Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ತೊಕ್ಕೊಟ್ಟಿನ ಭಗತ್ ಸೇವಾ ಸಿಂಗ್ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ತೊಕ್ಕೊಟ್ಟು ಒಳಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ನಡೆದ ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ ಕಾರ್ಯಕ್ರಮ ಸೇರಿದ ಸಾವಿರಾರು ಕಲಾರಸಿಕರ ಮನ ತಣಿಸಿತು. ಆಧುನಿಕ ಹಾಗೂ ಸಾಂಪ್ರದಾಯಿಕ ವಿಭಾಗದಲ್ಲಿ ನೂರಕ್ಕೂ ಮಿಕ್ಕಿ ಗೂಡುದೀಪಗಳು ಸ್ಪರ್ಧಿಸಿದ್ದವು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯಾ : ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕಿನಲ್ಲಿದ್ದ ಸಹಸವಾರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಿನ್ಯಾ ಸಮೀಪ ಸೋಮವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಸೋಮೇಶ್ವರ ಉಚ್ಚಿಲದ ಅಜ್ಜಿನಡ್ಕ ನಿವಾಸಿ ಅಬೂಬಕರ್ ಎಂಬವರ ಪುತ್ರ ಇಬ್ರಾಹಿಂ ಖಲೀಲ್ (15) ಮೃತ ಬಾಲಕ. ಬೈಕ್ ಚಲಾಯಿಸುತ್ತಿದ್ದ ಸಂಬಂಧಿ ಸೊಹೈಲ್ ಸಾದಿಕ್ ಗಾಯಗೊಂಡು ತೊಕ್ಕೊಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇರಳಕ್ಟಟ್ಟೆಯ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೀಡಾಗಿ ದಾಖಲಾಗಿದ್ದ ತಂದೆ ಅಬೂಬಕರ್ ಅವರನ್ನು ನೋಡಲೆಂದು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಉಚ್ಚಿಲ ಕಡೆಯಿಂದ ದೇರಳಕಟ್ಟೆಗೆ ತೆರಳುವ ಸಂದರ್ಭ ಎದುರಿನಿಂದ ನಾಟೆಕಲ್ ಕಡೆಯಿಂದ ತಲಪಾಡಿಗೆ ತೆರಳುತ್ತಿದ್ದ ಟೆಂಪೋ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ರಸ್ತೆಗೆಸೆಯಲ್ಪಟ್ಟ ಇಬ್ರಾಹಿಂ ಖಲೀಲ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಿನ್ಯಾ ಫಲಾಹ್ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಯಾಗಿದ್ದ ಈತ ಪ್ರತಿಭಾವಂತನಾಗಿದ್ದ. ಮೃತ ಖಲೀಲ್ ತಂದೆ ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾನೆ. ಉಳ್ಳಾಲ ಠಾಣೆಯಲ್ಲಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ತಾಯಿ ಮಡಿಲು ಸಂಸ್ಕಾರದ ಕೇಂದ್ರಗಳಾಗಬೇಕು. ಅವರು ಯುವಪೀಳಿಗೆಯಲ್ಲಿ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಅರಿವು ಮೂಡಿಸಿದಾಗ ಸಂಸ್ಕಾರಯುತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಕೇಮಾರು ಶ್ರೀ ಸಾಂದೀಪನಿ ಮಠದ ಶ್ರೀ ಈಶ ವಿಠಲ ದಾಸ ಸ್ವಾಮೀಜಿ ಹೇಳಿದರು. ಅವರು ತೊಕ್ಕೊಟ್ಟಿನ ಭಗತ್ ಸೇವಾ ಸಿಂಗ್ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ತೊಕ್ಕೊಟ್ಟು ಒಳಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆದ ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ -2015 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಕøತಿ ವಿಕೃತಿಯಲ್ಲಿ ಮರೆಯಾಗುತ್ತಿದೆ. ಸನ್ಮಾನ ಪ್ರಶಸ್ತಿಗಳು ಮಾರಾಟದ ವಸ್ತುಗಳಾಗಿವೆ. ಪ್ರಶಸ್ತಿಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ಅರ್ಹತೆಯುಳ್ಳ ವ್ಯಕ್ತಿಗೆ ಸಾಧನಾ ಪ್ರಶಸ್ತಿಯನ್ನು ನೀಡಿರುವುದು ಶ್ಲಾಘನೀಯ. ಮದ್ಯ ಸಮಾಜದಲ್ಲಿ ಬದುಕುತ್ತಿರುವ ಎಲ್ಲರೂ ಉತ್ಸವದ ದಿನಗಳಂದು ಮದ್ಯ ಸೇವಿಸದೆ ಇರುವುದರಿಂದ ಹಬ್ಬಗಳ ಮಹತ್ವವನ್ನು ಉಳಿಸುವ ಕಾರ್ಯ ನಡೆಸಬೇಕು. ಮಹಿಳೆಯರು ಮದ್ಯ ಸಂಸ್ಕøತಿಯತ್ತ ವಾಲದೇ, ಸಂಸ್ಕಾರದ ಕೇಂದ್ರಗಳಾಗಬೇಕಿದೆ. ಮಕ್ಕಳಿಗೆ ಸಂಸ್ಕಾರಯುಕ್ತ ವಿದ್ಯೆಯನ್ನು ಕೊಡುವ ಪ್ರಯತ್ನ ತಾಯಂದಿರಿಂದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ತೊಕ್ಕೊಟ್ಟು ಹೈಟೆಕ್ ಬಸ್ಸು ನಿಲ್ದಾಣದ ನೀಲಿನಕಾಶೆ ಸಿದ್ಧವಾಗಿದ್ದು, ಎರಡು ಬಾರಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಅಧಿಕೃತವಾಗಿ ಅನುದಾನ ಬಿಡುಗಡೆ ಮಾಡುವಂತೆ ಮಾಡಿ ಜಿಲ್ಲೆಯಲ್ಲಿ ಮಾದರಿ ಬಸ್ ನಿಲ್ದಾಣವನ್ನು ರೂಪಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ವಿಶೇಷ ಅನುದಾನದಲ್ಲಿ ಹಮ್ಮಿಕೊಳ್ಳಲಾದ ತೊಕ್ಕೊಟ್ಟು ಬಸ್ ನಿಲ್ದಾಣದ ಕಾಂಕ್ರೀಟಿಕರಣ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಉಳ್ಳಾಲ ನಗರಸಭೆ ಮೇಲ್ದರ್ಜೆಗೆ ಏರಿಸಿದ ಬಳಿಕ ಹಂತಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ತೊಕ್ಕೊಟ್ಟು ಜಂಕ್ಷನ್ನಿನಿಂದ ಅಬ್ಬಕ್ಕ ಸರ್ಕಲ್ ವರೆಗಿನ ರಸ್ತೆ ಕಾಂಕ್ರೀಟಿಕರಣದ ಕಾಮಗಾರಿ ರೂ.10 ಕೋಟಿ ಅನುದಾನದಲ್ಲಿ ನಡೆಸಲಾಗಿದ್ದು, ಈಗಾಗಲೇ ಭಾಗಶ: ಪೂರ್ಣಗೊಂಡಿದೆ. ದೇಶದಲ್ಲೇ ಪ್ರಥಮ ಬಾರಿ ನಡೆಸಲಾಗುತ್ತಿರುವ ಉಳ್ಳಾಲದ ಕಡಲ್ಕೊರೆತ ಕಾಮಗಾರಿಗೆ ರೂ.235 ಕೋಟಿ ಅನುದಾನ ಮಂಜೂರಾಗಿದ್ದು, ಅದರಲ್ಲಿ 35 ಕೋಟಿಯ ಕಾಮಗಾರಿ ನಡೆಸಲಾಗಿದೆ. ಮಾದರಿ ಆಸ್ಪತ್ರೆ, ಹೈಟೆಕ್ ಮೀನು ಮಾರುಕಟ್ಟೆ, ಮೀನುಗಾರರಿಗೆ ಜಟ್ಟಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಂಬಿಕಾರೋಡ್: ಬಂಟರ ಸಂಘ ಕೋಟೆಕಾರು ಗ್ರಾಮ ಸಮಿತಿ ವತಿಯಿಂದ ಇಂದು ಸಂಜೆ 4.30 ಕ್ಕೆ ಕಾಪಿಕಾಡಿನ ಅಂಬಿಕಾರೋಡು ಗಟ್ಟಿ ಸಮಾಜಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಉಳಿಪ್ಪಾಡಿಗುತ್ತು ಸುಬ್ಬಯ್ಯ ಮಾರ್ಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಂಟರ ಸಂಘ ಕೋಟೆಕಾರು ಗ್ರಾಮ ಸಮಿತಿ ಅಧ್ಯಕ್ಷ ರವಿರಾಜ್ ರೈ ಸಾಂತ್ಯಗುತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಬಂಟರ ಸಂಘ ಉಳ್ಳಾಲ ವಲಯ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಉದ್ಯಮಿ ಮತ್ತು ಬಿಜೆಪಿ. ಯುವಮೋರ್ಚಾ ಕೊಣಾಜೆ ಗ್ರಾಮ ಅಧ್ಯಕ್ಷ ಸುದರ್ಶನ್ ಶೆಟ್ಟಿ ನೆತ್ತಿಲಬಾಳಿಕೆ ದಡಸು, ರಾಜೇಶ್ ರೈ.ಕೋಟೆಕಾರ್ ಗುತ್ತು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಡಾ. ಮೋಹನ್ ದಾಸ್‍ರವರು ಸ್ಪರ್ಧಾತ್ಮಕ ಜಗತ್ತಿನ ತಯಾರಿಯಲ್ಲಿ ವಿದ್ಯಾರ್ಥಿಗಳ ಮತ್ತು ಪೋಷಕರ ಪಾತ್ರ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದು ಬಳಿಕ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ಪ್ರತಿಕಾ ಪ್ರಕಟನೆ ತಿಳಿಸಿದೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಗಳೂರು: ಕಳೆದ ವಾರ ನಗರ ಸಬ್ ಜೈಲಿನಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಅಧೀಕ್ಷಕ ಸೇರಿ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. ಜೈಲಿನ ಅಧೀಕ್ಷಕ ಓಬಳೇಶ್ವರ ಸೇರಿದಂತೆ ನಾಲ್ವರನ್ನು ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಅಮಾನತುಗೊಳಿಸುವಂತೆ ಮಂಗಳೂರು ಪೊಲೀಸ್ ಆಯುಕ್ತ ಎಸ್.ಮುರುಗನ್ ಶಿಫಾರಸು ಮಾಡಿದ್ದರು. ಈ ಹಿನ್ನಲೆಯಲ್ಲಿ ಇಂದು ಬಂದೀಖಾನೆ ಇಲಾಖೆ ಎಡಿಜಿಪಿ ಕಮಲ್ ಪಂತ್ ನಾಲ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ನವೆಂಬರ್ 2 ರಂದು ವಿಚಾರಣಾಧೀನ ಕೈದಿಗಳ ಎರಡು ತಂಡಗಳ ನಡುವೆ ನಡೆದ ಮಾರಾಮಾರಿಯಲ್ಲಿ ಭೂಗತ ಪಾತಕಿ ದಾವೂದ್ ಸಹಚರ ಎನ್ನಲಾದ ಮಾಡೂರು ಇಸುಬು ಹಾಗೂ ಅವನ ಸಹಚರ ಗಣೇಶ್ ಶೆಟ್ಟಿ ಕೊಲೆಯಾಗಿತ್ತು. ಇವರ ಜೊತೆ ೭ಮಂದಿ ಗೈದಿಗಳು ಹಾಗೂ ಜೈಲು ಸುಪರಿಂಟೆಂಡೆಂಟ್ ಗಾಯಗೊಂಡಿದ್ದರು. ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರ ಆಕಾಶ್ ಭವನ ಶರಣ್ ಹಾಗೂ ಆತನ ತಂಡ ಈ ಕೊಲೆ ಮಾಡಿದ್ದರು. ಕೈದಿಗಳ ಹತ್ಯೆಯ ನಂತರ ಜೈಲಿನೊಳಗೆ ನಡೆದ ತಪಾಸಣೆಯಲ್ಲಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಜನಾಡಿ: ಮಾನವ ಮೊದಲು ತನ್ನ ಆತ್ಮವನ್ನು ಶುದ್ದಿ ಮಾಡಿಕೊಳ್ಳಬೇಕು.ಹೃದಯ ಶುದ್ದಿ ಇಲ್ಲದಿದ್ದರೆ ಅಭಿವೃದ್ಧಿ ಕುಂಠಿತವಾಗಬಹುದು. ಮನುಷ್ಯನ ಅಂತರಾಳದಲ್ಲಿರುವ ವಿಚಾರಗಳನ್ನು ಹೊರ ಹಾಕುವುದು ನಾಲಿಗೆ. ನಾಲಿಗೆ ಎನ್ನುವ ಒಂದು ಅಂಗ ಮಾನವನಿಗೆ ಇಲ್ಲದಿದ್ದರೆ ಮಾನವ ಸಮೂಹ ಈ ಹಂತಕ್ಕೆ ಬೆಳೆದು ಬರುತ್ತಿರಲಿಲ್ಲ ಎಂದು ಉಡುಪಿ ಸಂಯುಕ್ತ ಖಾಝಿ ಬೇಕಲ ಇಬ್ರಾಹಿಂ ಮುಸ್ಲಿಯಾರ್ ನುಡಿದರು. ಅವರು ಅಲ್ ಮದೀನ ಯತೀಂಖಾನ ಮಂಜನಾಡಿಯಲ್ಲಿ ಕರ್ನಾಟಕ ರಾಜ್ಯ ಎಸ್‍ಎಸ್‍ಎಫ್ ವತಿಯಿಂದ ಮೂರು ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಪ್ರತಿಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಘಟನೆಗಳು ನಡೆದು ಹೋಗುವುದು ಮಾನವನಿಂದ ಬಿತ್ತರವಾಗುವ ಮಾತಿನಿಂದ.ಆದ್ದರಿಂದ ಮಾತನಾಡುವ ಸಂದರ್ಭ ಆಲೋಚಿಸಿ ಮಾತನಾಡಬೇಕು ಜತೆಗೆ ಹೃದಯವನ್ನು ಶುದ್ಧಿ ಮಾಡಿಕೊಳ್ಳಬೇಕು.ಹೃದಯ ಶುದ್ಧಿ ಮಾಡಿಕೊಳ್ಳದೇ ಯಾವುದೇ ಕಾರ್ಯ ಮಾಡಿದರೂ ಪ್ರಯೋಜನ ಸಿಗದು ಎಂದು ಸಲಹೆ ನೀಡಿದರು. ಹುಸೈನ್ ಸಅದಿ ಮುಖ್ಯ ಭಾಷಣ ಮಾಡಿದರು.ಮಾಣಿ ಉಸ್ತಾದ್, ಇಸ್ಮಾಯಿಲ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸ್ಸಯ್ಯಿದ್ ಸಿಟಿಎಂ ಉಮರ್ ಅಸ್ಸಖಾಫ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಮೈಸೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನ.2ರಿಂದ 6ರವರೆಗೆ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ಮಹಿಳೆಯರ ಹಾಕಿ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಕ್ವಾರ್ಟರ್ ¥sóÉೈನಲ್‍ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಹೈದರಾಬಾದಿನ ಒಸ್ಮಾನಿಯ ವಿ.ವಿ. ಎದುರು 8-0 ಗೋಲು ಅಂತರಗಳಿಂದ ಜಯಿಸಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದುಕೊಂಡಿತು. ಬಳಿಕ ನಡೆದ ಲೀಗ್ ಪಂದ್ಯಾವಳಿಗಳಲ್ಲಿ ಚಿದಂಬರಂನ ಅಣ್ಣಾಮಲೈ ವಿ.ವಿ. ತಂಡವನ್ನು 6-1 ಗೋಲುಗಳಿಂದ, ಕೇರಳದ ಕಲ್ಲಿಕೋಟೆ ವಿಶ್ವವಿದ್ಯಾನಿಲಯದ ವಿರುದ್ಧ 5-0 ಗೋಲುಗಳಿಂದ ಮತ್ತು ಕೊನೆಯ ಲೀಗ್ ಪಂದ್ಯದಲ್ಲಿ ಅತಿಥೇಯ ಮೈಸೂರು ವಿಶ್ವವಿದ್ಯಾನಿಲಯ ತಂಡವನ್ನು 2-1 ಗೋಲುಗಳಿಂದ ಮಣಿಸಿ ಭರ್ಜರಿ ಜಯಗಳಿಸಿದೆ. ತಂಡದಲ್ಲಿ ಭಾಗ್ಯಶ್ರೀ ಸಿಎಂ, ವಿಶ್ಮ ಎ.ಎ., ನಿಶಾ ಎನ್.ಎನ್. ಹಿಮಾ ಜಾರ್ಜ್ ಚೈತ್ರಾ ಕೆ.ಜೆ. ಕಾವೇರಮ್ಮ ಎ.ಹೆಚ್, ಪೂಜಾ ಎಂ.ಡಿ. ಸ್ವಪ್ನ ಎನ್.ಆರ್, ನಿಶಾ ಪಿ.ಸಿ. ರೇಶ್ಮಾ ಬಿ.ಬಿ. ಲಿಪಿತಾ ಡಿ.ಎಂ, ಯಕ್ಷಿತಾ ವಿ.ಆರ್, ಸಂಗೀತಾ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ರಾಜಕೀಯ ನಾಯಕರು ಕೋಟ್ಯಂತರ ಹಣವನ್ನು ಕೊಳ್ಳೆ ಹೊಡೆಯುವ ಸಲುವಾಗಿಯೇ ಎತ್ತಿನಹೊಳೆ ಯೋಜನೆಯನ್ನು ರೂಪಿಸಿದ್ದು, ಇದರಿಂದ ಕರಾವಳಿ ಜನರೊಂದಿಗೆ ಕೋಲಾರದ ಜನೆತಯೂ ವಂಚನೆಗೊಳಗಾಗಲಿದ್ದಾರೆ ಎಂದು ಸಂಘಟನೆ ಸಲಹೆಗಾರ ರಹೀಂ ಉಚ್ಚಿಲ್ ಹೇಳಿದ್ದಾರೆ. ಅವರು ಉಳ್ಳಾಲ ಸೈಯ್ಯದ್ ಮದನಿ ಸುನ್ನಿ ಸೆಂಟ್ರಲ್ ಕಮಿಟಿ ಇದರ ವತಿಯಿಂದ ಎತ್ತಿನಹೊಳೆ ಯೋಜನೆಯನ್ನು ಕೈಬಿಡಲು ಆಗ್ರಹಿಸಿ ಶುಕ್ರವಾರ ಉಳ್ಳಾಲದ ಮಾಸ್ತಿಕಟ್ಟೆಯಿಂದ- ತೊಕ್ಕೊಟ್ಟು ಬಸ್ ನಿಲ್ದಾಣದವರೆಗೆ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಸೀದಿಯೊಳಗೆ ಕುಳಿತು ಧಾರ್ಮಿಕ ನಿಷ್ಠೆಯನ್ನು ಮಾತ್ರ ಪ್ರದರ್ಶಿಸದ ಸೆಂಟ್ರಲ್ ಕಮಿಟಿಯವರು ಸಾಮಾಜಿಕವಾಗಿ ಜನರ ಪರ ಹೋರಾಟಕ್ಕೆ ಮುಂದಾಗಿರುವುದು ಶ್ಲಾಘನೀಯ. ಪ್ರಕೃತಿ ಸೃಷ್ಟಿಯನ್ನು ಬದಲಿಸುವುದು ಇಸ್ಲಾಂ ವಿರೋಧಿ ನೀತಿ. ಸೃಷ್ಟಿ ವಿರೋಧದ ಯೋಜನೆಯನ್ನು ಮುಂದುವರಿಸದೆ ಎರಡು ಭಾಗದ ಜನರ ಹಿತಕ್ಕೆ ಸ್ಪಂಧಿಸುವ ಯೋಚನೆಯನ್ನು ಸರಕಾರ ಮಾಡಬೇಕಿದೆ. ಇಲ್ಲದಿದ್ದಲ್ಲಿ ಮುಂದೆ ತೀವ್ರ ಹೋರಾಟವನ್ನು ಎದುರಿಸಬೇಕಾದೀತು ಎಂದರು. ಇನ್ನೋರ್ವ ಸಲಹೆಗಾರ ಹೈದರ್ ಪರ್ತಿಪ್ಪಾಡಿಯವರು ಮಾತನಾಡಿ ಜಿಲ್ಲೆಯ ಜನರ ಜೀವನದಿ ನೇತ್ರಾವತಿಗೆ ಉಗಮವಾಗುವ ಸ್ಥಳಕ್ಕೆ ಅಡ್ಡಕಟ್ಟುವುದು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಚ್ಚಿಲ: ಲಾರಿ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲಗುಡ್ಡೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತ: ಗುರುಪುರ ಪರಾರಿ ನಿವಾಸಿ ತಲಪಾಡಿ ಕೆ.ಸಿ.ರೋಡ್‍ನಲ್ಲಿ ವಾಸವಾಗಿರುವ ಮಹಮ್ಮದ್ ರಫೀಕ್(45) ಎಂಬವರಾಗಿದ್ದು, ಕೆ.ಸಿ.ರೋಡ್‍ನಿಂದ ಸೋಮೇಶ್ವರ ಕಡೆಗೆ ರಿಕ್ಷಾ ಬಾಡಿಗೆಗೆಂದು ಹೋಗುತ್ತಿದ್ದಾಗ ಘಟನೆ ನಡೆದಿದೆ. ಘಟನೆಯ ವಿವರ : ಮಹಮ್ಮದ್ ರಫೀಕ್ ಸೋಮೇಶ್ವರ ರೈಲ್ವೇ ನಿಲ್ದಾಣದ ರಿಕ್ಷಾ ಪಾರ್ಕ್‍ನಲ್ಲಿ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಗ್ಗೆ 4.30ರ ಸುಮಾರಿಗೆ ರಿಕ್ಷಾ ಬಾಡಿಗೆಗೆ ನಿಲ್ಲಿಸಲು ಸೋಮೇಶ್ವರ ಕಡೆಗೆ ಹೋಗುತ್ತಿದ್ದಾಗ ಉಚ್ಚಿಲ ಗುಡ್ಡೆ ಬಳಿ ಮಂಗಳೂರಿನಿಂದ ಕೇರಳ ಕಡೆಗೆ ಮೀನು ಸಾಗಿಸುತ್ತಿದ್ದ ಲಾರಿ ಬಡಿದಿದ್ದು, ರಿಕ್ಷಾ ಚಲಾಯಿಸುತ್ತಿದ್ದ ರಫೀಕ್ ಸ್ಥಳದಲ್ಲೇ ಮೃತಪಟ್ಟಿದ್ದ ಎನ್ನಲಾಗಿದೆ. ಮನೆಯ ಆಧಾರ ಸ್ತಂಭವಾಗಿದ್ದರು : ಮಹಮ್ಮದ್ ರಫೀಕ್ ಪತ್ನಿ , ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದು, ಮನೆಯ ಆಧಾರ ಸ್ತಂಭವಾಗಿದ್ದರು. ಮೂಲತ: ಗುರುಪುರ…

Read More