Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಚೂರಿ ತೋರಿಸಿ ಕೊಲೆಗೆ ಯತ್ನಿಸಿದ್ದಲ್ಲದೆ ಅದನ್ನು ತಡೆಯಲು ಬಂದ ಇನ್ನೋರ್ವ ಪೊಲೀಸ್ ಸಿಬ್ಬಂದಿ ಚೂರಿಯಿಂದ ತಂಡವೊಂದು ಇರಿದಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಳ್ಳಾಲದ ದರ್ಗಾ ಎದುರು  ತಂಡವೊಂದು ಗಲಾಟೆ ನಡೆಸುತ್ತಿದ್ದುದನ್ನು ಕಂಡು ಪಿಸಿಆರ್ ವಾಹನದಲ್ಲಿದ್ದ  ಪೊಲೀಸ್ ಸಿಬ್ಬಂದಿ  ಉಮೇಶ್ ಸಪಲ್ಯ ಮತ್ತು ರವೀಂದ್ರ  ಎಂಬವರು ಪ್ರಶ್ನಿಸಿದ್ದರು.  ಈ ವೇಳೆ ತಂಡದಲ್ಲಿದ್ದ  ಮುಸ್ತಾಕ್, ಯಾಸೀನ್,  ಅಶ್ರಫ್ ಸಮೋಸಾ, ಜಾಕಿ ಮತ್ತಿತರರು ಸೇರಿ  ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಸಿಬ್ಬಂದಿ ಉಮೇಶ್ ಸಪಲ್ಯ ಎಂಬವರಿಗೆ ಚೂರಿಯಿಂದ ಎದೆ ಭಾಗಕ್ಕೆ ತಿವಿಯಲು ಮುಂದಾದಾಗ ಇನ್ನೋರ್ವ ಸಿಬ್ಬಂದಿ  ರವೀಂದ್ರ  ಅದನ್ನು ತಡೆದಿದ್ದರು. ಈ ವೇಳೆ ಮುಸ್ತಾಕ್ ಎಂಬಾತ ಅವರ ಕೈಯನ್ನು ತಿರುಗಿಸಿ ಕೈಗೆ ಚೂರಿಯಿಂದ  ಇರಿದಿದ್ದಾನೆ. ಅಲ್ಲದೆ ತಂಡದಲ್ಲಿದ್ದ ಎಲ್ಲರೂ ಸೇರಿ ಕೈಯಿಂದ  ಹಲ್ಲೆಯನ್ನು ನಡೆಸಿ, ` ಪೊಲೀಸರಿಗೆ ಭಾರೀ ಅಹಂಕಾರ ಇದೆ.  ನಿಮ್ಮಲ್ಲಿ ಒಬ್ಬರನ್ನು ಕೊಲೆ ಮಾಡಿದರೆ ಮಾತ್ರ ಬುದ್ದಿ ಬರುತ್ತದೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಗಳೂರು: ರಾಜಕೀಯ ಪ್ರೇರಿತ ಉದ್ದೇಶಕ್ಕಾಗಿ ಬಿಜೆಪಿ ಏಜೆಂಟ್ ಆಗಿ ಕೆಲಸ ನಿರ್ವಹಿಸುತ್ತಿರುವ ಸುಬ್ರಮಣ್ಯ ಸ್ವಾಮಿ ಬಿಜೆಪಿಯ ಸಾಕು ನಾಯಿ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. ನ್ಯಾಶನಲ್ ಹೆರಾಲ್ಡ್ ಪ್ರತಿಕೆ ಪ್ರಕರಣಕ್ಕೆ ಸಂಬಂಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಮಂಗಳೂರು ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ನಡೆಸಲಾದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯ ಬಗ್ಗೆ ಅಪಪ್ರಚಾರ ಮಾಡುವ ಯಾವುದೇ ನೈತಿಕ ಹಕ್ಕು ಬಿಜೆಪಿಗಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕಾಂಗ್ರೆಸ್ ನಾಯಕತ್ವವನ್ನು ಅಳಿಸಲು ಈ ರೀತಿಯ ಹುನ್ನಾರ ನಡೆಸುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಕಿಡಿಕಾಡಿದರು. ಅರಣ್ಯ ಸಚಿವ ರಮಾನಾಥ್ ರೈ ಮಾತನಾಡಿ ಬಿಜೆಪಿ ಪಕ್ಷಕ್ಕೆ ಕರುಣೆ ಇಲ್ಲ. ನೆಹರು ಕಾಲದಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಕಾಂಗ್ರೆಸ್ ನಡೆಸಿಕೊಂಡು ಬರುತ್ತಿತ್ತು ಆದರೆ ಇದನ್ನು ಬಿಜೆಪಿ ಸರಕಾರ ನುಂಗಲು ಪ್ರಯತ್ನಿಸುತ್ತಿದೆ. ಸುಬ್ರಮಣ್ಯ ಸ್ವಾಮಿ ಒಬ್ಬ ಮಾನಸಿಕ ಅಸ್ವಸ್ಥ.…

Read More

ದೇರಳಕಟ್ಟೆ : ದೇರಳಕಟ್ಟೆಯಿಂದ ಅಡ್ಕರೆಪಡ್ಪು ಮೂಲಕ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯ ತಲುಪುವ ರಸ್ತೆಯ ಡಾಮರೀಕರಣಕ್ಕೆ ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆ ಹಾಗೂ ಅಡ್ಕರೆಪಡ್ಪು, ಮಾರಿಯಮ್ಮಗೋಳಿ, ಬೆಲ್ಮ ಬರಿಕೆ(ಪೆಲತ್ತಡಿ), ಬದ್ಯಾರ್, ಕೊಣಾಜೆ ಸೈಟ್‍ನ ನಾಗರಿಕರು, ರಿಕ್ಷಾ ಚಾಲಕರು ಹಾಗೂ ಮಾಲಕರು ಜಂಟಿಯಾಗಿ ದೇರಳಕಟ್ಟೆಯಲ್ಲಿ ನಡೆಸಿದ ಪ್ರತಿಭಟನೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಿಸಿತು. ಕೊಣಾಜೆ ಬೆಳ್ಮದಿಂದ ದೇರಳಕಟ್ಟೆವರೆಗೆ ಅಡ್ಕರೆಪಡ್ಪುವಿನ ರಸ್ತೆಯಲ್ಲಿ ಬೈಕ್ ರ್ಯಾಲಿ ಮತ್ತು ವಾಹನ ಜಾಥಾ ನಡೆದು, ದೇರಳಕಟ್ಟೆ ಜಂಕ್ಷನ್ನಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಈ ವೇಳೆ ಬೆಳ್ಮ ಪಂಚಾಯಿತಿ ಉಪಾಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಸೇರಿ ಕೊಣಾಜೆ ಭಾಗದ ಸಮಸ್ಯೆಗೆ ಬೆಳ್ಮ ಪಂಚಾಯಿತಿ ಭಾಗದಲ್ಲಿ ಪ್ರತಿಭಟನೆ ನಡೆಸುವುದು ಖಂಡನೀಯ. ಬೆಳ್ಮ ಪಂ.ಗೆ ಸೇರಿದ ರಸ್ತೆಯ ದುರಸ್ತಿಯನ್ನು ನಡೆಸಲಾಗಿದೆ. ಸಚಿವರು ಹೆಚ್ಚಿನ ಒಲವು ತೋರಿಸುವ ಮೂಲಕ ಬೆಳ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ, ಏಳಿಗೆಯನ್ನು ಸಹಿಸಲಾಗದವರು ರಾಜಕೀಯ ದುರುದ್ದೇಶ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಬೆಳ್ಮ ಪಂಚಾಯಿತಿ ಉಪಾಧ್ಯಕ್ಷ ಅಬ್ದುಲ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಪಜೀರು ಚರ್ಚ್ ಹಾಗೂ ಇನ್ನಿತರ ಕಡೆಗಳಲ್ಲಿ ಕಳ್ಳತನ ನಡೆಸಿದ್ದ ಆರೋಪಿಯೊರ್ವನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಾವೂರು ಗ್ರಾಮದ ಮಲಾರ್‍ನ ಅಕ್ಷರನಗರದ ಅಬ್ದುಲ್ ಖಾದರ್ ಎಂಬವರ ಪುತ್ರ ಅಬ್ದುಲ್ ಜಾಫರ್(19) ಎಂದು ಗುರುತಿಸಲಾಗಿದೆ. ಈತ ಪಜೀರಿನ ಚರ್ಚ್‍ಗೆ ನುಗ್ಗಿ ಕಳ್ಳತನ ನಡೆಸಿದ್ದು ಮಾತ್ರವಲ್ಲದೆ ದೇರಳಕಟ್ಟೆ ಮೊಬೈಲ್ ಹಾಗೂ ಫ್ಯಾನ್ಸಿ ಅಂಗಡಿಗಳಿಗೆ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ನಡೆಸಿ ತಲೆಮರೆಸಿಕೊಂಡಿದ್ದನು. ಚರ್ಚ್‍ಗೆ ನುಗ್ಗಿ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಜರುದ್ದೀನ್, ಮುಷ್ತಾಕ್ ಹಾಗೂ ಅಫ್ರೀಝ್ ಎಂಬವರನ್ನು ಕಳೆದ ಕೆಲವು ದಿನಗಳ ಹಿಂದೆಯೇ ಬಂಧಿಸಿದ್ದರು. ಬಳಿಕ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಜಾಫರ್ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಈತನ ಬಳಿ ಇದ್ದ ಆ ಮೊಬೈಲ್, ಪ್ಯಾನ್ಸಿ ಸಾಮಾಗ್ರಿ ಹಾಗೂ ಚರ್ಚ್‍ನಲ್ಲಿ ಕಳ್ಳತನ ನಡೆಸಿದ ಕೆಲವು ಪೂಜಾ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಬಂಧಿತ ಆರೋಪಿಯಿಂದ ಕಳ್ಳತನ ನಡೆಸಿದ್ದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಗಳೂರು: ನಾಗಾರಾಧನೆಯ ಮೂಲಕೇಂದ್ರವಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವರ್ಷಾಂಪ್ರತಿಯಂತೆ ಈ ಭಾರಿಯು ಕೂಡ ಚಂಪ ಷಷ್ಠಿಯು ಸಂಭ್ರಮದಲ್ಲಿ ಜರುಗಿತು. ಚಂಪ ಷಷ್ಠಿಯ ಪ್ರಯುಕ್ತ ಜರುಗಿದ ವಾರ್ಷಿಕ ಬ್ರಹ್ಮರಥೋತ್ಸದಲ್ಲಿ ಸಾವಿರಾರು ಭಕ್ತರು ಭಾಗಹಿಸಿದ್ದರು. ಬೆಳಗ್ಗೆ ಮಂಗಳವಾದ್ಯ, ವೇದಘೋಷ, ಬ್ಯಾಂಡ್‌, ಶಂಖ, ಜಾಗಟೆ, ಸ್ಯಾಕ್ಸೋಫೋನ್‌, ಚೆಂಡೆಗಳ ನಿನಾದದಲ್ಲಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣವಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಸ್ಥಾನಗಳ ಪೈಕಿ ಸುಬ್ರಮಣ್ಯ ದೇವಸ್ಥಾನವು ಕೂಡ ಒಂದು. ಪ್ರಮುಖ ನಾಗಾರಾಧನೆಯ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ದೇವಾಲಯದಲ್ಲಿ ಚಂಪ ಷಷ್ಠಿಯ ಪ್ರಯುಕ್ತ ಮಡೆ ಸ್ನಾನ ನಡೆಯುತ್ತದೆ. ಭಕ್ತರು ಹರಕೆಯ ರೂಪದಲ್ಲಿ ಬ್ರಹ್ಮಾಣರು ಉಂಡ ಎಲೆಯ ಮೇಲೆ ಉರುಳು ಸೇವೆ ಮಾಡುವ ಮೂಲಕ ಹರಕೆಯನ್ನು ನೀಡುತ್ತಾರೆ. ಈ ಆಚರಣೆಯ ಬಗ್ಗೆ ಅಡೆ-ತಡೆಗಳಿದ್ದರೂ ಸಹ ಈ ಭಾರಿಯೂ ಪ್ರತಿ ವರ್ಷದಂತೆ ಈ ಭಾರಿಯು ಕೂಡ ಮಡೆ ಸ್ನಾನವನ್ನು ಆಚರಿಸಲಾಯಿತು. ಅತ್ಯಂತ ಸಂಭ್ರಮ ಸಡಗರದ ಜೊತೆ ನಡೆಯುವ ಸುಬ್ರಮಣ್ಯ ಚಂಪ ಷಷ್ಥಿಯ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಯಾವುದೇ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಗ್ರಾಮ ಪಂಚಾಯಿತಿಗಳಿಗೆ ಇದೆಯಾದರೂ ಅದನ್ನು ಮೊಟಕುಗೊಳಿಸಲಾಗಿದೆ, ಈ ನಿಟ್ಟಿನಲ್ಲಿ ಮತ್ತೆ ಪಂಚಾಯಿತಿಗೇ ಅಧಿಕಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭ ಪಂಚಾಯಿತಿ ರಾಜ್ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಎರಡೂವರೆ ಸಾವಿರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಲಾಗಿದ್ದು ಒಂದೂವರೆ ಸಾವಿರ ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿಗೊಳಿಸಲಾಗಿದೆ. ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಹೆಚ್ಚಿಲಾಗಿದೆ. ಮೂರನೇ ಹಣಕಾಸು ಅಯೋಗದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗಿದೆ. ಜಿಲ್ಲಾ ಪಂಚಾಯಿತಿಗಳಿಗೆ ವಿಶೇಷ ನಿಧಿಯಿಂದ ವರ್ಷಕ್ಕೆ ಒಂದು ಕೋಟಿ ಹಾಗೂ ವಿವೇಚನಾ ನಿಧಿಯಿಂದ ಎರಡು ಕೋಟಿ ರೂಪಾಯಿಗಳನ್ನು ನೀಡಲಾಗಿತ್ತು ಎಂದು ಬುಧವಾರ ತೊಕ್ಕೊಟ್ಟಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ರಮೇಶ್ ಕುಮಾರ್ ವರದಿ ಅನುಷ್ಠಾನ ನಿಟ್ಟಿನಲ್ಲಿ ಬಿಜೆಪಿ ನೇರ ಹೋರಾಟ ನಡೆಸಿದೆ. ಕೇಂದ್ರ ಸರ್ಕಾರ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ ಯುಪಿಎ ಸರ್ಕಾರ ನೀಡುತ್ತಿದ್ದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ನೋಟೀಸು ನೀಡಿ ನಾಲ್ಕು ವಾರಗಳು ಕಳೆದರೂ ತೊಕ್ಕೊಟ್ಟು ಜಂಕ್ಷನ್ನಿನಲ್ಲಿರುವ ಅಂಗಡಿಗಳನ್ನು ಖಾಲಿ ಮಾಡದ ಹಿನ್ನೆಲೆಯಲ್ಲಿ ಬುಧವಾರ ಸಹಾಯಕ ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ಕ್ರೇನ್ ಮೂಲಕ ಆವರಣ ಗೋಡೆಗಳನ್ನು ತೆರವುಗೊಳಿಸುವ ಮೂಲಕ ಮುಂದಿನ ಸೋಮವಾರದ ಒಳಗೆ ಸಂಪೂರ್ಣ ಖಾಲಿ ಮಾಡುವಂತೆ ಗಡುವು ನೀಡಲಾಯಿತು. ತೊಕ್ಕೊಟ್ಟು ಸಹಾರಾ ಆಸ್ಪತ್ರೆ ಎದುರುಗಡೆ ಇರುವ ಎರಡು ಕಾಂಪ್ಲೆಕ್ಸ್‍ಗಳ ಆವರಣ ಗೋಡೆ, ಆರ್.ಈ.ಬಿ ಕಾಂಪ್ಲೆಕ್ಸ್ ಕಟ್ಟಡದ ಎದುರುಭಾಗದ ಆವರಣ ಗೋಡೆ ಮತ್ತು ಆಕ್ಸಿಸ್ ಬ್ಯಾಂಕಿನ ಖಾಲಿಯಿದ್ದ ಎಟಿಎಂ ಕಟ್ಟಡವನ್ನು ಜೆಸಿಬಿ ಮೂಲಕ ತೆರುವುಗೊಳಿಸುವ ಮೂಲಕ ಮನವರಿಕೆ ಮಾಡಲಾಯಿತು. ಸೋಮವಾರದ ಮುನ್ನ ಖಾಲಿ ಮಾಡಿ : ಸ್ಥಳಕ್ಕೆ ಭೇಟಿ ನೀಡಿದ್ದ ಸಹಾಯಕ ಆಯುಕ್ತ ಡಾ. ಅಶೋಕ್ ಮಾತನಾಡಿ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣ ಕಾಮಗಾರಿ ಕೊನೆ ಹಂತದಲ್ಲಿದ್ದರೂ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಕಟ್ಟಡಗಳನ್ನು ತೆರವುಗೊಳಿಸದ ಹಿನ್ನೆಲೆಯಲ್ಲಿ ಕಾಮಗಾರಿಗೆ ಹಿನ್ನೆಡೆಯಾಗಿದೆ. ಇದರಿಂದ ತೊಕ್ಕೊಟ್ಟುವಿನಲ್ಲಿ ವಾಹನ ಸಂಚಾರಕ್ಕೆ ತಡೆಯುಂಟಾಗುತ್ತಿದ್ದು, ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ. ಕಟ್ಟಡ ಮಾಲೀಕರಿಗೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಸಮುದಾಯದ ಅಭಿವೃದ್ಧಿಗೆ ಹಿಫುಲ್ ಕುರಾನ್ ಮತ್ತು ಮದ್ರ ಅಗತ್ಯವಿದ್ದು, ಧಾರ್ಮಿಕ ಶಿಕ್ಷಣವನ್ನು ಪಡೆದರೆ ಮಾತ್ರ ಇಸ್ಲಾಂ ಧರ್ಮ ಮತ್ತು ಸಮಾಜದ ಬಗ್ಗೆ ಅರಿವು ಮೂಡಲು ಸಾಧ್ಯ ಎಂದು ಪಾಣಕ್ಕಾಡ್ ಹೈದರಲಿ ಶಿಹಾಬ್ ತಂಙಳ್ ಹೇಳಿದರು. ಅವರು ದೇರಳಕಟ್ಟೆಂiÀ ಬದ್ಯಾರ್‍ನಲ್ಲಿ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಸ್ಥಾಫಿಸಲುದ್ದೇಶಿಸಿರುವ ಹಿಫ್ಲುಲ್ ಕುರಾನ್ ಕಾಲೇಜು ಮತ್ತು ಮದ್ರಸ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಶಂಸುಲ್ ಉಲಮಾ ಹಿಫ್ಲುಲ್ ಕುರಾನ್ ಕಾಲೇಜು ಸ್ಥಾಪಿಸಲುದ್ದೇಶಿಸಿರುವುದು ಸ್ವಾಗತಾರ್ಹ. ಇಂತಹ ಇಸ್ಲಾಂ ಧರ್ಮದ ಕಲಿಕೆ ಸ್ಫೂರ್ತಿ ನೀಡುವ ಯೋಜನೆಗಳಿಗೆ ಎಲ್ಲರ ಸಹಕಾರ ಅಗತ್ಯವಿದೆ. ಎಲ್ಲರೂ ಒಟ್ಟಾಗಿ ಈ ಕಾರ್ಯ ಮಾಡಿದಲ್ಲಿ ಇಲ್ಲಿನ ಜನತೆಗೆ ಕಲಿಕೆಗೆ ಉತ್ತಮ ಅವಕಾಶ ಸಿಗುತ್ತದೆ. ಸಮಾಜ ಮತ್ತು ಧರ್ಮದ ಬಗ್ಗೆ ಕೂಲಂಕಷ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಉದ್ಘಾಟನೆಯನ್ನು ಪಾಣಕ್ಕಾಡ್ ಸಯ್ಯದ್ ಅಬ್ಬಾಸ್ ಅಲಿ ಶಿಹಾಬ್ ತಂಙಳ್ ನೆರವೇರಿಸಿದರು.ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ವಹಿಸಿದ್ದರು. ಕಾಸರಗೋಡ್ ಸಂಯುಕ್ತ…

Read More

ಸನ್ನಿ ಲಿಯೋನ್ ಅಭಿನಯದ ಚಿತ್ರ ನೋಡೋದು ಎಂದರೆ ಸಾಕು ಪಟ್ಟೆ ಹುಡುಗರಿಗೆ ಅದು ಎಲ್ಲಿಲ್ಲದ ಹುಚ್ಚು. ಮಾದಕ ನಟಿ, ವೆರಿ ಸೆಕ್ಸ್ ಆಂಡ್ ಗ್ಲಾಮರಸ್ ಚೆಲುವೆ ಇದೀಗ ತಾಯಿಯಾಗುವ ಬಯಕೆಯನ್ನು ಎಲ್ಲರ ಮುಂದೆ ಬಿಚ್ಚಿದ್ದಾಳೆ. ಮಾಧ್ಯಮವೊಂದರಲ್ಲಿ ಮಾತಾನಾಡಿಕೊಳ್ಳುತ್ತ ಸನ್ನಿ ಪ್ರತಿಯೊಂದು ನಟ ನಟಿಯರಿಗೂ ಕೂಡ ಅವರದೇ ಆದ ಖಾಸಗಿ ಜೀವನವಿರುತ್ತದೆ ಅದನ್ನು ಅನುಭವಿಸಬೇಕು ಅದರಂತೆ ನಾನು ಮತ್ತು ನನ್ನ ಗಂಡ ಡೆಸಿಯಲ್ ವೇಬರ್ ತಂದೆ ತಾಯಿ ಪಟ್ಟ ಪಡೆದುಕೊಳ್ಳಲು ಸಿದ್ಧರಾಗುತ್ತಿದ್ದೇವೆ ಎಂದು ಹೇಳಿದ್ದಾಳೆ. ಈಕೆ ಮಾತನ್ನು ಕೇಳಿ ಆದೆಷ್ಟೋ ಸಿನಿಮಾ ನಿರ್ಮಾಪಕ ಎದೆಯಲ್ಲಿ ಢವ ಢವ ಶುರುವಾಗಿದೆ. ಬಿಚ್ಚಲೇ ಗೌರಮನಂತೆ ಎಲ್ಲವನ್ನು ಚಿಚ್ಚಿಹಾಕಿ ತನ್ನ ಮೈಮಾಟದ ಜೊತೆಗೆ ಅದ್ಬೂತ ಅಭಿನಯದ ಮೂಲಕ ಪಟ್ಟೆ ಹುಡುಗರ ಕನಸಿನ ರಾಣಿಯಾಗಿರುವ ಸನ್ನಿ ಲಿಯೋನ್ ಸದ್ಯ ಅಭಿನಯಿಸದಿದ್ದರೆ ಮಾತ್ರ ಅಭಿಮಾನಿಗಳಿಗೆ ಮಾತ್ರ ಇದು ಸಹಿಸಲಾಗದ ನೋವು. ಸನ್ನಿ ಲಿಯೋನ್ ಅಭಿನಯದ ಚಿತ್ರಗಳಿಗೆ ಬೇಡಿಕೆ ಇರುವುದರಿಂದ ಆಕೆಯನ್ನು ನಂಬಿಕೊಂಡು ಚಿತ್ರ ಮಾಡಲೆಂದು ಹೊರಟಿರುವ ಆದೆಷ್ಟೋ ನಿರ್ಮಾಪಕ ನಿರ್ದೇಶಕರಿಗೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ನರ್ಮ್ ಆಶ್ರಯದಲ್ಲಿ ನಗರದಿಂದ ೨೦ಕಿಮೀ ಪರಿಧಿಯಲ್ಲಿ ಸಂಚರಿಸಲು ೩೫ ಬಸ್ಸುಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು ಈ ನಿಟ್ಟಿನಲ್ಲಿ ನಾಳೆಯಿಂದ ಉಳ್ಳಾಲ ಪ್ರದೇಶಗಳಿಗೆ ಮೂರು ಕೆಎಸ್‍ಆರ್‍ಟಿಸಿ ಬಸ್ಸುಗಳ ಸಂಚಾರ ಆರಂಭವಾಗಲಿದೆ ಎಂದು ಕೆಎಸ್‍ಆರ್‍ಟಿಯ ವಿಭಾಗೀಯ ಅಧಿಕಾರಿಗಳು ತಿಳಿಸಿದ್ದಾರೆ. ಫೈಲ್ ಚಿತ್ರ ಸ್ಟೇಟ್‍ಬ್ಯಾಂಕ್‍ನಿಂದ ಬೀರಿ, ಮಾಡೂರು, ಮಡ್ಯಾರ್ ರಸ್ತೆಯಿಂದ ಮುಡಿಪಿನ ವರೆಗೂ ಕೆಎಸ್‍ಆರ್‍ಟಿಸಿ ಬಸ್ಸು ಸಂಚರಿಸಲಿದ್ದು, ಸ್ಟೇಟ್‍ಬ್ಯಾಂಕಿನಿಂದ ಸೋಮೆಶ್ವರ ಮಾರ್ಗದ ಮೂಲಕ ಸಂಚಾರಿಸಲಿದೆ. ನಾಳೆಯಿಂದ ಗ್ರಾಮಾಂತರ ಪ್ರದೇಶಗಳಿಗೆ ಎರಡು ಬಸ್ಸುಗಳ ಆರಂಭವಾಗಲಿದ್ದು ಬಳಿಕ ಎರಡು ದಿನಗಳ ನಂತರ ಮತ್ತಷ್ಟು ಬಸ್ಸುಗಳು ರಸ್ತೆಗಿಳಿಯಳಿವೆ. ಪೂರಕ ಸೌಕರ್ಯ ಒದಗಿಸುವ ಅನುಕೂಲವಾಗಲು ಪ್ರಥಮ ಹಂತದಲ್ಲಿ ಪರವಾನಿಗೆ ಪಡೆದಿರುವ ೧೭ ಬಸ್ಸುಗಳನ್ನು ಹಂತ ಹಂತವಾಗಿ ಆರಂಭಿಸಲಾಗುವುದು. ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಹೊಸ ಬಸ್ ಸೇವೆ ಆರಂಭಿಸುವ ಸಂದರ್ಭದಲ್ಲಿ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

Read More