Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜುಗಳ ಮೂಲಕ ಸಮುದಾಯ ಅಭಿವೃದ್ಧಿ ಯೋಜನೆಯ ಅನ್ವಯ, ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಬೋಂದೆಲ್. ಕೇಸರಿ ಮಿತ್ರ ವೃಂದ ಮತ್ತು ಕೇಸರಿ ಮಾತೃ ಮಂಡಳಿಯ ಸಹಭಾಗಿತ್ವದಲ್ಲಿ ಉಚಿತ ಟೈಲರಿಂಗ್ ಶಿಬಿರವನ್ನು ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಬಿ.ಎನ್.ಕುಂಬಾರ ಕೇಸರಿ ಸಭಾಭವನದಲ್ಲಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಸರಿ ಸೇವಾ ಟ್ರಸ್ಟ್ ನ ಟ್ರಸ್ಟಿ ನಾರಾಯಣ ಕುಂಪಲ ವಹಿಸಿದ್ದರು. ಈ ಸಂದರ್ಭ ಮಾತೃ ಮಂಡಳಿಯ ಅಧ್ಯಕ್ಷೆ ಪ್ರಮೀಳಾ ವಿಜಯ್, ಗೌರವ ಸಲಹೆಗಾರರಾದ ಜಯಲಕ್ಷ್ಮಿ ಕುಂಪಲ, ರಾಕೇಶ್ ಶೆಟ್ಟಿ, ಚಂದ್ರಕಲ ಎಸ್. ಕುಮಾರ್ ಉಪಸ್ಥಿತರಿದ್ದರು. ಲಲಿತಾ ಕೇಶವ್ ಸ್ವಾಗತಿಸಿದರು. ಮಮತ ಜೀತೇಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಿನಿ ದೇವದಾಸ್ ವಂದಿಸಿದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಪ್ರತಿಯೊಂದು ಜೈವಿಕ ಸಂಪತ್ತಿನಲ್ಲೂ ಅದರದೇ ಆದ ವೈಶಿಷ್ಟ್ಯತೆ ಇದ್ದು ,ಒಂದನ್ನೊಂದು ಪ್ರಾಕೃತಿಕವಾಗಿ ಅವಲಂಬಿಸಿದ್ದು ಅದರ ಬಗೆಗೆ ವಿದ್ಯಾರ್ಥಿಗಳು ಗ್ರಹಿಕೆ ಮತ್ತು ಸಂಶೋಧನೆಯಲ್ಲಿ ತೊಡಗಿಸುವಂತೆ ದೇರಳಕಟ್ಟೆ ಕಣಚೂರು ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನ ಅನಾಟಮಿ ವಿಭಾಗದ ಮುಖ್ಯಸ್ಥ ಡಾ.ಅರುಣಾಚಲಂ ಕುಮಾರ್ ಕರೆ ನೀಡಿದರು . ಅವರು ಉಳ್ಳಾಲ ಸುಭಾಸ್‍ನಗರದ ಕೆ.ಪಾಂಡ್ಯರಾಜ್ ಬಲ್ಲಾಳ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ನಡೆದ “ಜೈವಿಕ ವೈವಿಧ್ಯ ಮತ್ತು ಅದರ ಸಂರಕ್ಷಣೆ ” ಕುರಿತಾದ ಪ್ರಾದೇಶಿಕ ಸಮ್ಮೇಳನದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು . ಜೈವಿಕ ಸಂಪತ್ತನ್ನು ರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ .ಪ್ರತಿ ಜೀವ ರಾಶಿಯಲ್ಲೂ ಅದರದೇ ಆದ ವೈಶಿಷ್ಟ್ಯವಿದ್ದು ಅದರ ಬಗ್ಗೆ ವಿದ್ಯಾರ್ಥಿಗಳು ಆಳವಾಗಿ ಗ್ರಹಿಸಿ ,ಸಂಶೋಧನೆಗಳನ್ನು ನಡೆಸಬೇಕು. ಹಕ್ಕಿಯು ತನ್ನ ಕತ್ತನ್ನು ಹಿಂತಿರುಗಿಸಿ ನೋಡದಿದ್ದರೂ ,ಮುಂಬರುವ ಆಪತ್ತನ್ನು ಜಗತ್ತಿಗೆ ತಿಳಿಸುವ ವಿಶೇಷ ಗ್ರಹಣ ಶಕ್ತಿಯನ್ನು ಹೊಂದಿದೆ .ಅದು ತನ್ನ ಕೈ ,ಕಾಲುಗಳಿಂದ ಏನನ್ನೂ ಮಾಡದಿದ್ದರೂ ಆ ಹಕ್ಕಿಯ ಬಗ್ಗೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು:ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವು ಅಧಿಕಾರಕ್ಕೆ ಬಂದಂದಿನಿಂದ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ,ಅಕಸ್ಮಾತ್ ಮಾಡಿದ್ದರೂ ಅದು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವಿದ್ದಾಗ ಮಂಜೂರಾದ ಯೋಜನೆಯಾಗಿದ್ದು ಪ್ರಸಕ್ತ ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಶಾಲಾ ಶಿಕ್ಷಕರಿಗೆ ಚಾಕ್‍ಗಳನ್ನು ಒದಗಿಸಲು ಹೆಣಗಾಡುತ್ತಿರವುದೇ ಸ್ಪಷ್ಟ ಉದಾಹರಣೆ ಎಂದು ವಿದಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಅವರು ಲೇವಡಿ ಮಾಡಿದರು . ಅವರು ತೊಕ್ಕೊಟ್ಟು ಕೊಲ್ಯದ ನಾರಾಯಣ ಗುರು ಸಭಾಭವನದಲ್ಲಿ ಮಂಗಳೂರು ವಿದಾನಸಭಾ ಕ್ಷೇತ್ರ ಬಿಜೆಪಿ ಯುವಮೋರ್ಚಾವತಿಯಿಂದ ನಡೆದ ಬೈಕ್ ರ್ಯಾಲಿ ಮತ್ತು “ಯುವ ಸಮವೇಶ”ವನ್ನು ಉದ್ಘಾಟಿಸಿ ಮಾತನಾಡಿದರು .ಜಗತ್ತಿನಲ್ಲೇ ಅರವತ್ತು ಶೇಕಡ ಯುವ ಶಕ್ತಿಯನ್ನು ಹೊಂದಿರುವ ರಾಷ್ಟ್ರ ನಮ್ಮದು ,ಒಳ್ಳೆಯ ಕೆಲಸಗಳನ್ನು ಹೊಗಳುವ ಸಂಸ್ಷøತಿ ನಮ್ಮದು ಎಂಬುದನ್ನು ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಅವರು ತಾನು ಬಿಜೆಪಿ ಪಕ್ಷದವರಾದರೂ ಕಾಂಗ್ರೆಸಿನ ಮಾಜಿ ಪ್ರದಾನಿ ಇಂದಿರಾ ಗಾಂಧಿ ಅವರನ್ನು ದುರ್ಗೆ ಎಂದು ಬಣ್ಣಿಸುವ ಮುಖಾಂತರ ತೋರಿಸಿಕೊಟ್ಟಿದ್ದಾರೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕಾರು ಮರಕ್ಕೆ ಡಿಕ್ಕಿ ಹೊಡೆದು ಮಹಿಳೆಯೋರ್ವರು ಗಂಭೀರ ಗಾಯಗೊಂಡು ನಾಲ್ವರು ಗಾಯಗೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತಿಬ್ಲಪದವು ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಕೊಣಾಜೆ ವೊರ್ಕರೆಗುಡ್ಡೆ ನಿವಾಸಿಗಳಾದ ಒಂದೇ ಕುಟುಂಬದ ಕಾರು ಚಲಾಯಿಸುತ್ತಿದ್ದ ಮಹಮ್ಮದ್ ಅಸ್ಫಪಹಾನ್(25) ಪ್ರಯಾಣಿಕರಾಗಿದ್ದ ಶಿಫಾನ ಪರ್ವೀನ್ (17), ಶಮೀರಾ (350), ಇಶಾನಾ(13) ಗಾಯಗೊಂಡು, ಮುಮ್ತಾಝ್(45) ಎಂಬವರು ಚಿಂತಾಜನಕ ಸ್ಥಿತಿಯಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಣಾಜೆ ವೊರ್ಕರೆಗುಡ್ಡೆಯಿಂದ ಸೋಮೇಶ್ವರ ಉಚ್ಚಿಲದ ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ತಿಬ್ಲಪದವು ಬಳಿ ಎದುರುಗಡೆಯಿದ್ದ ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಎಡಬದಿಯಲ್ಲಿ ಇದ್ದ ಮರಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಂದು ಬಾಗಿಲು ಕೆಲ ಕಿ.ಮೀ ದೂರ ಬಿದ್ದಿತ್ತು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕ್ಷಕಿರಣ, ಹೊರರೋಗಿಗಳ ವಿಭಾಗ, ಡಯಾಲಿಸಿಸ್, ಸ್ಪೀಚ್ ಥೆರಪಿ ಮೊದಲಾದ ವ್ಯವಸ್ಥೆಗಳುಳ್ಳ ಆಸ್ಪತ್ರೆಯನ್ನು ಮಾದರಿಯಾಗಿಟ್ಟುಕೊಂಡು ಖಅಸಗಿ ಆಸ್ಪತ್ರೆಗೆ ಮಿಗಿಲಾಗಿ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರವನ್ನು ನಿರ್ಮಿಸಲಾಗುವುದು. ಹಾಗೆಯೇ ರಾಜ್ಯದ ಉದ್ದಗಲಕ್ಕೂ ಮಾದರಿ ಆಸ್ಪತ್ರೆಗಳ ನಿರ್ಮಾಣ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಉಳ್ಳಾಲದಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿ ಆಸ್ಪತ್ರೆ ನಿರ್ಮಾಣಕ್ಕಿಂತ ನಿರ್ವಹಣೆ ಕಷ್ಟ. ಹಾಗಾಗಿ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೊದಲ ಹಂತದಲ್ಲಿ 30ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ವಿಸ್ತರಿಸಲಾಗುವುದು ಎಂದರು. ಉಳ್ಳಾಲ ನಗರಸಭೆಯ ಉಪಾಧ್ಯಕ್ಷೆ ರಝಿಯಾ ಇಬ್ರಾಹಿಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಗಳ್ ಕೂರತ್ ಶಿಲಾನ್ಯಾಸಗೈದು ದುಆ ನೆರವೇರಿಸಿದರು. ದರ್ಗಾ ಸಮಿತಿ ಅಧ್ಯಕ್ಷ ಯು.ಎಸ್. ಹಂಝ, ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಕುಮಾರ್, ತೊಕ್ಕೊಟ್ಟು ಪೆರ್ಮನ್ನೂರಿನ ಸಂತ ಸೆಬೆಸ್ಟಿಯನ್ ಚರ್ಚ್‍ನ ಧರ್ಮಗುರು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ರಾಜ್ಯ ಅಲ್ಪಸಂಖ್ಯಾತ ನಿಗಮದಿಂದ ಕ್ರೈಸ್ತ ಸಮುದಾಯಕ್ಕೆ ಕೊಡಮಾಡುವ ಶ್ರಮಶಕ್ತಿ ಸಾಲ 629 ಮಂದಿಗೆ ಹಾಗೂ ಕಿರುಸಾಲ 216 ಮಂದಿಗೆ ವಿತರಣೆ ಕಾರ್ಯಕ್ರಮ ಮಂಗಳವಾರ ತೊಕ್ಕೊಟ್ಟು ಸಂತ ಸೆಬಾಸ್ತಿಯನ್ನರ ಚರ್ಚ್ ವಠಾರದಲ್ಲಿ ನಡೆಯಿತು. ಫಲಾನುಭವಿಗಳಿಗೆ ಸಾಲ ವಿತರಿಸಿದ ಆರೋಗ್ಯ ಸಚಿವ ಯು.ಟಿ.ಖಾದರ್ ಮಾತನಾಡಿ, ರಾಜ್ಯ ಸರ್ಕಾರ ಕಳೆದ ವರ್ಷ ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕೇವಲ ಮಂದಿ ಫಾಲನುಭವಿಗಳನ್ನು ಮಾತ್ರ ಆಯ್ಕೆ ಮಾಡಿತ್ತು. ಆದರೆ ಅರ್ಜಿ ಹಾಕಿದ ಎಲ್ಲರಿಗೂ ಸಾಲ ನೀಡಬೇಕು ಎಂದು ತಾನು ಒತ್ತಾಯಿಸಿದ ಪರಿಣಾಮ ಎಲ್ಲರಿಗೂ ಸಿಗುವಂತಾಗಿದೆ. ಈ ಮೂಲಕ ಸರ್ಕಾರದ ಸವಲತ್ತು ಜನಸಾಮಾನ್ಯರ ಕಾಲಬುಡಕ್ಕೆ ತಲುಪಿಸುವ ಪ್ರಯತ್ನ ಜನಪ್ರತಿನಿಧಿಗಳಿಂದ ನಡೆದಿದೆ. ಸಾಲ ಪಡೆದವರು ವ್ಯಾಪಾರ ಆರಂಭಿಸಿ ಅಭಿವೃದ್ಧಿ ಹೊಂದಲು ಪ್ರಯತ್ನಿಸಬೇಕು ಎಂದು ಹೇಳಿದರು. ಈ ಸಂದರ್ಭ ಚರ್ಚ್‍ನ ಧರ್ಮಗುರು ಫಾ.ಜೆ.ಬಿ.ಸಲ್ದಾನ, ಉಳ್ಳಾಲ ನಗರಸಭೆ ಉಪಾಧ್ಯಕ್ಷ ರಝಿಯಾ ಇಬ್ರಾಹಿಂ, ಕೌನ್ಸಿಲರ್‍ಗಳಾದ ಫಾರೂಕ್ ಉಳ್ಳಾಲ್, ಬಾಜಿಲ್ ಡಿಸೋಜ, ಉಸ್ಮಾನ್ ಕಲ್ಲಾಪು, ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್.ಕರೀಂ,…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಜನಾಡಿ: ಹೆಚ್ಚಿನ ಗ್ರಾಮ ಪಂಚಾಯಿತಿಗಳು ಕೇವಲ ನೀರು ಪೂರೈಕೆ, ರಸ್ತೆ ಅಭಿವೃದ್ಧಿ, ಚರಂಡಿ, ದಾರಿದೀಪದ ಬಗ್ಗೆ ಮಾತ್ರವೇ ಗಮನಹರಿಸುತ್ತಿದ್ದು ಇದೇ ವೇಳೆ ಗ್ರಾಮ ಪಂಚಾಯಿತಿಗೆ ಆದಾಯ ತರುವ ಕೆಲಸಗಳ ಬಗ್ಗೆಯೂ ಯೋಜನೆ ರೂಪಿಸಬೇಕು ಎಂದು ಆರೋಗ್ಯ ಸಚಿಯ ಯು.ಟಿ.ಖಾದರ್ ಹೇಳಿದರು. ಮಂಜನಾಡಿ ಗ್ರಾಮ ಪಂಚಾಯಿತಿ ವತಿಯಿಂದ ನಾಟೆಕಲ್‍ನಲ್ಲಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಗ್ರಾಮಾಭಿವೃದ್ಧಿ ಯೋಜನೆಗೆ ಹೆಚ್ಚಿನ ಆಧ್ಯತೆ ನೀಡಿದ್ದು 1.5 ಕೋಟಿ ರೂಪಾಯಿ ನೀಡುತ್ತಿದೆ. ಇದು ಮಂಜನಾಡಿಗೂ ದೊರಕಲಿದ್ದು ಒಳರಸ್ತೆ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗಳು ಶೀಘ್ರ ಆರಂಭಗೊಳ್ಳಲಿದೆ. ಇತರ ಗ್ರಾಮ ಪಂಚಾಯಿತಿಯಲ್ಲಿ ಪಿಡಿಓ ಮತ್ತು ಸದಸ್ಯರ ಮಧ್ಯೆ ವೈಮನಸ್ಸು ಇದ್ದು ಮಂಜನಾಡಿಯಲ್ಲಿ ಅಂತಹ ಸಮಸ್ಯೆ ಇಲ್ಲದ ಕಾರಣ ಗ್ರಾಮ ಅಭಿವೃದ್ಧಿ ಸುಲಲಿತವಾಗಿದೆ. ನಿವೇಶನ, ಹಕ್ಕುಪತ್ರ ವಿತರಣೆ ಪ್ರಗತಿಯಲ್ಲಿದೆ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್.ಕರೀಂ, ತಾಲೂಕು ಪಂಚಾಯಿತಿ ಸದಸ್ಯರಾದ ಮಹಮ್ಮದ್ ಮುಸ್ತಫಾ ಹರೇಕಳ, ಮಹಮ್ಮದ್ ಮೋನು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಾವೂರು: ಕೋಟೆಕಾರ್‍ನಲ್ಲಿ ನಾದುರಸ್ಥಿಯಲ್ಲಿರುವ ಪ್ರಾಥಮಿಕ ಪಶು ಆರೋಗ್ಯ ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಾಣಕ್ಕಾಗಿ 22 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಶೀಘ್ರವೇ ಶಿಲಾನ್ಯಾಸ ನಡೆಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ಪಾವೂರು ಗ್ರಾಮ ಕಂಬಳಪದವಿನಲ್ಲಿ 26 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಪಶು ಚಿಕಿತ್ಸಾಲಯ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಪಾವೂರು ಪಶು ಚಿಕಿತ್ಸಾಲಯದ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಸುಸಜ್ಜಿತ ಹೊಸ ಕಟ್ಟಡ ನಿರ್ಮಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಪ್ರಾಣಿಗಳು ಉಳಿದರೆ ಮಾತ್ರ ಜನಜೀವನ ಸುಲಲಿತವಾಗುತ್ತದೆ. ಸಾಕು ಪ್ರಾಣಿಗಳನ್ನು ಉಳಿಸುವುದು ಕ್ಲಿಷ್ಟಕರವಾಗಿದ್ದು ಇದಕ್ಕಾಗಿ ಚಿಕಿತ್ಸಾಲಯ ಅನಿವಾರ್ಯ. ಈಗಾಗಲೇ ವೈದ್ಯರು ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದ್ದು ಪ್ರಾಣಿಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಮೆಲ್ವಿನ್ ಡಿಸೋಜ, ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಫಿರೋಜ್ ಮಲಾರ್, ಉಪಾಧ್ಯಕ್ಷೆ ಲೀಲಾವತಿ ನಾಟ್ರಕೋಡಿ, ಸದಸ್ಯರಾದ ರುಪೀನಾ ಲೂವಿಸ್, ಮಹಮ್ಮದ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಸರಸ್ವತಿ ಕಾಲನಿಯಿಂದ ಸೋಮೇಶ್ವರದವರೆಗೆ ಶಾಸಕರ ವಿಶೇಷ ಅನುದಾನದಲ್ಲಿ ಆಗಲಿರುವ ರಸ್ತೆಯ ಕಾಂಕ್ರೀಟಿಕರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಶಿಲಾನ್ಯಾಸಗೈದರು. ಬಳಿಕ ಮಾತನಾಡಿದ ಅವರು ಉಳ್ಳಾಲ ಭಾಗದ ಎಲ್ಲಾ ಒ¼ರಸ್ತೆಗಳಿಗೆ ಹೆಚ್ಚಿನ ಒಲವು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಉಳ್ಳಾಲವನ್ನು ರಾಜ್ಯದಲ್ಲಿ ಅಭಿವೃದ್ಧಿ ಗ್ರಾಮವನ್ನಾಗಿ ರೂಪಿಸಲಾಗುವುದು ಎಂದರು. ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್, ಸೋಮೇಶ್ವರ ಪಂ.ಸದಸ್ಯರಾದ ಶಾಲಿನಿ.ವಿ.ಶೆಟ್ಟಿ, ಮಾಧವ ಗಟ್ಟಿ, ನೋವಿತ.ವಿ.ಗಟ್ಟಿ, ಸದಾಶಿವ ಉಳ್ಳಾಲ, ದಿನೇಶ್ ಕುಂಪಲ ಮೊದಲಾದವರು ಉಪಸ್ಥಿತರಿದ್ದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಸಮಾಜಕ್ಕೆ ಪೂರಕವಾಗುವ ಕೆಲಸದಲ್ಲಿ ಯುವಜನತೆ ಕಾರ್ಯ ನಡೆಸಿದಾಗ ಶಾಂತಿಯುತ ವಾತಾವರಣದ ಜತೆಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ತೊಕ್ಕೊಟ್ಟು ಪೆರ್ಮನ್ನೂರ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಪೆರ್ಮನ್ನೂರಿನ ಸಂತ ಸೆಬೆಸ್ತಿಯನ್ನರ ತೊಕ್ಕೊಟ್ಟು ಶಾಲಾ ಮೈದಾನದಲ್ಲಿ ಶುಕ್ರವಾರ ನಡೆದ ಪ್ರಥಮ ವಾರ್ಷಿಕೋತ್ಸವ ಮತ್ತು ರಂಗ್ ತರಂಗ್-2016 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಾಮಾಜಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಸ್ಪೋಟ್ರ್ಸ್ ಕ್ಲಬ್ ಕಾರ್ಯ ಚಟುವಟಿಕೆ ಶ್ಲಾಘನೀಯ. ಯುವಜನತೆ ಐಕ್ಯತೆ, ಏಕತೆ, ಸಹೋದರತೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಶಾಂತಿಯುತ ವಾತಾವರಣ ನಿರ್ಮಿಸಲು ಸಾಧ್ಯ. ಹಿರಿಯರು, ಧಾರ್ಮಿಕ ಮುಖಂಡರು ಸಮಾಜದ ಆಸ್ತಿ ಸಂಪತ್ತಾಗಿದ್ದು, ಅವರ ಆದರ್ಶದಲ್ಲಿ ಎಲ್ಲರೂ ಬದುಕಬೇಕಿದೆ ಎಂದರು. ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕನ್ಯಾನ ಜಳಂತಬೆಟ್ಟು ಸಂತ ಪೌಲ್ ಚರ್ಚಿನ ಧರ್ಮಗುರು ಫಾ.ಪೀಟರ್ ಸೆರಾವೋ, ಭಜರಂಗಿ ಭಾಯಿಜಾನ್ ಚಿತ್ರದ ಸಹ ನಿರ್ಮಾಪಕ ರಾಜೇಶ್…

Read More