Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ವಿಟ್ಲ: ಕರೋಪಾಡಿ ಗ್ರಾ. ಪಂ ಉಪಾಧ್ಯಕ್ಷನನ್ನು ಮುಸುಕುಧಾರಿಗಳ ತಂಡ ಬರ್ಬರವಾಗಿ ತಲವಾರಿನಿಂದ ಕಡಿದ ಪರಿಣಾಮ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಪೂರ್ವದ್ವೇಷದಿಂದ ಹತ್ಯೆ ನಡೆಸಿರುವ ಶಂಕೆ ಇದೆ. ಬಂಟ್ವಾಳ ತಾಪಂ ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿಯವರ ಪುತ್ರ, ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಜಲೀಲ್ ಕರೋಪಾಡಿಯವರ ಮೇಲೆ ಪಂಚಾಯತ್ ಆವರಣದಲ್ಲೇ ನಾಲ್ವರು ಮುಸುಕುಧಾರಿಗಳ ತಂಡ ತಲವಾರುಗಳಿಂದ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಲೀಲ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ಅಪಘಾತದಲ್ಲಿ ಇತ್ತೀಚೆಗೆ ಮೃತಪಟ್ಟ ಕೊಣಾಜೆ ಕುಂಟಾಳಗುಳಿಯ ಶೇಖರ್ ಅವರ ಕುಟುಂಬಕ್ಕೆ ಕುಂಟಾಳಗುಳಿಯ ಶ್ರೀ ಮಹಾಕಾಳಿ ಸೇವಾ ಮಂಡಳಿ(ರಿ) ಇದರ ವತಿಯಿಂದ ಸಹಾಯಧನವನ್ನು ವಿತರಿಸಲಾಯಿತು. ಕುಂಟಾಳಗುಳಿ ಶೇಖರ್ (23) ಅವರು ಕಳೆದ ಕೆಲವು ದಿನಗಳ ಹಿಂದೆ ಕೊಣಾಜೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಕಳೆದ ಕೆಲವು ವರ್ಷಗಳ ಹಿಂದೆ ಅವರ ತಂದೆಯೂ ಮೃತಪಟ್ಟಿದ್ದರು. ಕುಟುಂಬದ ಆಧಾರಸ್ಥಂಭವಾಗಿದ್ದ ಶೇಖರ್ ಅವರು ಮೃತಪಟ್ಟ ಕಾರಣ ಬಡ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಕುಂಟಾಳಗುಳಿಯ ಶ್ರೀ ಮಹಾಸೇವಾ ಮಂಡಳಿಯ ಪದಾಧಿಕಾರಿಗಳು ನಿರ್ಧರಿಸಿ ಧನ ಸಂಗ್ರಹಿಸಿ ಸುಮಾರು 22 ಸಾವಿರ ರೂಪಾಯಿಯ ಚೆಕ್ ಅನ್ನು ಶ್ರ ಮಹಾಕಾಳಿ ವನಸಾನಿಧ್ಯದ ಬಳಿ ಶೇಖರ್ ಅವರ ತಾಯಿಗೆ ಹಸ್ತಾಂತರಿಸಿದರು. ಈ ಸಂಭರ್ದದಲ್ಲಿ ಶ್ರೀ ಮಹಾಕಾಳಿ ಸೇವಾ ಮಂಡಳಿಯ ಅಧ್ಯಕ್ಷರಾದ ಶಂಕರ್ ಭಟ್, ಪದಾಧಿಕಾರಿಗಳಾದ ಶ್ರಿವಪ್ರಕಾಶ್ ಭಟ್, ಉದಯ ಶೆಟ್ಟಿ, ಉದಯ ಕೃಷ್ಣ, ಡಾ.ಎಸ್.ಎನ್.ಭಟ್, ಕೃಷ್ಣ ಭಟ್, ಶ್ರೀಧರ ಭಟ್, ಕೃಷ್ಣಪ್ಪ ಕಾನ, ಸುಧಾಕರ ಕಾನ,…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ದೇಶದ ಅಭಿವೃದ್ಧಿ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಸಂರಕ್ಷಣೆ ಮಾಡುವಲ್ಲಿ ಸಂಘ ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳು ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಸಪ್ತಸ್ವರ ಕಲಾತಂಡವು ಕಳೆದ ಹಲವಾರು ವರ್ಷದಿಂದ ಶಾರದಾ ಮಾತೆಯ ಆರಾಧನೆಯೊಂದಿಗೆ ವಿವಿಧ ಧಾರ್ಮಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. ಸಪ್ತಸ್ವರ ಕಲಾ ತಂಡ(ರಿ) ಶಾರದಾ ನಗರ ಕೊಣಾಜೆ ಇದರ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಗುರುವಾರ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು. ರಾಮಾಯಣ ಮಹಾಭಾರತ ಕಾಲದಲ್ಲೂ ರಾವಣ, ದುಶ್ಯಾಸನರಂತಹ ದುರುಳರು ಇದ್ದರು. ಅದೇ ರೀತಿ ಆಗಿನ ಕಾಲದಂತೆ ಇಂದಿನ ಕಾಲದಲ್ಲೂ ಸಮಾಜದಲ್ಲಿ ಉತ್ತಮರೂ ದುರುಳರೂ ಇದ್ದಾರೆ. ಆದ್ದರಿಂದ ಇಂತಹ ಸಂಘ ಸಂಸ್ಥೆಗಳ ಮೂಲಕ ಎಲ್ಲರಲ್ಲೂ ಉತ್ತಮ ಮನಸ್ಸುಗಳನ್ನು ನಿರ್ಮಾಣ ಮಾಡಿ ಸಮಾಜದ ಏಳಿಗಾಗಿ ಪ್ರಯತ್ನಿಸಬೇಕು ಎಂದರು. ಸಪ್ತಸ್ವರ ಕಲಾ ತಂಡದ ಗೌರವ ಸಲಹೆಗಾರ ರವೀಂದ್ರ ರೈ ಹರೇಕಳ, ಮಾಡೂರು ಸಾಯಿಧಾಮದ ಶ್ರೀ ಶಿರಡಿ ಸಾಯಿ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ರಾಜ್ಯದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರ ಎಂದೇ ಗುರುತಿಸಿಕೊಂಡಿದ್ದ ಉಳ್ಳಾಲ ಇಂದು ಕ್ಷೇತ್ರ ಬದಲಾವಣೆಯಿಂದಾಗಿ ಮಂಗಳೂರು ಕ್ಷೇತ್ರವಾಗಿ ಮಾರ್ಪಟ್ಟಿದೆ. ಆದರೆ ಯಾವ ಬದಲಾವಣೆಯ ಮಧ್ಯೆಯೋ ಕೇಸರಿ ಪಡೆಗೆ ಉಳ್ಳಾಲದಲ್ಲಿ ಬಿಜೆಪಿ ಧ್ವಜ ಹಾರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಯು.ಟಿ.ಖಾದರ್ ಖದರ್‍ಗೆ ಸದ್ದು ಹೊಡೆಯಲು ಕೇಸರಿ ಪಡೆ ಸಮರ್ಥ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಸಂಘ ಪರಿವಾರದ ಗರಡಿಯಲ್ಲಿ ಪಳಗಿದ ಸತ್ಯಜಿತ್ ಸುರತ್ಕಲ್‍ಗೆ ಟಿಕೆಟ್ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕ್ಷೇತ್ರ ಈಗಾಗಲೇ ಖಾದರ್ ವೈಯುಕ್ತಿಕ ವರ್ಚಸ್ಸಿನ ಮಧ್ಯೆ ಕಾಂಗ್ಸೆಸ್ ಪಕ್ಷದ ಗಟ್ಟಿತನದಿಂದ ಕೈ ಜಾರುತ್ತಿಲ್ಲ. ಹೀಗಾಗಿ ಜಯರಾಮ್ ಶೆಟ್ಟಿ ಬಿಟ್ಟರೆ ಬಿಜೆಪಿಯ ಯಾವೊಬ್ಬನಿಗೂ ಕಾಂಗ್ರೆಸ್ ಸಾಮಾಜ್ಯವನ್ನು ಧೂಳೀಪಟ ಮಾಡಲು ಸಾಧ್ಯವಾಗಿಲ್ಲ. ಜಾತಿ ಸಮೀಕರಣದ ಲೆಕ್ಕಚಾರಕ್ಕೆ ಬಂದರೂ ಇಲ್ಲಿನ ನಿರ್ಧರಿತ ಮತಗಳು ಅಲ್ಪ ಸಂಖ್ಯಾತ ಸಮುದಾಯದ ತೆಕ್ಕೆಯಲ್ಲಿದೆ. ಈ ಮಧ್ಯೆ ಖಾದರ್ ಎದುರು ಸ್ಪರ್ಧಿಸಿದ್ದ ಸ್ವಕ್ಷೇತ್ರದ ಒಂದಷ್ಟು ಬಿಜೆಪಿ ಕಲಿಗಳು ಹಿಂದಿನ ಚುನಾವಣೆಗಳಲ್ಲಿ ನೆಲಕಚ್ಚಿದ್ದರು. ಅಲ್ಲದೇ ಬಿಜೆಪಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಬಾಯಾರ್ : ಮುಜಮ್ಮಉ ಸ್ಸಖಾಫತಿ ಸುನ್ನಿಯ್ಯದಲ್ಲಿ ಸ್ವಲಾತ್ ಮಜ್ಲಿಸ್ ಹಾಗು ಮುಹಿಮ್ಮಾತ್ತ್ ಸಮ್ಮೇಳನ ಪ್ರಚಾರಣೆ ನಾಳೆ ಮಗ್‍ರಿಬ್ ನಮಾಝಿನ ನಂತರ ನಡೆಯಲಿದೆ ಎಂದು ಮೆನೇಜರ್ ಸಿದ್ಧೀಖ್ ಸಖಾಫಿ ಬಾಯಾರ್ ತಿಳಿಸಿದ್ದಾರೆ. ಅಸ್ಸಯ್ಯಿದ್ ಅಬ್ದುಲ್ ರಹ್ಮಾನ್ ಇಂಬಿಚ್ಚಿಕ್ಕೋಯ ತಂಙಳ್ ಅಲ್-ಬುಖಾರಿ ಸ್ವಲಾತ್ ಮಜ್ಲಿಸ್ ಹಾಗೂ ಸಾಮೂಹಿಕ ಪ್ರಾಥ9ನೆಗೆ ನೇತೃತ್ವ ವಹಿಸುವರು. ಪ್ರಮುಖ ಪಂಡಿತರೂ ವಾಗ್ಮಿಯೂ ಆದ ಮುಳ್ಳೂರ್‍ಕ್ಕರೆ ಮುಹಮ್ಮದಲಿ ಸಖಾಫಿ ಮುಖ್ಯ ಪ್ರಭಾಷಣೆ ಮಾಡಲಿದ್ದಾರೆ. ಸಿ ಅಬ್ದುಲ್ಲ ಮುಸ್ಲಿಯಾರ್, ಪಳ್ಳಂಗೋಡ್ ಅಬ್ದುಲ್ ಖಾದರ್ ಮದನಿ, ಬಾಯಾರ್ ಅಬ್ದುಲ್ಲ ಮುಸ್ಲಿಯಾರ್, ಜಬ್ಬಾರ್ ಸಖಾಫಿ ಪಾತೂರ್, ಸಯ್ಯಿದ್ ಮುನೀರುಲ್ ಅಹ್ದಲ್ , ಸ್ವಲಾಹುದ್ದೀನ್ ಅಯ್ಯೂಬಿ, ಸಿ ಎನ್ ಜಹ್ಫರ್ ಸ್ವಾದಿಖ್, ಸ್ವಾದಿಖ್ ಆವಳ, ಹಾರಿಸ್ ಹಿಮಮಿ ಪರಪ್ಪ , ಅಝೀಝ್ ಸಖಾಫಿ ಮಚ್ಚಂಪಾಡಿ , ಇಬ್ರಾಹಿಂ ಪೈಸಿ ಕನ್ಯಾನ, ಜಲೀಲ್ ಕರೋಪಾಡಿ, ಸಿದ್ದೀಖ್ ಸಖಾಫಿ ಬಾಯಾರ್ ,ಸಿದ್ದೀಖ್ ಹಾಜಿ ಮಂಗಳೂರು , ಸಿದ್ದೀಖ್ ಲತ್ವೀಫಿ ಮುಂತಾದವರು ಭಾಗವಹಿಸುವರು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಸಂತ ಜೋಸೆಫ್ ಜೋಯ್‍ಲ್ಯಾಂಡ್ ಶಾಲೆ, ಸೋಮೇಶ್ವರದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸ್ಥಳೀಯ ಸಂಸ್ಥೆ ಹಾಗೂ ಜೆಸಿಐ ಮಂಗಳಗಂಗೋತ್ರಿ ಜಂಟಿಯಾಗಿ ಮಂಗಳೂರು ತಾಲೂಕು ಮಟ್ಟದ ಎರಡು ದಿನಗಳ ರಾಜ್ಯ ಹಾಗೂ ರಾಷ್ಟ್ರಪತಿ ಪುರಸ್ಕಾರದಲ್ಲಿ ಭಾಗವಹಿಸಲು ಸಿದ್ಧತೆಗಾಗಿ ತರಬೇತಿ (ದಳ ರಾತ್ರಿ ತಂಗುವ ಶಿಬಿರ ಮತ್ತು ದಳ ರಾತ್ರಿ ಹೊರ ಸಂಚಾರ ಕಾರ್ಯಕ್ರಮ) ಶಿಬಿರ ಮಂಗಳವಾರ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಪ್ರಶಾಂತ ನಾಯ್ಕ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಭಾರತದಲ್ಲಿ 1909 ರಲ್ಲಿ ಪ್ರಾರಂಭವಾದ ಸ್ಕೌಟ್ ಚಳುವಳಿಗೆ ಶತಮಾನದ ಇತಿಹಾಸವಿದೆ. ಯುವ ಜನತೆಯು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕವಾಗಿ ಸಮೃದ್ಧಿ ಹೊಂದಲು ಸ್ಕೌಟ್ ಒಂದು ಉತ್ತಮ ವೇದಿಕೆಯಾಗಿದ್ದು, ದೇಶ ಸೇವೆಯಲ್ಲಿ ರಚನಾತ್ಮಕವಾಗಿ ಪಾಲ್ಗೊಳ್ಳಲು ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ. ಮಾತ್ರವಲ್ಲ ಜೀವನದಲ್ಲಿ ಎದುರಾಗುವ ಕಠಿಣ ಪರಿಸ್ಥಿತಿಗಳನ್ನು ಧೈರ್ಯ ಮತ್ತು ಜಾಣ್ಮೆಯಿಂದ ಎದುರಿಸುವ ಕೌಶಲ್ಯವನ್ನೂ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ` ನನ ಅರೆ ಮರ್ಲೆ ಪಂಡ್‍ದ್ ಲೆಪ್ಪೊಡ್ಚಿ ಮಾರ್ರೆ’ ತಾತ್ಪರ್ಯವೆಂದರೆ ಅರೆಹುಚ್ಚನೆಂದು ಕರೆಯಬೇಡಿ ಎಂದು ಪ್ರೇಕ್ಷಕರಲ್ಲಿ ವಿನಂತಿಸಿಕೊಂಡವರು ತುಳು ಚಿತ್ರರಂಗದ ಅಭಿನಯ ಚಕ್ರವರ್ತಿ ಅರ್ಜುನ್ ಕಾಪಿಕಾಡ್ . ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಇದರ ಆಶ್ರಯದಲ್ಲಿ ವಿವಿ ಕ್ಯಾಂಪಸ್ಸಿನ ಮಂಗಳ ಸಭಾಂಗಣದಲ್ಲಿ ಮಂಗಳವಾರದಿಂದ ಗುರುವಾರದವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಅಂತರ್ ವಿಭಾಗೀಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗಳ ` ಸಂಭ್ರಮ -2017 ‘ ಕ್ಕೆ ಮಂಗಳವಾರ ಚಾಲನೆಯನ್ನು ನೀಡಿದರು. ರಂಗ್ ಚಿತ್ರ ಪ್ರದರ್ಶನದ ಸಂದರ್ಭದಲ್ಲಿ ಹುಲಿ ಎಂದು ಕರೆಯುತ್ತಿದ್ದವರು ನಂತರ ಚಂಡಿಕೋರಿ ಚಿತ್ರದ ಸಂದರ್ಭದಲ್ಲಿ ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರು ಸಹ `ಕೋರಿ’ ಎಂದೇ ಕರೆಯುತ್ತಿದ್ದರು. ಅಷ್ಟಾಗಿ ಸದ್ಯದಲ್ಲೇ ಹೊಸ ಚಿತ್ರ ಅರೆ ಮರ್ಲೆ ಬಿಡುಗಡೆಯಾಗುತ್ತಿದ್ದು, ಮುಂದೆ ನನ್ನನ್ನು ` ಅರೆ ಮರ್ಲೆ’ ಎಂದು ಕರೆಯದಿರಿ ಎಂದು ಹಾಸ್ಯದ ಮಾತುಗಳಿಂದಲೇ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ನಗೆಗಡಲಲ್ಲಿ ತೇಲಿಸಿಬಿಟ್ಟರು. ಅಪ್ಪ ದೇವದಾಸ್…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಪೆರ್ಮನ್ನೂರು: ಪೆರ್ಮನ್ನೂರಿನ ಸಂತ ಸೆಬೆಸ್ತಿಯನ್ನರ ಚರ್ಚಿನಲ್ಲಿ ಈಸ್ಟರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಫಾ| ಎಡ್ವಿನ್ ಮಸ್ಕರೇನ್ಹಸ್ ಬಲಿಪೂಜೆ ನೆರವೇರಿಸಿದರು. ಫಾ| ನಿಲೇಶ್ ಕ್ರಾಸ್ತಾರವರು ಹಬ್ಬದ ಸಂದೇಶ ನೀಡಿದರು. ಫಾ| ಜೆ.ಬಿ ಸಲ್ಡಾನರವರು ಸ್ಥಾನ ದೀಕ್ಷೆಯ ಸಂಸ್ಕಾರವನ್ನು ನೆರವೇರಿಸಿದರು. ಫಾ| ಪ್ರವೀಣ್ ಜೋಯ್ ಸಲ್ಡಾನ, ಫಾ .ಜೆರಾಯ್ಡ್ ಡಿ’ಸೋಜ, ಉಪಯೋಜಕ ರವಿ ರಿಚ್ಚರ್ಡ್ ಫರ್ನಾಂಡಿಸ್ ಹಬ್ಬದ ಅಚರಣೆಯಲ್ಲಿ ಪಾಲ್ಗೊಂಡಿದ್ದರು. ಫೋಟೋ ಸ್ಟಾರ್ ಸ್ಟುಡಿಯೋ

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ಎದೆಗೆ ಗುಂಡು ಬಿದ್ದರೂ ಹೆದರದೇ ಮುಂದಿರುವ ಶತ್ರುವನ್ನು ಮುಗಿಸುವ ಧೈರ್ಯವನ್ನು ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಸೈನ್ಯಕ್ಕೆ ತೆರಳುವ ಯುವ ಜನಾಂಗಕ್ಕೆ ಸ್ಪೂರ್ತಿ ನೀಡಿದ್ದಾರೆ ಎಂದು ಒಡಿಯೂರು ಶ್ರೀ ಗುರುದೇವ ಸಂಸ್ಥಾನ ಮಠದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ದೇಶಕ್ಕಾಗಿ ಜಮ್ಮು ಕಾಶ್ಮೀರದ ಪಾಂಪೋರ್ ಬಳಿ ಭಯೋತ್ಪಾದಕರೊಂದಿಗೆ ಪರಸ್ಪರ ಹೋರಾಟ ನಡೆಸುತ್ತಿದ್ದ ಸಂದರ್ಭ ಐದು ಗುಂಡು ತಗುಲಿ ಸುಮಾರು ಐದೂವರೆ ತಿಂಗಳ ಕೋಮದಲ್ಲಿ ಇದ್ದು ಬಳಿಕ ಚೇತರಿಸಿಕೊಂಡು ತನ್ನ ತವರೂರಾದ ಮುಡಿಪಿಗೆ ಆಗಮಿಸಿರುವ ವೀರಯೋಧ ಸಂತೋಷ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು. ದೇಶ ಕಟ್ಟುವ ಕಾರ್ಯದೊಂದಿಗೆ ದೇಶ ಸಂರಕ್ಷಣೆಯ ಕಾರ್ಯ ಮಹತ್ವದ್ದಾಗಿದ್ದು, ದೇಶಕ್ಕಾಗಿ ಸೈನಿಕರು ಗಡಿ ಭಾಗದಲ್ಲಿ ಸಂಪೂರ್ಣ ಅರ್ಪಣಾ ಭಾವದಿಂದ ಜೀವನವನ್ನು ದೇಶಕ್ಕೆ ಮುಡಿಪಾಗಿಟ್ಟಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದ ಅವರು ದೇಶ ಸೇವೆಗೆ ತೊಡಗಿಸಿಕೊಳ್ಳಲು ಸಂತೋಷ್ ಅವರ ತಾಯಿ ಮತ್ತು ಪತ್ನಿಯ ತ್ಯಾಗ ಮನೋಭಾವನೆಯಿಂದ ಸಾಧ್ಯವಾಗಿದೆ ಎಂದರು. ಇದೇ ಸಂದರ್ಭ ಯೋಧನನ್ನು…

Read More