Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ :ಉಳ್ಳಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದ ಅಪರಾಧ ವಿಭಾಗದ ಉಪ ನಿರೀಕ್ಷಕರ ಜೀಪಿಗೆ ಟಿಪ್ಪರೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಸೋಮೇಶ್ವರ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದ್ದು, ಜೀಪಿನಲ್ಲಿದ್ದ ಎಸ್ಐ ಸಹಿತ ಚಾಲಕ ಪವಾಡಸದೃಶ್ಯವಾಗಿ ಪಾರಾಗಿದ್ದು, ಟಿಪ್ಪರನ್ನು ಕೊಲ್ಯ ಬಳಿ ಪೋಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅಪರಾಧ ವಿಭಾಗದ ಉಪ ನಿರೀಕ್ಷಕ ಮೋಹನ್ದಾಸ್ ಸಂಚರಿಸುತ್ತಿದ್ದ ಜೀಪಿಗೆ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಚಾಲಕ ಕಾನ್ಸ್ಟೇಬಲ್ ಪ್ರಶಾಂತ್ ಮತ್ತು ಮೋಹನ್ ದಾಸ್  ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಪೋಲಿಸರ ವಾಹನಕ್ಕೆ ಡಿಕ್ಕಿ ಹೊಡೆಸಿದ ಚಾಲಕ ಬೆದರಿ ಟಿಪ್ಪರನ್ನು ನಿಲ್ಲಿಸದೆ ಪರಾರಿಯಾಗಿದ್ದು ಬಳಿಕ ಟಿಪ್ಪರನ್ನು ಕೊಲ್ಯದಲ್ಲಿ ವಶಕ್ಕೆ ತೆಗೆದುಕೊಂಡರು. ಉಳ್ಳಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಟೋ ಚಾಲಕ ಕೆ.ಸಿ.ರೋಡ್ ನಿವಾಸಿ ಶೇಖ್ ಮೊಯ್ದೀನ್ (65)ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಎ. 1ರಂದು ಕೋಟೆಕಾರು ಪೆಟ್ರೋಲ್ ಪಂಪ್ ಬಳಿ ತನ್ನ ಆಟೋ ರಿಕ್ಷಾಕ್ಕೆ ಪೆಟ್ರೋಲ್ ಹಾಕಿಸಿ ಅಲ್ಲಿಂದ ಆಟೋ ರಿಕ್ಷಾ ಪಾರ್ಕ್ ಗೆ ತೆರಳುತ್ತಿದ್ದ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಒಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೊಯ್ದಿನ್ ಅವರ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ. ಆರೋಪಿ ಚಾಲಕನನ್ನು ಉಳ್ಳಾಲ ಪೋಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ:  ಕಾಸರಗೋಡಿನಿಂದ ಅಪಹರಿಸಲ್ಪಟ್ಟ ಬಾಲಕಿಯನ್ನು  ರಿಕ್ಷಾ ಚಾಲಕರೊಬ್ಬರು  ಸೋಮೇಶ್ವರ ರೈಲ್ವೇ ನಿಲ್ದಾಣದಿಂದ  ಉಳ್ಳಾಲ ದರ್ಗಾಕ್ಕೆ ತಲುಪಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಆಕೆಯನ್ನು ಪಾಲಕರ ವಶಕ್ಕೆ ಒಪ್ಪಿಸಲಾಗಿದೆ. ಕಾಸರಗೋಡಿನ ಕೋಟಿಕುಳಂನ 12ರ ಬಾಲಕಿ ಮದರಸ ಶಿಕ್ಷಣಕ್ಕೆಂದು ತೆರಳಿದ್ದು, ರೈಲು ಮೂಲಕ ಬಂದಿದ್ದ ಬಾಲಕಿ ಸೋಮೇಶ್ವರ ರೈಲು ನಿಲ್ದಾಣದಲ್ಲಿ ಗಾಬರಿಯಿಂದ ಕೂಗುತ್ತಿದ್ದಾಗ ಸ್ಥಳೀಯ ರಿಕ್ಷಾ ಚಾಲಕರೊಬ್ಬರು ಉಳ್ಳಾಲ ದರ್ಗಾಕ್ಕೆ ಕರೆ ತಂದಿದ್ದರು.   ಅಪಹರಣ ಶಂಕೆ : ಬಾಲಕಿಯ ಹೇಳಿಕೆಯಂತೆ ತಾನು ಬೆಳಗ್ಗೆ ಮದರಸಕ್ಕೆಂದು ಹೋಗುತ್ತಿದ್ದಾಗ ಹಿಂದಿನ ಬಂದ ಅಪರಿಚಿತರು ಬಟ್ಟೆಯನ್ನು ಮುಖಕ್ಕೆ ಹಿಡಿದಿದ್ದು, ಈ ಸಂದರ್ಭದಲ್ಲಿ ಸ್ಮೃತಿ ತಪ್ಪಿದ ತಾನು ಎಚ್ಚರವಾದಾಗ ರೈಲಿನಲ್ಲಿದ್ದೆ. ರೈಲು ನಿಂತಾಗ ಗಾಬರಿಯಿಂದ ಇಳಿದು ಕೂಗಲು ಪ್ರಾರಂಭಿಸಿದಾಗ ಸ್ಥಳೀಯರು ವಿಚಾರಿಸಿ ನನ್ನನ್ನು ಇಲ್ಲಿಗೆ ಕರೆ ತಂದರು ಎಂದು ತಿಳಿಸಿದ್ದಾಳೆ. ದರ್ಗಾದಲ್ಲಿ ಬಂದಿದ್ದ ಬಾಲಕಿಯಿಂದ ಮಾಹಿತಿ ಪಡೆದ ದರ್ಗಾ ಸಮಿತಿಯವರು  ಆಕೆಯ ಮನೆಗೆ ಮಾಹಿತಿ ನೀಡಿದ್ದು, ಮನೆಯಲ್ಲಿ ಬಾಲಕಿಯನ್ನು ಹುಡುಕಾಡುತ್ತಿದ್ದ ಪಾಲಕರು ಮಂಗಳೂರಿನಲ್ಲಿರುವ ಸಂಬಂಧಿಕರಿಗೆ ಮಾಹಿತಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ತಮ್ಮ ಮೇಲೆ ನಂಬಿಕೆಯಿಟ್ಟು ಚಿಕಿತ್ಸೆಗೆ ಬರುವ ರೋಗಿಗಳ ಮೇಲೆ ಕಾಳಜಿ, ಹಾಗೂ ಕೆಲಸ ನೀಡಿದ ಸಂಸ್ಥೆಯ ಮೇಲೆ ಸಿಬ್ಬಂದಿಗಳು ಹಾಗೂ ವೈದ್ಯರಿಗೆ ಪ್ರೀತಿಯಿದ್ದಲ್ಲಿ ಯಾವುದೇ ಸಂಸ್ಥೆ ಕೀರ್ತಿಯ ಉತ್ತಂಗಕ್ಕೇರಲು ಸಾಧ್ಯ ಎಂದು ಉಳ್ಳಾಲ ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು. ಯು.ಟಿ.ಫರೀದ್ ಫೌಂಡೇಶನ್ ಮೇಲಂಗಡಿ ಘಟಕದ ವತಿಯಿಂದ ದೇರಳಕಟ್ಟೆ ಕಣಚೂರು ವೈದ್ಯಕೀಯ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ಭಾನುವಾರ ದರ್ಗಾ ಮುಂಭಾಗ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆಲವು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ವೈದ್ಯರು, ಸವಲತ್ತು ಇಲ್ಲ ಎನ್ನುವ ನೆಪ ಹೇಳಿ ರೋಗಿಗಳನ್ನು ಕಾಯಿಸುವ ಮುಖಾಂತರ ನಿರ್ಲಕ್ಷ್ಯ ಭಾವನೆಯಿಂದ ನೋಡುವುದು ಅನುಭವಕ್ಕೆ ಬಂದಿದೆ. ಇದರಿಂದ ಆಸ್ಪತ್ರೆಯ ಹೆಸರಿಗೂ ಕಳಂಕ ಬರುವ ಸಂಭವವಿದೆ. ಇಂತಹ ಪ್ರಕರಣ ಕಡಿವಾಣಕ್ಕೆ ಆಸ್ಪತ್ರೆಗಳ ಆಡಳಿತ ವರ್ಗ ಮುಂದಾಗಬೇಕು ಎಂದು ಹೇಳಿದರು. ಮೇಲಂಗಡಿ ಮೊಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಯೂಸುಫ್ ಮಿಸ್ಬಾಹಿ ದುವಾ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು: ಸಮಾಜದಲ್ಲಿ ಹಿಂದುಳಿದವರ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಹೆಲ್ಪ್ ಇಂಡಿಯಾ ಫೌಂಡೇಶನ್ ನ ಕಾರ್ಯವೈಖರಿ ಇತರೆ ಸಂಘಟನೆಗಳಿಗೂ ಮಾದರಿಯಾಗಿದ್ದು, ಭವಿಷ್ಯದಲ್ಲಿ ದೇಶದಾದ್ಯಂತ ಸಂಘಟನೆ ಕಾರ್ಯಾಚರಿಸಲಿ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದ್ದಾರೆ. ಅವರು ತೊಕ್ಕೊಟ್ಟು ಹೆಲ್ಪ್ ಇಂಡಿಯಾ ಕಚೇರಿಯಲ್ಲಿ ಸೋಮವಾರ ಹೆಲ್ಪ್ ಇಂಡಿಯಾ ಫೌಂಡೇಶನ್ ವತಿಯಿಂದ ಉಚಿತ ಟೈಲರಿಂಗ್ ಸರ್ಟಿಫಿಕೇಟ್ ಕೋರ್ಸನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ಸೈಯ್ಯಿದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ ಸಮಾಜದಲ್ಲಿ ಸಂಸ್ಥೆಗಳಿಗೆ ಕೊರತೆಯಿಲ್ಲ, ಸ್ಥಾಪನೆಯಾದ ಕೆಲವೇ ದಿನಗಳಲ್ಲಿ ನಿಗೂಢವಾಗಿ ಮಾಯವಾಗುವ ಸಂಘಟನೆಗಳೆ ಹೆಚ್ಚಿದೆ. ಆದರೆ ಹೆಲ್ಪ್ ಇಂಡಿಯಾ ಹಲವು ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಬಡವರಿಗಾಗಿ ಹಮ್ಮಿಕೊಂಡು ಬೆಳೆಯುತ್ತಲೇ ಇದೆ. ಮಹಿಳೆಯರು ಸಬಲರಾದರೆ ಇಡೀ ಮನೆಯೇ ಬೆಳಗಿದಂತೆ, ಈ ನಿಟ್ಟಿನಲ್ಲಿ ಫೌಂಡೇಶನ್ ಮಹಿಳೆಯರಿಗೆ ಸ್ವ ಉದ್ಯೋಗ ಹೊಂದಲು ಅವಕಾಶ ಮಾಡಿಕೊಡುವ ಮೂಲಕ ಉತ್ತಮ ಕಾರ್ಯಕ್ರಮವನ್ನು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು: ದೇಶದಾದ್ಯಂತ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣವಾಗುತ್ತಿದ್ದು, ಮುಂಬರುವ ಚುನವಣೆಯಲ್ಲಿ ಕರ್ನಾಟಕ ಕಾಂಗ್ರೆಸ್ ಮುಕ್ತವಾಗಲಿದ್ದು, ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ಶಾಸಕರು ಆಯ್ಕೆಯಾಗುವ ಮೂಲಕ ಪರಿವರ್ತನೆಯ ಪರ್ವ ಆರಂಭವಾಗಲಿದೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರ ಸಂಸದ ನಳಿನ್ ಕುಮಾರ್ ಕಟೀಲು ಅಭಿಪ್ರಾಯಪಟ್ಟರು . ಅವರು ತೊಕ್ಕೊಟ್ಟು ಜಂಕ್ಷನ್ ಬಳಿ ಮಂಗಳೂರು ವಿಧಾನ ಸಭಾ ಕ್ಷೇತ್ರ ನೂತನ ಕಾರ್ಯಲಯದ ಉದ್ಘಾಟನೆಯ ಬಳಿಕ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಹಿಂದೆ ಕಾಂಗ್ರೆಸ್ ಸೇರಿದಂತೆ ಅದನ್ನು ಅನುಕರಿಸುತ್ತಿರುವ ಪಕ್ಷಗಳು ಮುಸ್ಲಿಂ ಕೈಸ್ತರು ಸೇರಿದಂತೆ ಜಾತಿ ಓಟು ಬ್ಯಾಂಕ್‍ಗಳ ಮೂಲಕ ಅ„ಕಾರಕ್ಕೆ ಏರುವ ಕನಸು ಕಂಡಿತ್ತು ಆದರೆ ಉತ್ತರ ಪ್ರದೇಶದಲ್ಲಿ ಅಲ್ಲಿನ ಜನತೆ ಜಾತೀ ರಹಿತರಾಗಿ ಅಭಿವೃದ್ಧಿ ಪರ ಸರಕಾರಕ್ಕೆ ಮತ ನೀಡುವ ಮೂಲಕ ಪರಿವರ್ತನೆಗೆ ನಾಂದಿ ಹಾಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತು ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಪರ ಮತ ಹಾಕುವ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ದೇಶದ ಸ್ವಚ್ಛತೆಯನ್ನು ಮನದಲ್ಲಿಟ್ಟುಕೊಂಡು ಪ್ರತಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಚ್ಛತಾ ಚಳವಳಿಯನ್ನು ಆರಂಭಿಸಲು ಮುಂದಾಗಿದ್ದು, ಬಹುತೇಕ ಹಿರಿಯ ನಾಗರಿಕರನ್ನೇ ಬಳಸಿಕೊಂಡು ಅವರ ನಾಯಕತ್ವದಲ್ಲಿ ಚಳವಳಿ ಮುಂದುವರಿಯಲಿದೆ ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್ ಅಭಿಪ್ರಾಯಪಟ್ಟರು.ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ತಾಲೂಕು ಇದರ ಮಾರ್ಗದರ್ಶನದಲ್ಲಿ ಅಂಬಿಕಾರೋಡ್ ಗಟ್ಟಿ ಸಮಾಜ ಭವನ ಸಭಾಂಗಣದಲ್ಲಿ ಶನಿವಾರ ನಡೆದ ಕೇಂದ್ರ ಒಕ್ಕೂಟ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವದಲ್ಲೇ ಮಂಗಳೂರು ನಗರ ವಾಸಿಸಲು ಉತ್ತಮವಾದ ಸ್ಥಳ ಎಂದು ಅಂತಾರಾಷ್ಟ್ರೀಯ ಸಂಸ್ಥೆಯೊಂದು ವರದಿ ನೀಡಿದೆ. ಅದರಲ್ಲೂ ಶ್ರೀ ಕ್ಷೇತ್ರ ಧರ್ಮಸ್ಥಳ ದೇಶದಲ್ಲೇ ಸ್ವಚ್ಛ ಗ್ರಾಮ ಎಂಬ ಸ್ಥಾನವನ್ನು ಗಳಿಸಿದೆ. ಇದು ಖಾವಂದರ ಅವಿರತ ಶ್ರಮದಿಂದ ಸಾಧ್ಯವಾಗಿದೆ. ಕ್ಷೇತ್ರದಲ್ಲಿ ರೂ.8 ಕೋಟಿ ವೆಚ್ಚದಲ್ಲಿ ನೀರಿನ ಪುನರ್ ಸಂಸ್ಕರಣಾ ಘಟಕವನ್ನು ಸ್ಥಾಪಿಸಲಾಗಿದೆ. ಸಮಾಜಕ್ಕೆ ಉಪದೇಶ ನೀಡುವ ಮುನ್ನ ಬದಲಾವಣೆ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮಾಡೂರು: ಕೊಂಡಾಣದ ಸಾಯಿಧಾಮ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ದ್ವಿತೀಯ ವಾರ್ಷಿಕೋತ್ಸವ ಮತ್ತು ರಾಮನವಮಿ ಉತ್ಸವವು ಎ.3 ಸೋಮವಾರ ರಿಂದ ಎಪ್ರಿಲ್ 4 ಮಂಗಳವಾರದವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವಾರ್ಷಿಕೋತ್ಸವ ಹಾಗೂ ರಾಮನವಮಿ ಉತ್ಸವ ಸಮಿತಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದ್ದಾರೆ. ಅವರು ಮಾಡೂರು ಸಾಯಿಧಾಮ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಶನಿವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು ರಾಮನವಮಿಯ ಪ್ರಯುಕ್ತ ಸೋಮವಾರದಂದು ಬೆಳಿಗ್ಗೆ ವಿವಿಧ ತಂಡಗಳಿಂದ ಭಜನೆ ಸಂಕೀರ್ತನೆ ಹಾಗೂ ಸಂಜೆ ನಡೆಯುವ ಸಾಂಸ್ಕøತಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀನಿವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿ ಡಾ.ಎಂ.ಅಣ್ಣಯ್ಯ ಕುಲಾಲ್ ವಹಿಸಲಿದ್ದಾರೆ. ಶ್ರೀಕ್ಷೇತ್ರ ಕೊಂಡೆವೂರು ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಂದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ: ಶಿಕ್ಷಣವು ಉದ್ಯೋಗಕ್ಕೆ ಮಾತ್ರ ಸೀಮಿತವಾಗದೆ ನಮ್ಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪರಿಣಾಮಕಾರಿಯಾಗಬೇಕು. ಇಂದಿನ ಜಾಗತೀಕರಣ, ತಂತ್ರಜ್ಞಾನಯುಕ್ತವಾದ ಸಮಾಜದಲ್ಲಿ ಯುವ ಸಮುದಾಯದ ಪಾತ್ರ ಪ್ರಮುಖವಾದುದು ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪರಿಶ್ರಮದೊಂದಿಗೆ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಬೇಕು ಎಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದರು. ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವ್ಯವಹಾರಗಳ ಸಂಶೋಧನಾ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರಮಟ್ಟದ ವಿಚಾರಸಂಕಿರಣ ಮತ್ತು ಸ್ನಾತಕೋತ್ತರ ವಾಣಿಜ್ಯ ಮತ್ತು ವ್ಯವಹಾರ ಉತ್ಸವ `ಮ್ಯಾಗ್ನಮ್’-2017ನ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಾಣಿಜ್ಯ ವ್ಯವಹಾರ ಕ್ಷೇತ್ರವು ಬಹಳ ಮಹತ್ತರವಾದ ಕ್ಷೇತ್ರವಾಗಿದ್ದು ಈ ನಿಟ್ಟಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳ ಜವಾಬ್ಧಾರಿಯೂ ಹೆಚ್ಚಿದೆ. ಜೀವನದಲ್ಲಿ ನಾವು ತಾಳ್ಮೆ ಸಂಯಮದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಸಮಾಜದ ನಿರ್ಮಾಣ ಮಾಡಬೇಕು ಎಂದು ಹೇಳಿದರು. ನಾವು ಎಲ್ಲಿ ಹೋದರೂ ಭಾರತೀಯ ಸಂಸ್ಕøತಿಯನ್ನು ಮರೆಯಲು ಸಾಧ್ಯವಿಲ್ಲ. ಕೆಲವರು ಪದವಿಯ ಬಳಿಕ ವಿದೇಶಕ್ಕೆ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ದೇರಳಕಟ್ಟೆ: ಹತ್ತು ರುಪಾಯಿ ನಾಣ್ಯದ ಅಪಮೌಲ್ಯದ ಬಗ್ಗೆ ಆರ್ ಬಿ ಐ ಯಿಂದ ಯಾವುದೇ ಆದೇಶ ಬಂದಿಲ್ಲ ಆದರೆ ಇದೀಗ ಬ್ಯಾಂಕುಗಳು ಅದನ್ನು ಸ್ವೀಕರಿಸದೇ ಆರ್.ಬಿ,ಐ ನಿಯಮವನ್ನು ದಿಕ್ಕರಿಸುತ್ತಿದ್ದಾರೆ, ಇದು ಜನಸಾಮಾನ್ಯರನ್ನು ಗೊಂದಲಕ್ಕೀಡು ಮಾಡುತ್ತಿದೆ ಎಂದು ತುಳುನಾಡು ರಕ್ಷಣಾ ವೇದಿಕೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಂ.ಸಿರಾಜ್ ಅಡ್ಕರೆ ಹೇಳಿದ್ದಾರೆ. ಸಿಂಡಿಕೇಟ್ ಬ್ಯಾಂಕಿನ ದೇರಳಕಟ್ಟೆ ಶಾಖೆಯಲ್ಲಿ 10 ರೂ. ನಾಣ್ಯವನ್ನು ಪಡೆಯುತ್ತಿಲ್ಲ ಎಂದು ಆರೋಪಿಸಿ ಮಂಗಳೂರು ವಿಧಾನಸಭಾಕ್ಷೇತ್ರದ ತುಳುನಾಡು ರಕ್ಷಣಾ ವೇದಿಕೆ ಶುಕ್ರವಾರ ಬ್ಯಾಂಕಿನ ಎದುರುಗಡೆ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಜನಸಾಮಾನ್ಯರು ದುಡಿಮೆಯ ಮೊತ್ತದಲ್ಲಿ ಖರ್ಚು ವೆಚ್ಚದಲ್ಲಿ ಮಿಕ್ಕಿದ ಹಣವನ್ನು ಸುರಕ್ಷಿತವಾಗಿಡಲು ನೆರವಾಗುವ ಉದ್ದೇಶಕ್ಕಾಗಿ ಬ್ಯಾಂಕ್ ಗಳನ್ನು ಅವಲಂಬಿತರಾಗಿದ್ದಾರೆ. ಸಾಮಾನ್ಯ ಜನರು, ವಿವಿಧ ವರ್ಗದಲ್ಲಿ ದುಡಿಯುತ್ತಿರುವ ಕಾರ್ಮಿಕರು, ಬೀಡಿ ಕಾರ್ಮಿಕರು, ವಿದ್ಯಾರ್ಥಿಗಳು ಬ್ಯಾಂಕ್ ಗಳ ಸೇವೆಯನ್ನು ಅರಸಿಕೊಂಡು ಹೋಗುತ್ತಾರೆ, ಆದರೆ ಇತ್ತೀಚಿಗೆ ಬ್ಯಾಂಕುಗಳ ಸೇವೆಯು ಜನರನ್ನು ಸತಾಯಿಸುವಲ್ಲಿ ಕೆಲಸಮಾಡುತ್ತಿದೆ. ಹತ್ತು ರುಪಾಯಿ ನಾಣ್ಯದ ಅಪಮೌಲ್ಯದ…

Read More