ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಮಂಗಳೂರು ವಿಧಾನಸಭಾ ಯುವ ಕಾಂಗ್ರೆಸ್ನ ಗ್ರಾಮ ಚಲೋ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ರಾಜ್ಯ ಸರಕಾರದ ಹಲವಾರು ಯೋಜನೆಗಳನ್ನು, ಸರಕಾರಿ ಸೌಲಭ್ಯಗಳನ್ನು ತಲುಪಿಸುವಂತಹ ಕೆಲಸ ಪ್ರಾಮಾಣಿಕತೆಯಿಂದ ನಡೆಯಲಿದ್ದು, ಇಂತಹ ಸೇವೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಿ ಗ್ರಾಮೀಣ ಜನರು ಸ್ವಾಭಿಮಾನದ ಬದುಕು ಸಾಗಿಸುವಂತಾಗಬೇಕು ಎಂದು ಆರೋಗ್ಯ ಸಚಿವರಾದ ಯು.ಟಿ.ಖಾದರ್ ಅವರು ಹೇಳಿದರು. ಅವರು ಮಂಗಳೂರು ವಿಧಾನಸಭಾ ಯುವಕಾಂಗ್ರೆಸ್ ವತಿಯಿಂದ ನಡೆಯುವ `ಗ್ರಾಮ ಚಲೋ’ ಕಾರ್ಯಕ್ರಮಕ್ಕೆ ಭಾನುವಾರ ಅಸೈಗೋಳಿಯ ಲಯನ್ಸ್ ಕ್ಲಬ್ನಲ್ಲಿ ಚಾಲನೆ ನೀಡಿ ಮಾತನಾಡಿದರು. ಇವತ್ತು ಸುಳ್ಳು ಭರವಸೆಗಳ ಮೂಲಕ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರಕಾರ ಕಪ್ಪು ಹಣವನ್ನು ವಾಸಪಸ್ಸು ತರಿಸಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದ್ದರೂ ಇಷ್ಟರವರೆಗೂ 15 ರೂಪಾಯಿಯನ್ನು ಹಾಕಿಲ್ಲ. ಅವರು ವಿದೇಶದ ಕಪ್ಪು ಹಣ ತರಿಸುವುದು ಬಿಡಿ ಅವರೇ ವಿದೇಶದಲ್ಲಿ ಹೆಚ್ಚಿನ ದಿನವನ್ನು ಕಳೆಯುತ್ತಿದ್ದು ಅದರ ಬದಲಾಗಿ ಭಾರತದಲ್ಲಿ ಬಂದು ಜನಸೇವೆ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು: ಮನಸ್ಸಿನ,ಆತ್ಮದ ಒಳಗಿನಿಂದ ಕಾಪಾಡಿಕೊಂಡು ಗೌರವಿಸಿಕೊಂಡು ಬರುವಂತಹ ಒಂದು ಪವಿತ್ರ ಭಾವನೆಯೇ ಮದುವೆಯ ಮೂಲಮಂತ್ರ . ಧರ್ಮವನ್ನು ಅನುಸರಿಸಿಕೊಂಡು , ಸಂಸ್ಕøತಿಯ ಪರಂಪರೆಯನ್ನು ಬೆಳೆಸಿಕೊಂಡು ಹೋಗುವುದೇ ದಂಪತಿ ಜವಾಬ್ದಾರಿಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮದ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸದಸ್ಯ ಹಾಗೂ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಅಭಿಪ್ರಾಯಪಟ್ಟರು. ಅವರು ಕುತ್ತಾರು ಬಾಲ ಸಂರಕ್ಷಣಾ ಕೇಂದ್ರದಲ್ಲಿ ನಡೆದ ನವ ದಂಪತಿ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ದೇಶದಲ್ಲಿ ದಾಂಪತ್ಯ ಜೀವನ ತೀರಾ ಹದಗೆಟ್ಟಿದೆ. ಈ ಸಂದರ್ಭ ದಂಪತಿಗೆ ಮಾರ್ಗದರ್ಶನ ಮಾಡುವ ಶಿಶುಮಂದಿರದ ಕೆಲಸ ಶ್ಲಾಘನೀಯ. ವಿದೇಶಗಳಲ್ಲಿ ಮದುವೆ ಎಂದರೆ ವ್ಯಾವಹಾರಿಕ ಒಪ್ಪಂದದಂತೆ. ಆದರೆ ಭಾರತದ ಸಂಸ್ಕøತಿಯಲ್ಲಿ ಮದುವೆಯೆಂದರೆ ಮಾನಸಿಕ ಬಂಧನ. ಜೀವನ ಪರ್ಯಂತ ಪಾವಿತ್ರ್ಯತೆಯಿಂದ ಕಾಪಾಡಿಕೊಂಡು ಬರುವ ಪದ್ಧತಿ ಎಂಬರ್ಥ. ಮಹಾನ್ ಪರಂಪರೆಯುತ ದೇಶದಲ್ಲಿ ಭಾವನೆಗಳಿಗೆ ಬೆಲೆ ಕೊಟ್ಟು ಬದುಕಬೇಕಿದೆ. ದಂಪತಿಗಳು ಮನೆಯ ಎಲ್ಲರನ್ನು ಜತೆಯಾಗಿ ಬದುಕುವಂತೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ಕಾರ್ಮಿಕರಿಗಾಗಿ ಇರುವ ಸರಕಾರದ ಸವಲತ್ತುಗಳು , ಅದನ್ನು ಪಡೆದುಕೊಳ್ಳುವ ಕಾಳಜಿ ಹಾಗೂ ಜನಸಾಮಾನ್ಯರು ಯೋಜನೆಗಳನ್ನು ಅರಿತುಕೊಳ್ಳುವ ಹಿತದೃಷ್ಟಿಯಿಂದ ಆರಂಭವಾಗಿರುವ ಕಾರ್ಮಿಕ ಸಂಘಟನೆಗಳು ಹೋರಾಟಕ್ಕೆ ಮಾತ್ರ ಸೀಮಿತವಾಗಿರದೆ, ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ, ಮಜ್ದೂರ್ ಸಂಘ ಉಳ್ಳಾಲ ವಲಯ , ಭಾರತೀಯ ಮಜ್ದೂರ್ ಸಂಘಕ್ಕೆ ಸಂಯೋಜಿತ ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮತ್ತು ಇತರ ನಿರ್ಮಾಣ ಕಾರ್ಮಿಕರ ನೋಂದಣಿ ಹಾಗೂ ಮಂಡಳಿಯಿಂದ ಸಿಗುವ ಸವಲತ್ತುಗಳ ಬಗ್ಗೆ ಉದ್ಘಾಟನೆ, ಮಾಹಿತಿ ಹಾಗೂ ನೋಂದಣಿ ಕಾರ್ಯಕ್ರಮವನ್ನು ಕೊಲ್ಯ ಶಾರದ ಸಭಾಭವನದಲ್ಲಿ ಭಾನುವಾರ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮಸ್ನೇಹಿ ಕಾರ್ಯಕ್ರಮಗಳ ಮೂಲಕ ಸರಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಅದು ಯಶಸ್ವಿಯಾಗಿದೆ. ಕಾರ್ಮಿಕರು ಒಗ್ಗಟ್ಟಾಗಿ ಇದ್ದಾಗ ಸವಲತ್ತುಗಳನ್ನು ಗಳಿಸಲು ಸಾಧ್ಯ. ಸದ್ಯ ರಾಜ್ಯ ಸರಕಾರ ಕಾರ್ಮಿಕರ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಡಿಲ್: ತಮಿಳುನಾಡಿನಿಂದ ಕುಂದಾಪುರಕ್ಕೆ ಆಕ್ರಮವಾಗಿ ಸಾಗಟ ಮಾಡುತ್ತಿದ್ದು ಸುಮಾರು 13 ಲಕ್ಷ ಮೌಲ್ಯ ಬೆಲೆಬಾಳುವ ಮರದ ಲಾರಿಯನ್ನು ಮಂಗಳೂರು ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಘಟನೆ ಪಡಿಲ್ ಸಮೀಪದದಲ್ಲಿ ಶನಿವಾರ ನಡೆದಿದೆ. ಆರೋಪಿಗಳನ್ನು ತಮಿಳುನಾಡು ಮೂಲದ ಮುದ್ದೆ ಬಿಹಾಳ್ ತಾಲೂಕಿನ ರಮೇಶ್ ಎಂದು ಗುರುತಿಸಲಾಗಿದೆ. ಸುಮಾರು 40 ಜಾತಿಯ ದಿಮ್ಮಿ ಬಾಗೆ ಮರವನ್ನು ತಮಿಳುನಾಡಿನಿಂದ ಅಕ್ರಮವಾಗಿ ಸಾಗಾಟಮಾಡುತ್ತಿದ್ದ ವೇಳೆ ಲಾರಿಯಲ್ಲಿ ಕರ್ನಾಟಕ ಮೂಲದ ಯಾವುದೇ ರಹದಾರಿ ಪತ್ತೆಯಾಗದೇ ಇದ್ದುದರಿಂದ ಲಾರಿಯನ್ನು ಪರಿಶೀಲನೆಗೆ ತೆಗೆದುಕೊಳ್ಳಲಾಗಿತ್ತು. ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ನೇತೃತ್ವದಲ್ಲಿ ನಡೆದ ಈ ಕಾರ್ಯಚರಣೆಯಲ್ಲಿ ಮಂಗಳೂರು ಉಪವಲಯಣ್ಯಾಧಿಕಾರಿಗಳಾದ ಅಶ್ವಿತ್ ಗಟ್ಟಿ, ಪ್ರೀತಮ್ ಎಸ್.ಪೂಜಾರಿ, ವೆಂಕಟೇಶ್ ಭಟ್, ರವಿಕುಮಾರ್, ಜಗರಾಜ್, ಮತ್ತು ವಾಹನ ಚಾಲಕ ಸೂರಜ್ ಕೊಲ್ಯ ಉಪಸ್ಥಿತರಿದ್ದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ:ವೈದ್ಯಕೀಯ ಸೇವೆಯನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ದೃಷ್ಟಿಯಿಂದ ನೋಡಬಾರದು. ಯಾಕೆಂದರೆ ಜನರು ವೈದ್ಯರನ್ನು ದೇವರಂತೆ ಭಾವಿಸಿದ್ದು ಆ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆದರೆ ಪ್ರಸ್ತುತ ದಿನಗಳಲ್ಲಿ ದೇಶವ್ಯಾಪಿ ಬಹತೇಕ ವೈದ್ಯರು ನಗರಪ್ರದೇಶದಲ್ಲಿಯೇ ಸೇವೆ ಸಲ್ಲಿಸಲು ಉತ್ಸುಕರಾಗುತ್ತಿರುವುದರಿಂದ ಗ್ರಾಮೀಣ ಭಾಗದ ಜನತೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಹಿಂದೆ ಬೀಳುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಜೆ.ಆರ್. ಲೋಬೋ ಅಭಿಪ್ರಾಯಪಟ್ಟರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳ ಜ್ಞಾನವರ್ಧನೆ ಹಾಗೂ ಇತ್ತೀಚಿನ ವೈದ್ಯಕೀಯ ಬೆಳವಣಿಗೆಯ ಕುರಿತಂತೆ ಮಾಹಿತಿ ನೀಡುವ ಸಲುವಾಗಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಎಲ್ಲ ಸೇವೆಗಳಿಗಿಂತಲೂ ವೈದ್ಯಕೀಯ ಸೇವೆ ಮಿಗಿಲು. ವೈದ್ಯರುಗಳಿಗೆ ಸಮಾಜದಲ್ಲಿ ಮಹತ್ತರ ಜವಬ್ದಾರಿ ಇದೆ. ವೈದ್ಯರುಗಳ ಸೇವೆ ಗ್ರಾಮೀಣ ಭಾಗಕ್ಕೂ ಲಭ್ಯವಾಗಬೇಕೆಂಬ ನೆಲೆಯಲ್ಲಿ ರಾಜ್ಯ ಸರಕಾರ ಯುವವೈದ್ಯರ ಸೇವೆ ಗ್ರಾಮೀಣ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಂಬಿಕಾರೋಡ್: ನೇತ್ರಾವತಿ ನದಿ ತಿರುವಿನ ಎತ್ತಿನಹೊಳೆ ಯೋಜನೆ ಹಿಂದೆ ಗುಪ್ತ ಕಾರ್ಯಸೂಚಿ ಅಡಗಿದ್ದು, ಜಿಲ್ಲೆಯ ಜನ ಸರಿಯಾಗಿ ಯೋಚಿಸದೆ ವಿರೋಧಿಸದಿದ್ದಲ್ಲಿ ಭವಿಷ್ಯದಲ್ಲಿ ಅನಾಹುತಗಳಿಗೆ ಸಿಲುಕುವುದರಲ್ಲಿ ಸಂಶಯವಿಲ್ಲ ಎಂದು ಸುರತ್ಕಲ್ ಎನ್ಐಟಿಕೆಯ ನಿವೃತ್ತ ಪ್ರೊ. ಎಸ್.ಜಿ.ಮಯ್ಯ ಎಚ್ಚರಿಕೆ ನೀಡಿದ್ದಾರೆ. ಅವರು ದಕ್ಷಿಣ ವಲಯ ಮಂಗಳೂರು ಧರ್ಮಪ್ರಾಂತ್ಯ , ದಕ್ಷಿಣ ವಲಯ ಕೆಥೋಲಿಕ್ ಸಭಾ, ತೊಕ್ಕೊಟ್ಟು ವಾಸುಕೀ ಸೇವಾ ಸಂಘ , ತುಳುನಾಡು ರಕ್ಷಣಾ ವೇದಿಕೆ, ತೊಕ್ಕೊಟ್ಟು ವಿದ್ಯಾಗಣಪತಿ ರಾಮ ಸೇವಾ ಸಮಿತಿ ವತಿಯಿಂದ ಗುರುವಾರ ಕಾಪಿಕಾಡಿನ ಅಂಬಿಕಾರೋಡಿನಲ್ಲಿರುವ ಗಟ್ಟಿ ಸಮಾಜಭವನದಲ್ಲಿ ನಡೆದ ನೇತ್ರಾವತಿ ನದಿ ತಿರುವು ವಿರೋಧಿಸಿ ಸಮಾನ ಮನಸ್ಕರ ಚಿಂತನ-ಮಂತನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಎತ್ತಿನಹೊಳೆ ಯೋಜನೆ ಕೆಲ ಜನಪ್ರತಿನಿಧಿಗಳು ಉದ್ದೇಶಪೂರ್ವಕವಾಗಿ ಮಾಡುತ್ತಿರುವ ತಪ್ಪಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ದೇವನಹಳ್ಳಿ ಕೈಗಾರಿಕಾ ವಲಯ ಸೇರಿದಂತೆ ರಾಜ್ಯದ ವಿವಿದೆಡೆ ನೇತ್ರಾವತಿ ನೀರು ಕೊಡುವ ಭರವಸೆ ನೀಡಿದ್ದಾರೆ. ಆದರೆ ಕೊಡುವಂತಹ 24 ಟಿಎಂಸಿ ನೀರು ಕೈಗಾರಿಕಾ ವಲಯಗಳಿಗೂ ಪೂರೈಕೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುನ್ನೂರು: ಸಿಲಿಂಡರ್ನಲ್ಲಿ ಬೆಂಕಿ ಕಾಣಿಸಿಕೊಂಡು ಮನೆಮಾಲೀಕ ಪವಾಡಸದೃಶವಾಗಿ ಪಾರಾದ ಘಟನೆ ಸುಭಾಷನಗರದ ಪಲ್ಕೆ ಎಂಬಲ್ಲಿ ಗುರುವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಮುನ್ನೂರು ಪಂಚಾಯಿತಿ ವ್ಯಾಪ್ತಿಯ ಸುಭಾಷನಗರದ ಪಲ್ಕೆ ನಿವಾಸಿ ಮಹಮ್ಮದ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಪತ್ನಿ ಆಯೇಷಾ ಬೀಬಿ ಮತ್ತು ಒಂಭತ್ತು ತಿಂಗಳ ಮಗು ಫಾತಿಮತ್ ಮುಫೀರಾ ಮದುವೆ ಸಮಾರಂಭಕ್ಕೆ ತೆರಳಿದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ. ಘಟನೆ ವಿವರ: ಮಹಮ್ಮದ್ ಅವರ ನೂತನ ಮನೆಯ ಕೆಲಸ ನಡೆಯುತ್ತಿದ್ದು, ಅಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಚಹಾ ಇಡಲೆಂದು ಮಹಮ್ಮದ್ ಗ್ಯಾಸ್ ಸ್ಟವ್ ಅನ್ನು ಉರಿಸಿ ಹೊರ ನಡೆದಿದ್ದರು. ಸ್ವಲ್ಪ ಹೊತ್ತಿನಲ್ಲೇ ಸ್ಟವ್ ನ ರೆಗ್ಯುಲೇಟರ್ ಮತ್ತು ಪೈಪಿನಲ್ಲಿ ಬೆಂಕಿ ಉಂಟಾಗಿ, ಮನೆಯ ಸೋಫಾ, ಫ್ರಿಡ್ಜ್ ಹಾಗೂ ಇನ್ನಿತರ ಸಾಮಗ್ರಿಗಳು ಹೊತ್ತಿ ಉರಿದಿವೆ. ಕೂಡಲೇ ನೀರೆರಚಿ ಬೆಂಕಿಯನ್ನು ನಂದಿಸುವ ಯತ್ನ ಮಾಡಿದ್ದರಿಂದಾಗಿ ಮನೆ ಸುಟ್ಟು ಹೋಗುವುದು ತಪ್ಪಿದಂತಾಗಿದೆ. ಘಟನೆಯಿಂದಾಗಿ ರೂ.20,000 ನಷ್ಟ ಸಂಭವಿಸಿದೆ. 20 ದಿನಗಳ ಹಿಂದೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಬೀಡಿ ಉತ್ಪಾದನೆಯ ಪ್ರಕ್ರಿಯೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಬೆಲೆ ಏರಿಕೆಗೆ ಅನುಸಾರವಾಗಿ 1983 ರಿಂದ ಜಾರಿಯಲ್ಲಿರುವ ತುಟ್ಟಿಭತ್ಯೆ ಕಾನೂನನ್ನು 2015-16 ಆರ್ಥಿಕ ವರ್ಷದಲ್ಲಿ ಕಂಪೆನಿ ನೀಡದೆ ಉಲ್ಲಂಘಿಸಿರುವುದರಿಂದ ಅನ್ಯಾಯಕ್ಕೊಳಗಾದ ಬೀಡಿ ಕಾರ್ಮಿಕರ ಪರವಾಗಿ ಕೋಟೆಕಾರು ಸರ್ಕಲ್ ಬೀಡಿ ಲೇಬರ್ ಯೂನಿಯನ್ ವತಿಯಿಂದ ಗುರುವಾರ ಉಳ್ಳಾಲದಲ್ಲಿ ಪ್ರತಿಭಟನೆ ನಡೆಯಿತು. ಕಾರ್ಮಿಕರಿಗೆ 2015 ಎ.1 ರಿಂದ ಸಾವಿರ ಬೀಡಿಗೆ, ಉತ್ಪಾದನೆಯ ಮೇಲೆ ಸಿಗಬೇಕಾಗಿದ್ದ ರೂ.12.75 ತುಟ್ಟಿ ಭತ್ಯೆ ಹಣ ಹಾಗೂ ಅದಕ್ಕೆ ಹೊಂದಿಕೊಂಡು ಸಿಗಬೇಕಾಗಿರುವ ರೂ. 3.37 ಬೋನಸ್, ಭವಿಷ್ಯನಿಧಿ ಹಣದಲ್ಲಿ ವಂಚನೆಯಾಗಿದೆ. ಬೆಲೆ ಏರಿಕೆಯಿಂದ ತತ್ತರಿಸುವ ಸಮಯದಲ್ಲಿ ಕಾರ್ಮಿಕರು ಇಂತಹ ವಂಚನೆಯಿಂದ ಅನ್ಯಾಯಕ್ಕೊಳಗಾಗಿದ್ದಾರೆ. ತುಟ್ಟಿ ಭತ್ಯೆ ಕಾಯ್ದೆಯನ್ನು ಸರಕಾರ ರದ್ದುಗೊಳಿಸದ ಹಿನ್ನೆಲೆಯಲ್ಲಿ ಸರಕಾರದ ಆದೇಶವನ್ನು ಕಂಪೆನಿ ಉಲ್ಲಂಘಿಸಿದಂತಾಗಿದೆ. ಈ ಕ್ರಮವನ್ನು ಹಿಂದಕ್ಕೆ ಪಡೆದು ಕೊಡಬೇಕಾದ ತುಟ್ಟಿ ಭತ್ಯೆಯನ್ನು ಕೂಡಲೇ ವಿತರಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಕಂಪೆನಿ ವಿತರಿಸುತ್ತಿರುವ ನಕರಿ ಎಲೆಯಿಂದಾಗಿ ಕಾರ್ಮಿಕರಿಗೆ ಬೀಡಿ ಕಟ್ಟಲು ಅಸಾಧ್ಯವಾಗುತ್ತಿದೆ.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುನ್ನೂರು: ಕಟ್ಟಡ ಮತ್ತು ಇತರೆ ನಿರ್ದಿಷ್ಟ ಕಾರ್ಮಿಕರ ಸಂಘ ಸಿಐಟಿಯು ಇದರ ಸಂಘಟನೆ ಮತ್ತು ಮಾಹಿತಿ ಕಾರ್ಯಕ್ರಮವು ಮುನ್ನೂರು ಯುವಕ ಮಂಡಲದ ಎಮ್.ವೈ.ಎಮ್. ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜನಾರ್ಧನ್ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಕೋಶಾಧಿಕಾರಿಯಾಗಿ ಯೋಗೀಶ್ ಜಪ್ಪಿನಮೊಗರು ಇವರು ಕಾರ್ಮಿಕರಿಗೆ ಮಂಡಳಿಯಲ್ಲಿ ಸಿಗುವ ಸವಲತ್ತುಗಳನ್ನು ಪಡೆಯುವ ಬಗ್ಗೆ ಮಂಡಳಿಗೆ ನೊಂದಾವಣಿಗೊಳಿಸುವ ಬಗ್ಗೆ ಕಟ್ಟಡ ಕಾರ್ಮಿಕರಿಗೆ ಮಾಹಿತಿಯನ್ನು ನೀಡಿದ್ದರು. ಜಿಲ್ಲಾ ಸಿ.ಐ.ಟಿ.ಯು ಜೊತೆ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸಂಘಟನೆಯ ಬಗ್ಗೆ ತರಬೇತಿ ಮಾಡಿದ್ದರು. ಉಳ್ಳಾಲ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲಿಯಾನ್ ಕಾರ್ಮಿಕರಿಗೆ ಸಿಗುವ ಸವಲತ್ತುಗಳ ವಿಳಂಭ ಧೋರಣೆಯ ಬಗ್ಗೆ ಕಾರ್ಮಿಕರಿಗೆ ಮಾಹಿತಿ ನೀಡಿ ಮಂಡಳಿಯಲ್ಲಿ 12 ಬಗೆಯ ಸವಲತ್ತುಗಳು ಇವೆ. ಆದರೆ ಅರ್ಜಿ ಹಾಕಿ ವರ್ಷ ಕಳೆದರೂ ಸವಲತ್ತು ಕಾರ್ಮಿಕರ ಕೈಗೆ ಸಿಗುತ್ತಿಲ್ಲ. ಸಿಐಟಿಯು ಹೋರಾಟದ ಫಲವಾಗಿ ಕಟ್ಟಡ ಕಾರ್ಮಿಕರ ಮಂಡಳಿ ರಚನೆಯಾಗಿದೆ. ಕಾನೂನು ಸವಲತ್ತುಗಳನ್ನು ಜಾರಿಗೊಳಿಸಲು ಸಾಧ್ಯವಾಗಿದೆ. ಆದರೆ ಈಗ ಕಾರ್ಮಿಕ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ದ.ಕ.ಜಿಲ್ಲೆಗೆ ಮಾರಕವಾಗಿರುವ ಎತ್ತಿನಹೊಳೆ ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಕೊಲ್ಯ ಸೋಮೇಶ್ವರ ಬಿಲ್ಲವ ಸಂಘ ಸಭೆಯಲ್ಲಿ ನಿರ್ಣಯಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ವಿರುದ್ಧದ ಹೋರಾಟದಲ್ಲಿ ಸರ್ವ ಸದಸ್ಯರು ಭಾಗವಹಿಸುವಂತೆ ನಿರ್ಣಯ ಕೈಗೊಳ್ಳಲಾಯಿತು. ತುಳುನಾಡಿನ ಪ್ರಕೃತಿದತ್ತವಾದ ನೇತ್ರಾವತಿ ನದಿಯನ್ನು ನುಂಗಿ, ಜಲಮೂಲವನ್ನು ನಾಶಮಾಡಿ ಮುಂದಿನ ದಿನಗಳಲ್ಲಿ ತೀವ್ರ ಜಲಕ್ಷಾಮ ತಂದೊಡ್ಡುವ ಗೊತ್ತು ಗುರಿಯಿಲ್ಲದ ಎತ್ತಿನ ಹೊಳೆ ಯೋಜನೆಯನ್ನು ಕೈ ಬಿಡಬೇಕು . ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸರ್ವಸದಸ್ಯರು ಹೋರಾಟದಲ್ಲಿ ಭಾಗವಹಿಸಬೇಕು , ಈ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಹಾಗೂ ಮಂಗಳೂರು ದಸರಾ ಕಾರ್ಯಕ್ರಮದಲ್ಲಿ ಎಲ್ಲಾ ಸದಸ್ಯರು ಸ್ವಯಂ ಸೇವಕರಾಗಿ ಭಾಗವಹಿಸಲು ನಿರ್ಧರಿಸಲಾಯಿತು. ಟೈಲರ್ಸ್ ಅಸೋಸಿಯೇಷನ್ ಬೆಂಬಲ: ನೇತ್ರಾವತಿ ಉಳಿಸಿ ಹೋರಾಟಕ್ಕೆ ಉಳ್ಳಾಲ ವಲಯದ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷ ಬಿ.ನಾರಾಯಣ ಕುಂಪಲ ಹೇಳಿದ್ದಾರೆ.

