Author: UllalaVani

Kannada News From Coastal Karnataka

ತೊಕ್ಕೊಟ್ಟು: ಬಸ್ಸುಗಳೆರಡರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬಾಲಕಿಯರು ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಬಸ್ಸು ನಿಲ್ದಾಣದ ಸಮೀಪ ಸೋಮವಾರ ಸಂಜೆ ವೇಳೆ ಸಂಭವಿಸಿದೆ. ಉಳ್ಳಾಲ ಕಡೆಗೆ ತೆರಳುತ್ತಿದ್ದ ಚೈತನ್ಯಾ ಮತ್ತು ರಿಹಾನಾ ಎಂಬವರು ಗಾಯಗೊಂಡಿದ್ದಾರೆ. ಘಟನೆಯ ವಿವರ ಮಂಗಳೂರಿನಿಂದ ಉಳ್ಳಾಲ ಕಡೆಗೆ ತೆರಳುತ್ತಿದ್ದ ಸಿಟಿ ಬಸ್ ಹಾಗೂ ಬಿ.ಸಿ.ರೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸರ್ವಿಸ್ ಬಸ್ಸುಗಳೆರಡರ ಮಧ್ಯೆ ಅಪಘಾತ ಸಂಭವಿಸಿದೆ. ಟೈಮಿಂಗ್ ವಿಚಾರದಲ್ಲಿ ಮಂಗಳೂರಿನಿಂದಲೇ ಅಡ್ಡಾದಿಡ್ಡಿಯಾಗಿ ಬಸ್ಸನ್ನು ಚಲಾಯಿಸಿದ ಉಳ್ಳಾಲದ ಸಿಟಿ ಬಸ್ಸಿನ ಚಾಲಕ ಏಕಾಏಕಿ ತೊಕ್ಕೊಟ್ಟು ಕೇಂದ್ರ ಬಸ್ಸ್ ನಿಲ್ದಾಣದಿಂದ ರಸ್ತೆಗೆ ತರುವ ಸಂದರ್ಭದಲ್ಲಿ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಜಿಲ್ಲಾಡಳಿತ ಮರಳು ಮಾಫಿಯಾದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕಾನೂನು ಬದ್ಧವಾಗಿ ಸಾಂಪ್ರದಾಯಿಕ ಮರಳು ತೆಗೆಯಲು ಅನುಮತಿ ನೀಡಿ ಕಟ್ಟಡ ಕಾರ್ಮಿಕರಿಗೆ ಉದ್ಯೋಗ ಸಿಗುವಂತೆ ಮಾಡಬೇಕು ಎಂದು ಸಿಐಟಿಯು ಜಿಲ್ಲಾ ಸಮಿತಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಹೇಳಿದ್ದಾರೆ. ಅವರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್‍ನ ಉಳ್ಳಾಲ ಸಮಿತಿ ಆಶ್ರಯದಲ್ಲಿ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಸೋಮವಾರ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಳೆದ ಒಂದು ತಿಂಗಳಿನಿಂದ ಮರಳು ತೆಗೆಯಲು ತಾತ್ಕಾಲಿಕ ನಿಷೇಧ ಹೇರಿದ ಜಿಲ್ಲಾಡಳಿತದ ಕ್ರಮದಿಂದ ಮರಳಿನ ಅಭಾವ ಉಂಟಾಗಿದ. ಇದರಿಂದ ಕಟ್ಟಡ ಕಾರ್ಮಿಕರು ನಿರುದ್ಯೋಗಿಗಳಾಗಿ ಅಭದ್ರತೆಯಲ್ಲಿದ್ದಾರೆ. ಇದರಿಂದ ಅವರ ಮಕ್ಕಳ ವಿದ್ಯಾಭ್ಯಾಸ , ಕುಟುಂಬ ನಿರ್ವಹಣೆಯೂ ಅಸಾಧ್ಯವಾಗಿದೆ. ಕೂಡಲೇ ಜಿಲ್ಲಾಡಳಿತ ಮರಳು ಮಾಫಿಯಾ ವಿರುದ್ಧ ಕ್ರಮಕೈಗೊಂಡು ಸಾಂಪ್ರದಾಯಿಕ ಮರಳು ತೆಗೆಯಲು ಅವಕಾಶ ಕಲ್ಪಿಸದೇ ಇದ್ದಲ್ಲಿ, ಕೂಲಿ ಕಾರ್ಮಿಕರ ಕುಟುಂಬ ಹಸಿವಿನಿಂದ ಸಾಯುವ ಸ್ಥಿತಿ ಎದುರಾಗಬಹುದು ಎಂದರು. ಸಿಐಟಿಯು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಹೆಣ್ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದರ ಜತೆಗೆ ಶಿಕ್ಷಣ ಹಾಗೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಕೀರ್ತಿಯನ್ನು ಗಳಿಸಿದಂತಹ ಕಣಚೂರು ಸಂಸ್ಥೆಯ ಸ್ಥಾಪಕರ ಕಾರ್ಯ ಶ್ಲಾಘನೀಯ ಎಂದು ಕಣ್ಣೂರು ಮತ್ತು ಕಲ್ಲಿಕೋಟೆ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಡಾ.ಎಂ.ಅಬ್ದುಲ್ ರೆಹಮಾನ್ ಹೇಳಿದ್ದಾರೆ. ಅವರು ದೇರಳಕಟ್ಟೆಯ ಕಣಚೂರು ಇನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ಕಣಚೂರು ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್ ಇದರ ಜಂಟಿ ಆಶ್ರಯದಲ್ಲಿ ಸೋಮವಾರ ಕಣಚೂರು ಅಕಾಡೆಮಿಕ್ ಹಾಲ್ ನಲ್ಲಿ ಜರಗಿದ ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಸ್ಥಾಪಕ ಯು.ಕಣಚೂರು ಮೋನು ಅವರನ್ನು ಸನ್ಮಾನಿಸಿ ಮಾತನಾಡಿದರು. ಉದ್ಯಮಿಗಳು ಶಿಕ್ಷಣ ಕ್ಷೇತ್ರದಲ್ಲಿ ಅಪರೂಪವಾಗಿ ತೊಡಗಿಸಿಕೊಳ್ಳುತ್ತಾರೆ. ಆದರೆ ಕಣಚೂರು ಮೋನು ಅವರು ಉದ್ಯಮ ಕ್ಷೇತ್ರದ ಜತೆಗೆ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡು ವಿಶೇಷವಾಗಿ ಹೆಣ್ಮಕ್ಕಳನ್ನು ಶಿಕ್ಷಿತರನ್ನಾಗಿಸುವ ಕಾರ್ಯ ಕೈಗೊಂಡಿರುವುದು ಉತ್ತಮ ಸಾಧನೆ ಎಂದರು. ಕಣಚೂರು ಆಸ್ಪತ್ರೆಯ ಅನಾಟೆಮಿ ವಿಭಾಗ ಮುಖ್ಯಸ್ಥ ಡಾ.ಅರುಣಾಚಲಂ ಕುಮಾರ್, ಮಂಗಳೂರಿನ ಫಿಸಿಷಿಯನ್ ಡಾ.ಮಹಮ್ಮದ್ ಇಸ್ಮಾಯಿಲ್, ಕಣಚೂರು ಸಂಸ್ಥೆಗಳ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ವಿಶ್ವ ಹಿಂದು ಪರಿಷತ್ ಗೋ ಸಂರಕ್ಷಣಾ ಸಮಿತಿ ವತಿಯಿಂದ ಇಂದು ಮಂಗಳೂರಿನಲ್ಲಿ ನಡೆಯಲಿರುವ  `ಗೋ ಸಂರಕ್ಷಣೆಯ ಬಗ್ಗೆ ಜಾಗೃತಿ ಜಾಥಾ’  ದಲ್ಲಿ ಪಾಲ್ಗೊಳ್ಳಲು  ಉಳ್ಳಾಲ, ತಲಪಾಡಿ, ಕೋಟೆಕಾರು, ಕೊಣಾಜೆ, ಮುಡಿಪು ಭಾಗದ ಹಿಂದು ಸಂಘಟನೆ ಕಾರ್ಯಕರ್ತರು ತಲಪಾಡಿಯಿಂದ  ಮಂಗಳೂರಿಗೆ  ಸಹಸ್ರ ಸಂಖ್ಯೆಯಲ್ಲಿ ರ್ಯಾಲಿ ಮುಖೇನ ತೆರಳಿದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಪ್ರವಾಸಿ ದೇರಳಕಟ್ಟೆ ಇದರ ಆಶ್ರಯದಲ್ಲಿ ರಂಜಾನ್ ಪ್ರಯುಕ್ತ ನಾಟೆಕಲಿನಲ್ಲಿ ಕಾರ್ಯಾಚರಿಸುತ್ತಿರುವ ಮುಸ್ಲಿಂ ವಸತಿ ಶಾಲೆಯ ಮಕ್ಕಳೊಂದಿಗೆ ಇಫ್ತಾರ್ ಕೂಟವನ್ನು ಶನಿವಾರ ಸಂಜೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹಸನಬ್ಬ ಮಾತನಾಡಿ ಆಥಿ೯ಕವಾಗಿ ಹಿಂದುಳಿದವರನ್ನು ಹುಡುಕಿ ಅವರಿಗೆ ನೆರವು ನೀಡುವ ಈ ಸಂಘಟನೆಯ ಆಸೆಗಳೆಲ್ಲವೂ ನೆರವೇರಲಿ ಇನ್ನು ಹೆಚ್ಚು ಒಳ್ಳೆಯ ಕೆಲಸ ಮಾಡಲು ಅನುಗ್ರಹಿಸಲಿ ಎಂದು ಪ್ರಾಥಿ೯ಸಿದರು. ಅಶ್ರಫ್ ದೇರಳಕಟ್ಟೆ ರಂಜಾನ್ ಸಂದೇಶ ನೀಡಿ ಈ ಕೇಂದ್ರದಲ್ಲಿ ನಾವು ಈವರೆಗೆ ಕಾಣದ ಸಂತೋಷವನ್ನು ಕಂಡಿದ್ದೇವೆ. ಇವರ ಸಹಾಯಕ್ಕೆ ಕೈಚಾಚುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿ ಮನುಷ್ಯ ಹುಟ್ಟಿ ಬೆಳೆವ ಸಂದರ್ಭದಲ್ಲಿ ತನಗಾಗಿ ಗಳಿಸಿದ ಒಂದು ಅಂಶವನ್ನು ಇಂತಹ ಬಡವರಿಗೆ ನೀಡಿದರೆ ದೇವರ ಅನುಗ್ರಹಕ್ಕೆ ಪಾತ್ರನಾಗುತ್ತಾನೆ ಆಗ ಅವನ ಜೀವನ ಸಾರ್ಥಕವಾಗುತ್ತದೆ ಎಂದರು. ಮಗ್ರಿಬ್ ನಮಾಜಿನ ಬಳಿಕ ವಿಶೇಷ ಬೋಜನದ ವ್ಯೆವಸ್ಥೆ ಮಾಡಲಾಗಿತ್ತು ಕಾಯ೯ಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಹಂಝ ದೇರಳಕಟ್ಟೆ, ಕಬೀರ್ ದೇರಳಕಟ್ಟೆ, ಮುತ್ತಲಿಬ್ ದೇರಳಕಟ್ಟೆ, ಅನ್ವರ್ ಮತ್ತು ಶಾಹುಲ್ ಹಮೀದ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಎಸ್ ಎಸ್ ಎಫ್ ತೊಕ್ಕೊಟ್ಟು ಸೆಕ್ಟರ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪಟ್ಲ ಶಾಖೆ ವತಿಯಿಂದ ರಂಝಾನ್ ಪ್ರಯುಕ್ತ ಪಟ್ಲ ಮಸೀದಿಯಲ್ಲಿ ಇಫ್ತಾರ್ ಕೂಟ ಹಾಗೂ ಜುಮಾ ಮಸೀದಿಗೆ ರೂ.55,000 ಮೊತ್ತದ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಲಾಯಿತು. ಜಮಲುಲೈಲ್ ತಂಙಳ್ ನೀರಿನ ವ್ಯವಸ್ಥೆಗೆ ಚಾಲನೆ ನೀಡಿ ದುಆ ನೆರವೇರಿಸಿದರು. ಈ ಸಂದರ್ಭ ಸೆಕ್ಟರ್ ಉಪಾಧ್ಯಕ್ಷ ಅಲ್ತಾಫ್ ಕುಂಪಲ, ಕೋಶಾಧಿಕಾರಿ ಸಮೀರ್ ಸೇವಂತಿಗುಡ್ಡೆ, ಕಾರ್ಯದರ್ಶಿ ಜುನೈದ್ ಪಟ್ಲ, ಶಾಖಾ ಅಧ್ಯಕ್ಷ ಶಫೀಕ್ ಅಹ್ಸನಿ, ಪಟ್ಲ ಖತೀಬ್ ಎಂ.ಸಿ.ಮಹಮ್ಮದ್ ಫೈಝಿ ಉಪಸ್ಥಿತರಿದ್ದರು

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಔಷಧಿ ಗಿಡಗಳ ವನವನ್ನು ನಿರ್ಮಿಸಲು ಸರಕಾರ ಚಿಂತನೆ ನಡೆಸಿದ್ದು, ಇದು ಆಯುರ್ವೇದದಲ್ಲಿ ನಾಟಿ ವೈದ್ಯರ ಅನುಕೂಲಕ್ಕಾಗಿ ನಡೆಸುತ್ತಿರುವ ಪ್ರಕ್ರಿಯೆ ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಕ್ಯಾಂಪಸ್‍ನಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಕೃತಿಯಿಂದ ಸಿಗುವ ಔಷಧ ಹಲವು ರೋಗಗಳಿಗೆ ರಾವiಬಾಣ. ಹಿರಿಯರು ನಾಟಿ ಮದ್ದು ತಯಾರಿಸಿ ಹಲವು ರೋಗಗಳನ್ನು ಗುಣಪಡಿಸುತ್ತಿದ್ದರು. ಇಂತಹ ಔಷಧೀಯ ಗಿಡಗಳನ್ನು ಅನುವಂಶಿಕವಾಗಿ ಉಳಿಸುವ ಪ್ರಯತ್ನ ಕಿರಿಯರಿಂದ ಆಗಬೇಕಿದೆ. ಆಯುರ್ವೇದ ಔಷಧಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ಈಗಾಗಲೇ ಕೋಟಿ ಚೆನ್ನಯ್ಯರ ಜನ್ಮಭೂಮಿ ಪಡುಮಲೆಯಲ್ಲಿ ದೇವಿ ಬೈದೇವಿ ಹೆಸರಿನ ಹಾಗೂ ಪಿಲಿಕುಳದಲ್ಲಿ ಔಷಧಿ ವನವನ್ನು ಸ್ಥಾಪಿಸಲಾಗಿದೆ. ಔಷಧಿ ಗಿಡಗಳ ಪರಿಚಯ ಹೊಸ ಪೀಳಿಗೆಗೆ ಆಗಬೇಕಿದೆ. ಈ ನಿಟ್ಟಿನಲ್ಲಿ ಆಲೋಪತಿ ಔಷಧಿ ಕೊಡುವ ಕೇಂದ್ರ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಆಯುರ್ವೇದ ಗಿಡಗಳನ್ನು…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ : ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಯಾವುದನ್ನು ಸಾಧಿಸಬಹುದು ಎನ್ನುವುದಕ್ಕೆ ಸೋಮೇಶ್ವರ ಗ್ರಾಮ ಪಂಚಾಯತ್ ಸಾಕ್ಷಿಯಾಗಿದ್ದು, ಬಿಜೆಪಿ ಆಡಳಿತವಿರುವ ಈ ಪಂಚಾಯತ್ ನಲ್ಲಿ ಪ್ರತೀ ಚುನಾವಣೆ ನಡೆಯುವಾಗ ಹೆಚ್ಚು ಹೆಚ್ಚು ಸದಸ್ಯರನ್ನು ಆಯ್ಕೆ ಮಾಡಿರುವ ಹೆಗ್ಗಳಿಕೆಯನ್ನು ಹೊಂದಿದೆ ಎಂದು ಜಿಲ್ಲಾ ಪಂಚಾಯತ್ ಉಪಾದ್ಯಕ್ಷ ಸತೀಶ್ ಕುಂಪಲ ಅಭಿಪ್ರಾಯಪಟ್ಟರು. ಅವರು ಕೋಟೆಕಾರಿನ ನೂರ್ ಮಹಲ್ ನಲ್ಲಿ ಸೋಮೇಶ್ವರ ಗ್ರಾಮ ಪಂಚಾಯತ್ ನ ವಿಜೇತ ಸದಸ್ಯರಿಗೆ ಮತ್ತು ಚುನಾವಣಾ ಸಂದರ್ಭದಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಅಭಿನಂದನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಯಾವುದೇ ಗ್ರಾಮ ಪಂಚಾಯತ್ ನಲ್ಲಿ ಅಕಾರದಲ್ಲಿರುವ ಪಕ್ಷದ ವಿರುದ್ಧ ಜನರು ಮತ ಚಲಾಯಿಸುವುದು ಸಾಮಾನ್ಯ ಆದರೆ ಸೋಮೇಶ್ವರ ಗ್ರಾಮ ಪಂಚಾಯತ್ ನಲ್ಲಿ ಕಳೆದ 1997ರಿಂದ ಭಾರತೀಯ ಜನತಾ ಪಕ್ಷದ ಆಡಳಿತದ್ದು, ಪ್ರತೀ ಬಾರಿಯೂ ಹೆಚ್ಚು ಸದಸ್ಯರನ್ನು ಜನರು ಆಯ್ಕೆ ಮಾಡಿದ್ದಾರೆ.ಈ ಬಾರಿ ಬಿಜೆಪಿ ಇತಿಹಾಸ ನಿರ್ಮಿಸಿದ್ದು, ಗರಿಷ್ಠ 45 ಸದಸ್ಯರು ಆಯ್ಕೆಯಾಗುವ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಇತ್ತೀಚೆಗೆ ಕಾಡುಗಳನ್ನು ನಾಶ ಮಾಡಿ ಕಾಂಕ್ರೀಟು ಕಟ್ಟಡಗಳೇ ಹೆಚ್ಚುತ್ತಿವೆ. ಅಲ್ಲದೆ ಪರಿಸರದ ಮೇಲೆ ನಾವು ಒಂದಲ್ಲ ಒಂದು ರೀತಿಯಲ್ಲಿ ಹಾನಿಯನ್ನು ಮಾಡುತ್ತಿದ್ದೇವೆ. ಇನ್ನಾದರೂ ನಾವು ಎಚ್ಚೆತ್ತುಕೊಂಡು ಪರಿಸರದ ಮಹತ್ವವನ್ನು ಅರಿತುಕೊಂಡು ವನಮಹೋತ್ಸವದಂತಹ ಕಾರ್ಯಕ್ರಮದ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕು ಎಂದು ಗೃಹ ರಕ್ಷಕ ದಳದ ಕಮಾಡೆಂಟ್ ಡಾ.ಮುರಲೀ ಮೋಹನ ಚೂಂತಾರು ಸಲಹೆ ನೀಡಿದರು. ಅವರು ಶ್ರೀ ನಾಗಬ್ರಹ್ಮ ಭಜನಾ ಮಂಡಲಿ ಪಟ್ಟೋರಿ ಹಾಗೂ ನಿಟ್ಟೆ ವಿವಿಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಕೊಣಾಜೆ ಗ್ರಾಮದ ಪಟ್ಟೋರಿಯಲ್ಲಿ ಭಾನುವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪರಿಸರಕ್ಕೆ ಮಾರಕವಾಗುವ ಯಾವುದೇ ಕಾರ್ಯಯೋಜನೆಗಳನ್ನು ನಾವು ಒಗ್ಗಟ್ಟಿನಿಂದ ತಡೆಗಟ್ಟಿ ಹೆಚ್ಚೆಚ್ಚು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯಲ್ಲಿ ನಾವು ತೊಡಗಿಕೊಳ್ಳಬೇಕು ಮತ್ತು ಈ ನಿಟ್ಟಿನಲ್ಲಿ ಎಲ್ಲರಲ್ಲೂ ಜಾಗೃತ ಭಾವನೆ ಮೂಡುವಂತೆ ಮಾಡಬೇಕು ಎಂದು ಹೇಳಿದರು. ಕೊಣಾಜೆ ಬೀಡಿನ ತಿರುಮಲೇಶ್ವರ ಭಟ್ ಹಾಗೂ ಹಿರಿಯರಾದ ರಘುರಾಮ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ಒಂದೆಡೆ ಕಂಬಳ ಕೋಣಗಳ ಓಟ, ಇನ್ನೊಂದೆಡೆ ಮಕ್ಕಳು ಸೇರಿದಂತೆ ಯುವಕ ಯುವತಿಯರು, ಹಿರಿಯರು ಯಾವುದೇ ಬೇಧವಿಲ್ಲದೆ, ಕೆಸರು ಗದ್ದೆಯಲ್ಲಿ ಕಂಬಳದ ಕೋಣಗಳಿಗೆ ಸರಿಸಾಟಿಯೆಂಬತೆ ಓಟ, ತೆಂಗಿನ ಗರಿಗಳಲ್ಲಿ ಕುಳ್ಳಿರಿಸಿ ಎಳೆಯುವ ದೃಶ್ಯ, ಹೆಗಲ ಮೇಲೆ ಒಬ್ಬರನ್ನೊಬ್ಬರು ಕುಳ್ಳಿರಿಸಿ ಗುರಿ ಮುಟ್ಟುವ ಧಾವಂತ, ಓಡುವ ಭರದಲ್ಲಿ ಕೆಸರಲ್ಲಿ ಮುಳುಗಿ ಏಳುವ ದೃಶ್ಯ , ಇನ್ನೊಂದೆಡೆ ತೋಳು ಬಲ ಪ್ರದರ್ಶನದ ಹಗ್ಗ ಜಗ್ಗಾಟ, ಮಹಿಳೆಯರ ನಾಟಿ ಸಂದರ್ಭದಲ್ಲಿ ಹೇಳು ಪಾಡ್ದನಗಳ ನಡುವೆ ಧ್ವನಿ ವರ್ಧಕದಲ್ಲಿ ಕಾರ್ಯಕ್ರಮ ಸಂಯೋಜಕರ ಹುರಿದುಂಬಿಸುವ ಮಾತುಗಳು ಇದು ತಲಪಾಡಿ ದುರ್ಗಾ ಪರಮೇಶ್ವರೀ ದೇವಸ್ಥಾನದ ಮುಂಭಾಗದ ಬಾಕಿಮಾರು ಗದ್ದೆಯಲ್ಲಿ ಭಾನುವಾರ ಕಂಡು ಬಂದ ದೃಶ್ಯ. ದೇವೆರೆ ಬಾಕಿಲ್ದ ಕಂಡಡೊಂಜಿ ದಿನ ಗ್ರಾಮೀಣ ಕ್ರೀಡಾಕೂಟದಲ್ಲಿ ಹಿರಿಯರು ಕಿರಿಯರು ಎನ್ನದೆ ದಿನವಿಡೀ ಕಿನ್ಯ, ಕೋಟೆಕಾರು, ತಲಪಾಡಿ ಗ್ರಾಮಗಳ ಜನರು ಕೆಸರಲ್ಲಿ ಮಿಂದೆದ್ದು ಸಂತಸಗೊಂಡರು. ಬೆಳಗ್ಗಿನಿಂದ ಪ್ರಾರಂಭಗೊಂಡಿದ್ದ ಕಾರ್ಯಕ್ರಮ ಸಂಜೆವರೆಗೂ ಮುಂದುವರೆದಿತ್ತು. ಸಾವಿರಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.…

Read More