Author: UllalaVani

Kannada News From Coastal Karnataka

ದೈಗೋಳಿ: ಕುಳೂರು ಕನ್ಯಾನದ ಸಮಾಜಸೇವಕ ಡಾ. ಸದಾಶಿವ ಶೆಟ್ಟಿಯವರ ಜನ್ಮದಿನದ ಅಂಗವಾಗಿ ಶ್ರೀ ಸಾಯಿನಿಕೇತನ ಸೇವಾಶ್ರಮದಲ್ಲಿ ವಿಶೇಷ ಅನ್ನದಾನ ಸೇವೆಯನ್ನು ಆಯೋಜಿಸಲಾಯಿತು. ಡಾ. ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ವತಿಯಿಂದ ಆಶ್ರಮದ ನಿವಾಸಿಗಳಿಗೆ ಅನ್ನದಾನ ಸೇವೆ ನೀಡಲಾಯಿತು. ಈ ಸಂದರ್ಭದಲ್ಲಿ ಆಶ್ರಮವಾಸಿಗಳು ಹಾಗೂ ಸೇವಾ ಬಳಗದ ಸದಸ್ಯರು ಡಾ. ಸದಾಶಿವ ಶೆಟ್ಟಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು. ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಡಾ. ಸದಾಶಿವ ಶೆಟ್ಟಿಯವರ ಸೇವಾ ಮನೋಭಾವ ಇನ್ನಷ್ಟು ವಿಸ್ತರಿಸಲಿ ಹಾಗೂ ಜನಸೇವೆಯಲ್ಲಿ ತೊಡಗಿರುವ ಸೇವಾ ಬಳಗದ ಎಲ್ಲಾ ಸದಸ್ಯರಿಗೆ ಭಗವಂತ ಹೆಚ್ಚಿನ ಶಕ್ತಿ ಮತ್ತು ಆಯುಷ್ಯವನ್ನು ಕರುಣಿಸಲಿ ಎಂದು ಆಶ್ರಮದ ಪರವಾಗಿ ಪ್ರಾರ್ಥಿಸಲಾಯಿತು. ಕಾರ್ಯಕ್ರಮದಲ್ಲಿ ಸೇವಾ ಬಳಗದ ಪದಾಧಿಕಾರಿಗಳು, ಸದಸ್ಯರು ಹಾಗೂ ಆಶ್ರಮದ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಅಭಿವೃದ್ಧಿ ರಾಜಕೀಯದ ಮೂಲಕ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಕೊಡಿಪ್ಪಾಡಿ ಗ್ರಾಮದಲ್ಲಿ ನಡೆದ ಒಂದು ಕಾರ್ಯಕ್ರಮ ರಾಜಕೀಯ ವಲಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ “ಗ್ರಾಮಕ್ಕೆ ಸಮರ್ಪಕ ಅನುದಾನ ನೀಡಿಲ್ಲ” ಎಂದು ಶಾಸಕರ ವಿರುದ್ಧ ಆರೋಪ ಮಾಡಿದ್ದ ಕೊಡಿಪ್ಪಾಡಿಯ ಒಬ್ಬ ರಿಕ್ಷಾ ಚಾಲಕರನ್ನೇ, ಗ್ರಾಮದ ಎಸ್‌ಟಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ನೂತನ ರಸ್ತೆಯ ಉದ್ಘಾಟನೆಗೆ ಆಹ್ವಾನಿಸಿ ರಿಬ್ಬನ್ ಕತ್ತರಿಸುವ ಅವಕಾಶ ನೀಡಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಬೆಳವಣಿಗೆ ಕಂಡುಬಂದಿತು. ಸಾಮಾನ್ಯವಾಗಿ ಟೀಕೆಗಳಿಗೆ ಪ್ರತಿಕ್ರಿಯೆಯಾಗಿ ರಾಜಕೀಯ ವಾಗ್ವಾದಗಳು ನಡೆಯುವ ಸಂದರ್ಭದಲ್ಲಿ, ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯನ್ನು ಟೀಕೆ ಮಾಡಿದ ವ್ಯಕ್ತಿಯ ಕೈಯಿಂದಲೇ ನೆರವೇರಿಸುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ವಿಭಿನ್ನ ಸಂದೇಶ ರವಾನಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, “ಕಳೆದ ಎರಡು…

Read More

ಬೆಂಗಳೂರು, ಜೂನ್ 15: ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವಾಟ್ಸಾಪ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ, ಕಾನೂನಿನ ದುರುಪಯೋಗ ತಡೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಭಾರತದ ಸಂವಿಧಾನದ ಪರಿಚ್ಛೇದ 19(1)(a) ಪ್ರತಿಯೊಬ್ಬ ನಾಗರಿಕನಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ನೀಡಿದೆ. ಸರ್ಕಾರ, ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕ ನೀತಿಗಳ ಕುರಿತು ಟೀಕೆ ಮಾಡುವುದು, ಪ್ರಶ್ನಿಸುವುದು ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ಗಳು ಹಲವು ತೀರ್ಪುಗಳಲ್ಲಿ ಈ ಹಕ್ಕಿನ ಮಹತ್ವವನ್ನು ಪುನರುಚ್ಚರಿಸಿವೆ. 2015ರ ಮಾರ್ಚ್ 24ರಂದು ಐತಿಹಾಸಿಕ ಶ್ರೇಯಾ ಸಿಂಘಾಲ್ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66A ಅನ್ನು ಅಸಂವಿಧಾನಿಕ…

Read More

ಉಳ್ಳಾಲ: : ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ಕುಡಿಯುವ ನೀರಿನ ಬಿಲ್ ಪಾವತಿ ಸ್ಕ್ಯಾನರ್ ವ್ಯವಸ್ಥೆಯನ್ನು  ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ ಅವರು ನೀರಿನ ಬಿಲ್ಲನ್ನು ಸ್ಕ್ಯಾನ್ ಮಾಡಿ ಪಾವತಿಸುವ ಮೂಲಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಚಾಲನೆ ನೀಡಿದರು. ಈ ನೂತನ ವ್ಯವಸ್ಥೆಯ ಮೂಲಕ ನಾಗರಿಕರು ತಮ್ಮ ನೀರಿನ ಬಿಲ್ಲಿನ ಮೇಲಿರುವ ಸ್ಕ್ಯಾನರ್ ಕೋಡ್ ಅನ್ನು ಬಳಸಿಕೊಂಡು ಸುಲಭವಾಗಿ ಹಾಗೂ ತ್ವರಿತವಾಗಿ ಪಾವತಿ ಮಾಡಬಹುದಾಗಿದೆ. ಇದರಿಂದ ಬಿಲ್ ಪಾವತಿ ಪ್ರಕ್ರಿಯೆ ಮತ್ತಷ್ಟು ಸರಳ, ಪಾರದರ್ಶಕ ಹಾಗೂ ಡಿಜಿಟಲೀಕರಣಗೊಳ್ಳಲಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಧ್ಯಕ್ಷೆ ತಿಳಿಸಿದರು. ಪಟ್ಟಣ ಪಂಚಾಯತ್ ಆಡಳಿತವು ಸಾರ್ವಜನಿಕ ಸೇವೆಗಳನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಮಹತ್ವದ ಹೆಜ್ಜೆಯಾದ ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಶ್ರೀ ಪ್ರವೀಣ್ ಐ. ಬಗಂಬಿಲ, ಮುಖ್ಯಾಧಿಕಾರಿ, ಕಿರಿಯ ಅಭಿಯಂತರರು, ಮೆ. ಪ್ರಸನ್ನ ಟೆಕ್ನಾಲಜಿಯ ಅಧಿಕಾರಿಗಳು, ಪಟ್ಟಣ ಪಂಚಾಯತ್ ಸಿಬ್ಬಂದಿಗಳು…

Read More

ಸುಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ಡಿಕನ್ಸ್ ಸ್ಟ್ರಕ್ಟ್ ತನ್ನ ಬ್ರಾಂಡ್ ಪಾರ್ಟ್ನರ್ ಆಗಿ ಸುಪ್ರಸಿದ್ಧ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರನ್ನು ಘೋಷಣೆ ಮಾಡಿದೆ. ರವಿಚಂದರ್ ಅವರ instagram ರೀಲ್ ನಲ್ಲಿ ಸ್ಕಿನ್ ಕೇರ್ ಡಿಕನ್ಸ್ ಸ್ಟ್ರಕ್ಟ್ ಇತ್ತು. ಇದನ್ನು ಅಭಿಮಾನಿಗಳು ಗಮನಿಸಿದರು. ಆ ಬಳಿಕ ಇದು ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿತು. ಇಂಟರ್ನೆಟ್ ನಲ್ಲಿ ಸೆನ್ಸೇಶನ್ ಆದ ವಿಷಯ ಈಗ ಪಾರ್ಟ್ನರ್ ಶಿಪ್ ಗೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಂಸ್ಥೆಯ ಸಿಇಒ ಮಾಲಿನಿ ಅಡಪುರೆಡ್ಡಿ ಅವರು ಮಾತನಾಡಿದ್ದಾರೆ. ಜನರು ಸಹಜವಾಗಿ ಸ್ಪಂದಿಸಿ ಬ್ರಾಂಡ್ ನ್ನು ನೋಡಿದಾಗ ಅದನ್ನು ಮುಂದುವರಿಸಿಕೊಂಡು ಹೋಗುವುದು ನಮಗೆ ಸರಿ ಅನಿಸಿತು. ಅನಿರುದ್ಧ್ ಅವರು ನಮ್ಮ ಬ್ರಾಂಡಿಗೆ ಸರಿ ಹೊಂದುತ್ತಾರೆ. ಹೀಗಾಗಿ ಇಂಟರ್ನೆಟ್ ನಲ್ಲಿ ಉಂಟಾದ ವಿಡಿಯೋದ ಪ್ರಭಾವ ಸಹಯೋಗಕ್ಕೆ ಪ್ರೇರಣೆ ನೀಡಿತು ಎಂದು ಹೇಳಿದ್ದಾರೆ. ತಮ್ಮ ಹಿಟ್ ಹಾಡುಗಳು ಗಳಿಂದ ಯುವ ಜನರ ಮೇಲೆ ಅಪಾರ ಪ್ರಭಾವ ಬೀರಿರುವ ಅನಿರುದ್ಧ ರವಿಚಂದರ್ ಪ್ರೇಕ್ಷಕರಿಗೆ…

Read More

ಬೆಳ್ತಂಗಡಿ ತಾಲ್ಲೂಕಿನ ಎಕ್ಸೆಲ್ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಗಂಭೀರ ಅಕ್ರಮಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿರುವುದು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅರಮಲೆ ಬೆಟ್ಟ ಕ್ಯಾಂಪಸ್ಸಿನಲ್ಲಿ ಕಟ್ಟಡ ಪರವಾನಿಗೆ ಹಾಗೂ ಅಗತ್ಯ ಅನುಮತಿಗಳಿಲ್ಲದೆ ಶಿಕ್ಷಣ ಚಟುವಟಿಕೆ ನಡೆಸಿರುವ ಆರೋಪಗಳ ನಡುವೆ, ವೇಣೂರಿನಲ್ಲಿ ಬೋಗಸ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪದವಿ ಪೂರ್ವ ಕಾಲೇಜಿನ ಪರವಾನಿಗೆಯನ್ನೂ ರದ್ದುಪಡಿಸಿರುವುದು ಗಮನಾರ್ಹವಾಗಿದೆ. ಮಾಹಿತಿಗಳ ಪ್ರಕಾರ, ಕೆರೆಯ ಪಕ್ಕದಲ್ಲಿರುವ ವಿದ್ಯಾಸಾಗರ್ ಕ್ಯಾಂಪಸ್ಸಿನಲ್ಲಿ ಸುಮಾರು 3,000 ವಿದ್ಯಾರ್ಥಿಗಳು ಹಾಗೂ ಅರಮಲೆ ಬೆಟ್ಟ ಕ್ಯಾಂಪಸ್ಸಿನಲ್ಲಿ ಮತ್ತೊಂದು 3,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸಂಸ್ಥೆಗಳು ಎಲ್ಲಾ ಕಾನೂನುಬದ್ಧ ಅನುಮತಿಗಳು, ಸುರಕ್ಷತಾ ಮಾನದಂಡಗಳು ಹಾಗೂ ಶಿಕ್ಷಣ ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮವು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶಿಕ್ಷಣದ ಗುಣಮಟ್ಟವನ್ನು ಕಾಪಾಡುವ ಪ್ರಯತ್ನವಾಗಿದೆ. ಕುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರವಾನಿಗೆ ಪಡೆದಿರುವ ಆರೋಪದ…

Read More

ಕರ್ನಾಟಕದ ವಿದ್ಯುತ್ ವಿತರಣಾ ಸಂಸ್ಥೆಗಳ ಭವಿಷ್ಯದ ಕುರಿತು ಜನರಲ್ಲಿ ಹಲವು ಪ್ರಶ್ನೆಗಳು ಮೂಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರಿಗೆ ವಿದ್ಯುತ್ ಸೇವೆ ನೀಡುತ್ತಿರುವ MESCOM ಸಂಸ್ಥೆಯ ಸ್ಥಿತಿ ಮತ್ತು ಖಾಸಗಿ ಕಂಪನಿಗಳ ಪ್ರವೇಶದ ಕುರಿತು ನಡೆಯುತ್ತಿರುವ ಚರ್ಚೆಗಳು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿವೆ. ಒಂದು ಕಾಲದಲ್ಲಿ ದೇಶದ ದೂರಸಂಪರ್ಕ ಕ್ಷೇತ್ರದಲ್ಲಿ ಪ್ರಮುಖ ಸ್ಥಾನದಲ್ಲಿದ್ದ BSNL ಸಂಸ್ಥೆ ಇಂದು ಖಾಸಗಿ ಕಂಪನಿಗಳ ಸ್ಪರ್ಧೆಯ ನಡುವೆ ತನ್ನ ಹಿಂದಿನ ಪ್ರಭಾವವನ್ನು ಕಳೆದುಕೊಂಡಿದೆ. ಇದೇ ರೀತಿಯ ಪರಿಸ್ಥಿತಿ ವಿದ್ಯುತ್ ಕ್ಷೇತ್ರದಲ್ಲಿಯೂ ಉಂಟಾಗಬಹುದೇ ಎಂಬ ಪ್ರಶ್ನೆ ಜನರಲ್ಲಿ ಕೇಳಿಬರುತ್ತಿದೆ. ವಿದ್ಯುತ್ ಎಂಬುದು ಕೇವಲ ಒಂದು ಸೇವೆಯಲ್ಲ; ಅದು ಜನರ ದೈನಂದಿನ ಬದುಕು, ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಉದ್ಯಮಗಳ ಮೂಲಾಧಾರವಾಗಿದೆ. ರಾಜ್ಯದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳ ಪ್ರವೇಶದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರ ಜನರ ಮುಂದೆ ಸ್ಪಷ್ಟನೆ ನೀಡಬೇಕಾಗಿದೆ. MESCOM ಸೇರಿದಂತೆ ಸಾರ್ವಜನಿಕ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಬಲಪಡಿಸುವ ಬದಲು…

Read More

ಕುಂಪಲ : ಇಲ್ಲಿನ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಜೂ.16ರಿಂದ ಜೂ.17ರ ವರೆಗೆ ಶ್ರೀ ದುರ್ಗಾದೇವಿ, ಶ್ರೀ ಅನಂತ ಪದ್ಮನಾಭ ಮತ್ತು ನವಗ್ರಹ ದೇವರ ಬಿಂಬ ಪ್ರತಿಷ್ಠೆ ಅಷ್ಠಬಂಧ ಬ್ರಹ್ಮ ಕಲಶಾಭಿಷೇಕ ನಡೆಯಲಿದೆ.ಜೂ.16ರಂದು ಸಂಜೆ 7ಗಂಟೆಗೆ ವಾಸ್ತು ಹೋಮ,ಶಯನ ಪೂಜೆ,ಜೂ.17ರಂದು ಬೆಳಿಗ್ಗೆ 6.00ಗಂಟೆಯಿಂದ 208 ತೆಂಗಿನಕಾಯಿ ಗಣಪತಿ ಹೋಮ,ವಿಷ್ಣು ಸಹಸ್ರನಾಮ ಹೋಮ,ಪ್ರಾತಿಷ್ಠಾ ಹೋಮ ಬೆಳಿಗ್ಗೆ 7.52ರ ಮಿಥುನ ಲಘ್ನ ದಲ್ಲಿ ಅನಂತಪದ್ಮನಾಭ ದೇವರ ಬಿಂಬ ಪ್ರತಿಷ್ಠೆ ಸಂಜೆ 7.00ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಜೂ.18ರಂದು ಬೆಳಿಗ್ಗೆ 10.00ಗಂಟೆಗೆ ಶ್ರೀ ದುರ್ಗಾಪರಮೇಶ್ವರ ದೇವರಿಗೆ ಶತರದ್ರಾಭಿಷೇಕ ವಿಶೇಷ ಪೂಜೆ. ಸಂಜೆ7.00ಗಂಟೆಗೆ ಶ್ರೀ ದುರ್ಗಾ ನಮಸ್ಕಾರ ಪೂಜೆ,ಲಲಿತ ಸಹಸ್ರನಾಮ ಪಾರಾಯಣ ನಡೆಯಲಿದೆ.ಜೂ.19ರಂದು ಬೆಳಿಗ್ಗೆ 6.00ರಿಂದ ಗಣಹೋಮ,ಕಲಶಹೋಮ ಬೆಳಿಗ್ಗೆ ಗಂಟೆ 8.02ರ ಮಿಥುನ ಲಘ್ನದ ಶುಭ ಮುಹೂರ್ತದಲ್ಲಿ ಶ್ರೀ ದುರ್ಗಾದೇವಿಯ ಅಷ್ಠಬಂಧ ಬಿಂಬ ಪ್ರತಿಷ್ಠೆ ಬೆಳಿಗ್ಗೆ ಗಂಟೆ 10.12ಕ್ಕೆ ಕರ್ಕಾಟಕ ಲಘ್ನದಲ್ಲಿ ನವಗ್ರಹ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಮಹಾ ಚಂಡಿಕಾ ಯಾಗ ಮಹಾಪೂಜೆ ಮಂತ್ರಾಕ್ಷತೆ ನಡೆಯಲಿದೆ.

Read More

ಉಳ್ಳಾಲ, ಜೂನ್ 13: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್, ಉಳ್ಳಾಲ ತಾಲೂಕು ಹಾಗೂ ಇರಾ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಇರಾ ತಾಲಿತ್ತಬೆಟ್ಟು ದ.ಕ. ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ಸಂವಿಧಾನ ಮತ್ತು ಶಿಕ್ಷಣ ಕುರಿತ ತರಬೇತಿ ಕಾರ್ಯಗಾರವನ್ನು ಶನಿವಾರ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಇರಾ ಗ್ರಾಮ ಪಂಚಾಯತ್ ಕಾರ್ಯದರ್ಶಿ ದಿನೇಶ್ ಕುಮಾರ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಇಸ್ಮಾಯಿಲ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಆದಿ ದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ ಅವರು ಪ್ರಸಕ್ತ ಸಮಾಜದಲ್ಲಿ ಸಂವಿಧಾನದ ಮಹತ್ವ ಹಾಗೂ ಶಿಕ್ಷಣದ ಅಗತ್ಯತೆಯ ಕುರಿತು ಮಾತನಾಡಿದರು. ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಯಾದವ ಅಸ್ಸೈಗೋಳಿ ಅಧ್ಯಕ್ಷತೆ ವಹಿಸಿ, ಟ್ರಸ್ಟ್‌ನ ವಿವಿಧ ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತದನಂತರ ಉಪನ್ಯಾಸಕ ರಘು ಧರ್ಮಸೇನಾ ಅವರು ವಿದ್ಯಾರ್ಥಿಗಳಿಗೆ…

Read More

ಉಳ್ಳಾಲ:ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಜೂ.16ರಿಂದ ಜೂ.17ರ ವರೆಗೆ ಶ್ರೀ ದುರ್ಗಾದೇವಿ, ಶ್ರೀ ಅನಂತ ಪದ್ಮನಾಭ ಮತ್ತು ನವಗ್ರಹ ದೇವರ ಬಿಂಬ ಪ್ರತಿಷ್ಠೆ ಅಷ್ಠಬಂಧ ಬ್ರಹ್ಮ ಕಲಶಾಭಿಷೇಕ ನಡೆಯಲಿದೆ. ಜೂ.16ರಂದು ಸಂಜೆ 7ಗಂಟೆಗೆ ವಾಸ್ತು ಹೋಮ,ಶಯನ ಪೂಜೆ,ಜೂ.17ರಂದು ಬೆಳಿಗ್ಗೆ 6.00ಗಂಟೆಯಿಂದ 208 ತೆಂಗಿನಕಾಯಿ ಗಣಪತಿ ಹೋಮ,ವಿಷ್ಣು ಸಹಸ್ರನಾಮ ಹೋಮ,ಪ್ರಾತಿಷ್ಠಾ ಹೋಮ ಬೆಳಿಗ್ಗೆ 7.52ರ ಮಿಥುನ ಲಘ್ನ ದಲ್ಲಿ ಅನಂತಪದ್ಮನಾಭ ದೇವರ ಬಿಂಬ ಪ್ರತಿಷ್ಠೆ ಸಂಜೆ 7.00ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಜೂ.18ರಂದು ಬೆಳಿಗ್ಗೆ 10.00ಗಂಟೆಗೆ ಶ್ರೀ ದುರ್ಗಾಪರಮೇಶ್ವರ ದೇವರಿಗೆ ಶತರದ್ರಾಭಿಷೇಕ ವಿಶೇಷ ಪೂಜೆ. ಸಂಜೆ7.00ಗಂಟೆಗೆ ಶ್ರೀ ದುರ್ಗಾ ನಮಸ್ಕಾರ ಪೂಜೆ,ಲಲಿತ ಸಹಸ್ರನಾಮ ಪಾರಾಯಣ ನಡೆಯಲಿದೆ.ಜೂ.19ರಂದು ಬೆಳಿಗ್ಗೆ 6.00ರಿಂದ ಗಣಹೋಮ,ಕಲಶಹೋಮ ಬೆಳಿಗ್ಗೆ ಗಂಟೆ 8.02ರ ಮಿಥುನ ಲಘ್ನದ ಶುಭ ಮುಹೂರ್ತದಲ್ಲಿ ಶ್ರೀ ದುರ್ಗಾದೇವಿಯ ಅಷ್ಠಬಂಧ ಬಿಂಬ ಪ್ರತಿಷ್ಠೆ ಬೆಳಿಗ್ಗೆ ಗಂಟೆ 10.12ಕ್ಕೆ ಕರ್ಕಾಟಕ ಲಘ್ನದಲ್ಲಿ ನವಗ್ರಹ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಮಹಾ ಚಂಡಿಕಾ ಯಾಗ ಮಹಾಪೂಜೆ ಮಂತ್ರಾಕ್ಷತೆ ನಡೆಯಲಿದೆ.

Read More