ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: 1947ರ ಸ್ವಾತಂತ್ರ್ಯ ಕೇವಲ ರಾಜಕೀಯ ಸ್ವಾತಂತ್ರ್ಯವಾಗಿದ್ದು, ಈ ವೇಳೆ ಇಬ್ಭಾಗಗೊಂಡ ದೇಶದಿಂದಾಗಿ ಇದೀಗ ಭಾರತ ಅಪಾಯವನ್ನು ಎದುರಿಸುವಂತಾಗಿದೆ ಎಂದು ಯುವಬ್ರಿಗೇಡ್ ನ ಕೃಷ್ಣ ಉಪಾಧ್ಯಾಯ ಹೇಳಿದ್ದಾರೆ. ಯುವ ಬ್ರಿಗೇಡ್ ಉಳ್ಳಾಲ ಇದರ ವತಿಯಿಂದ ತೊಕ್ಕೊಟ್ಟು ಅಂಬಿಕಾರೋಡ್ ಗಟ್ಟಿ ಸಮಾಜ ಭವನದಲ್ಲಿ ಜರಗಿದ ಕಾರ್ಗಿಲ್ ವಿಜಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಸಾವಿನಿಂದಾಗಿ ದೇಶ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಕಲಾಂ ಅವರು ದೇಶದ ಸಂಪತ್ತಾಗಿದ್ದರು. ದೇಶ ರಾಜಕೀಯ ಸ್ವಾತಂತ್ರ್ಯವನ್ನು ಮಾತ್ರ ಪಡೆದುಕೊಂಡಿದೆ. ಆ ವೇಳೆ ನಡೆದ ಇಭ್ಭಾಗದ ಫಲವಾಗಿ ಕಾರ್ಗಿಲ್ಗಾಗಿ ಸೈನಿಕರು ಹೋರಾಡಿ ಪ್ರಾಣಬಲಿ ಕೊಟ್ಟು ಉಳಿಸಬೇಕಾದ ಸ್ಥಿತಿ ನಿರ್ಮಾಣವಾಯಿತು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ವಿಶ್ವನಾಥ ಗಟ್ಟಿ, ನಿವೃತ್ತ ಸೇನಾನಿಗಳಾದ ಸುಧಾಕರ್ ಕುಂಪಲ, ವೆಂಕಟೇಶ್ ಕುಂಪಲ ಹಾಗೂ ಅನಿಲ್ ಕುಮಾರ್ ಕುಂಪಲ, ಅಶೋಕ್ ಕುಮಾರ್ ಕುಂಪಲ, ಪ್ರವೀಣ್ ಶೆಟ್ಟಿ ಪಿಲಾರ್, ರಮೇಶ್ ಕುಂಪಲ, ರವಿಚಂದ್ರ ಗಟ್ಟಿ ಕೋಟೆಕಾರು,…
Author: UllalaVani
ಉಳ್ಳಾಲ್ ನ್ಯೂಸ್ ಡೆಸ್ಕ್ ಹರೇಕಳ: ಮರಳು ಹೊತ್ತು ವಾಪಸ್ಸಾಗುತ್ತಿದ್ದ ದೋಣಿಯೊಂದು ಮಗುಚಿಬಿದ್ದು ಒಂದೇ ಕುಟುಂಬದ ಓರ್ವ ನಾಪತ್ತೆಯಾಗಿ, ನಾಲ್ವರು ರಕ್ಷಣೆಗೊಳಗಾಗಿರುವ ಘಟನೆ ಪಾವೂರು ಕಡವಿನ ಬಳಿಯ ನೇತ್ರಾವತಿ ನದಿಯ ಮಧ್ಯಭಾಗದಲ್ಲಿ ಬುಧವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಹರೇಕಳ ರಾಜಗುಡ್ಡೆ ನಿವಾಸಿ ಲುಕ್ ಮೋನ್ (೨೧) ನಾಪತ್ತೆಯಾದವರು. ಇವರ ಜತೆಗಿದ್ದ ತಂಝೀಲ್, ಅಝೀಜ್, ಬದ್ರುದ್ದೀನ್ , ಸಲೀಂ ಎಂಬವರನ್ನು ರಕ್ಷಿಸಲಾಗಿದೆ. ಇವರಲ್ಲಿ ತಂಝೀಲ್ ಮತ್ತು ಬದ್ರುದ್ದೀನ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ ೧.೪೫ ರ ವೇಳೆಗೆ ದೋಣಿಯಲ್ಲಿ ನಾಲ್ವರು ಮರಳು ತರಲೆಂದು ಅಡ್ಯಾರು ಸಹ್ಯಾದ್ರಿ ಕಾಲೇಜು ಸಮೀಪ ನದಿಯ ಮಧ್ಯಭಾಗಕ್ಕೆ ತೆರಳಿದ್ದರು. ಮರಳು ತುಂಬಿಸಿ ವಾಪಸ್ಸಾಗುತ್ತಿದ್ದ ವೇಳೆ ಮಧ್ಯೆ ಜೋರಾಗಿ ಬೀಸಿದ ಗಾಳಿಯಿಂದಾಗಿ ದೋಣಿ ಮಗುಚಿಬಿದ್ದಿದೆ. ಈ ವೇಳೆ ತಂಝೀಲ್, ಬದ್ರುದ್ದೀನ್ ಎಂಬವರನ್ನು ಪಾವೂರು ಕಡವಿನ ಬಳಿಯಿದ್ದ ರಿಕ್ಷಾ ಚಾಲಕ ಇಕ್ಬಾಲ್ ಎಂಬವರು ದೋಣಿ ಮೂಲಕ ತೆರಳಿ ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಅಝೀಜ್ ಮತ್ತು ಸಲೀಂ ಎಂಬವರು ಈಜಿ ದಡ ಸೇರಿದರೆ, ಲುಕ್ಮೋನು ನೀರಿನಲ್ಲಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆರಿಟ್ ಕೋಟಾದ ಶುಲ್ಕದ ಜತೆಗೆ ಸ್ವ ವಿತ್ತೀಯ ಕೋಟದ ಶುಲ್ಕವವನ್ನು ಏರಿಕೆ ಮಾಡಿರುವುದರ ವಿರುದ್ಧ ಕೊಣಾಜೆ ವಿ.ವಿ.ಆಡಳಿತ ಸೌಧದ ಎದುರು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ ಆಶ್ರಯದಲ್ಲಿ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಶುಲ್ಕ ಇಳಿಸುವಂತೆ ಆಗ್ರಹಿಸಿ ಬುಧವಾರದಂದು ಎರಡನೇ ಬಾರಿ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಮಣಿದ ಮಂಗಳೂರು ವಿ.ವಿ ಉಪಕುಲಪತಿಗಳು ಕೂಡಲೇ ಸಿಂಡಿಕೇಟ್ ಸಭೆ ಕರೆದು ಸ್ವ ವಿತ್ತೀಯ ಕೋಟಾದ ಶುಲ್ಕವನ್ನು ಇಳಿಕೆ ಮಾಡಿದ್ದಾರೆ. ಸ್ವ-ವಿತ್ತೀಯ ಕೋಟಾದಡಿ ವಿದ್ಯಾರ್ಥಿಗಳು ಸಸ್ಯಶಾಸ್ತ್ರ ಹಾಗೂ ಪ್ರಾಣಿಶಾಸ್ತ್ರಕೋರ್ಸುಗಳಿಗೆ ಪ್ರವೇಶಾಕಾತಿ ಪಡೆಯಬೇಕಾದರೆ ಈಗಿನ ಶುಲ್ಕ ಪದ್ದತಿಯಂತೆ 48,795 ರೂಗಳನ್ನು ಪಾವತಿಸಬೇಕಾಗುತ್ತದೆ. ಅಂದರೆ, ಕಳೆದ ವರ್ಷವಿದ್ದ 39,280 ರೂಗಳ ಶುಲ್ಕಕ್ಕಿಂತ 9,515 ರೂಗಳನ್ನು ಈ ವರ್ಷ ಹೆಚ್ಚಿಸಲಾಗಿದೆ. ಭೌತಶಾಸ್ತ್ರ ವಿಭಾಗದ ಸ್ವವಿತ್ತೀಯ ಶುಲ್ಕವನ್ನು ಕಳೆದ ವರ್ಷದ 41,280 ರೂಗಳಿಂದ 51,795 ರೂಗಳಿಗೆ ಏರಿಕೆ ಮಾಡಲಾಗಿದೆ. (10,515 ರೂ ಏರಿಕೆ). ಗಣಿತಶಾಸ್ತ್ರದ ಸ್ವ-ವಿತ್ತೀಯ ಶುಲ್ಕವನ್ನು 43,280…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಬಂಟರ ಸಂಘ ಉಳ್ಳಾಲ ವಲಯ ಇದರ ಮಹಿಳಾ “ಸಿರಿ ಸ್ವ-ಸಹಾಯ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾಗಿ ನಿಶಾ ಶೆಟ್ಟಿ ನೀಲಿಪಾಲ್ ಆಯ್ಕೆಯಾಗಿದ್ದಾರೆ. ಒಕ್ಕೂಟದ ಸಹಾಯಕ ಕಾರ್ಯ ನಿರ್ವಾಹಕ ನಿರ್ದೇಶಕಿಯಾಗಿ ಶಾರದಾ ಎಚ್. ಶೆಟ್ಟಿ ಉಳ್ಳಾಲ, ನಿರ್ದೇಶಕರಾಗಿ ಸುಜಾತ ಎಸ್. ಶೆಟ್ಟಿ ಪೆರ್ಮನ್ನೂರು, ಮಲ್ಲಿಕಾ ಎಸ್. ಭಂಡಾರಿ, ಶಶಿಕಲಾ ಎ. ಶೆಟ್ಟಿ, ಲೆಕ್ಕಪರಿಶೋಧಕರಾಗಿ ವಿದ್ಯಾ ಪಿ. ಶೆಟ್ಟಿ, ಸುರೇಶ್ ಶೆಟ್ಟಿ ಅಂಬ್ಲಮೊಗರು ಇವರನ್ನು ಆಯ್ಕೆಮಾಡಲಾಯಿತು. ಈ ಸಂದರ್ಭ ವಲಯದ ಪ್ರತಿನಿಧಿಗಳಾಗಿ ವಲಯಾಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಹಾಗೂ ವಲಯದ ಪ್ರಧಾನ ಕಾರ್ಯದರ್ಶಿ ಆನಂದ ಎನ್. ಶೆಟ್ಟಿ,ಯವರ ಉಪಸ್ಥಿತರಿದ್ದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಂಬ್ಲಮೊಗರು: ಅಂಬ್ಲಮೊಗರು ಕೋಟ್ರಗುತ್ತು ಶ್ರೀ ಲಕ್ಷ್ಮಿನರಸಿಂಹ ಸೇವಾ ಸಮಿತಿ ಇದರ ಅಧ್ಯಕ್ಷರಾಗಿ ಸುಕುಮಾರ್. ಎ. ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಕೊಟ್ರಗುತ್ತು ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನದಲ್ಲಿ ನಡೆದ ಸಮಿತಿಯ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಶ್ಯಾಂ ಸುಂದರ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಜೇಶ್ ಆಚಾರ್ಯ, ಶರತ್ ಕುಮಾರ್, ಪ್ರ. ಕಾರ್ಯದರ್ಶಿಯಾಗಿ ದಿವಾಕರ ಬಂಗೇರ, ಕೋಶಾಧಿಕಾರಿಯಾಗಿ ಪ್ರಕಾಶ್ ಜಿ.ಎಸ್., ಜೊತೆ ಕಾರ್ಯದರ್ಶಿಯಾಗಿ ದಯಾನಂದ ಬೆಳ್ಚಾಡ, ಶಿವರಾಜ್ ಎನ್. ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಜಗದೀಶ್ ಆಚಾರ್ಯ, ವಾರ್ಷಿಕ ಕಾರ್ಯಕ್ರಮದ ಸಂಘಟಕರಾಗಿ 14 ಸದಸ್ಯರು ಮತ್ತು ಗೌರವ ಸಲಹೆಗಾರರಾಗಿ 15 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ದೇವಸ್ಥಾನದ ಮೊಕ್ತೇಸರ ಪದ್ಮನಾಭ ರೈ ಕೋಟ್ರಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಪಡ್ಯಾರ ಮನೆ ಉಪಸ್ಥಿತರಿದ್ದರು
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಾನೀರ್: ವನಮಹೋತ್ಸವ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ, ಅದೊಂದು ನಿರಂತರ ಆಂದೋಲನ ಎಂದು ತೊಕ್ಕೊಟ್ಟು ಸಂತ ಸೆಬಾಸ್ತಿಯನ್ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಲಿಲ್ಲಿ ಪಿಂಟೋ ಅಭಿಪ್ರಾಯಪಟ್ಟರು. ಭಾರತೀಯ ಕೆಥೋಲಿಕ್ ಯುವ ಸಂಚಲನ ಪಾನೀರ್ ಘಟಕದ ವತಿಯಿಂದ ಸಾಮಾಜಿಕ ಅರಣ್ಯ ವಲಯ ಹಾಗೂ ದ.ಕ.ಜಿಲ್ಲಾ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಪಾನೀರ್ ಚರ್ಚ್ ವಠಾರದಲ್ಲಿ ನಡೆದ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತ ದೇಶದಲ್ಲಿ ಆಚರಿಸಲಾಗುವಷ್ಟು ಹಬ್ಬಗಳು ಬೇರೆ ಯಾವುದೇ ದೇಶದಲ್ಲೂ ಇಲ್ಲ. ಅಂತಹ ಹಬ್ಬಗಳ ಪೈಕಿ ವನಮಹೋತ್ಸವ ಆಚರಣೆಯೂ ಒಂದಾಗಿದೆ. 1950 ರಿಂದ ಭಾರತದಲ್ಲಿ ವನಮಹೋತ್ಸವ ಆಚರಿಸಲಾಗುತ್ತಿದೆ. ಇಂದು ಮರಗಳನ್ನು ನಿರಂತರವಾಗಿ ಕಡಿಯಲಾಗುತ್ತಿದ್ದು ಇದರ ಪರಿಣಾಮವಾಗಿ ಮಳೆ ಪ್ರಮಾಣ ಕಡಿಮೆಯಾಗಿದೆ. ಹೀಗೇ ಮುಂದುವರಿದಲ್ಲಿ ಮುಂದೊಂದು ದಿನ ಅನ್ನಕ್ಕೂ ತಾತ್ಸಾರ ಪಡಬೇಕಾದ ಪರಿಸ್ಥಿತಿ ಬರಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಗಿಡಗಳನ್ನು ನೆಡುವ ಮೂಲಕ ಅರಣ್ಯ ಬೆಳೆಸುವುದರಿಂದ ಉತ್ತಮ ಪರಿಸರ ನಿರ್ಮಾಣ ಸಾಧ್ಯ. ಈ ಬಗ್ಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಹರೇಕಳ: ಕಳೆದ ವರ್ಷ ಹರೇಕಳ ಗ್ರಾಮದಲ್ಲಿ ಕಿರು ಸಾಲ ಯೋಜನೆಯಡಿ ಹರೇಕಳ ಗ್ರಾಮದಲ್ಲಿ 62 ಮಂದಿ ಫಲಾನುಭವಿಗಳಿಗೆ ಚೆಕ್ ವಿತರಿಸಲಾಗಿದ್ದರೆ, ಈ ವರ್ಷ 103 ಮಂದಿಗೆ ಚೆಕ್ ವಿತರಿಸಲಾಗಿದ್ದು ಪಡೆದ ಸಾಲ ಸೂಕ್ತ ರೀತಿಯಲ್ಲಿ ಉಪಯೋಗಿಸಿ ಎಂದು ತಾಲೂಕು ಪಂಚಾಯಿತಿ ಸದಸ್ಯ ಮಹಮ್ಮದ್ ಮುಸ್ತಫಾ ಹರೇಕಳ ಹೇಳಿದರು. ಹರೇಕಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕಿರುಸಾಲ ಯೋಜನೆಯಡಿ 25 ಸಾವಿರದಂತೆ 103 ಮಂದಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು. ಕಳೆದ ವರ್ಷ ಮಂಗಳೂರು ಕ್ಷೇತ್ರದಲ್ಲಿ 12 ವಿವಿಧ ಗುಂಪುಗಳಿಗೆ 1.20 ಲಕ್ಷದಂತೆ 25 ಲಕ್ಷಕ್ಕೂ ಅಧಿಕ ಮೊತ್ತದ ಚೆಕ್ ವಿತರಿಸಲಾಗಿತ್ತು. ಅಲ್ಲದೆ 401 ಮಂದಿಗೆ ಕಿರುಸಾಲ ಮಂಜೂರು ಮಾಡಲಾಗಿತ್ತು. ಈ ವರ್ಷ ಸಚಿವ ಯು.ಟಿ.ಖಾದರ್ ಅವರು 308 ಹೆಚ್ಚುವರಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಲು ಮುಂದಾಗಿರುವುದರಿಂದ 709 ಮಂದಿ ಸದುಪಯೋಗ ಪಡೆಯುತ್ತಿದ್ದಾರೆ. ಸಾಲದಲ್ಲಿ 6,500 ರೂಪಾಯಿ ಸಬ್ಸಿಡಿ ಇದ್ದು ಉಳಿದ ಹಣ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ವಿಶ್ವವಿದ್ಯಾನಿಲಯ ಮಟ್ಟದ ಆಯ್ಕೆ ಶಿಬಿರ ಹಾಗೂ ನಾಯಕತ್ವ ಶಿಬಿರದ ಸಮಾರೋಪ ಸಮಾರಂಭ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ ಮಂಗಳೂರು ವಿವಿ ಕ್ಯಾಂಪಸ್ನಲ್ಲಿ ನಡೆಯಿತು. ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಮಂಗಳೂರು ವಿವಿ ಕುಲಸಚಿವ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು, ನಮ್ಮ ಜೀವನವನ್ನು ಅರ್ಥಪೂರ್ಣವಾಗಿಸಲು ರಾಷ್ಟ್ರೀಯ ಸೇವಾ ಯೋಜನೆಯನ್ನು ನಾವು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು. ಇಂತಹ ಶಿಬಿರಗಳು ನಮ್ಮ ಜೀವನ-ಶಿಕ್ಷಣವನ್ನು ಅರ್ಥಪೂರ್ಣವಾಗಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ನಮ್ಮಲ್ಲಿ ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ನಡೆಸಲು ಬೇಕಾದ ಜವಬ್ದಾರಿಯ ಅರಿವನ್ನು ಬೆಳೆಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ರಾಷ್ಟ್ರೀಯ ಸೇವಾ ಯೋಜನೆಯಂತಹ ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಮುನ್ನಡೆಯಬೇಕು ಮತ್ತು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು ಹೇಳಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಸಂಪರ್ಕಾಧಿಕಾರಿ ಡಾ.ಗಣನಾಥ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಶಿಕ್ಷಣದಲ್ಲಿ ಹಿಂದುಳಿದ ಹೆಣ್ಣು ಮಕ್ಕಳಿಗೆ ಶಿಕ್ಷಣ ಒದಗಿಸಿ ಕೊಡುವ ದೃಷ್ಟಿಯಿಂದ ಮಹಿಳಾ ಶರೀಅತ್ ಕಾಲೇಜ್ನ್ನು ಆರಂಭಿಸಲಾಗಿದೆ. ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದಿದ್ದಾರೆ ಎನ್ನುವುದನ್ನು ಫಲಿತಾಂಶ ಸಾಬೀತುಪಡಿಸುತ್ತದೆ. ಆದರೆ ಸೌಕರ್ಯಗಳ ಕೊರತೆಯಿಂದ ಹೆಣ್ಣು ಮಕ್ಕಳ ಶಿಕ್ಷಣ ಕುಂಠಿತಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ತಾಜುಲ್ ಉಲಮಾ ಫೌಂಡೇಶನ್ ಮಹಿಳಾ ಶರೀಅತ್ ಕಾಲೇಜು ಮುಡಿಪುವಿನಲ್ಲಿ ಆರಂಭಿಸಿರುವುದು ಸ್ವಾಗತಾರ್ಹ ಎಂದು ಅಖಿಲ ಭಾರತ ಎಸ್ಎಸ್ಎಫ್ ಉಪಾಧ್ಯಕ್ಷ ಅಬ್ದುಲ್ ರಶೀದ್ ಝೈನಿ ಹೇಳಿದರು. ಅವರು ಮುಡಿಪು ಎಬಿ ಕಾಂಪ್ಲೆಕ್ಸ್ನಲ್ಲಿ ನಡೆದ ತಾಜುಲ್ ಉಲಮಾ ಫೌಂಡೇಶನ್ ಮಹಿಳಾ ಶರೀಯತ್ ಕಾಲೇಜು ಮುಡಿಪು ಇದರ ಪ್ರಥಮ ವಾರ್ಷಿಕ ಸಮಾರಂಭದಲ್ಲಿ ಮುಖ್ಯ ಭಾಷಣಗಾರರಾಗಿ ಭಾಗವಹಿಸಿ ಮಾತನಾಡಿದರು. ಹೆಣ್ಣು ಮಕ್ಕಳಿಗೆ ಪ್ರಸಕ್ತ ಕಾಲದಲ್ಲಿ ಬೇಕಾದಷ್ಟು ತರಬೇತಿ ಕೇಂಧ್ರಗಳಿವೆ. ಎಲ್ಲದಕ್ಕೂ ತರಬೇತಿಯನ್ನು ವಿವಿಧ ಕಡೆ ಕೊಡಲಾಗುತ್ತಿದೆ. ರಾಷ್ಟ್ರೀಯ ಮಟ್ಟದಲ್ಲೂ ಕೂಡಾ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಕೂಡಾ ಸರಕಾರ ಹಮ್ಮಿಕೊಳ್ಳುತಿದೆ. ಇದಕ್ಕೆ ಕಾರಣ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ದೇಶದ 11ನೇ ರಾಷ್ಟ್ರಪತಿಯಾಗಿ, ವಿಶ್ವದಲ್ಲಿ ಖ್ಯಾತಿ ಗಳಿಸಿದ ವಿಜ್ಞಾನಿ ಮಿಸೈಲ್ ಮ್ಯಾನ್ (ಕ್ಷಿಪಣಿ ಮನುಷ್ಯ) ಡಾ. ಅವುಲ್ ಪಕೀರ್ ಜೈನುಲಾಬ್ದೀನ್ ಅಬ್ದುಲ್ ಕಲಾಂ(84) ಅವರಿಗೆ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭ ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡರುಗಳಾದ ಸೀತಾರಾಮ ಬಂಗೇರ, ಬಾಬು ಬಂಗೇರ, ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು, ಸಂಜೀವ ಶೆಟ್ಟಿ ಅಂಬ್ಲಮೊಗರು, ರವಿ ರೈ ಪಜೀರು, ಪ್ರಶಾಂತ್ ಚೌಟ, ಯಶವಂತ ಅಮೀನ್, ಲಲಿತಾ ಸುಂದರ್, ಜೀವನ್ ಕುಮಾರ್ ತೊಕ್ಕೊಟ್ಟು, ಧನ್ಯವತಿ, ನಮಿತಾ ಶ್ಯಾಂ, ಮೋಹನದಾಸ್ ಶೆಟ್ಟಿ, ಸುಷ್ಮಾ ಜನಾರ್ದನ್, ಪ್ರಕಾಶ್ ಸಿಂಫೋನಿ, ಪ್ರೇಮನಾಥ ಪುತ್ರನ್, ಹರಿಯಪ್ಪ ಸಾಲ್ಯಾನ್, ಸತೀಶ್ ಶೆಟ್ಟಿ ಕಿನ್ಯಾ ಮೊದಲಾದವರು ಉಪಸ್ಥಿತರಿದ್ದರು. ಸೋಮವಾರ ಸಂಜೆ…

