ಉಳ್ಳಾಲ ನ್ಯೂಸ್ ನೆಟ್ವರ್ಕ್ ತೊಕ್ಕೊಟ್ಟು : ಕುತ್ತಾರು ಶಾಂತಿಭಾಗ್ ಸಮೀಪದ ಖಾಸಗಿ ವಸತಿಗೃಹದಲ್ಲಿ ನಡೆದ ಚೂರಿ ಇರಿತದಲ್ಲಿ ಓರ್ವ ಸಾವನ್ನಪ್ಪಿದರೆ ಇನ್ನೊರ್ವ ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಚೂರಿ ಇರಿತದಿಂದ ಮೃತಪಟ್ಟವನು ಬಿಹಾರ ಮೂಲದ ನಿತೇಶ್(20) ಎಂದು ಗುರುತಿಸಲಾಗಿದ್ದು, ನೇಪಾಲ ಮೂಲದ ಪ್ರದೀಪ್(21) ಗಾಯಗೊಂಡಿದ್ದಾರೆ. ಚೂರಿ ಇರಿತ ನಡೆಸಿದ ಆರೋಪಿ ಒಡಿಸ್ಸಾ ಮೂಲದ ಆರಿಫ್ ಖಾನ್ ಅಲಿಯಾಸ್ ಮುನ್ನಾ (18) ತಲೆಮರೆಸಿಕೊಂಡಿದ್ದಾನೆ. ಮೃತ ಯುವಕ ಸೇರಿದಂತೆ ಆರೋಪಿ ಎಲ್ಲರೂ ಒಂದೇ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ವಿವರ : ದೇರಳಕಟ್ಟೆಯ ಯೇನೆಪೊಯ ಆಸ್ಪತ್ರೆ ಬಳಿಯ ಖಾಸಗಿ ರೆಸ್ಟಾರೆಂಟೊಂದರಲ್ಲಿ ಕೆಲಸ ಮಾಡುತ್ತಿದ್ದ ನಿತೇಶ್, ಆರಿಫ್ ಖಾನ್ ಸೇರಿದಂತೆ ಆರು ಮಂದಿ ಶಾಂತಿಭಾಗ್ ಸಮೀಪದ ಖಾಸಗಿ ವಸತಿಗೃಹದಲ್ಲಿ ಬಾಡಿಗೆಗೆ ವಾಸವಾಗಿದ್ದರು. ಇವರಲ್ಲಿ ಆರಿಫ್ ಖಾನ್ , ರಾಣಾ, ಮಿಥುನ್ ಬೆಳಗ್ಗೆ 7ರಿಂದ ರಾತ್ರಿ 7ರವರೆಗೆ ಹೋಟೆಲ್ನಲ್ಲಿ ಕಾರ್ಯ ನಿರ್ವಹಿಸಿದರೆ, ಮೃತ ನಿತೇಶ್ ಸೇರಿದಂತೆ ಪ್ರದೀಪ್ ಮತ್ತು…
Author: UllalaVani
ಉಳ್ಳಾಲ ನ್ಯೂಸ್ ನೆಟ್ವರ್ಕ್ ಮುಡಿಪು: ನಮ್ಮ ಭಾರತ ದೇಶದಲ್ಲಿ ಹಿಂದಿನಿಂದಲೂ ವಿವಿಧ ರೀತಿಯ ಸಂಪ್ರದಾಯ, ಪೂಜೆ ವಿಧಿವಿದಾನಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ. ಇದು ಕೇವಲ ಸಂಪ್ರದಾಯ ಮಾತ್ರವಲ್ಲ ಇಂತಹ ಪೂಜಾ ಆಚರಣೆ, ಆರಾಧನೆಗಳಲ್ಲಿ ವೈಜ್ಞಾನಿಕವಾದ ಅಂಶಗಳು ಕೂಡಾ ಅಡಕವಾಗಿದ್ದು ಯುವಜನಾಂಗ ಇದನ್ನು ಅರ್ಥಮಾಡಿಕೊಂಡು ಮುನ್ನಡೆಯಬೇಕು ಎಂದು ನ್ಯಾಯವಾದಿ ಆಶಾಪ್ರಸಾದ್ ಅವರು ಅಭಿಪ್ರಾಯಪಟ್ಟರು.ಅವರು ಧರ್ಮಜಾಗೃತಿ ವೇದಿಕೆ ಮುಡಿಪು ಇದರ ಆಶ್ರಯದಲ್ಲಿ ಭಾನುವಾರ ಶ್ರೀ ಮುಡಿಪಿನ್ನಾರ್ ಕ್ಷೇತ್ರದ ವಠಾರದಲ್ಲಿ ನಡೆದ ಸತ್ಯನಾರಾಯಣ ಪೂಜೆ, ಶಿವಪೂಜೆ, ಸ್ವಯಂವರ ಪಾರ್ವತಿ ಪೂಜೆ, ಸರಳ ಆದರ್ಶ ವಿವಾಹ ಕಾರ್ಯಕ್ರಮದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತ್ಯಾಗ ಮತ್ತು ಸೇವೆ ನಮ್ಮ ದೇಶದ ಮಣ್ಣಿನ ಗುಣವಾಗಿದೆ. ಆದ್ದರಿಂದ ದೇಶದ ರಕ್ಷಣೆಗಾಗಿ ಪ್ರತಿಯೊಬ್ಬರು ಯಾವ ರೀತಿಯ ತ್ಯಾಗ ಸೇವೆಗೂ ಸಿದ್ದರಿದ್ದಾರೆ. ನಮ್ಮ ಸಂಸ್ಕೃತಿಯ ನೆಲದಲ್ಲಿ ಇಂದಿನ ಆಧುನಿಕತೆಯಲ್ಲಿ ಹಲವಾರು ಬದಲಾವಣೆಗಳು ಕಾಣುತ್ತಿದ್ದು ಆದರೆ ಯಾವತ್ತೂ ನಾವು ನಮ್ಮ ಪರಂಪರೆ ಮತ್ತು ಸಂಸ್ಕೃತಿಯನ್ನು ರಕ್ಷಣೆ ಮಾಡಬೇಕಾದ ಅಗತ್ಯತೆ ಇದೆ. ಅಲ್ಲದೆ ಎಳೆಯ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ತೊಕ್ಕೊಟ್ಟು:ಶಿಕ್ಷಣದ ಜತೆಗೆ ಸಾಮಾಜಿಕ ಸಹಕಾರ, ಮಾನವೀಯತೆಯ ಮನೋಭಾವವನ್ನು ಮಕ್ಕಳಲ್ಲಿ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು. ಅವರು ಕುತ್ತಾರಪದವಿನ ಮುನ್ನೂರು ಯುವಕ ಮಂಡಲ ಇದರ 48 ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಅರ್ಹ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳಲ್ಲಿ ಸಾಮಾಜಿಕ ಮೌಲ್ಯಗಳು ಬೆಳೆದಾಗ, ಸಮಾಜಕ್ಕೆ ಪೂರಕವಾಗಿ ಬೆಳೆಯಲು ಸಾಧ್ಯ. ಇದರಿಂದ ಹೆತ್ತವರ ಆಸ್ತಿ ಸಂಪತ್ತಾಗುತ್ತಾರೆ. ಆರ್ಥಿಕವಾಗಿ ಹಿಂದುಳಿದವರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಕಾರ್ಯ ಮಹತ್ತರವಾದದ್ದು, ಈ ನಿಟ್ಟಿನಲ್ಲಿ ಸೇವೆ ಕಾರ್ಯಗಳನ್ನು ನಡೆಸುತ್ತಿರುವ ಯುವಕ ಮಂಡಲದ ಕಾರ್ಯ ಶ್ಲಾಘನೀಯ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಗಣಪತಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಹಾಗೂ ಸಾಹಿತಿ ಚಂದ್ರಕಲಾ ನಂದಾವರ ಮಾತನಾಡಿ ಯುವಕರಿಗೆ ಸಂವಿಧಾನದ ಸಾಮಾನ್ಯ ವಿಚಾರದ ಅರಿವಿಲ್ಲ, ಅದಕ್ಕಾಗಿ ಕಾನೂನನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಸ್ಕಾಲರ್ ಶಿಪ್ ಗಾಗಿ ಶಾಲೆಗೆ ಓಡಿ ಬರುವ ಹೆತ್ತವರು,…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಸಮುದ್ರಕ್ಕೆ ಸ್ನಾನಕ್ಕಿಳಿದ ವ್ಯಕ್ತಿಯೋವ೯ರು ಸಮುದ್ರಪಾಲಾದ ಘಟನೆ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಸೀಗ್ರೌಂಡ್ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಮಾಸ್ತಿಕಟ್ಟೆ ನಿವಾಸಿ ಹನೀಫ್ ಮಾಸ್ತಿಕಟ್ಟೆ(೩೫) ಸಮುದ್ರಪಾಲಾದವರು. ಬಿಸಿಲಿನಿಂದಾಗಿ ಮೈಯಲ್ಲಿ ಹುಣ್ಣಾಗಿತ್ತು ಎಂದು ಉಪ್ಪು ನೀರಿನ ಸ್ನಾನಕ್ಕೆಂದು ಬೆಳಿಗ್ಗೆ ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿ ಸಮುದ್ರಪಾಲಾಗಿದ್ದಾರೆ. ಸ್ಥಳೀಯರು ಶೋಧ ಕಾಯ೯ ಮಂದುವರಿಸಿದ್ದಾರೆ. ವಿವಾಹಿತರಾಗಿದ್ದ ಹನೀಫ್ ಅವರಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಸಮುದ್ರದಲ್ಲಿ ಶೋಧ ಕಾಯ೯ ನಡೆಯುತ್ತಿದೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆ ಅಯೋಜಿಸಿರುವ ” ಭೀತಿ ರಾಜಕೀಯದ ವಿರುದ್ದ ಐಕ್ಯಗೊಳ್ಳೋಣ” ಎಂಬ ರಾಷ್ಟೀಯ ಅಭಿಯಾನದ ಅಂಗವಾಗಿ ಎಪ್ರಿಲ್ 24 ರಂದು 3:30 ಕ್ಕೆ ಉಳ್ಳಾಲದ ಹಝ್ರತ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ಹಾಗೂ ರ್ಯಾಲಿ ನಡೆಯಲಿದೆ. ಈ ಸಾರ್ವಜನಿಕ ಸಮಾವೇಶವನ್ನು ಎಸ್ ಡಿ ಪಿ ಐ ರಾಷ್ಟೀಯಾಧ್ಯಕ್ಷ ಎ. ಸಯೀದ್ ಉದ್ಘಾಟಿಸಲಿದ್ದಾರೆ. ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್, ರಾಷ್ಡೀಯ ಪ್ರ.ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಜ್ಯ ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಕಾರ್ಯದರ್ಶಿಗಳಾದ ಅಬ್ದುಲ್ ಮಜೀದ್ ಕೊಡ್ಲಿಪೇಟೆ, ಅಲ್ಪೋನ್ಸ್ ಫ್ರಾಂಕೋ, ಆಕ್ರಮ್ ಹಸನ್, ಮಂಗಳೂರು ವಿಧಾನಸಭಾಧ್ಯಕ್ಷ ಅಬ್ಬಾಸ್ ಕಿನ್ಯ, ರಿಯಾಝ್ ಪರಂಗಿಪೇಟೆ, ಅತಾವುಲ್ಲ ಜೋಕಟ್ಟೆ, ಕೂಸಪ್ಪ ಮುತಾಂದವರು ಭಾಗವಹಿಸಲಿದ್ದಾರೆ. ಸಮಾವೇಶದ ಮೊದಲು…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಹೊಟೇಲ್ ಕಾರ್ಮಿಕನೋರ್ವ ಸಹುದ್ಯೋಗಿ ಇಬ್ಬರು ಕಾರ್ಮಿಕರಿಗೆ ಚೂರಿಯಿಂದ ಇರಿದಿರುವ ಘಟನೆ ದೇರಳಕಟ್ಟೆ ಸಮೀಪದ ಶಾಂತಿಭಾಗ್ನ ಖಾಸಗಿ ಲಾಡ್ಜಿನಲ್ಲಿ ಸಂಭವಿಸಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಿಹಾರ ಮೂಲದ ನಿತೇಶ್ (25) ಸ್ಥಿತಿ ಚಿಂತಾಜನಕವಾಗಿದ್ದು, ಇನ್ನೋರ್ವ ನೇಪಾಳ ಮೂಲದ ಪ್ರದೀಪ್ (25) ಗಾಯಗೊಂಡಿದ್ದಾನೆ. ಇಬ್ಬರಿಗೆ ಒರಿಸ್ಸಾ ಮೂಲದ ತಾಹಿರ್ ಎಂಬಾತ ಚೂರಿಯಿಂದ ಶನಿವಾರ ಬೆಳಿಗ್ಗೆ ಇರಿದು ಪರಾರಿಯಾಗಿದ್ದಾನೆ. ಘಟನೆ ವಿವರ: ಶಾಂತಿಬಾಗ್ ನಲ್ಲಿರುವ ನ್ಯೂ ತಾಜ್ ಹೊಟೇಲಿನಲ್ಲಿ ಕಾರ್ಮಿಕರಾಗಿದ್ದ ಎಲ್ಲರೂ ಅಲ್ಲೇ ಸಮೀಪದ ಖಾಸಗಿ ಲಾಡ್ಜಿನಲ್ಲಿ ಉಳಿದುಕೊಂಡಿದ್ದರು. ಶನಿವಾರ ನಸುಕಿನ ಜಾವ ತಾಹಿರ್ ಬೇಗನೇ ಎದ್ದು ಹೊಟೇಲಿಗೆ ಕೆಲಸಕ್ಕೆಂದು ತೆರಳಿದ್ದ. ಅಲ್ಲಿಂದ ವಾಪಸ್ಸಾಗಿದ್ದ ಈತ ರೂಮಿನಲ್ಲಿ ಮಲಗಿದ್ದ ನಿತೇಶ್ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದಿರುವುದಲ್ಲದೆ, ಸಮೀಪದಲ್ಲೇ ಮಲಗಿದ್ದ ಪ್ರದೀಪ್ ಎಂಬಾತನ ಕತ್ತಿಗೆ ಚೂರಿ ಇರಿಯಲು ಯತ್ನಿಸಿದಾಗ ತಪ್ಪಿ ಮುಖಕ್ಕೆ ಇರಿಯಲಾಗಿದೆ. ಲಾಡ್ಜಿನ ಮೇಲಿನ ಮಹಡಿಯಲ್ಲಿ ಬೆಳಗ್ಗಿನ ವೇಳೆ ಘಟನೆ ಸಂಭವಿಸಿದ್ದರಿಂದಾಗಿ ಕೃತ್ಯ ಯಾರ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಇನೋಳಿ: ವೇಗದ ತಂತ್ರಜ್ಞಾನವನ್ನು ವಿವಿಧ ಕ್ಷೇತ್ರಗಳಿಗೆ ವಿಸ್ತರಿಸಲು ಮತ್ತು ಅಭಿವೃದ್ಧಿಪಡಿಸಲು ದೇಶದಲ್ಲಿ ಇನ್ನಷ್ಟು ಸಂಶೋಧನಾ ಚಟುವಟಿಕೆಗಳು ನಡೆಯಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಭೈರಪ್ಪ ತಿಳಿಸಿದ್ದಾರೆ. ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ನೇತೃತ್ವದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ (`ಹೈ ಸ್ಪೀಡ್ ಪ್ಲೋವ್ಸ್ ಆ?ಯಂಡ್ ಡಾಕ್ ಎಚ್.ಎಸ್. ಡಾಕ್’) ಯಾಂತ್ರಿಕತೆಯಲ್ಲಿ ವೇಗದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಇಂಜಿನಿಯರ್ಗಳ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪ್ರಸ್ತುತ ವೇಗದ ತಂತ್ರಜ್ಞಾನವನ್ನು ಬಳಸುವ ಬಾಹ್ಯಕಾಶ, ವೈಮಾನಿಕ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಎದುರಿಸಬೇಕಾಗಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡು ಕೊಳ್ಳುವ ದೃಷ್ಟಿಯಿಂದ ಈ ಕ್ಷೇತ್ರದ ಬಗ್ಗೆ ಇನ್ನಷ್ಟು ಗಮನಹರಿಸಬೇಕಾದ ಅಗತ್ಯ ಕಂಡು ಬರುತ್ತಿದೆ. ಈ ದೃಷ್ಟಿಯಿಂದ ವೇಗದ ತಂತ್ರಜ್ಞಾನದ ಬಗ್ಗೆ ಹಮ್ಮಿಕೊಳ್ಳಲಾಗುವ ಇಂತಹ ಕಾರ್ಯಾಗಾರಗಳು ಮಹತ್ವದ್ದಾಗಿವೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ ಇಸ್ರೋದ ಎರೋಡೈನಾಮಿಕ್ ವಿಭಾಗದ ವಿಶ್ರಾಂತ ಮುಖ್ಯಸ್ಥ ಡಾ.ಆರ್.ಸಿ.ಮೆಹ್ತಾ ಮಾತನಾಡಿ,…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಇನೋಳಿ.ಎಸ್ಕೆಎಸ್ಸೆಸ್ಸೆಫ್ ಇನೋಳಿ ಶಾಖೆ ವತಿಯಿಂದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಮಜ್ಲಿಸುನ್ನೂರು ಕಾರ್ಯಕ್ರಮ ಎ,29ರಂದು ಮರ್ಹೂ ಯು.ಎಚ್ ಉಮರಬ್ಬ ವೇದಿಕೆ ಇನ್ನೋಳಿ ಜುಮಾ ಮಸೀದಿ ಬಳಿ ನಡೆಯಲಿದೆ. ಎಸ್ಕೆಎಸ್ಸೆಸ್ಸೆಫ್ ಇನೋಳಿ ಶಾಖಾ ಉಸ್ತುವಾರಿ ಹಾಜಿ ಮುಹಮ್ಮದ್ ಇನೋಳಿ ಗಂಡಿ ಧ್ವಜಾರೋಹಣ ಗೈಯಲ್ಲಿದ್ದು ಅಸ್ಸಯ್ಯಿದ್ ಅಮೀರ್ ತಂಙಳ್ ಅಲ್-ಬುಖಾರಿ ಕಿನ್ಯಾ ನೇತೃತ್ವವಹಿಸಲಿದ್ದು ಪಾಣಕ್ಕಾಡ್ ಅಸ್ಸಯ್ಯದ್ ಶಫೀಕ್ ಅಲೀ ಶಿಹಾಬ್ ತಂಙಳ್ ದುಅ ಮಾಡಲಿದ್ದಾರೆ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್-ಅಝ್ಹರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲ್ಲಿದ್ದು ಕೆ.ಪಿ ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ಉದ್ಘಾಟಿಸಲ್ಲಿದ್ದಾರೆ. ವಾಗ್ಮಿ ಸಲೀಂ ವಾಫಿ ಅಂಬಲಕ್ಕಂಡಿ ಭಾಗವಹಿಸಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ನರಿಂಗಾನ: ನರಿಂಗಾನ ಗ್ರಾಮದ ನೆತ್ತಿಲಪದವು ಕೆದಂಬಾಡಿ ಎಂಬಲ್ಲಿ 15 ಹರೆಯದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ. ಆತ್ಮಹತ್ಯೆಗೈದ ಬಾಲಕಿಯನ್ನು ನೆತ್ತಿಲ ಪದವಿನ ಯೂಸೂಫ್ ಎಂಬವರ ಪುತ್ರಿ ಶೈನಾ(15) ಎಂದು ಗುರುತಿಸಲಾಗಿದೆ. ಈಕೆ ಮನೆಯ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಈಕೆಯ ತಂದೆ ಯೂಸುಫ್ಗೆ ಎರಡು ಮದುವೆಯಾಗಿದ್ದು, ಆತ್ಮಹತ್ಯೆಗೈದವಳು ಎರಡನೇ ಪತ್ನಿಯ ಮಗಳಾಗಿದ್ದಾಳೆ. ಯೂಸುಫ್ನ ಎರಡನೇ ಪತ್ನಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕೊಣಾಜೆ: 2016-17ನೇ ಸಾಲಿನ ಸಿ.ವಿ.ರಾಮನ್ ಜನ್ಮ ಶತಮಾನೋತ್ಸವ ಪ್ರಶಸ್ತಿ ಪುರಸ್ಕತರಾದಂತಹ ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮವು ಶುಕ್ರವಾರ ಮಂಗಳೂರು ವಿವಿಯ ಹಳೆಸೆನೆಟ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಪ್ರೊ.ಶಾಂತರಾಮ್ ಶೆಟ್ಟಿ ಅವರು, ವಿಜ್ಞಾನ ಕ್ಷೇತ್ರದ ಸಂಶೋಧನೆಯಲ್ಲಿ ಬಹಳ ಆಳವಾಗಿ ತೊಡಗಿಸಿಕೊಂಡು ಅಪಾರ ಸಾಧನೆ ಮಾಡುತ್ತಿರುವ ಪ್ರೊ.ಕೆ.ಭೈರಪ್ಪ ಅವರಿಗೆ ಅರ್ಹವಾಗಿಯೇ ಸಿ.ವಿ.ರಾಮನ್ ಜನ್ಮಶತಮಾನೋತ್ಸವ ಪ್ರಶಸ್ತಿಯು ಲಭಿಸಿದ್ದು ಇದು ಮಂಗಳೂರು ವಿವಿಗೂ ದೊರೆತ ಗೌರವಾಗಿದೆ ಎಂದರು. ವಿಶ್ವವಿದ್ಯಾಲಯದ ಕುಲಪತಿಯಾಗಿ, ಉತ್ತಮ ಸಂಶೋಧಕರಾಗಿ, ಉತ್ತಮ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ.ಕೆ.ಭೈರಪ್ಪ ಅವರು ವಿಶ್ವವಿದ್ಯಾಲಯದಲ್ಲಿ ಸಂಶೋಧನೆಗೆ ಒತ್ತು ನೀಡಿ ಪ್ರೋತ್ಸಾಹಿಸುತ್ತಿದ್ದಾರೆ. ಸಂಶೋಧನಾ ವಿದ್ಯಾರ್ಥಿಗಳಿಗೆ ಅವರು ಮಾದರಿಯಾಗಿದ್ದಾರೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪ ಅವರು ಮಾತನಾಡಿ, ಸಮಾಜಸೇವೆಯೊಂದಿಗೆ ಜ್ಞಾನವನ್ನು ವಿಸ್ತರಿಸಿಕೊಂಡು ಬದ್ದತೆಯಲ್ಲಿ ಕೆಲಸ ಮಾಡಿದರೆ ಗೌರವ ತನ್ನಿಂದ…

