Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮುಂಬೈ: ದೇಶದೆಲ್ಲೆಡೆ ನೋಟು ಬ್ಯಾನ್ ಬಿಸಿ ಕಡಿಮೆಯಾಗುತ್ತಿದ್ದಂತೆ ಇದೀಗ ಎಸ್‌ಬಿಐ ಬ್ಯಾಂಕ್ ಹೊಸದೊಂದು ನೀತಿಯನ್ನು ಪ್ರಕಟಿಸುವ ಮೂಲಕ ಜನರಿಗೆ ದೊಡ್ಡ ಶಾಕ್ ನೀಡಿದೆ. ನಿಮ್ಮ ಉಳಿತಾಯದ ಖಾತೆಯಲ್ಲಿ ಬ್ಯಾಂಕ್ ನಿಗದಿಪಡಿಸಿದ ಮೊತ್ತಕ್ಕೂ ಕಡಿಮೆ ಹಣವಿದ್ದರೆ ಅಂದರೆ ಕನಿಷ್ಠ 5 ಸಾವಿರ ರು ಠೇವಣಿ ಇಲ್ಲದಿದ್ದರೆ ದಂಡ ಬೀಳಲಿದೆ. ಏಪ್ರಿಲ್ 1 ರಿಂದ ನೀತಿ ಜಾರಿಗೆ ಬರಲಿದ್ದು ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ, ಮೆಟ್ರೋಪಾಲಿಟನ್ ನಗರಗಳಲ್ಲಿ ಈ ದಂಡದ ಮೊತ್ತ ಹೆಚ್ಚಿರಲಿದೆ. ಮೆಟ್ರೋಪಾಲಿಟನ್ ನಗರಗಳಲ್ಲಿ ಮಾಸಿಕ ಸರಾಸರಿ 5 ಸಾವಿರ, ನಗರಗಳಲ್ಲಿ 3 ಸಾವಿರ, ಅರೆನಗರಗಳಲ್ಲಿ 2 ಸಾವಿರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 1000 ರುಪಾಯಿ ಠೇವಣಿ ಹೊಂದಿರಬೇಕು. ಮೆಟ್ರೋ ಸಿಟಿಯ ಗ್ರಾಹಕರು ಖಾತೆಯಲ್ಲಿ 5 ಸಾವಿರ ಮೊತ್ತ ಇರಲೇಬೇಕು. ಅದು ಶೇ.50ರಷ್ಟು ಕಡಿಮೆ ಆಯಿತೆಂದರೆ 50 ರುಪಾಯಿ ತಂಡದ ಜತೆಗೆ ಸೇವಾ ತೆರಿಗೆಯನ್ನು ಕಟ್ಟಬೇಕು. ಇನ್ನು ಶೇ. 70ರಷ್ಟು ಕಡಿಮೆ ಆದರೆ 75 ರುಪಾಯಿ ಮತ್ತು ಸೇವಾ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕಾಸರಗೋಡು: ಕಾರುಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು,ಮತ್ತೊರ್ವ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ನಡೆದಿದೆ. ಮೃತಪಟ್ಟವರನ್ನು ಕಾಸರಗೋಡು ಆಲಂಪಾಡಿ ಅಬ್ದುಲ್ ರಜಾಕ್ (34) ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಕಸ್ಟಮ್ಸ್ ಅಧಿಕಾರಿ ವಿಪಿನ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಝಿಕೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಮಂಜೇಶ್ವರದಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ತಲುಪಿಸಿದರೂ ರಜಾಕ್ ಮೃತಪಟ್ಟರು. ಸೌದಿಯಲ್ಲಿ ಉದ್ಯೋಗದಲ್ಲಿದ್ದ ರಜಾಕ್ ಕೆಲ ತಿಂಗಳ ಹಿಂದೆ ನಡೆದ ಸಹೋದರ ಅಜೀಜ್ ನ್ ವಿವಾಹಕ್ಕೆ0ದು ಊರಿಗೆ ಬಂದಿದ್ದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ :ಎಳೆ ಮಕ್ಕಳ ಮಾಂಸಖಂಡಗಳಲ್ಲಿ ನೋವು, ಚರ್ಮದ ಗುಳ್ಳೆಗಳು ಮತ್ತು ಜ್ವರ ಕಾಣಿಸಿಕೊಂಡರೆ ಅಂತಹ ಮಕ್ಕಳನ್ನು ತಜ್ಞರು ಸರಿಯಾಗಿ ಪರೀಕ್ಷಿಸುವ ಮೂಲಕ ಮಕ್ಕಳು ಸಂಧಿವಾತಕ್ಕೆ ತುತ್ತಾಗದಂತೆ ಶುಶ್ರೂಷೆ ನೀಡುವ ಕಾರ್ಯಕ್ಕೆ ಮುಂದಾಗಬೇಕಿದೆ ಎಂದು ಕ್ಷೇಮ ಕುಲಸಚಿವ ಡಾ.ಜಯಪ್ರಕಾಶ್ ಶೆಟ್ಟಿ ಹೇಳಿದ್ದಾರೆ. ಅವರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮಕ್ಕಳ ವಿಭಾಗದ ವತಿಯಿಂದ ಕ್ಷೇಮ ಆಡಿಟೋರಿಯಂನಲ್ಲಿ ಜರಗಿದ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಭಾರತದ ಕೆಲವೊಂದು ಸಂಸ್ಥೆಗಳು ಮಾತ್ರ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಕೀಲುರೋಗ ನೋವಿನ ¨ಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೆ ಈ ಬಗ್ಗೆ ಪ್ರತಿಯೊಂದು ವೈದ್ಯಕೀಯ ಸಂಸ್ಥೆಗಳು ಹೆಚ್ಚಿನ ಮುತುವರ್ಜಿ ವಹಿಸಿಕೊಳ್ಳುವ ಮೂಲಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ ಎಂದರು. ಭಾರತೀಯ ಪೀಡಿಯಾಟ್ರಿಕ್ಸ್ ಅಕಾಡೆಮಿಯ ಚುನಾಯಿತ ಅಧ್ಯಕ್ಷ ಡಾ.ಸಂತೋಷ್ ಸೋನ್ಸ್, ಎಸ್.ಕೆ.ಬ್ರಾಂಚಿನ ಪೀಡಿಯಾಟ್ರಿಕ್ಸ್ ಅಕಾಡೆಮಿ ಅಧ್ಯಕ್ಷ ಡಾ.ಮೇಜರ್ ರಾಜೇಶ್, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಡಾ. ಆನಂದ ರಾವ್, ಕೊಚ್ಚಿ ಅಮೃತ ವೈದ್ಯಕೀಯ ಕಾಲೇಜಿನ ಡಾ.ಸುಮಾ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ವತಿಯಿಂದ ತಖ್ವೀಯ ಟೋಪ್ ಟೆನ್ ಯೂನಿಟ್ ಲೀಡರ್ಸ್ ಮೀಟ್ ಕಾರ್ಯಕ್ರಮವು ಸೆಕ್ಟರ್ ಅಧ್ಯಕ್ಷ ಮನ್ಸೂರು ಹಿಮಮಿ ಮೊಂಟೆಪದವು ಉಸ್ತಾದರ ಅಧ್ಯಕ್ಷತೆಯಲ್ಲಿ ಎಸ್ಸೆಸ್ಸೆಫ್ ಮರಿಕ್ಕಳ ಶಾಖಾ ಕಛೇರಿಯಲ್ಲಿ ಇತ್ತೀಚೆಗೆ ನಡೆಯಿತು. ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಹಾಗೂ ಡಿವಿಷನ್ ಉಪಾಧ್ಯಕ್ಷರು, ಮೋಂಟುಗೋಳಿ ಸೆಕ್ಟರ್ ಉಸ್ತುವಾರಿ ಫಾರೂಕ್ ಸಖಾಫಿ ಮದನಿ ನಗರ ಪ್ರಾಸ್ತವಿಕವಾಗಿ ಮಾತನಾಡಿದರು. ಸುಲೈಮಾನ್ ಮುಸ್ಲಿಯಾರ್ ಕರಿವೆಲ್ಲೂರು ಸಮಸ್ತ ನಡೆದು ಬಂದ ದಾರಿ ಎಂಬ ವಿಷಯದಲ್ಲಿ ಹಾಗೂ ಎಸ್ಸೆಸ್ಸೆಫ್ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಕೆ.ಎಂ ಅಬ್ದುಲ್ ರ್ರಹಿಮಾನ್ ಕಳತೂರು ಸಂಘಟನೆ ತರಗತಿಯನ್ನು ನಡೆಸಿದರು. ಎಸ್.ವೈ.ಎಸ್ ನಾಯಕರಾದ ಖಾಲಿದ್ ಹಾಜಿ ಭಟ್ಕಳ, ಅಝೀಝ್ ಮೊಂಟೆಪದವು, ಮೋಂಟುಗೋಳಿ ಸೆಕ್ಟರ್ ನಾಯಕರಾದ ನಾಸಿರ್ ಮೊಂಟುಗೋಳಿ, ಸಿರಾಜ್ ನಡುಪದವು, ಮುಸ್ತಫಾ ನಡುಪದವು, ನಿಯಾಝ್ ಪಡಿಕ್ಕಲ್, ಸಿರಾಜ್ ಪಡಿಕ್ಕಲ್,…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಎಸ್ಸೆಸ್ಸೆಫ್ ಸಂಘಟನೆ ಧಾರ್ಮಿಕ ಚಟುವಟಿಕೆಗಳೊಂದಿಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಕಾರ್ಯವೈಖರಿ ಶ್ಲಾಘನೀಯ ಎಂದು ಕೊಣಾಜೆ ಠಾಣೆಯ ಉಪನಿರೀಕ್ಷಕ ಸುಗುಮಾರನ್ ಅಭಿಪ್ರಾಯಪಟ್ಟರು. ಅವರು ಗುರುವಾರ ಎಸ್ಸೆಸ್ಸೆಫ್ ದೇರಳಕಟ್ಟೆ ವತಿಯಿಂದ ರಿಫಾಈ ಶೈಖ್ ರವರ ಅನುಸ್ಮರಣೆ ಅಂಗವಾಗಿ ಕೊಣಾಜೆ ಅಸೈಗೋಳಿಯ ಅಭಯ ಅಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದರು. ಧಾರ್ಮಿಕ ಸಂಘಟನೆಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯತೆ ಇದೆ. ಸಮಾಜದಲ್ಲಿ ಹಿಂದುಳಿದವರ ಸೇವೆಗೆ ನಿಲ್ಲುವ ಮೂಲಕ ಧಾರ್ಮಿಕ ಸಂಘಟನೆಗಳು ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದರು . ಎಸ್ಸೆಸ್ಸೆಫ್ ದೇರಳಕಟ್ಟೆ ಅಧ್ಯಕ್ಷ ಹಸನ್ ಸಅದಿ, ಉಪಾಧ್ಯಕ್ಷರುಗಳಾದ ಜುನೈದ್ ಸಖಾಫಿ,ಸುಹೈಲ್ ಶಾಂತಿಬಾಗ್, ಎಸ್ಸೆಸ್ಸೆಫ್ ಉಳ್ಳಾಲ ಡಿವಿಸನ್ ಕಾರ್ಯದರ್ಶಿ ಶರೀಫ್ ಮುಡಿಪು, ಪ್ರ.ಕಾರ್ಯದರ್ಶಿ ಸಫೀರ್ ರೆಂಜಾಡಿ, ಸದಸ್ಯರಾದ ಸಿದ್ದೀಕ್ ಮದನಿ, ಸಿದ್ದೀಕ್ ಕೋಟೆಕಾರ್ ಹಮೀದ್ ನಾಟೆಕಲ್, ಅಲಿ ಬದ್ಯಾರ್, ನೌಷಾದ್ ಬದ್ಯಾರ್, ಅಲ್ತಾಫ್ ಕಲ್ಪಾದೆ, ಅಶ್ರಫ್ ಅಸೈ, ರಫೀಕ್ ತಿಬ್ಲೆಪದವು ಉಪಸ್ಥಿತರಿದರು.

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಸ್ನಾತಕೋತ್ತರ ವಿಭಾಗದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ದೀವಿತ್ ಎಸ್ .ಕೋಟ್ಯಾನ್ ಅವರಿಗೆ ಪ್ರಥಮ ರ?ಯಾಂಕ್ನೊಂದಿಗೆ ಎರಡು ಚಿನ್ನದ ಪದಕ ಹಾಗೂ ಎರಡು ನಗದು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪೆರಾಡಿಯ ಶ್ರೀಧರ ಕೋಟ್ಯಾನ್ ಹಾಗೂ ಲಲಿತಾ ದಂಪತಿಯ ಪುತ್ರರಾಗಿರುವ ದೀವಿತ್ ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಂಡು ಉನ್ನತ ಸಾಧನೆ ಮಾಡಿದ್ದಾರೆ. ಅಲ್ಲದೆ ಯಕ್ಷಗಾನ ಕಲಾವಿದನೂ ಆಗಿರುವ ದೀವಿತ್ ಈಗಾಗಲೇ ಸುಮಾರು 300-350ಕ್ಕೂ ಹೆಚ್ಚು ಯಕ್ಷಗಾನ ಪ್ರದರ್ಶನಗಳಲ್ಲಿ ಪಾತ್ರ ನಿರ್ವಹಿಸಿ ಯಶಸ್ವಿ ಕಲಾವಿದನೆನಿಸಿಕೊಂಡಿದ್ದಾರೆ. ತಂದೆ ಟೈಲರ್ ವೃತ್ತಿ ಹಾಗೂ ತಾಯಿ ಬೀಡಿ ಕಟ್ಟುವುದರೊಂದಿಗೆ ಸಂಸಾರವನ್ನು ನಡೆಸುತ್ತಿದ್ದು ಬಡತನವಿದ್ದರೂ ಮಕ್ಕಳ ವಿದ್ಯಾಭ್ಯಾಸಕ್ಕೆ ಪೆÇ್ರೀತ್ಸಾಹ ನೀಡುತ್ತಾ ಬಂದ್ದಿದ್ದಾರೆ. ಅಲ್ಲದೆ ಪಿಯುಸಿಯ ನಂತರ ಆಳ್ವಾಸ್ ಕಾಲೇಜಿಗೆ ಸೇರಿದ ನಂತರ ಡಾ. ಮೋಹನ್ ಆಳ್ವಾ ಅವರು ಉಚಿತ ಶಿಕ್ಷಣ ನೀಡಿ ಪೆÇ್ರೀತ್ಸಾಹ ನೀಡಿದ್ದಾರೆ. ಸಮೂಹ ಸಂವಹನ ಹಾಗೂ ಪತ್ರಿಕೋಧ್ಯಮ ವಿಭಾಗದಲ್ಲಿ ಪ್ರಥಮ ರ್ಯಾಂಕಿನೊಂದಿಗೆ, ಡಾ.ಟಿ.ಎಂ.ಎ.ಪೈ ದತ್ತಿ ಚಿನ್ನದ ಪದಕ…

Read More

ಚಿತ್ರ: ನಿತೀಶ್ ಪಿ ಬೈಂದೂರು ಮಂಗಳೂರು ವಿಶ್ವವಿದ್ಯಾನಿಲಯದ 35ನೇ ಘಟಿಕೋತ್ಸವದ ಸಂಧರ್ಭದಲ್ಲಿ ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯ……

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ 35ನೇ ವಾರ್ಷಿಕ ಘಟಿಕೋತ್ಸವವು ಮಂಗಳ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಉನ್ನತ ಶಿಕ್ಷಣ ಸಚಿವ ಬಸವರಾಯ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೆಹಲಿಯ ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ ಪ್ರೊ.ಅಜಯ್ .ಕೆ.ಸೂದ್ ಘಟಿಕೋತ್ಸವ ಭಾಷಣ ನೆರವೇರಿಸಿದರು. ಡಾ.ಬಿ.ಎ.ವಿವೇಕ ರೈ ಇವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಸಚಿವರು ಪ್ರಧಾನಿಸಿದರು. ಈ ಸಂದರ್ಭ ಕುಲಪತಿ ಪ್ರೊ.ಕೆ.ಬೈರಪ್ಪ, ಕುಲಸಚಿವ ಪ್ರೊ.ಕೆ.ಎಂ ಲೋಕೇಶ್, ಪರೀಕ್ಷಾಂಗ ಕುಲಸಚಿವ ಎ.ಎಂ ಖಾನ್ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಾಯಕ ಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಈ ವೇಳೆ 54 ಪಿಹೆಚ್ ಡಿ, 3,925 ಸ್ನಾತಕೋತ್ತರ ವಿಭಾಗದ , ಸ್ನಾತಕೋತ್ತರ ಅಟನೋಮಸ್ 1037, ಪದವಿ ವಿಭಾಗದ 19,985 ಪದವಿ ಅಟನೋಮಸ್ 2,2,00, ಸ್ನಾತಕೋತ್ತರ ಡಿಪ್ಲೊಮಾ 5, ಪದವಿ ಪಡೆದುಕೊಂಡರು. ಚಿನ್ನದ ಪದಕವನ್ನು 43 ಮಂದಿ ಮತ್ತು ನಗದು ಪುರಸ್ಕಾರ 63 ಮಂದಿ ಪಡೆದುಕೊಂಡರು.

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕಣಚೂರು: ಕ್ಷಯ ರೋಗವನ್ನು ಸಮಗ್ರ ರೀತಿಯಲ್ಲಿ ಸಂಪೂರ್ಣವಾಗಿ ನಿಗ್ರಹಿಸುವ ಅನಿವಾರ್ಯತೆ ಇದ್ದು, ಈ ನಿಟ್ಟಿನಲ್ಲಿ ಕಣಚೂರು ಆಸ್ಪತ್ರೆ ಅರಿವು ಕಾರ್ಯಕ್ರಮವನ್ನು ಆಯೋಜಿಸಿರುವ ಕಾರ್ಯ ಶ್ಲಾಘನೀಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟರು. ಅವರು ನಾಟೆಕಲ್‍ನ ಕಣಚೂರು ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಕ್ಷಯ ರೋಗ ಜಾಗೃತಿ ಬಗ್ಗೆ ಮಾಹಿತಿ ಮತ್ತು ಬಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿದರು. ವೈದ್ಯಕೀಯ ಸಂಸ್ಥೆಗಳು ಜನರ ಬಗೆಗಿನ ಪ್ರಮುಖವಾಗಿ ಕಾಳಜಿ ವಹಿಸಬೇಕು. ಹೆಚ್‍ಐವಿ ಮತ್ತು ಕ್ಷಯ ರೋಗಿಗಳ ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ಒದಗಿಸುವುದು ಸೂಕ್ತ . ಇದನ್ನು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಜನರಲ್ಲಿ ಅರಿವು ಮೂಡಿಸಲು ಮುಂದಾಗಿರುವ ಕಣಚೂರು ಆಸ್ಪತ್ರೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದರು. ರಾಜೀವ ಗಾಂಧಿ ಆರೋಗ್ಯ ವಿe್ಞÁನ ವಿಶ್ವವಿದ್ಯಾನಿಲಯ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಯೇನೆಪೋಯ:ವೈದ್ಯಕೀಯ ಶಿಕ್ಷಣ ಕ್ಷೇತ್ರದೊಂದಿಗೆ ಪ್ಯಾರಾ ಮೆಡಿಕಲ್ ಕೋರ್ಸಿಗೆ ಹೆಚ್ಚಿನ ಉತ್ತೇಜನಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ , ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಫಿಸಿಯೋಥೆರಪಿ ಕೌನ್ಸಿಲ್ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣ ಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟರು. ಅವರು ಯೇನೆಪೋಯ ವಿಶ್ವವಿದ್ಯಾನಿಲಯ ಕ್ಯಾಂಪಸ್‍ನ ಯೆಂಡ್ಯುರೆನ್ಸ್ ಸಭಾಂಗಣದಲ್ಲಿ ಸೌತ್ ಕೆನರಾ ಪಿಸಿಯೋಥೆರಪಿ ಟೀಚರ್ಸ್ ಅಸೋಸಿಯೇಶನ್ ಇದರ ಆಶ್ರಯದಲ್ಲಿ ಶುಕ್ರವಾರ ನಡೆದ `ಮಂಗಳೂರು ಫಿಸಿಯೋಕಾನ್ -2017′ ಅಂತರಾಷ್ಟ್ರೀಯ ಪಿಸಿಯೋಥೆರಪಿ ಕಾನರೆನ್ಸ್‍ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣ ಪ್ರಕಾಶ್ ಪಾಟೀಲ್ ಚಾಲನೆ ನೀಡಿ ಮಾತನಾಡಿದರು. ವೈದ್ಯಕೀಯ ಶಿಕ್ಷಣ ಕ್ಷೇತ್ರದೊಂದಿಗೆ ಪ್ಯಾರಾ ಮೆಡಿಕಲ್ ಕೋರ್ಸುಗಳಿಗೆ ಹೆಚ್ಚಿನ ಉತ್ತೇಜನವನ್ನು ನೀಡುವ ಸಲುವಾಗಿ ಸರಕಾರ ಮಹತ್ತರವಾದ ಯೋಜನೆಗಳನ್ನು ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕ್ಷೇತ್ರದಲ್ಲಿರುವಂತೆ ಫಿಸಿಯೋಥೆರಪಿ ಶಿಕ್ಷಣ ಉತ್ತೇಜನಕ್ಕೆ ರಾಜ್ಯದಲ್ಲಿ ಫಿಸಿಯೋಥೆರಪಿ ಕೌನ್ಸಿಲ್ ಪ್ರಾರಂಬಿಸಲಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜೀವ ಗಾಂಧಿ ಆರೋಗ್ಯ ವಿe್ಞÁನ ವಿಶ್ವವಿದ್ಯಾನಿಲಯ ಬೆಂಗಳೂರು…

Read More