Author: UllalaVani

Kannada News From Coastal Karnataka

ಮಂಗಳೂರು; ಮೊಗವೀರ್ಸ್ ಬಹ್ರೇನ್ ವತಿಯಿಂದ ಡಿ.14ರಂದು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ನಾಡೋಜ ಡಾ| ಜಿ.ಶಂಕರ್, ದ.ಕ ಮತ್ತು ಉಡುಪಿ ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಉರ್ವದ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಲಕ್ಷö್ಮಣ್ ಅಮೀನ್ ಕೋಡಿಕಲ್, ಉದ್ಯಮಿ ಮೋಹನ್ ಬೆಂಗ್ರೆ ಮಂಗಳೂರು, ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾದ ವರದರಾಜ ಬಂಗೇರ, ಮಂಗಳೂರು ದಕ್ಷಿಣದ ಬಿಜೆಪಿ ಉಪಾಧ್ಯಕ್ಷರಾದ ಗೌತಮ್ ಸಾಲ್ಯಾನ್ ಕೋಡಿಕಲ್, ಮಂಗಳೂರು ಟ್ರಾಲ್‌ಬೋಟ್ ಮೀನುಗಾರರ ಸಂಘದ ಅಧ್ಯಕ್ಷರಾದ ಚೇತನ್ ಬೆಂಗ್ರೆ, ಮೊಗವೀರ್ಸ್ ಬಹ್ರೇನ್ ಅಧ್ಯಕ್ಷೆ ಶಿಲ್ಪ ಶಮಿತ್ ಕುಂದರ್, ಉಪಾಧ್ಯಕ್ಷರಾದ ವಿನೋದ್ ಶ್ರೀಯಾನ್, ಕಾರ್ಯದರ್ಶಿಯಾದ ಸುಮನ್ ಸುವರ್ಣ ಭಾಗಿಯಾಗಲಿದ್ದಾರೆ.

Read More

ಉಳ್ಳಾಲ;ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಅಸಯ್ಯಿದ್ ಇಸ್ಮಾಯಿಲ್ ವಲಿಯುಲ್ಲಾ ಅಲ್ ಬುಖಾರಿ ಅವರ ಹೆಸರಿನಲ್ಲಿ ಡಿ.17 ರಿಂದ ಡಿ.27ರವರೆಗೆ ಮಸೀದಿ ವಠಾರದಲ್ಲಿ ಗೌರವ ಅಧ್ಯಕ್ಷ ಸೈಯದ್ ಆಟಕೋಯ ತಂಙಳ್ ಕುಂಬೋಳ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉರೂಸ್ ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮಸೀದಿಯ ಗೌರವ ಅಧ್ಯಕ್ಷ ಸೈಯದ್ ಆಟಕೋಯ ತಂಙಳ್ ಕುಂಬೋಳ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮಸೀದಿಯ ಕಾರ್ಯಕ್ರಮ ನಾವು ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡಬೇಕು. ಅಭಿವೃದ್ಧಿ ನಮ್ಮ ಗುರಿಯಾಗಿರುತ್ತದೆ. ಉರೂಸ್ ಕಾರ್ಯಕ್ರಮ ಯಶಸ್ಸು ಆಗಿ ನಡೆಯಲಿ ಎಂದು ಹಾರೈಸಿದರು. ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿ ಮುದರ್ರಿಸ್ ಅಹ್ಮದ್ ಬಾಖವಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಸೀದಿ ಅಧ್ಯಕ್ಷ ಅಬ್ದುಲ್ ಅಝಿಝ್ ಮೈಸೂರು ಬಾವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಜುಮ್ಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಅಝೀಝ್ ಪರ್ತಿಪ್ಪಾಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿ ಉಪಾಧ್ಯಕ್ಷರಾದ ಆಲಿಕುಂಞ್ ಪಾರೆ, ಮೊಯ್ದಿನ್ ಕುಟ್ಟಿ, ಮುನೀರ್ ಬಾವ, ಕೋಶಾಧಿಕಾರಿ ಉಮರ್ ಕುಂಞ್ ಮೋರ್ಲ, ಕಾರ್ಯದರ್ಶಿಗಳಾದ…

Read More

ಉಳ್ಳಾಲ: ಬೆಳಗಾವಿಯ ನ್ಯೂಕ್ಲಿಯಸ್ ಮಾಲ್‌ನ ಕಪೀಲ್ ಸಿನೆಮಾಸ್‌ನಲ್ಲಿ ಮಂಗಳಮುಖಿಯರ ಕಥೆ ವ್ಯಥೆಯನ್ನೊಳಗೊಂಡ ‘’ಶಿವಲೀಲಾ’’ಚಿತ್ರವನ್ನು ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ವೀಕ್ಷಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಉಪಸ್ಥಿತರಿದ್ದರು. ಚಿತ್ರದಲ್ಲಿ ಒಟ್ಟು ೨ ಸಾವಿರ ಮಂಗಳಮುಖಿಯರು ಪಾತ್ರ ನಿರ್ವಹಿಸುವುದು ವಿಶೇಷವಾಗಿತ್ತು.

Read More

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳೆಂದರೆ ಕನ್ನಡ ಚಿತ್ರರಂಗದ ಪಾಲಿಗೆ ಹಬ್ಬ. ಗುರುವಾರ ರಿಲೀಸ್ ಆಗಿರುವ ದಿ ಡೆವಿಲ್ ಕೂಡ ದೊಡ್ಡ ಮಟ್ಟದಲ್ಲೇ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದೇ ಕಾರಣದಿಂದಲೇ ಮೊದಲ ದಿನವೇ ಬಾಕ್ಸ್ ಆಫೀಸ್ ನಲ್ಲಿ ದಾಖಲೆಯ ಕಲೆಕ್ಷನ್ ಮಾಡಿದೆ. ಮೂಲಗಳ ಪ್ರಕಾರ ದಿ ಡೆವಿಲ್ ಮೊದಲ ದಿನದ ಬಾಕ್ಸಾಫೀಸ್ ಕಲೆಕ್ಷನ್ 13.8ಕೋಟಿ ಎನ್ನಲಾಗಿದೆ. ಕನ್ನಡದ ಸಿನಿಮಾಗಳ ಪಾಲಿಗೆ ಒಂದೇ ದಿನಕ್ಕೆ 13 ಕೋಟಿ ರೂಪಾಯಿ ಗಳಿಕೆ ಮಾಡಿರುವುದು ದಾಖಲೆಯ ವಿಷಯವೇ ಸರಿ. ಒಂದು ರೀತಿಯಲ್ಲಿ ಇದಕ್ಕೆ ಟಿಕೆಟ್ ಬೆಲೆ ಕೂಡ ಕಾರಣ ಎನ್ನಬಹುದು. ಪಿವಿಆರ್, ಐನಾಕ್ಸ್​​ ಮೊದಲಾದ ಮಲ್ಟಿಪ್ಲೆಕ್ಸ್​ ಚಿತ್ರ ಮಂದಿರಗಳಲ್ಲಿ ಟಿಕೆಟ್ ದರ 500 ರೂಪಾಯಿಗಳಿಂದಲೇ ಆರಂಭ ಎನ್ನುವ ಹಾಗಿತ್ತು. ಸಿಂಗಲ್ ಥೀಯೇಟರ್ ಗಳಲ್ಲಿ 400 ರೂಪಾಯಿ ವರೆಗೂ ಟಿಕೆಟ್ ದರ ಇತ್ತು. ಇದರಿಂದಾಗಿಯೇ ದೊಡ್ಡ ಮಟ್ಟದ ಕಲೆಕ್ಷನ್ ಆಗಿದೆ ಎನ್ನಲಾಗುತ್ತಿದೆ. ಪ್ಯಾನ್ ಇಂಡಿಯನ್ ಸಿನಿಮಾಗಳ ಸಿನಿಮಾ ಬಗ್ಗೆ ಕರ್ನಾಟಕ ಮಾತ್ರವಲ್ಲ ಇಡೀ ದೇಶವೇ ನಿರೀಕ್ಷೆ ಮಾಡಿತ್ತು. ಆದರೆ…

Read More

ಉಳ್ಳಾಲ:ಯಕ್ಷಗಾನ ಕರಾವಳಿಯ ಗಂಡು ಕಲೆ ಎಂದೇ ಪ್ರಸಿದ್ದಿ ಪಡೆದಿದೆ. ಯಕ್ಷಗಾನ ಅನೇಕರು ಆಕರ್ಷಿಸುವ ಕಲೆ. ವರ್ಷಗಳ ಹಿಂದೆ ವಾರಣಾಸಿ ವಿದ್ಯಾರ್ಥಿಗಳಿಂದ ಹಿಂದಿ ಭಾಷೆಯಲ್ಲಿ ಏಕಲವ್ಯ ಪ್ರಸಂಗ ಯಕ್ಷಗಾನ ಪ್ರದರ್ಶನಗೊಂಡಿತ್ತು. ಇದೀಗ ನಿಟ್ಟೆ ವಿ.ವಿಯಲ್ಲಿ ಮಲಯಾಳಂ ಭಾಷೆಯಲ್ಲಿ ಮಹಿಷಾಸುರನ ವಧೆ ನಡೆದಿದೆ. ಅಶ್ವಥ್ ಮಂಜನಾಡಿ ,ದೀವಿತ್ ಎಸ್.ಕೆ.ಪೆರಾಡಿ ನಿರ್ದೇಶನದಲ್ಲಿ ಮಹಿಷಾಸುರ ವಧೆ ಮೂಡಿಬಂದಿದೆ. ಹಿಮ್ಮೇಳದಲ್ಲಿರಾಜಾರಾಮ್ ಹೊಳ್ಳ, ಚೆಂಡೆ-ಮದ್ದಳೆ-ಕೌಶಿಕ್ ರಾವ್ ಪುತ್ತಿಗೆ, ಕೌಶಲ್ ರಾವ್ ಪುತ್ತಿಗೆ, ಚಕ್ರತಾಳ-ಹರಿಶ್ಚಂದ್ರ ನಾಯ್ಗ ಮಾಡೂರು, ವೇಷ ಭೂಷಣ- ಮೋಹಿನಿ ಕಲಾಸಂಪದ ಕಿನ್ನಿಗೋಳಿ, ದೇವಿ-ಡಾ|ಪ್ರಣಮ್ಯ ಭಟ್, ಬ್ರಹ್ಮ -ಸುಮಿತ್ ವಿ.ಶೆಟ್ಟಿ, ವಿಷ್ಣು -ಡಾ| ವಾದಿಶ್ ಭಟ್, ಮಹೇಶ್ವರ- ಡಾ|ಸತೀಶ್ ಕುಮಾರ್ ಭಂಡಾರಿ, ಮಹಿಷ -ಡಾ|ಅರುಣ್ ಭಟ್, ಶಂಕ-ದುರ್ಗ-ಭರತ್ ರಾಜ್ ಮಾಣೈ, ಡಾ|ಸುಜಾತದೇವೇಂದ್ರ -ದಾಮೋದರ ಯು.ಬಿ, ದೇವೇಂದ್ರ ಬಲ -ಪ್ರತೀಕ್ಷಾ, ಪ್ರೀತಮ್,ಸಿಂಹ- ಪ್ರೀತಮ್ ನಾಯ್ಕ್ ಪಾತ್ರಧಾರಿಗಳಾಗಿದ್ದರು.

Read More

ಪುತ್ತೂರು, ಡಿ. ಗಾಂಧಿ ಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಅರಣ್ಯ ಉತ್ಪನ್ನಗಳ ಖರೀದಿ ಕೇಂದ್ರಕ್ಕೆ ಹಾಡಹಗಲೇ ನುಗ್ಗಿ 5 ಲಕ್ಷ ರೂ. ನಗದು ಮತ್ತು ದಾಖಲೆಗಳು ಹಾಗೂ ಚೆಕ್‌ಗಳು ಇದ್ದ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮೂಡಿಗೆರೆ ನಿವಾಸಿಗಳಾದ ಮುಹಮ್ಮದ್ ಶಹಬಾದ್ (26) ಮತ್ತು ಜಂಶೀದ್ (25) ಎಂದು ಗುರುತಿಸಲಾಗಿದೆ.ಈ ಇಬ್ಬರನ್ನೂ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ಪೊಲೀಸರು ಅಂಗಡಿಯೊಂದರಿಂದ ಹಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಿದ್ದರು. ಅಲ್ಲಿ ನಡೆಸಿದ ವಿಚಾರಣೆ ವೇಳೆ, ಈ ಜೋಡಿ ಉಪ್ಪಿನಂಗಡಿ ಕಳ್ಳತನವನ್ನೂ ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದ್ದು, ನಂತರ ಉಪ್ಪಿನಂಗಡಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ಘಟನೆ ಅಕ್ಟೋಬರ್ 27 ರಂದು ಗಾಂಧಿ ಪಾರ್ಕ್ ಸಮೀಪದ ಶ್ರೀರಾಮ ಗೋಪಾಲ್ ಕಾಮತ್ ವಾಣಿಜ್ಯ ಸಂಕೀರ್ಣದಲ್ಲಿರುವ ವಸಂತ್ ಎಂಬುವವರಿಗೆ ಸೇರಿದ ಅಡಿಕೆ ಮತ್ತು ಅರಣ್ಯ ಉತ್ಪನ್ನಗಳ ವ್ಯಾಪಾರ ಕೇಂದ್ರದಲ್ಲಿ ನಡೆದಿತ್ತು.…

Read More

ಉಡುಪಿ, ಡಿ.11; ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿನ ಗುಂಡಿಗೆ ಬಿದ್ದು ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಟಿಪ್ಪರ್ ಚಾಲಕ ಶ್ರೀಕಾಂತ್(26) ಎಂದು ಗುರುತಿಸಲಾಗಿದೆ. ಈ ವಾಹನವು ನಿಟ್ಟೂರಿನ ರಂಜನ್ ಶೆಟ್ಟಿ ಅವರಿಗೆ ಸೇರಿದ್ದು, ಜಲ್ಲಿ ಲೋಡ್ ಮಾಡಲು ಶ್ರೀಕಾಂತ್ ಅವರು ನಿಟ್ಟೂರಿನಿಂದ ಹೊರಟಿದ್ದರು ಎನ್ನಲಾಗಿದೆ. ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಟಿಪ್ಪರ್ ಸಂಚರಿಸುತ್ತಿದ್ದಾಗ, ರಸ್ತೆಯ ತಿರುವಿನಲ್ಲಿ ಇದ್ದ ಗುಂಡಿಗೆ ಬಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಇದರಿಂದ ವಾಹನವು ರಸ್ತೆಯ ಬಲ ಬದಿಯ ದೊಡ್ಡ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನ ಆಸನದಲ್ಲಿ ಸಿಲುಕಿದ್ದ ಶ್ರೀಕಾಂತ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬAಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ಶಾಲಾ ಅಂತರ್ಗತ ಪಂದ್ಯಾಟ – ಕ್ರೀಡಾ ಹಬ್ಬ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಗಟ್ಟೀಸ್ ಪಿಟ್ ಲೈನ್ ಜಿಮ್ ಮಾಲಕರು, ಹಾಗೂ ರಾಜ್ಯ ಮಟ್ಟದ ಮಾಜಿ ಕ್ರೀಡಾಪಟು ಆಗಿರುವ ಅರುಣ್ ಕುಮಾರ್ ಗಟ್ಟಿ ಅಗರಿಮಾರ್ ಮಾತನಾಡಿದರು. ಕ್ರೀಡೆಯಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ, ಬದ್ಧತೆ, ಸಮಯ ಪ್ರಜ್ಞೆ,ತಾಳ್ಮೆ,ಆತ್ಮವಿಶ್ವಾಸ ಗುಣಗಳೇ ಮುಖ್ಯ ಆದ್ರೆ ಬಡತನ ಎನ್ನುವುದು ಕ್ರೀಡಾ ಸಾಧನೆಗೆ ಅಡ್ಡಿ ಬರುವುದಿಲ್ಲ, ವಿಶ್ವ ಕಪ್ ಕಬಡ್ಡಿ ಪಂದ್ಯಾಟದಲ್ಲಿ ವಿಜೇತರಾಗಿರುವ ಧನಲಕ್ಷ್ಮೀ ಪೂಜಾರಿ ಅವರು ಕಡು ಬಡತನದಲ್ಲಿ ಹುಟ್ಟಿ ಇಂದು ವಿಶ್ವದಲ್ಲೇ ತನ್ನ ಹೆಸರನ್ನು ದಾಖಲಿಸಿಕೊಂಡದ್ದು ನಮಗೆಲ್ಲ ಉದಾಹರಣೆ. ಹಾಗಾಗಿ ನಾವು ಕ್ರೀಡೆಯಲ್ಲಿ ಸೋಲು ಗೆಲುವು ಇದ್ದದ್ದೇ , ಸೋಲು ನಮಗೆ ನಮ್ಮ ವೈಫಲ್ಯವನ್ನು ಸರಿ ಪಡಿಸಲು ದಾರಿ ಮಾಡಿ ಕೊಡುತ್ತದೆ, ಯಶಸ್ಸು ನಮ್ಮ ಶ್ರಮಕ್ಕೆ ಪ್ರತಿಫಲ ಸಿಕ್ಕಿ ಮುಂದಿನ ಹಂತದಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡುತ್ತದೆ. ಹಾಗಾಗಿ ಸೋಲು ಮತ್ತು ಗೆಲುವು ಒಂದೇ ನಾಣ್ಯದ…

Read More

ಉಳ್ಳಾಲ: ಮಂಗಳೂರು ವಿಶ್ವ ವಿದ್ಯಾನಿಲಯದ ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ವತಿಯಿಂದ ಆಳ್ವಾಸ್ ಪಾರಂಪರಿಕ ಔಷಧೀಯ ಸಂಶೋಧನಾ ಕೇಂದ್ರ, ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡುಬಿದಿರೆ ಇದರ ಸಹಯೋಗದೊಂದಿಗೆ ‘ಸ್ವಾಸ್ಥ್ಯ ಸಂಪದ-2025’ ಔಷಧೀಯ ಸಸ್ಯಗಳ ಬಗ್ಗೆ ರಾಷ್ಟ್ರೀಯ ಸಮ್ಮೇಳನವು ಡಿ.12 ಮತ್ತು 13 ರಂದು ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಂಗಳೂರು ವಿವಿ ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಪ್ರೊ.ಎಂ.ಜಯಶಂಕರ್ ಅವರು ಹೇಳಿದರು. ಅವರು ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡುತ್ತಾ,ಆಯುರ್ವೇದ, ಯೋಗ, ಸಸ್ಯ ಮೂಲಗಳಿಂದ ಬೇರ್ಪಡಿಸುವ ರಾಸಾಯನಿಕ ವಸ್ತುಗಳು, ಸಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳು, ಹೊಸ ರೀತಿಯ ವೈದ್ಯಕೀಯ ಔಷಧಗಳ ತಯಾರಿಕೆಗಳು ಮಾನವ ಮತ್ತು ಸಾಕು ಪ್ರಾಣಿಗಳ ಆಹಾರ ಪದ್ಧತಿಗಳಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುವ ಕ್ರಿಯೆಗಳು ಮುಂತಾದ ಪುರಾತನ ಆಹಾರ ಪದ್ಧತಿ ಮತ್ತು ರೋಗ ನಿರೋಧಕ ಶಕ್ತಿ ವೃದ್ಧಿ ಹಾಗೂ ರೋಗ ನಿಯಂತ್ರಣ…

Read More

ಕುತ್ತಾರು; ಸುಪ್ರೀಮ್ ಆಟೋ ಡೀಲರ್ ಪ್ರೈ.ಲಿ ವತಿಯಿಂದ ಬೃಹತ್ ವಾಹನ ತಪಾಸಣಾ ಶಿಬಿರ ಡಿ.15ರಿಂದ 30ರವರೆಗೆ ಕುತ್ತಾರು ಪದವಿನ ನೂತನ ವರ್ಕ್ ಶಾಪ್‌ನಲ್ಲಿ ನಡೆಯಲಿದೆ. ಇವಿ ವಾಹನಗಳ ಸಾಫ್ಟ್ ವೇರ್ ಆಪ್‌ಡೇಟ್ ತಪಾಸಣೆ, ಆಯಿಲ್ ತಪಾಸಣೆ, ಗ್ರೀಸಿ0ಗ್ ಅಥವಾ ನಿಪ್ಪಾಲ್ ಗ್ರೀಸಿಂಗ್, ಏರ್ ಫಿಲ್ಟರ್ ಕ್ಲೀನಿಂಗ್, ಸ್ಪಾರ್ಕ್ ಪ್ಲಗ್ ಕ್ಲೀನಿಂಗ್, ಗ್ಯಾಸ್ ಟ್ಯೂನಿಂಗ್, ಕೇಬಲ್ ಚೆಕ್‌ಪ್ ಸೇರಿದಂತೆ ಇನ್ನಿತರÀ ವಾಹನಕ್ಕೆ ಸಂಬAಧಿಸಿದAತೆ ತಪಾಸಣೆಗಳು ಶಿಬಿರದಲ್ಲಿ ಲಭ್ಯವಿದೆ. ಲಕ್ಕಿ ಕೂಪನ್‌ನಲ್ಲಿರುವ ಆಕರ್ಷಕ ಬಹುಮಾನವನ್ನು ಗೆಲ್ಲುವ ಅವಕಾಶ ನಿಮ್ಮದಾಗಲಿದೆ. ಇದರ ಜೊತೆಗೆ ಡಿ.16ರಂದು ಯೆನೆಪೋಯ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ.

Read More