ವಿಜಯವಾಡ :ಸೇತುವೆಯಿಂದ ಬಸ್ ನದಿಗೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, 40 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ದಿವಾಕರ್ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ವೈಜಾಗ್ ನಿಂದ ಹೈದರಾಬಾದ್ ಗೆ ತೆರಳುವಾಗ ಘಟನೆ ನಡೆದಿದ್ದು, ಗಾಯಾಳುಗಳಲ್ಲಿ 17 ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಇನ್ನು ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಕೃಪೆ: ನ್ಯೂಸ್ ಕನ್ನಡ
Author: UllalaVani
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಬಂದ್ ಮಾಡುವವರು ಕೇರಳ ಸಿ ಎಂ ಚಪ್ಪಲಿಗೂ ಸಮಾನರಲ್ಲ ಎಂಬ ಹೇಳಿಕೆಯನ್ನು ನಾನು ಯಾರನ್ನೂ ಅವಮಾನಿಸಲು ಮತ್ತು ಅವರ ಮನಸ್ಸನ್ನು ನೋಯಿಸಲು ಹೇಳಿಕೆ ನೀಡಿಲ್ಲ .ಅಚಾತುರ್ಯದಿಂದ ಚಪ್ಪಲಿ ಎಂಬ ಶಬ್ದ ಬಂದಿದೆ. ಕ್ಷಮೆ ಕೇಳಲ್ಲ, ಈ ಬಗ್ಗೆ ವಿಷಾದವಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಸ್ಪಷ್ಟಪಡಿಸಿದ್ದಾರೆ. ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಅರ್ಥದ ಉದ್ದೇಶ ಹೇಳಿಕೆಯಲ್ಲಿ ಇರಲಿಲ್ಲ .ಸಂವಿಧಾನ ವಿರೋಧಿಗಳಿಗೆ ನೀಡಿದ ಹೇಳಿಕೆ ಬಾಯಿ ತಪ್ಪಿ ಬಂದಿದೆ. ಹಿರಿಯ ಜನಾರ್ದನ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಸಣ್ಣ ಮಗಳು ಕೂಡ ಇದನ್ನು ತಪ್ಪು ಎಂದು ಹೇಳಿದ್ದಾಳೆ. ಮುಂದೆ ಈ ರೀತಿ ಮಾತಾಡುವುದಿಲ್ಲ.ಇದನ್ನು ಕೆಲವರು ರಾಜಕೀಯ ಮಾಡುತ್ತಿದ್ದಾರೆ. ವಾಟ್ಸಪ್ ನಲ್ಲಿ ತಿರುಚುತ್ತಿದ್ದಾರೆ ಎಂದು ಹೇಳಿದರು. ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹೋಗಿ ಚಹಾ ಕುಡಿದು ಬಂದಾಗ ಯಾರು ಮಾತನಾಡಲಿಲ್ಲ. ಆದರೆ ಹಿರಿಯರು, ದೇಶದ ಏಕೈಕ ಬಿಲ್ಲವ ಸಿ ಎಂ ದಕ್ಷಿಣ ಕನ್ನಡಕ್ಕೆ ಬಂದಾಗ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಂಗಳೂರು ಬಂದ್ ಹಿನ್ನಲೆಯಲ್ಲಿ ಕೇರಳ ಸಾರಿಗೆ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿದ 5 ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಚೆಂಬುಗುಡ್ಡೆ ನಿವಾಸಿ ರಜೀತ್(19), ತೊಕ್ಕೊಟ್ಟು ಭಟ್ನಗರ ನಿವಾಸಿ ಆತೀಶ್(22), ಮಂಜೇಶ್ವರ ನಿವಾಸಿಗಳಾದ ದಿನೇಶ್(25) ಸಂತೋಷ್ ಕುಮಾರು(28) ನವೀನ್(25) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳೆಲ್ಲರೂ ಮಂಗಳೂರು ಬಂದ್ ನ ಹಿಂದಿನ ದಿನವಾದ ಫೆ.24ರ ತಡ ರಾತ್ರಿ ಕೋಟೆಕಾರು ಬೀರಿ ಮತ್ತು ತಲಪಾಡಿಯಲ್ಲಿ ಕೇರಳ ಸಾರಿಗೆ ಬಸ್ಸುಗಳಿಗೆ ಕಲ್ಲೆಸೆದು ಹಾನಿಗೊಳಿಸಿದ್ದರು. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ತನಿಖೆ ಕೈಗೆತ್ತಿಗೊಂಡು ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕಿನ್ಯಾ:ಕಿನ್ಯಾದಲ್ಲಿ ರೇಷನ್ ವಿತರಣೆಯಲ್ಲಿ ಬಹಳಷ್ಟು ತೊಂದರೆಯಾಗಿ, ಗ್ರಾಮಸ್ಥರು ಕೆಲಸ ಬಿಟ್ಟು ಅಂಗಡಿ ಎದುರು ಸಾಲಿನಲ್ಲಿ ನಿಲ್ಲುವಂತಾಗಿದೆ. ಸಮರ್ಪಕವಾಗಿ ಅಕ್ಕಿಯ ಪೂರೈಕೆಯಾಗದೇ ಜನ ಬಹಳಷ್ಟು ತೊಂದರೆಗೀಡಾಗಿದ್ದಾರೆ. ಇದನ್ನು ಅಧಿಕಾರಿಯ ಜತೆ ಹೇಳೋಣವೆಂದರೆ ಅಧಿಕಾರಿಯೇ ಬಂದಿಲ್ಲ. ಇದರಿಂದ ಗ್ರಾಮಸಭೆ ನಡೆಯುವುದು ಸಮಂಜಸವಲ್ಲ ಎಂಬ ಗ್ರಾಮಸ್ಥರ ಒಮ್ಮತದ ಅಭಿಪ್ರಾಯದ ಮೂಲಕ ಇಡೀ ಗ್ರಾಮಸಭೆ ಗೊಂದಲದಲ್ಲಿ ಮುಂದುವರಿದ ಪ್ರಸಂಗ ಕಿನ್ಯಾ ಗ್ರಾಮಸಭೆಯಲ್ಲಿ ನಡೆಯಿತು. ಕಿನ್ಯಾದ ಸರಕಾರಿ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2016-17 ನೇ ಸಾಲಿನ ಗ್ರಾಮಸಭೆ ಸಮರ್ಪಕ ರೇಷನ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರ ವಾದ-ವಿವಾದಗಳ ನಡುವೆ ಮುಗಿಯಿತು. ಹಿಂದಿನ ಗ್ರಾಮಸಭೆಯಲ್ಲಿ ಅಧಿಕಾರಿಗಳ ಅನುಪಸ್ಥಿತಿಯಿಂದ ಗ್ರಾಮಸ್ಥರು ಗ್ರಾಮಸಭೆಯನ್ನೇ ರದ್ದುಗೊಳಿಸುವಂತೆ ಆಗ್ರಹಿಸಿ ಹೊರನಡೆದಿದ್ದರು. ಕಳೆದ ಗ್ರಾಮಸಭೆಯಲ್ಲಿ ಆಹಾರ ಇಲಾಖೆಯ ಅಧಿಕಾರಿ ಮುಂದಿನ ಗ್ರಾಮಸಭೆಯಲ್ಲಿ ಬರಿಸುವಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ ಇಂದು ನಡೆದ ಸಭೆಯಲ್ಲೂ ಆಹಾರ ಇಲಾಖೆಯ ಯಾವುದೇ ಅಧಿಕಾರಿಯ ಉಪಸ್ಥಿತಿ ಇರಲಿಲ್ಲ. ಕಿನ್ಯಾದಲ್ಲಿ ರೇಷನ್ ಅಂಗಡಿಯಲ್ಲಿ ಸಮರ್ಪಕವಾಗಿ ಅಕ್ಕಿಯ ಪೂರೈಕೆಯಾಗದೇ ಜನ ಬಹಳಷ್ಟು ತೊಂದರೆಗೀಡಾಗಿದ್ದಾರೆ.…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ:ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಜನಸೇವೆ ನಡೆಸಿದ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಆಡಳಿತ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು ಹೇಳಿದರು. ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಸೋಮನಾಥೇಶ್ವರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ಹಿಂದಿನ ಹುಟ್ಟುಹಬ್ಬದ ಸಂದರ್ಭ ಸೋಮನಾಥ ದೇವರಿಗೆ ಪೂಜೆ ಸಲ್ಲಿಸಿದಂತೆ ಅವರು ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಬಾರಿ ಪೂಜೆ ಸಲ್ಲಿಸಿದ ಫಲವಾಗಿ ಮುಂದೆ ರಾಜ್ಯದ ಮುಖ್ಯಮಂತ್ರಿಯಾಗಿ ಚುನಾಯಿತರಾಗಲಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕವನ್ನು ರೂಪಿಸಲಿದ್ದಾರೆ ಎಂದರು. ಈ ಸಂದರ್ಭ ಸೌಮ್ಯಾ.ಆರ್.ಶೆಟ್ಟಿ, ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗೋಪಾಲ ಕುತ್ತಾರ್, ಬಿಜೆಪಿ ಮುಖಂಡರಾದ ಚಮದ್ರಶೇಖರ್ ಉಚ್ಚಿಲ್, ಯಶವಂತ ಅಮೀನ್, ಉದಯ ಶೆಟ್ಟಿ ಸೊಳ್ಳೆಂಜೀರು, ಸುಜಿತ್ ಮಾಡೂರು, ಗೋಪಿನಾಥ್ ಬಗಂಬಿಲ, ದಯಾನಂದ ತೊಕ್ಕೊಟ್ಟು, ಶಿವಪ್ರಸಾದ್ ಕಿನ್ಯಾ, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು. ಜಾನುವಾರು ಪೋಷಣೆ, ಕೆರೆ ಅಭಿವೃದ್ಧಿಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಪ್ರತಿಭಟಿಸುವುದು ಸಂವಿಧಾನಾತ್ಮಕ ಹಕ್ಕು, ಅದನ್ನು ವಿರೋಧಿಸಿ ಕೀಳುಮಟ್ಟದ ಹೇಳಿಕೆಯನ್ನು ನೀಡಿರುವ ಜವಾಬ್ದಾರಿಯುತ ಸಚಿವರು ತಮ್ಮ ಸ್ಥಾನಕ್ಕೆ ಯೋಗ್ಯರಲ್ಲ, ಈ ಕೂಡಲೇ ಕ್ಷಮೆ ಯಾಚಿಸದೇ ಇದ್ದಲ್ಲಿ ಹಿರಿಯರ ಜತೆಗೆ ಚರ್ಚಿಸಿ ಮುಂದಿನ ಹೋರಾಟದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದ್ದಾರೆ. ಸಚಿವ ಖಾದರ್ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ತೊಕ್ಕೊಟ್ಟುವಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಕೇರಳ ರಾಜ್ಯದಲ್ಲಿ ನೂರಾರು ಹಿಂದು ಸಂಘಟನೆಯ ಕಾರ್ಯಕರ್ತರ ಹತ್ಯೆಗೆ ಕಾರಣರಾಗಿರುವ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮಿಸಿ ಸೌಹಾರ್ದ ರ್ಯಾಲಿಯಲ್ಲಿ ಭಾಗವಹಿಸುವುದಕ್ಕೆ ಜಿಲ್ಲೆಯಲ್ಲಿ ಸಂಘಪರಿವಾರದವರು ಕರೆ ನೀಡಿದ್ದ ಹರತಾಳಕ್ಕೆ ಸಂಪೂರ್ಣ ಬೆಂಬಲ ಸಿಕ್ಕಿದೆ. ಇದು ಹಿಂದುಗಳ ನೋವನ್ನು ವ್ಯಕ್ತಪಡಿಸಿದೆ. ಅದನ್ನು ಬಿಜೆಪಿ ಕೂಡಾ ಬೆಂಬಲಿಸಿದೆ. ಹೊರಜಿಲ್ಲೆಯ ಕಾಂಗ್ರೆಸ್ ಮುಖಂಡರ ಮಾತಿಗೆ ಹಿಡಿತವಿಲ್ಲ ಆದರೆ ಜಿಲ್ಲೆಯ ಸಚಿವನಾಗಿ , ಉಳ್ಳಾಲ ಭಾಗದ ಶಾಸಕರಾಗಿದ್ದುಕೊಂಡು ಸಂವಿಧಾನವನ್ನು ತಿಳಿಯದೆ ಮಾತನಾಡಿರುವುದು ಕಳವಳಕಾರಿ. ಇದು ಅವರ ಯೋಗ್ಯತೆಯನ್ನು ಪ್ರಶ್ನಿಸುವಂತಾಗಿದೆ. ಈ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಲ್ಯ: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಚಪ್ಪಲಿಗೆ ಹೋಲಿಸಿದ ಹಿನ್ನಲೆಯಲ್ಲಿ ಕೊಲ್ಯ ಸಮೀಪ ಕಾರ್ಯಕ್ರಮಕ್ಕೆಂದು ಭಾಗವಹಿಸಲಿದ್ದ ಸಚಿವ ಯು.ಟಿ.ಖಾದರ್ ವಿರುದ್ದ ಹಿಂದು ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಘೇರಾವ್ ಹಾಕಲು ನಿರ್ಧರಿಸಿದ್ದ ಘಟನೆ ಕೊಲ್ಯ ಸಮೀಪ ಭಾನುವಾರ ಸಂಜೆ ನಡೆದಿದೆ. ಕೊಲ್ಯದಲ್ಲಿ ನಡೆಯುತ್ತಿದ್ದ ಖಾಸಗಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಲು ಸಚಿವ ಖಾದರನ್ನು ಆಹ್ವಾನಿಸಲಾಗಿತ್ತು. ಆದರೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮಿಸಿ ಶನಿವಾರ ನಡೆಸಿದ ಸೌಹಾರ್ದ ರ್ಯಾಲಿಯನ್ನು ಖಂಡಿಸಿ ಸಂಘ ಪರಿವಾರಗಳು ಮಂಗಳೂರು ಬಂದ್ಗೆ ಕರೆ ನೀಡಿದ್ದವು . ಇದಕ್ಕೆ ಪ್ರತಿಕ್ರಿಯಿಸಿ ಸಚಿವ ಖಾದರ್ ಹಿಂದು ಸಂಘಟನೆಯ ಕಾರ್ಯಕರ್ತರನ್ನು ಪಿಣರಾಯಿ ಚಪ್ಪಲಿಗೆ ಹೋಲಿಸಿದ್ದರು. ಇದನ್ನು ಖಂಡಿಸಿ ಭಾನುವಾರ ಹಿಂದು ಸಂಘಟನೆಯ ಕಾರ್ಯಕರ್ತರುನ ಕೊಲ್ಯದಲ್ಲಿ ಆಗಮಿಸಲಿದ್ದ ಖಾದರ್ಗೆ ಘೇರಾವ್ ಹಾಕಲು ಜಮಾಯಿಸಿದ್ದರು. ಆದರೆ ಸಚಿವ ಖಾದರ್ ಕಾರ್ಯಕ್ರಮಕ್ಕೆ ಬಾರದೆ ಇದ್ದ ಕಾರಣ ಹಿಂದು ಸಂಘಟನೆಯ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಹಿಂದುರುಗಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕಲ್ಲಾಪು: ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿದ್ದು, ಸಹಸವಾರ ಮೃತನ ಸಹೋದರ ಗಂಭೀರ ಗಾಯಗೊಂಡಿದ್ದಾರೆ. ತೊಕ್ಕೊಟ್ಟು ಟಿ.ಸಿ.ರೋಡಿನ ಅಕ್ಕರೆಕೆರೆ ನಿವಾಸಿ ಮಯ್ಯದ್ದಿ ಎಂಬವರ ಪುತ್ರ ಸಂಶುದ್ದೀನ್ (23) ಮೃತರು. ಸಹೋದರ ಸಹಸವಾರ ವಾಸಿಂ (16) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿದ್ದಾರೆ. ಬೆಳಿಗ್ಗೆ ಮನೆಯಿಂದ ಸಹೋದರನ ಜತೆಗೆ ಧಕ್ಕೆಗೆ ಕೆಲಸಕ್ಕೆ ತೆರಳುವ ಸಂದರ್ಭ ಘಟನೆ ಸಂಭವಿಸಿದೆ. ಸ್ಕೂಟರಿನಲ್ಲಿ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಶುದ್ದೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಸಹಸವಾರನನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಶುದ್ದೀನ್ ಅವಿವಾಹಿತರಾಗಿದ್ದು, ಧಕ್ಕೆಯಲ್ಲಿ ಬಾಕ್ಸ್ ಮಾರಾಟದ ಕೆಲಸ ನಿರ್ವಹಿಸುತ್ತಿದ್ದರು. ಸಹೋದರ ವಾಸಿಂ ಧಕ್ಕೆಯಲ್ಲಿ ಅವರ ತಂದೆಗಿರುವ ಸ್ವಂತ ಹೊಟೇಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಐವರು ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಮತ್ತು ತಂದೆ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಭೇಟಿ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಜಿಲ್ಲೆಯಾದ್ಯಂತ ಕರೆ ನೀಡಿರುವ ಮಂಗಳೂರು ಬಂದ್ ಹಿನ್ನೆಲೆಯಲ್ಲಿ ಉಳ್ಳಾಲ, ಕೊಣಾಜೆ ಹಾಗೂ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಕೃತ್ಯವನ್ನು ಮುಂದುವರಿಸಿದ್ದು, ಮೂರು ಕರ್ನಾಟಕ ಸಾರಿಗೆ ಸೇರಿದಂತೆ ಒಂದು ಖಾಸಗಿ ಬಸ್ಸುಗಳಿಗೆ ಕಲ್ಲುತೂರಾಟ ನಡೆಸಿರುವ ಘಟನೆಯಲ್ಲಿ ಚಾಲಕರಿಬ್ಬರು ಗಾಯಗೊಂಡಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ತಲಪಾಡಿ ಎಂಬಲ್ಲಿ ಪೊಲೀಸ್ ಗಸ್ತು ನಿರತ ಕರ್ನಾಟಕ ಸಾರಿಗೆ ಬಸ್ಸಿಗೆ ಕಲ್ಲೆಸೆಯಲಾಗಿತ್ತು. ಮಂಗಳೂರಿನಿಂದ ತಲಪಾಡಿ ಕಡೆಗೆ ತೆರಳುತ್ತಿದ್ದಾಗ ದುಷ್ಕøತ್ಯ ಎಸೆಯಲಾಗಿದೆ. ಪರಿಣಾಮ ಗಾಜು ಸಂಪೂರ್ಣ ಪುಡಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಮಧ್ಯಾಹ್ನ 11ರ ವೇಳೆಗೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ಗ್ರಾಮಾಂತರ ಸಾರಿಗೆ ಬಸ್ಸಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುವ ಸಂದರ್ಭ ಘಟನೆ ನಡೆದಿದೆ. ಬಳಿಕ .11.30 ಸುಮಾರಿಗೆ ತಲಪಾಡಿಯಿಂದ ಮಂಗಳೂರಿಗೆ ಹೊರಟಿದ್ದ ಖಾಸಗಿ ಮರೋಳಿ ಬಸ್ಸಿನ ಗಾಜನ್ನು 6 ಮಂದಿಯ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತಲಪಾಡಿ: ಕೇರಳ ಸಾರಿಗೆಯ ಎರಡು ಬಸ್ಸುಗಳಿಗೆ ದುಷ್ಕರ್ಮಿಗಳು ಶುಕ್ರವಾರ ತಡರಾತ್ರಿ ಕಲ್ಲೆಸೆದು ಹಾನಿ ಮಾಡಿರುವ ಘಟನೆ ಕೇರಳ -ಕರ್ನಾಟಕ ಗಡಿ ಪ್ರದೇಶ ತೂಮಿನಾಡು ಮತ್ತು ಕೋಟೆಕಾರು ಬೀರಿ ಸಮೀಪ ನಡೆದಿದೆ. ಇಂದು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರು ಮಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಬಂದ್ ಗೆ ಕರೆ ನೀಡಿದೆ. ಶುಕ್ರವಾರದಂದು ಭೇಟಿ ವಿರೋಧಿಸಿ ಹರತಾಳವನ್ನು ಆಯೋಜಿಸಿತ್ತು. ಇದೇ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲೆಸೆದಿರುವ ಶಂಕೆ ಇದೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ವೇಳೆ ತೂಮಿನಾಡು ಸಮೀಪ 9.00 ಗಂಟೆಯ ವೇಳೆ ಕಲ್ಲೆಸೆದರೆ ಇನ್ನೊಂದೆಡೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಬೀರಿ ಎಂಬಲ್ಲಿ ಕಲ್ಲೆಸೆಯಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕೇರಳ ಹಾಗೂ ಕರ್ನಾಟಕ ಪೊಲೀಸರ ಬಿಗಿ ಬಂದೋಬಸ್ತಿನ ನಡುವೆ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಸೆಕ್ಷನ್ ಜಾರಿಯಲ್ಲಿದ್ದರೂ ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಉಳ್ಳಾಲ ಹಾಘೂ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಫೆ.25ರಂದು ಮಂಗಳೂರಿನಲ್ಲಿ…

