Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು : ಬಿಜೆಪಿಯ ಐದು ವರ್ಷದ ಆಡಳಿತಕ್ಕೆ ಪರ್ಯಾಯವಾಗಿ ಕಾಂಗ್ರೆಸ್ ಪಕ್ಷ ಅದರಲ್ಲೂ ಸಿದ್ಧರಾಮಯ್ಯ ಅವರ ಸರಕಾರ ಆಡಳಿತಕ್ಕೆ ಬಂದರೆ ಕೋಮು ಸೌಹಾರ್ದ ಉಳಿಯಲು ಸಾಧ್ಯ ಎಂದು ಭಾವಿಸಿದ್ದ ಜನರಿಗೆ, ಸಿದ್ಧರಾಮಯ್ಯ ನೇತೃತ್ವದ ಸರಕಾರ ಆಡಳಿತಕ್ಕೆ ಬಂದ ಮರುದಿನದಿಂದಲೇ ಕೋಮು ಸಂಘರ್ಷ ಪ್ರಾರಂಭಗೊಂಡಿದ್ದು, ಇದರೊಂದಿಗೆ ಮೂಲಭೂತ ಸೌಕರ್ಯ ಸೇರಿದಂತೆ ಕಾರ್ಮಿಕರ ಸಮಸ್ಯೆಗೆ ರಾಜ್ಯದ ಕಾಂಗ್ರೆಸ್ ಸರಕಾರ ಸ್ಪಂದಿಸುತ್ತಿಲ್ಲ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಬಸ್ ನಿಲ್ದಾಣ ಬಳಿಯ ನಾಡಕಚೇರಿ ಎದುರು ಜಿಲ್ಲೆಯ ಅಬಿವೃದ್ಧಿ ಹಾಗೂ ಜನತೆಯ ಮೂಲಭೂತ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಸಿಪಿಐಎಂನಿಂದ ನಡೆದ ಸಾಮೂಹಿಕ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಆಡಳಿತದಲ್ಲಿದ್ದ ರೈತ ಕಾರ್ಮಿಕ ವಿರೋಧಿ ಬಿಜೆಪಿ ಸರಕಾರಕ್ಕೆ ಪರ್ಯಾಯವಾಗಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರು. ಅದರಲ್ಲೂ ಅಹಿಂದದ ಮೂಲಕ ರಾಜ್ಯದಾದ್ಯಂತ ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಹಿತ ಕಾಯುವ ಭರವಸೆ ನೀಡಿದ ಸಿದ್ಧರಾಮಯ್ಯ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ತೊಕ್ಕೊಟ್ಟು ಚೆಂಬುಗುಡ್ಡೆ ಬಳಿ ಕಾರಿಗೆ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ದೇರಳಕಟ್ಟೆಯ ಆಸ್ಪತ್ರೆ ದಾಖಲಿಸಲಾಗಿದೆ. ಪಂಡಿತ್‍ಹೌಸ್ ನಿವಾಸಿ ಯತಿನ್(18) ಎಂಬವರೇ ಗಂಭೀರ ಗಾಯಗೊಂಡು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದು, ಯತಿನ್ ಪಂಡಿತ್‍ಹೌಸ್ ಕಡೆಯಿಂದ ತನ್ನ ಸ್ನೇಹಿತನ ಬೈಕ್‍ನಲ್ಲಿ ತೊಕ್ಕೊಟ್ಟು ಕಡೆ ಹೋಗುತ್ತಿದ್ದಾಗ ತೊಕ್ಕೊಟ್ಟಿನಿಂದ ದೇರಳಕಟ್ಟೆ ಕಡೆ ಹೋಗುವ ಕಾರಿಗೆ ಡಿಕ್ಕಿ ಹೊಡೆದಿದ್ದು, ಅಫಘಾತದಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರನ್ನು ಚಲಾಯಿಸುತ್ತಿದ್ದ ವೈದ್ಯೆಗೆ ತಲೆಗೆ ಗಾಯವಾಗಿದೆ. ಬೈಕ್‍ನ ಟ್ಯಂಕ್ ಮತ್ತು ಎದುರಿನ ಚಕ್ರ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ರಸ್ತೆಯಲ್ಲಿ ಪೆಟ್ರೋಲ್ ಹರಿದು ಸಂಚಾರಕ್ಕೆ ತಡೆಯಾಯಿತು. ಸ್ಥಳಕ್ಕೆ ಉಳ್ಳಾಲ ಪೆÇಲೀಸರು ಆಗಮಿಸಿದ್ದು, ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ನರಿಂಗಾನ ಗ್ರಾಮದ ಕಂಬ್ಲ ಎಂಬಲ್ಲಿ ಕುಲಾಲ ಸಮುದಾಯದ ಬಂಜನ್ ಕುಟುಂಬಸ್ಥರ ಸೇವೆಯಾಗಿ ನರಿಂಗಾನದ ಶ್ರೀ ಮಲರಾಯ ಬಂಟ ಪಿಲಿಚಾಮುಂಡಿ ದೈವಗಳಿಗೆ ಜನವರಿಯಲ್ಲಿ ಸಮರ್ಪಣೆಯಾಗಲಿರುವ ಧರ್ಮ ನೇಮದ ಸಿದ್ಧತಾ ಸಭೆ ಕಂಬ್ಲ ತರವಾಡು ಮನೆಯಲ್ಲಿ ನಡೆಯಿತು. ವೇದಮೂರ್ತಿ ಮುನ್ನೂರು ಎಂ.ಎಸ್ ತಂತ್ರಿಯವರ ಮಾರ್ಗದರ್ಶನದಲ್ಲಿ ಬೊಳ್ಮಾರ್ ಗುತ್ತು ಶಶಿಧರ ಭಟ್ ಹಾಗೂ ಅಖಿಲೇಶ್ ಆಚಾರ್ಯ ಅವರ ಪೌರೋಹಿತ್ಯದಲ್ಲಿ ನಡೆಯಲಿರುವ ಧರ್ಮನೇಮವು ಜ.22 ರಿಂದ 30ರವರೆಗೆ ನಡೆಯಲಿದೆ. ಧರ್ಮನೇಮದ ಅಂಗವಾಗಿ ನಾಗದೇವರಿಗೆ ವಿಶೇಷ ತನುತರ್ಪಣ ಸೇವೆ ಹಾಗೂ ಇತರ ಧಾರ್ಮಿಕ ವಿಧಿ ವಿಧಾನಗಳ ಬಳಿಕ ಧರ್ಮ ದೈವಗಳಿಗೆ ಧರ್ಮನೇಮ ಹಾಗೂ ಕುಟುಂಬದ ದೈವಗಳಿಗೆ ಕೋಲೋತ್ಸವ ನಡೆಯಲಿದೆ ಎಂದು ಚಂದ್ರಶೇಖರ ಜಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಶಂಕರ್ ಭಟ್ ದೋಸೆಮನೆ, ಸದಾಶಿವ ಭಟ್ ಜಲ್ಲಿ, ನಾರಾಯಣ ಭಟ್ ಬಡಕಾಯಿ, ನರಿಂಗಾನ ದೇವಸ್ಥಾನದ ಆಡಳಿತ ಮೊಕ್ತೇಸರ ಶೈಲೇಂದ್ರ ಭರತ್ ನಾಯ್ಕ್, ವಿಠಲ ಆಳ್ವ ಭಂಡಾರಮನೆ, ಲಕ್ಷ್ಮಣ ಕಣಂತೂರು, ಗಂಗಯ್ಯ ನಲಿಕೆ ಕನ್ಯಾನ,…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಯೇನೆಪೊಯ: ಬಡವರಿಗೆ ಚಿಕಿತ್ಸೆ, ಬಡಮಕ್ಕಳಿಗೆ ಶೈಕ್ಷಣಿಕ ನೆರವು, ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹೆಣ್ಮಕ್ಕಳ ಮದುವೆಗೆ ನೆರವು ನೀಡುತ್ತಾ ಬರಲಾಗಿದ್ದು ಸಮಾಜ ಸೇವೆಗೆ ಇನ್ನಷ್ಟು ಬಲ ತುಂಬುವ ನಿಟ್ಟಿನಲ್ಲಿ ರಕ್ತದಾನಿಗಳ ಸಂಘ ಅಸ್ತಿತ್ವಕ್ಕೆ ತರಲಾಗಿದೆ ಎಂದು ಬ್ಯಾರೀಸ್ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಪ್ರೊ.ಮುಸ್ತಫಾ ಬಸ್ತಿಕೋಡಿ ಹೇಳಿದರು. ಇನೋಳಿ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನದ ಉದ್ದೇಶದಿಂದ ಬುಧವಾರ ಯೇನೆಪೊಯ ಆಸ್ಪತ್ರೆ ಸಹಕಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ ಹಾಗೂ ಬಿಐಟಿ ಲೈಫ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ನೇಹಿತರು, ಸಂಬಂಧಿಕರು ಅಥವಾ ಇತರರಿಗೆ ರಕ್ತ ಅಗತ್ಯವಿರುವ ಸಂದರ್ಭ ಯಾರನ್ನೋ ಅವಲಂಭಿಸಲಾಗುತ್ತಿದೆ. ಕೆಲವೊಮ್ಮೆ ರಕ್ತ ಸಿಗದೆ ಪ್ರಾಣಹಾನಿಯೂ ಸಂಭವಿಸುತ್ತಿದ್ದು ಇದನ್ನು ಮನಗಂಡು ವಿದ್ಯಾರ್ಥಿಗಳು ಸ್ವಇಚ್ಛೆಯಿಂದ ರಕ್ತದಾನ ಮಾಡಲು ಮುಂದಾಗಿದ್ದಾರೆ ಎಂದು ತಿಳಿಸಿದರು. ಮಾಹಿತಿ ತಂತ್ರಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ಶೇಖ್ ಮೊಯಿದ್ದೀನ್ ಮಾತನಾಡಿ, ಕಾಲೇಜಿನಲ್ಲಿ ಸಾವಿರದಷ್ಟು ವಿದ್ಯಾರ್ಥಿಗಳಿದ್ದು ರಕ್ತದಾನ ಮಾಡುವ ಉದ್ದೇಶದಿಂದಲೇ ಬಿಐಟಿ ಲೈಫ್ ಅಸ್ತಿತ್ವಕ್ಕೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಕೊಣಾಜೆ ಪದವಿನ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಹಾಗೂ ಮೇಲ್ಛಾವಣಿಯು ಕುಸಿಯುವ ಹಂತದಲ್ಲಿ ಶಾಲೆಯನ್ನು ಸುಮಾರು 13 ಲಕ್ಷ ರೂ ವೆಚ್ಚದಲ್ಲಿ ನವೀಕರಣಗೊಳಿಸುವ ಯೋಜನೆಯನ್ನು ಲಯನ್ಸ್ ಜಿಲ್ಲೆ 317-ಡಿ, ಜಿಲ್ಲಾ ಲಯನೆಸ್ ಕ್ಲಬ್ ಹಮ್ಮಿಕೊಂಡಿದ್ದು ನವೀಕರಣ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು. ಜಿಲ್ಲಾ ಲಯನೆಸ್ ಅಧ್ಯಕ್ಷೆ ಅರುಣಾ ಸೋಮಶೇಖರ್ ಅವರ ನೇತೃತ್ವದಲ್ಲಿ ಈ ಯೋಜನೆಯನ್ನು ರೂಪಿಸಲಾಗಿದ್ದು, ಸ್ಥಳೀಯ ಅರ್ಚಕರಾದ ಸುದರ್ಶನ ಭಟ್ ಅವರು ಕಾಮಗಾರಿಗೆ ಚಾಲನೆ ನೀಡಿದರು. ಜಿಲ್ಲಾ ಲಯನೆಸ್ ಅಧ್ಯಕ್ಷೆ ಅರುಣಾ ಸೋಮಶೇಖರ್ ಮಾತನಾಡಿ, ಶಾಲೆ ಎನ್ನುವುದು ವಿದ್ಯಾ ದೇಗುಲವಾಗಿದ್ದು ಕೊಣಾಜೆ ಶಾಲೆಯ ದುಸ್ಥಿತಿಯಿಂದ ವಿದ್ಯಾರ್ಥಿಗಳು ಬಹಳಷ್ಟು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಮನಗಂಡು ಶಾಲೆಗೆ ಲಯನೆಸ್ ಕ್ಲಬ್ ವತಿಯಿಂದ ನವೀಕರಣಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದಕ್ಕೆ ಊರವರ ಮತ್ತು ಹಳೆವಿದ್ಯಾರ್ಥಿಗಳು ಕೂಡಾ ಕೈ ಜೋಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸೋಮಶೇಖರ್, ಜಿಲ್ಲಾ ಲಯನೆಸ್ ಸಲಹೆಗಾರರಾದ ವಿಜಯಲಕ್ಷ್ಮೀ ಪಿ.ರೈ, ಪ್ರಾಜೆಕ್ಟ್ ಕಾರ್ಡಿನೇಟರ್ ವಿನುತಾ ಕಾಜವ,…

Read More

ವರದಿ: ಬಶೀರ್ ಕಲ್ಕಟ್ಟ ಉಳ್ಳಾಲ: ಎಸ್‍ಎಸ್‍ಎಫ್ ತೊಕ್ಕೊಟ್ಟು ಸೆಕ್ಟರ್ ರಿಲೀಪ್ ಸರ್ವಿಸ್ ಇದರ ಆಶ್ರಯದಲ್ಲಿ ಮದುವೆಗೆ ಧನಸಹಾಯ ಒದಗಿಸುವ ಚೆಕ್ ಬಿಡುಗಡೆ ಕಾರ್ಯಕ್ರಮ ಎನೆಪೋಯ ಆಸ್ಪತ್ರೆಯ ಕ್ಯಾಂಪಸ್ ಬಳಿ ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ಎಸ್‍ಎಫ್ ತೊಕ್ಕೊಟ್ಟು ಸೆಕ್ಟರ್ ಅಧ್ಯಕ್ಷ ಇಲ್ಯಾಸ್ ಸಖಾಫಿ ವಹಿಸಿದ್ದರು. ಅಲ್ ಕೋಬರ್ ಕೆಸಿಎಫ್ ಸದಸ್ಯ ಪಿ.ಕೆ. ಅಬ್ದುಲ್ ರವೂಫ್ ಸಅದಿ ಚೆಕ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಎಸ್‍ಎಸ್‍ಎಫ್ ಜಿಲ್ಲಾ ಕೋಶಾಧಿಕಾರಿಅಲ್ತಾಪ್ ಕುಂಪಲ, ಶಮೀರ್ ಸೇವಂತಿಗುಡ್ಡೆ ಬಾತಿಷ ಮಂಚಿಲ ಉಪಸ್ಥಿತರಿದ್ದರು.

Read More

ಉಳ್ಳಾಲ್ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಕೊಲ್ಯ ಶ್ರೀ ನಾಗಬ್ರಹ್ಮ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಜ.26 ರಿಂದ ಜ.30ರ ವರೆಗೆ ಅಷ್ಟಪವಿತ್ರ  ನಾಗಮಂಡಲೋತ್ಸವ  ವೇದಮೂರ್ತಿ  ಜಗದೀಶ್ ಭಟ್ ಮರಕಡ ಇವರ ಪೌರೋಹಿತ್ಯದಲ್ಲಿ  ನಾಗಪಾತ್ರಿ ಸಗ್ರಿ  ಗೋಪಾಲಕೃಷ್ಣ ಸಾಮಗರ ಮಾರ್ಗದರ್ಶನದೊಂದಿಗೆ ನಡೆಯಲಿದೆ ಎಂದು  ಅಷ್ಟಪವಿತ್ರ  ನಾಗಮಂಡಲೋತ್ಸವ ಸಮಿತಿಯ ಧರ್ಮದರ್ಶಿ ಭಾಸ್ಕರ್ ಐತಾಳ್ ಹೇಳಿದ್ದಾರೆ. ಅವರು ಕ್ಷೇತ್ರದಲ್ಲಿ ಬುಧವಾರ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾಹಿತಿ ನೀಡಿ ಶ್ರೀ ಕ್ಷೇತ್ರದಲ್ಲಿ ಪ್ರತಿ ಶನಿವಾರ ವಿಶೇಷ ನಾಗತಂಬಿಲ, ಪ್ರತೀ ತಿಂಗಳ  ಆಶ್ಲೇಷಾ  ನಕ್ಷತ್ರ  ದಿನ  ಆಶ್ಲೇಷಾ ಬಲಿಪೂಜೆ,  ವರ್ಷಂಪ್ರತಿ ಸಹಸ್ರ ಸೀಯಾಳಾಭಿಷೇಕ, ನಾಗರಪಂಚಮಿ ಉತ್ಸವ, ನವಾರತ್ರಿಯ  ಮೊದಲ ದಿನ ದುರ್ಗಾನಮಸ್ಕಾರ  ಪೂಜೆ, ವರ್ಷಾವಧಿ ಉತ್ಸವದಲ್ಲಿ  ನಾಗದರ್ಶನ ಅನ್ನದಾನಗಳು ಪ್ರಧಾನ ಆಚರಣೆಗಳಾಗಿವೆ. ಮಾತ್ರವಲ್ಲದದೆ ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ, ಸಾಮಾಜಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದೆ.  ಕ್ಷೇತ್ರದಲ್ಲಿ ಈ ಹಿಂದೆ ವಿಶೇಷವಾಗಿ ನಾಗ ತನುತರ್ಪಣಾ ಸೇವೆ ಎರಡು ಬಾರಿ ಮಹಾ ಚಂಡಿಕಾಯಾಗ ನಡೆದಿತ್ತು. 2016, ಶ್ರೀ  ಕ್ಷೇತ್ರ ಪುನರುತ್ಥಾನಗೊಂಡು 12 ವರ್ಷಗಳು ಪೂರ್ಣಗೊಂಡಿದೆ. ಅದೇ …

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಜುಬಾ: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ವಿಮಾನವೊಂದು ಪತನಗೊಂಡಿದ್ದು, 40 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಸುಡಾನ್ ಜಬಾದಲ್ಲಿ ಬುಧವಾರ ನಡೆದಿದೆ. ವಿಮಾನ ಪತನಗೊಂಡ ಸ್ಥಳದಲ್ಲಿ 40ಶವಗಳು ಪತ್ತೆಯಾಗಿದ್ದು, ಇನ್ನು ವಿಮಾನದಲ್ಲಿ ಎಷ್ಟು ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನುವ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಕಾರ್ಗೊ ವಿಮಾನ ರನ್ ವೇ ಯಿಂದ ಹಾರಿದ ಬಳಿಕ 800 ಮೀಟರ್ ದೂರದಲ್ಲೇ ಪತನಗೊಂಡಿದೆ ಎಂದು ವರದಿಯಾಗಿದ್ದು, ವಿಮಾನ ಪತನಕ್ಕೆ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಾಗಿದೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚಿಕ್ಕಬಳ್ಳಾಪುರ: ದೇಶದ ಸಂಸ್ಕøತಿಯ ಬಗ್ಗೆ ಬಿಜೆಪಿ ಪಕ್ಷದ ನಾಯಕರಿಗೆ ಗೊತ್ತಿಲ್ಲ. ಬಿಜೆಪಿ ಮುಖಂಡರು ದೇಶಭಕ್ತಿಯ ಹೆಸರಿನಲ್ಲಿ ದೇಶ ಮತ್ತು ರಾಜ್ಯವನ್ನು ಒಡೆಯುತ್ತಿದ್ದಾರೆ ಎಂದು ಕರ್ನಾಟಕ ಆರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬುಧವಾರ ಮಾತನಾಡಿದ ಅವರು ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೋಮಾಂಸ ಸೇವನೆಯ ಹೇಳಿಕೆಯನ್ನು ಮುಂಬಲಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಹಿನ್ನಲೆಯಲ್ಲಿ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಗೃಹಸಚಿವ ರಿಜಿಜು ಗೋಮಾಂಸವನ್ನು ಸೇವಿಸುವುದರ ಬಗ್ಗೆ ಮಾತನಾಡಿದ ಅವರು ಬಿಜೆಪಿ ನಾಯಕರಿಗೆ ಧೈರ್ಯವಿದ್ದರೆ ಸಚಿವ ರಿಜೆಜು ವಿರುದ್ಧ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಬಿಜೆಪಿ ಪಕ್ಷದವರು ಸಿಎಂ ಹೇಳಿಕೆಯನ್ನು ದೊಡ್ಡ ವಿವಾದವನ್ನಾಗಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಐದು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಮುಖ ಸೇರಿದಂತೆ ಮೂವರು ಪರಾರಿಯಾಗಿರುವ ಘಟನೆ ತಲಪಾಡಿ ಎಸ್ ಟಿಡಿ ಬೂತಿನ ಹಿಂದುಗಡೆ ನಡೆದಿದೆ. ಉದಯ ದೇವಾಡಿಗ, ಭಾಸ್ಕರ, ಆನಂದ, ಶರೀಫ್, ಶೇಖರ ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪ್ರಮುಖ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು, ಚಂದ್ರಹಾಸ ತಲಪಾಡಿ, ರಾಝಿಕ್ ಮಂಜೇಶ್ವರ, ಅಶೋಕ್ ಕೋಟೆಕಾರು ಎಂಬವರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಂದ ರೂ.10,000 ನಗದು ಹಾಗೂ ಆಟಕ್ಕೆ ಬಳಸಲಾದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಸಿಪಿ ಕಲ್ಯಾಣಿ ಶೆಟ್ಟಿ ಅವರ ನಿರ್ದೇಶನದಲ್ಲಿ ಉಳ್ಳಾಲ ಠಾಣಾಧಿಕಾರಿ ಸವಿತೃ ತೇಜ ಮತ್ತು ಎಸ್.ಐ ಭಾರತಿ ಅವರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

Read More