Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಜಿಲ್ಲೆಯಲ್ಲಿ ಸೌಹಾರ್ದ ನೆಲೆನಿಂತುವಂತೆ ಮಾಡುವ ಪ್ರಯತ್ನ ಎಲ್ಲರಿಂದಲೂ ನಡೆಯಬೇಕು, ಧರ್ಮದ ಮೇಲಿರುವ ಪರಸ್ಪರ ಅಪನಂಬಿಕೆಗಳು ದೂರಗೊಂಡಲ್ಲಿ ಸೌಹಾರ್ದತೆ ಸಾಧ್ಯ, ಈ ಹಿನ್ನೆಲೆಯಲ್ಲಿ ಇತರ ಯಾವುದೇ ದುರುದ್ದೇಶ ಇಲ್ಲದೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪಲ್ಲ ಎಂದು ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಭಿಪ್ರಾಯಪಟ್ಟರು. ಉಳ್ಳಾಲ ಮೆಲಂಗಡಿ ಮೊಹಿಯುದ್ದೀನ್ ಜುಮಾ ಮಸೀದಿ (ಹೊಸಪಳ್ಳಿ)ಯಲ್ಲಿ ನಡೆದ 87ನೇ ರಾತೀಬು ನೇರ್ಚೆ, 10 ದಿನಗಳ ಮತ ಪ್ರವಚನ, ಸ್ವಲಾತ್ ಮಜ್ಲೀಸ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಯೂಸುಫ್ ಮಿಸ್ಬಾಹಿ, ನ್ಯಾಯವಾದಿ ಕೆ.ಪಿ.ಶುಕೂರು, ಮೊಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಫಾರೂಕ್ ಉಳ್ಳಾಲ್, ಮನಪಾ ಮಾಜಿ ಮೇಯರ್ ಕೆ.ಅಶ್ರಫ್, ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಪ್ರಮುಖರಾದ ಯು.ಎಚ್.ಅಹ್ಮದ್ ಬಾವ, ಇಬ್ರಾಹಿಂ ಖಾಸಿಂ, ಅಶ್ರಫ್ ಮುಸ್ಲಿಯಾರ್, ಅಲಿ ಅಕ್ಬರ್, ಜಮಾಲ್ ಬಾರ್ಲಿ, ಆಸಿಫ್…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಇರಾ : ಧಾರ್ಮಿಕ ಅರಿವು ಹಿಂದಿನಿಂದಲೇ ನಡೆಯುತ್ತಿದ್ದರೂ ಮದರಸಾ ಶಿಕ್ಷಣ ಮುಖಾಂತರ ಎಳೆ ಮಕ್ಕಳೂ ಸುಲಲಿತವಾಗಿ ಧಾರ್ಮಿಕ ಜ್ಞಾನ ಪಡೆಯುಂತೆ ಮಾಡಿದ ಕೀರ್ತಿ ಸಮಸ್ತ ವಿದ್ಯಾಭ್ಯಾಸ ಬೋರ್ಡ್‍ಗೆ ಸಲ್ಲುತ್ತದೆ ಎಂದು ಪಾತೂರು ಕಜೆ ಎಕೆಎಂ ಅಕಾಡೆಮಿ ಮುಖ್ಯಸ್ಥ ಇ.ಕೆ.ಎಂ ಶರೀಫ್ ಮುಸ್ಲಿಯಾರ್ ಹೇಳಿದರು.ಇರಾ ಸಂಪಿಲ ಸಂಶುಲ್ ಉಲಮಾ ಕ್ರಿಯಾ ಸಮಿತಿಯ ತೃತೀಯ ವಾರ್ಷಿಕೋತ್ಸವ ಹಾಗೂ ಅನುಸ್ಮರಣಾ ಸಂಪಿಲ ಸಂಶುಲ್ ಉಲಮಾ ನಗರದಲ್ಲಿ ಭಾನುವಾರ ನಡೆದ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕಾಸರಗೋಡು ಮಸೀದಿಯ ಖತೀಬ್ ಝುಬೈರ್ ಫೈಝಿ ಅಂಕೋಲ ಮಾತನಾಡಿ, ಭಗವಂತ ಅನುಗ್ರಹ ಇದ್ದಲ್ಲಿ ಯಾವುದೇ ಸಂದರ್ಭದಲ್ಲೂ ಯಾರ ಭಯವೂ ಇರುವುದಿಲ್ಲ, ಈ ನಿಟ್ಟಿನಲ್ಲಿ ಭಗವಂತನ ಅನುಗ್ರಹ ದೊರೆಯುವಂತಾಗಲು ಶ್ರಮಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಪ್ರಯುಕ್ತ ಉಸ್ತಾದ್ ಪಾತೂರು ಶೈಖುನಾ ಅಹ್ಮದ್ ಮುಸ್ಲಿಯಾರ್ ನೇತೃತ್ವದಲ್ಲಿ ಸಂಶುಲ್ ಉಲಮಾ ಮೌಲೀದ್ ಪಾರಾಯಣ ಹಾಗೂ ಸಮಸ್ತ ಕೇರಳ ಜಂ-ಇಯತುಲ್ ಉಲಮಾ ಕೇಂದ್ರ ಮುಶಾವರ ನೂತನ ಉಪಾಧ್ಯಕ್ಷ ಶೈಖುನಾ ಮಿತ್ತಬೈಲ್…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್  ಪೊಳಲಿ:ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಒಂದು ತಿಂಗಳ ತನಕ ನಡೆಯುವ ಜಾತ್ರಾ ಮಹೋತ್ಸವವು ಸೋಮವಾರ ಸಂಜೆ ನಡೆದ ಆಕರ್ಷಕ ರಥೋತ್ಸವದ ಮೂಲಕ ಮುಕ್ತಾಯಗೊಂಡಿತು.

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಅಸೈಗೋಳಿ: ಸರಕಾರ ಚಾಲಕರಿಗಾಗಿಯೇ ಕಾಯಿದೆ, ಕಾನೂನು, ಸವಲತ್ತುಗಳನ್ನು ಜಾರಿಗೊಳಿಸಿದರೂ ಅದು ಅವರಿಗೆ ತಲುಪುತ್ತಿಲ್ಲ, ಅದನ್ನು ತಲುಪಿಸುವ ನಿಟ್ಟಿನಲ್ಲಿ ತುಳುನಾಡು ರಕ್ಷಣಾ ವೇದಿಕೆ ವಿವಿಧ ಕಾರ್ಯಕ್ರಮಗಳೊಂದಿಗೆ ಕಾರ್ಯಾಚರಿಸುತ್ತಿದೆ ಎಂದು ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಹೇಳಿದ್ದಾರೆ. ಅವರು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ವಿಧಾನಸಭಾ ಕ್ಷೇತ್ರ ಘಟಕ ವತಿಯಿಂದ ಖಾಸಗಿ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಲಾರಿ ಮತ್ತು ಬಸ್ ಚಾಲಕರಿಗಾಗಿ ಹಮ್ಮಿಕೊಂಡಿದ್ದ ಖಾಸಗೀ ವಾಣಿಜ್ಯ ವಾಹನ ಚಾಲಕರ ವಿಮಾ ಯೋಜನೆಯ 5 ನೇ ಹಂತದ ನೋಂದಾವಣೆ ಕಾರ್ಯಕ್ರಮಕ್ಕೆ ಅಸೈಗೋಳಿ ಯುವಕ ಮಂಡಲದಲ್ಲಿ ಸೋಮವಾರ ಚಾಲನೆ ನೀಡಿ ಮಾತನಾಡಿದರು. 7 ದಿನದ ಸಪ್ತಾಹದ ಮೂಲಕ 2 ಲಕ್ಷ ರೂ. ವಿಮಾ ನೋಂದಣಿಯನ್ನು ವೇದಿಕೆ ಹಮ್ಮಿಕೊಂಡಿದೆ. ಚಾಲಕರಿಗೆ ದಿನದ ದುಡಿಮೆ ಕಡಿತಗೊಳಿಸಿ ನೋಂದಾಯಿಸಲು ಕಷ್ಟ ಸಾಧ್ಯ, ಅದಕ್ಕಾಗಿ ವೇದಿಕೆ ಚಾಲಕರು ಇರುವ ಸ್ಥಳಕ್ಕೆ ತೆರಳಿ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಚಾಲಕರು ಎಲ್ಲಾ ರೀತಿಯಲ್ಲೂ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಶಂಕಿತ ಉಗ್ರರ ಬಂಧನ ಪ್ರಕರಣದ ಹಿನ್ನಲೆಯಲ್ಲಿ 2008ರಲ್ಲಿ ಉಳ್ಳಾಲದಲ್ಲಿ ಬಂಧಿತರಾಗಿದ್ದ ಆರೋಪಿಗಳಲ್ಲಿ ಮೂವರು ಅಪರಾಧಿಗಳೆಂದು ಪರಿಗಣಿಸಿ ಉಳಿದ ನಾಲ್ವರನ್ನು ನಗರದ ನ್ಯಾಯಾಲಯವು ಸೋಮವಾರ ಬೆಳಿಗ್ಗೆ ದೋಷಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ. ಸಾಂದರ್ಭಿಕ ಚಿತ್ರ ಸೈಯ್ಯದ್ ಮಹಮ್ಮದ್ ನೌಷದ್, ಅಹ್ಮದ್ ಬಾವಾ ಅಬೂಬಕ್ಕರ್ ಮತ್ತು ಫಕೀರ್ ಅಹ್ಮದ್ ಈ ಮೂವರನ್ನು ಅಪರಾಧಿಗಳು ಎಂದು ತೀರ್ಪು ನೀಡಿದ್ದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಇನ್ನುಳಿದ ಮುಹಮ್ಮದ್ ಅಲಿ, ಅವರ ಪುತ್ರ ಜಾವದ್ ಅಲಿ, ಶಬೀರ್ ಭಟ್ಕಳ ಹಾಗೂ ರಫೀಕ್ ದೋಷಮುಕ್ತಗೊಳಿಸಿ ಬಿಡುಗಡೆಗೊಳಿಸಿದ್ದಾರೆ. ಇಂಡಿಯನ್ ಮುಜಾಹಿದ್ದೀನ್ ನಂಟಿನ ಹಿನ್ನೆಲೆಯಲ್ಲಿಯಲ್ಲಿ ಸ್ಫೋಟಕ ಪತ್ತೆ ಮತ್ತು ವಿಧ್ವಂಸಕ ಕೃತ್ಯಕ್ಕೆ ಯೋಜನೆ ಹಾಕಿದ್ದರೆಂದು ಏಳು ಮಂದಿಯನ್ನು ಮಂಗಳೂರು ಪೆÇಲೀಸರು ಬಂಧಿಸಿದ್ದರು. ಬಂಧನ ಈ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು ಅಪರಾಧಿಗಳ ಶಿಕ್ಷೆ ಪ್ರಮಾಣ ಪ್ರಕಟವನ್ನು ನ್ಯಾಯಾಲಯವು ಎಪ್ರಿಲ್ 12ಕ್ಕೆ ಮುಂದೂಡಿದೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ತೊಕ್ಕೊಟ್ಟು ಪೆರ್ಮನ್ನೂರು ಸಂತ ಸೆಬೆಸ್ತಿಯನ್ನರ ಇಗರ್ಜಿಯಲ್ಲಿ ಗರಿಗಳ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಧರ್ಮಗುರು ಜೆ.ಬಿ.ಸಲ್ದಾನ್ಹ ನೇತೃತ್ವ ವಹಿಸಿದ್ದರು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು: ರಿಕ್ಷಾ ಟೆಂಪೋ ಮತ್ತು ಕಾರಿನ ನಡುವೆ ಅಪಘಾತ ತೊಕ್ಕೊಟ್ಟು ಅಂಬಿಕಾರೋಡಿನಲ್ಲಿ ನಿನ್ನೆ ನಡೆಯಿತು. ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಎದುರಿನಿಂದ ತೆರಳುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಒಂಭತ್ತುಮಾಗಣೆ ಸೀಮೆ ಗಟ್ಟಿಯವರ ಶ್ರೀ ಸೋಮನಾಥ ಸೇವಾ ಸಮಿತಿ ವತಿಯಿಂದ ಕುಲಸ್ವಾಮಿ ಶ್ರೀ ಸೋಮನಾಥ ದೇವರಿಗೆ ರಜತ ಪಲ್ಲಕ್ಕಿ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆಯ ಮೆರವಣಿಗೆ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜಭವನದಿಂದ ಸೋಮೇಶ್ವರ ದೇವಸ್ಥಾನವರೆಗೆ ಭಾನುವಾರ ಜರಗಿತು.

Read More

 ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಇನೋಳಿ: ತಂತ್ರಜ್ಞಾನಗಳಿಂದ ಆಗುತ್ತಿರುವ ಪರಿಣಾಮಗಳು ಆದಾಯಗಳಿಗೂ ಅಡ್ಡಿಯನ್ನು ಉಂಟು ಮಾಡುತ್ತಿದೆ. ಹೊಸತನವನ್ನು ಅಳವಡಿಸದ ಕಂಪೆನಿಗಳು ಕೇವಲ 10-15 ವರ್ಷಗಳಲ್ಲಿ ಮುಚ್ಚಲ್ಪಡುತ್ತಿರುವುದು ಕಳವಳಕಾರಿ ಸಂಗತಿ ಎಂದು ಇನ್ಫೋಸಿಸ್ ಮಂಗಳೂರು ಇದರ ಮುಖ್ಯಸ್ಥ ಗೋಪಿಕೃಷ್ಣನ್ ಕೊಣ್ಣನಾಥ್ ಹೇಳಿದ್ದಾರೆ. ಅವರು ಇನೋಳಿ ಬೆರೀಸ್ ನಾಲೆಡ್ಜ್ ಕ್ಯಾಂಪಸ್ಸಿನಲ್ಲಿ ಶನಿವಾರ ಜರಗಿದ ಬೇರೀಸ್ ಅಕಾಡೆಮಿ ಆಫ್ ಲರ್ನಿಂಗ್ ಇದರ ಬಿಟ್ ಆಂಡ್ ಬೀಡ್ಸ್ ಉತ್ಸವ್-2017 ರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 1950ರ ಅವಧಿಗಳಲ್ಲಿ ಆರಂಭವಾದ ಕಂಪೆನಿಗಳು 80-90 ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಾಚರಿಸಿದರೆ, ಸದ್ಯ ಆರಂಭವಾಗುತ್ತಿರುವ ಕಂಪೆನಿಗಳು 10-15 ವರ್ಷಗಳಲ್ಲೇ ಮುಚ್ಚಿಹೋಗುತ್ತಿವೆ. ಹೊಸತನವನ್ನು ಅಳವಡಿಸದೆ ಕಂಪೆನಿಗಳು ನಷ್ಟ ಹೊಂದುವ ಮೂಲಕ ಮುಚ್ಚುಗಡೆಯಾಗುತ್ತಿದೆ. ತಂತ್ರಜ್ಞಾನಗಳಿಂದ ಆಗುತ್ತಿರುವ ಪರಿಣಾಮಗಳು ಆದಾಯಗಳಿಗೂ ಅಡ್ಡಿಯನ್ನು ಉಂಟು ಮಾಡುತ್ತಿದೆ. ಜ್ಞಾನ ವರ್ಧಿಗೆ ಪರಿಸರದಲ್ಲಿ ಆಗುತ್ತಿರುವ ಬದಲಾವಣೆಗಳ ಜತೆಗೆ ಬೆರೆಯಬೇಕಿದೆ. ಪಾಶ್ರ್ವವಾಗಿ ಚಿಂತಿಸುವ ಮೂಲಕ ಉತ್ಸಾಹದ ಜತೆಗೆ ಜೀವನ ಅನುಸರಿಸಬೇಕಿದೆ. ಸಮಸ್ಯೆಗಳನ್ನು ಅರ್ಥೈಸಿ…

Read More

ಉಳ್ಳಾಲ್‍ನ್ಯೂಸ್ ನೆಟ್‍ವರ್ಕ್ ಅಸೈಗೋಳಿ: ತುಳುನಾಡು ರಕ್ಷಣಾ ವೇದಿಕೆಯ ಮಂಗಳೂರು ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ಖಾಸಗಿ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಲಾರಿ ಮತ್ತು ಬಸ್ ಚಾಲಕರಿಗಾಗಿ ಖಾಸಗಿ ವಾಣಿಜ್ಯ ವಾಹನ ಚಾಲಕರ ವಿಮಾ ಯೋಜನೆಯ 5 ನೇ ಹಂತದ ನೊಂದಾವಣೆ ಕಾರ್ಯಕ್ರಮ ಎಪ್ರಿಲ್. 10 ರಂದು ಸಂಜೆ 4.00 ಕ್ಕೆ ಅಸೈಗೋಳಿ ಯುವಕ ಮಂಡಲದಲ್ಲಿ ಜರಗಲಿದೆ. ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಂಗಳೂರು ವಿಧಾನಸಭಾ ಕ್ಷೇತ್ರದ ತು.ರವೇ ಅಧ್ಯಕ್ಷ ಸಿರಾಜ್ ಅಡ್ಕರೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತು.ರ.ವೇ ಕೇಂದ್ರೀಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಜ್ಯೋತಿಕಾ ಜೈನ್, ಗೌರವಾಧ್ಯಕ್ಷ ಡಾ.ಹಾಜಿ ಕೆ.ಎ. ಮುನೀರ್ ಬಾವಾ, ಜಿಲ್ಲಾ ಘಟಕದ ತು.ರ.ವೇ ಅಧ್ಯಕ್ಷ ಹಮೀದ್ ಹಸನ್ ಮಾಡೂರು, ಕೇಂದ್ರೀಯ ಕೋಶಾಧಿಕಾರಿ ಅಬ್ದುಲ್ ರಶೀದ್ ಜೆಪ್ಪು, ಹಿರಿಯ ಕಾರ್ಮಿಕ ನಿರೀಕ್ಷಕರುಗಳಾದ ಮೇರಿ, ಗಣಪತಿ ಹೆಗಡೆ, ಯುವ ಘಟಕದ ಜಿಲ್ಲಾಧ್ಯಕ್ಷ…

Read More