Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಆರ್ಥಿಕ ಸಬಲೀಕರಣದ ಮೂಲಕ ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಬೆಳೆಯಲು ಶಿಕ್ಷಣದಿಂದ ಮಾತ್ರ ಸಾಧ್ಯವಿದ್ದು, ಅದರಲ್ಲೂ ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಅವರು ಉಳ್ಳಾಲ ಮಾಸ್ತಿಕಟ್ಟೆ ಅಜಾದ್ ನಗರದ ಹಝ್ರತ್ ಸೈಯ್ಯದ್ ಮದನಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಉಳ್ಳಾಲ ದರ್ಗಾ ಅಧ್ಯಕ್ಷ ಯು.ಎಸ್.ಹಂಝ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್‍ನ ಉಪಾಧ್ಯಕ್ಷ ಬಿ.ಜೆ. ಹನೀಫ್, ಕೋಶಾಧಿಕಾರಿ ನಾಝಿಂ, ಆಡಳಿತಾಧಿಕಾರಿ ಅಬ್ದುಲ್ ಲತೀಫ್, ತಾಲೂಕು ಪಂಚಾಯಿತಿ ಸದಸ್ಯ ಮಹಮ್ಮದ್ ಮುಸ್ತಾಫ, ಉಳ್ಳಾಲ ನಗರ ಪಂಚಾಯಿತಿ ಸದಸ್ಯ ಅಶ್ರಫ್ ಬಾವಾ, ಇಬ್ರಾಹಿಂ ಶೌಕತ್, ಎಮ್.ಎಚ್. ಮಲಾರ್, ಕೆ.ಎಂ.ಕೆ. ಮಂಜನಾಡಿ, ದರ್ಗಾ ಮ್ಯಾನೇಜರ್ ಯೂಸುಫ್ ಅಲ್ ಮಸ್ಜಿದುಲ್ ಫಾರೂಕ್‍ನ ಉಪಾಧ್ಯಕ್ಷ ಅಹಮ್ಮದ್ ರಫೀಕ್ ಯು.ಸಿ., ಕೋಶಾಧಿಕಾರಿ ಮಹಮ್ಮದ್, ಅಬ್ದುಲ್ ಖಾದರ್ ಮುಸ್ಲಿಯಾರ್ ಹಾಗೂ ತೌಸಿಫ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಬಡವರಿಗೆ ಸಹಾಯ ಮಾಡುವುದು ಅವರ ಕಷ್ಟಕರ ದಿನಗಳಲ್ಲಿ ಸ್ಪಂದಿಸುವುದು ಪ್ರವಾದಿಯವರಿಗೆ ಇಷ್ಟದ ಕಾರ್ಯ ಎಂದು ಸುನ್ನತ್ ಮಾಸಿಕ ಸಂಪಾದಕ ಖತೀಬ್ ಯುನುಸ್ ಇಮ್ದಾದಿ ಹೇಳಿದರು. ಅವರು ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧೀನದ ಅಲ್-ಅಮೀನ್ ರಿಲೀಫ್ ಫೌಂಡೇಶನ್ ವತಿಯಿಂದ ಪ್ರವಾದಿರವರ ಜನ್ಮ ತಿಂಗಳಿನ ಪ್ರಯುಕ್ತ “ಮೀಲಾದ್ ಕಿಟ್”ನ್ನು ಆರ್ಥಿಕವಾಗಿ ಹಿಂದುಳಿದ ಅರ್ಹ 20ಕುಟುಂಬಕ್ಕೆ ಉಚಿತ ರೇಶನ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಲ್-ಅಮೀನ್ ರಿಲೀಫ್ ಫೌಂಡೇಶನ್ 20ಕುಟುಂಬಗಳಿಗೆ ಪ್ರವಾದಿ ಜನ್ಮದ ನೆನಪಿಗಾಗಿ ಒಂದು ತಿಂಗಳಿಗೆ ಬೇಕಾಗುವ ರೇಶನ್ ಸಾಮಾಗ್ರಿಗಳನ್ನು ನೀಡುವ ಈ ಉತ್ತಮ ಮಾದರಿ ಕಾರ್ಯಕ್ರಮ ಬೇರೆ ಬೇರ ಸಂಘ ಸಂಸ್ಥೆಗಳು ಮುಂದಿನ ದಿನಗಳಲ್ಲಿ ನಡೆಸಿಕೊಂಡು ಬರಲಿ ಎಂದು ಆಶಿಸಿದರು. ಅಲ್-ಅಮೀನ್ ರಿಲೀಫ್ ಫೌಂಡೇಶನ್ ಚೇರ್‍ಮೆನ್ ಮನ್ಸೂರ್ ಹಳೇಕೊಟೆ ಪ್ರಾಸ್ತವಿಕವಾಗಿ ಮಾತನಾಡಿದರು. ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಸಮದ್ ಅಹ್ಸನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಂದರಿ ಭಾಗ್ ಖತೀಬ್ ಶರೀಫ್ ಸಅದಿ, ಅಲ್-ಅಮೀನ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಬದಲಾದ ಜೀವನ ಶೈಲಿಯಲ್ಲಿ ಆಹಾರ ಪದ್ಧತಿಗೆ ನಮ್ಮ ದೇಹದಲ್ಲಿ ಸ್ವಾಭಾವಿಕವಾಗಿಯೇ ಏರುಪೇರುಗಳು ಉಂಟಾಗುತ್ತಿದ್ದು ಯುವಕರು ಸಣ್ಣಪುಟ್ಟ ಎದೆನೋವನ್ನು ಲಘುವಾಗಿ ಪರಿಗಣಿಸದೆ, ದೇಹ ತಪಾಸಣೆ ನಡೆಸುವುದು ಉತ್ತಮ ಎಂದು ದೇರಳಕಟ್ಟೆ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಚಾಲಕ ಯು.ಕೆ. ಮೋನು ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮತ್ತು ಕೈರಂಗಳ ಪಡಿಕ್ಕಲ್‍ನ ಬದ್ರುಲ್ ಹುದಾ ಅಸೋಸಿಯೇಶನ್ ವತಿಯಿಂದ ನಡೆದ ವೈದ್ಯಕೀಯ ಶಿಬಿರವನ್ನು ಕಣಚೂರು ಆಸ್ಪತ್ರೆಯ ಸಂಚಾಲಕ ಯು.ಕೆ. ಮೋನು ಅವರು ಉದ್ಘಾಟಿಸಿ ಮಾತನಾಡಿದರು. ಯುವಕರು ಸಮಾಜದ ಎಲ್ಲ ಕಾರ್ಯಚಟುವಟಿಕೆಗಳಲ್ಲೂ ತಮ್ಮನ್ನು ಉತ್ಸಾಹದಿಂದ ತೊಡಗಿಸುತ್ತಿದ್ದು, ಬಳಲಿದ ತಮ್ಮ ಶರೀರವನ್ನು ಮಾತ್ರ ವೈದ್ಯಕೀಯ ಪರೀಕ್ಷೆಗೊಳಪಡಿಸಲು ಉದಾಸೀನ ಪೃವೃತ್ತಿಯನ್ನು ತಾಳುತ್ತಿರುವುದು ಕಳವಳಕಾರಿ. ಬದಲಾದ ಜೀವನ ಶೈಲಿಯಲ್ಲಿ ಆರೋಗ್ಯದ ಏರುಪೇರುಗಳು ಸಹಜವಾಗಿದ್ದು, ಯುವಕರು ಇಂತಹ ಉಚಿತ ವೈದ್ಯಕೀಯ ಶಿಬಿರಗಳಲ್ಲಾದರೂ ತಮ್ಮ ದೇಹ ಪರೀಕ್ಷೆಗೊಳಪಡಿಸುವುದು ಉತ್ತಮ ಎಂದು ಹೇಳಿದರು. ಕುರ್ನಾಡು ಜಿಲ್ಲಾ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ರೈ ಬೋಳಿಯಾರು ಮಾತನಾಡಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಧ್ಯಪ್ರದೇಶ : ಮದುವೆಗೆ ತೆರಳುತ್ತಿದ್ದ ದಿಬ್ಬಣದ ಬಸ್‌ ಉರುಳಿ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ದಾರುಣವಾಗಿ ಸಾವನ್ನಪ್ಪಿ ,20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡ ಭೀಕರ ಘಟನೆ ಬಮ್ಮೊರಿ ಎಂಬಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್‌ ಇಂಧೋರ್‌ನಿಂದ ಚಿಂದ್‌ವಾಡ ಎಂಬಲ್ಲಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದ್ದು ಬಸ್‌ನಲ್ಲಿ ಒಟ್ಟು 55 ಮಂದಿ ಇದ್ದರು ಎಂದು ಹೇಳಲಾಗಿದ್ದು, ದುರಂತದಲ್ಲಿ ೧೫ ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಗಾಯಾಳು ಗಳನ್ನು ಜಿಲ್ಲಾ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪುತ್ತೂರು : ಭಕ್ತಕೋಡಿ ರೆಂಜಿಲಾಡಿ ಸಮೀಪ ಮನುಷ್ಯನ ತಲೆಬುರುಡೆ ಹಾಗೂ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ದ. 14ರಂದು ವರದಿಯಾಗಿದೆ. ಭಕ್ತಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ಇರುವ ಪದ್ಮಜ ಫಾರ್ಮ್ಸ್ ನ ಹಟ್ಟಿಯ ಬಳಿ ಗೋಣಿ ಚೀಲಗಳಲ್ಲಿ ಮಾನವ ತಲೆಬುರುಡೆ ಹಾಗೂ ಅಸ್ಥಿಪಂಜರ ಕಂಡುಬಂದಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳದಲ್ಲಿ ನೂರಾರು ಮಂದಿ ಕುತೂಹಲಿಗರು ಜಮಾಯಿಸಿದ್ದಾರೆ. ಸಂಜೆಯ ವೇಳಗೆ ಗೋಣಿ ಚೀಲವೊಂದರಲ್ಲಿ ತಲೆಬುರುಡೆ ಪತ್ತೆಯಾಗಿತ್ತು. ಸ್ಥಳದಲ್ಲಿ ಜಮಾಯಿಸಿದ್ದ ಜನರು ಶರೀರದ ಇತರ ಭಾಗಗಳ ಅಸ್ಥಿಗಾಗಿ ಹುಡುಕಾಟ ನಡೆಸಿದ ವೇಳೆ ಇನ್ನೊಂದು ಚೀಲವೊಂದರಲ್ಲಿ ಕಾಲು ಬೆರಳು ಗೋಚರಿಸುವಂತಹ ಅಸ್ಥಿ ಪತ್ತೆಯಾಗಿದೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್   ತೊಕ್ಕೊಟ್ಟು : ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಲಾದ ನೂತನ ಸೇತುವೆಯಲ್ಲಿ ಡಾಮರೀಕರಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು. ನೂತನ ಸೇತುವೆಯಲ್ಲಿ ಸೇತುವೆಯ ಸುರಕ್ಷತೆಗಾಗಿ ಸೋಮವಾರ ಡಾಮರೀಕರಣ ಕಾರ್ಯ ನಡೆಯುತ್ತಿದ್ದು, ಅದೂ ವಾರದ ಮೊದಲ ದಿನವಾದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರವಿದ್ದುದರಿಂದ ಪಂಪುವೆಲ್‍ನಿಂದ ಕೊಲ್ಯ ತನಕ ವಾಹನಗಳ ಸರತಿ ಸಾಲು ಕಂಡುಬಂತು. ಇನ್ನೊಂದು ಭಾಗದಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಜಂಕ್ಷನ್ ದಾಟಿ ವಿವಿ ಕಡೆಗೆ ಸಂಚರಿಸುವ ವಾಹನಗಳಿಗೆ ವಿಳಂಬವಾಯಿತಾದರೂ ತೊಕ್ಕೊಟ್ಟು ಜಂಕ್ಷನ್ ದಾಟಿದ ಬಳಿಕ ವಾಹನಗಳ ಸಂಚಾರ ಸುಸೂತ್ರವಾಗಿತ್ತು. ಹಾಗಿದ್ದರೂ ವಿವಿ ರಸ್ತೆಯ ಮೂಲಕ ಮಂಗಳೂರಿಗೆ ಸಂಚರಿಸುವ ವಾಹನಗಳಿಗೆ ಈ ಸಂಕಷ್ಟ ತಪ್ಪಲಿಲ್ಲ. ಉಳ್ಳಾಲ ತಲಪಾಡಿ ಕಡೆಗೆ ಸಂಚರಿಸುವ ವಾಹನಗಳ ತೊಂದರೆ ಹೆಳತೀರದು. ನೇತ್ರಾವತಿ ಸೇತುವೆಯಲ್ಲಿ ಏಕಮುಖ ಸಂಚಾರವಿದ್ದುದರಿಂದ ವಾಹನ ಸಂಚಾರದಲ್ಲಿ ಸುಮಾರು ಎಂಟು ಗಂಟೆಗಳ ಕಾಲ ಪ್ರಯಾಣಿಕರು ಪರದಾಡುವಂತಾಯಿತು.ಪೊಲೀಸ್ ಸಿಬ್ಬಂದಿ ಹಾಗೂ ಹೋಂ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ವಿದ್ಯಾರ್ಥಿಗಳು ಗದ್ದೆಗಿಳಿದು ಬಿತ್ತನೆ ಮತ್ತು ನೇಜಿ ನಡುವ ಮೂಲಕ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಕೊಣಾಜೆ ಪರಂಡೆಯ ಒಂದು ಎಕರೆ ವಿಸ್ತೀರ್ಣದ ಗದ್ದೆಯಲ್ಲಿ ಕಿಟೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳೇ ಬಿತ್ತುವುದರಿಂದ ಹಿಡಿದು ಮುಡಿ ಕಟ್ಟುವವರೆಗೆ ಹಂತ ಹಂತವಾಗಿ 3 ತಿಂಗಳ ಅವಧಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಅನ್ನದಾತರೆನಿಸಿಕೊಂಡಿದ್ದಾರೆ. ಮಂಗಳೂರಿನಂತಹ ನಗರದ ಹೃದಯ ಭಾಗದ ಕಾಲೇಜೊಂದರ ವಿದ್ಯಾರ್ಥಿಗಳು ಗದ್ದೆಗೆ ಇಳಿಯುವುದೇ ಸೋಜಿಗ. ಅಂತಹದ್ದರಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳು ಕೇವಲ ಗದ್ದೆಗೆ ಇಳಿದಿಲ್ಲ. ಒಬ್ಬ ಪ್ರಗತಿಪರ ಕೃಷಿಕರು ಮಾಡಿದಂತೆ ಭತ್ತದ ಬಿತ್ತನೆ, ನಾಟಿ, ಕಳೆ ತೆಗೆಯುವುದು, ಕಟಾವು ಮಾಡಿ ಮುಗಿಸಿ ಹಾರಿಸಿ, ಅದೇ ಬಳಿಕ ಭತ್ತವನ್ನು ಹಂಡೆಯಲ್ಲಿ ಬೇಯಿಸಿ ಸೆಗಣಿ ಸಾಸಿದ ಆಂಗಳದಲ್ಲಿ ಒಣಗಿಸಿ ಬಳಿಕ ಭತ್ತ ಕುಟ್ಟುವ ಗುಂಡಿಯಲ್ಲಿ ಕುಟ್ಟಿ ಅದರಿಂದ ಅಕ್ಕಿ ತೆಗೆದು ಮುಡಿ ಕಟಟ್ಟುವವರೆಗೆ ಏನೆಲ್ಲ ಮಾಡಬೇಕು ಅದೆಲ್ಲವನ್ನು ಮಾಡಿದ್ದಾರೆ. ಜಿಲ್ಲೆಯ ಮಟ್ಟಿಗೆ ಇದೊಂದು ದಾಖಲೆಯೇ ಸರಿ. ಕೊಣಾಜೆ ಪರಂಡೆಯ ಧನಂಜಯ…

Read More

ತೊಕ್ಕೊಟ್ಟು: ಹಕ್ಕು ಮತ್ತು ಚೈತನ್ಯದ ಜತೆಗೆ ಗೌರವ ಹಾಗೂ ನ್ಯಾಯ ಒದಗಿಸುವ ಕಾರ್ಯ ಟೈಲರ್ಸ್ ಸಂಘಟನೆಯಿಂದ ಆಗಿರುವುದು ಶ್ಲಾಘನೀಯ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟುವಿನ ಕ್ಲಿಕ್ ಸಭಾಂಗಣದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಷನ್‍ನ ಉಳ್ಳಾಲ ಕ್ಷೇತ್ರ ಸಮಿತಿ ಇದರ 6 ನೇ ಬೃಹತ್ ಕ್ಷೇತ್ರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎಲ್ಲಾ ಕ್ಷೇತ್ರದಲ್ಲಿ ಸಂಘಟನೆಗಳಿದ್ದರೂ, ರಾಜಕಾರಣಿಗಳು ಮಾತ್ರ ಅಸಂಘಟಿತರಿದ್ದಾರೆ. ವೃತ್ತಿಯನ್ನು ಪ್ರೀತಿಸಿದಾಗ ಬದುಕು ಅರಳುವುದು. ವೇಗದ ಸಮಾಜದಲ್ಲಿ ವೃತ್ತಿಗಳು ಪರಿವರ್ತನೆಯಾಗುತ್ತಲೇ ಇರುತ್ತದೆ. ಇದು ಸಮಾಜದ ಪರಿವರ್ತನೆಗೂ ಪೂರಕ. ಆದರೆ ಸಂಘಟನೆಗಳಿರುವಲ್ಲಿ ಮಾತ್ರ ಸರಕಾರದಿಂದ ಸಿಗುವ ಸವಲತ್ತುಗಳನ್ನು ಪಡೆಯಲು ಸಾಧ್ಯ . ಈ ನಿಟ್ಟಿನಲ್ಲಿ ಸ್ವರ ಮತ್ತು ಶಕ್ತಿಯನ್ನು ಒಂದುಗೂಡಿಸಿ ಕಾರ್ಯ ನಿರ್ವಹಿಸುವ ಟೈಲರ್ಸ್ ಸಂಘಟನೆಗೆ ಸರಕಾರದಿಂದ ಎಲ್ಲಾ ರೀತಿಯೂ ಸಹಕಾರ ನೀಡಲು ಸಿದ್ಧ ಎಂದರು. ಕಾರ್ಯಕ್ರಮವನ್ನು ಟೈಲರ್ಸ್ ಅಸೋಸಿಯೇಷನ್‍ನ ರಾಜ್ಯಾಧ್ಯಕ್ಷ ಬಿ.ವಸಂತ್ ಉದ್ಘಾಟಿಸಿದರು. ಉಳ್ಳಾಲ ಕ್ಷೇತ್ರ ಸಮಿತಿ ಅಧ್ಯಕ್ಷ ನಾರಾಯಣ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ದೇರಳಕಟ್ಟೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ರಾ. ಹೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಉಳ್ಳಾಲ ನಗರಸಭೆ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಅವರು ತೊಕ್ಕೊಟ್ಟು ಕೇಂದ್ರ ಬಸ್ಸು ನಿಲ್ದಾಣದ ಬಳಿ ಇರುವ ಅನಧಿಕೃತ ಗೂಡಂಗಡಿಗಳನ್ನು ಪೌರ ಕಾರ್ಮಿಕರ ಮುಖೇನ ತೆರವುಗೊಳಿಸಿದರು. ಅಂಗಡಿ ಮಾಲೀಕರ ತೀವ್ರ ವಿರೋಧದ ನಡುವೆಯೂ ಪೋಲೀಸರ ಮಧ್ಯಸ್ಥಿಕೆಯಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿಯಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಅಂಗಡಿ ಮಾಲೀಕರಿಗೆ ಉಳ್ಳಾಲ ನಗರಸಭೆಯು ಧ್ವನಿವರ್ಧಕದ ಮೂಲಕ ಸೂಚನೆ ನೀಡಿತ್ತಾದರೂ ಅಂಗಡಿಗಳು ತೆರವುಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಅವರು ಗುರುವಾರದಂದು ಸಿಬ್ಬಂದಿ ಮತ್ತು ಪೌರಾಯುಕ್ತರ ಸಹಕಾರದಿಂದ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಿದ್ದಾರೆ. ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಗೂಡಂಗಡಿ ಮಾಲೀಕರು ಅಂಗಡಿಗಳಲ್ಲಿ ಸಾಮಾನು ಇದ್ದು ಈಗ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದಾಗ ಪೋಲೀಸರು ಮಧ್ಯ ಪ್ರವೇಶಿಸಿದರು .ಈ ವೇಳೆ ಪೋಲೀಸರ ಜತೆಯೂ ವರ್ತಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆಯಿತು. ಪೌರಾಯುಕ್ತೆ ರೂಪಾ ಟಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸಮುದ್ರ ತೀರದಲ್ಲಿ ನಾಡದೋಣಿಯವರು ಮೀನುಗಾರಿಕೆ ಮಾಡುವ ಪ್ರದೇಶದಲ್ಲಿ ದೊಡ್ಡ ಬೋಟಿನ `ಬುಲ್ ಟ್ರಾಲ್’ ಬಲೆ ಹಾಕಿ ಮೀನಿನ ಸಂತತಿಯನ್ನು ನಾಶ ಮಾಡಿ ಉಳ್ಳಾಲ ಪ್ರದೇಶದ ಮೀನುಗಾರರಿಗೆ ತೊಂದರೆ ನೀಡುತ್ತಿದ್ದು, ಈ ಬಗ್ಗೆ ಉಳ್ಳಾಲ ಮೊಗವೀರಪಟ್ನದ ನಾಡದೋಣಿ ಮೀನುಗಾರಿಕಾ ಒಕ್ಕೂಟದ ಮಾಲಕರು ಮತ್ತು ಕಾರ್ಮಿಕರು ಬುಲ್ ಟ್ರಾಲ್ ಅನ್ನು ನಿಷೇಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಮೀನುಗಾರರು ಹಿರಿಯರು ಕಲಿಸಿಕೊಟ್ಟಂತಹ ಪರಿಸರಕ್ಕೆ ಪೂರಕವಾದ ಸಾಂಪ್ರದಾಯಿಕ ಮೀನುಗಾರಿಕೆಯನ್ನು ಹಲವು ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಸಮುದ್ರ ದಡದಿಂದ ಸುಮಾರು ಐದು ಮಾರು ದೂರದವರೆಗೆ ಹುಟ್ಟು (ದಂಡ್ ) ನ ಸಹಾಯದಿಂದ ದೋಣಿಯಲ್ಲಿ ನೀರನ್ನು ತಳ್ಳುತ್ತಾ ಮೀನಿಗೆ ತಕ್ಕಂತೆ ಬಲೆಯನ್ನು ಹಾಕಿ ಕಷ್ಟದಿಂದ ಮೀನುಗಾರಿಕೆ ನಡೆಸುತ್ತಿದ್ದಾರೆ. ಆದರೆ ಕಳದ ಮೂರು ವರ್ಷದಿಂದ ಉಳ್ಳಾಲ ಮತ್ತು ಬೆಂಗರೆಯ ಸುಮಾರು ಹತ್ತು ಜೋಡಿ ಬೋಟಿನವರು ಬುಲ್ ಟ್ರಾಲ್ ನಲ್ಲಿ ಒಂದು ದೊಡ್ಡ ಬಲೆಯನ್ನು 100 ಮೀಟರ್ ಅಂತರದಲ್ಲಿ ಎರಡು ಬೋಟಿನವರು ಎಳೆದುಕೊಂಡು ದಡದಿಂದ…

Read More