ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಅ. 13 ಮಂಗಳವಾರದಿಂದ, 21ರ ಬುಧವಾರದರ ವರೆಗೆ ನವರಾತ್ರಿ ಉತ್ಸವ ಹಾಗೂ ಅ. 27ರಂದು ಮಂಗಳವಾರ ತುಲಾಪತ್ ಉತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕಾಲು ಮುರಿತಕ್ಕೊಳಗಾಗಿ ಅ.8 ರಂದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತರೊಬ್ಬರು ಸೋಮವಾರ ನಸುಕಿನ ಜಾವ ಮೃತಪಟ್ಟಿದ್ದು, ಮೃತರ ಸಂಬಂಧಿ ಹಾಗೂ ಸ್ನೇಹಿತರು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಆಸ್ಪತ್ರೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ಸೋಮವಾರ ನಡೆದಿದೆ. ಘಟನೆ ಕುರಿತ ಪ್ರಕರಣ ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಕೈರಂಗಳ ಗ್ರಾಮದ ಮೋಂಟುಗೋಳಿ ನಿವಾಸಿ ಖಾಸಗಿ ಬಸ್ಸು ನಿರ್ವಾಹಕ ವಿಜಯ್(36) ಮೃತರು. ಅ.8 ರಂದು ಅದೇ ಆಸ್ಪತ್ರೆಯಲ್ಲಿ ದಾಖಲಾಗಿರುವ ತನ್ನ 3ರ ಹರೆಯದ ಮಗುವನ್ನು ನೋಡಿ ವಾಪಸ್ಸಾಗುವ ಸಂದರ್ಭ ಆಸ್ಪತ್ರೆಯ ಬೇಸ್ಮೆಂಟಿನಲ್ಲಿ ಜಾರಿಬಿದ್ದಿದ್ದರು. ರಾತ್ರಿ ಪೂರ್ತಿ ಪ್ರe್ಞÁಹೀನರಾಗಿ ಅಲ್ಲೇ ಉಳಿದ ಅವರು ಮರುದಿನ ಬೆಳಗ್ಗೆ ಅದೇ ಆಸ್ಪತ್ರೆಗೆ ದಾಖಲಾಗಿದ್ದರು. ಬಲಕಾಲು ಮುರಿತಕ್ಕೊಳಗಾದ ವಿಜಯ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿತ್ತು. ಆದರೆ ವೈದ್ಯರು ನಿರ್ಲಕ್ಷ್ಯ ವಹಿಸಿ ಶಸ್ತ್ರಚಿಕಿತ್ಸೆ ನಡೆಸದೇ ಇದ್ದ ಪರಿಣಾಮ ವಿಜಯ್ ಮೃತಪಟ್ಟಿದ್ದಾರೆಂದು ಸಂಬಂಧಿಕರು ಹಾಗೂ ಸ್ನೇಹಿತರು ಆರೋಪಿಸಿದ್ದಾರೆ. ಇದೇ ವಿಚಾರದಲ್ಲಿ ಆಸ್ಪತ್ರೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಾಗ ಸ್ಥಳಕ್ಕಾಗಮಿಸಿದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಮಿನಿಸ್ಕ್ರಿವ್ಸ್ ಫಾರ್ ಆರ್ಥಡಾಂಟಿಕ್ಸ್ ಎಂಬ ವಿಷಯದ ಕುರಿತ ನಿರಂತರ ಕಲಿಕಾ ಕಾರ್ಯಗಾರ ದೇರಳಕಟ್ಟೆಯ ಎ.ಬಿ.ಶೆಟ್ಟಿ ದಂತ ಮಹಾವಿದ್ಯಾಲಯದ ವಿಂಶತಿ ಭವನದಲ್ಲಿ ನಡೆಯಿತು. ನವದೆಹಲಿಯ ಏಮ್ಸ್ ಆಸ್ಪತ್ರೆಯ ದಂತ ಸಂಶೋಧನಾ ಮತ್ತು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಪ್ರೊ.ಖರ್ಬಾಂದ ಕಾರ್ಯಗಾರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆಧುನಿಕ ತಂತ್ರಜ್ಞಾನದಲ್ಲಿ ವೈದ್ಯರು ನಿಸ್ಸೀಮರಾಗಬೇಕಿದ್ದು, ಈ ಮೂಲಕ ರೋಗಿಗಳಿಗೆ ಚಿಕಿತ್ಸೆಗಳು ಪರಿಣಾಮಕಾರಿಯಾಗುವುದು ಎಂದರು. ಈ ಸಂದರ್ಭ ಎ.ಬಿ.ಶೆಟ್ಟಿ ದಂತ ಮಹಾವಿದ್ಯಾಲಯದ ಸ್ಥಾಪಕ ಡೀನ್ ಪ್ರೊ.ಡಾ.ಯನ್ ಶ್ರೀಧರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದಂತ ಮಹಾವಿದ್ಯಾಲಯದ ಡೀನ್ ಡಾ.ಯು.ಎಸ್.ಕೃಷ್ಣ ನಾಯಕ್ ನಿಟ್ಟೆ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕಲಿಕಾ ವಿಭಾಗದ ನಿರ್ದೇಶಕ ಡಾ.ರಾಜೇಂದ್ರ ಪ್ರಸಾದ್ , ದಂತ ಮಹಾವಿದ್ಯಾಲಯದ ಉಪಪ್ರಾಂಶುಪಾಲೆ ಡಾ.ಎನ್.ಮಿತ್ರಾ ಹೆಗ್ಡೆ ಹಾಗೂ ಎ.ಬಿ ಶೆಟ್ಟಿ ಆರ್ಥೊ ಅಲುಮಿನಿಯ ಕಾರ್ಯದರ್ಶಿ ಡಾ.ಎಂ.ಯನ್ ಕುಟ್ಟಪ್ಪ ಉಪಸ್ಥಿತರಿದ್ದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ಮ0ಗಳೂರು ಪೂರ್ವ ರೋಟರಿ ಕ್ಲಬ್ , ಸೋಮೇಶ್ವರ ಕೊಲ್ಯದ ರೋಟರಿ ಸಮುದಾಯ ದಳ ಹಾಗೂ ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಹಾಗೂ ಮಂಗಳೂರಿನ ಪ್ರಾಣಿ ದಯಾ ಸಂಘದ ಆಶ್ರಯದಲ್ಲಿ “ಹುಚ್ಚು ನಾಯಿ ನಿಯ0ತ್ರಣ ಲಸಿಕಾ ಶಿಬಿರ” ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯಲ್ಲಿ ಭಾನುವಾರ ನಡೆಯಿತು. ಕೊಲ್ಯ ರೋಟರಿ ಸಮುದಾಯದಳ ಇದರ ಅಧ್ಯಕ್ಷ ಶಶಿಕಾ0ತ್, ರೊಟೇರಿಯನ್ ಜೈಕುಮಾರ್ ಮತ್ತು ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಇದರ ಅಧ್ಯಕ್ಷ ಪ್ರವೀಣ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸುಮಾರು 135 ನಾಯಿಗಳಿಗೆ “ಹುಚ್ಚು ನಾಯಿ ನಿಯ0ತ್ರಣ ಲಸಿಕೆಯನ್ನು ನೀಡಲಾಯಿತು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಹರೇಕಳ: ಸರಳ ವ್ಯಕ್ತಿತ್ವದ ರಾಜ್ಯ ಸರ್ಕಾರದ ಆರೋಗ್ಯ ಸಚಿವರಾದ ಯು.ಟಿ.ಖಾದರ್ ತಮ್ಮ 46 ನೇ ಹುಟ್ಟುಹಬ್ಬವನ್ನು ಹರೇಕಳದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಜತೆಗೆ ಕೇಕ್ ತುಂಡರಿಸುವ ಮೂಲಕ ಸೋಮವಾರ ಆಚರಿಸಿದರು. ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸೌಜನ್ಯ ಸ್ಕೌಟ್ಸ್ ದಳ, ಶ್ರೀರಾಮಕೃಷ್ಣ ಪ್ರೌಢಶಾಲೆ, ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಮಟ್ಟದ ಆಹ್ವಾನಿತ ಶಾಲೆಗಳ ಸ್ಕೌಟ್ಸ್ -ಗೈಡ್ಸ್ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿನೂತನ ಶೈಲಿಯ ಸ್ಕೌಟ್ಸ್ -ಗೈಡ್ಸ್ ಪ್ರತಿಭೋತ್ಸವ-2015 ರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅವರು ವಿದ್ಯಾರ್ಥಿಗಳು ಹಾಗೂ ಶಾಲಾ ಆಡಳಿತ ಮಂಡಳಿ ಆಯೋಜಿಸಿದ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಮೂಲಕವೇ ಕೇಕನ್ನು ತುಂಡರಿಸಿ, ಅವರ ಕೈಯಿಂದಲೇ ತಿನ್ನುವ ಮೂಲಕ ವಿಶಿಷ್ಟವಾಗಿ ಆಚರಿಸಿದರು. ಈವರೆಗೂ ಹುಟ್ಟುಹಬ್ಬವನ್ನು ಆಚರಿಸಿದವನಲ್ಲ. ಆಚರಿಸಿಯೂ ಗೊತ್ತಿಲ್ಲ. ಪ್ರೀತಿಪೂರ್ವಕವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆಯೋಜಿಸಿದ ಹುಟ್ಟುಹಬ್ಬದ ಸರಳ ಸಂಭ್ರಮದಲ್ಲಿ ಪಾಲ್ಗೊಂಡಿರುವುದು ಸಂತಸವಾಗಿದೆ ಎಂದರು. ಈ ಸಂದರ್ಭ ತ್ರಿಶಕ್ತಿ ವಿದ್ಯಾವರ್ಧಕ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ಸೋಮೇಶ್ವರ ಗ್ರಾಮದ ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುವ 34ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಅ.19 ರಿಂದ ಅ. 24ರವರೆಗೆ ಧಾರ್ಮಿಕ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಕೊಲ್ಯ ಶ್ರೀ ಶಾರದಾ ಸಭಾ ಸದಸನದಲ್ಲಿ ನಡೆಯಲಿದೆ ಎಂದು ಸಮಿತಿ ಕೊಶಾ„ಕಾರಿ ಪ್ರಕಾಶ್ ಎಚ್. ತಿಳಿಸಿದರು. ಕೊಲ್ಯ ಶ್ರೀ ಶಾರದಾ ಸಭಾ ಸದಸನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅ. 19ರಂದು ಬೆಳಗ್ಗೆ 7ಕ್ಕೆ ಸೋಮೇಶ್ವರ ಶ್ರೀ ಮದ್ವೇಶ ಭಟ್ ನೇತೃತ್ವದಲ್ಲಿ ಶ್ರೀ ಶಾರದಾ ಮಾತೆಯ ಪ್ರತಿಷ್ಠೆ ನಡೆಯಲಿದ್ದು, ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಕೊಲ್ಯ ಶ್ರೀ ನಾಗಬ್ರಹ್ಮಸ್ಥಾನ ಧರ್ಮದರ್ಶಿ ಭಾಸ್ಕರ ಐತಾಳ್ ಚಾಲನೆ ನೀಡಲಿದ್ದು, ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ. ಅ.19ರಿಂದ 24ರವರೆಗೆ ಪ್ರತಿ ದಿನ ಬೆಳಗ್ಗೆ ಶ್ರೀ ಶಾರದಾ ಮಹಿಳಾ ಮಂಡಳಿಯಿಂದ ಲಲಿತಾ ಸಹಸ್ರನಾಮ ಪಠಣ, ಮಹಾಪೂಜೆ, ಮಹಾ ಅನ್ನಸಂತರ್ಪಣೆ, ಅ.21ರಂದು ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕøತಿಕ ಸ್ಪರ್ಧೆ ನಡೆಯಲಿದೆ.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬೋಳಿಯಾರ್ : ಸಂಸದ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದಲ್ಲಿ `ನಮ್ಮ ನಡೆ ಎತ್ತಿನಹೊಳೆಗೆ ‘ಕಾಲ್ನಡಿಗೆ ಪಾದಯಾತ್ರೆಗೆ ಬೆಂಬಲವಾಗಿ ಕುರ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಂದ ಸುಮಾರು 1000ಕ್ಕೂ ಹೆಚ್ಚು ಕಾರ್ಯರ್ತರು ಬೋಳಿಯಾರ್ ಜಂಕ್ಷನ್ನಿಂದ ಭಾನುವಾರ ಪಾದಯಾತ್ರೆ ಪ್ರಾರಂಬಿಸಿದರು. ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ರೈ ಬೋಳಿಯಾರ್ ನೇತೃತ್ವದಲ್ಲಿ ನಡೆದ ಪಾದಯಾತ್ರೆಗೆ ಬಿಜೆಪಿ ಹಿರಿಯ ಮುಖಂಡ ಮುಡಿಪಿನ ಧರ್ಮಜಾಗೃತಿ ವೇದಿಕೆ ಅಧ್ಯಕ್ಷ ಟಿ. ಜಿ.ರಾಜಾರಾಮ ಭಟ್ ಚಾಲನೆ ನೀಡಿ ರಾಜ್ಯ ಸರಕಾರ ಮಲೆನಾಡಿಗೆ ನೀರನ್ನು ಹರಿಸುವ ಹುನ್ನಾರ ವಿರುದ್ಧ ಜಿಲ್ಲೆಯ ಜನತೆ ಎಚ್ಚೆತ್ತುಕೊಂಡಿದ್ದಾರೆ ಎಂಬುವುದನ್ನು ಸರಕಾರಕ್ಕೆ ತೋರಿಸಲು ಜಿಲ್ಲೆಯಾದ್ಯಂತ ಸಂಸದ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದಲ್ಲಿ ಪ್ರತಿಭಟನೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದ್ದು ಆ ಮೂಲಕ ಯೋಜನೆಯ ಸಾಧಕ ಬಾಧಕಗಳನ್ನು ಜನರು ಸರಕಾರಕ್ಕೆ ಅರಿವು ಮೂಡಿಸಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದÀಸ್ಯ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಾತನಾಡಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಮಂಗಳೂರು ವಿಧಾನಸಭಾ ಯುವ ಕಾಂಗ್ರೆಸ್ನ ಗ್ರಾಮ ಚಲೋ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ರಾಜ್ಯ ಸರಕಾರದ ಹಲವಾರು ಯೋಜನೆಗಳನ್ನು, ಸರಕಾರಿ ಸೌಲಭ್ಯಗಳನ್ನು ತಲುಪಿಸುವಂತಹ ಕೆಲಸ ಪ್ರಾಮಾಣಿಕತೆಯಿಂದ ನಡೆಯಲಿದ್ದು, ಇಂತಹ ಸೇವೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಿ ಗ್ರಾಮೀಣ ಜನರು ಸ್ವಾಭಿಮಾನದ ಬದುಕು ಸಾಗಿಸುವಂತಾಗಬೇಕು ಎಂದು ಆರೋಗ್ಯ ಸಚಿವರಾದ ಯು.ಟಿ.ಖಾದರ್ ಅವರು ಹೇಳಿದರು. ಅವರು ಮಂಗಳೂರು ವಿಧಾನಸಭಾ ಯುವಕಾಂಗ್ರೆಸ್ ವತಿಯಿಂದ ನಡೆಯುವ `ಗ್ರಾಮ ಚಲೋ’ ಕಾರ್ಯಕ್ರಮಕ್ಕೆ ಭಾನುವಾರ ಅಸೈಗೋಳಿಯ ಲಯನ್ಸ್ ಕ್ಲಬ್ನಲ್ಲಿ ಚಾಲನೆ ನೀಡಿ ಮಾತನಾಡಿದರು. ಇವತ್ತು ಸುಳ್ಳು ಭರವಸೆಗಳ ಮೂಲಕ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರಕಾರ ಕಪ್ಪು ಹಣವನ್ನು ವಾಸಪಸ್ಸು ತರಿಸಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದ್ದರೂ ಇಷ್ಟರವರೆಗೂ 15 ರೂಪಾಯಿಯನ್ನು ಹಾಕಿಲ್ಲ. ಅವರು ವಿದೇಶದ ಕಪ್ಪು ಹಣ ತರಿಸುವುದು ಬಿಡಿ ಅವರೇ ವಿದೇಶದಲ್ಲಿ ಹೆಚ್ಚಿನ ದಿನವನ್ನು ಕಳೆಯುತ್ತಿದ್ದು ಅದರ ಬದಲಾಗಿ ಭಾರತದಲ್ಲಿ ಬಂದು ಜನಸೇವೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು: ಮನಸ್ಸಿನ,ಆತ್ಮದ ಒಳಗಿನಿಂದ ಕಾಪಾಡಿಕೊಂಡು ಗೌರವಿಸಿಕೊಂಡು ಬರುವಂತಹ ಒಂದು ಪವಿತ್ರ ಭಾವನೆಯೇ ಮದುವೆಯ ಮೂಲಮಂತ್ರ . ಧರ್ಮವನ್ನು ಅನುಸರಿಸಿಕೊಂಡು , ಸಂಸ್ಕøತಿಯ ಪರಂಪರೆಯನ್ನು ಬೆಳೆಸಿಕೊಂಡು ಹೋಗುವುದೇ ದಂಪತಿ ಜವಾಬ್ದಾರಿಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮದ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸದಸ್ಯ ಹಾಗೂ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಅಭಿಪ್ರಾಯಪಟ್ಟರು. ಅವರು ಕುತ್ತಾರು ಬಾಲ ಸಂರಕ್ಷಣಾ ಕೇಂದ್ರದಲ್ಲಿ ನಡೆದ ನವ ದಂಪತಿ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ದೇಶದಲ್ಲಿ ದಾಂಪತ್ಯ ಜೀವನ ತೀರಾ ಹದಗೆಟ್ಟಿದೆ. ಈ ಸಂದರ್ಭ ದಂಪತಿಗೆ ಮಾರ್ಗದರ್ಶನ ಮಾಡುವ ಶಿಶುಮಂದಿರದ ಕೆಲಸ ಶ್ಲಾಘನೀಯ. ವಿದೇಶಗಳಲ್ಲಿ ಮದುವೆ ಎಂದರೆ ವ್ಯಾವಹಾರಿಕ ಒಪ್ಪಂದದಂತೆ. ಆದರೆ ಭಾರತದ ಸಂಸ್ಕøತಿಯಲ್ಲಿ ಮದುವೆಯೆಂದರೆ ಮಾನಸಿಕ ಬಂಧನ. ಜೀವನ ಪರ್ಯಂತ ಪಾವಿತ್ರ್ಯತೆಯಿಂದ ಕಾಪಾಡಿಕೊಂಡು ಬರುವ ಪದ್ಧತಿ ಎಂಬರ್ಥ. ಮಹಾನ್ ಪರಂಪರೆಯುತ ದೇಶದಲ್ಲಿ ಭಾವನೆಗಳಿಗೆ ಬೆಲೆ ಕೊಟ್ಟು ಬದುಕಬೇಕಿದೆ. ದಂಪತಿಗಳು ಮನೆಯ ಎಲ್ಲರನ್ನು ಜತೆಯಾಗಿ ಬದುಕುವಂತೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ಕಾರ್ಮಿಕರಿಗಾಗಿ ಇರುವ ಸರಕಾರದ ಸವಲತ್ತುಗಳು , ಅದನ್ನು ಪಡೆದುಕೊಳ್ಳುವ ಕಾಳಜಿ ಹಾಗೂ ಜನಸಾಮಾನ್ಯರು ಯೋಜನೆಗಳನ್ನು ಅರಿತುಕೊಳ್ಳುವ ಹಿತದೃಷ್ಟಿಯಿಂದ ಆರಂಭವಾಗಿರುವ ಕಾರ್ಮಿಕ ಸಂಘಟನೆಗಳು ಹೋರಾಟಕ್ಕೆ ಮಾತ್ರ ಸೀಮಿತವಾಗಿರದೆ, ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ, ಮಜ್ದೂರ್ ಸಂಘ ಉಳ್ಳಾಲ ವಲಯ , ಭಾರತೀಯ ಮಜ್ದೂರ್ ಸಂಘಕ್ಕೆ ಸಂಯೋಜಿತ ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮತ್ತು ಇತರ ನಿರ್ಮಾಣ ಕಾರ್ಮಿಕರ ನೋಂದಣಿ ಹಾಗೂ ಮಂಡಳಿಯಿಂದ ಸಿಗುವ ಸವಲತ್ತುಗಳ ಬಗ್ಗೆ ಉದ್ಘಾಟನೆ, ಮಾಹಿತಿ ಹಾಗೂ ನೋಂದಣಿ ಕಾರ್ಯಕ್ರಮವನ್ನು ಕೊಲ್ಯ ಶಾರದ ಸಭಾಭವನದಲ್ಲಿ ಭಾನುವಾರ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮಸ್ನೇಹಿ ಕಾರ್ಯಕ್ರಮಗಳ ಮೂಲಕ ಸರಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಅದು ಯಶಸ್ವಿಯಾಗಿದೆ. ಕಾರ್ಮಿಕರು ಒಗ್ಗಟ್ಟಾಗಿ ಇದ್ದಾಗ ಸವಲತ್ತುಗಳನ್ನು ಗಳಿಸಲು ಸಾಧ್ಯ. ಸದ್ಯ ರಾಜ್ಯ ಸರಕಾರ ಕಾರ್ಮಿಕರ…

