Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಕ್ಕಳಲ್ಲಿರುವ ಕಲೆಯನ್ನು ಹೊರಹೊಮ್ಮಲು ಸರಕಾರದ ಉತ್ತಮ ಕಾರ್ಯಕ್ರಮ ಪ್ರತಿಭಾ ಕಾರಂಜಿಯಾಗಿದ್ದು, ಸ್ಪರ್ಧೆಗಳಲ್ಲಿ ಪ್ರಶಸ್ತಿಗಿಂತ ಭಾಗವಹಿಸುವಿಕೆ ಅತಿ ಮುಖ್ಯ ಎಂದು ನಿವೃತ್ತ ಶಿಕ್ಷಕ, ನಾಟ್ಯಗುರು ಶಾಂತಲಾ ಪ್ರಶಸ್ತಿ ವಿಜೇತ ಮೋಹನ್ ಕುಮಾರ್ ಉಳ್ಳಾಲ ಅಭಿಪ್ರಾಯಪಟ್ಟರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸರ್ವ ಶಿಕ್ಷಣ ಅಭಿಯಾನ ಜಂಟಿ ಆಶ್ರಯದಲ್ಲಿ ಉಳ್ಳಾಲ ಅನುದಾನಿತ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಳ್ಳಾಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉತ್ಸವ-2015-16 ನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಗವೀರ ಸಂಘದ ಅಧ್ಯಕ್ಷ ಸದಾನಂದ ಬಂಗೇರ ವಹಿಸಿದ್ದರು. ಉಳ್ಳಾಲ ನಗರಸಭೆ ಅಧ್ಯಕ್ಷೆ ಗಿರಿಜಾ ಬೈ ಉದ್ಘಾಟಿಸಿದರು. ಶಾಲಾ ಸಂಚಾಲಕ ಬಾಬು ಬಂಗೇರ, ನಗರಸಭೆ ಸದಸ್ಯೆ ಮೀನಾಕ್ಷಿ ಬಂಗೇರ, ಮಾರುತಿ ಯುವಕ ಮಂಡಲದ ಅಧ್ಯಕ್ಷ ಕಿರಣ್ ಕುಮಾರ್, ದಾಮೋದರ ಉಳ್ಳಾಲ್, ಬಾಬು ಸಾಲ್ಯಾನ್, ಹಳೇಕೋಟೆ ಶಾಲಾ ಮುಖ್ಯಶಿಕ್ಷಕ ಕೆ.ಎಂ.ಕೆ ಮಂಜನಾಡಿ, ಟಿಪ್ಪು ಸುಲ್ತಾನ್ ಶಾಲಾ ಮುಖ್ಯಶಿಕ್ಷಕ ಎಂ.ಹೆಚ್ ಮಲಾರ್,…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಕೇಂದ್ರ ಮತ್ತು ರಾಜ್ಯದಲ್ಲಿ ಎರಡು ಪಕ್ಷಗಳ ಆಡಳಿತ ನಡೆದು ಕೈಗಾರಿಕೋದ್ಯಮಿಗಳ ಬೆಳವಣಿಗೆಗಳಾಗುತ್ತಿದೆಯೇ ಹೊರತು, ತೊಕ್ಕೊಟ್ಟು ಜಂಕ್ಷನ್ನಿನ ಅವ್ಯವಸ್ಥೆಯನ್ನು ಕೇಳುವವರಿಲ್ಲದಂತಾಗಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಹೇಳಿದ್ದಾರೆ. ಅವರು ತೊಕ್ಕೊಟ್ಟು ಮತ್ತು ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿನ ಅವ್ಯವಸ್ಥೆ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸಿಪಿಐಎಂ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ  ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಚೀನಾ ದೇಶವನ್ನು ಹಿಂದಿಕ್ಕುವ ಭರದಲ್ಲಿ ದೇಶದ ಅಭಿವೃದ್ಧಿ ಕುಂಠಿತ ಆಗುತ್ತಿದೆ. ಬಂಡವಾಳಶಾಹಿಗಳಿಗೆ ಬೇಕಾದ ಎಲ್ಲಾ ಪೂರಕ ವ್ಯವಸ್ಥೆಯನ್ನು ಮೋದಿ ಸರಕಾರ ಮಾಡುತ್ತಲೇ ಬಂದಿದೆ. ಬಡಜನರ ಅಭಿವೃದ್ಧಿಯ ಹೆಸರಿನಲ್ಲಿ ಮತ ಪಡೆದುಕೊಂಡು ಬಿಜೆಪಿಗೆ ಪೂರಕವಾಗಿ ಸಂಘಪರಿವಾರದ ಎಲ್ಲಾ ವಿಭಾಗಗಳನ್ನು ಕೇಂದ್ರ ಸರಕಾರ ಕ್ರೂಢೀಕರಣ ನಡೆಸುವಲ್ಲಿ ಬ್ಯುಸಿಯಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಪ್ರಚಾರ ಮಾತ್ರ ನಡೆಯುತ್ತಿದೆ. ಉಳ್ಳಾಲ ನಗರಸಭೆಯ ತೊಕ್ಕೊಟ್ಟು ಪ್ರದೇಶದಲ್ಲಿ ಅಭಿವೃದ್ಧಿ ಕುಂಠಿತವಾಗಿ ಸಾರ್ವಜನಿಕರು ತೊಂದರೆಗೀಡಾದರೂ ಅದನ್ನು ಸರಿಪಡಿಸುವ ವ್ಯವಸ್ಥೆ ಚುನಾಯಿತ ಪ್ರತಿನಿಧಿಗಳಿಂದ ಆಗದೇ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಕಣ್ಣಿನಲ್ಲಿ ಪೊರೆ ದೀರ್ಘಾವಧಿಯಲ್ಲಿ ಬಾಧಿಸುವಂತಹದ್ದು, ಆರಂಭಿಕ ಹಂತದಲ್ಲಿ ಚಿಕಿತ್ಸೆ ನೀಡಿದಾಗ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದಿಲ್ಲ. ಈ ಬಗೆಗಿನ ಅರವು ಸಾರ್ವಜನಿಕರಲ್ಲಿ ಮೂಡಿಸಬೇಕಿದೆ ಎಂದು ಕೆಎಂಸಿ ಮತ್ತು ನಿಟ್ಟೆ ವಿಶ್ವವಿದ್ಯಾನಿಲಯದ ಕಣ್ಣು ವಿಭಾಗದ ಮುಖ್ಯಸ್ಥ ಡಾ.ಸಿ.ಆರ್. ಕಾಮತ್ ಹೇಳಿದರು. ಅವರು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇದರ ವತಿಯಿಂದ ಕಣಚೂರು ಕ್ಯಾಂಪಸ್ಸಿನಲ್ಲಿ ಬುಧವಾರ ನಡೆದ ಕಣ್ಣಿನ ಉಚಿತ ತಪಾಸಣೆ ಹಾಗೂ ಕಣ್ಣಿನಪೊರೆ ಶಸ್ತ್ರಚಿಕಿತ್ಸೆ ಕುರಿತ ಜಾಗೃತಿ ಮಾಸವನ್ನು ಉದ್ಘಾಟಿಸಿದರು. ರೈತರಲ್ಲಿ ಹೆಚ್ಚಾಗಿ ಕಣ್ಣಿನಲ್ಲಿ ಪೊರೆ ಕಾಣಿಸುವ ಪ್ರಕರಣಗಳು ಜಾಸ್ತಿ. ಆದರೆ ಆರಂಭದಲ್ಲಿ ದೋಷ ಕಂಡರೂ ಚಿಕಿತ್ಸೆಗೆ ಬಾರದೇ ಕೊನೆಯ ಹಂತದಲ್ಲಿ ಬಂದು ವೈದ್ಯರು ಸೂಚಿಸುವ ಶಸ್ತ್ರಚಿಕಿತ್ಸೆಯನ್ನು ಧಿಕ್ಕರಿಸುತ್ತಾರೆ. ಇದರಿಂದ ಅಂಧತ್ವಕ್ಕೆ ಜಾರುವ ಸಾಧ್ಯತೆಗಳೇ ಹೆಚ್ಚು. ಶಸ್ತ್ರಚಿಕಿತ್ಸೆಯ ಬದಲು ಪ್ರಾಥಮಿಕವಾಗಿ ಔಷಧಿ ನೀಡಿದಲ್ಲಿ ಸಂಪೂರ್ಣ ನಿವಾರಣೆ ಸಾಧ್ಯ ಹಾಗೂ ಶಸ್ತ್ರಚಿಕಿತ್ಸೆಯನ್ನು ನಡೆಸುವ ಸಂದರ್ಭವೂ ಸೃಷ್ಟಿಯಾಗುವುದಿಲ್ಲ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ…

Read More

ಉಳ್ಳಾಲ್ ನ್ಯೂಸ್  ನೆಟ್ ವರ್ಕ್ ಕಿನ್ಯಾ: ಬಸ್ಸೊಂದು ಕಮರಿಗೆ ಉರುಳಿ ಮನೆಯೊಂದರ ಕಂಪೌಂಡಿಗೆ ಡಿಕ್ಕಿ ಹೊಡೆದಿರುವ ಘಟನೆ ಕಿನ್ಯಾ ಸಮೀಪದ ಸಂಕೇಶ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರಿನಿಂದ ಕಿನ್ಯಾ ಕಡೆಗೆ ತೆರಳುತ್ತಿದ್ದ ಸಾತ್ಕೋ ಟ್ರಾವೆಲ್ಸ್ ಬಸ್ಸಿನ ಸ್ಟೇರಿಂಗ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 6 ಜನ ಪ್ರಯಾಣಿಕರಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಪರಿಸರ ಆರೋಗ್ಯ ಪೂರ್ಣವಾಗಬೇಕಾದರೆ ಗಿಡಮರಗಳು ಅತ್ಯಗತ್ಯ. ಗಿಡಮರಳಗಳನ್ನು ಬೆಳೆಸಿ ಪೋಷಿಸುವುದು ಎಲ್ಲರ ಆದ್ಯ ಕರ್ತವ್ಯ ಎಂದು ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಟ್ರಸ್ಟಿನ ಇಕೋ ಕ್ಲಬ್ ವತಿಯಿಂದ ಶಾಲಾ ವಠಾರದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭ ಸಂಸ್ಥೆಯ ಕಾರ್ಯದರ್ಶಿ ಸೌಮ್ಯಾ.ಆರ್.ಶೆಟ್ಟಿ, ಮುಖ್ಯೋಪಾಧ್ಯಾಯಿನಿ ನಯೀಂ ಹಮೀದ್, ಶಿಕ್ಷಕರಾದ ನವೀನ್, ವೀಣಾ, ಪ್ರಜ್ಞಾ, ಶರಣ್ಯಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಮಗುವಿನ ಸಮೃದ್ಧ ಬೆಳವಣಿಗೆಯಲ್ಲಿ ತಾಯಿಯ ಎದೆ ಹಾಲಿನ ಪಾತ್ರ ಪ್ರಾಮುಖ್ಯತೆ ಪಡೆದಿದ್ದು ಸ್ತನ್ಯಪಾನದ ಮಹತ್ವ ಜನಸಾಮಾನ್ಯರಿಗೆ ತಿಳಿಸುವಲ್ಲಿ ಆಸ್ಪತ್ರೆ ಮತ್ತು ಎನ್‍ಜಿಓಗಳು ಅವಿರತವಾಗಿ ಶ್ರಮಿಸುತ್ತಿದೆ ಎಂದು ಮಕ್ಕಳ ತಜ್ಞ ಡಾ.ಬಿ.ಸುಮಂತ್ ಶೆಟ್ಟಿ ಹೇಳಿದರು. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಕೆ.ಎಸ್.ಹೆಗ್ಡೆ ಆಸ್ಪತ್ರೆ ವತಿಯಿಂದ ಆಗಸ್ಟ್ 1ರಿಂದ 7ರತನಕ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡು ಮಹಿಳೆಯರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ತಮಿಳ್ನಾಡಿನಲ್ಲಿ 352 ಬಸ್ ತಂಗುದಾಣದಲ್ಲಿ ಹಾಲುಣಿಸುವ ತಾಯಂದಿರಿಗಾಗಿಯೇ ಖಾಸಗಿ ಕೋಣೆಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ 7 ಕಡೆ ಹಾಲು ಶೀತಲೀಕರಣ ಘಟಕ ಆರಂಭಿಸಿರುವ ಅಲ್ಲಿನ ಮುಖ್ಯಮಂತ್ರಿ ಜಯಲಲಿತಾ ಅವರ ಯೋಜನೆ ಶ್ಲಾಘನೀಯ ಎಂದರು. ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಹರೀಶ್ ಶೆಟ್ಟಿ ಸ್ತನ್ಯಪಾನ ಸಪ್ತಾಹ ಆಚರಣೆ ಮಹತ್ವದ ಬಗ್ಗೆ ಮಾತನಾಡಿದರು. ಡಾ.ಸ್ವಾತಿ `ಸ್ತನ್ಯಪಾನ ಕೆಲಸಕ್ಕೆ ಹೋಗುವ ಹೆಂಗಸರು’ ಎಂಬ ವಿಚಾರದಲ್ಲಿ ಮಾತನಾಡಿದರು. ಕೆ.ಎಸ್.ಹೆಗ್ಡೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸೈಯ್ಯದ್ ಮದನಿ ಶಾಲಾ ಕಾರ್ಯಾಚರಿಸುತ್ತಿರುವುದು ಶ್ಲಾಘನೀಯ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ. ಅವರು ಉಳ್ಳಾಲ ಹಳೇಕೋಟೆಯ ಅನುದಾನಿತ ಸಯ್ಯಿದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಅನುದಾನ ರಹಿತ ಸಯ್ಯಿದ್ ಮದನಿ ಪ್ರೌಢಶಾಲೆ ಇದರ ವತಿಯಿಂದ ಮಂಗಳವಾರ ನಡೆದ ಉಚಿತ ಸಮವಸ್ತ್ರ ವಿತರಣೆ, ಸನ್ಮಾನ ಹಾಗೂ ಕಂಪ್ಯೂಟರ್ ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರಕಾರದಿಂದ ಗುಣಮಟ್ಟದ ಶಿಕ್ಷಣ ನೀಡಲು ಅಸಾಧ್ಯ. ಖಾಸಗಿ ಶಾಲೆಗಳು ಗುಣಮಟ್ಟ ಕಾಪಾಡುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಮನೋಧೈರ್ಯವನ್ನು ತುಂಬಿಸುವ ಪ್ರಯತ್ನ ಮಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಪಡೆಯಲು ಸಾಧ್ಯ. ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಸರಕಾರವೇ ಪಾವತಿಸುತ್ತಿದೆ. ಕೋಮುಸಂಘರ್ಷಗಳು ಕಡಿಮೆಯಾಗಬೇಕಾದರೆ ಮಕ್ಕಳು ವಿದ್ಯಾವಂತರಾಗಬೇಕು ಅನ್ನುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮಕ್ಕಳನ್ನು ಶಿಕ್ಷಿತರನ್ನಾಗಿಸಲು ಹೆಚ್ಚಿನ ಒಲವು ತೋರಿಸುತ್ತಿದೆ. ಶಾಲೆಯ ಅಭಿವೃದ್ಧಿಗೆ ರೂ. 5 ಲಕ್ಷ ಅನುದಾನವನ್ನು ಮೀಸಲಿಡುವುದಾಗಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಜನಾಡಿ : ಕೇರಳಕ್ಕೆ ಮರಳು ಸಾಗಾಟ ನಡೆಸುತ್ತಿರುವುದನ್ನು ವಿರೋಧಿಸಿದ ಮಂಜನಾಡಿ ಗ್ರಾಮದ ನಾಗರಿಕರು ಹಾಗೂ ಕೂಲಿಕಾರ್ಮಿಕರು ಸೇರಿಕೊಂಡು ಮರಳು ಲಾರಿಗಳನ್ನು ತಡೆಹಿಡಿದು ಪ್ರತಿಭಟನೆ ನಡೆಸಿರುವ ಘಟನೆ ಕಲ್ಕಟ್ಟ ದಲ್ಲಿ ನಡೆದಿದೆ. ಕೇರಳ ಕಡೆಗೆ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವುದರಿಂದ ಸ್ಥಳೀಯ ಜನರಿಗೆ ಮರಳಿನ ಅಭಾವ ಉಂಟಾಗಿದೆ. ಇದರಿಂದ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಮನೆಯಲ್ಲೇ ಉಳಿಯುವಂತಾಗಿದೆ.ಮನೆ, ಕಟ್ಟಡ ನಿರ್ಮಿಸಲು ಮರಳು ಇಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ದಿನಕ್ಕೆ ಹಲವು ಲಾರಿಗಳು ಕೊಣಾಜೆಯಿಂದ ಮಂಜನಾಡಿ ಮಾರ್ಗವಾಗಿ ಕೇರಳ ರಾಜ್ಯಕ್ಕೆ ಮರಳು ಸಾಗಾಟ ನಡೆಸುತ್ತಲೇ ಇದೆ. ಕ್ರಮಕೈಗೊಳ್ಳಬೇಕಾದ ಇಲಾಖೆಗಳು ಕಣ್ಣಿದ್ದೂ ಕುರುಡಾಗಿದೆ. ಅವರ ಮುಂದೆಯೇ ಲೋಡುಗಟ್ಟಲೆ ಮರಳು ಸಾಗಾಟ ನಡೆಯುತ್ತಿದ್ದರೂ ಸುಮ್ಮನಿರುತ್ತಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಮರಳು ವ್ಯವಹಾರ ನಡೆಯಲಿ ಆದರೆ ಸ್ಥಳೀಯರಿಗೆ ತೊಂದರೆಯಾಗದ ರೀತಿಯಲ್ಲಿ ಮುಂದುವರಿಯಬೇಕು . ಅಪಘಾತವಾದರೂ ಕ್ಯಾರೇ ಅನ್ನುತ್ತಿಲ್ಲ: ನಾಟೆಕಲ್ ನಿಂದ ಮಂಜನಾಡಿ ಮಾರ್ಗವಾಗಿ ಕೇರಳದತ್ತ ದಿನಾ ಸಾಗುವ ಮರಳು ಲಾರಿಗಳು ಮಿತಿ ಮೀರಿದ ವೇಗದಿಂದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಬೀಡಿ ಉದ್ಯಮವನ್ನು ನಿಷೇಧ ಮಾಡುವ ಮೂಲಕ ದೇಶದ 4 ಲಕ್ಷ ಬೀಡಿ ಕಾರ್ಮಿಕರು ಹಾಗೂ ಕ್ಷೇತ್ರದಲ್ಲಿ 1000ಕ್ಕೂ ಅಧಿಕ ಬಡ ಕುಟುಂಬಗಳು ಬೀದಿ ಪಾಲಾಗಲಿದೆ ಎಂದು ಮಂಗಳೂರು ದಕ್ಷಿಣ ವಲಯ ಸಿಪಿಐಎಂ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದ್ದಾರೆ. ದೇರಳಕಟ್ಟೆಯಲ್ಲಿ ಸಿಪಿಐಎಂ ಮುನ್ನೂರು ಲೋಕಲ್ ಸಮಿತಿ ನೇತೃತ್ವದಲ್ಲಿ ನಿನ್ನೆ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನವಿರೋಧಿಯಾಗಿ ಕಾರ್ಯಚರಿಸುತ್ತಿದೆ. ಬೀಡಿ ಕಾರ್ಮಿಕರ ಮಕ್ಕಳಿಗೆ ದೊರೆಯುವ ಸ್ಕಾಲರ್‍ಶಿಪ್ ಹಣಕ್ಕೂ ಕೇಂದ್ರ ಸರಕಾರ ಕತ್ತರಿ ಹಾಕಲಿದೆ. ಇದರಿಂದ ಬಡ ಕಾರ್ಮಿಕರ ಮಕ್ಕಳು ಅವಿದ್ಯಾವಂತರಾಗಲಿದ್ದಾರೆ. ರಾಜ್ಯದ ಆರೋಗ್ಯ ಸಚಿವರ ಕ್ಷೇತ್ರ ಅನಾರೋಗ್ಯದಿಂದ ತುಂಬಿದೆ. ಕ್ಯಾಂಟೀನಿನಲ್ಲಿ ಚಹಾ ಕುಡಿಯೋದು, ಅಪಘಾತವಾದವರನ್ನು ತನ್ನ ಕಾರಿನಲ್ಲಿ ಹಾಕಿ , ತಾನು ರಿಕ್ಷಾದಲ್ಲಿ ಹೋಗಿ ಮಾಧ್ಯಮದವರಿಂದ ಪ್ರಚಾರ ಪಡೆಯುವುದರಲ್ಲೇ ಬ್ಯುಸಿಯಾಗಿರುವ ಅವರು ಜನರ ಸಂಕಷ್ಟಗಳಿಗೆ ಸ್ಪಂಧನೆ ನೀಡುತ್ತಿಲ್ಲ. ಜಿಲ್ಲೆಯಾದ್ಯಂತ ಡೆಂಗ್ಯು, ಚಿಕೂನ್ ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳಿಂದ ಜನ ಬಳಲುತ್ತಿದ್ದಾರೆ.…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ವ ಧರ್ಮ ಕ್ಷೇತ್ರಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸುಮಾರು 7 ಕೋಟಿಗಳಿಗೂ ಮಿಕ್ಕಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಬಾಕಿ ಉಳಿದಿರುವ ಅನುದಾನಗಳ ಬಿಡುಗಡೆಗೆ ಸರಕಾರಕ್ಕೆ ಮನವಿ ಮಾಡಿದ್ದು ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದರು. ಅವರು ಮುಡಿಪು ಸಂತ ಜೋಸೆಫ್ ವಾಝರ ಪುಣ್ಯ ಕ್ಷೇತ್ರದಲ್ಲಿ ಪ್ರವಾಸೋಧ್ಯಮ ಇಲಾಖೆಯಡಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸದ ಪ್ರಥಮ ಹಂತದ ಸುಮಾರು 50 ಲಕ್ಷ ರೂ. ಅನುದಾನದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಮುಡಿಪು ಕ್ಷೇತ್ರದ ಅಭಿವೃದ್ಧಿಗೆ ಮಾಡಿರುವ ವಾಗ್ದಾನದಂತೆ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 1.15 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಉಳ್ಳಾಲ ದರ್ಗಾ ಉರೂಸ್ ಸಂದರ್ಭದಲ್ಲಿ ಮೂಲಭೂತ ಸೌಕರ್ಯ ಆಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಯಾಗಿದೆ. ಪಾವೂರು ದೇವಂದಬೆಟ್ಟದಲ್ಲಿ ಶ್ರೀ…

Read More