Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ಡೆಸ್ಕ್ ಬೋಳಿಯಾರ್: ಬೋಳಿಯಾರ್ ಗ್ರಾಮದ ಜಳಕದಕಟ್ಟೆ ಎಂಬಲ್ಲಿ ಕೂಲಿ ಕಾರ್ಮಿಕ ಮಹಿಳೆಯೋರ್ವರು ಇಬ್ಬರು ಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಕುರುವಿನಕೊಪ್ಪ ಸೌಂದತ್ತಿ ನಿವಾಸಿ ಅಶೋಕ್ ಮೊರಬದ ಎಂಬವರ ಪತ್ನಿ ಅನ್ನಪೂರ್ಣ(29) ಆಕೆಯ ಮಕ್ಕಳಾದ ಪರಶುರಾಮ (9) ಹಾಗೂ ತಾರಾ (10) ಆತ್ಮಹತ್ಯೆಗೆ ಶರಣಾದವರು. ಮೂರು ವಾರಗಳ ತನ್ನ ಪ್ರಿಯಕರ ಅಶೋಕ್ ಎಂಬಾತನ ಜೊತೆ ಬೋಳಿಯಾರ್‍ಗೆ ಬಂದಿದ್ದ ಅವರು ಜಾರದಗುಡ್ಡ ಎಂಬಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ಮಹಿಳೆ ಮಕ್ಕಳ ಜೊತೆ ಜಳಕದಕಟ್ಟೆ ನದಿಬಳಿ ಬಂದಿರುವುದನ್ನು ಸ್ಥಳೀಯರು ನೋಡಿದ್ದಾರೆ. ಶನಿವಾರ ಬೆಳಗ್ಗೆ ಮೂವರ ಮೃತದೇಹ ಪತ್ತೆಯಾಗಿದ್ದು, ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಗನ ಕಾಲನ್ನು ಮತ್ತು ಮಗಳ ಸೊಂಟಕ್ಕೆ ಶಾಲಿನಿಂದ ತನ್ನ ಸೊಂಟಕ್ಕೆ ಕಟ್ಟಿ ನದಿಗೆ ಹಾರಿದ್ದು ಕಂಡು ಬಂದಿದೆ. ಇದರಿಂದಾಗಿ ಮೂವರು ಮೃತದೇಹವೂ ಒಂದೇ ಕಡೆ ಜೊತೆಯಾಗಿಯೇ ಪತ್ತೆಯಾಗಿದೆ. ಘಟನೆ ಹಿನ್ನೆಲೆಯಲ್ಲಿ ಪ್ರಿಯಕರ ಅಶೋಕ್‍ನನ್ನು ಕೊಣಾಜೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಸೋಮೇಶ್ವರ ಸಮುದ್ರಕ್ಕೆ ಹಾರಿ 20-25ರೊಳಗಿನ ಯುವಕನೋರ್ವ ಆತ್ಮಹತ್ಯೆಗೈದಿರುವ ಘಟನೆ ನಡೆದಿದ್ದು, ಮಧ್ಯಾಹ್ನ ವೇಳೆ ಮೃತದೇಹವನ್ನು ಸ್ಥಳೀಯ ಈಜುಗಾರರು ನೀರಿನಿಂದ ಹೊರತೆಗೆದಿದ್ದಾರೆ. ಅಪರಿಚಿತನಾಗಿರುವ ಈತ ನೀಲಿ ಬಣ್ಣದ ಟೀಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟನ್ನು ಧರಿಸಿದ್ದು, ಸುಮಾರು 20-25ರೊಳಗಿನ ವಯಸ್ಸಿನವನಾಗಿದ್ದಾನೆಂದು ತಿಳಿದುಬಂದಿದೆ. ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿದ ಈತನನ್ನು ಸ್ಥಳೀಯ ಈಜುಗಾರರಾದ ಅಶೋಕ್ ಮತ್ತು ಮೋಹನ್ ಎಂಬವರು ರಕ್ಷಿಸಲು ಯತ್ನಿಸಿದರಾದರೂ ನೀರಿನ ರಭಸಕ್ಕೆ ಅದು ಸಾಧ್ಯವಾಗಲಿಲ್ಲ. ಬಳಿಕ ಒಂದು ಗಂಟೆಯ ಕಾಲ ಹುಡುಕಾಡಿದ ನಂತರ ಮೃತದೇಹ ಪತ್ತೆಯಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಉಳ್ಳಾಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದಿದ್ದಾರೆಂದು ತಿಳಿದುಬಂದಿದೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಂಗಳೂರಿನಿಂದ ಸೋಮೇಶ್ವರ ಕಡೆಗೆ ಹೋಗುತ್ತಿದ್ದ ಬಸ್ ಗೆ ಮುಕ್ಕಚ್ಚೇರಿ ಸಮೀಪ ದುಷ್ಕರ್ಮಿಗಳು ಕಲ್ಲೆಸೆದು ಗಾಜು ಪುಡಿಗೈದಿರುವ ಘಟನೆ ಇಂದು ನಡೆದಿದೆ. ಕರಾವಳಿ ಟ್ರಾವೆಲ್ಸ್ ಬಸ್ಸಿನ ಎಡಬದಿಯ ಗಾಜಿಗೆ ಕಲ್ಲೆಸೆದು ಹಾನಿಗೊಳಿಸಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಕ ವಿಜಯ್ ಎಂಬವರು ಸ್ವಲ್ಪ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಇಕ್ಬಾಲ್ ಎಂಬವರ ಮೇಲೆ ನಾಲ್ವರು ದುಷ್ಕರ್ಮಿಗಳ ತಂಡ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಳ್ಳಾಲದಲ್ಲಿ ಗಲಭೆ ನಡೆಸುವ ಹುನ್ನಾರದಿಂದ ಕಿಡಿಗೇಡಿಗಳು ಇಂತಹ ಕೃತ್ಯ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.

Read More

ಪ್ಯಾರೀಸ್: ಪ್ರಾನ್ಸ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಇವರ ದಾಳಿಗೆ ಸುಮಾರು 153ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಪ್ಯಾರೀಸ್ ನ ಕನ್ಸರ್ಟ್ ಸಭಾಂಗಣಕ್ಕೆ ನುಗ್ಗಿದ್ದ ಉಗ್ರರು ಸರಣಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 153ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐಎಸ್ ಉಗ್ರರು ಈ ದಾಳಿಯ ಹೊಣೆ ಹೊತ್ತಿದ್ದಾರೆ. ದಾಳಿ ನಡೆಸಿದ 15 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪ್ಯಾರೀಸ್ ಪೊಲೀಸರು ತಿಳಿಸಿದ್ದಾರೆ. ಉಗ್ರರು ಅಟ್ಟಹಾಸಕ್ಕೆ ಅಮಾಯಕರು ಬಲಿಯಾಗಿರುವ ಬಗ್ಗೆ ಜಗತ್ತಿನೆಲ್ಲೆಡೆ ವ್ಯಾಪಕ ಖಂಡಣೆ ವ್ಯಕ್ತವಾಗಿದೆ.

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ: ಕಾಪಿಕಾಡಿನ ಪೂಜಾ ಕಾಂಪ್ಲೆಕ್ಸ್ ನಲ್ಲಿ ನಡೆಯುತ್ತಿದ್ದ ಮದುವೆ ನಿಶ್ಚಿತಾರ್ಥ ಸಮಾರಂಭವನ್ನು ನಿಲ್ಲಿಸಲು ಮುಂದಾದ ಉಳ್ಳಾಲ ಪೊಲೀಸರನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಡೆದು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡು ನಿಶ್ಚಿತಾರ್ಥ ಕಾರ್ಯಕ್ರಮವನ್ನು ಮುಂದುವರಿಸಿದ ಘಟನೆ ನಡೆಯಿತು. ಮಾಡೂರು ನಿವಾಸಿ ಯುವಕನ ನಿಶ್ಚಿತಾರ್ಥ ಸಮಾರಂಭ ಕಾಪಿಕಾಡಿನ ಪೂಜಾ ಕಾಂಪ್ಲೆಕ್ಸ್‍ನಲ್ಲಿ ಆಯೋಜಿಸಲಾಗಿತ್ತು. ರಸ್ತೆಬದಿಯಲ್ಲಿ ಜನ ಸೇರಿರುವುದನ್ನು ಕಂಡು ಉಳ್ಳಾಲ ಪೊಲೀಸರು ನಿಶ್ಚಿತಾರ್ಥ ಸಭಾಂಗಣದ ಹೊರಗೆ ಜಮಾಯಿಸಿ, ಕಾರ್ಯಕ್ರಮವನ್ನು ಮುಂದೂಡಲು ಒತ್ತಡ ಹೇರಿದ್ದರೆನ್ನಲಾಗಿದೆ. ಇದನ್ನು ಗಮನಿಸಿದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈಶ್ವರ್ ಉಳ್ಳಾಲ್ ಅವರು ಪೊಲೀಸರ್ನು ತರಾಟೆಗೆ ತೆಗೆದುಕೊಂಡು, ಬಂದ್ ಗೆ ಪೊಲೀಸರೇ ಪ್ರಚೋದಿಸಿದಂತಾಗಿದೆ. ಗಲಭೆ ಪೊಲೀಸರಿಂದಲೇ ಸೃಷ್ಟಿಯಾಗುತ್ತಿದೆ ಎಂದು ಆರೋಪಿಸಿ ಉಳ್ಳಾಲ ಠಾಣಾಧಿಕಾರಿ ಸವಿತೃ ತೇಜ ಅವರಿಗೆ ಕರೆ ಮಾಡಿ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಅಡ್ಡಿಪಡಿಸದಂತೆ ಒತ್ತಡ ಹೇರಿದ್ದರೆನ್ನಲಾಗಿದೆ. ಆ ಬಳಿಕ ನಿಶ್ಚಿತಾರ್ಥ ಸಮಾರಂಭ ಸುಸೂತ್ರವಾಗಿ ನಡೆಯಿತೆನ್ನಲಾಗಿದೆ.

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ: ಟಿಪ್ಪು ಸುಲ್ತಾನ್ ಜಯಂತಿ ವಿಚಾರ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಭುಗಿಲೆದ್ದ ಗಲಭೆಗೆ ಸಂಬಂಧಿಸಿ ಬಂಟ್ವಾಳದಲ್ಲಿ ಹತ್ಯೆಗೀಡಾದ ಹರೀಶ್ ಹತ್ಯೆಯನ್ನು ಖಂಡಿಸಿ ಹಿಂದು ಸಂಘಟನೆಗಳು ಕರೆ ನೀಡಿದ ಬಂದ್ ಹಿನ್ನೆಲೆಯಲ್ಲಿ ಅಲ್ಲಲ್ಲಿ ಗಲಭೆಗೆ ಪ್ರಚೋದಿಸುವ ಕೃತ್ಯ ನಡೆದಿದ್ದು, ಮುಡಿಪು ಸಮೀಪ ಎರಡು ಬಸ್ಸುಗಳಿಗೆ ಕಲ್ಲು ತೂರಾಟ, ಕುತ್ತಾರು ಸಮೀಪ ಅಳವಡಿಸಲಾದ ಬ್ಯಾನರುಗಳಿಗೆ ಹಾನಿ ಮಾಡಲಾಗಿದ್ದು, ಅಂಗಡಿ ಮುಗ್ಗಟ್ಟುಗಳು ಸಂಪೂರ್ಣ ಬಂದ್ ಆಗಿ ಬಿಗಿ ಬಂದೋಬಸ್ತ್ ಮುಂದುವರಿದಿದೆ. ಮುಡಿಪು ಜಂಕ್ಷನ್ನಿನಲ್ಲಿ ನಿಲ್ಲಿಸಲಾಗಿದ್ದ ಎರಡು ಖಾಸಗಿ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿರುವ ದುಷ್ಕರ್ಮಿಗಳು ಗಾಜು ಪುಡಿಗೈದು ಹಾನಿಗೊಳಿಸಿದ್ದಾರೆ. ಕುತ್ತಾರು ಜಂಕ್ಷನ್ನಿನಲ್ಲಿ ಟಿಪ್ಪು ಜಯಂತಿಗೆ ಶುಭಹಾರೈಸಿ ಹಾಕಲಾದ ಬ್ಯಾನರುಗಳನ್ನು ಬ್ಲೇಡಿನಿಂದ ಹರಿದು ಹಾನಿಗೊಳಿಸಲಾಗಿದೆ. ಮಾಡೂರು ಸಮೀಪ ರಸ್ತೆಯಲ್ಲಿ ಟಯರ್ ಗಳನ್ನು ಸುಟ್ಟು ಹಾಕಲಾಗಿದೆ. ಮೆಡಿಕಲ್ ಅಂಗಡಿ- ಪೇಪರ್ ಸ್ಟಾಲ್ ಮುಚ್ಚಿದಕ್ಕೆ ವಿರೋಧ: ತೊಕ್ಕೊಟ್ಟುವಿನಲ್ಲಿ ಮೆಡಿಕಲ್ ಅಂಗಡಿಗಳನ್ನು ಮತ್ತು ಪೇಪರ್ ಸ್ಟಾಲನ್ನು ಮುಚ್ಚಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿರೋಧಿಸಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿರುವ…

Read More

ಬೆಂಗಳೂರು: ಯುವತಿಯೊಬ್ಬಳ ಮೇಲೆ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಟೆನ್ನಿಸ್ ಸ್ಟೇಡಿಯಂ ಕಡೆ ನಡೆದು ಬರುತ್ತಿದ್ದ ಯುವತಿಯ ಮೇಲೆ ನಾಲ್ವರು ಕಾಮುಕರು ಸೇರಿ ಗ್ಯಾಂಗ್‍ರೇಪ್ ನಡೆಸಿದ್ದಾರೆ. ತೋಟಗಾರಿಕೆ ಇಲಾಖೆಯ ಇಬ್ಬರು ಸಿಬ್ಬಂದಿ ಸೇರಿ ನಾಲ್ವರು ಅತ್ಯಾಚಾರ ಎಸಗಿರುವುದಾಗಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಯುವತಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಯುವತಿ ನೀಡಿದ ದೂರಿನ ಆಧಾರದ ಮೇರೆಗೆ ಇಬ್ಬರು ಕಾಮುಕ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮತ್ತಿಬ್ಬರು ಪರಾರಿಯಾಗಿದ್ದು ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದೇವೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

Read More

ಬೆಂಗಳೂರು: ಖ್ಯಾತ ಹಿರಿಯ ಸಾಹಿತಿ ಜ್ಷಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. `ಕೆಂಪೇಗೌಡರ ವಿಚಾರದಲ್ಲಿ ಕನ್ನಡಿಗರ ಸ್ವಾಭಿಮಾನ ಕೆಣಕಿದರೆ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿದ ರೀತಿಯಲ್ಲಿ ನಿಮ್ಮನ್ನು ಹತ್ಯೆ ಮಾಡಲಾಗುತ್ತದೆ’ ಎಂಬ ಬೆದರಿಕೆಯ ಸಂದೇಶವನ್ನು ‘ಇನ್‍ಟಾಲರಂಟ್ ಚಂದ್ರ’ ಹೆಸರಿನ ನಕಲಿ ಟ್ವಿಟರ್ ಖಾತೆಯಿಂದ ಟ್ವಿಟ್ ಮಾಡಲಾಗಿದೆ. ಗಿರೀಶ್ ಕಾರ್ನಾಡ್ ಅವರು ಕೆಂಪೇಗೌಡರು ಸ್ವಾತಂತ್ರ ಸೇನಾನಿ ಅಲ್ಲ, ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅವರ ಈ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ತಮ್ಮ ಹೇಳಿಕೆಗೆ ಕಾರ್ನಾಡ್ ಕ್ಷಮೆಯಾಚಿಸಿದ್ದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು : ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರ ತೊಕ್ಕೊಟ್ಟು ಒಳಪೇಟೆ ಇದರ 27ನೇ ಸ್ಥಾನೀಯ ಸಮಿತಿಯ ಪದಾಧಿಕಾರಿಗಳ ಆಯ್ಕೆ ತೊಕ್ಕೊಟ್ಟು ಒಳಪೇಟೆ ಸುವರ್ಣ ಕಾಂಪ್ಲೆಕ್ಸ್‍ನಲ್ಲಿ ಇತ್ತೀಚೆಗೆ ನಡೆಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಶರತ್ ತೊಕ್ಕೊಟ್ಟು ಹಾಗೂ ಉಪಾಧ್ಯಕ್ಷರಾಗಿ ದೀಪಕ್ ವಾಸುಕೀನಗರ ಮತ್ತು ಕುಮಾರಿ ಉಷಾರಾಣಿ, ಪ್ರ.ಕಾರ್ಯದರ್ಶಿಯಾಗಿ ಪ್ರವೀಣ್ ತೊಕ್ಕೊಟ್ಟು ಹಾಗೂ ಜೊತೆ ಕಾರ್ಯದರ್ಶಿಯಾಗಿ ಉಮೇಶ್ ತೊಕ್ಕೊಟ್ಟು ಮತ್ತು ಹರಿಶ್ಚಂದ್ರ ತೊಕ್ಕೊಟ್ಟು ಆಯ್ಕೆಯಾದರು. ಉಳ್ಳಾಲ ಗ್ರಾಮದ ಅಧ್ಯಕ್ಷ ಗಣೇಶ್ ಕಾಪಿಕಾಡ್, ಕ್ಷೇತ್ರ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಕ್ಷೇತ್ರ ಉಸ್ತುವಾರಿಗಳಾದ ರಾಘವ ಉಚ್ಚಿಲ್, ಮೋಹನ್ ರಾಜ್ ಕನೀರ್ ತೋಟ, ಕೌನ್ಸಿಲರ್ ಶಶಿಕಲಾ ಎ ಶೆಟ್ಟಿ, ಕುಮಾರಿ ಗೀತಾ ಬ್ಯಾ, ಯೋಗೀಶ್ ಹಾಗೂ ಗ್ರಾಮ ಕಾರ್ಯದರ್ಶಿ ಆನಂದ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಾವೂರು: ಅಕ್ರಮ, ಅವ್ಯಾಹತ ಮರಳುಗಾರಿಕೆ ವಿರುದ್ಧ ಪಾವೂರು ಗ್ರಾಮಸ್ಥರು ನಡೆಸುತ್ತಿದ್ದ ಹೋರಾಟ ಪರಿಗಣಿಸಿ ಗ್ರಾಮ ಪಂಚಾಯಿತಿ ಮರಳುಗಾರಿಕೆಗೆ ನಿಷೇಧ ಹೇರಿ ಎಚ್ಚರಿಕೆ ಫಲಕ ಅಳವಡಿಸಿದ್ದು ಇದೇ ಸಂದರ್ಭ ಮರಳು ಮಾಲೀಕರು ನದಿಯಲ್ಲಿ ಗುರುತಿಗಾಗಿ ಅಳವಡಿಸಿದ್ದ ಕಂಬಗಳನ್ನು ಗ್ರಾಮಸ್ಥರು ಕಿತ್ತೆಸಿದಿದ್ದಾರೆ. ಕಳೆದ ಹಲವು ವರ್ಷಗಳಿಂದ ಪಾವೂರು ಗ್ರಾಮ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆಯೇ ಇನೋಳಿ ನಾಟ್ರಕೋಡಿ, ಪಾವೂರು ಗಾಡಿಗದ್ದೆ ಮತ್ತು ಉಳಿಯದಲ್ಲಿ ಅವ್ಯಾವಹತವಾಗಿ ಮರಳುಗಾರಿಕೆ ನಡೆಯುತ್ತಿತ್ತು. ಇದರ ಪರಿಣಾಮವಾಗಿ ಸ್ಥಳೀಯ ಪ್ರದೇಶದಲ್ಲಿ ಉಪ್ಪು ನೀರು ಬಂದಿದ್ದು ಪಂಚಾಯಿತಿಯ ತೆರೆದ ಬಾವಿ ಮತ್ತು ಕೃಷಿ ಪ್ರದೇಶಕ್ಕೂ ಉಪ್ಪು ನೀರು ಬಂತು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದರು. ಇನ್ನೊಂದೆಡೆ ಉಳಿಯ ಎನ್ನುವ ದ್ವೀಪವೇ ಅಪಾಯಕ್ಕೆ ಸಿಲುಕಿತ್ತು. ಇದರ ವಿರುದ್ಧ ಗ್ರಾಮಸ್ಥರು ಹೋರಾಟ ನಡೆಸಿದ್ದು ಪಾವೂರು ಗ್ರಾಮ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ನಿಷೇಧ ಹೇರಿದ್ದ ಜಿಲ್ಲಾಡಳಿತ ಪಂಚಾಯಿತಿಗೆ ಸಂಪೂರ್ಣ ಅಧಿಕಾರ ನೀಡಿತ್ತು. ಅಕ್ರಮ ಮರಳುಗಾರಿಕೆಯಿಂದ ಆಗುತ್ತಿದ್ದ ಅನಾಹುತದ ಬಗ್ಗೆ ವಿಜಯವಾಣಿ ಪತ್ರಿಕೆಯಲ್ಲಿ ನಿರಂತರ ವರದಿ ಪ್ರಕಟಿಸಲಾಗಿತ್ತು.…

Read More