ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು: ಇಲ್ಲಿನ ಬಬ್ಬುಕಟ್ಟೆಯ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಬ್ಬುಕಟ್ಟೆಯಲ್ಲಿ ದೈಹಿಕ ಶಿಕ್ಷಕನಾಗಿರುವ ಚೆಂಬುಗುಡ್ಡೆ ನಿವಾಸಿ ಡಾಲ್ಫಿ ಸಿಕ್ವೆರಾ ಎಂಬಾತ ಈ ಕೃತ್ಯ ಎಸಗಿದ್ದು, ಸುಮಾರು ನಾಲ್ಕು ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ. ಬುಧವಾರದಂದು ವಿದ್ಯಾರ್ಥಿಯೋರ್ವ ತನ್ನ ಹೆತ್ತವರಲ್ಲಿ ವಿಷಯ ಹೇಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸರಿಗೆ ಹೆತ್ತವರು ನೀಡಿದ ದೂರಿನಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಾಗಿದೆ.
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೋಟೆಕಾರು : ಕೋಟೆಕಾರು ಪಂಚಾಯಿತಿ ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೆ ಏರಿದ ನಂತರ ಅಧಿಕಾರಿಗಳೇ ಜನರ ಕೈಗೆ ಸಿಗುತ್ತಿಲ್ಲ, ಪಂ.ಸದಸ್ಯರ ಅಧಿಕಾರವನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಿರುವ ಜಿಲ್ಲಾಡಳಿತ ಕಳೆದ 8 ತಿಂಗಳಿನಿಂದ ಗ್ರಾಮದ ಜನರ ಸಮಸ್ಯೆಗಳಿಗೆ ಸ್ಪಂಧಿಸದೆ ಬೇಜವಾಬ್ದಾರಿ ಪ್ರದರ್ಶಿಸುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ಹೇಳಿದ್ದಾರೆ. ಅವರು ಸಿಪಿಐಎಂ ಉಳ್ಳಾಲ ಸಮಿತಿ ವತಿಯಿಂದ ಬುಧವಾರ ಜರಗಿದ ಕೋಟೆಕಾರು ಪಂ. ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಒತ್ತಾಯಕ್ಕೆ ಆಗ್ರಹಿಸಿ ಕೋಟೆಕಾರು ಪಟ್ಟಣ ಪಂಚಾಯತ್ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜಿಲ್ಲೆಯಲ್ಲೇ ಕೋಟೆಕಾರು ಪಂಚಾಯಿತಿ ಶ್ರೀಮಂತ ಪಂ. ಅನಿಸಿಕೊಂಡಿದೆ. ಕೋಟಿ ರೂ. ಹಣ ಸಂಗ್ರಹ ಆಗುತ್ತಿದ್ದರೂ ಗ್ರಾಮದ ಅಭಿವೃದ್ಧಿಗೆ ವಿನಿಯೋಗ ಆಗುತ್ತಿಲ್ಲ. ಸರಿಯಾದ ಡಾಮರೀಕರಣಗೊಳ್ಳದ ರಸ್ತೆಗಳು ಇಲ್ಲಿದ್ದರೂ, ಜನರಿಗೆ ಮಾತ್ರ ನಾಲ್ಕು ಪಟ್ಟು ತೆರಿಗೆ ಜಾಸ್ತಿಯಾಗಿದೆ. ಸ್ವಯಂ ಘೋಷಿತ ಆಸ್ತಿ ತೆರಿಗೆಯಂತಹ ಕಾನೂನಿನ ಮೂಲಕ ಜನರನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಹಿಂದೆ ಗ್ರಾಮದ ಜನರಿಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಸಮೀಪದ ಪಜೀರಿನಲ್ಲಿರುವ ಸಂತ ಮರ್ಸಿಯಮ್ಮನವರ ಇಗರ್ಜಿಗೆ ಸೋಮವಾರ ಮಧ್ಯರಾತ್ರಿ ವೇಳೆ ನುಗ್ಗಿರುವ ಕಳ್ಳರು ರೂ.77,000 ಬೆಲೆಬಾಳುವ ಸೊತ್ತುಗಳನ್ನು ಕಳವುಗೈದಿದ್ದಾರೆ. ಕೆಲ ತಿಂಗಳುಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಚರ್ಚಿನ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಪೂಜಾ ಸಾಮಾಗ್ರಿ ಸೇರಿದಂತೆ ಒಟ್ಟು ರೂ 77,000 ಬೆಲೆಬಾಳುವ ಸೊತ್ತುಗಳಿಗೆ ಕನ್ನ ಹಾಕಿದ್ದಾರೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಸೇವಾ ಮನೋಭಾವ ಇಲ್ಲದಿರುವ ಶಿಕ್ಷಣ ಪರಿಪೂರ್ಣವಾಗದು , ಈ ನಿಟ್ಟಿನಲ್ಲಿ ಶಿಕ್ಷಣದ ಜತೆಗೆ ಸಮಾಜಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯು ಇನ್ನಷ್ಟು ಪರಿಣಾಮಕಾರಿಯಾಗಲು ಯೋಜನಾಧಿಕಾರಿಗಳ ಕೂಡುವಿಕೆಯಿಂದ ಸಾಧ್ಯ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಪ್ರಾದೇಶಿಕ ನಿರ್ದೇಶಕ ಅರುಣ್ ಪೂಜಾರ ಹೇಳಿದ್ದಾರೆ. ಅವರು ನಿಟ್ಟೆ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಹಮ್ಮಿಕೊಂಡ ರಾಜ್ಯದ ವಿಶ್ವವಿದ್ಯಾನಿಲಯಗಳ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶ ಸೇವೆಯ ಬೀಜವನ್ನು ಬಿತ್ತಬೇಕು. ಈ ಮೂಲಕ ಯುವಮನಸ್ಸಿನಲ್ಲಿ ಸಮಾಜದ ಬಗೆಗಿನ ಕಾಳಜಿ ಮೂಡಲು ಸಾಧ್ಯ. ಕೇವಲ ಶಿಕ್ಷಣ ಪಡೆದಲ್ಲಿ ದೇಶವನ್ನು ಬಲಿಷ್ಠಗೊಳಿಸಲು ಅಸಾಧ್ಯ, ಸಮಾಜ ಕಾರ್ಯಗಳಲ್ಲಿ ಯುವಜನಾಂಗವನ್ನು ತೊಡಗಿಸುವ ಕಾರ್ಯ ಮುಂಚೂಣಿಯಿಂದ ಆಗಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ವಿ.ವಿ.ಯ ಉಪಕುಲಪತಿ ಡಾ.ಯಸ್ ರಮಾನಂದ ಶೆಟ್ಟಿ ಮಾತನಾಡಿ ಶಿಕ್ಷಣದ ವ್ಯವಸ್ಥೆ ದೇಶವನ್ನು ಬೆಳಗಿಸುವುದು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ರಾಜ್ಯದ ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಕಂಪೆನಿ ಮಾಲೀಕರ ಜತೆಗೆ ಶಾಮೀಲಾಗಿ ಅವರ ಹಿತಾಸಕ್ತಿಯನ್ನು ಕಾಪಾಡುವುದರಿಂದ ಕಾರ್ಮಿಕರು ವಂಚನೆಗೊಳಗಾಗುತ್ತಿದ್ದು, ಇಂತಹ ಸಚಿವರನ್ನು ಸಂಪುಟದಿಂದ ಕೂಡಲೇ ಕೈಬಿಡಬೇಕು ಎಂದು ಸಿಐಟಿಯುನ ಉಳ್ಳಾಲ ವಲಯದ ಪ್ರಧಾನ ಕಾರ್ಯದರ್ಶಿ ಯು.ಜಯಂತ್ ನಾಯ್ಕ್ ಹೇಳಿದ್ದಾರೆ. ರಾಜ್ಯ ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಅವರ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ತೊಕ್ಕೊಟ್ಟಿನ ನಾಡ ಕಛೇರಿ ಮುಂಭಾಗದಲ್ಲಿ ಸೋಮವಾರ ಸಿಐಟಿಯು ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಕಾರ್ಮಿಕ ಸಚಿವರು ಬೀಡಿ ಮಾಲೀಕರೊಂದಿಗೆ ಶಾಮೀಲಾಗಿ ಈ ಭಾರಿಯ ತುಟ್ಟಿ ಭತ್ಯೆ ಕಾರ್ಮಿಕರಿಗೆ ನೀಡದಂತೆ ತಡೆಹಿಡಿದಿದ್ದಾರೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿರುವ ಈ ದಿನಗಳಲ್ಲಿ ಕಾರ್ಮಿಕರಿಗೆ ವೇತನ ಏರಿಕೆಯಾಗದಿದ್ದಲ್ಲಿ ಅವರ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ ಎಂದು ಸರಕಾರವನ್ನು ಪ್ರಶ್ನಿಸಿದರು. ಸಿಐಟಿಯು ಮುಖಂಡ ಬಾಬು ಪಿಲಾರ್ ಮಾತನಾಡಿ ಸರಕಾರವು ಸಾರಿಗೆ ರಂಗದ ಕಾರ್ಮಿಕರ ಕಾನೂನುಬಧ್ಧ ಹಕ್ಕುಗಳನ್ನು ಹತ್ತಿಕ್ಕಲು ಎಸ್ಮಾ ಕಾಯಿದೆಯನ್ನು ಜನತೆಯ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಮೂಡಬಿದ್ರೆಯ ಆಳ್ವಾಸ್ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರ 100ಮೀ. ಓಟದಲ್ಲಿ ಪೆರ್ಮನ್ನೂರಿನ ಅನುದಾನಿತ ಹೋಲಿ ಏಂಜಲ್ಸ್ ಹಿ.ಪ್ರಾ.ಶಾಲೆಯ ಫಾತಿಮಾ ಫರ್ಹಾನ ಇವರು ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬೆಂಗಳೂರಿನ ಹೊಸಕೋಟೆಯಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರು ತೊಕ್ಕೊಟ್ಟಿನ ದಿ. ಆಯೂಬ್ ಸುಲೈಮಾನ್ ಹಾಗೂ ಜಮೀಲಾ ಮಗಳಾಗಿರುತ್ತಾರೆ. ಇವರನ್ನು ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಎಲೋಶಿಯಸ್ ತರಬೇತಿ ನೀಡಿರುತ್ತಾರೆ. 14ರ ವಯೋಮಿತಿಯ ಬಾಲಕರ ಎತ್ತರ ಜಿಗಿತದಲ್ಲಿ ಪೆರ್ಮನ್ನೂರಿನ ಅನುದಾನಿತ ಹೋಲಿ ಏಂಜಲ್ಸ್ ಹಿ.ಪ್ರಾ.ಶಾಲೆಯ ಅಝ್ಮಾನ್ ಇವರು ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬೆಂಗಳೂರಿನ ಹೊಸಕೋಟೆಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರು ಕಟೀಲಿನ ದಿ| ಅಬ್ದುಲ್ಲಾ ಹಾಗೂ ಆಯಿಷಾ ಇವರ ಮಗನಾಗಿರುತ್ತಾರೆ. ಇವರನ್ನು ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಎಲೋಶಿಯಸ್ ತರಬೇತಿ ನೀಡಿರುತ್ತಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಉಳ್ಳಾಲದಲ್ಲಿ ದುಷ್ಕರ್ಮಿಗಳ ಹಾವಳಿ ಮುಂದುವರೆದಿದ್ದು ತೊಕ್ಕೊಟ್ಟು ಟಿ.ಸಿ.ರೋಡ್ ಬಳಿಯ ಕೊರಗಜ್ಜ ಸೇವಾ ಸಮಿತಿಯ ಕಟ್ಟಡದ ಕಿಟಕಿಗೆ ಬೈಕ್ನಲ್ಲಿ ಬಂದ ಆಗಂತುಕರಿಬ್ಬರು ಕಲ್ಲೆಸೆದು ಕಿಟಕಿಯ ಗಾಜನ್ನು ಹಾನಿಗೈದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಘಟನೆ ಖಂಡಿಸಿ ಸ್ಥಳೀಯ ಹಿಂದು ಮತ್ತು ಮುಸ್ಲಿಂ ಮುಖಂಡರುಗಳು ಸೇರಿಕೊಂಡು ದುಷ್ಕರ್ಮಿಗಳಿಗೆ ಅಜ್ಜನೇ ಶಿಕ್ಷೆ ನೀಡಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ ಹರಕೆ ಇಟ್ಟ ಪ್ರಸಂಗವೂ ಇಲ್ಲಿ ಜರಗಿತು. ತೊಕ್ಕೊಟ್ಟು ಒಳಪೇಟೆಯಲ್ಲಿ ತುಳಸೀ ಹಬ್ಬದ ಪ್ರಯುಕ್ತ ನಿನ್ನೆ ರಾತ್ರಿ ಜನನಿಬಿಡ ವಾತಾವರಣ ಇತ್ತು. ಅದರ ನಡುವೆಯೂ ಬೈಕಿನಲ್ಲಿ ಬಂದ ಆಗಂತುಕರಿಬ್ಬರು ಟಿ.ಸಿ.ರೋಡ್ ಬಳಿಯಿರುವ ಕೊರಗಜ್ಜ ಸೇವಾ ಸಮಿತಿಯ ಕಟ್ಟಡದ ಕಿಟಕಿಗೆ ಕಲ್ಲೆಸೆದು ಹಾನಿಗೊಳಿಸಿ ಪರಾರಿಯಾದರು. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿ, ಜನ ಜಮಾಯಿಸಲು ಆರಂಭಿಸಿದರು. ಕೂಡಲೇ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಜನರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡರು. ವಿಷಯ ತಿಳಿದು ಎರಡು ಕೋಮಿನ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ತೊಕ್ಕೊಟ್ಟು ಜಂಕ್ಷನ್ನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿ66 ಸುಮಾರು ಮೂರು ಗಂಟೆಗಳ ಕಾಲ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಕೇರಳ ಕಡೆ ಸಂಚರಿಸುತ್ತಿದ್ದ ಲಾರಿ ತೊಕ್ಕೊಟ್ಟು ಜಂಕ್ಷನ್ನಲ್ಲಿ ಕೆಟ್ಟು ನಿಂತಿದ್ದು, ತೊಕ್ಕೊಟ್ಟಿನಿಂದ ಪಂಪ್ವೆಲ್ವರೆಗೆ ವಾಹನಗಳು ಸರತಿಯಲ್ಲಿ ನಿಂತರೆ, ಇನ್ನೊಂದೆಡೆ ತೊಕ್ಕೊಟ್ಟಿನಿಂದ ಕೊಲ್ಯದವರೆಗೆ ವಾಹನಗಳು ಸರತಿಯಲ್ಲಿ ಕಂಡು ಬಂತು.ತೊಕ್ಕೊಟ್ಟು ಬಸ್ ನಿಲ್ದಾಣಗಳಲ್ಲಿ ಬಸ್ ಸರಿಯಾದ ಸಮಯಕ್ಕೆ ಸಿಗದ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ಸಂಚಾರ ಅಸ್ತವ್ಯಸ್ತದಿಂದ ಆ್ಯಂಬುಲೆನ್ಸ್ಗಳು ಪರದಾಡುವಂತಾಯಿತು. ತೊಕ್ಕೊಟ್ಟು ಜಂಕ್ಷನ್ನಲ್ಲಿ ಫ್ಲೈಓವರ್ ಕಾಮಗಾರಿ ನಡೆಯುತ್ತಿರವುದು ಸಂಚಾರ ಅಸ್ತವ್ಯಸ್ತಕ್ಕೆ ಕಾರಣವಾಗುತ್ತಿದ್ದು, ಸೋಮವಾರ ಹಬ್ಬದ ನಿಮಿತ್ತ ಸಂಚಾರ ದಟ್ಟಣೆಯಿಂದಲೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಕ್ಕೆ ಕಾರಣವಾಯಿತು.
ಲೇಖನ: ವಜ್ರಾ ಗುಜರನ್ ಮಾಡೂರು ಚಿತ್ರ: ಕೂಲ್ ಡಿಸೈನರ್ಸ್ ಫೋಟೋಗ್ರಾಫಿ(ಮುನ್ನ ಕೂಲ್) ಸಾಲು ಸಾಲು ದೀಪಗಳ ಜೊತೆಗೆ ಬಾಂಧವ್ಯವನ್ನು ವೃದ್ಧಿಸುವ ದೀಪಾವಳಿ ಹಬ್ಬ ಮುಗಿದು ವಾರ ಕಳೆಯುವುದರೊಳಗಾಗಿ ಅದೇ ಹಬ್ಬವನ್ನು ನೆನಪು ಮಾಡುವ ಕಿರು ದೀಪಾವಳಿ ಮತ್ತೆ ಬಂದಿದೆ. ಅದೇ ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ತುಳಸಿ ಪೂಜೆ. ಎಲ್ಲ ಹಬ್ಬದಷ್ಟೇ ಪ್ರಾಮುಖ್ಯತೆಯನ್ನು ಪಡೆದಿರುವ ಈ ಹಬ್ಬವನ್ನು ಹಿಂದು ಸಂಪ್ರದಾಯದಂತೆ ಪ್ರತೀವರ್ಷ ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತದೆ. ಪವಿತ್ರವಾದ ತುಳಸಿಯನ್ನು ಪೂಜಿಸುವುದು ಈ ದಿನದ ವಿಶೇಷತೆಗಳಲ್ಲಿ ಒಂದಾಗಿದೆ. ಭಗವಂತನನ್ನು ಬರಮಾಡಿಕೊಳ್ಳುವುದು : ಕಾರ್ತಿಕ ಮಾಸದ ಹಬ್ಬಗಳಲ್ಲಿ ಅತ್ಯಂತ ಪವಿತ್ರವಾದುದು ಉತ್ಥಾನ ದ್ವಾದಶಿ. ಉತ್ಥಾನ ಎಂದರೆ ಏಳುವುದು ಎಂದರ್ಥ. ಅಂದರೆ ಈ ದಿನದಂದು ಭಗವಂತನಾದ ನಾರಾಯಣನು ಹಾಲ್ಗಡಲಲ್ಲಿ ಸುಖಶಯನದಿಂದ ಮೇಲಕ್ಕೆದ್ದು, ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ಈ ದಿನವನ್ನು ಕ್ಷೀರಾಭಿವ್ರತದಿಂದ ಹಲವು ಕಡೆ ಆಚರಿಸುವರು. ಆದುದರಿಂದ ಈ ದಿನದಂದು ತುಳಸಿ ಕಟ್ಟೆಯ ಸುತ್ತಲೂ ರಂಗೋಲಿಯಿಂದ ಅಲಂಕರಿಸಿ ತಳಿರು ತೋರಣಗಳನ್ನು ಕಟ್ಟಿ ತುಳಸಿಯನ್ನು ಸಿಂಗರಿಸಿ ಭಗವಂತನನ್ನು ಬರಮಾಡಿಕೊಳ್ಳುವುದು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚೆಂಬುಗುಡ್ಡೆ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಮಕ್ಕಳ ದಿನಾಚರಣೆಗಳು ಪೂರಕ, ಸಿಗವ ಅವಕಾಶವನ್ನು ಮಕ್ಕಳು ಉಪಯೋಗಿಸುವ ಮೂಲಕ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಉಳ್ಳಾಲ ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಸುಹಾಸಿನಿ ಬಬ್ಬುಕಟ್ಟೆ ಅಭಿಪ್ರಾಯಪಟ್ಟರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚೆಂಬುಗುಡ್ಡೆಯ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಲಾದ ಮಕ್ಕಳ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಮಕ್ಕಳಲ್ಲಿ ಹಿಂಜರಿಕೆಗಳು ಹೆಚ್ಚಾಗಿ ಇರುತ್ತದೆ. ಇದರಿಂದ ಅವರಲ್ಲಿರುವ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುವುದಿಲ್ಲ. ಹೆತ್ತವರು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ತುಂಬುವ ಮೂಲಕ ಸಿಗುವ ಅವಕಾಶವನ್ನು ಉಪಯೋಗಿಸುವಂತಹ ಧೈರ್ಯವನ್ನು ತುಂಬಬೇಕು ಎಂದರು. ಉಳ್ಳಾಲ ಪುರಸಭೆ ಮಾಜಿ ಅಧ್ಯಕ್ಷ ಬಾಝಿಲ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಚೆಂಬುಗುಡ್ಡೆ ಮಹಾಂಕಾಳಿ ದೈವಸ್ಥಾನದ ಆಡಳಿತ ಮೊಕ್ತೇಸರ ಸೋಮಯ್ಯ ಕುಮಾರ್, ಚೆಂಬುಗುಡ್ಡೆ ದಲಿತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಸುಂದರ್.ಯಸ್, ಹಿರಿಯ ನಾಗರಿಕೆ ಶಶಿಕಲಾ, ಶ್ರೀ ಕೃಷ್ಣ ಭಜನಾ ಮಂದಿರದ ಮಾಜಿ ಅಧ್ಯಕ್ಷ…

