Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ವಿಕಲಚೇತನರಿಗೆ ಹುಟ್ಟಿನಿಂದ 18 ರ ಹರೆಯದವರೆಗೆ ಉಚಿತ ಚಿಕಿತ್ಸೆ ಹಾಗೂ ಔಷಧ ನೀಡುವ ಯೋಜನೆ ಸರ್ಕಾರ ಹಮ್ಮಿಕೊಂಡಿದ್ದು, ಅಂಗವೈಕಲ್ಯ ತಡೆಗಟ್ಟುವುದೇ ಸರಕಾರದ ಮುಖ್ಯ ಉದ್ದೇಶ ಆಗಿರುವ ನಿಟ್ಟಿನಲ್ಲಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಂಪನ್ಮೂಲ ಶಿಕ್ಷಣಾಲಯ ಕೇಂದ್ರದ ಉಪನಿರ್ದೇಶಕ ಬೆಂಗಳೂರಿನ ಡಾ.ಪ್ರಭುದೇವ ಗೌಡ ಹೇಳಿದರು. ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಎ.ಬಿ.ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ಇದರ ಸಂಯುಕ್ತ ಆಶ್ರಯದಲ್ಲಿ ಗುರುವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಸಭಾಂಗಣದಲ್ಲಿ ನಡೆದ ವಿಶ್ವ ವಿಕಲ ಚೇತನರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಎಳೆ ವಯಸ್ಸಿನಲ್ಲಿರುವ ಅಂಗವಿಕಲರಿಗೆ ಉಚಿತ ಔಷಧ ಮತ್ತು ಚಿಕಿತ್ಸೆ ನೀಡಲು ಸರಕಾರ ಮುಂದಾಗಿರುವುದರಿಂದ ಪ್ರತೀ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ವೈದ್ಯರು ಭೇಟಿ ನೀಡಿ ಪರೀಕ್ಷಿಸಿ ಔಷಧ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಮೂಲಕ ಅಂಗವೈಕಲ್ಯತೆಯನ್ನು ಶಾಶ್ವತವಾಗಿ ತಡೆಗಟ್ಟಬಹುದು ಎಂದರು. ಕ್ಷೇಮಾ ಡೀನ್ ಡಾ.ಸತೀಶ್ ಕುಮಾರ್ ಭಂಡಾರಿ ಮಾತನಾಡಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಕುಂಪಲ ಕೇಸರಿ ಮಾತೃ ಮಂಡಳಿ ಇದರ 2015-16ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಮೀಳ ವಿಜಯ್ ಆಯ್ಕೆಯಾದರು. ಸಮಿತಿಯ ನೂತನ ಕಾರ್ಯದರ್ಶಿಯಾಗಿ ಮಮತಾ ಜಿತೇಂದ್ರ, ಕೋಶಾಧಿಕಾರಿಯಾಗಿ ಆಶಾ ಸುರೇಶ್. ಉಪಾಧ್ಯಕ್ಷರಾಗಿ ಶಾಲಿನಿ ದೇವದಾಸ್, ದಿವ್ಯಾ ರಾಕೇಶ್., ಜೊತೆ ಕಾರ್ಯದರ್ಶಿಯಾಗಿ ಮೋಹಿನಿ ಸುವರ್ಣ, ರೇಣುಕ ಪುರುಷೋತ್ತಮ್, ಕ್ರೀಡಾ ಕಾರ್ಯದರ್ಶಿಯಾಗಿ ರೂಪಾ ನವೀನ್, ಚಂದ್ರಾವತಿ, ಜೀವಿತಾ, ಸಾಂಸ್ಕ್ರತಿಕ ಕಾರ್ಯದರ್ಶಿಗಳಾಗಿ ಗೀತಾ ಅಶೋಕ್, ವೈಷ್ಣವಿ, ಮುಖ್ಯಸಲಹೆಗಾರರಾಗಿ ಶಕುಂತಲಾ ರಾಜ್, ಸವಿತಾ ಚಂದ್ರಶೇಖರ್, ಲಲಿತಾ ಕೇಶವ್, ವಿದ್ಯಾದಿನೇಶ್ ಆಯ್ಕೆಯಾದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು : ಪಾಲಿಟೆಕ್ನಿಕ್‍ಗಳ ಮೂಲಕ ಸಮುದಾಯದ ಅಭಿವೃದ್ಧಿ ಕರ್ನಾಟಕ ಪಾಲಿಟೆಕ್ನಿಕ್ ಮಂಗಳೂರು ಹಾಗೂ ಆದರ್ಶ ಮಹಿಳಾ ಮಂಡಲ ಸಂತೋಷ್ ನಗರ ಕುತ್ತಾರು ಇವುಗಳ ಜಂಟಿ ಆಶ್ರಯದಲ್ಲಿ ಸಂತೋಷ್ ನಗರದಲ್ಲಿ ನಡೆಯುವ 3 ತಿಂಗಳ ಉಚಿತ ಟೈಲರಿಂಗ್ ತರಬೇತಿಯನ್ನು ಕರ್ನಾಟಕ ಪಾಲಿಟೆಕ್ನಿಕ್ ಆಂತರಿಕ ಸಂಯೋಜಕ ಸುಶಾಂತ್ ಇತ್ತೀಚೆಗೆ ಉದ್ಘಾಟಿಸಿದರು. ಸಮುದಾಯ ಅಭಿವೃದ್ಧಿ ಅಧಿಕಾರಿ ಸುಧೀರ್, ಆದರ್ಶ ಮಹಿಳಾ ಮಂಡಲದ ಅಧ್ಯಕ್ಷೆ ಸುಹಾಸಿನಿ ಬಬ್ಬುಕಟ್ಟೆ, ತರಬೇತಿದಾರರಾದ ನಳಿನಾಕ್ಷಿ ಉಪಸ್ಥಿತರಿದ್ದರು.

Read More

ನವದೆಹಲಿ: ತಮಿಳುನಾಡು ಹಾಗೂ ರಾಜಧಾನಿ ಚೆನ್ನೈನಲ್ಲಿ ಸತತ ಮಳೆಯಿಂದ ಉಂಟಾದ ಜಲಪ್ರಳಯಕ್ಕೆ ರಾಜ್ಯವೇ ತತ್ತರಿಸಿಹೋಗಿದ್ದು, ಚೆನ್ನೈ ಬುಧವಾರ ಸಂಪೂರ್ಣ ಮುಳುಗಡೆಯಾಗಿದೆ.ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರ ರು.5  ಕೋಟಿ ನೆರವು ನೀಡುವುದಾಗಿ ಘೋಷಿಸಿದೆ.ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಆಹಾರ, ಸಾರಿಗೆ, ಔಷಧ ಸೇರಿದಂತೆ ಯಾವುದೇ ರೀತಿಯ ನೆರವು ಬೇಕಾದರೂ ನೀಡಲು ರಾಜ್ಯ ಸಿದ್ಧವಿದೆ. ಈ ಸಂಬಂಧ ತಮಿಳುನಾಡು ಮುಖ್ಯ ಕಾರ್ಯದರ್ಶಿ ಜತೆಗೆ ಮಾತುಕತೆ ನಡೆಸಲು ರಾಜ್ಯದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ರಾಜ್ಯದಲ್ಲಿನ ರಸ್ತೆ, ವಾಯುಯಾನ, ರೈಲು ಸಂಪರ್ಕ ಸ್ಥಗಿತಗೊಂಡಿವೆ. ಮೊಬೈಲ್‌, ಸ್ಥಿರ ದೂರವಾಣಿ ಸಂಪರ್ಕ, ವಿದ್ಯುತ್‌ ಮತ್ತು ಅಗತ್ಯ ವಸ್ತುಗಳ ಪೂರೈಕೆ ಭಾರಿ ಏರುಪೇರಾಗಿದ್ದು, ಆಹಾರ ಮತ್ತು ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ದಶಕಗಳ ಬಳಿಕ ಕಂಡ ಜಲಪ್ರಳಯದಲ್ಲಿ ಇದುವರೆಗೆ ಸತ್ತವರ ಸಂಖ್ಯೆ ೨೦೦ಕ್ಕೂ ಹೆಚ್ಚಾಗಿದೆ. ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಚೆನ್ನೈ, ಕಾಂಚಿಪುರಂ, ತಿರುವಳ್ಳೂರು, ಕಡಲೂರು ಮತ್ತು…

Read More

ಚೆನ್ನೈ: ಕುಂಭದ್ರೋಣ ಮಳೆಯ ಪ್ರವಾಹಕ್ಕೆ ತತ್ತರಿಸಿದ ತಮಿಳುನಾಡು ಸಂಪೂರ್ಣ ಜಲಾವೃತಗೊಂಡಿದೆ. ಮನೆ, ಕಚೇರಿ, ಶಾಪಿಂಗ್ ಮಾಲ್ ಹೀಗೆ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗಳು ನಷ್ಟಹೊಂದಿದೆ. ಚೆನ್ನೈನಲ್ಲಿ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಇದುವರೆಗೂ 185 ಮಂದಿ ಜನ ಸಾವನ್ನಪ್ಪಿದ್ದು, ಅನೇಕ ಜನರು ಪ್ರವಾಹದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ. ಪ್ರಮುಖ ನಗರಗಳಲ್ಲಿ ತುಂಬಿ ಹರಿಯುತ್ತಿರುವ ನೀರಿನಿಂದಾಗಿ ಜಲಾವೃತಗೊಂಡಿರುವ ಮೆಟ್ರೋ ಸಿಟಿ ಇದೀಗ ದ್ವೀಪ ಪ್ರದೇಶವಾಗಿದ್ದು, ದೊಣಿ ಮತ್ತು ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಯುತ್ತಿದೆ. ಪ್ರವಾಹದಲ್ಲಿ ಸಿಲುಕಿ ಹಾಕಿರುವ ಜನರ ರಕ್ಷಣೆಗೆಂದು ನೌಕದಳ ಸಜ್ಜಾಗಿದೆ. ದಶಕಗಳ ನಂತರ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿರುವ ಕಾರಣ ಪ್ರವಾಹದ ಭೀತಿಯನ್ನು ಎದುರಿಸಬೇಕಾಗುತ್ತದೆ ಎಂದು ಹವಾಮಾನ ವರದಿ ತಿಳಿಸಿದೆ. ಇನ್ನು ನಿರಂತರವಾಗಿ 24 ಗಂಟೆಗಳ ಕಾಲ ತಮಿಳುನಾಡಿನಾದ್ಯಂತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜನರು ನೀರು ಹಾಗೂ ಆಹಾರಕ್ಕಾಗಿ ಪರದಾಡುತ್ತಿದ್ದು,ಆಹಾರ…

Read More

ನವದೆಹಲಿ: ಜೀವಾವಧಿ ಶಿಕ್ಷೆಗೆ ಗುರಿಯಾದವರಿಗೆ ಕ್ಷಮಾದಾನ ನೀಡುವ ಅಧಿಕಾರ ರಾಜ್ಯಸರ್ಕಾರಗಳಿಗೆ ಇಲ್ಲ ಈ ನಿಟ್ಟಿನಲ್ಲಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಕ್ಷಮಾದಾನ ನೀಡಿ, ಅವರನ್ನು ಬಿಡುಗಡೆ ಮಾಡುವ ಅಧಿಕಾರ ತಮಿಳುನಾಡು ಸರ್ಕಾರಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ.ಈ ಹಿನ್ನೆಲೆಯಲ್ಲಿ ರಾಜೀವ್ ಹಂತಕರ ಬಿಡುಗಡೆಗೆ ತಡೆ ಬಿದ್ದಂತಾಗಿದೆ. ರಾಜೀವ್‌ ಹತ್ಯೆ ಪ್ರಕರಣದ 7 ಜನ ದೋಷಿಗಳಿಗೆ ಗಲ್ಲು ಶಿಕ್ಷೆ  ಈ ಹಿಂದೆ ನೀಡಲಾಗಿತ್ತು, ಆದರೆ ಶಿಕ್ಷೆ ಜಾರಿ ಮಾಡುವಲ್ಲಿ ವಿಳಂಬ ಆಗಿದ್ದ ಹಿನ್ನೆಲೆಯಲ್ಲಿ ಅವರ ಶಿಕ್ಷೆಯನ್ನು ಸುಪ್ರೀಂಕೋರ್ಟ್‌ ಜೀವಾವಧಿಗೆ ಇಳಿಸಿತ್ತು. ಬಳಿಕ ತಮಿಳುನಾಡಿನ ಜಯಲಲಿತ ಸರಕಾರ ರಾಜೀವ್‌ ಹಂತಕರಿಗೆ ಕ್ಷಮಾದಾನ ನೀಡಿ ಅವರ ಬಿಡುಗಡೆ ಆದೇಶ ಹೊರಡಿಸಿತ್ತು. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಪ್ರಶ್ನಿಸಿತ್ತು. ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿದ್ದು ಸಿಬಿಐ. ಹಾಗಾಗಿ ಪ್ರಕರಣದ ದೋಷಿಗಳ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕೇ ವಿನಃ, ರಾಜ್ಯ ಸರ್ಕಾರವಲ್ಲ. ದೋಷಿಗಳ ಬಿಡುಗಡೆ ನಿರ್ಧಾರ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ದಕ್ಷಿಣ ಕನ್ನಡ ಜಿಲ್ಲೆಯ ಜನರ ಜೀವನ ಶೈಲಿ ಇತರ ಎಲ್ಲರಿಗಿಂತ ಭಿನ್ನ. ಅದರಲ್ಲೂ ಆರೋಗ್ಯ ಸಂಬಂಧಿ ವಿಚಾರದಲ್ಲಿ ಸಾಮಾನ್ಯ ಜನರು ಕೂಡಾ ವಿಶೇಷ ನಿಲುವು ಹೊಂದಿರುತ್ತಾರೆ. ರೋಗಕ್ಕೆ ತುತ್ತಾದಾಗ ಸರಕಾರಿ ಆಸ್ಪತ್ರೆಯಲ್ಲಿ ಸಿಗುವ ಔಷಧಿ ಬಗ್ಗೆ ಒಂಥರಾ ನಿರಾಸಕ್ತಿ ಪ್ರದರ್ಶಿಸುತ್ತಾರೆ. ಜೇಬಿನಲ್ಲಿ ಕೇವಲ ಹತ್ತು ರೂ. ಗಳಿದ್ದರೂ ಧರ್ಮಾರ್ಥ ಸಿಗುವ ಔಷಧಿ ಬಗ್ಗೆ ಹೆಚ್ಚಿನ ನಂಬಿಕೆ ಇಟ್ಟಿರುವುದಿಲ್ಲ. ಧರ್ಮದ ಮದ್ದು ಧರ್ಮದ್ದೇ ಎಂಬ ಭಾವನೆ ಬೇರೂರಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ.ಎಸ್. ರಮಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಮಂಗಳವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸೆಮಿನಾರ್ ಹಾಲ್‍ನಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ ಸಹಕಾರದೊಂದಿಗೆ ಮಂಗಳೂರಿನ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಸಹಕಾರದಲ್ಲಿ ನಡೆದ ಬಂಟ್ಸ್ ಕ್ಷೇಮ ಉಚಿತ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ಶ್ರೇಷ್ಠ ಎಂಬ ಮನಸ್ಥಿತಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ತುಳು ಭಾಷೆಗೆ ಸಂವಿಧಾನದಲ್ಲಿ ಮಾನ್ಯತೆ ಸಿಗದೇ ಇರುವುದು ಬೇಸರದ ವಿಷಯ. ಪ್ರಸ್ತುತ ದಿನಗಳಲ್ಲಿ ತುಳು ಭಾಷೆಯಲ್ಲಿ ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಗಳ ರಚನೆಯಲ್ಲಿ ತೊಡಗಿಸಿಕೊಂಡಿದ್ದು, ತುಳು ಸಂಸ್ಕøತಿಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಪಂಚದ ಮೂಲೆಗಳಲ್ಲಿ ತುಳುವರು ಒಟ್ಟಾಗಿ ಕೂಟಗಳನ್ನು ನಡೆಸುತ್ತಿದ್ದು, ಆದರೂ ಭಾಷೆಗೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಎಂ. ಜಾನಕಿ ಬ್ರಹ್ಮಾವರ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ತುಳು e್ಞÁತಿ ಪದಕೋಶ(ತುಳು, ಕನ್ನಡ, ಕೊಡವ, ಮಲಯಾಳಂ, ತಮಿಳು, ತೆಲುಗು)ದ ಪ್ರಥಮ ಹಂತದ ಕೃತಿಯ ಸಾಂಕೇತಿಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತುಳು ಭಾಷೆಯ ಗಟ್ಟಿತನ ತೋರಿಸಲು ವಿಶ್ವವಿದ್ಯಾಲಯ, ಅಕಾಡೆಮಿ ಶ್ರಮಿಸಿದರೆ ಸಾಲದು. ತುಳು ಭಾಷೆಯ ಸೊಗಡು ಇನ್ನಷ್ಟು ಅರಿತುಕೊಳ್ಳಲು ತುಳು ಸಾಹಿತ್ಯಗಳನ್ನು ಓದುವ ಕಾರ್ಯ ನಡೆಯಬೇಕಿದೆ. ಕಳೆದ 18ವರ್ಷಗಳ ಸತತ ಪರಿಶ್ರಮದ ಮೂಲಕ ತುಳು ಭಾಷೆಯಲ್ಲಿ 6 ಸಂಪುಟದ ಬೃಹತ್ ಗಾತ್ರದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೆ.ಸಿ.ರೋಡ್: ಮುದುಂಗಾರುಕಟ್ಟೆ ಶಾಲೆ ಬಳಿ ಕೆ.ಸಿ.ರೋಡಿನ ಮದರಸದಲ್ಲಿ ಉಸ್ತಾದರಾಗಿರುವ ಮಹಮ್ಮದ್ ಮುನೀರ್ ಎಂಬವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿ, ಠಾಣೆಯಲ್ಲೇ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದು, ಬಾಳೆಪುಣಿಯ ಅನಿತಾ ಎಂಬವರಿಗೆ ಅವಾಚ್ಯವಾಗಿ ನಿಂದಿಸಿದ ಆರೋಪದಡಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿರುವ ಉಸ್ತಾದ್ ಅವರಿಗೂ ಠಾಣೆ ಜಾಮೀನು ನೀಡಿ ಬಿಡುಗಡೆಗೊಳಿಸಿದೆ. ಫೈಲ್ ಫೋಟೊ ಕೆ.ಸಿ.ರೋಡಿನ ಮದರಸದಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಸಾಲೆತ್ತೂರು ಕೊಳ್ನಾಡು ನಿವಾಸಿ ಮಹಮ್ಮದ್ ಮುನೀರ್ ಬೈಕಿನಲ್ಲಿ ಮನೆ ಕಡೆಗೆ ತೆರಳುತ್ತಿದ್ದಾಗ ಮುದುಂಗಾರುಕಟ್ಟೆ ಶಾಲೆಯ ಬಳಿ ಸಚಿನ್(26), ಪ್ರಶಾಂತ್ (28), ಪ್ರವೀಣ್ (28), ಪ್ರಸಾದ್ (33), ಸಂತೋಷ್, ಚಂದ್ರಶೇಖರ್ ಎಂಬವರು ಅಡ್ಡಗಟ್ಟಿ ಗಂಭೀರ ಹಲ್ಲೆ ನಡೆಸಿದ್ದರು. ಗಾಯಾಳು ಉಸ್ತಾದರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಐದು ಮಂದಿಯ ವಿರುದ್ಧ ದೂರು ದಾಖಲಾಗಿತ್ತು. ಪ್ರತಿದೂರು : ಎರಡು ವಾರಗಳ ಹಿಂದೆ ಬಾಳೆಪುಣಿ ನಿವಾಸಿ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಳೇಕಲ: ಖಾಸಗಿ ಶಾಲೆ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ನಡೆದ ಗಲಭೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಅಮಾಯಕರನ್ನು ಬಂಧಿಸಿದ್ದರೂ, ದರ್ಗಾ ಅಧ್ಯಕ್ಷರು ಮೌನ ವಹಿಸಿದ್ದಾರೆಂದು ಆರೋಪಿಸಿ ಎಸ್ ಡಿಪಿಐ ಕಾರ್ಯಕರ್ತರು ಉಳ್ಳಾಲ ಸೈಯ್ಯಿದ್ ಮದನಿ ದರ್ಗಾ ಅಧ್ಯಕ್ಷರ ಅಳೇಕಲದ ಮನೆಗೆ ಮುತ್ತಿಗೆ ಹಾಕಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರ ವಾಹನಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. ಅಳೇಕಲದಲ್ಲಿರುವ ದರ್ಗಾ ಅಧ್ಯಕ್ಷ ಯು.ಹೆಚ್ .ಹಂಝ ಅವರ ಮನೆಗೆ ತಡರಾತ್ರಿ ಸುಮಾರು 20-20 ರಷ್ಟು ಮಂದಿ ಆಗಮಿಸಿದ್ದ ಎಸ್ ಡಿಪಿಐ ಕಾರ್ಯಕರ್ತರು , ಪೊಲೀಸರು ತೊಕ್ಕೊಟ್ಟು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮನೆಯೊಳಗೆ ಏಕಾಏಕಿ ಪ್ರವೇಶಗೈದು ಅಮಾಯಕರನ್ನು ಕೊಂಡೊಯ್ದಿದ್ದಾರೆ. ನಸುಕಿನ ಜಾವ ಮಹಿಳೆ, ಮಕ್ಕಳು ಮನೆಯಲ್ಲಿರುವ ಸಂದರ್ಭ ಪೊಲೀಸರು ಮನೆಯೊಳಗೆ ಪ್ರವೇಶಿಸುತ್ತಿರುವುದು ಸರಿಯಲ್ಲ. ಈ ಬಗ್ಗೆ ದರ್ಗಾ ಅಧ್ಯಕ್ಷರು ಪೊಲೀಸರ ಜತೆಗೆ ಮಾತುಕತೆ ನಡೆಸಬೇಕು. ಅಲ್ಲದೆ…

Read More