ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಎತ್ತಿನ ಹೊಳೆ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿ ದ.ಕ. ಜಿಲ್ಲಾ ಸಂಸದ ನಳಿನ್ ಕುಮಾರ್ ರವರ ನೇತೃತ್ವದಲ್ಲಿ ಅ. 10ರಿಂದ ಅ. 13ರವರೆಗೆ `ನೇತ್ರಾವತಿ ರಕ್ಷಿಸಿ ದ.ಕ. ಉಳಿಸಿ’ ಘೋಷಣೆಯೊಂದಿಗೆ `ನಮ್ಮ ನಡೆ ಎತ್ತಿನ ಹೊಳೆಗೆ’ ಎಂಬ ಬೃಹತ್ ಕಾಲ್ನಡಿಗೆ ಜಾಥಾದಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರದಿಂದ ಸುಮಾರು 2500 ಬಾಜಪಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಗಳೂರು ಕ್ಷೇತ್ರಾಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ ತಿಳಿಸಿದರು. ತೊಕ್ಕೊಟ್ಟು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎತ್ತಿನ ಹೊಳೆ ಯೋಜನೆಯನ್ನು ಕಾರ್ಯಗತಗೊಳಿಸುವ ಮುಖಾಂತರ ದಕ್ಷಿಣ ಕನ್ನಡ ಜಿಲ್ಲೆಯ ಜನರ ಭಾವನೆಗಳನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ಎತ್ತಿನ ಹೊಳೆ ಕಾಮಗಾರಿಗೆ ರಾಷ್ಟ್ರೀಯ ಹಸಿರು ಪೀಠದ ತಡೆಯಾಜ್ಞÉ ಇದ್ದರೂ 13500 ಕೋಟಿ ರೂ. ಈ ಯೋಜನೆಯನ್ನು ಮುಂದುವರಿಸುತ್ತಿರುವುದು ರಾಜ್ಯ ಸರ್ಕಾರ ಧೋರಣೆ ಸಂಶಯಕ್ಕೆ ಎಡೆಮಾಡಿದ್ದು, ಯೋಜನೆಯಿಂದ ದ.ಕ. ಜಿಲ್ಲೆಯ ಕೃಷಿ, ಮೀನುಗಾರಿಕೆ ಹಾಗೂ ಕುಡಿಯುವ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ : ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಅಕ್ರಮ ಮರಳು ಸಾಗಾಟಕ್ಕೆ ಕಳೆದ ನಾಲ್ಕು ದಿನಗಳಿಂದ ತಡೆ ಬಿದ್ದಿದ್ದು, ಪೊಲೀಸ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಇಂಡಸ್ಟ್ರಿಯಲ್ ಪೆÇಲೀಸ್ ಪಡೆ ಸಿಬಂದಿಗಳು ಅಕ್ರಮ ಮರಳುಗಾರಿಕೆಯ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಕಳೆದೆರಡು ದಿನಗಳಿಂದ ಸುಮಾರು 40ಕ್ಕೂ ಹೆಚ್ಚು ಲಾರಿಗಳನ್ನುಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನೇತ್ರಾವತಿ ತಟದ ಪಾವೂರು ಇನೋಳಿಯಿಂದ ಹೊರ ರಾಜ್ಯಗಳಿಗೆ ಅಕ್ರಮ ಮರಳು ಸಾಗಾಟಕ್ಕೆ ಸಂಬಂ„ಸಿದಂತೆ ಡಿವೈಎಫ್ಐ ಸೇರಿದಂತೆ ಸ್ಥಳೀಯರು ಕಲೆದ ಹಲವು ತಿಂಗಳಿಂದ ಹೋರಾಟ ನಡೆಸಿದ್ದರು. ಆದರೆ ಅಕ್ರಮ ಮರಳು ಸಾಗಾಟ ಯಾವುದೇ ಅಡೆತಡೆ ಇಲ್ಲದೆ ಮುಂದುವರೆದಿತ್ತು. ಈ ನಿಟ್ಟಿನಲ್ಲಿ ಹೋರಾಟ ಚುರುಕುಗೊಳಿಸುವ ಮಾಹಿತಿಯನ್ನು ಡಿವೈಎಫ್ಐ ಸಂಘಟನೆ ಪತ್ರಿಕಾಗೋಷ್ಠಿಯನ್ನು ಕರೆದಿತ್ತು. ಮುಖ್ಯವಾಗಿ ಕೊಣಾಜೆ ಪೆÇಲೀಸ್ ಅ„ಕಾರಿಗಳು ಮರಳು ಮಾಫಿಯದೊಂದಿಗೆ ಸೇರಿಕೊಂಡಿದ್ದರು ಎನ್ನುವ ಆರೋಪ ಮಾಡಿತ್ತು.ಇದೀಗ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಮರಳುಗಾರಿಕೆಗೆ ತಾತ್ಕಾಲಿಕ ತಡೆ ಬಿದ್ದಂತಾಗಿದೆ. ಇನ್ಸ್ಪೆಕ್ಟರ್ ಹಠಾವೊ ಚಳವಳಿ : ಡಿವೈಎಫ್ಐ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು : ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮ ಪಂಚಾಯತ್ನ ನವಸಾಕ್ಷರರು ಉತ್ಪಾದಿಸಿದ ದಿನಬಳಕೆ ವಸ್ತುಗಳು ಹಾಗೂ ಬೆಳೆಸಿದ ಸಾವಯವ ತರಕಾರಿಗಳನ್ನು ನ್ಯಾಯಬೆಲೆಯಲ್ಲಿ ಮಾರಾಟ ಮಾಡುವ ಕೇಂದ್ರ ಅಕ್ಷರ ಅಂಗಡಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ ಉದ್ಘಾಟಿಸಿದರು. ದ.ಕ.ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ ಹಾಗೂ ಜನಶಿಕ್ಷಣ ಟ್ರಸ್ಟ್ನ ಸಹಭಾಗಿತ್ವದಲ್ಲಿ ನಡೆದ ನವಸಾಕ್ಷರರ ವೃತ್ತಿ ತರಬೇತಿಯಲ್ಲಿ ಭಾಗವಹಿಸಿದ ನವಸಾಕ್ಷರರು ತಯಾರಿಸಿದ ದಿನಬಳಕೆ ವಸ್ತುಗಳಾದ ಹರ್ಬಲ್ ಫಿನಾಯಿಲ್, ಸಾಬೂನ್, ಸಾಬೂನು ಪೌಡರ್, ಸಾಬೂನು ದ್ರಾವಣ ಮತ್ತಿತರ ಗೃಹೋಪಯೊಗಿ ವಸ್ತುಗಳು ಹಾಗೂ ಪ್ರತಿ ಮನೆಗಳಲ್ಲಿ ಬೆಳೆಸಲಾಗುವ ಸಾವಯವ ತರಕಾರಿಗಳನ್ನು ಮಾರಾಟ ಮಾಡುವ ಕೇಂದ್ರ ಸುಸಜ್ಜಿತ ಎರಡು ಕೊಠಡಿಗಳ ಕಟ್ಟಡದಲ್ಲಿ ಮಾರಾಟ ನಡೆಯಲಿದ್ದು ಅದೇ ಸಂದರ್ಭ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಮನೆ, ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ಮಾಡಲಾಯಿತು. ಹಸಿಕಸದ ನಿರ್ವಹಣೆಗೆ ಪೈಪ್ ಕಾಂಪೆÇೀಸ್ಟ್ ತಯಾರಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಗೋಡೆಯ ಮೇಲಿನ ಹಣತೆಯ ಬೆಳಕಿನಲ್ಲಿ ಪ್ರತಿಭೆಗಳು ಹುಟ್ಟುವಂತೆ ಕಾಡಿನೊಳಗಿನ ಕತ್ತಲಿನಲ್ಲಿಯೂ ವಿಚಾರಗಳು ಹುಟ್ಟುತ್ತವೆ. ಪ್ರಶ್ನೆ ಅನುಮಾನಗಳು ಹುಟ್ಟುತ್ತವೆ. ಮಾನವ ಬೆಳಕಿನಲ್ಲಿರುವುದಕ್ಕಿಂತ ಹೆಚ್ಚಿನ ಜ್ಞಾನವನ್ನು ಕತ್ತಲೆಯಲ್ಲಿ ಮತ್ತು ಒಂಟಿಯಾಗಿರುವಾಗ ಪಡೆದುಕೊಳ್ಳುತ್ತಾನೆ. ಆದರೆ ನಮ್ಮ ತಲೆಯಲ್ಲಿ ಎಲ್ಲವೂ ನನಗೆ ತಿಳಿದಿದೆ ಎಂಬ ಅಹಂ ಭಾವನೆ ನಿಂತು ಬಿಟ್ಟರೆ ನಮ್ಮಿಂದ ಯಾವುದೇ ರೀತಿಯ ಕಲಿಕಾ ಆಸಕ್ತಿ ಮೂಡಲು ಸಾಧ್ಯವಿಲ್ಲ ಎಂದು ಸಾಹಿತಿ,ಅಂಕಣಕಾರ ನರೇಂದ್ರ ರೈ ದೇರ್ಲ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ.ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನಡೆದ ತೇಜಸ್ವಿ ನೆನಪು ಮತ್ತು ಬಿತ್ತಿ ಪತ್ರಿಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬ್ರಿಟಿಷ್ ಕಂಪೆನಿಗಳ ಮೂಲಕ ಪ್ರಕಟವಾಗುತ್ತಿದ್ದ ಬಂಗಾಳ ಗೆಜೆಟ್ನಂತಹ ಪತ್ರಿಕೆಗಳು ಮೊದಲು ಗೋಡೆ ಬರಹದ ಮೂಲಕ ಬಿತ್ತರವಾಗುತ್ತಿತ್ತು. ನಂತರ ಅದು ಸಮಾಜವನ್ನು ಮುಟ್ಟಿದ್ದು. ಪತ್ರಿಕೆ ಎಲ್ಲಿ ಪ್ರಕಟವಾಗುತ್ತದೆ ಎಂಬುದು ಮುಖ್ಯವಲ್ಲ ಅದರಲ್ಲಿ ಯಾವ ರೀತಿಯಾದ ಮಾಹಿತಿ ಲಭ್ಯವಿದೆ ಎಂಬುದು ಮುಖ್ಯವಾಗುತ್ತದೆ ಎಂದು ಹೇಳಿ ಬಿತ್ತಿ ಪತ್ರಿಕೆಗೆ ಶುಭ ಹಾರೈಸಿದರು. ಪೂರ್ಣಚಂದ್ರ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು : ವಿಶ್ವವನ್ನೇ ಭಯೋತ್ಪಾದನೆ ಮತ್ತು ಜಾಗತಿಕ ತಾಪಮಾನಗಳೆಂಬ ಎರಡು ಗಂಡಾಂತರಗಳು ಆಳುತ್ತಿದ್ದು ಅದರಿಂದ ಮುಕ್ತರಾಗಲು ಯುವಶಕ್ತಿಗಳು ಒಂದಾಗಬೇಕೆಂದು ಪರಿಸರವಾದಿ ಮಾಧವ ಉಳ್ಳಾಲ್ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟಿನ ಜಗತ್ ಫ್ರೆಂಡ್ಸ್ ಸರ್ಕಲ್ನ ಬೆಳ್ಳಿ ಹಬ್ಬದ ಆಚರಣೆ ಪ್ರಯುಕ್ತ ಆಯೋಜಿಸಲಾದ `ವೃಕ್ಷ ಆಂದೋಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತಾಪಮಾನದ ಹೊಡೆತಕ್ಕೆ ಸಿಲುಕಿ ಹಚ್ಚ ಹಸುರಿನ ಪರಿಸರ ಮಾಯವಾಗುತ್ತಿದೆ. ಇಡೀ ವಿಶ್ವವೇ ಜಾಗತಿಕ ತಾಪಮಾನವೆಂಬ ಗಂಡಾಂತರ ಎದುರಿಸುತ್ತಿದ್ದು ಅದನ್ನು ಹೋಗಲಾಡಿಸಲು ಯುವಕರು ಜಾಗೃತಿ ಅಭಿಯಾನಗಳ ಮೂಲಕ ಜನರನ್ನು ಜಾಗೃತಗೊಳಿಸುವ ಕಾರ್ಯ ನಡೆಸಬೇಕಿದೆ. ಸಸಿಗಳಿಗೆ ಸದಾ ನೀರೆರೆದು ಮಕ್ಕಳಂತೆ ಪೆÇೀಷಿಸಿ ಅದನ್ನು ಗಿಡದಿಂದ ಮರವನ್ನಾಗಿಸುವ ಜವಬ್ದಾರಿ ತೆಗೆಯಬೇಕೆಂದು ಹೇಳಿದರು. ಕಾರ್ಯಕ್ರಮ ಸಂಘಟಕ ರೋಹಿತ್ ಉಳ್ಳಾಲ್ ಮಾತನಾಡಿ ಜಗತ್ ಫ್ರೆಂಡ್ಸ್ ಸರ್ಕಲ್ ಕಳೆದ ಇಪ್ಪತ್ತೈದು ವರುಷಗಳಿಂದಲೂ ಅನೇಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಕ್ಷೇತ್ರದ ಜನರ ಪ್ರೀತಿಗೆ ಪಾತ್ರವಾಗಿದ್ದು ಸಂಸ್ಥೆಯು ಬೆಳ್ಳಿ ಹಬ್ಬ ಆಚರಿಸುತ್ತಿರುವ ಸಂಧರ್ಭದಲ್ಲಿ ತೊಕ್ಕೊಟ್ಟು ಮೇಲ್ಸೇತುವೆಯ ಪ್ರವೇಶ ಮಾರ್ಗದ ಎರಡೂ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು : ತೊಕ್ಕೊಟ್ಟಿನ ವೈನ್ ಶಾಪ್ ಮಾಲಕನಿಗೆ ತಲವಾರು ತೋರಿಸಿ 1.68 ಲಕ್ಷ ರೂ. ದರೋಡೆ ಮಾಡಿ ಪರಾರಿಯಾದ ಘಟನೆ ತೊಕ್ಕೊಟ್ಟು ಜಂಕ್ಷನ್ನಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಘಟನೆಗೆ ಸಂಬಂಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟು ಜಂಕ್ಷನ್ ಬಳಿ ವೈನ್ಶಾಪ್ ಹೊಂದಿರುವ ಹರೀಶ್ ಶೆಟ್ಟಿ ಎಂಬವರೇ ದರೋಡೆಗೊಳಗಾದವರು. ವೈನ್ ಶಾಪ್ನಲ್ಲಿ ವ್ಯವಹಾರ ಮುಗಿಸಿ ಹಣದೊಂದಿಗೆ ಕಾರಿನಲ್ಲಿ ಕುಳಿತುಕೊಂಡಾಗ ಏಕಾಏಕಿ ಆಗಮಿಸಿದ ಮೂವರು ಆಗಂತುಕರು ತಲವಾರಿನಿಂದ ಕಾರಿನ ಗಾಜನ್ನು ಹೊಡೆದು ಅವರ ಕೈಯಿಂದ ಹಣವನ್ನು ಎಳೆದು ಬೈಕ್ ಮತ್ತು ಕಾರಿನಲ್ಲಿ ಪರಾರಿಯಾಗಿದ್ದರೆ. ಸಂದರ್ಭದಲ್ಲಿ ಹರೀಶ್ ಅವರ ಕುತ್ತಿಗೆಯಲ್ಲಿ ಬಂಗಾರದ ಸರಕ್ಕೂ ಕೈ ಹಾಕಿ ಎಳೆದಿದ್ದು, ಅದು ತುಂಡಾಗಿ ಅಂಗಿಯೊಳಗೆ ಬಿದ್ದಿತ್ತು. ಹರೀಶ್ ಅವರ ಬೊಬ್ಬೆ ಕೇಳಿ ಸ್ಥಳೀಯ ಅಂಗಡಿಯವರು ಓಡಿ ಬಂದಾಗ ದರೋಡೆಕೋರರು ಪರಾರಿಯಾಗಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು : ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ವತಿಯಿಂದ ಟಿ.ಎಂ ಮುಹೀಯದ್ದೀನ್ ಸಖಾಫಿತೊಕೆ ಉಸ್ತಾದರ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ದಾರುಲ್ ಮುಸ್ತಾಫ ಮೋರೆಲ್ ಅಕಾಡೆಮಿಗೆ ಸಹಾಯ ಧನವಾದ 10,000 ಸಾವಿರ ರೂಪಾಯಿಯ ಚೆಕ್ನ್ನು ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ಅಧ್ಯಕ್ಷರಾದ ಇಲ್ಯಾಸ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಮಂಜನಾಡಿ ಸೆಕ್ಟರ್ಅಧ್ಯಕ್ಷರಾದ ಇಬ್ರಾಹಿಂ ಅಹ್ಸನಿಯವರು ನೀಡಿದರು. ಈ ಕಾರ್ಯಕ್ರಮವನ್ನು ಶಫೀಕ್ಅಹ್ಸನಿ ಉದ್ಘಾಟಿಸಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕೋಶಾ„ಕಾರಿ ಅಲ್ತಾಫ್ ಕುಂಪಲ, ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ರಿಲೀಪ್ ಸರ್ವೀಸ್ ವೈಸ್ಚೆಯರ್ಮ್ಯಾನ್ ಬದ್ರುದ್ದೀನ್ ಸೇವಂತಿಗುಡ್ಡೆ, ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ಕೋಶಾ„ಕಾರಿ ಶಮೀರ್ ಸೇವಂತಿಗುಡ್ಡೆ, ಶಹೀದ್ ಮಂಚಿಲ, ಸವಾದ್ಕಲ್ಲಾಪು ಉಪಸ್ಥಿತರಿದ್ದರು.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾಲ್ ಸೆಂಟರ್ ಉದ್ಯೋಗಿಯ ಮೇಲೆ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್ ನಡೆಸಿದ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಮೂವರು ವಿಶೇಷ ಪೊಲೀಸರ ತಂಡಗಳನ್ನು ರಚನೆ ಮಾಡಲಾಗಿದೆ. ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಬರುತ್ತಿದ್ದ ವೇಳೆ ಯುವತಿಯನ್ನು ದುಷ್ಕರ್ಮಿಗಳು ಡ್ರಾಪ್ ಕೊಡುವ ನೆಪದಲ್ಲಿ ಹತ್ತಿಸಿಕೊಂಡಿದ್ದಾರೆ. ಬಳಿಕ ಆಕೆಯನ್ನು ಮಡಿವಾಳ ಕಡೆ ಸುತ್ತಾಡಿಸಿ, ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರಕ್ಕೆ ಗುರಿಯಾದ ಯುವತಿ ಮಧ್ಯಪ್ರದೇಶ ಮೂಲದವಳು ಎಂದು ತಿಳಿದುಬಂದಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಅಸ್ವಸ್ಥಗೊಂಡಿದ್ದ ಯುವತಿ, ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರು ಆಕೆಯನ್ನು ಸೇಂಟ್ಸ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡು ದಿನದಿಂದ ಸೇಂಟ್ಸ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆಯನ್ನು ಸೋಮವಾರ ಆಸ್ಪತ್ರೆಯಿಂದ ಹಾಸ್ಟೆಲ್ಗೆ ಮರಳಿದ್ದಾರೆ. ಮೂವರ ಶಂಕಿತರ ಬಂಧನ: ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿವಾಳ ಠಾಣಾ ಪೊಲೀಸರು ತನಿಖೆ ಚುರುಕು ಗೊಳಿಸಿದ್ದು, ಮಂಗಳವಾರ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.…
ಬೆಂಗಳೂರು: ಸ್ಯಾಂಡಲ್ವುಡ್ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ನಗರದ ವಿಠಲ್ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಎಂದಿನಂತೆ ಜಿಮ್ ನಿಂದ ಬಂದ ಇವರಿಗೆ ಬಲಭುಜದ ಬಳಿ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇವರ ಕುಟಂಬ ಮೂಲಗಳು ತಿಳಿಸಿವೆ. ಶಿವಣ್ಣ ಅವರು ಆರೋಗ್ಯವಾಗಿದ್ದು, ಯಾರೂ ಆತಂಕಪಡಬೇಕಾದ ಅವಶ್ಯಕತೆಯಿಲ್ಲ ಎಂದು ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಹಿಂದೂ ಸಮಾಜ ಬಾಂಧವರ ಆಧುನಿಕ ಶೈಲಿಯ ಬದುಕು, ಸುಖಮಯ ಜೀವನದ ಕನಸು, ಸಮಾಜದ ಕೆಲವೊಂದು ಕಟ್ಟುಪಾಡುಗಳಿಂದಾಗಿ ಈ ದೇಶದಲ್ಲಿ ಹಿಂದೂ ಬಲ ಕುಸಿಯುತ್ತಿದ್ದು ಅಂಕಿಅಂಶಗಳು ತಿಳಿಸುವಂತೆ ಬಹುಸಂಖ್ಯಾತ ಹಿಂದೂ ಸಮಾಜ 2061ರ ಹೊತ್ತಿಗೆ ಅಲ್ಪಸಂಖ್ಯಾತ ಸಮಾಜವಾಗುವ ಆತಂಕವಿದೆ. ಆ ದಿಸೆಯಲ್ಲಿ ಸಮಾಜ ಬಾಂಧವರು ಎಚ್ಚೆತ್ತುಕೊಳ್ಳಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಸಾಮರಸ್ಯ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜಭವನದಲ್ಲಿ ಭಾನುವಾರ ನಡೆದ ಸದ್ಭಾವನಾ ಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಕೆಲವು ಸಮುದಾಯದ ಜನರು ತಮ್ಮ ಮಕ್ಕಳನ್ನು ಕೆಲವು ಕಟ್ಟುಪಾಡುಗಳ ಮಧ್ಯೆಯೂ ಹೇಗಾದರೂ ಸಾಕುತ್ತಾರೆ. ಅವರು ಹೇಗಾದರೂ ಬದುಕುತ್ತಾರೆ. ಅಂತಹ ಸಮಾಜದ ಮಹಿಳೆಯರಿಗೆ ಇರುವ ಸ್ಥೈರ್ಯ ಹಿಂದು ಸಮಾಜದ ಮಹಿಳೆಯರಿಗೆ ಏಕಿಲ್ಲ ಎಂಬುದನ್ನು ಯೋಚಿಸಬೇಕಿದೆ ಎಂದರು. ಕರ್ನಾಟಕ ಸಾಮರಸ್ಯ ವೇದಿಕೆ ಸಂಯೋಜಕ ವಾದಿರಾಜ್ ಅವರು 2011ರ ಜನಗಣತಿ, ಏರುಪೇರು ಚಿತ್ರಣ, ಪರಿಣಾಮ ಕುರಿತು ವಿವರಿಸಿ…

