ಉಳ್ಳಾಲ: ಭೀಕರ ನಾಯಿ ದಾಳಿಯಿಂದ ಕುಂಪಲ ಬೈಪಾಸ್ ಸಮೀಪದ ನಿವಾಸಿ ದಯಾನಂದ ಗಟ್ಟಿ ಸಾವನ್ನಪ್ಪಿ ತಿಂಗಳಾಗುತ್ತಾ ಬಂದರೂ 48 ಗಂಟೆಯೊಳಗೆ ಸಿಗಬೇಕಾದ ಪರಿಹಾರ ಮಾತ್ರ ಮರೀಚಿಕೆಯಾಗಿದೆ. ಅವರು ನ.14ರಂದು ಬೆಳಿಗ್ಗೆ ಸುಮಾರು 7.30 ಗಂಟೆಗೆ ಕುಂಪಲ ಮುಖ್ಯರಸ್ತೆಯಲ್ಲಿ ನಡೆದ ಬೀದಿ ನಾಯಿಯ ಕ್ರೂರ ದಾಳಿಗೆ ತುತ್ತಾಗಿ ಮರಣ ಹೊಂದಿದ್ದರು. ಈ ಕುರಿತು ಅಸ್ವಾಭಾವಿಕ ಮರಣ ಎಂಬ ಪ್ರಥಮ ಮಾಹಿತಿ ದೊರಕುತ್ತಿದ್ದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಪೋಸ್ಟ್ಮಾರ್ಟಂ ವೈದ್ಯಕೀಯ ವರದಿಯೇ ‘ಪ್ರಾಣಿ ದಾಳಿಯಿಂದಾದ ಗಂಭೀರ ಗಾಯಗಳೇ ದಯಾನಂದ ಗಟ್ಟಿಯವರ ಮರಣಕ್ಕೆ ನೇರ ಕಾರಣ’ ಎಂದು ಸ್ಪಷ್ಟಪಡಿಸಿದೆ. ಇವುಗಳನ್ನು ಪರಿಗಣಿಸಿ ಜಿಲ್ಲಾಡಳಿತದ ಬೇಜವಬ್ದಾರಿಗೆ ಬಲಿಯಾದ ದಯಾನಂದ ಅವರ ಬಡಕುಟುಂಬಕ್ಕೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದ ರಿಟ್ ಪಿಟೀಷನ್ ಸಂಖ್ಯೆ 110352/2019 ಹಾಗೂ ಸರ್ಕಾರದ ಆದೇಶ ÀDE 159 ಜಿಇಯಲ್ 2023 (ದಿನಾಂಕ: 30.10.2023) ಪ್ರಕಾರ, ಬೀದಿ ನಾಯಿಗಳ ದಾಳಿ ಅಥವಾ ಜೀವಹಾನಿ ಸಂಭವಿಸಿದಲ್ಲಿ ಸ್ಥಳೀಯ ಸಂಸ್ಥೆಯಿoದ ಕಮಿಟಿ ರಚಿಸಿ,ಮೃತರ ಕುಟುಂಬಕ್ಕೆ…
Author: UllalaVani
ಉಳ್ಳಾಲ: ಶ್ರೀ ರಾಮ ಭಜನಾ ಮಂದಿರ ಕೊಲ್ಯ ಇದರ 75ನೇ ವಾರ್ಷಿಕೋತ್ಸವದ ಅಂಗವಾಗಿ ಅಮೃತ ಮಹೋತ್ಸವ ಸಂಭ್ರಮ ಕಾರ್ಯಕ್ರಮವು ಡಿ.7 ರ ಭಾನುವಾರದಿಂದ ಡಿ.14 ರ ಭಾನುವಾರದ ವರೆಗೆ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಅಮೃತ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಉಳ್ಳಾಲ್ ತಿಳಿಸಿದರು . ಅವರು ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಡಿ.7 ರ ಭಾನುವಾರದಂದು ಸಂಜೆ 4. 30 ಗಂಟೆಗೆ ಕೊಲ್ಯ ಶ್ರೀ ಮೂಕಾಂಜಕಾ ದೇವಸ್ಥಾನದಿಂದ ಶ್ರೀ ರಾಮ ಭಜನಾ ಮಂದಿರದವರೆಗೆ ಕುಣಿತ ಭಜನೆ ಮೆರವಣಿಗೆ ನಡೆಯಲಿದೆ . ಸಂಜೆ 6 ಗಂಟೆಗೆ ಏಳು ದಿನಗಳ ಸಂಧ್ಯಾ ಭಜನೆ ಪ್ರಾರಂಭ (ಪ್ರತೀ ದಿನ ಸಂಜೆ 7:30ಕ್ಕೆ ಮಂಗಳಾಚರಣೆ)ನಡೆಯಲಿದೆ. ಡಿ 12 ರ ಶುಕ್ರವಾರದಂದು ಸಂಜೆ 7.30 ಕ್ಕೆ ಸಂಧ್ಯಾ ಭಜನೆ ಮಂಗಳಾಚರಣೆಯ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಿವದೂತ ಗುಳಿಗೆ ಎಂಬ ತುಳುನಾಟಕ…
ಮಂಗಳೂರು: ಶ್ರೀ ರಾಮ ಭಜನಾ ಮಂದಿರ ದೇರೆಬೈಲ್ ಕೊಂಚಾಡಿ ಇದರ ೨೦೨೫-೨೭ ನೇ ಸಾಲಿನ ಪದಾಧಿಕಾರಿಗಳು ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾ ಹೊನ್ನಯ್ಯ ಪೂಜಾರಿ, ಅಧ್ಯಕ್ಷರಾಗಿ ವಿಜಯ ಕುಮಾರ್,ಉಪಾಧ್ಯಕ್ಷ್ಷರಾಗಿ ಆನಂದ ದೇವಾಡಿಗ, ಕಾರ್ಯದರ್ಶಿಯಾಗಿ ಸದಾಶಿವ ದೇವಾಡಿಗ , ಜತೆ ಕಾರ್ಯದರ್ಶಿಯಾಗಿ ಪ್ರಕಾಶ್ ಉಡುಪ, ಕೋಶಾಧಿಕಾರಿಯಾಗಿ ಮೋಹನ್ ಶೆಟ್ಟಿಗಾರ್ ,ಲೆಕ್ಕ ಪರಿಶೋಧಕರಾಗಿಪದ್ಮಿನಿ ಮೊಯ್ಲಿ , ಕಮಿಟಿ ಸದಸ್ಯರುಗಳಾಗಿ ಮಾಧವ ಕೋಟ್ಯಾನ್, ಕಿಶೋರ್ ಕೆ, ಮಾಧವ ಕೆ , ಸದಾಶಿವ, ಸದಾಶಿವ ಮಲೆಮಾರ್, ಗಣೇಶ್, ರಾಜೇಶ್ ಕೆ, ಭಾಸ್ಕರ ಸಾಲ್ಯಾನ್, ಕಿಶೋರ್ ಗಡುಕಲ್ಲು, ಜ್ಯೋತಿ ಪ್ರವೀಣ್, ದಾಮೋದರ ಕರ್ಕೇರ, ದಾಮೋದರ ಬಂಗೇರ, ಲಲಿತ ಕೃಷ್ಣಪ್ಪ ಗೌಡ ಆಯ್ಕೆಗೊಂಡಿದ್ದಾರೆ.
ಉಳ್ಳಾಲ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಎ ಬಿ ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ , ನಿಟ್ಟೆ ವಿಶೇಷ ಚೇತನ ಮಕ್ಕಳ ಆರೈಕೆ ಕೇಂದ್ರ ಹಾಗೂ ಪೀಡಿಯಾಟ್ರಿಕ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ವಿಭಾಗ ಇವುಗಳ ಆಶ್ರಯದಲ್ಲಿ ಅಂತಾರಾಷ್ಟ್ರೀಯ ವಿಶೇಷ ಚೇತನ ಮಕ್ಕಳ ದಿನಾಚರಣೆ ಪ್ರಯುಕ್ತ ವಿಶೇಷ ಚೇತನ ಮಕ್ಕಳಿಗೆ ವೀಲ್ ಚೇರ್, ವಾಕರ್ ಡೈಫರ್ಸ್ ವಿತರಣೆ ನಿಟ್ಟೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕ್ಷೇಮಾದ ಮೂಳೆಚಿಕಿತ್ಸಾ ವಿಭಾಗದ ಮುಖ್ಯಸ್ಥ ಪ್ರೊ. ಡಾ. ವಿಕ್ರಮ್ ಶೆಟ್ಟಿ ಮಾತನಾಡಿ, ವಿಶೇಷ ಚೇತನ ಮಕ್ಕಳಿಗೆ ಅವರಿಗೆ ಆದ ಸಾಮರ್ಥ್ಯ ಇರುತ್ತದೆ. ಇದಕ್ಕೆ ಅವರಿಗೆ ಬೇಕಾದ ಅವಕಾಶ , ವ್ಯವಸ್ಥೆ ನಾವು ಮಾಡಬೇಕಾಗಿದೆ. ಇದನ್ನು ನಿಟ್ಟೆ ವೈದ್ಯಕೀಯ ಸಂಸ್ಥೆ ಮಾಡಿಕೊಂಡಿರುವುದು ಶ್ಲಾಘನೀಯ ಎಂದರು.ಸಮನ್ವಯ ಸಂಪನ್ಮೂಲ ಶಿಕ್ಷಕಿ ಕಿಶೋರಿ ಮಾತನಾಡಿದರು. ಎಬಿಎಸ್ಎಂಐಡಿಎಸ್ ಉಪ ಪ್ರಾಂಶುಪಾಲ ಪ್ರೊ. ಡಾ.ಎಂ.ಎಸ್. ರವಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಈ. ಸಂದರ್ಭದಲ್ಲಿ 18 ವಿಶೇಷ ಚೇತನ ಮಕ್ಕಳಿಗೆ ಐದು ವೀಲ್ ಚೇರ್,ಮೂರು ವಾಕರ್,…
ಉಳ್ಳಾಲ: ರಾಜ್ಯ ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಅವರು ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಶರೀಯತ್ ಕಾಲೇಜು ಕಟ್ಟಡ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಹೂಗುಚ್ಛ ನೀಡಿ ಸ್ವಾಗತಿಸಿ ಅವರನ್ನು ಬರ ಮಾಡಿಕೊಂಡರು ಹಾಗೂ ದರ್ಗಾ ಆವರಣ ಗೋಡೆಗೆ ಅನುದಾನ ನೀಡುವಂತೆ ಮನವಿ ಮಾಡಿಕೊಂಡರು. ಕಟ್ಟಡ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಜಮೀರ್ ಅಹಮದ್, ಶರೀಯತ್ ಕಾಲೇಜು ವಸತಿ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಮೂರು ಕೋಟಿ ಮಂಜೂರು ಮಾಡಲಾಗಿದೆ. ಕಾಂಪೌAಡ್ ನಿರ್ಮಾಣಕ್ಕಾಗಿ ಇನ್ನೊಂದು ಕೋಟಿ ಮಂಜೂರು ಮಾಡಿದರು. ದರ್ಗಾ ಝಿಯಾರತ್ ನಡೆಸಿದ ಬಳಿಕ ಅಧ್ಯಕ್ಷರ ಕಚೇರಿಯಲ್ಲಿ ಸಭೆ ನಡೆಸಿದ ಅವರು ಅಹವಾಲು ಸ್ವೀಕಾರ ಮಾಡಿದ್ದಾರೆ. ಪ್ರಮುಖರಾದ ಯುಟಿ ಇಫ್ತಿಕರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿ ಸ್ಟಾರ್, ವಕ್ಫ್ ಅಧಿಕಾರಿ ಅಬೂಬಕ್ಕರ್, ನಿವೃತ್ತ ಪೊಲೀಸ್ ಅಧಿಕಾರಿ ಜಿ ಎ.ಬಾವಾ, ದರ್ಗಾ ಉಪಾಧ್ಯಕ್ಷ ಅಶ್ರಫ್…
ಪ್ರಮೋದ್ ಮುತಾಲಿಕ್ ಹಾಗೂ ಡಾ. ವಿಜಯಲಕ್ಷಿö್ಮÃ ಬಾಳೆಕುಂದ್ರಿ ಅವರ ಇತ್ತಿಗಿನ ಕೆಲ ಹೇಳಿಕೆಗಳನ್ನು ಆಲ್ ಇಂಡಿಯಾ ಕಥೊಲಿಕ್ ಯೂನಿಯನ್ನ ಕರ್ನಾಟಕ ರಾಜ್ಯಾಧ್ಯಕ್ಷ ಆಲ್ವಿನ್ ಡಿ’ಸೋಜ ಪಾನೀರ್ ಅವರು ಪತ್ರಿಕಾ ಪ್ರಟನೆಯಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಪ್ರಮೋದ್ ಮುತಾಲಿಕ್ ಅವರು ಕ್ರಿಸ್ಮಸ್ ರಜೆಯನ್ನು ಕಡಿತಗೊಳಿಸಬೇಕು ಅಥವಾ ಶಾಲೆಗಳಿಗೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದ್ದನ್ನು ಟೀಕಿಸಿದ ಆಲ್ವಿನ್ ಡಿಸೋಜ ಪಾನೀರ್ ಅವರು “ಶಾಲೆಗಳಿಗೆ ಬೀಗ ಹಾಕುವುದಾಗಿ ಬೆದರಿಕೆ ಹಾಕುವ ಹಕ್ಕು ಯಾರಿಗೂ ಇಲ್ಲ. ಭಾರತದ ಅತೀ ಹೆಚ್ಚು ವಿದ್ಯಾರ್ಥಿಗಳು ಕ್ರೈಸ್ತ ಸಂಸ್ಥೆಗಳತ್ತ ಹರಿಯುವುದಕ್ಕೆ ಕಾರಣ ಅವರ ಶಿಕ್ಷಣದ ಗುಣಮಟ್ಟ. ರಜೆಯ ವಿಚಾರದಲ್ಲಿ ಬೆದರಿಕೆ ಭಾಷೆ ಬಳಕೆ ಮಾಡುವುದು ಸುಸಂಬೋಧನೆಯ ಮಾರ್ಗವಲ್ಲ” ಎಂದು ತಿರುಗೇಟು ನೀಡಿದ್ದಾರೆ. ಇನ್ನು ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ ಅವರ ಕಾನ್ವೆಂಟ್ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳ ಕುರಿತ ಹೇಳಿಕೆಗಳು ಅಸಂಗತವಾಗಿವೆ ಎಂದು ಅವರು ಹೇಳಿದ್ದಾರೆ. “ಕಾನ್ವೆಂಟ್ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ದೇಶಕ್ಕೆ ದ್ರೋಹ ಮಾಡಿಲ್ಲ; ದೇಶ ಕಟ್ಟುವ ಕಾರ್ಯದಲ್ಲಿದ್ದಾರೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆಲ್ವಿನ್…
ಮಂಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನು ಪಂಪ್ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ, ಉದಾರ ದಾನಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿ, ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. ಎಂಸಿಸಿ ಬ್ಯಾಂಕ್ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ ಫಾದರ್ ಜೆ.ಬಿ.ಕ್ರಾಸ್ತಾ, ಬೆಂದೂರಿನ ಸೇವಾನಿಲಯ ಕಾನ್ವೆಂಟ್ನ ಸುಪೀರಿಯರ್ನ ಸಿಸ್ಟರ್ ಸಿಂತಿಯಾ ಡಿ’ಸೋಜಾ, ಮತ್ತು ಕೊಂಕಣಿ ಸಾಂಸ್ಕೃತಿಕ ಸಂಸ್ಥೆ (ಕೆಸಿಒ) ಅಧ್ಯಕ್ಷ ಲಿಯೋ ರೋಡ್ರಿಗಸ್, ಮುಖ್ಯ ಅತಿಥಿಗಳಾಗಿದ್ದರು. ಅಧ್ಯಕ್ಷರಾದ ಅನಿಲ್ ಲೋಬೊ ಅವರು ತಮ್ಮ ಸ್ವಾಗತ ಭಾಷಣದಲ್ಲಿ ಕಂಕನಾಡಿ ಶಾಖೆಯ ನವೀಕರಣದ ಹಿಂದಿನ ಉದ್ದೇಶ ಮತ್ತು ದೃಷ್ಟಿಕೋನವನ್ನು ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಗ್ರಾಹಕರು ಆಧುನೀಕರಣ ಮತ್ತು ಹೊಸ ಆಲೋಚನೆಗಳನ್ನು ನಿರೀಕ್ಷಿಸುತ್ತಾರೆ. ನಮ್ಮ ಬ್ಯಾಂಕ್ ಅದನ್ನು…
ಉಳ್ಳಾಲ: ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೆಕಾರಿನ ಸಹಯೋಗದೊಂದಿಗೆ, ಬೀರಿಯ ಸ್ಟೆಲ್ಲಾ ಮೇರಿಸ್ ಅನುದಾನಿತ ಶಾಲೆಯ ಮಕ್ಕಳಿಗಾಗಿ “ಸೈಟ್ ಫಾರ್ ಕಿಡ್ಸ್” ಕಾರ್ಯಕ್ರಮದ ಭಾಗವಾಗಿ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಪ್ರಸಿದ್ಧ ನೇತ್ರ ತಪಾಸಣಾ ತಜ್ಞರ ನೇತೃತ್ವದಲ್ಲಿ ನಡೆದ ಶಿಬಿರವನ್ನು ಮಾಜಿ ಸೈನಿಕ ಕೃಷ್ಣ ಬೋಳಾರ್ ಅವರು ಉದ್ಘಾಟಿಸಿದರು. ಈ ಸಂದರ್ಭ ಕ್ಲಬ್ ಅಧ್ಯಕ್ಷ ಲಯನ್ ವಿಜಯನ್ ಕೆ. ಖಜಾಂಜಿ, ಲಯನ್ ನಿತೀಶ ಕೃಷ್ಣ, ಕಮಾಂಡರ್ ಲಯನ್ ವಿಜಯಕುಮಾರ್, ಸಬ್ ಲೆಫ್ಟಿಂನೆAಟ್ ಲಯನ್ ಶಶಿಕುಮಾರ್ ನಾಯರ್, ಲಯನ್ ರಾಘವನ್ ಮೂತಾಲ್ , ಲಯನ್ ನಿರ್ಮಿತಾ ಭಂಡಾರಿ, ಲಯನ್ ಡಿ. ದಾಮೋದರನ್ ಉಪಸ್ಥಿತರಿದ್ದರು. ಮುಂಬರುವ ದಿನಗಳಲ್ಲಿ ಅಗತ್ಯವಿರುವ ಮಕ್ಕಳಿಗೆ ಉಚಿತ ಕನ್ನಡಕವನ್ನು ವಿತರಿಸಲಾಗುವುದು.
ಉಳ್ಳಾಲ: ಲಯನ್ಸ್ ಕ್ಲಬ್ ಸೋಮೇಶ್ವರದ ವತಿಯಿಂದ ವಿಶ್ವ ಮದುಮೇಹ ದಿನದ ಅಂಗವಾಗಿ ಏಡೆಡ್ ಹೋಲಿ ಏಂಜಲ್ಸ್ ಹೈಯರ್ ಪ್ರೈಮರಿ ಶಾಲೆ ಮತ್ತು ಸಂತ ಸೆಬಸ್ಟಿಯನ್ ಪ್ರೌಢ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮದುಮೇಹ ಜಾಗ್ರತ ಶಿಬಿರವನ್ನು ಜಂಟಿಯಾಗಿ ಆಯೋಜಿಸಲಾಗಿತ್ತು. ಕ್ಲಬ್ ಚಾರ್ಟರ್ ಅಧ್ಯಕ್ಷ ಭಾರತೀಯ ನೌಕಾಪಡೆಯ ವೆಟರನ್ ಲಯನ್ ಕೆ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಲಯನ್ ಅರವಿಂದ್ ಶೆಣೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ,ಶಾಲೆಯಲ್ಲಿ ಶುಗರ್ ಬೋರ್ಡನ್ನು ಸ್ಥಾಪಿಸಿದರು. ಬಳಿಕ ಮಾತನಾಡಿದ ಇವರು, ವಿದ್ಯಾರ್ಥಿಗಳು ಮತ್ತು ಸಮುದಾಯಕ್ಕೆ ಮಧುಮೇಹದ ಬಗ್ಗೆ ವಿಶ್ವಾಸಾರ್ಹ ಜ್ಞಾನವನ್ನು ಒದಗಿಸುವಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ನಿರ್ಣಾಯಕವಾಗಿವೆ ಎಂದು ಹೇಳಿದರು. ಕಮಾಂಡರ್ ಲಯನ್ ವಿಜಯಕುಮಾರ mರಿಜಿ ಮತ್ತು ಡಾ. ಚಿರಾಗ್ ಗೋಪಿನಾಥ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳಿಗೆ ಮಧುಮೇಹದ ಲಕ್ಷಣಗಳು, ಕಾರಣಗಳು, ತಡೆಗಟ್ಟುವ ಕ್ರಮಗಳು ಮತ್ತು ಆರೋಗ್ಯಕರ ಜೀವನಶೈಲಿಯ ಮಹತ್ವದ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು. ಪ್ರಮುಖರಾದ ಕ್ಯಾಬಿನೆಟ್ ಖಜಾಂಚಿ ಲಯನ್ ಬಾಲಕೃಷ್ಣ ಹೆಗ್ಡೆ,ಚಾರ್ಟರ್ ಖಜಾಂಚಿ…
ರಕ್ಷಿತ್ ಕುಮಾರ ಜೆ ಅವರು ಪ್ರತಿಷ್ಠಿತ ಗೋವ ಮ್ಯಾನೆಜ್ಮೆಂಟ್ ಎಸೋಸಿಯೇಶನ್ ನೀಡಲ್ಪಡುವ ದಿ ಬೆಸ್ಟ್ ಮ್ಯಾನೆಜ್ಮೆಂಟ್ ಸ್ಟೂಡೆಂಟ್ ಆಫ್ ಇಯರ್ 2025- ಪೋಸ್ಟ್ ಗ್ರಾಚುವೆಟ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರು ಸುರತ್ಕಲ್ನ ಪ್ರತಿಷ್ಠಿತ ಎನ್ಐಟಿಕೆ ಯ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಗೋವಾ ಇನ್ಸಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮಂಗಳೂರಿನ ಜೈಕುಮಾರ್ ಕೊಲ್ಯ ಮತ್ತು ವತ್ಸಲ ದಂಪತಿಯ ಸುಪುತ್ರರಾಗಿದ್ದಾರೆ.

