ಉಳ್ಳಾಲ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಕೌಶಲ್ಯ ತರಭೇತಿ ಕೇಂದ್ರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ಶುಕ್ರವಾರ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ವೈದ್ಯಕೀಯ ಸಂಸ್ಥೆಗಳು ಬೆಳೆದುನಿಂತಿದ್ದು, ಶೈಕ್ಷಣಿಕ ಹಬ್ ಆಗಿ ಪರಿವರ್ತನೆಗೊಂಡಿರುವ ಅವಳಿ ಜಿಲ್ಲೆಗಳಲ್ಲಿ ಆರೋಗ್ಯದ ಕುರಿತು ಜಾಗೃತಿಯ ಮಟ್ಟ ಹೆಚ್ಚಿದೆ ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಉದ್ದೇಶ ರಾಜ್ಯ ಸರಕಾರಕ್ಕಿದೆ. ಈಗಾಗಲೇ 6 ಸರಕಾರಿ ವೈದ್ಯಕೀಯ ಕಾಲೇಜುಗಳು ರಾಜ್ಯದಲ್ಲಿ ಕಾರ್ಯಚರಿಸುತ್ತಿದ್ದು, ಇನ್ನು 6 ಕಾಲೇಜು ಸ್ಥಾಪನೆಗೆ ಸರಕಾರ ಚಿಂತನೆ ನಡೆಸಿದೆ. ಸೂಕ್ತ ವ್ಯವಸ್ಥೆಗಳಿಲ್ಲದ ಸ್ಥಳಗಳಲ್ಲೇ ಸ್ಥಾಪಿಸಲಾಗುವುದು ಎಂದ ಅವರು ಸಿಇಟಿ ಮತ್ತು ನೀಟ್ ಆಧಾರದಲ್ಲಿ ಪ್ರಥಮ 100 ಸೀಟುಗಳನ್ನು ಸರಕಾರಕ್ಕೆ ಮೀಸಲಿರಿಸಲಾಗಿದೆ . ಕಡಿಮೆ ವೆಚ್ಛದಲ್ಲಿ ಹಾಗೂ ಗುಣಮಟ್ಟದ ಚಿಕಿತ್ಸೆ ಮಂಗಳೂರು ಮತ್ತು ಬೆಂಗಳೂರಿನಲ್ಲಿ ದೊರೆಯುವುದರಿಂದ ಹೆಲ್ತ್ ಟೂರಿಸಂಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.…
Author: UllalaVani
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಉಳ್ಳಾಲ ಮೊಗವೀರಪಟ್ಣ ಶ್ರೀ ವಿಠೋಭ ರುಕ್ಮಯಿ ಭಜನಾ ಮಂದಿರದ 47ನೇ ವರ್ಷದ ಏಕಾಹ ಭಜನೋತ್ಸವಕ್ಕೆ ಯುವ ಉದ್ಯಮಿ ಸಂದೀಪ್ ಪುತ್ರನ್ ಉಳ್ಳಾಲ ಮತ್ತು ಅಕ್ಷತಾ ಸಂದೀಪ್ ಪುತ್ರನ್ ಚಾಲನೆ ನೀಡಿದರು. ಈ ಸಂದರ್ಭ ಮಂಡಳಿಯ ಅಧ್ಯಕ್ಷ ಗೋವರ್ಧನ ಸಾಲ್ಯಾನ್, ಗೌರವಾಧ್ಯಕ್ಷ ಸುಂದರ ಗುರಿಕಾರ, ಉಪಾಧ್ಯಕ್ಷ ಶಾಂತರಾಮ್ ಚಂದನ್, ಕಾರ್ಯದರ್ಶಿ ವಿನೋದ್ ಬಂಗೇರ, ಜೊತೆ ಕಾರ್ಯದರ್ಶಿ ರಘುವೀರ್ ಸಾಲ್ಯಾನ್, ಕೋಶಾಧಿಕಾರಿ ಲೋಕನಾಥ ಪುತ್ರನ್, ಪ್ರಧಾನ ಅರ್ಚಕ ಯಾದವ ಬಂಗೇರ, ತಾರಾನಾಥ ಸುವರ್ಣ ಹಾಗೂ ಮಂದಿರದ ಸದಸ್ಯರು ಉಪಸ್ಥಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಇತ್ತೀಚೆಗೆ ಪಿಲಿಕುಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾದ ವಸ್ತು ಪ್ರದರ್ಶನದಲ್ಲಿ ಕೆ.ಎಸ್. ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯದ ಮಳಿಗೆ ವಿಜ್ಞಾನಾಸಕ್ತರ ಹಾಗೂ ಶಾಲಾ ಮಕ್ಕಳ ಗಮನ ಸೆಳೆಯಿತು. ಈ ಮಳಿಗೆಯಲ್ಲಿ ಅರಿವಳಿಕೆ ಶಾಸ್ತ್ರ ವಿಭಾಗದ ವತಿಯಿಂದ ಅಣಕು ಶಸ್ತ್ರಚಿಕಿತ್ಸಾ ಕೊಠಡಿ ವಿದ್ಯಾರ್ಥಿಗಳ ಕುತೂಹಲ ಕೆರಳಿಸಿ ದೊಡ್ಡ ಸಂಖ್ಯೆಯಲ್ಲಿ ಸೇರಿಕೊಳ್ಳುವಂತೆ ಮಾಡಿತು. ಪ್ರೇಕ್ಷಕರು ಪ್ರಥಮ ಚಿಕಿತ್ಸೆಯ ಪ್ರಾತ್ಯಕ್ಷಿತೆ ಹಾಗೂ ತರಬೇತಿಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದರು. ಶರೀರಶಾಸ್ತ್ರ ವಿಭಾಗದಿಂದ ಪ್ರದರ್ಶಿತವಾದ ಮಾನವನ ಬೇರೆ ಬೇರೆ ಅಂಗಾಂಗಗಳು, ಸಮುದಾಯ ವೈದ್ಯಕೀಯ ಶಾಸ್ತ್ರದ ಪ್ರಾತ್ಯಕ್ಷಿತೆಗಳು ಗಮನ ಸೆಳೆದವು. ಅಭಯಚಂದ್ರ ಜೈನ್, ಮಾಜಿ ಮೀನುಗಾರಿಕಾ ಹಾಗೂ ಯುವಜನ ಕ್ರೀಡಾಸಚಿವರು, ಎಂ.ಎಲ್.ಎ., ಈ ಮಳಿಗೆಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದು, ಮೆಚ್ಚುಗೆ ವ್ಯಕ್ತಪಡಿಸಿದರು.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಇದರ ಮಂಜೇಶ್ವರ-ಉಪ್ಪಳದ ರೀಜನಲ್ ಸಂಗಮಂ -2016- 17 ಕಾರ್ಯಕ್ರಮ ಮಾ.5ರಂದು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಆಶ್ರಮ ವಾಸಿ 10 ಮಂದಿಗೆ ಗಾಲಿ ಕುರ್ಚಿ , ಸ್ಟ್ರೆಚರ್ ವಿತರಣೆ ಜತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನ ನಡೆಯಲಿದೆ ಎಂದು ಮಂಜೇಶ್ವರ- ಉಪ್ಪಳದ ಲಯನ್ಸ್ ಕ್ಲಬ್ನ ಅಧ್ಯಕ್ಷ ಲಕ್ಷ್ಣಣ್ ಕುಂಬ್ಲೆ ತಿಳಿಸಿದ್ದಾರೆ. ತೊಕ್ಕೊಟ್ಟು ಖಾಸಗಿ ಹೊಟೇಲಿನಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಂಜೇಶ್ವ-ಉಪ್ಪಳ ಭಾಗದ ಲಯನ್ಸ್ ಕ್ಲಬ್ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ.ಲಯನ್ಸ್ ಕ್ಲಬ್ಗೆ ಶತಮಾನದ ಅಂಗವಾಗಿ ವಿವಿದೆಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾ.5 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೊ. ಡಾ.ಅಮೃತ ಸೋಮೇಶ್ವರ, ಸಮಾಜ ಸೇವಕ ಗೋಪಾಲಕೃಷ್ಣ ( ಸಾಯಿರಾಂ ) ಭಟ್, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲೆ ಕವಿತಾ ಶಾಸ್ತ್ರಿ ಹಾಗೂ ಲಯನ್ಸ್ ಜಿಲ್ಲಾ ಗವರ್ನರ್ ಸಿ.ಎ.ಶಿವಪ್ರಸಾದ್ಕೆ ಇವರಿಗೆ ಸನ್ಮಾನ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕರ್ಣಾಟಕ ಬ್ಯಾಂಕ್ ನ ತೊಕ್ಕೊಟ್ಟು ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ತಡರಾತ್ರಿ ವೇಳೆ ನಡೆದಿದ್ದು, ಘಟನೆಯಲ್ಲಿ ಹಲವು ದಾಖಲೆಗಳು ಸುಟ್ಟುಹೋಗಿವೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಕರ್ಣಾಟಕ ಬ್ಯಾಂಕಿನಲ್ಲಿ ನಿನ್ನೆ ತಡರಾತ್ರಿ 10.00 ಗಂಟೆ ಸುಮಾರಿಗೆ ಹೊಗೆ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮತ್ತು ಅಗ್ನಿ ಶಾಮಕ ಸಿಬ್ಬಂದಿಗೆ ದೂರು ನೀಡಿದ್ದಾರೆ. ಅಷ್ಟರಲ್ಲಿ ಬೆಂಕಿ ಕಿಟಕಿಯಿಂದ ಹೊರ ವ್ಯಾಪಿಸಿದ್ದು, ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಲು ಯತ್ನಿಸಿದರು. ಆದರೆ ಬೆಂಕಿಯ ಕೆನ್ನಾಲೆ ಬ್ಯಾಂಕಿನ ಒಳಗಡೆಯೇ ದಟ್ಟವಾಗಿ ವ್ಯಾಪಿಸಿತ್ತು. ಈ ವೇಳೆ ದಾಖಲೆಗಳು, ಪೀಠೋಪಕರಣಗಳು ಬೆಂಕಿಗೆ ಆಹುತಿಯಾಯಿತು. ಕಿಟಕಿ ಮೂಲಕ ಕಿಚ್ಚು: ಬ್ಯಾಂಕಿನ ಹಿಂಬದಿಯ ಕಿಟಕಿ ಮೂಲಕ ಬೆಂಕಿ ಹಾಕಿರುವ ಸಾಧ್ಯತೆಗಳಿದ್ದು, ಅದರಂತೆ ಪೊಲೀಸರು ಕಿಟಕಿ ಸಮೀಪ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಭಾನುವಾರ ತಡರಾತ್ರಿ ಇಲ್ಲೇ ಸಮೀಪ ದಾರಿಬದಿಯಲ್ಲಿರುವ ಮೂರು ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಫೆ.24ರಂದು ಕರ್ಣಾಟಕ ಬ್ಯಾಂಕಿನಿಂದ ಕೆಲ ಮೀ. ಅಂತರದಲ್ಲಿರುವ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಉಳ್ಳಾಲ ನಗರಸಭೆ 2017-18ನೇ ಸಾಲಿನಲ್ಲಿ ಒಟ್ಟು 29 .25 ಕೋಟಿ ರೂ.ಗಳ ಆದಾಯವನ್ನು ನೀರಿಕ್ಷಿಸಿದ್ದು 29.11ಕೋಟಿ ಖರ್ಚು ಅಂದಾಜಿಸಿದ್ದು 14. 70 ಲಕ್ಷ ಮಿಗತೆ ಬಜೆಟನ್ನು ಮಂಗಳವಾರ ಪ್ರಕಟಿಸಿದೆ. ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್ ಕುಂಇಮೋನು ಅಧ್ಯಕ್ಷತೆಯಲ್ಲಿ ನಡೆದ ಬಜೆಟ್ ಸಭೆ ಮತ್ತು ಸಾಮನ್ಯ ಸಭೆಯಲ್ಲಿ ಉಳ್ಳಾಲ ನಗರ ಸಭಾ ಮುಖ್ಯಾಧಿಕಾರಿ ವಾಣಿ ಆಳ್ವ ಬಜೆಟನ್ನು ಪ್ರಕಟಿಸಿದರು. ನಗರ ಸಭಾ ಉಪಾಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಉಪಸ್ಥಿತರಿದ್ದರು. 2017-2018ನೇ ಸಾಲಿನಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆಯಿಂದ 1.88 ಕೋಟಿ, ನೀರಿನ ಶುಲ್ಕದಿಂದ ರೂ. 35 ಲಕ್ಷ, ನಲ್ಲಿ ಜೋಡಣೆಯಿಂದ 5.00ಲಕ್ಷ, ಮಳಿಗೆಗಳ ಬಾಡಿಗೆಯಿಂದ ರೂ. 29.00ಲಕ್ಷ, ಕಟ್ಟಡ ಪರವಾನಿಗೆ ಮತ್ತು ಅಭಿವೃದ್ದಿ ಶುಲ್ಕಗಳಿಂದ ರೂ. 60.00ಲಕ್ಷ , ಉದ್ದಿಮೆ ಪರವಾನಿಗೆಯಿಂದ ರೂ. 20.40ಲಕ್ಷ , ಜಾಹೀರಾತು ತೆರಿಗೆಯಿಂದ 2.00ಲಕ್ಷ, ಘನತ್ಯಾಜ್ಯ ವಸ್ತು ವಿಲೇವಾರಿ ಶುಲ್ಕದಿಂದ ರೂ. 35.00ಲಕ್ಷ, ಉಪಕರಣಗಳ ಸಂಗ್ರಹಣೆ ಮತ್ತು ದಂಡ ವಸೂಲಾತಿಯಿಂದ ರೂ.…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕ್ರೀಡಾ ಕ್ಷೇತ್ರಕ್ಕೆ ನಿಟ್ಟೆ ವಿಶ್ವವಿದ್ಯಾನಿಲಯ ಬಹಳ ಕೊಡುಗೆಗಳನ್ನು ನೀಡಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಎಂ.ಎಸ್ ಮೂಡಿತ್ತಾಯ ಹೇಳಿದ್ದಾರೆ. ಅವರು ದೇರಳಕಟ್ಟೆ ಕ್ಷೇಮ ಕ್ಯಾಂಪಸ್ಸಿನ ಕ್ರೀಡಾಂಗಣದಲ್ಲಿ ಮಂಗಳವಾರ ಜರಗಿದ 4ನೇ ನಿಟ್ಟೆ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಅಥ್ಲೆಟಿಕ್ ಮೀಟ್ -2017 ಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ಷೇಮ ಡೀನ್ ಡಾ. ಸತೀಶ್ ಕುಮಾರ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇಮ ಕುಲಸಚಿವ ಡಾ.ಜಯಪ್ರಕಾಶ್ ಶೆಟ್ಟಿ , ಫಾಮ9ಸಿ ಕಾಲೇಜು ಪ್ರಾಂಶುಪಾಲ ಡಾ. ಸಿ.ಯಸ್ ಶಾಸ್ತ್ರಿ, ಫಿಸಿಯೋಥೆರಪಿ ಕಾಲೇಜು ಪ್ರಾಂಶುಪಾಲ ಡಾ. ದನೇಶ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಫಾತಿಮಾ ಉಪಸ್ಥಿತರಿದ್ದರು. ಆಕ್ಷಿ ಶರ್ಮ ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾ ವಿಭಾಗದ ಸಲಹೆಗಾರ ಡಾ.ಮುರಳಿಕೃಷ್ಣನ್ ಸ್ವಾಗತಿಸಿದರು. ದೈಹಿಕ ವಿಭಾಗದ ಮುಖ್ಯಸ್ಥ ಕರುಣಾಕರ ಶೆಟ್ಟಿ ವಂದಿಸಿದರು.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಬೆಳ್ಮ: ಬೆಳ್ಮ ಗ್ರಾಮ ಪಂಚಾಯತಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸಿಕೊಡುವಂತೆ ಹೋರಾಟ ನಡೆಸಿದ್ದರೂ ಪ್ರಯೋಜನವಿಲ್ಲ. ಹಕ್ಕುಪತ್ರಕ್ಕಾಗಿ 400ಕ್ಕೂ ಹೆಚ್ಚು ಅರ್ಜಿ ನೀಡಿದ್ದರೂ ಸ್ಪಂಧನೆ ದೊರೆಯದಿರುವುದನ್ನು ಖಂಡಿಸಿ ನಿವೇಶನರಹಿತರು ಸೋಮವಾರ ಬೆಳ್ಮ ಗ್ರಾಮ ಪಂಚಾಯಿತಿ ಎದುರು ಅನಿರ್ಧಿಷ್ಟಾವಧಿ ಧರಣಿಯನ್ನು ಆರಂಭಿಸಿದ್ದಾರೆ. ದಲಿತ ಹಕ್ಕುಗಳ ಹೋರಾಟ ಸಮಿತಿ, ಕೋಟೆಕಾರ್ ಸರ್ಕಲ್ ಕರ್ನಾಟಕ ಪ್ರಾಂತ್ಯ, ಸಂಚಾಲನ ಸಮಿತಿ ಬೆಳ್ಮ ಗ್ರಾಮ ಇದರ ನೇತೃತ್ವದಲ್ಲಿ ನಿವೇಶನ ರಹಿತರು ಅನಿರ್ಧಿಷ್ಟಾವಧಿ ಧರಣಿಯನ್ನು ನಡೆಸುತ್ತಿದ್ದಾರೆ. ಮಂಗಳೂರು ತಾಲೂಕಿನ ಬೆಳ್ಮ ಗ್ರಾಮದಲ್ಲಿ ಸರ್ವೆ ನಂಬರ್ 93, 51, 45, 48 ಮತ್ತು ಸರಕಾರಿ ಖಾಲಿ ಸ್ಥಳ 54 ವಿಸ್ತೀರ್ಣ 12 ಎಕ್ರೆ 35 ಸೆಂಟ್ಸ್ , ಸ.ನಂಬರ್ 33ರಲ್ಲಿ 7 ಎಕ್ರೆ 13ಸೆಂಟ್ಸ್ ಖಾಲಿ ಸ್ಥಳವಿದ್ದು, ಸರ್ವೆ ನಂಬರ್ 54ರಲ್ಲಿ 3 ಎಕ್ರೆ ಸ್ಥಳವನ್ನು ನಿವೇಶನಕ್ಕೆ ಹಸ್ತಾಂತರಿಸಲಾಗಿದ್ದರೂ ಸುಮಾರು 400ಕ್ಕೂ ಮಿಕ್ಕಿ ನಿವೇಶನ ಅರ್ಜಿಗಳು ಬಾಕಿ ಉಳಿದಿವೆ. ನಿವೇಶನ ರಹಿತರಿಗೆ ನಿವೇಶನ ಒದಗಿಸಿಕೊಡುವಂತೆ ಹೋರಾಟ ಮಾಡಿಕೊಂಡು…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ರಿಕ್ಷಾ ಬ್ರೇಕ್ ವೈಫಲ್ಯಕ್ಕೀಡಾಗಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಚಾಲಕ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೆಳಗೆಡೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ರಿಕ್ಷಾ ಚಾಲಕ ಅಬ್ದುಲ್ ಖಾದರ್ (42) ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಾದ ಆರೀಫ್ (16) ಮತ್ತು ಸುಹೈಲ್ (17) ಗಾಯಗೊಂಡವರು. ಉಳ್ಳಾಲದಿಂದ ತೊಕ್ಕೊಟ್ಟು ಒಳಪೇಟೆಗೆ ಪಾರ್ಕಿಗೆ ಬರುವ ಸಂದರ್ಭ ಓವರ್ ಬ್ರಿಡ್ಜ್ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಬ್ರೇಕ್ ವೈಫಲ್ಯಕ್ಕೀಡಾಗಿತ್ತು. ಪರಿಣಾಮ ಕೆಳಗಿದ್ದ ರಾಘವ.ಯಸ್.ಉಚ್ಚಿಲ್ ಎಂಬವರ ವಾಚ್ ರಿಪೇರಿ ಅಂಗಡಿಯೊಳಗೆ ನುಗ್ಗಿದ ರಿಕ್ಷಾ , ಅಂಗಡಿ ಷೋಕೇಸಿಗೆ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಶಾಲೆಗೆ ಬರುವವರಿದ್ದ ವಿದ್ಯಾರ್ಥಿಗಳನ್ನು ರಿಕ್ಷಾ ಚಾಲಕ ಕರೆತಂದಿದ್ದರು.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ದಾರಿಬದಿಯಲ್ಲಿದ್ದ ಒಣ ಮೀನು ಮಾರಾಟ ಮತ್ತು ಹೂವಿನ ಮಾರಾಟದ ಮೂರು ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ತೊಕ್ಕೊಟ್ಟು ಸಮೀಪ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಮಹಮ್ಮದ್ ಹನೀಫ್ , ಹೆಚ್.ಮನ್ಸೂರ್, ಅಬೂಬಕರ್ ಎಂಬವರ ಸೇರಿದ ಅಂಗಡಿಗಳಿಗೆ ಹಾನಿಗೀಡಾಗಿದೆ. ಭಾನುವಾರ ಸಂಜೆಯೂ ನಡೆದ ಘಟನೆಯಲ್ಲಿ ರೆಡು ಅಂಗಡಿಗಳಿಗೆ ಬೆಂಕಿ ತಗಲಿರುವುದನ್ನು ಕಂಡು ಸ್ಥಳೀಯರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು. ಆದರೂ ಅಂಗಡಿಯೊಳಗಿದ್ದ ಒಣಮೀನು ಮತ್ತು ಹೂವು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಸಾವಿರಾರು ರೂ ನಷ್ಟ ಸಂಭವಿಸಿದೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಇಲ್ಲಿನ ಗೂಡಂಗಡಿಗಳು ಬೆಂಕಿ ಅನಾಹುತಕ್ಕೆ ಒಳಗಾಗುತ್ತಿದೆ. ಕಳೆದ ವರ್ಷ ರಸ್ತೆಬದಿಯಲ್ಲಿದ್ದ ಎಂಟು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಘಟನೆಯಲ್ಲಿ ಅಂಗಡಿಯಲ್ಲಿದ್ದ ಸಾಮಗ್ರಿಗಳೆಲ್ಲವೂ ಸುಟ್ಟು ಲಕ್ಷಾಂತರ ನಷ್ಟ ಉಂಟಾಗಿತ್ತು. ಸಂಶಯಾಸ್ಪದವಾಗಿ ಸ್ಥಳದಲ್ಲಿ ತಿರುಗಾಡುತ್ತಿದ್ದ ಬೇರೆ ರಾಜ್ಯದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಮಲಗಿದ್ದ ಭಿಕ್ಷುಕರು ನೀಡಿದ ಮಾಹಿತಿಯಂತೆ ಆತನನ್ನು ವಶಕ್ಕೆ…

