Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಎಲ್ಲವೂ ಡಿಜಿಟಲೀಕರಣ ಆಗುತ್ತಿದೆ. ಇದಕ್ಕೆ ಪೂರಕವಾಗಿ ಸಂಘ ಸಂಸ್ಥೆಗಳು ವಿವಿಧ ರೀತಿಗಳಲ್ಲಿ ಜನರನ್ನು ಸುಶಿಕ್ಷಿತರನ್ನಾಗಿಸುತ್ತಿದ್ದರೆ, ಇತ್ತ ಗ್ರಾಮಾಂತರ ಭಾಗಕ್ಕೆ ಚಲಿಸುವ ಖಾಸಗಿ ಬಸ್ಸಿನಲ್ಲಿ ಉಚಿತ ವೈಫೈ ಸೌಲಭ್ಯವನ್ನು ನೀಡುವ ಮೂಲಕ ಬಸ್ ಮಾಲೀಕರು ಗ್ರಾಮೀಣ ಭಾಗದ ಜನರಿಗೆ ಹಾಗೂ ಬಸ್ಸಿನಲ್ಲಿ ಚಲಿಸುವ ಪ್ರಯಾಣಿಕರಿಗೆ ಉಚಿತ ಇಂಟರ್‍ನೆಟ್ ನೀಡಲು ಆರಂಭಿಸಿದ್ದಾರೆ. ನಾಟೆಕಲ್ ನಿವಾಸಿ ಎ.ಬಿ.ಇಬ್ರಾಹಿಂ ಮಾಲೀಕತ್ವದ ಗೋಲ್ಡನ್ ಲೈನ್ ಬಸ್ಸಿನಲ್ಲಿ ಉಚಿತ ವೈಫೈ ಸೌಲಭ್ಯವನ್ನು ಆರಂಭಿಸಲಾಗಿದೆ. ಅವರ ಪುತ್ರ ಅಬ್ದುಲ್ ರೆಹಮಾನ್ ಎಂಬವರು ಚಾಲಕನಾಗಿರುವ ಬಸ್ಸಿನಲ್ಲಿ ಉಚಿತ ಅಂತರ್ಜಾಲ ಅಳವಡಿಸಲು ರೆಹಮಾನ್ ಪುತ್ರ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿ ಆಗಿರುವ ಯುವಕನಾಗಿರುವ ಮನಸ್ಸು ಮಾಡಿದ್ದರು. ಅವರ ಅಭಿರುಚಿಯಂತೆ ಕಳೆದ ಎರಡು ದಿನಗಳಿಂದ ಮಂಗಳೂರಿನಿಂದ ಹೂಹಾಕುವಕಲ್ಲು ಕಡೆಗೆ ಚಲಿಸುವ 54 ನಂಬರಿನ ಸಿಟಿ ಬಸ್ಸಿನಲ್ಲಿ ಉಚಿತ ವೈಫೈ ಸೌಲಭ್ಯವನ್ನು ಪ್ರಯಾಣಿಕರಿಗೆ ಒದಗಿಸಲಾಗಿದೆ. ವೈಫೈ ಹೆಸರು ಮತ್ತು ಅದರ ಪಾಸ್‍ವರ್ಡ್ ನ್ನು ಬಸ್ಸಿನ ಒಳಭಾಗದಲ್ಲಿ ಸ್ಟಿಕರ್ ಮೂಲಕ ಅಂಟಿಸಲಾಗಿದೆ. ಎರಡು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಸೈಗೋಳಿ: ಕಳೆದ ಹಲವು ವರ್ಷಗಳಿಂದ ರಾಜ್ಯ ಸರಕಾರ ಅಬ್ಬಕ್ಕ ಉತ್ಸವಕ್ಕೆ ಅನುದಾನ ಪೂರೈಸುವುದರಿಂದ ಸರಕಾರಿ ಉತ್ಸವವಾಗಿ ಆಚರಿಸಲಾಗುತ್ತಿದ್ದು, ಈ ಬಾರಿ ಅಸೈಗೋಳಿಯಲ್ಲಿ ನಡೆಯಲಿರುವ ಉತ್ಸವದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಹೇಳಿದರು. ಅವರು ಅಸೈಗೋಳಿ ಮುಖ್ಯಪೇಟೆಯಲ್ಲಿ ಫೆ.4 ಮತ್ತು 5 ರಂದು ನಡೆಯಲಿರುವ ಅಬ್ಬಕ್ಕ ಉತ್ಸವದ ಚಪ್ಪರ ಮುಹೂರ್ತದಲ್ಲಿ ಭಾಗವಹಿಸಿ ಮಾತನಾಡಿದರು. 1992 ರಿಂದ ಉಳ್ಳಾಲದಲ್ಲಿ ಅಬ್ಬಕ್ಕ ಉತ್ಸವ ಆರಂಭವಾಗಿತ್ತು. ಕೆಲ ವರ್ಷಗಳಿಂದ ರಾಜ್ಯ ಸರಕಾರ ಅನುದಾನ ಪೂರೈಸುತ್ತಿದ್ದು, ಸರಕಾರಿ ಉತ್ಸವವಾಗಿ ಆಚರಿಸಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಅಬ್ಬಕ್ಕ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ದಿನಕರ್ ಉಳ್ಳಾಲ್ ಮಾತನಾಡಿ ಎರಡನೇ ಬಾರಿ ಅಸೈಗೋಳಿಯಲ್ಲಿ ಅಬ್ಬಕ್ಕ ಉತ್ಸವವನ್ನು ಆಚರಿಸಲಾಗುತ್ತಿದ್ದು, ಹಿಂದೆ ನಡೆದಾಗ ಸಾರ್ವಜನಿಕರಿಂದ ಉತ್ತಮ ಸ್ಪಂಧನೆ ಹಾಗೂ ಪ್ರಶಂಸೆಯೂ ವ್ಯಕ್ತವಾಗಿತ್ತು. ಅಸೈಗೋಳಿ, ಮುಡಿಪು, ಕೊಣಾಜೆ ಭಾಗದ ಮಂದಿ ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸುಮಾರು 3,000 ಮಂದಿಯ ವ್ಯವಸ್ಥೆಯನ್ನು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುರ್ನಾಡು : ಭವಿಷ್ಯದ ಪ್ರಜೆಗಳಿಗೆ ಉತ್ತಮವಾದ ಆರೋಗ್ಯಕ್ಕೆ ಪೂರಕವಾದ ಸಮಾಜ ನಿರ್ಮಿಸುವುದು ಹಿರಿಯರ ಜವಾಬ್ದಾರಿಯಾಗಿದೆ.ಈ ನಿಟ್ಟಿನಲ್ಲಿ ಘನ ತ್ಯಾಜ್ಯದಂತಹ ಸಮಸ್ಯೆಯನ್ನು ದೂರ ಮಾಡಲು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಬೇಕಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಜಿಲ್ಲಾ ಪಂಚಾಯತ್, ಜಿಲ್ಲಾ ನೆರವು ಘಟಕ, ಸ್ವಚ್ಛ ಭಾರತ್ ಮಿಷನ್, ಬಂಟ್ವಾಳ ತಾಲೂಕು ಪಂಚಾಯತ್, ಕುರ್ನಾಡು ಗ್ರಾಮ ಪಂಚಾಯಿತಿ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ನಿಯಂತ್ರಣ ಹಾಗೂ ಸಮರ್ಪಕ ಘನ ತ್ಯಾಜ್ಯ ವಿಲೇವಾರಿ ಬೃಹತ್ ಜನಾಂದೋಲನಕ್ಕೆ ಮುಡಿಪುವಿನ ಕುರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಚಾಲನೆ ನೀಡಿ ಮಾತನಾಡಿದರು. ಸಮಾಜಕ್ಕೆ ಆಗುವ ಸಮಸ್ಯೆ ಜನಸಾಮಾನ್ಯರಿಗೆ ಆಗುವ ಸಮಸ್ಯೆಯಾಗಿದೆ. ವ್ಯಾಪಾರಸ್ಥರು ವ್ಯಾಪಾರದ ಜತೆಗೆ ಆಸ್ತಿ ಸಂಪತ್ತು ಜಾಸ್ತಿ ಮಾಡುವ ಮೂಲಕ ಭವಿಷ್ಯದ ಪ್ರಜೆಗಳಿಗೆ ಮಾರಕವಾದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸಬಾರದು. ಹಂತಗಳಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ತರಲು ಮುಖ್ಯಮಂತ್ರಿಗಳು ಹೆಚ್ಚಿನ ಒತ್ತು…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಸ್ವಾಮಿ ವಿವೇಕಾನಂದರು ಒಬ್ಬ ಶ್ರೇಷ್ಠ ಭಾರತೀಯರಾಗಿದ್ದು ಸದೃಢ ಭಾರತ ನಿರ್ಮಾಣದಲ್ಲಿ ಇವರ ಆದರ್ಶ ಹಾಗೂ ಚಿಂತನೆಗಳು ಮಹತ್ವವಾದ ಪಾತ್ರವನ್ನು ವಹಿಸಿದೆ. ದೇಶದ ಸಂಸ್ಕøತಿಯನ್ನು ವಿದೇಶದಲ್ಲಿ ಪಸರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಮಂಗಳೂರು ವಿ.ವಿಯ ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ಇತಿಹಾಸ ತಜ್ಞ ಪ್ರೊ. ಸುರೇಂದ್ರ ರಾವ್ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಸಭಾಂಗಣದಲ್ಲಿ ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಆಶ್ರಯದಲ್ಲಿ ಮಂಗಳವಾರ ನಡೆದ ಸ್ವಾಮಿ ವಿವೇಕಾನಂದ 154ನೇ ಜನ್ಮದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರು ತಮ್ಮ ಸಣ್ಣ ವಯಸ್ಸಿನಲ್ಲಿಯೇ ಸಂಸ್ಕ ೃತ, ಬಂಗಾಳಿ, ಆಂಗ್ಲ, ಸ್ಪಾನಿಷ್, ಫ್ರೆಂಚ್, ಹಿಂದಿ ಸೇರಿದಂತೆ ಬಹುಭಾಷೆಯಲ್ಲಿ ವಿಶೇಷ ಪಾಂಡಿತ್ಯವನ್ನು ಪಡೆದಿದ್ದರು. ಪ್ರಪಂಚ ಸುತ್ತುತ್ತಿದ್ದಾಗ ವಿವೇಕಾನಂದರ ಆಕರ್ಷಕ ವ್ಯಕ್ತಿತ್ವ ಹಾಗೂ ಅವರ ಮಾತಿನ ಗಾಂಭೀರ್ಯತೆ ಎಲ್ಲರನ್ನು ಆಕರ್ಷಿಸುತ್ತಿತ್ತು. ವರ್ಣ, ಭಾಷೆ, ದೇಶದ ಹಂಗಿಲ್ಲದೆ ಜನರು ಅವರನ್ನು ನೋಡಲು ಮುಗಿಬೀಳುತ್ತಿದ್ದರು. ಪರಕೀಯರು ದೇಶವನ್ನು ಆಳುತ್ತಿದ್ದ ಸಂದರ್ಭದಲ್ಲಿ ದೇಶದ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಇನ್ನೂ ರೂ. 2,000 ದ ನೋಟನ್ನು ಕಂಡವರಿಲ್ಲ, ಆದರೆ ಅಷ್ಟರಲ್ಲೇ ತೊಕ್ಕೊಟ್ಟು ಕಲ್ಲಾಪು ಸಮೀಪ ಮೀನು ವ್ಯಾಪಾರಿಗೆ ರೂ. 2,000 ನಕಲಿ ನೋಟು ನೀಡಿ ವಂಚಿಸಿರುವ ಘಟನೆ ಸೋಮವಾರ ನಡೆದಿದೆ. ಕಲ್ಲಾಪು ಬಳಿ ಟೆಂಪೋದಲ್ಲಿ ಮೀನು ಮಾರಾಟ ನಡೆಸುವ ಉಳ್ಳಾಲದ ಮುಸ್ತಾಫ ಎಂಬವರಿಗೆ ವಂಚಿಸಲಾಗಿದೆ. ಮಧ್ಯಾಹ್ನ ವೇಳೆ ಮೀನು ಖರೀದಿಸಲು ಹಲವು ಗ್ರಾಹಕರಿದ್ದು, ಅವರಲ್ಲಿ ಹಲವರು ಹೊಸ 2000 ನೋಟು ನೀಡಿ 500 ರೂ.ಗಳ ಮೀನು ಖರೀದಿಸಿ, ಉಳಿದ ಚಿಲ್ಲರೆ ಹಣವನ್ನು ಪಡೆಯುತ್ತಿದ್ದರು. ಈ ನಡುವೆ ಗೊತ್ತಿಲ್ಲದೆ ಹಣ ಪಡೆದುಕೊಂಡ ಮುಸ್ತಾಫ ಅವರು ಸಂಜೆ ವೇಳೆ ಹಣ ಎಣಿಸುವ ಸಂದರ್ಭ ನೋಡು ನಕಲಿಯಾಗಿರುವುದು ಬೆಳಕಿಗೆ ಬಂದಿದೆ. ಕಲರ್ ಪ್ರಿಂಟರ್ ಮೂಲಕ ನೋಟನ್ನು ಮುದ್ರಿಸಲಾಗಿದ್ದು, ಅದಕ್ಕೆ ನೀರು ತಾಗಿ ಬಣ್ಣವೂ ಅಳಿಸಿ ಹೋಗಿದೆ. ನೂತನ ನೋಟಿನ ಭಾವಚಿತ್ರವನ್ನು ವಾಟ್ಸ್ಯಾಪ್ , ಅಂತರ್ಜಾಲದ ಮುಖೇನ ಪಡೆದು , ಕಲರ್ ಪ್ರಿಂಟರ್ ಮೂಲಕ ಅದನ್ನು ಮುದ್ರಿಸುವ ಜಾಲ ಸಕ್ರಿಯವಾಗಿದೆ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ವೈದ್ಯಕೀಯ ಸೇವೆಯಲ್ಲಿರುವ ಯುವಸಮುದಾಯ ವೇಗವಾಗಿ ಹಣಗಳಿಸುವಲ್ಲಿ ನಿರತವಾಗಿದ್ದು, ತಾಳ್ಮೆ, ಅನುಭವ, ಪರಿಣತಿಯೊಂದಿಗೆ ಹೆಚ್ಚಿನ ಸಮಯ ಪಡೆದು ವೃತ್ತಿಯಲ್ಲಿ ತೊಡಗಿಕೊಂಡಲ್ಲಿ ಯಶಸ್ವಿ ವೈದ್ಯರಾಗಲು ಸಾಧ್ಯ ಎಂದು ಬೆಂಗಳೂರಿನ ಖ್ಯಾತ ಕರ್ಣತಜ್ಞ ಡಾ.ಹೆಚ್.ವಿಜಯೇಂದ್ರ ಅಭಿಪ್ರಾಯಪಟ್ಟರು ಅವರು ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯ ಕಿವಿ, ಮೂಗು, ಕುತ್ತಿಗೆ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಆಸ್ಪತ್ರೆ ಆಡಿಟೋರಿಯಂನಲ್ಲಿ ಶುಕ್ರವಾರ ಆಯೋಜಿಸಿದ್ದ `ಯೆನ್ ಓಟೊ-ಫೆಸ್ 2016′ ಶಸ್ತ್ರಚಿಕಿತ್ಸೆಯ ನೇರಪ್ರಸಾರದ ಕಾರ್ಯಗಾರ ಹಾಗೂ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರವನ್ನು ಉದ್ಘಾಟಿಸಿದರು. ಹಿಂದೆ ಸ್ನಾತಕೋತ್ತರ ವಿಭಾಗದ ವೈದ್ಯರಿಗೆ ಮೈಕ್ರೋಸ್ಕೋಪ್ ಮುಟ್ಟಲು ಬಿಡುತ್ತಿರಲಿಲ್ಲ. ಆದರೆ 1987ರಲ್ಲಿ ಪ್ರಥಮ ಬಾರಿ ಶಸ್ತ್ರಚಿಕಿತ್ಸೆ ನೇರಪ್ರಸಾರ ಕಾರ್ಯಗಾರ ಆರಂಭದಿಂದಾಗಿ ಕ್ಷೇತ್ರದಲ್ಲಿ ಬಹಳ ಅನುಭವ ಪಡೆಯುವಂತಾಯಿತು. ಸದ್ಯ ಪ್ರತೀ ವಾರದಲ್ಲಿ ಇಂತಹ ಶಸ್ತ್ರಚಿಕಿತ್ಸಾ ಕಾರ್ಯಗಾರಗಳು ನಿರಂತರವಾಗಿ ನಡೆಯುತ್ತಿದೆ. ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಯುವವೈದ್ಯರು ಹಣದ ಹಿಂದೆ ಹೋಗದೇ, ಪರಿಣತಿ, ಉತ್ಸಾಹ, ಆನಂದ ಭಾವದೊಂದಿಗೆ ವೃತ್ತಿಯನ್ನು ನಿರ್ವಹಿಸುವ ಮೂಲಕ ಯಶಸ್ವಿ ವೈದ್ಯರಾಗಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಮತ್ತು ಕೊಣಾಜೆ ಠಾಣಾ ವ್ಯಾಪ್ತಿಗಳಲ್ಲಿ ನಡೆಯುತ್ತಿರುವ ಅಹಿತಕರ ಕೃತ್ಯ ಎಸಗುತ್ತಿರುವವರಿಗೆ ಭಯೋತ್ಪಾಧಕರ ನಂಟು ಇದೆ. ಕೂಡಲೇ ಅಂತಹ ಚಟುವಟಿಕೆಗಳ ಮಟ್ಟ ಹಾಕುವ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಬೇಕಿದೆ. ಇಲ್ಲವಾದಲ್ಲಿ ನ.15 ರ ಒಳಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಆಗ್ರಹಿಸಿದ್ದಾರೆ. ಆರ್ ಎಸ್ ಎಸ್ ಕಾರ್ಯಕರ್ತರ ರಾಮಮೋಹನ್ ಕೊಲೆಯತ್ನ ದ ಹಿನ್ನೆಲೆಯಲ್ಲಿ ಉಳ್ಳಾಲ ಠಾಣೆಗೆ ಬಿಜೆಪಿ ಮುಖಂಡರು ಹಾಗೂ ಹಿಂದು ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ ಸಂದರ್ಭ ಆಗ್ರಹ ವ್ಯಕ್ತವಾಯಿತು. ಉಳ್ಳಾಲ, ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ, ಕೊಲೆಯತ್ನ ಹಾಗೂ ಚೂರಿ ಇರಿತ ಪ್ರಕರಣಗಳ ಆರೋಪಿಗಳ ಪತ್ತೆ ಈವರೆಗೂ ಆಗಿಲ್ಲ. ಹಿಂದು ಸಮುದಾಯದ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದ್ದರೂ , ಪೊಲೀಸರು ಮಾತ್ರ ಆರೋಪಿಗಳ ಬಂಧನ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ. ಇಲ್ಲಿ ನಡೆಯುವ ಕೃತ್ಯಗಳು ಭಯೋತ್ಪಾದಕರ ಚಟುವಟಿಕೆಗಳಂತೆ ಕಾಣುತ್ತಿವೆ. ಇಲ್ಲವಾದಲ್ಲಿ ದುಷ್ಕರ್ಮಿಗಳಿಗೆ ಭಯೋತ್ಪಾಧಕ ನಂಟು ಇರುವುದು…

Read More

ಸೋಮೇಶ್ವರ: ಸಾವಿರಾರು ಜನರ ಭವಿಷ್ಯ ಮತ್ತು ಸಾವಿನ ಭವಿಷ್ಯ ಹೇಳಿ ರಾಜ್ಯಾದ್ಯಂತ ಖ್ಯಾತಿ ಗಳಿಸಿದ್ದ ಮೂಲತ: ಮಂಗಳೂರಿನ ಬಜಾಲ್ ನಿವಾಸಿ ಉಳ್ಳಾಲ ಸೋಮೇಶ್ವರದಲ್ಲಿ ನೆಲೆಸಿದ್ದ ಜೀವನ್ ವಿಜಯಾನಂದ ಗುರೂಜಿ (ವಿಜಯ)(47) ಮಂಗಳವಾರ ಬೆಳಿಗ್ಗೆ 11.00 ತೊಕ್ಕೊಟ್ಟು ಖಾಸಗಿ ಆಸ್ಪತ್ರೆ ನಿಧನ ಹೊಂದಿದ್ದಾರೆ. ದೀರ್ಘ ಕಾಲದ ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಚಿಕಿತ್ಸೆಗೆ ಸ್ಪಂಧಿಸದೆ ಸಾವನ್ನಪ್ಪಿದ್ದಾರೆ. ಗುರೂಜಿ ಪವಾಡಗಳ ಬಗ್ಗೆ ತಿಳಿದಿದ್ದ ರಾಜ್ಯದ ಜನ ಪ್ರತಿ ನಿತ್ಯ ನೂರಾರು ಸಂಖ್ಯೆಯಲ್ಲಿ ಗುರೂಜಿಯವರ ಸೋಮೇಶ್ವರದ ನಿವಾಸಕ್ಕೆ ಬರುತ್ತಿದ್ದರು. ಯಾವುದೇ ಫಲಾಪೇಕ್ಷೆಯೇ ಇಲ್ಲದೇ ಜನರ ಭವಿಷ್ಯ ನುಡಿಯುತ್ತಿದ್ದರು. ಪತ್ನಿ ಮತ್ತು ಮಕ್ಕಳಿದ್ದರೂ ಹತ್ತು ವರ್ಷಗಳ ಹಿಂದೆಯೇ ತನ್ನ ಕುಟುಂಬ ತ್ಯಜಿಸಿ ಸೋಮೇಶ್ವರಕ್ಕೆ ಬಂದಿದ್ದರು. ಈ ವೇಳೆ ಸ್ಮಶಾನದಲ್ಲಿ ಗುರೂಜಿಗೆ ವಿಶೇಷ ಶಕ್ತಿಯೊಂದು ಅವಾಹನೆಯಾದ ಪರಿಣಾಮ ಅವರು ಹೇಳುತ್ತಿದ್ದ ವಿಚಾರಗಳೆಲ್ಲಾ ನಿಜವಾಗುತಿತ್ತು. ಹೀಗಾಗಿ ಸುತ್ತಮುತ್ತಲಿನ ಜನ ಗುರೂಜಿ ಬಳಿ ಭವಿಷ್ಯ ಕೇಳಲು ಆರಂಭಿಸಿದ್ದರು. ಸುಮಾರು 78 ಮಂದಿಯ ಸಾವಿನ ದಿನಾಂಕವನ್ನು ನಿಖರವಾಗಿ ತಿಳಿಸಿದ್ದರು. ಕಳೆದ ಒಂದು ವಾರದಿಂದ ಆರೋಗ್ಯದಲ್ಲಿ…

Read More

ಉಳ್ಳಾಲ: ಸಮಸ್ತ ನಾಗರಿಕರ ಒಳಿತಿಗೆ ಈದ್ ಹಬ್ಬ ಪೂರಕವಾಗಿರಲಿ, ತ್ಯಾಗ ಬಲಿದಾನದ ಹಬ್ಬದ ಸಂದೇಶವನ್ನು ಎಲ್ಲೆಡೆ ಸಾರಿ ಐಕ್ಯತೆ ಜೀವಿಸುವ ವ್ಯವಸ್ಥೆ ನಮ್ಮದಾಗಲಿ ಎಂದು ದರ್ಗಾ ಅಧ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ ರವರು ನಾಡಿನ ಸರ್ವ ಜನತೆಗೆ ಈದ್ ಶುಭಹಾರೈಸಿದರು. ಸಚಿವರಾದ ಯು.ಟಿ ಖಾದರ್, ಖತೀಬರಾದ ಹಾಜಿ ಅಬ್ದುಲ್ ರವೂಫ್ ಮುಸ್ಲಿಯಾರ್, ದರ್ಗಾ ಉಪಾಧ್ಯಕ್ಷರಾದ ಯು.ಕೆ ಮೋನು, ಬಾವ ಮುಹಮ್ಮದ್, ಪ್ರದಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ ಹಾಜಿ, ಅಡಿಟರ್ ಯು.ಟಿ ಇಲ್ಯಾಸ್ ತೋಟ, ಕೋಶಾಧಿಕಾರಿ ಯು.ಕೆ ಇಲ್ಯಾಸ್ ಬಸ್ತಿಪಡ್ಪು, ಜತೆ ಕಾರ್ಯದರ್ಶಿ ನೌಷಾದ್ ಮೇಲಂಗಡಿ, ಆಝಾದ್ ಇಸ್ಮಾಯೀಲ್, ಸದಸ್ಯರಾದ ಫಾರೂಕ್ ಉಳ್ಳಾಲ್, ಆಸಿಫ್ ಅಬ್ದುಲ್ಲ, ಮುಹಮ್ಮದ್ ಹಾಜಿ, ಮುಸ್ತಫ ಮಂಚಿಲ, ಯು.ಕೆ ಮುಹಮ್ಮದ್ ಮುಸ್ತಫ, ಅಲಿ ಮೋನು, ಅಬೂಬಕ್ಕರ್ ಅಲಿನಗರ, ಮಯ್ಯದ್ದಿ ಕೋಡಿ, ಮೊಯ್ದಿನಬ್ಬ ಉಳ್ಳಾಲಬೈಲು ಬೊಟ್ಟು, ಇಬ್ರಾಹೀಮ್ ಹಾಜಿ ಉಳ್ಳಾಲ ಬೈಲು, ಹಮಿದ್ ಕೋಡಿ ಉಳ್ಳಾಲ ನಗರಸಭೆ ಅಧ್ಯಕ್ಷ ಕುಂಞÂಮೋನು, ಮಾಜಿ ಪುರಸಭಾಧ್ಯಕ್ಷ ಬಾಝಿಲ್ ಡಿಸೋಜ ನಗರ ಸಭೆ ಸದಸ್ಯರಾದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೂರಲ್ಪಾಡಿಯಲ್ಲಿ ಪತ್ರಕರ್ತರ ಮೇಲೆ ನಡೆದ ಅಮಾನವೀಯ ದಾಳಿಯ ಬಗ್ಗೆ ಪ್ರತ್ಯಕ್ಷ ದರ್ಶಿ ಬರಹ ಭರತ್ ರಾಜ್ ವರದಿಗಾರ, ಬಿಟಿವಿ ನ್ಯೂಸ್, ಮಂಗಳೂರು ಪತ್ರಕರ್ತನಾಗಿ ಆರು ವರ್ಷಗಳಲ್ಲಿ ಈವರೆಗೆ ಯಾರ ವಿರುದ್ದವೂ ಪೊಲೀಸ್ ಠಾಣೆಗೆ ದೂರು ಕೊಟ್ಟವನಲ್ಲ. ಸುದ್ದಿ ಮಾಡಲು ಹೋದಾಗ ಮತ್ತು ಸುದ್ದಿ ಮಾಡಿದ ನಂತರ ಅಷ್ಟೂ ಆತಂಕಗಳನ್ನು ಸಹಜ ಎಂಬಂತೆ ಎದುರಿಸಿದ್ದೆ. ಆದರೆ ಇವತ್ತು ಮಾತ್ರ ಅಂತಿಮವಾಗಿ `ಅವರ’ ವಿರುದ್ದ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಕೊನೆಗೂ ಪೊಲೀಸರು ಕೂಡ ಪ್ರಕರಣ ದಾಖಲಿಸಿದ್ದಾರೆ. ಮುಂದಿನದ್ದು ಕಾನೂನು ಹೋರಾಟವಷ್ಟೇ. ಹೌದು, ನಿನ್ನೆ ಸೂರಲ್ಪಾಡಿ ಮಸೀದಿಯಲ್ಲಿ ಪತ್ರಕರ್ತರ ಮೇಲೆ ನಡೆದ ಹಲ್ಲೆ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನನಗೆ ಮತ್ತು ನನ್ನ ಮಿತ್ರರಿಗೆ ದೂರು ನೀಡುವುದು ಅನಿವಾರ್ಯವಾಗಿತ್ತು. ಈ ಹಿಂದೆ ಎಲ್ಲಾ ಆತಂಕಗಳನ್ನು ಸಹಜ ಎಂಬಂತೆ ಎದುರಿಸಿದ್ದ ನನ್ನನ್ನು ಸೂರಲ್ಪಾಡಿ ಘಟನೆ ಮಾತ್ರ ಕೊನೆಗೂ ಪೊಲೀಸ್ ದೂರು ನೀಡುವಷ್ಟರ ಮಟ್ಟಿಗೆ ತಂದು ನಿಲ್ಲಿಸಿದೆ. ಅಷ್ಟರ ಮಟ್ಟಿಗೆ…

Read More