ಇಂತಹ ಕೃತ್ಯ ಸಹಿಸಲಾಧ್ಯ, ಗೋಹತ್ಯೆ ನಿಂತಾಗ ಸಂಸ್ಕøತಿ ಮತ್ತು ಸಂಸ್ಕಾರ ಬೆಳೆಯುತ್ತದೆ, ಈ ಕಾರ್ಯ ಕೇಸರಿ ಶಾಲುಧಾರಿ ಸಂಘಟನೆಗಳಿಂದ ಮಾತ್ರ ಸಾಧ್ಯ ಎಂದು ಹೇಳಿದರು. ಮನುಷ್ಯನ ಜೀವನ ಚರಂಡಿಯಲ್ಲಿ ಹುಟ್ಟಿದ ಹುಳಗಳಂತಾಗಬಾರದು, ಯಾರಿಗಾದರೂ ಉಪಕಾರವಾಗುವ ಜೀವನವಾಗಬೇಕು. ಮನುಷ್ಯನಿಗೆ ಬದುಕುವ ಹಕ್ಕು ಇದೆ ಎಂದ ಮೇಲೆ ಗೋವುಗಳಿಗೂ ಇವೆ. ವಾಸ್ತವವಾಗಿ ಭಾರತಕ್ಕೆ ಚೀನಾ ದೊಡ್ಡ ಶತ್ರು. ಆದರೆ ನಾವಿಂದು…
ಉಳ್ಳಾಲ ನ್ಯೂಸ್ ನೆಟ್ವರ್ಕ್ ತೊಕ್ಕೊಟ್ಟು:ಇಲ್ಲಿನ ನಗರಸಭಾ ವತಿಯಿಂದ ಸಾರ್ವಜನಿಕರ ದೂರಿನ ಮೇರೆಗೆ ಮತ್ತು ಪೌರಾಯುಕ್ತರ ಆದೇಶದ ಮೇರೆಗೆ ತೊಕ್ಕೊಟ್ಟು ರಸ್ತೆ ಬದಿಯಲ್ಲಿದ್ದ ಗೂಡಂಗಡಿಗಳನ್ನು ಶನಿವಾರ ತೆರವುಗೊಳಿಸಲಾಯಿತು. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಸ್ವಚ್ಛ ತೊಕ್ಕೊಟ್ಟುವಿನ ಪರಿಕಲ್ಪನೆಗೆ ಉಳ್ಳಾಲ ನಗರಸಭೆಗೆ ಎಲ್ಲಾ ನಾಗರಿಕರು ಕೈ ಜೋಡಿಸಿ ಎಂದು ಉಳ್ಳಾಲ ನಗರಸಭೆ ಆಯುಕ್ತೆ ವಾಣಿ ಆಳ್ವ ತಿಳಿಸಿದರು. ಶಿಯಾಳದ ಗೆರಟೆಯಲ್ಲಿ ಮಳೆಯ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡುವ ಬಗ್ಗೆ ಆರೋಗ್ಯ ಇಲಾಖೆ ಈ ಹಿಂದೆ ಎಚ್ಚರಿಸಿದರೂ ಪ್ರಯೋಜನವಾಗಿಲ್ಲ ಈ ನಿಟ್ಟಿನಲ್ಲಿ ತೊಕ್ಕೊಟ್ಟು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ತೆರವುಗೊಳಿಸಿದ್ದೇವೆ ಎಂದು ಉಳ್ಳಾಲ ನಗರಸಭೆ ಆರೋಗ್ಯ ನಿರೀಕ್ಷಕ ರಾಜೇಶ್ ಹೇಳಿದರು. ಕಾರ್ಯಾಚರಣೆ ವೇಳೆ ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್ವರ್ಕ್ ತೊಕ್ಕೊಟ್ಟು : ಕಲ್ಲಾಪು ಭಾಗದಲ್ಲಿ ಒಂಭತ್ತು ಲಕ್ಷ ಪರೋಪಜೀವಿಗಳನ್ನು ತೆಂಗಿನಮರಗಳಿಗೆ ಬಿಡಲಾಗಿದ್ದರೂ , ಕೀಟಗಳ ಪ್ರಮಾಣ ಅಧಿಕವಾಗಿದ್ದ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಅಸಾಧ್ಯವಾಗಿದೆ. ಮಳೆ ಕಡಿಮೆಯಾಗಿ ಬಿಸಿಲಿನ ತಾಪವೂ ಹೆಚ್ಚಾಗಿದ್ದರಿಂದಾಗಿ ಚಿಕ್ಕ ಕೀಟಗಳು ದೊಡ್ಡದಾಗಿ ಬೆಳೆದು ಭಾಗಶ: ತೆಂಗಿನಮರಗಳು ಭಾದೆಗೆ ತುತ್ತಾಗಿದೆ ಎಂದು ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸೀಮಾ ಹೇಳಿದರು. ದಕ್ಷಿಣ ಕನ್ನಡ ತೋಟಗಾರಿಕೆ ಇಲಾಖೆ, ಮಂಗಳೂರು ತೆಂಗು ಉತ್ಪಾದಕರ ಜಿಲ್ಲಾ ಫೆಡರೇಶನ್, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ತೊಕ್ಕೊಟ್ಟಿನ ಯೂನಿಟಿ ಹಾಲ್ ನಲ್ಲಿ ಬುಧವಾರ ನಡೆದ ತೆಂಗುಬೆಳೆಯ ಕಪ್ಪು ತಲೆ ಹುಳು ಬಾಧೆಯ ನಿಯಂತ್ರಣ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು. ಫೆಬ್ರವರಿ ತಿಂಗಳಿನಲ್ಲಿ ಕಾಸರಗೋಡಿನ ಸಿಪಿಸಿಆರ್ಐ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿಕೊಂಡು ವಿಜ್ಞಾನಿಗಳ ನೇತೃತ್ವದಲ್ಲಿ ಪ್ರತಿ ಮರಕ್ಕೆ 20 ಪರೋಪಜೀವಿಗಳನ್ನು 15 ದಿನಗಳಲ್ಲಿ ಬಿಡಲಾಗಿತ್ತು. ಬಿಸಿಲಿನ ತಾಪಮಾನದಿಂದಾಗಿ ಅದು ನಿಯಂತ್ರಣಕ್ಕೆ ಬರಲಿಲ್ಲ. ಮರಗಳಲ್ಲಿ ಪೌಷ್ಠಿಕಾಂಶದ ಕೊರತೆಯಿಂದಾಗಿ ಕೀಟ ಬಾಧಿಸಿದೆ. ಚಳಿಗಾಲದಲ್ಲಿ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕೊಣಾಜೆ: ಮುಡಿಪುವಿನ ಹಾಲು ಉತ್ಪಾದಕರ ಸಂಘಕ್ಕೆ ಹಾಲು ತಂದಿದ್ದ ವ್ಯಕ್ತಿಯೋರ್ವರು ಹಾಲಿನ ಗುಣಮಟ್ಟ ಕಡಿಮೆ ಇದೆ ಎಂದು ಹೇಳಿ ವಾಪಸ್ಸು ಕೊಟ್ಟದಕ್ಕೆ 16-10-2013ರಂದು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಒಂದು ವರ್ಷ ಸಜೆ ಹಾಗೂ 5 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದೆ. ಮುಡಿಪುವಿನ ಹಾಲು ಉತ್ಪಾದಕರ ಸಂಘಕ್ಕೆ ಬೋಳಿಯಾರ್ ವಾದಿರಾಜ್ ಎಂಬವರು ಹಾಲು ಮಾರಾಟ ಮಾಡಲು ಹಾಲು ತಂದಿದ್ದರು. ಈ ಸಂದರ್ಭದಲ್ಲಿ ಉತ್ಪಾದಕರ ಸಂಘದ ಹಾಲು ಸಂಗ್ರಹಿಸುತಿದ್ದ ಮಿತ್ತಕೋಡಿಯ ಹೇಮಂತ ಎಂಬವರು ಹಾಲಿನ ಗುಣಮಟ್ಟ ಪರೀಕ್ಷಿಸಿದ್ದು ಗುಣಮಟ್ಟ ಕಡಿಮೆಯಿದ್ದುದರಿಂದ ಹಾಲನ್ನು ವಾಪಸ್ಸು ನೀಡಿದ್ದರು. ಇದರಿಂದ ಆಕ್ರೋಶಗೊಂಡ ವಾದಿರಾಜ ಅವರು ಹಾಲನ್ನು ಅಲ್ಲೇ ಚೆಲ್ಲಿ ಹೇಮಂತ್ ಅವರನ್ನು ದೂಡಿ ಹಾಕಿ ಹಲ್ಲೆ ನಡೆಸಿದ್ದರು. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹೇಮಂತ್ ಅವರು ಕೊಣಾಜೆ ಠಾಣೆಗೆ ದೂರು ನೀಡಿದ್ದರು.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಮುಡಿಪು: ಭಾರತವು ವಿವಿಧ ಭಾಷೆ, ಧರ್ಮ, ಸಂಸ್ಕøತಿ, ಜನಾಂಗವನ್ನು ಒಳಗೊಂಡ ದೇಶವಾಗಿದ್ದರೂ ವೈವಿದ್ಯತೆಯಲ್ಲಿ ಏಕತೆಯನ್ನು ಕಂಡಂತಹ ರಾಷ್ಟ್ರವಾಗಿದೆ. ಬಹುಭಾಷಿಕತೆ ಎಂಬುದು ಒಂದು ಪ್ರಜಾಪ್ರಭುತ್ವ ಮಾತ್ರವಲ್ಲದೆ ಇದನ್ನು ಬಹುರಾಷ್ಟ್ರೀಯ ಪ್ರಜಾಪ್ರಭುತ್ವವಾಗಿಯೂ ನಾವು ಕಾಣಬಹುದು. ಪ್ರಜಾಪ್ರಭುತ್ವದ ನೈಜವಾದ ಅರ್ಥ ಸ್ವಭಾವವೇ ಬಹುಭಾಷಿಕತೆಯಾಗಿದೆ ಎಂದು ಅಮೇರಿಕದ ನ್ಯೂಯಾರ್ಕ್ ಸ್ಟೋನಿ ಬ್ರೂಕ್ ವಿಶ್ವವಿದ್ಯಾನಿಲಯದ ಭಾರತ ಅಧ್ಯಯನ ವಿಭಾಗದ ನಿರ್ದೇಶಕರಾದ ಹಿರಿಯ ಭಾಷಾವಿಜ್ಞಾನಿ ಪ್ರೊ. ಎಸ್ ಎನ್ ಶ್ರೀಧರ್ ಅವರು ಅಭಿಪ್ರಾಯ ಪಟ್ಟರು. ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾನಿಲಯದ ಮೈಕ್ರೊಟ್ರಾನ್ ಸಭಾಂಗಣದಲ್ಲಿ ಭಾರತ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಅನುದಾನದೊಂದಿಗೆ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಎರಡು ವಾರಗಳ ಕಾಲ ಬಹುಭಾಷಿಕತೆ ಸಾಮಾಜಿಕ ಸಾಂಸ್ಕøತಿಕ ಮತ್ತು ಸಾಹಿತ್ಯಿಕ ಆಯಾಮಗಳು’ ಎಂಬ ವಿಷಯದಲ್ಲಿ ಆಯೋಜಿಸಲಾಗಿದ್ದ `ಗ್ಯಾನ್’ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ ರಾಷ್ಟ್ರದ ಬೆಳವಣಿಗೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮ, ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ನಡೆದ ಕ್ರಾಂತಿಕಾರಿ ಬೆಳವಣಿಗೆಗಳು ಬಹಳ ಪ್ರಮುಖವಾದವುಗಳಾಗಿವೆ.…

