ಬೀಜಿಂಗ್: ಸುಮಾರು 35 ವರ್ಷಗಳ ಬಳಿಕ `ದಂಪತಿಗೆ ಒಂದೆ ಮಗು` ಅನ್ನೋ ವಿವಾದಾತ್ಮಕ ನೀತಿಯನ್ನು ಚೀನಾ ಸರಕಾರ ರದ್ದುಗೊಳಿಸಿದೆ. ದಂಪತಿಗಳಿಬ್ಬರು ಎರಡು ಮಗುವನ್ನು ಹೊಂದಲು ಚೀನಾದ ಕಮ್ಯೂನಿಷ್ಟ್ ಸರಕಾರ ಅವಕಾಶ ಮಾಡಿಕೊಟ್ಟಿದೆ. ಜನಸಂಖ್ಯೆ ಸಮತೋಲನ ಹಾಗೂ ವೃದ್ಧರ ಸಂಖ್ಯೆ ಏರಿಕೆ ಸಮಸ್ಯೆಯನ್ನು ನಿಭಾಯಿಸುವ ಸಲುವಾಗಿ ಈ ನೀತಿಯನ್ನು ಹಿಂಪಡೆಯಲಾಗಿದೆ. 1979ರಲ್ಲಿ ದಂಪತಿಗೆ ಒಂದೆ ಮಗು ಎಂಬ ನೀತಿಯನ್ನು ಚೀನಾ ಸರಕಾರ ಜಾರಿಗೊಳಿಸಿತ್ತು. ಕಳೆದ ಮೂರು ದಶಕಗಳಿಂದ ಸರಕಾರದ ಈ ನೀತಿಯನ್ನು ಅಲ್ಲಿನ ಜನತೆ ಕಡ್ಡಾಯವಾಗಿ ಪಾಲಿಸಿಕೊಂಡು ಬರಲಾಗುತ್ತಿತ್ತು. ಎರಡು ಮಗುವನ್ನು ಪಡೆಯುವ ದಂಪತಿಗೆ ಭಾರಿ ಮೊತ್ತದ ದಂಡ ಹಾಗೂ ಉದ್ಯೋಗದಿಂದ ತೆಗೆಯುವ ಶಿಕ್ಷೆಗೆ ಗುರಿಪಡಿಸಲಾಗುತ್ತಿತ್ತು. ಸರಕಾರದ ಈ ನೀತಿಯಿಂದ ಎಲ್ಲರೂ ಕೂಡ ಒಂದೇ ಮಗುವನ್ನು ಪಡೆಯುತ್ತಿದ್ದು, ಸುಮಾರು 40ಕೋಟಿ ಮಗುವಿನ ಜನನಕ್ಕೆ ಕಡಿವಾಣ ಬಿದ್ದಿದೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ಚೀನಾದಲ್ಲಿ ವೃದ್ಧರ ಸಂಖ್ಯೆ ಹೆಚ್ಚಳ, ಉದ್ಯೋಗಕ್ಕೆ ಯುವಕರ ಸಂಖ್ಯೆ ಕಡಿಮೆಯಾದುದರ ಪರಿಣಾಮ ಅಭಿವೃದ್ಧಿ ದರ ಇಳಿಕೆಗೆ ಕಾರಣವಾಗಿತ್ತು. ಸರಕಾರದ ಈ ನೀತಿಯ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು:ತೊಕ್ಕೊಟ್ಟು ಜಂಕ್ಷನ್ ಬಳಿ ಗುರುವಾರ ಟಿಪ್ಪರ್ ಲಾರಿಯೊಂದಕ್ಕೆ ಆ್ಯಕ್ಟಿವಾ ಸ್ಕೂಟರ್ ಸಿಲುಕಿಕೊಂಡು ಸ್ಕೂಟರ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಸಂಶೋಧನಗೆಳಲ್ಲಿ ಬಲವಾದ ವೈಜ್ಞಾನಿಕ ಆಧಾರಗಳ ಅಭಿವೃದ್ಧಿ ಜತೆಗೆ ಮೂಲಭೂತ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಲಂಡನ್ನಿನ ಯುನೈಟೆಡ್ ಕಿಂಗ್ಡಂ ನ ವೆಲ್ಕಂ ಟ್ರಸ್ಟ್ನ ಹಿರಿಯ ಸಲಹೆಗಾರ ಡಾ.ಶಿರ್ಷೇಂಧು ಮುಖರ್ಜಿ ಹೇಳಿದ್ದಾರೆ. ಅವರು ನಿಟ್ಟೆ ವಿಶ್ವವಿದ್ಯಾನಿಲಯದ ಕೆ.ಎಸ್. ಮೆಡಿಕಲ್ ಅಕಾಡೆಮಿ ನೇತೃತ್ವದಲ್ಲಿ ನಿಟ್ಟೆ ವಿ.ವಿ.ಯ ಕೇಂದ್ರ ಸಂಶೋಧನಾ ಪ್ರಯೋಗಾಲಯ ಮತ್ತು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ` ವೈದ್ಯಕೀಯ ಸಂಶೋಧನಾ ವಿಧಾನ’ ಕುರಿತ ರಾಷ್ಟ್ರೀಯ ಮಟ್ಟದ ಎರಡು ದಿನಗಳ ಕಾರ್ಯಗಾರವನ್ನು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಡಿಟೋರಿಯಂನಲ್ಲಿ ಉದ್ಘಾಟಿಸಿ ಮಾತನಾಡಿದರು. ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಚಾರಿಟಿಯಾಗಿ ವೆಲ್ಕಂ ಟ್ರಸ್ಟ್ ಮಾನವ ಜೀವನದ ಸಂಪತ್ತು ಕುರಿತು ಕೆಲಸಗಳನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದೆ. ಸಂಶೋಧನೆಗಳಲ್ಲಿ ಎಲ್ಲರೂ ಒಂದೇ ವಿಷಯದಲ್ಲಿ ಮುಂದುವರಿದಲ್ಲಿ ಪರಿಣಾಮಕಾರಿಯಾಗದು. ಒಂದೇ ವಿಷಯವನ್ನು ವಿಭಿನ್ನವಾಗಿ ಯೋಚಿಸಿ ಸಂಶೋಧನೆಗಳಲ್ಲಿ ತೊಡಗಿಸಿಕೊಂಡಲ್ಲಿ ಯಶಸ್ವಿಯಾಗಬಹುದು ಎಂದರು. ಕ್ಷೇಮ ಡೀನ್ ಡಾ.ಸತೀಶ್ ಕುಮಾರ್ ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ತಜ್ಞೆ ಡಾ.ವಿಜಯಾ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2015ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಹೊಸ್ತೋಟ ಮಂಜುನಾಥ ಭಾಗವತ, ಮಾರ್ಗೋಳಿ ಗೋವಿಂದ ಶೇರೆಗಾರ, ಸಂಪಾಜೆ ಶೀನಪ್ಪ ರೈ ಮತ್ತು ಲೀಲಾವತಿ ಬೈಪಾಡಿತ್ತಾಯ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಡಾ.ಮೋಹನ ಕುಂಟಾರ್ ಅವರ ಯಕ್ಷಗಾನ ಸ್ಥಿತ್ಯಂತರ ಕೃತಿಯು ಆಯ್ಕೆಯಾಗಿದೆ. ಯಕ್ಷಮಂಗಳ ಪ್ರಶಸ್ತಿಯು ರೂ.25,000/- ನಗದು, ಪ್ರಶಸ್ತಿಪತ್ರ, ಸ್ಮರಣಿಕೆ ಮತ್ತು ಸನ್ಮಾನಗಳನ್ನು ಒಳಗೊಂಡಿದ್ದು ಕೃತಿ ಪ್ರಶಸ್ತಿಯು ರೂ.10,000/-ನಗದು, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆಗಳನ್ನು ಒಳಗೊಂಡಿದೆ. ಹಿರಿಯ ವಿದ್ವಾಂಸ ಪ್ರೊ.ಎಂ.ಎಲ್.ಸಾಮಗ ಅವರ ನೇತೃತ್ವದ ಆಯ್ಕೆ ಸಮಿತಿಯು ಯಕ್ಷಗಾನ ವಿದ್ವಾಂಸ ಪ್ರೊ.ಪಾದೆಕಲ್ಲು ವಿಷ್ಣುಭಟ್ಟ, ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಕೆ.ಚಿನ್ನಪ್ಪ ಗೌಡ ಅವರನ್ನು ಒಳಗೊಂಡಿದ್ದು ಈ ಹೆಸರುಗಳನ್ನು ಸರ್ವಾನುಮತದಿಂದ ಶಿಫಾರಸ್ಸು ಮಾಡಿದೆ. ಹೊಸ್ತೋಟ ಮಂಜುನಾಥ ಭಾಗವತರು ಯಕ್ಷಗಾನ ಅಧ್ಯಯನ, ಸಂಶೋಧನೆ ಮತ್ತು ಪ್ರಸಂಗ ರಚನೆಯ ಮೂಲಕ ಯಕ್ಷಗಾನಕ್ಕೆ ಮಹತ್ವದ ಕೊಡುಗೆ ನೀಡಿದ ವಿದ್ವಾಂಸರಾಗಿದ್ದಾರೆ. ಮೂರು ದಶಕಗಳಿಗೂ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಜಂಕ್ಷನ್ನಲ್ಲಿ ಭಾನುವಾರ ತಡರಾತ್ರಿ ನಡೆದ ವಿಕ್ಕಿ ಬೋಳಾರ್ ಕೊಲೆ ಪ್ರಕರಣಕ್ಕೆ ಸಂಬಂ„ಸಿದಂತೆ ಪ್ರಮುಖ ಅರೋಪಿ ಸೈಕೋ ವಿಕ್ಕಿ ಯಾನೆ ರವಿಚಂದ್ರ ಪೂಜಾರಿ ಸೇರಿದಂತೆ ಐವರನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸಾಂದರ್ಭಿಕ ಚಿತ್ರ ಕೋಡಿಕಲ್ ನಿವಾಸಿ ವಿಕ್ರಮ್ ಯಾನೆ ವಿಕ್ಕಿ ಬೋಳಾರ್ನನ್ನು ಸೈಕೋ ವಿಕ್ಕಿ ನೇತೃತ್ವದ ತಂಡ ತಲವಾರಿನಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿತ್ತು. ಕೃತ್ಯಕ್ಕೆ ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಎಲಿಯಾರ್ ಬಳಿ ತೊರೆದು ಹೋಗಿದ್ದರು. ಆರೋಪಿಗಳ ಪತ್ತೆಗಾಗಿ ಉಳ್ಳಾಲ ಪೊಲೀಸರು ಸೇರಿದಂತೆ ಸಿಸಿಬಿ ಪೊಲೀಸರುಬಲೆ ಬೀಸಿದ್ದ ಖಚಿತ ಮಾಹಿತಿ ಮೇರೆಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಐವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಯುತ್ತಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಜಾತಿ ವೈಷಮ್ಯದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಗಲಾಟೆ , ಗಲಭೆಗಳಿಗೆ ಹೆಸರು ಕೆಡಿಸುತ್ತಿದ್ದ ಉಳ್ಳಾಲದಲ್ಲಿ ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿಸಿ ಮಂಗಳವಾರ ನಡೆದ ಪ್ರತಿಭಟನೆ ಸಾಮರಸ್ಯದ ವಾತಾವರಣವನ್ನು ಸೃಷ್ಟಿಸಿ ಇತಿಹಾಸವನ್ನು ಮರುಕಳಿಸಿತು. ನೇತ್ರಾವತಿ ಸೇತುವೆ ಇದಕ್ಕೆ ಸಾಕ್ಷಿಯಾಯಿತು. ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ದೊರೆತ ಹಲವು ವರ್ಷಗಳವರೆಗೂ ಹಿಂದು, ಮುಸ್ಲಿಂ, ಕ್ರಿಶ್ಚಿಯನ್ನರು ಜತೆಯಾಗಿಯೇ ವಾಸಿಸುತ್ತಿದ್ದ ಉಳ್ಳಾಲ ಪ್ರದೇಶ ಕ್ರಮೇಣ ರಾಜಕೀಯ ಪಕ್ಷಗಳು ಬಲವಾಗುತ್ತಿದ್ದಂತೆ ಸಾಮರಸ್ಯದ ವಾತಾವರಣವನ್ನು ಕೆಡಿಸಿತು. ಇದೀಗ ನೇತ್ರವಾತಿ ನದಿ ಹೆಸರಿನಲ್ಲಿ ನಡೆಯುತ್ತಿರುವ ಕ್ರಾಂತಿ ಜಾತಿ ವೈಷಮ್ಯದ ಕ್ರಾಂತಿಗೆ ಅಂತ್ಯದ ಸಂದೇಶ ಹಾಕುವುದರ ಮೂಲಕ ಇತಿಹಾಸವನ್ನು ಮರುಕಳಿಸಿದೆ ಅನ್ನುವ ಅಭಿಪ್ರಾಯ ಸಾರ್ವಜನಿಕ ವಲಯಗಳಿಂದ ಕೇಳಿಬಂದಿದೆ. ಉಳ್ಳಾಲ ವಲಯ ನೇತ್ರಾವತಿ ಸಂರಕ್ಷಣಾ ಸಮಿತಿ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಎತ್ತಿನಹೊಳೆ ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿಸಿ ಹಮ್ಮಿಕೊಂಡ `ನೇತ್ರಾವತಿ ಸಂರಕ್ಷಣೆಗಾಗಿ ಸರ್ವಧರ್ಮ ಪ್ರಾರ್ಥನ ಕಾರ್ಯಕ್ರಮ’ದಲ್ಲಿ ಸಾವಿರಕ್ಕೂ ಮಿಕ್ಕಿ ಎಲ್ಲಾ ಜಾತಿಯ ಜನರು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಇನೋವಾ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಉಬ್ಬಿನಲ್ಲಿ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಉರುಳಿ ಸೇತುವೆ ಕಾಮಗಾರಿಯ ಸರಳುಗಳಲ್ಲಿ ಸಿಕ್ಕಿಹಾಕಿಕೊಂಡು ನೀರಿಗೆ ಉರುಳಿದ ಚಾಲಕ ಪವಾಡಸದೃಶವಾಗಿ ಪಾರಾದ ಘಟನೆ ಸೋಮವಾರ ತಡರಾತ್ರಿ ಜೆಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದ ಬಳಿ ಸಂಭವಿಸಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ದೋಷಪೂರಿತ ಆಹಾರ ಪದಾರ್ಥಗಳಿಂದ ಆರೋಗ್ಯದಲ್ಲಿ ಆಗುವ ಏರುಪೇರುಗಳನ್ನು ಔಷಧಿಗಳಿಂದ ಗುಣಪಡಿಸಲು ಅಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಯೋಗದಿಂದ ಮಾತ್ರ ಆರೋಗ್ಯದ ನ್ಯೂನ್ಯತೆಗಳನ್ನು ಸರಿಪಡಿಸಲು ಸಾಧ್ಯ ಎಂದು ಕೋಟೆಕಾರು ಶ್ರೀ ಸಿದ್ಧಿವಿನಾಯಕ ಕ್ಷೇತ್ರದ ಯಶವಂತ್ ಹೇಳಿದ್ದಾರೆ. ಅವರು ತೊಕ್ಕೊಟ್ಟು ಕೃಷ್ಣನಗರದ ಮುದ್ದುಕೃಷ್ಣ ಶಾಖೆಯಲ್ಲಿ ಮಂಗಳೂರಿನ ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ನಡೆದ ಯೋಗನಡಿಗೆ, ಮಾತೃಪೂಜನ, ಮಾತೃಭೋಜನ ಮತ್ತು ಮಕ್ಕಳ ಚೈತನ್ಯ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ, ಧರ್ಮ, ರಾಜಕೀಯವಿಲ್ಲದೆ ಪಡೆಯುವ ಯೋಗ ಶಿಕ್ಷಣ ಎಲ್ಲರನ್ನು ಒಗ್ಗಟ್ಟು ಮಾಡುವುದರ ಜತೆಗೆ ಆರೋಗ್ಯವನ್ನು ಕಾಪಾಡುತ್ತದೆ. ಈ ಕಾರಣಕ್ಕಾಗಿ ಯೋಗದ ಕುರಿತ ಅರಿವು ಇನ್ನೂ ಆಗಬೇಕಿದೆ ಎಂದರು. ಯಾವುದೇ ಫಲಾಪೇಕ್ಷೆಯಿಲ್ಲದೆ ಯೋಗದ ಮೂಲಕ ಸಂಸ್ಕಾರವನ್ನು ಕಲಿಸುವ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಕಾರ್ಯವೈಖರಿ ಎಲ್ಲರೂ ಗೌರವಿಸಬೇಕು ಎಂದು ಮಂಗಳೂರಿನ ಪತಂಜಲಿ ಯೋಗಶಿಕ್ಷಣ ಕೇಂದ್ರ ಮಂಗಳುರು ವಲಯ ಅಧ್ಯಕ್ಷ ರವೀಶ್ ಹೇಳಿದರು. ಛಾಯಗ್ರಾಹಕ ಕ್ಲಿಕ್ ಅಶೋಕ್ ಉಪಸ್ಥಿತರಿದ್ದರು. ಅರುಣ್…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ತೊಕ್ಕೊಟ್ಟುವಿನಲ್ಲಿ ನಡುರಾತ್ರಿಯಲ್ಲಿ ಬರ್ಬರವಾಗಿ ತಲವಾರು ದಾಳಿಗೊಳಗಾಗಿ ಹತ್ಯೆಗೀ ಡಾದ ರೌಡಿಶೀಟರ್ ಕೋಡಿಕಲ್ ನಿವಾಸಿ ವಿಕ್ರಂ ಬೋಳಾರ (29) ಖುದ್ದು ತನ್ನ ಇಬ್ಬರು ಸ್ನೇಹಿತರ ಜತೆಗೂಡಿ ಸೈಕೋ ವಿಕ್ಕಿಯನ್ನು ಹತ್ಯೆ ನಡೆಸಲು ಕುಂಪಲಕ್ಕೆ ಬಂದಿದ್ದ. ವಿಪರ್ಯಾಸವೆಂದರೆ ಹತ್ಯೆ ನಡೆಸಲು ಬಂದವನೇ ಹೆಣವಾಗಿ ಹೋಗಿದ್ದಾನೆ. ಮೆಹಂದಿ ಮನೆಯಲ್ಲಿ ನಡೆದಿತ್ತು ಗಲಾಟೆ: ಭಾನುವಾರ ರಾತ್ರಿ ಕುಂಪಲ ವಿದ್ಯಾ ನಗರ ನಿವಾಸಿ ರೋಹಿತ್ ಗಟ್ಟಿ ಎಂಬಾತನ ವಿವಾಹದ ಮೆಹಂದಿ ಕಾರ್ಯಕ್ರಮವಿತ್ತು. ಅಲ್ಲಿ ಸೈಕೋ ವಿಕ್ಕಿ ಸಹಿತ ಆತನ ಬಣದ ಸುಮಾರು 30ರಷ್ಟು ಮಂದಿ ಪಾರ್ಟಿ ಯಲ್ಲಿ ಭಾಗವಹಿಸಿದ್ದರು. ಪಾರ್ಟಿ ನಡೆಯುತ್ತಿದ್ದಂತೆ ಕ್ಷುಲ್ಲಕ ವಿಚಾರ ದಲ್ಲಿ ಅವರ ತಂಡದೊಳಗೆ ಗಲಾಟೆ ನಡೆದಿತ್ತು. ಇದನ್ನು ರೌಡಿಗಳ ವಿರೋಧಿ ಬಣಗಳ ಜತೆಗೆ ನಿಕಟ ಸಂಪರ್ಕ ಹೊಂದಿದ್ದ ಯುವಕನೋರ್ವ ಬೋಳಾರ ತಂಡದ ವಿಕ್ರಂ ಬೋಳಾರನಿಗೆ ಸುದ್ಧಿ ಮುಟ್ಟಿಸಿದ್ದ. ಅಲ್ಲದೆ `ಸೈಕೋ ಭಾರೀ ಹಾರಾಟ ನಡೆಸುತ್ತಿ ದ್ದಾನೆ, ಆತನಿಗೆ ಒಂದು ಗತಿ ಕಾಣಿಸಬೇಕು ಅಂದಿದ್ದ’ ನಂತೆ. ಬಜಿಲಕೇರಿಯಲ್ಲಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಜಿಲ್ಲೆಯ ಜನರಿಗೆ ಕೃಷಿ ಬಿಟ್ಟರೆ, ಬೀಡಿ ಉದ್ಯಮ ಪ್ರಮುಖ ಉದ್ಯೋಗವಾಗಿದ್ದು, ಅದನ್ನೇ ಮುಚ್ಚಲು ಹೊರಟಿರುವ ಸರಕಾರ 3 ಕೋಟಿ ಕಾರ್ಮಿಕರನ್ನು ಉಪವಾಸದಿಂದ ಬದುಕಲು ಯತ್ನಿಸುತ್ತಿದೆ ಎಂದು ಜಿಲ್ಲಾ ಬೀಡಿ ಫೆಡರೇಶನ್ನಿನ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಉಳ್ಳಾಲದ ಕೋಟೆಕಾರು ಸರ್ಕಲ್ ಬೀಡಿ ಲೇಬರ್ ಯೂನಿಯನ್ ವತಿಯಿಂದ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸೋಮವಾರ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ತಿದ್ದುಪಡಿ ಕಾಯ್ದೆ ಕೋಪ್ಟಾ ಹಿಂತೆಗೆಯಬೇಕು ಎಂದು ಒತ್ತಾಯಿಸಿ ನಡೆಸಿದ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದರು. ಸರಕಾರಗಳು ಬೀಡಿ ಮಾಲೀಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾನೂನು ಜಾರಿಗೊಳಿಸುತ್ತಿದೆ. ಇದರಿಂದ ಕಾರ್ಮಿಕರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಬೀಡಿ ಮಜೂರಿಯಲ್ಲಿ 12.75 ಪೈಸೆ ಹೆಚ್ಚಿಗೆ ಮಾಡಬೇಕೆಂಬ ಆದೇಶ ಇದ್ದರೂ, ಮಾಲೀಕರಿಗೆ ಹೊರೆಯಾಗುವುದೆಂಬ ಕಾರಣದಿಂದ ಒಂದು ವರ್ಷದಿಂದ ಅದನ್ನು ಹೆಚ್ಚಿಸದೆ ಕಾರ್ಮಿಕರನ್ನು ವಂಚಿಸುತ್ತಿದ್ದಾರೆ. ವಿಶ್ವ ಅರೋಗ್ಯ ಸಂಸ್ಥೆ ತಂಬಾಕು ಉತ್ಪನ್ನಗಳಿಗೆ ಕರೆ ನೀಡಿದ್ದರೂ, ತಂಬಾಕು ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ಪರ್ಯಾಯ ಉದ್ಯೋಗವನ್ನು…

