ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಾಡೂರು: ನಗರದ ಸಬ್ ಜೈಲಿನಲ್ಲಿ ಖೈದಿಗಳಿಂದ ಹತ್ಯೆಗೀಡಾದ ಹಲವು ಪ್ರಕರಣಗಳ ಆರೋಪಿ ಮಾಡೂರು ಇಸುಬು ಅಂತಿಮ ಸಂಸ್ಕಾರ ಮಾಡೂರಿನ ಮಸೀದಿಯಲ್ಲಿ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ತೊಕ್ಕೊಟ್ಟು, ಬೀರಿ, ಕೋಟೆಕಾರು, ಮಾಡೂರು ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ಬಿಗಿಬಂದೋಬಸ್ತನ್ನು ಏರ್ಪಡಿಸಲಾಗಿತ್ತು. ಮಾಡೂರು ನಿವಾಸಿ ಯೂಸುಫ್ ಯಾನೆ ಇಸುಬು (42) ಕುರಿತು ಉಳ್ಳಾಲ ಠಾಣೆಯಲ್ಲಿ ಹಲವು ಪ್ರಕರಣಗಳಿದ್ದು, ಕೆಲವು ವಿಚಾರಣೆ ಹಂತದಲ್ಲಿದ್ದರೆ ಕೆಲವು ಬಿದ್ದು ಹೋಗಿದೆ. ಕಿನ್ಯಾ ನಿವಾಸಿ ಸಹೋದರರಿಬ್ಬರ ಡಬಲ್ ಮರ್ಡರ್ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಾಡೂರು ಯೂಸುಫ್ ಬಳಿಕ ಮತೀಯ ಸಂಘರ್ಷದಲ್ಲಿ ಗುರುತಿಸಿಕೊಂಡಿದ್ದ. ಬಿಜೆಪಿ ಮುಖಂಡ ರೋರ್ವರ ಕೊಲೆ ಯತ್ನ ಪ್ರಕರಣ, ವಿವಾಹಿತೆ ಮುಸ್ಲಿಂ ಮಹಿಳೆಯ ಕೊಲೆ ಪ್ರಕರಣ ಮತ್ತು ಹಫ್ತಾ ಬೆದರಿಕೆ ಕುರಿತು ಹಲವು ಪ್ರಕರಣಗಳು ಈತನ ಮೇಲಿದೆ. ಕೆಲ ಪ್ರಕರಣಗಳಲ್ಲಿ ಈತನೇ ಭಾಗಿಯಾಗಿದ್ದರೆ, ಇನ್ನು ಹಲವು ಪ್ರಕರಣಗಳಲ್ಲಿ ವಿದೇಶದಲ್ಲಿದ್ದುಕೊಂಡು ಬೆಂಬಲ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಮತೀಯ ಗಲಭೆಗೆ ಸಂಬಂಧಿಸಿದಂತೆ ಪ್ರತೀಕಾರಕ್ಕಾಗಿ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದವರು ಒಳ್ಳೆಯ ಡಾಕ್ಟರ್ ಆಗಲು ಸಾಧ್ಯವಿಲ್ಲ. ಅವರು ಒಳ್ಳೆಯ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಲು ಮಾತ್ರ ಸತ್ಯ. ಕನ್ನಡದಲ್ಲಿ ಯಾರು ಕಲಿಯುತ್ತಾರೆಯೋ ಅವರು ತಮ್ಮ ತಂದೆ ತಾಯಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಆಂಗ್ಲ ಭಾಷೆಯಲ್ಲಿ ಶಿಕ್ಷಣ ಪಡೆದವರು ತಮ್ಮ ತಂದೆ ತಾಯಿಗಳನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಾರೆ. ಎಂದು ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಪುರಸ್ಕ ೃತ ಸಾಹಿತಿ ಡಾ. ಕುಂ. ವೀರಭದ್ರಪ್ಪ ಖೇದ ವ್ಯಕ್ತಪಡಿಸಿದರು. ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಹಾಗೂ ಸಾಂಸ್ಕ ೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ವೆಯೊಂದರ ಪ್ರಕಾರ ಪ್ರಾದೇಶಿಕ ಭಾಷೆಗಳಲ್ಲಿ ಕಲಿತವರು, ಗ್ರಾಮೀಣ ಭಾಷೆಯಲ್ಲಿ ಬೆಳೆದವರು, ಕಲೆ ಮೊದಲಾದ ವಿಷಯದಲ್ಲಿ ಶಿಕ್ಷಣ ಪಡೆದವರು ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದು ಹೇಳಿದೆ. ಆದರೆ ಆಂಗ್ಲ ಭಾಷೆಯಲ್ಲಿ ಶಿಕ್ಷಣ ಪಡೆದ ಮಕ್ಕಳ ಪೋಷಕರು ತಮ್ಮ ಸಾವಿನ ನಂತರ ದೇಹವನ್ನು ದಾನ ಮಾಡಲು ಮುಂದಾಗುತ್ತಾರೆ. ಅದಕ್ಕೆ ಬೇಕಾದ ದಾಖಲೆ ಸಿದ್ಧಪಡಿಸಿರುತ್ತಾರೆ.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸುಧಾನ ಪ್ರೌಢಶಾಲೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17ರ ವಯೋಮಿತಿಯ ಬಾಲಕಿಯರ 48-52ಕೆಜಿ ವಿಭಾಗದಲ್ಲಿ ಉಳ್ಳಾಲದ ಭಾರತಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ದಿಯಾ ಡಿ.ಪ್ರಥಮ ಸ್ಥಾನ ಪಡೆದಿದ್ದಾರೆ. ಡಿ. 7ರಿಂದ 11ರ ವರೆಗೆ ಪಂಜಾಬ್ನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಉಳ್ಳಾಲದ ದಿನಕರ್ ಡಿ ಹಾಗೂ ಧನಲಕ್ಷ್ಮೀಯವರ ಸುಪುತ್ರಿ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು : ಭಾರತ ಇಂದು ಏಕತೆಯ ದಾರಿಯಲ್ಲಿ ನಡೆಯುತ್ತಿಲ್ಲ. ಮತೀಯ ಗಲಭೆಗಳು, ಅಸ್ಪøಶ್ಯತೆ ಇನ್ನು ಇರುವುದು ನಿಜವಾಗಲೂ ದುರಂತ. ಸ್ವತಂತ್ರ ಹೋರಾಟಗಾರರ ಕನಸು ನನಸಾಗಬೇಕಾದರೆ ಅವರ ವಿಚಾರಗಳನ್ನು ತಿಳಿದು ಮೈಗೂಡಿಸಿಕೊಳ್ಳಬೇಕು ಎಂದು ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಾಸುದೇವ ಉಚ್ಚಿಲ್ ಹೇಳಿದರು. ಅವರು ಜೈ ಹನುಮಾನ್ ಕ್ರೀಡಾಮಂಡಳಿ ಬಟ್ಟೆದಡಿ ಕುತ್ತಾರು ಹಾಗೂ ನೆಹರೂ ಯುವ ಕೇಂದ್ರ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಉದ್ಘಾಟಿಸಿದರು. ವಲ್ಲಭಬಾಯಿ ಪಟೇಲರು ಕಂಡ ಏಕೀಕರಣದ ಕನಸ್ಸು ಮೆಚ್ಚುವಂತದ್ದು, ಅದು ಕಾರ್ಯರೂಪಕ್ಕೆ ಬಂದಲ್ಲಿ ಭಾರತದ ಅಭಿವೃದ್ಧಿಯನ್ನು ಊಹಿಸಲು ಸಾಧ್ಯವಾಗುತ್ತಿರಲಿಲ್ಲ. ಅದೇ ಕಾರಣಕ್ಕಾಗಿ ಹೈದರಾಬಾದ್, ಕಾಶ್ಮೀರ, ಜುನಾಗಡಕ್ಕೆ ಸೈನ್ಯ ಮೂಲಕ ಯುದ್ಧ ಸಾರಿ ಭಾರತಕ್ಕೆ ಸೇರಿಸಿದರು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಚೂರು ಕಾಲೇಜಿನ ಉಪನ್ಯಾಸಕ ಜೀವನ್ ರಾಜ್ ಕುತ್ತಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆಹರೂ ಯುವ ಕೇಂದ್ರದ ತಾಲೂಕು ಕೋ-ಆರ್ಡಿನೇಟರ್ ಆದ ರಘುವೀರ್ ಸೂಟರ್ಪೇಟೆ, , ಮುನ್ನೂರು ಪಂ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸಬ್ ಜೈಲಿನಲ್ಲಿ ನಡೆದ ಮಾರಾಮಾರಿ ಪ್ರಕರಣ ಹಾಗೂ ಇಬ್ಬರು ಖೈದಿಗಳ ಹತ್ಯೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದ್ದು, ಘಟನೆಗೆ ಕಾರಣರಾದವರನ್ನು ಕಠಿಣ ಸಜೆಗೆ ಒಳಪಡಿಸಬೇಕೆಂದು ಆಗ್ರಹಿಸಿದೆ. ಪ್ರಕರಣ ಸಬ್ ಜೈಲಿನ ಭದ್ರತೆಯ ಲೋಪವನ್ನು ಎತ್ತಿ ತೋರಿಸುತ್ತದೆ. ವಿಚಾರಣಾಧೀನ ಖೈದಿಗಳಿಗೆ ಪೂರ್ಣ ಭದ್ರತೆಯನ್ನು ನೀಡುವುದು ಜೈಲಿನ ಅಧಿಕಾರಿಗಳ ಗುರುತರ ಹೊಣೆಯಾಗಿದೆ. ಆದರೆ ಘಟನೆಯು ಜಿಲ್ಲಾಡಳಿತದ ವೈಫಲ್ಯವನ್ನು ಸೂಚಿಸುತ್ತದೆ. ಘಟನೆಗೆ ಸರಕಾರ ನೇರ ಹೊಣೆ ಎಂದು ಆರೋಪಿಸಿದೆ. ಮೃತರ ಕುಟುಂಬಗಳಿಗೆ ತಲಾ 50 ಲಕ್ಷ ರೂ ಪರಿಹಾರವನ್ನು ಒದಗಿಸಬೇಕೆಂದು ಸಂಘಟನೆ ಆರೋಪಿಸಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಗಳೂರು: ಮೂವರು ಹಿಂದೂ ಸಂಘಟನೆ ಬೆಂಬಲಿತ ಪೊಳಲಿ ಅನಂತು, ಉಳ್ಳಾಲದ ನರಸಿಂಹ ಶೆಟ್ಟಿಗಾರ್, ಬಂಟ್ವಾಳದ ಕ್ಯಾಂಡಲ್ ಸಂತು ಮತ್ತು ಮುಸ್ಲಿಂ ವಿವಾಹಿತೆಯ ಕೊಲೆ ಸಹಿತ 30ಕ್ಕೂ ಅಧಿಕ ಪ್ರಕರಣಗಳಲ್ಲಿ ವಿಚಾರಣಾಧೀನ ಖೈದಿಯಾಗಿದ್ದ ಮಾಡೂರು ನಿವಾಸಿ ಇಸುಬು(42) ಸಹಿತ ವೆಲೆನ್ಶಿಯಾದಲ್ಲಿ ಬಿಜೈ ರಾಜಾ ಹತ್ಯೆಗೆ ಪ್ರತೀಕಾರವಾಗಿ ನಡೆದ ಪ್ರಶಾಂತ್ ಯಾನೆ ಪಚ್ಚು ಹತ್ಯೆಯಲ್ಲಿ ಭಾಗಿಯಾಗಿದ್ದ ಗಣೇಶ್ ಶೆಟ್ಟಿ ಎಂಬ ಖೈದಿಗಳನ್ನು ವಿಕ್ಕಿ ಶೆಟ್ಟಿ ತಂಡದ ಸಹಚರರೆನ್ನಲಾದ ಖೈದಿಗಳು ಜೈಲಿನಲ್ಲೇ ಹತ್ಯೆ ನಡೆಸಿದ್ದಾರೆ. ಮುಖ ತೊಳೆಯುವಾಗ ಕೃತ್ಯ ಎಸಗಿದರು : ಜೈಲೊಳಗೆ ಎರಡು ಬಣಗಳಿದ್ದು, ಅದರಲ್ಲಿ ಒಂದು ತಂಡವನ್ನು ಹಳೇ ಜೈಲಿನಲ್ಲಿರಿಸಲಾಗಿದ್ದರೆ, ಇನ್ನೊಂದು ತಂಡ ನೂತನ ಜೈಲಿನಲ್ಲಿದೆ. ಹಳೇ ಜೈಲಿನಲ್ಲಿ ಮಾಡೂರು ಇಸುಬು, ಸಹಿತ ವಳಚ್ಚಿಲ್ ಜಿಯಾ ಕೊಲೆ ಆರೋಪಿಗಳು ಮತ್ತು ಬಾಳಿಗಾ ಶೂಟೌಟ್ ಪ್ರಕರಣದಲ್ಲಿ ಬಂಧಿತ ಝೂಲ್ಫೀಕರ್ ಹಾಗೂ ಹಲವರು ಮುಸ್ಲಿಂ ಖೈದಿಗಳೇ ಜಾಸ್ತಿಯಾಗಿದ್ದು, ಜತೆಗೆ ಗಣೇಶ್ ಶೆಟ್ಟಿ ಕೂಡಾ ಇದ್ದರು. ಇಂದು ಬೆಳಿಗ್ಗೆ ಮಾಡೂರು ಇಸುಬು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಭೋಪಾಲ್: ಭಿಕ್ಷೆ ಬೇಡುತ್ತಿದ್ದ ಬಾಲಕನಿಗೆ ಮಧ್ಯ ಪ್ರದೇಶದ ಪಶುಸಂಗೋಪನೆ ಸಚಿವೆ ಕುಸುಮ್ ಮೆಹೆದೆಲೆ ಕಾಲಿನಿಂದ ಒದ್ದಿರುವ ಘಟನೆ ನಡೆದಿದೆ. ಪನ್ನಾ ಜಿಲ್ಲೆಯಲ್ಲಿ ೬೦ನೇ ರಾಜ್ಯ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಸ್ವಚ್ಛ ಅಭಿಯಾನದಲ್ಲಿ ಭಾಗವಹಿಸಿದ್ದ ಸಚಿವೆ ಕಾರ್ಯಕ್ರಮದ ಮುಗಿದ ಬಳಿಕ ತನ್ನ ಕಾರಿನ ಬಳಿ ಬರುತ್ತಿದ್ದ ಸಂದರ್ಭದಲ್ಲಿ ೧೦ವರ್ಷ ಪ್ರಾಯದ ಬಾಲಕ ಭಿಕ್ಷೆ ನೀಡುವುದಾಗಿ ಕೇಳಿದ್ದಾನೆ ಈ ವೇಳೆ ಸಚಿವೆ ಬಾಲಕನನ್ನು ಕಾಲಿನಿಂದ ಒದ್ದು ತನ್ನ ಕಾರಿನಲ್ಲಿ ಕುಳಿತುಕೊಂಡು ಹೋದ ದೃಶ್ಯ ವೀಡಿಯೋ ಒಂದರಲ್ಲಿ ಬಹಿರಂಗವಾಗಿದ್ದು, ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ. ಸಚಿವೆಯ ಈ ವರ್ತನೆಗೆ ದೇಶದ್ಯಾಂತ ಆಕ್ರೋಶ ವ್ಯಕ್ತವಾಗಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬೆಂಗಳೂರು: ಚಾಕು ಹಿಡಿದುಕೊಂಡು ಮುಖ್ಯಮಂತ್ರಿ ಮನೆಗೆ ಬಂದಿದ್ದ ವ್ಯಕ್ತಿಯೋರ್ವನನ್ನು ಸಿಎಂ ನಿವಾಸದ ಭದ್ರತಾ ಸಿಬ್ಬಂದಿಗಳು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ. ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬ, ಸಿಎಂ ನಿವಾಸ ಪ್ರವೇಶಿಸಲು ಯತ್ನಿಸುತ್ತಿದ್ದು, ಈ ಸಂದರ್ಭದಲ್ಲಿ ಆತನು ತನ್ನ ಜೇಬಿನಲ್ಲಿ ಚೂರಿಯನ್ನು ಇರಿಸಿಕೊಂಡಿದ್ದನ್ನು ಗಮನಿಸಿದ ಸಿಬ್ಬಂದಿಗಳು ಕೂಡಲೇ ಆತನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಹೈಗ್ರೌಂಡ್ ಪೊಲೀಸರ ವಶದಲ್ಲಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈತನು ಯಾವ ಉದ್ದೇಶದಿಂದ ಚೂರಿಯನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಮನೆಯನ್ನು ಪ್ರವೇಶಿಸಲು ಯತ್ನಿಸಿದ್ದ ಎಂಬ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ : ವ್ಯಕ್ತಿಗಿಂತ ಪಕ್ಷ ಶ್ರೇಷ್ಠ, ಪಕ್ಷಕ್ಕಿಂತ ದೇಶ ಶ್ರೇಷ್ಠ , ಪಕ್ಷದ ಸದಸ್ಯನಾಗಿ, ಸದಸ್ಯ ಕಾರ್ಯಕರ್ತನಾಗಿ, ಕಾರ್ಯಕರ್ತ ಆದರ್ಶ ನಾಯಕನಾಗಿ ರೂಪುಗೊಳ್ಳುವುದು ಪ್ರಶಿಕ್ಷಣ ವರ್ಗದ ಉದ್ದೇಶ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು. ಅವರು ಭಾರತೀಯ ಜನತಾ ಪಕ್ಷದ ಮಂಗಳೂರು ವಿಧಾನಸಭಾ ಕ್ಷೇತ್ರದ ಪ್ರಶಿಕ್ಷಣ ವರ್ಗವನ್ನು ತಲಪಾಡಿ ಶಾರದಾ ವಿದ್ಯಾನಿಕೇತನದಲ್ಲಿ ಭಾನುವಾರ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭೆ ಮಾಜಿ ಸದಸ್ಯೆ ಲಲಿತಾ ಸುಂದರ್ ವಹಿಸಿದ್ದರು. ಕ್ಷೇತ್ರದ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ಕುಂಪಲ ಉಪಸ್ಧಿತರಿದ್ದರು. ಹರೀಶ್ ಅಂಬ್ಲಮೊಗರು ಹಾಗೂ ಯಶವಂತ್ ಅಮೀನ್ ಕಾರ್ಯಕ್ರಮ ನಿರ್ವಹಿಸಿದರು. ಪ್ರವೀಣ್ ಸುಜೀರ್ ಸ್ವಾಗತಿಸಿದರು. ಹರಿಯಪ್ಪ ಸಾಲ್ಯಾನ್ ವಂದಿಸಿದರು
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೋಟೆಕಾರು: ಕೋಟೆಕಾರು ಗ್ರಾಮ ಪಂಚಾಯತ್ ಪ್ರಥಮವಾಗಿ ತ್ಯಾಜ್ಯಮುಕ್ತ ಗ್ರಾಮ ಪಂಚಾಯತ್ ಆಗಬೇಕು. ತ್ಯಾಜ್ಯ ಮುಕ್ತ ಗ್ರಾಮ ಪಂಚಾಯತ್ ಆಗಿ ರೂಪಿಸಬೇಕಾದರೆ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರ ಸಹಕಾರ ಇದ್ದರೆ ತ್ಯಾಜ್ಯಮುಕ್ತ ಪಟ್ಟಣ ಪಂಚಾಯತ್ ಆಗುತ್ತದೆ. ಅದೇ ರೀತಿ ವ್ಯಾಜ್ಯ ಮುಕ್ತ ಗ್ರಾಮವಾಗಿ, ರುಣ ಮುಕ್ತ ಗ್ರಾಮ ಪಂಚಾಯತ್ ಆಗಲು ಎಲ್ಲರೂ ಪಣ ತೊಡಬೇಕು ಮಾತ್ರವಲ್ಲದೆ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಕೋಟೆಕಾರು ಬೀರಿಯ ಯುವಕ ಮಂಡಲ ವಠಾರದಲ್ಲಿ ಕೋಟೆಕಾರು ಗ್ರಾಮ ಪಂಚಾಯತ್ ಅನ್ನು ಕೋಟೆಕಾರು ಪಟ್ಟಣ ಪಂಚಾಯತ್ ಮೇಲ್ದರ್ಜೆಗೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸ್ಥಳೀಯ ಶಾಸಕರೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರಿಗೆ ಕೋಟೆಕಾರ್ ಪಟ್ಣಣ ಪಂಚಾಯತ್ನ ನಾಗರಿಕ ಸಮಿತಿ ಕೋಟೆಕಾರು ಇದರ ಆಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕೋಟೆಕಾರು ಗ್ರಾಮವನ್ನು ಪಟ್ಟಣ ಪಂಚಾಯತ್…

