ಬೆಂಗಳೂರು ; ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೈಡ್ರೋ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 3 ಕೆಜಿ 180 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 2.20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್ನಿಂದ ಬೆಂಗಳೂರಿಗೆ ತರಲಾಗುತ್ತಿತ್ತು ಎಂಬ ಮಾಹಿತಿ…
Author: UllalaVani
ಮಂಗಳೂರು, ಜೂನ್ 16: ಡೀಸೆಲ್ ಬೆಲೆಯಲ್ಲಿ ಈಗಾಗಲೇ ಸುಮಾರು ₹9 ರಷ್ಟು ಏರಿಕೆಯಾಗಿರುವುದರಿಂದ ಖಾಸಗಿ ಬಸ್ ಉದ್ಯಮ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಇದರ ನೇರ ಪರಿಣಾಮ ಬಸ್ ಮಾಲಕರು ಹಾಗೂ ನೌಕರರ ಮೇಲೆ ಬೀಳುತ್ತಿದೆ ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷ ಉಸ್ಮಾನ್ ಅಲ್ತಾಫ್ ತಿಳಿಸಿದ್ದಾರೆ. ಪ್ರಯಾಣಿಕರ ಮೇಲೆ ಹೆಚ್ಚಿನ ಹೊರೆ ಬೀಳದ ರೀತಿಯಲ್ಲಿ ಕೇವಲ ₹1 ರಿಂದ ₹3 ರವರೆಗೆ ಮಾತ್ರ ಬಸ್ ಟಿಕೆಟ್ ದರವನ್ನು ಪರಿಷ್ಕರಿಸುವ ಮೂಲಕ ಖಾಸಗಿ ಬಸ್ ಉದ್ಯಮಕ್ಕೆ ಸ್ವಲ್ಪ ಮಟ್ಟಿನ ರಕ್ಷಣೆ ಒದಗಿಸಲು ಬಸ್ ಮಾಲಕರು ನಿರ್ಧಾರ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು. ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಜಾರಿಯಲ್ಲಿರುವುದರಿಂದ ಖಾಸಗಿ ಬಸ್ ಸೇವೆಯ ಆದಾಯದ ಮೇಲೆ ಮತ್ತಷ್ಟು ಪರಿಣಾಮ ಉಂಟಾಗಿದೆ. ಇದರಿಂದ ಖಾಸಗಿ ಬಸ್ ಉದ್ಯಮ ನಡೆಸುವುದು ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.…
ಬಂಟ್ವಾಳ, ಜೂ. 16 : ಮಳೆಗಾಲ ಆರಂಭವಾಗುತ್ತಿದ್ದಂತೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಭಟ್ಟಾಜೆಯ ತಾರಬಳಿ ಸಂಪರ್ಕ ಸೇತುವೆ ಕುಸಿದ ಪರಿಣಾಮ ಹಲವು ಗ್ರಾಮಗಳ ಸಂಪರ್ಕ ಕಡಿದು, ನೂರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಿರಲೆ, ಭಟ್ಟಾಜೆ, ಸೊರ್ನಾಡು, ಎರ್ಮಲಪದವು, ಕುರಿಯಾಳ, ಬಾಳಿಕೆ, ಬಂಡಸಾಲೆ ಹಾಗೂ ಕೊಳತ್ತಮಜಲು, ಬಡಗಬೆಳ್ಳೂರು, ಪೊಳಲಿ ಭಾಗಗಳನ್ನು ಸಂಪರ್ಕಿಸುತ್ತಿದ್ದ ಈ ಸೇತುವೆಯೇ ಗ್ರಾಮಸ್ಥರ ನಿತ್ಯ ಓಡಾಟದ ಪ್ರಮುಖ ಕೊಂಡಿಯಾಗಿತ್ತು. ಕಳೆದ ಕೆಲವು ತಿಂಗಳಿನಿಂದ ಅಪಾಯಕಾರಿಯಾಗಿದ್ದ ಸೇತುವೆಯಲ್ಲಿ ಘನವಾಹನಗಳ ಸಂಚಾರವನ್ನು ನಿಷೇಧಿಸಿ, ಲಘು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಸ್ಥಳೀಯರ ಒತ್ತಾಯದ ಮೇರೆಗೆ ಇದೀಗ ಇಲಾಖೆ ಬುಲ್ಡೋಜರ್ ಮೂಲಕ ಸೇತುವೆ ತೆರವು ಕಾರ್ಯ ಆರಂಭಿಸಿದ್ದು, ಫೌಂಡೇಶನ್ ತೆರವು ಸೇರಿದಂತೆ ಸಂಪೂರ್ಣ ಕಾಮಗಾರಿಗೆ ಕೆಲವು ವಾರಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.ಸೇತುವೆ ಕುಸಿತದಿಂದ ಶಾಲಾ ಮಕ್ಕಳು ಸೇರಿದಂತೆ ಗ್ರಾಮಸ್ಥರು ತೋಡು ದಾಟಿ ಸಂಚರಿಸಬೇಕಾದ ಅಥವಾ ಹತ್ತಾರು ಕಿಲೋಮೀಟರ್ ಸುತ್ತುಬಳಸಿ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ತೋಡಿನಲ್ಲಿ ನೀರಿನ ಪ್ರಮಾಣ ಹೆಚ್ಚಾದರೆ ಸಂಚಾರ ಇನ್ನಷ್ಟು ಅಪಾಯಕಾರಿಯಾಗಲಿದೆ.…
ಹರೇಕಳ, ಜೂನ್ 16: ಹರೇಕಳ ಗ್ರಾಮದ ಗ್ರಾಮಸ್ಥರು ಹಾಗೂ ತೆರಿಗೆದಾರರ ಪರವಾಗಿ ಸುಖಾನಂದ ಶೆಟ್ಟಿ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಗೆ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಗ್ರ ಸಾರ್ವಜನಿಕ ದೂರು ಮತ್ತು ಸಾಮೂಹಿಕ ಮನವಿಯನ್ನು ಸಲ್ಲಿಸಲಾಗಿದೆ. ಮನವಿಯಲ್ಲಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ನೀರಿನ ಟ್ಯಾಂಕ್ಗಳು, ಪೈಪ್ಲೈನ್ ಕಾಮಗಾರಿಗಳು, ಭೂಸ್ವಾಧೀನ, ರಸ್ತೆ ಬದಿಯ ಸೆಟ್ಬ್ಯಾಕ್ ನಿಯಮಗಳ ಪಾಲನೆ, ಕಾನೂನುಬದ್ಧ ಅನುಮೋದನೆಗಳು ಹಾಗೂ ಸಾರ್ವಜನಿಕರ ಹಣದ ಬಳಕೆಯ ಕುರಿತು ಹಲವು ಪ್ರಶ್ನೆಗಳನ್ನು ಎತ್ತಲಾಗಿದೆ. ಗ್ರಾಮದಲ್ಲಿ ನಿರ್ಮಿಸಲಾಗಿರುವ ನೀರಿನ ಟ್ಯಾಂಕ್ಗಳ ವಿನ್ಯಾಸಿತ ಬಾಳಿಕೆ ಅವಧಿ, ರಚನಾತ್ಮಕ ಸುರಕ್ಷತೆ, ಗುಣಮಟ್ಟ ಪ್ರಮಾಣೀಕರಣ, ತೃತೀಯ ಪಕ್ಷದ ತಪಾಸಣಾ ವರದಿಗಳು ಹಾಗೂ ಸಂಬಂಧಿತ ಇಂಜಿನಿಯರ್ಗಳ ಪ್ರಮಾಣಪತ್ರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ಇದಲ್ಲದೆ, ಪೈಪ್ಲೈನ್ ಅಳವಡಿಕೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ (PWD), ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಸೇರಿದಂತೆ ಸಂಬಂಧಿತ…
ದೈಗೋಳಿ: ಕುಳೂರು ಕನ್ಯಾನದ ಸಮಾಜಸೇವಕ ಡಾ. ಸದಾಶಿವ ಶೆಟ್ಟಿಯವರ ಜನ್ಮದಿನದ ಅಂಗವಾಗಿ ಶ್ರೀ ಸಾಯಿನಿಕೇತನ ಸೇವಾಶ್ರಮದಲ್ಲಿ ವಿಶೇಷ ಅನ್ನದಾನ ಸೇವೆಯನ್ನು ಆಯೋಜಿಸಲಾಯಿತು. ಡಾ. ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ವತಿಯಿಂದ ಆಶ್ರಮದ ನಿವಾಸಿಗಳಿಗೆ ಅನ್ನದಾನ ಸೇವೆ ನೀಡಲಾಯಿತು. ಈ ಸಂದರ್ಭದಲ್ಲಿ ಆಶ್ರಮವಾಸಿಗಳು ಹಾಗೂ ಸೇವಾ ಬಳಗದ ಸದಸ್ಯರು ಡಾ. ಸದಾಶಿವ ಶೆಟ್ಟಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು. ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಡಾ. ಸದಾಶಿವ ಶೆಟ್ಟಿಯವರ ಸೇವಾ ಮನೋಭಾವ ಇನ್ನಷ್ಟು ವಿಸ್ತರಿಸಲಿ ಹಾಗೂ ಜನಸೇವೆಯಲ್ಲಿ ತೊಡಗಿರುವ ಸೇವಾ ಬಳಗದ ಎಲ್ಲಾ ಸದಸ್ಯರಿಗೆ ಭಗವಂತ ಹೆಚ್ಚಿನ ಶಕ್ತಿ ಮತ್ತು ಆಯುಷ್ಯವನ್ನು ಕರುಣಿಸಲಿ ಎಂದು ಆಶ್ರಮದ ಪರವಾಗಿ ಪ್ರಾರ್ಥಿಸಲಾಯಿತು. ಕಾರ್ಯಕ್ರಮದಲ್ಲಿ ಸೇವಾ ಬಳಗದ ಪದಾಧಿಕಾರಿಗಳು, ಸದಸ್ಯರು ಹಾಗೂ ಆಶ್ರಮದ ಸಿಬ್ಬಂದಿ ಉಪಸ್ಥಿತರಿದ್ದರು.
ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಅಭಿವೃದ್ಧಿ ರಾಜಕೀಯದ ಮೂಲಕ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಕೊಡಿಪ್ಪಾಡಿ ಗ್ರಾಮದಲ್ಲಿ ನಡೆದ ಒಂದು ಕಾರ್ಯಕ್ರಮ ರಾಜಕೀಯ ವಲಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ “ಗ್ರಾಮಕ್ಕೆ ಸಮರ್ಪಕ ಅನುದಾನ ನೀಡಿಲ್ಲ” ಎಂದು ಶಾಸಕರ ವಿರುದ್ಧ ಆರೋಪ ಮಾಡಿದ್ದ ಕೊಡಿಪ್ಪಾಡಿಯ ಒಬ್ಬ ರಿಕ್ಷಾ ಚಾಲಕರನ್ನೇ, ಗ್ರಾಮದ ಎಸ್ಟಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ನೂತನ ರಸ್ತೆಯ ಉದ್ಘಾಟನೆಗೆ ಆಹ್ವಾನಿಸಿ ರಿಬ್ಬನ್ ಕತ್ತರಿಸುವ ಅವಕಾಶ ನೀಡಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಬೆಳವಣಿಗೆ ಕಂಡುಬಂದಿತು. ಸಾಮಾನ್ಯವಾಗಿ ಟೀಕೆಗಳಿಗೆ ಪ್ರತಿಕ್ರಿಯೆಯಾಗಿ ರಾಜಕೀಯ ವಾಗ್ವಾದಗಳು ನಡೆಯುವ ಸಂದರ್ಭದಲ್ಲಿ, ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯನ್ನು ಟೀಕೆ ಮಾಡಿದ ವ್ಯಕ್ತಿಯ ಕೈಯಿಂದಲೇ ನೆರವೇರಿಸುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ವಿಭಿನ್ನ ಸಂದೇಶ ರವಾನಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, “ಕಳೆದ ಎರಡು…
ಬೆಂಗಳೂರು, ಜೂನ್ 15: ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಂ, ವಾಟ್ಸಾಪ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ, ಕಾನೂನಿನ ದುರುಪಯೋಗ ತಡೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಭಾರತದ ಸಂವಿಧಾನದ ಪರಿಚ್ಛೇದ 19(1)(a) ಪ್ರತಿಯೊಬ್ಬ ನಾಗರಿಕನಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ನೀಡಿದೆ. ಸರ್ಕಾರ, ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕ ನೀತಿಗಳ ಕುರಿತು ಟೀಕೆ ಮಾಡುವುದು, ಪ್ರಶ್ನಿಸುವುದು ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್ಗಳು ಹಲವು ತೀರ್ಪುಗಳಲ್ಲಿ ಈ ಹಕ್ಕಿನ ಮಹತ್ವವನ್ನು ಪುನರುಚ್ಚರಿಸಿವೆ. 2015ರ ಮಾರ್ಚ್ 24ರಂದು ಐತಿಹಾಸಿಕ ಶ್ರೇಯಾ ಸಿಂಘಾಲ್ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66A ಅನ್ನು ಅಸಂವಿಧಾನಿಕ…
ಉಳ್ಳಾಲ: : ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ಕುಡಿಯುವ ನೀರಿನ ಬಿಲ್ ಪಾವತಿ ಸ್ಕ್ಯಾನರ್ ವ್ಯವಸ್ಥೆಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ ಅವರು ನೀರಿನ ಬಿಲ್ಲನ್ನು ಸ್ಕ್ಯಾನ್ ಮಾಡಿ ಪಾವತಿಸುವ ಮೂಲಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಚಾಲನೆ ನೀಡಿದರು. ಈ ನೂತನ ವ್ಯವಸ್ಥೆಯ ಮೂಲಕ ನಾಗರಿಕರು ತಮ್ಮ ನೀರಿನ ಬಿಲ್ಲಿನ ಮೇಲಿರುವ ಸ್ಕ್ಯಾನರ್ ಕೋಡ್ ಅನ್ನು ಬಳಸಿಕೊಂಡು ಸುಲಭವಾಗಿ ಹಾಗೂ ತ್ವರಿತವಾಗಿ ಪಾವತಿ ಮಾಡಬಹುದಾಗಿದೆ. ಇದರಿಂದ ಬಿಲ್ ಪಾವತಿ ಪ್ರಕ್ರಿಯೆ ಮತ್ತಷ್ಟು ಸರಳ, ಪಾರದರ್ಶಕ ಹಾಗೂ ಡಿಜಿಟಲೀಕರಣಗೊಳ್ಳಲಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಧ್ಯಕ್ಷೆ ತಿಳಿಸಿದರು. ಪಟ್ಟಣ ಪಂಚಾಯತ್ ಆಡಳಿತವು ಸಾರ್ವಜನಿಕ ಸೇವೆಗಳನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಮಹತ್ವದ ಹೆಜ್ಜೆಯಾದ ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಶ್ರೀ ಪ್ರವೀಣ್ ಐ. ಬಗಂಬಿಲ, ಮುಖ್ಯಾಧಿಕಾರಿ, ಕಿರಿಯ ಅಭಿಯಂತರರು, ಮೆ. ಪ್ರಸನ್ನ ಟೆಕ್ನಾಲಜಿಯ ಅಧಿಕಾರಿಗಳು, ಪಟ್ಟಣ ಪಂಚಾಯತ್ ಸಿಬ್ಬಂದಿಗಳು…
ಸುಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ಡಿಕನ್ಸ್ ಸ್ಟ್ರಕ್ಟ್ ತನ್ನ ಬ್ರಾಂಡ್ ಪಾರ್ಟ್ನರ್ ಆಗಿ ಸುಪ್ರಸಿದ್ಧ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರನ್ನು ಘೋಷಣೆ ಮಾಡಿದೆ. ರವಿಚಂದರ್ ಅವರ instagram ರೀಲ್ ನಲ್ಲಿ ಸ್ಕಿನ್ ಕೇರ್ ಡಿಕನ್ಸ್ ಸ್ಟ್ರಕ್ಟ್ ಇತ್ತು. ಇದನ್ನು ಅಭಿಮಾನಿಗಳು ಗಮನಿಸಿದರು. ಆ ಬಳಿಕ ಇದು ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿತು. ಇಂಟರ್ನೆಟ್ ನಲ್ಲಿ ಸೆನ್ಸೇಶನ್ ಆದ ವಿಷಯ ಈಗ ಪಾರ್ಟ್ನರ್ ಶಿಪ್ ಗೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಂಸ್ಥೆಯ ಸಿಇಒ ಮಾಲಿನಿ ಅಡಪುರೆಡ್ಡಿ ಅವರು ಮಾತನಾಡಿದ್ದಾರೆ. ಜನರು ಸಹಜವಾಗಿ ಸ್ಪಂದಿಸಿ ಬ್ರಾಂಡ್ ನ್ನು ನೋಡಿದಾಗ ಅದನ್ನು ಮುಂದುವರಿಸಿಕೊಂಡು ಹೋಗುವುದು ನಮಗೆ ಸರಿ ಅನಿಸಿತು. ಅನಿರುದ್ಧ್ ಅವರು ನಮ್ಮ ಬ್ರಾಂಡಿಗೆ ಸರಿ ಹೊಂದುತ್ತಾರೆ. ಹೀಗಾಗಿ ಇಂಟರ್ನೆಟ್ ನಲ್ಲಿ ಉಂಟಾದ ವಿಡಿಯೋದ ಪ್ರಭಾವ ಸಹಯೋಗಕ್ಕೆ ಪ್ರೇರಣೆ ನೀಡಿತು ಎಂದು ಹೇಳಿದ್ದಾರೆ. ತಮ್ಮ ಹಿಟ್ ಹಾಡುಗಳು ಗಳಿಂದ ಯುವ ಜನರ ಮೇಲೆ ಅಪಾರ ಪ್ರಭಾವ ಬೀರಿರುವ ಅನಿರುದ್ಧ ರವಿಚಂದರ್ ಪ್ರೇಕ್ಷಕರಿಗೆ…
ಬೆಳ್ತಂಗಡಿ ತಾಲ್ಲೂಕಿನ ಎಕ್ಸೆಲ್ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಗಂಭೀರ ಅಕ್ರಮಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿರುವುದು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅರಮಲೆ ಬೆಟ್ಟ ಕ್ಯಾಂಪಸ್ಸಿನಲ್ಲಿ ಕಟ್ಟಡ ಪರವಾನಿಗೆ ಹಾಗೂ ಅಗತ್ಯ ಅನುಮತಿಗಳಿಲ್ಲದೆ ಶಿಕ್ಷಣ ಚಟುವಟಿಕೆ ನಡೆಸಿರುವ ಆರೋಪಗಳ ನಡುವೆ, ವೇಣೂರಿನಲ್ಲಿ ಬೋಗಸ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪದವಿ ಪೂರ್ವ ಕಾಲೇಜಿನ ಪರವಾನಿಗೆಯನ್ನೂ ರದ್ದುಪಡಿಸಿರುವುದು ಗಮನಾರ್ಹವಾಗಿದೆ. ಮಾಹಿತಿಗಳ ಪ್ರಕಾರ, ಕೆರೆಯ ಪಕ್ಕದಲ್ಲಿರುವ ವಿದ್ಯಾಸಾಗರ್ ಕ್ಯಾಂಪಸ್ಸಿನಲ್ಲಿ ಸುಮಾರು 3,000 ವಿದ್ಯಾರ್ಥಿಗಳು ಹಾಗೂ ಅರಮಲೆ ಬೆಟ್ಟ ಕ್ಯಾಂಪಸ್ಸಿನಲ್ಲಿ ಮತ್ತೊಂದು 3,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸಂಸ್ಥೆಗಳು ಎಲ್ಲಾ ಕಾನೂನುಬದ್ಧ ಅನುಮತಿಗಳು, ಸುರಕ್ಷತಾ ಮಾನದಂಡಗಳು ಹಾಗೂ ಶಿಕ್ಷಣ ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮವು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶಿಕ್ಷಣದ ಗುಣಮಟ್ಟವನ್ನು ಕಾಪಾಡುವ ಪ್ರಯತ್ನವಾಗಿದೆ. ಕುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರವಾನಿಗೆ ಪಡೆದಿರುವ ಆರೋಪದ…

