Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಎದೆ ನೋವಿಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದೇರಳಕಟ್ಟೆ ಜಲಾಲ್‍ಬಾಗ್ ನಿವಾಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಲ್ಮಾನ್ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಮನೆಯವರು ಆರೋಪಿಸಿದ್ದಾರೆ. ದೇರಳಕಟ್ಟೆಯಲ್ಲಿ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಕೆಲಸ ಮಾಡುವ ಸಲ್ಮಾನ್ ಮಧ್ಯಾಹ್ನದವರೆಗೆ ಕೆಲಸ ಮಾಡಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳಿದ್ದು, ಎದೆನೋವು ಕಾಣಿಸಿಕೊಂಡಿದ್ದರಿಂದ ತನ್ನ ಬೈಕ್‍ನಲ್ಲೇ ಸಂಬಂಧಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದರು.ಸಂಜೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಮೂರು ತಿಂಗಳ ಹಿಂದೆ ಮದುವೆ : ಸಲ್ಮಾನ್ ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು. ಪತ್ನಿ, ತಂದೆ, ತಾಯಿ ಸಹೋದರಿ ಮೂವರು ಸಹೋದರರನ್ನು ಅಗಲಿದ್ದಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೋಟೆಪುರ: ಶಾಲೆಗಳಲ್ಲಿ ಆಹಾರೋತ್ಸವದಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಮಕ್ಕಳಲ್ಲಿ ವ್ಯವಹಾರ ಜ್ಞಾನ ಪಡೆಯಲು ಸಹಕಾರಿ ಎಂದು ಮಂಗಳೂರು ತಾಲೂಕು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ.ಜ್ಞಾನೇಶ್ ಅಭಿಪ್ರಾಯಪಟ್ಟರು. ಕೋಟೆಪುರ ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಅಯೋಜಿಸಲಾಗಿದ್ದ ವಸ್ತು ಪ್ರದರ್ಶನ, ಆಹಾರೋತ್ಸವ ಮೇಳ-2015 ಹಾಗೂ ಅಕ್ಷರ ದಾಸೋಹ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಇಂದು ಶಾಲಾ ಮಟ್ಟದಲ್ಲೇ ವ್ಯವಹಾರ ಜ್ಞಾನ ಅಗತ್ಯವಿದ್ದು ಟಿಪ್ಪು ಸುಲ್ತಾನ್ ಶಾಲೆಯಲ್ಲಿ ಆಹಾರೋತ್ಸವದ ಮೂಲಕ ಆ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ, ಇಂತಹ ಕಾರ್ಯಕ್ರಮದಿಂದ ಗ್ರಾಹಕರ ನಡುವಿನ ಸಂಬಂಧವೂ ಮಕ್ಕಳಲ್ಲಿ ಬೆಳೆಯುತ್ತದೆ ಎಂದು ಹೇಳಿದರು.ಅಕ್ಷರ ದಾಸೋಹ ಕಟ್ಟಡ ಉದ್ಘಾಟಿಸಿದ ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಯು.ಎಸ್.ಹಂಝ ಮಾತನಾಡಿ, ಟಿಪ್ಪು ಸುಲ್ತಾನ್ ಶಾಲೆ ದರ್ಗಾ ಅಧೀನದ ಪ್ರಥಮ ವಿದ್ಯಾಸಂಸ್ಥೆಯಾಗಿದೆ, ಕಳೆದ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದು ಇಲ್ಲಿನ ಶಿಕ್ಷಕ ವೃಂದದವರ ಪ್ರಯತ್ನ ಕಾರಣ, ಈ ಸಾಲಿನಲ್ಲಿ ಶೇ.100 ಫಲಿತಾಂಶ…

Read More

ಕೊಲೆರಾಡೋ: ಅಮೆರಿಕಾದ ಕೊಲೆರಾಡೋ ಜಿಲ್ಲೆಯ ಕುಟುಂಬ ಯೋಜನೆ ಕ್ಲಿನಿಕ್ ಮೇಲೆ ಗನ್ ಮ್ಯಾನ್ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ 3 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಈ ಘಟನೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿಯೂ ಸೇರಿದಂತೆ ಮೂವರು ಮೃತಪಟ್ಟಿದ್ದು ೧೧ ಜನ ಗಾಯಗೊಂಡಿದ್ದಾರೆ.ಸುಮಾರು 5 ಗಂಟೆಗಳ ಕಾರ್ಯಾಚರಣೆ ಬಳಿಕ ಗನ್ ಮ್ಯಾನ್ ಶರಣಾಗಿದ್ದಾನೆ ಈ ಗುಂಡಿನ ದಾಳಿಗೆ ನಿಖರ ಕಾರಣಗಳು ಇನ್ನೂ ತಿಳಿದುಬಂದಿಲ್ಲ, ಆದರೆ ‘ಗರ್ಭಪಾತ’ ವಿರೋಧಿ ಧಾರ್ಮಿಕ ವ್ಯಕ್ತಿಯೊಬ್ಬ ಕ್ಲಿನಿಕ್ ಮೇಲೆ ದಾಳಿ ನಡೆಸಿರುವ ಸಾಧ್ಯತೆ ಇದಾಗಿದೆ ಎಂದು ಊಹಿಸಲಾಗಿದೆ.ಬಂಧೂಕು ದಾಳಿಕೋರ ಮತ್ತು ಪೊಲೀಸರ ನಡುವೆ ನಡೆದ ದಾಳಿಯಲ್ಲಿ 5 ಮಂದಿ ಪೊಲೀಸ್ ಅಧಿಕಾರಿಗಳು, ನಾಲ್ವರು ನಾಗರಿಕರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮುಖ್ಯ ಅಧಿಕಾರಿ ಪೀಟರ್ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಪತಿಯ ದೈಹಿಕ ಹಾಗೂ ಮಾನಸಿಕ ಕಿರುಕುಳ ತಾಳಲಾರದೆ ಮಹಿಳೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಬಳಿಯ ಕೈರಂಗಳದ ದರ್ಖಾಸ್ ಗೌಸಿಯಾ ಕಂಪೌಂಡ್ ಸಮೀಪ ನಡೆದಿದ್ದು ಮಹಿಳೆಯ ಅನುಮಾನಾಸ್ಪದ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತವಾಗಿದೆ. ಶಾಜಿದಾ(21)ಆತ್ಮಹತ್ಯೆಗೆ ಶರಣಾದ ಮಹಿಳೆ. ಮೂರೂವರೆ ವರುಷದ ಹಿಂದೆ ಪರಂಗಿಪೇಟೆ ಮೂಲದ ಪ್ರಸ್ತುತ ಮುಡಿಪಿನಲ್ಲಿ ಆಟೋ ಡ್ರೈವರ್ ಆಗಿ ದುಡಿಯುತ್ತಿದ್ದ ಅಝರ್ ಎಂಬಾತನನ್ನು ಮದುವೆಯಾದ ಶಾಜಿದಾಗೆ ಮಹಮ್ಮದ್ ಹಪೀಝ್ (ಎರಡೂವರೆ ವರುಷ) ಹಾಗೂ ಅನಾಸ್(ಒಂದೂವರೆ ವರುಷ) ಎಂಬ ಇಬ್ಬರು ಮಕ್ಕಳಿದ್ದಾರೆ. ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿಗೆ ನಿತ್ಯವೂ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಲು ಆರಂಭಿಸಿದ್ದು ಪತಿ ಮಾದಕ ವ್ಯಸನಿ ಎಂಬ ಆರೋಪ ಇದೆ. ಹಾಗಾಗಿ ಆರು ತಿಂಗಳ ಹಿಂದೆ ಮಹಿಳೆ ತಾಯಿಯ ಮನೆ ಸಮೀಪದ ಇಸ್ಮಾಯಿಲ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಪತಿ ಅಝರ್ ಜೊತೆಗೆ ವಾಸವಿದ್ದ ಶಾಜಿದಾ ಅವರು ಗಂಡನನ್ನು ಅದೆಷ್ಟು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಜೀರು: ಪಜೀರು ಸಂತ ಮರ್ಸಿಯಮ್ಮನವರ ಚರ್ಚಿನಿಂದ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಇಬ್ಬರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಉಳ್ಳಾಲ ನಿವಾಸಿಗಳಾದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆನ್ನಲಾಗಿದೆ. ಐದು ಮಂದಿಯ ತಂಡ ಕೃತ್ಯದಲ್ಲಿ ಭಾಗಿಯಾಗಿದ್ದು, ವಶಕ್ಕೆ ಪಡೆದುಕೊಂಡಿರುವ ಇಬ್ಬರೂ ಕಳ್ಳರ ಜತೆಗೆ ಮೊಬೈಲಿನಲ್ಲಿ ಸಂಭಾಷಣೆ ನಡೆಸಿರುವ ಮಾಹಿತಿ ಆಧಾರದಲ್ಲಿ ಪತ್ತೆ ಹಚ್ಚಲಾಗಿದೆ. ಪ್ರಮುಖ ಆರೋಪಿಗಳು ಮಲಾರ್ ಮತ್ತು ಹರೇಕಳ ಮೂಲದವರೆಂದು ತಿಳಿದುಬಂದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಳೆದ ಸೋಮವಾರ ಮಧ್ಯರಾತ್ರಿ ಚರ್ಚ್‍ನ ಚಿಲಕವನ್ನು ಮುರಿದು ಒಳನುಗ್ಗಿದ ಕಳ್ಳರು ದೇವರ ಪೂಜಾ ಸಾಮಗ್ರಿ, ಲ್ಯಾಪ್‍ಟ್ಯಾಪ್ ಸಹಿತ ಕಳೆದ ದಶಂಬರ್ 15ರಂದು ಉದ್ಘಾಟನೆಗೊಂಡ ಪಜೀರಿನ ಸಂತ ಮೇರಿಯಮ್ಮನವರ ನೂತನ ಚರ್ಚ್ ಪೂರ್ವ ದಿಕ್ಕಿನ ದೊಡ್ಡ ಬಾಗಿಲಿನ ಮುರಿದು ಒಳನುಗ್ಗಿದ ಕಳ್ಳರು 25ಸಾವಿರ ರೂ. ಮೌಲ್ಯದ ಪರಮ ಪ್ರಸಾದ ಇಡುವ ಪೆಟ್ಟಿಗೆ(ಟ್ಯಾಬರ್‍ನೆಕಲ್), ಚರ್ಚ್ ಹೊರಗಡೆ ಹಾಗೂ ಒಳಗಡೆ ಇದ್ದ 18ಸಾವಿರ ರೂ. ಮೌಲ್ಯದ ಪರಮ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪ್ರತಿ ವರ್ಷದಂತೆ ನಡೆಯುವ ಕನ್ನಡ ನಾಡು – ನುಡಿಯ ನಾಲ್ಕು ದಿನಗಳ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ–2015′ ಗುರುವಾರ ಅದ್ದೂರಿ ಚಾಲನೆ ದೊರಕಿತು. ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್’ ವೇದಿಕೆಯಲ್ಲಿ ದೀಪ ಬೆಳಗಿಸಿ, ಭತ್ತದ ತೆನೆಗೆ ಹಾಲು ಹಾಕುವ ಮೂಲಕ ಸಾಹಿತಿ ಡಾ.ವೀಣಾ ಶಾಂತೇಶ್ವರ ಅವರು ಸಮ್ಮೇಳನಕ್ಕೆ ಚಾಲನೆ ನೀಡಿದರು. ಸಾಹಿತಿ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಕ್ರೀಡೆಯಿಂದ ಉತ್ತಮ ನಾಯಕತ್ವ ಗುಣ, ದೈಹಿಕ ದೃಢತೆ, ಆರೋಗ್ಯ, ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಲು ಖಂಡಿತಾ ಸಾಧ್ಯವಾಗುತ್ತದೆ. ಮಾತ್ರವಲ್ಲದೆ ಉತ್ತಮ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳುವಲ್ಲಿ ಕ್ರೀಡೆಯು ಪರಿಣಾಮಕಾರಿಯಾಗಿದೆ ಎಂದು ಅಂತರಾಷ್ಟ್ರೀಯ ಕ್ರೀಡಾಪಟು ಕೌಶಿಕ್ ಬೋಳೂರು ಅವರು ಅಭಿಪ್ರಾಯ ಪಟ್ಟರು. ಅವರು ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್‍ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ 18ನೇ ವಾರ್ಷಿಕ ಕ್ರೀಡಾಕೂಟವನ್ನು ಬುಧವಾರ ಮಂಗಳೂರು ವಿವಿಯ ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಇಂದು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೆ ಬಹಳಷ್ಟು ಅವಕಾಶಗಳಿದ್ದು ಇದರ ಸದುಪಯೋಗವಾಗಬೇಕಿದೆ. ವಿದ್ಯಾರ್ಥಿಗಳು ಪಠ್ಯದ ಜೊತಗೆ ಪಠ್ಯೇತರ ಚಟುವಟಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಶಿಕ್ಷಣ ಕ್ಷೇತ್ರದ ಸಾಧನೆಯ ಜೊತೆಗೆ ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು. ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಕ್ರೀಡಾ ಸಲಹೆಗಾರರಾದ ಡಾ.ಮುರಲೀ ಕೃಷ್ಣ ಅವರು ಮಾತನಾಡಿ ನಿಟ್ಟೆ ವಿಶ್ವವಿದ್ಯಾನಿಲಯವು ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಪ್ರೋತ್ಸಾಹ ನೀಡುತ್ತಿದ್ದು ವಿದ್ಯಾರ್ಥಿಗಳು ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು. ನಿಟ್ಟೆ ಇನ್‍ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ವಿಶ್ವವಿದ್ಯಾನಿಲಯಗಳು ಕೇವಲ ಶಿಕ್ಷಣ ಕೊಡುವ ಕ್ಷೇತ್ರಗಳಾಗದೆ, ದೇಶದ ಅಭಿವೃದ್ಧಿಗೆ ಶ್ರಮಿಸುವ ನಿಟ್ಟಿನಲ್ಲಿ ರಾಜ್ಯಗಳ ನಡುವೆ ವಿಭಿನ್ನತೆ ಸೃಷ್ಟಿಸದಂತೆ ಗ್ರಾಮೀಣ ಭಾಷೆ ಅಥವಾ ಆಡು ಭಾಷೆಗಳ ಬಗ್ಗೆ ಎಲ್ಲ ವಿವಿಗಳನ್ನೂ ಒಂದು ಪ್ರತ್ಯೇಕ ಪೀಠ ಅಥವಾ ಅಧ್ಯಯನ ವಿಭಾಗ ಸ್ಥಾಪಿಸುವುದರಿಂದ ಹೊರ ರಾಜ್ಯಗಳಿಂದ ಶಿಕ್ಷಣಕ್ಕೆ ಬರುವ ವಿದ್ಯಾರ್ಥಿಗಳಿಗೆ ತಾವು ಹೊರ ರಾಜ್ಯದವರಲ್ಲ ಎಂಬ ಭಾವನೆ ಮೂಡಿಸುವಂತೆ ಮಾಡಬೇಕಿದೆ ಎಂದು ಅಸ್ಸಾಂ ಹಾಗೂ ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಕೆ.ಎಸ್.ಹೆಗ್ಡೆ ಆಡಿಟೋರಿಯಂನಲ್ಲಿ ಗುರುವಾರ ನಡೆದ ಈಶಾನ್ಯ ರಾಜ್ಯ ಅಧ್ಯಯನ ಕೇಂದ್ರ `ನಮಸ್ತೆ’ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ವಿಶೇಷ ಉಪನ್ಯಾಸ ನೀಡಿದರು. ದೇಶ ಸುತ್ತಿದಲ್ಲಿ ಅರ್ಥೈಸಿಕೊಳ್ಳಬಹುದಾದ ಸತ್ಯವೇನೆಂದರೆ ಈಶಾನ್ಯ ರಾಜ್ಯಗಳ ಬುಡಕಟ್ಟು ಜನಾಂಗದ ಸಂಸ್ಕ ೃತಿ ಬಹಳ ಶ್ರೀಮಂತವಾಗಿದೆ. ಈಶಾನ್ಯ ರಾಜ್ಯಗಳಲ್ಲಿ ನೃತ್ಯವೆಂದರೆ ಕೇವಲ ಮಣಿಪುರ ಮಾತ್ರವಲ್ಲ. ನಾಗಾಲ್ಯಾಂಡ್‍ನಲ್ಲಿ 16 ಭಿನ್ನ ಸಂಸ್ಕ ೃತಿಯ ಜನಾಂಗಗಳಿವೆ. ದೇಶದ ಪ್ರತಿಯೊಂದು ಭಾಷೆಯೂ ಅವರನ್ನು…

Read More

ಚಂಡೀಗಢ್: ಅಸಹಿಷ್ಣುತೆ ಕುರಿತು ಬಾಲಿವುಡ್ ನಟ ಅಮಿರ್ ಖಾನ್ ಹೇಳಿಕೆ ವಿಚಾರದಲ್ಲಿ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ  ಅಮೀರ್ ಖಾನ್ ನನಗೆ ಮತ್ತು ನನ್ನ ಕುಟುಂಬಕ್ಕೆ ದೇಶ ತೊರೆಯುವ ಯಾವುದೇ ಉದ್ದೇಶ ಇಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂಬ  ಸ್ಪಷ್ಟನೆ ಈಗಾಗಲೇ ಕೊಟ್ಟಿದ್ದಾರೆ. ಆದರೆ ಖಾನ್  ಹೇಳಿಕೆ ವಿರುದ್ಧದ ಪ್ರತಿಭಟನೆ, ಆಕ್ರೋಶ ಮಾತ್ರ ಇನ್ನು ನಿಂತಿಲ್ಲ, ಇದರ ಬೆನ್ನಲ್ಲೇ ಶಿವಸೇನೆ ಇದೀಗ ಹೊಸದೊಂದು ಆಫರ್ ಕೊಟ್ಟಿದೆ. ಯಾರೇ ಆಗಲಿ ಅಮೀರ್ ಖಾನ್ ಕಪಾಳಕ್ಕೆ ಬಾರಿಸಿದ್ರೆ ಅವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ಕೊಡುವುದಾಗಿ ಶಿವಸೇನೆ ಪಂಜಾಬ್ ಘಟಕದ ಅಧ್ಯಕ್ಷ ರಾಜೀವ್ ಟಂಡನ್ ಘೋಷಿಸಿರುವುದಾಗಿ ಗುರುವಾರ ಮಾಧ್ಯಮದ ವರದಿ ತಿಳಿಸಿದೆ. ಬುಧವಾರ ಲೂಧಿಯಾನದ ಎಂಬಿಡಿ ರಾಡಿಸನ್ ಬ್ಲೂನ ಹೊರಭಾಗದಲ್ಲಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಮೀರ್ ಖಾನ್ ಮುಂಬರುವ ಸಿನಿಮಾ ಶೂಟಿಂಗ್ ಹಿನ್ನೆಲೆಯಲ್ಲಿ ರಾಡಿಸನ್ ಬ್ಲೂನಲ್ಲಿ ವಾಸ್ತವ್ ಹೂಡಿರುವುದನ್ನು ತಿಳಿದು ಶಿವಸೇನೆ ಪ್ರತಿಭಟನೆಗಿಳಿದಿತ್ತು. ಪ್ರತಿನಿತ್ಯ ದಿನಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಅಸಹಿಷ್ಣುತೆ ಕುರಿತ…

Read More

ನವದೆಹಲಿ: ಯಾವುದೇ ವಾಣಿಜ್ಯ ಉದ್ದೇಶಕ್ಕಾಗಿ ‘ದೇವರ ಹೆಸರು’, ಪವಿತ್ರಗ್ರಂಥಗಳ ಹೆಸರನ್ನು ಟ್ರೇಡ್‍ಮಾರ್ಕ್ ಆಗಿ ಬಳಸುವಂತಿಲ್ಲ ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಬಿಹಾರದ ಲಾಲ್‍ಬಾಬು ಪ್ರಿಯದರ್ಶಿ ಎಂಬ ಕಂಪನಿ ತನ್ನ ಅಗರಬತ್ತಿಗೆ `ರಾಮಾಯಣ’ ಎಂದು ಹೆಸರಿಟ್ಟುಕೊಳ್ಳಲು ಬೌದ್ಧಿಕ ಹಕ್ಕು ಮನವಿ ಮಂಡಳಿಯ ಮುಂದೆ ಕೋರಿಕೊಂಡಿತ್ತು. ಇದನ್ನು ಅಮೃತ್ ಪಾಲ್ ಸಿಂಗ್ ಎಂಬುವರು ವಿರೋಧಿಸಿದ್ದರು. ಮಂಡಳಿ ಬಿಹಾರ ಕಂಪನಿಗೆ ಈ ಟ್ರೇಡ್‍ಮಾರ್ಕ್ ನೀಡಲು ನಿರಾಕರಿಸಿತ್ತು. ನ್ಯಾ.ರಂಜನ್ ಗೋಗೋಯ್ ಹಾಗೂ ನ್ಯಾ.ಎನ್ .ವಿ.ರಾಮಣ್ಣ ಅವರನ್ನೊಳಗೊಂಡ ಪೀಠ ಪ್ರಿಯದರ್ಶಿ ಸಂಸ್ಥೆಯ ವಿರುದ್ಧ ತೀರ್ಪಿತ್ತಿದೆ. “ರಾಮಾಯಣ’ ಎಂಬುದು ಒಂದು ಧರ್ಮ ಗ್ರಂಥ. ಅದನ್ನು ವ್ಯಾಪಾರದ ಟ್ರೇಡ್ ಮಾರ್ಕ್ ರೀತಿ ಬಳಸುವುದು ವಾಣಿಜ್ಯ ವಹಿವಾಟು ಕಾಯಿದೆ ಪ್ರಕಾರ ಸರಿಯಲ್ಲ ಎಂದು ಪೀಠ 16 ಪುಟಗಳ ತೀರ್ಪಿನಲ್ಲಿ ಹೇಳಿದೆ. ಅಗರಬತ್ತಿ ಪೊಟ್ಟಣದ ಮೇಲೆ ಮುದ್ರಿಸಲಾಗಿರುವ ರಾಮ, ಲಕ್ಷ್ಮಣ, ಸೀತೆಯರ ಚಿತ್ರಕ್ಕೂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಪವಿತ್ರ ಗ್ರಂಥಗಳಾದ ಕುರಾನ್, ಬೈಬಲ್, ಗ್ರಂಥ ಸಾಹಿಬ್, ರಾಮಾಯಣ ಮುಂತಾದ ಗ್ರಂಥಗಳ ಹೆಸರನ್ನು…

Read More