Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ತ್ಯಾಜ್ಯ ನೀರು ರಸ್ತೆಗೆ ಬಿಡುವುದರ ವಿರುದ್ಧ ದಾಳಿ ನಡೆಸಿದ ಉಳ್ಳಾಲ ನಗರಸಭೆ ಅಧಿಕಾರಿಗಳು ಕಾರು ಮಾರಾಟ ಮಳಿಗೆ ಹಾಗೂ ಬಾರ್ ಮಾಲೀಕರಿಗೆ ನೋಟೀಸು ಮಾಡಿದ ಘಟನೆ ತೊಕ್ಕೊಟ್ಟು ಕಾಪಿಕಾಡು ಬಳಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡು ಬಳಿ ಇರುವ ವಾಹನ ಮಾರಾಟ ಮಳಿಗೆ ಹಾಗೂ ಬಾರ್ ಆಂಡ್ ರೆಸ್ಟೋರೆಂಟೊಂದಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾರಿನಿಂದ ಬರುವ ತ್ಯಾಜ್ಯಯುಕ್ತ ನೀರನ್ನು ರಸ್ತೆ ಸಮೀಪವೇ ಹರಿಯಲು ಬಿಡುತ್ತಿದ್ದಾರೆ. ಇದರಿಂದ ಸ್ಥಳದಲ್ಲಿ ವಾಸನೆಯುಕ್ತ ವಾತಾವರಣ ನಿರ್ಮಾಣ ಆಗಿದೆ. ಈ ಭಾಗದಲ್ಲಿ ದೇವಸ್ಥಾನ , ೧೦೦ ರಷ್ಟು ಮನೆಗಳಿದ್ದು, ಹಲವು ಬಾರಿ ಬಾರ್ ಮಾಲೀಕರಿಗೆ ಮತ್ತು ಷೋರೂಂ ಪ್ರಬಂಧಕರಿಗೆ ಹೇಳಿದ್ದರೂ, ಪ್ರಯೋಜನವಾಗಿಲ್ಲ ಅನ್ನುವ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಅದರಂತೆ ನಗರಸಭೆ ಅಧಿಕಾರಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ರೂಪಾ.ಟಿ.ಶೆಟ್ಟಿ, ನಗರಸಭೆ ಅಧ್ಯಕ್ಷೆ ಗಿರಿಜಾ ಬಾ ಹಾಗೂ ನಗರಸಭೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟವರಿಗೆ ನೋಟೀಸು ನೀಡಿ ಎಚ್ಚರಿಕೆ ನೀಡಿದರು. ಅಲ್ಲದೆ…

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ; ಪಜೀರು ಮೆರ್ಸಿಯಮ್ಮನವರ ಚರ್ಚ್‌ನಲ್ಲಿ ೭ ವರ್ಷಗಳಿಂದ ಧರ್ಮಗುರುಗಳಾಗಿ ಸೇವೆ ಸಲ್ಲಿಸಿ, ನೂತನ ಚರ್ಚ್ ಕಟ್ಟಡ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡು ಇದೀಗ ಉರ್ವ ಚರ್ಚ್‌ಗೆ ವರ್ಗಾವಣೆಗೊಂಡಿರುವ ರೆ. ಫಾ. ಸ್ಯ್ಟಾನಿ ಪಿರೇರಾ ರವರಿಗೆ ಬೀಳ್ಕೊಡುಗೆ ಸಮಾರಂಭ ಆಡಳಿತ ಮಂಡಳಿಯ ನೇತೃತ್ವದಲ್ಲಿ ಚರ್ಚ್‌ನಲ್ಲಿ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಚರ್ಚ್ ಆರ್ಥಿಕ ಸಮಿತಿ ಸದಸ್ಯರುಗಳಾದ ಜಾನ್ ಸಲ್ದಾನ, ಜಾನ್ ವಿಕ್ಟರ್ ಮೆಂಡೊನ್ಸಾ, ನಿಕೊಲಾಸ್ ನೊರೊನ್ಹಾ, ಫೆಲಿಕ್ಸ್ ಟೆಲ್ಲಿಸ್, ಮ್ಯಾಕ್ಸಿಮ್ ಫೆರ್ನಾಂಡಿಸ್, ರಿಚರ್ಡ್ ಡಿಸೋಜ, ಸಂತೋಷ್ ಡಿಸೋಜ, ವಿಲ್ಸನ್ ಲೋಬೊ, ಪಾವ್ಲ್ ಡಿಸೋಜ, ಹಾಗೂ ಫಾ. ಜೋಕಿಂ ಬ್ರಾಕ್ಸ್, ಸಿಸ್ಟರ್ ಅನ್ನಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಕ್ಟರ್ ಮೊಂತೇರೊ ಸ್ವಾಗತಿಸಿದರು. ರೋಶನ್ ಡಿಸೋಜ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ಫೆಲಿಕ್ಸ್ ಮೊಂತೆರೊ ವಂದಿಸಿದರು. ವಿನ್ಸೆಂಟ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ವರದಿ: ಪ್ರೀತಮ್ ಪಜೀರು

Read More

ಉಳ್ಳಾಲ್‌ನ್ಯೂಸ್ ಡೆಸ್ಕ್ ಉಳ್ಳಾಲ : ಶಿಕ್ಷಣ ಸಂಸ್ಥೆಯ  ಹಿರಿಯ ಶಿಕ್ಷಕರು ನಿವೃತ್ತಿಯಾದಾಗ  ಸಂಸ್ಥೆಗೆ ಅದು ತಂಬಲಾರದ ನಷ್ಟ ಆದರೆ ಸಂಸ್ಥೆಯಿಂದ ಸೇವಾ ನಿವೃತ್ತಿ ಮಾತ್ರ ಆವರ ಮಾರ್ಗದರ್ಶನ ಸಂಸ್ಥೆಗೆ ಮುಂದೆಯೂ ಲಭಿಸಲಿ ಎಂದು ಉಳ್ಳಾಲ ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಯು.ಎಸ್.ಹಂಝ ಅಭಿಪ್ರಾಯಪಟ್ಟರು.  ಮದನಿ ಪದವಿಪೂರ್ವ ಕಾಲೇಜು ಅಳೇಕಲ ಉಳ್ಳಾಲ ಇಲ್ಲಿನ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ನಿವೃತ್ತರಾದ ಆನಂದ ಕೆ.ಆಸೈಗೋಳಿ, ಚಿತ್ರಕಲಾ ಶಿಕ್ಷಕರಾಗಿ ನಿವೃತ್ತರಾದ ಕೇಶವ ನಂಬೀಶ ಎಂ. ಶಿಕ್ಷಕೇತರ ಸಿಬ್ಬಂದಿ ಸೀದಿಯಬ್ಬ ಅವರ ವಿದಾಯಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿವೃತ್ತಿಯಾದ ಶಿಕ್ಷಕರು ಸದಾ ಕ್ರಿಯಾಶೀಲರಾಗಿರುವವರು. ಅವರು ಮುಂದಿನ ನಿವೃತ್ತ ಜೀವನದಲ್ಲೂ ಇದೇ ಕ್ರಿಯಾಶೀಲತೆಯನ್ನು ಮುಂದುವರೆಸಿಕೊಂಡುಹೋಗುತ್ತಾರೆ ಎನ್ನವ ಭರವಸೆ ಇದೆ ಎಂದ ಅವರು ನಿವೃತ್ತಿಯಾದವರ ಜೀವನ ಸುಖಕರವಾಗಲಿ ಎಂದರು. ಕಾರ್ಯಕ್ರಮದಲ್ಲಿ ಮದನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಎಚ್.ಹಮೀದ್, ಪ್ರಾಥಮಿಕ ಶಾಲ ಸಂಚಾಲಕ ಯು.ಎಂ. ಇಬ್ರಾಹಿಂ, ಸದಸ್ಯ ತಾಹಿರ್ ತಂಙಳ್, ಉಳ್ಳಾಲ ಪುರಸಭಾ ಮಾಜಿ ಆಧ್ಯಕ್ಷ ಯು.ಎ.ಇಸ್ಮಾಯಿಲ್, ಶಿಕ್ಷಣ ಸಂಸ್ಥೆಯ ಕೋಶಾಽಕಾರಿ…

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ: ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಗಳಿಗೆ ನೀಡುವ ಸಹಕಾರ ಅದು ಕೇವಲ ಪುಸ್ತಕದ ರೂಪ ಅಲ್ಲ. ಇಲ್ಲಿನ ಸಮಾಜದ ಎಲ್ಲರ ಶ್ರಮದ ಫಲ ಅದರಲ್ಲಿದ್ದು, ಈ ಸಹಕಾರವನ್ನು ಸದ್ವಿನಿಯೋಗ ಮಾಡುವುದರೊಂದಿಗೆ ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿ ಉನ್ನತ ಸ್ಥಾನಕ್ಕೇರುವ ದೊಡ್ಡದೊಂದು ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ವಿಶ್ವಾಸ್ ಕ್ಯಾಟರಿಂಗ್ನ ಮಾಲಕ ಹಾಗೂ ರೋಟರಿ ಸಂಸ್ಥೆಯ ಸತೀಶ್ ಬೋಳಾರ್ ಅಭಿಪ್ರಾಯಪಟ್ಟರು. ಅವರು ಕೊಲ್ಯ ಸೋಮೇಶ್ವರದ ಬ್ರಹ್ಮ ಶ್ರೀ ನಾರಾಯಣಗುರು ಸಭಾ ಮಂದಿರದಲ್ಲಿ ಭಾನುವಾರ ಬಿಲ್ಲವ ಸೇವಾ ಸಮಾಜ ಕೊಲ್ಯ ಸೋಮೇಶ್ವರ ಇದರ ೩೭ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಏಕೀಕರಣ ಸಮಿತಿ ಮಂಗಳೂರು ಇದರ ಅಧ್ಯಕ್ಷ ರವಿ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಗೋಕರ್ಣನಾಥ ಕೋ- ಅಪರೇಟಿವ್ ಬ್ಯಾಂಕ್ ಲಿ. ಮಂಗಳೂರು ಇದರ ಉಪಾಧ್ಯಕ್ಷ ರಾಜೇಶ್ ಜಿ. ಸುವರ್ಣ, ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇದರ ಅಧ್ಯಕ್ಷ ವಿಶ್ವನಾಥ್ ಕೊಲ್ಯ, ಪಡುಮಲೆಯ…

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ : ಉಳ್ಳಾಲ ವ್ಯಾಪ್ತಿಯ ೨೩ ಗ್ರಾಮಗಳಿಂದ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಶೈಕ್ಷಣಿಕ ದತ್ತು ಸ್ವೀಕಾರದಂತಹ ಕಾರ್ಯ ಶ್ಲಾಘನೀಯವಾಗಿದ್ದು, ಈ ವೇದಿಕೆಯ ಮೂಲಕ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಮುಂದಿನ ದಿನಗಳಲ್ಲಿ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸುವ ಕಾರ್ಯ ಆಗಬೇಕು ಎಂದು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟುವಿನ ಕ್ಲಿಕ್ ಸಭಾಂಗಣದಲ್ಲಿ ನಡೆದ ಬ್ರಹ್ಮ ಶ್ರೀ ಬಿಲ್ಲವ ಯುವ ವೇದಿಕೆ ಕೇಂದ್ರ ಸಮಿತಿ ಉಳ್ಳಾಲ ಇದರ ಆಶ್ರಯದಲ್ಲಿ ೧೩ನೇ ವರ್ಷದ ಅರ್ಹ ಬಡ ಕುಟುಂಬದ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪಿಕಾಡು ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಈಶ್ವರ್ ಉಳ್ಳಾಲ್ ವಹಿಸಿದ್ದರು. ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ನೆರವೇರಿಸಿದರು. ಈ ಸಂದರ್ಭದಲ್ಲಿ ಮೂಕಾಂಬಿಕ ಕನ್ಸ್ಟ್ರಕ್ಷನ್ನ ಮಾಲಕ ಚಂದ್ರಹಾಸ್ ಪಂಡಿತ್ಹೌಸ್,…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 22 ಗ್ರಾಮ ಪಂಚಾಯತ್‍ನಲ್ಲಿ ಎರಡು ಗ್ರಾಮ ಪಂಚಾಯತ್‍ಗಳನ್ನು ಹೊರತು ಪಡಿಸಿ 20 ಗ್ರಾಮ ಪಂಚಾಯತ್ ಚುನಾವಣೆ ಶುಕ್ರವಾರ ನಡೆದಿದ್ದು ಒಟ್ಟು 394ಸ್ಥಾನದಲ್ಲಿ 33 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರೆ 361 ಸ್ಥಾನಗಳಿಗೆ 908 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಸಾಂದರ್ಭಿಕ ಚಿತ್ರ ಕ್ಷೇತ್ರದ ಅತೀ ದೊಡ್ಡ ಗ್ರಾಮ ಪಂಚಾಯತ್ ಆಗಿರುವ ಸೋಮೇಶ್ವರದಲ್ಲಿ 61 ಸ್ಥಾನಗಳಲ್ಲಿ 18 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 43 ಸ್ಥಾನಕ್ಕೆ 95 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ಉಳಿದಂತೆ ಅಂಬ್ಲಮೊಗರು ಗ್ರಾಮ ಪಂಚಾಯತ್‍ನಲ್ಲಿ 13 ಸ್ಥಾನಗಳಿಗೆ 39 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ಬೆಳ್ಮ ಗ್ರಾಮ ಪಂಚಾಯತ್‍ನಲ್ಲಿ 17 ಸ್ಥಾನಗಳಿದ್ದು, ಒಂದು ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದು, 16 ಸ್ಥಾನಗಳಿಗೆ 44 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ಬೋಳಿಯಾರ್ ಗ್ರಾಮ ಪಂಚಾಯತ್‍ನಲ್ಲಿ 15ಸ್ಥಾನಗಳಿಗೆ 53 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದು, ಹರೇಕಳ ಗ್ರಾಮ ಪಂಚಾಯತ್‍ಗೆ 18 ಸ್ಥಾನಗಳಲ್ಲಿ ಒಂದು ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದು, 17…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಸೈಗೋಳಿ: ಕರ್ನಾಟಕ ರಾಜ್ಯಮೀಸಲು ಪೊಲೀಸ್ ಪಡೆಯಲ್ಲಿ ಅಮೂಲಾಗ್ರ ಬದಲಾವಣೆ ನಡೆಸುತ್ತಿದ್ದು, ವರ್ಷವೊಂದಕ್ಕೆ 1000ಕ್ಕೂ ಹೆಚ್ಚು ಯುವಜನರನ್ನು ಪೊಲೀಸ್ ಇಲಾಖೆಗೆ ಸೇರ್ಪಡೆಗೊಳಿಸುತ್ತಿದ್ದು, ಕೆಎಸ್‍ಆರ್‍ಪಿಯಲ್ಲಿ ಯುವ ಪಡೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಬೆಂಗಳೂರಿನ ಕೆಎಸ್‍ಆರ್‍ಪಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅಭಿಪ್ರಾಯಪಟ್ಟರು. ಅಸೈಗೋಳಿಯ ಕೆಎಸ್‍ಆರ್‍ಪಿ 7ನೇ ಪಡೆ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ ರಾಜ್ಯ ಮೀಸಲು ಪೊಲೀಸ್ 1, 3, 4, 9 ಮತ್ತು 10ನೇ ಬೆಂಗಳೂರು ಹಾಗೂ ಶಿಗ್ಗಾವಿ ಘಟಕಗಳ ವಿಶೇಷ ಮೀಸಲು ಪೆÇಲೀಸ್ ಕಾನ್ಸ್‍ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಸಮಾರಂಭದಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು. ಕೆಎಸ್‍ಆರ್‍ಪಿಯಲ್ಲಿ ಪೊಲೀಸರಿಗೆ ಕೆಲಸದ ಒತ್ತಡಗಳಿವೆ ಈ ನಿಟ್ಟಿನಲ್ಲಿ ಪೊಲೀಸರಿಗೆ ನ್ಯಾಯುತವಾಗಿ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪೊಲೀಸರನ್ನು ಒತ್ತಡದಿಂದ ಕಡಿಮೆ ಮಾಡಲು ಅವರಿಗೆ ಸಿಗುವ ವರ್ಷದ 15 ದಿನಗಳ ರಜೆ ಕಡ್ಡಾಯವಾಗಿ ಪೊಲೀಸರು ಪಡೆದುಕೊಳ್ಳಬೇಕು ಮತ್ತು ಪೆÇಲೀಸರಿಗೆ ಬರುವ ಕಾಯಿಲೆಯನ್ನು ತಡೆಯಲು ಕೆಎಸ್‍ಆರ್‍ಪಿಯಲ್ಲಿ ಪ್ರತೀವರುಷ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ರಾಷ್ಟ್ರೀಯ ಹೆದ್ದಾರಿ ೬೬ರ ಉಚ್ಚಿಲ ಸೇತುವೆಯಿಂದ ಅಕ್ರಮ ಕಸಾಯಿಖಾನೆ, ಕೋಳಿ ಅಂಗಡಿಗಳ ತ್ಯಾಜ್ಯ ಸೇರಿದಂತೆ ಕೊಳೆತ ವಸ್ತುಗಳನ್ನು ಉಚ್ಚಿಲ ಹೊಳೆಗೆ ಹಾಕುವುದರಿಂದ ಸ್ಥಳೀಯವಾಗಿ ಅನಾರೋಗ್ಯ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಮತ್ತು ಸ್ಥಳಿಯಾಡಳಿತ ಶ್ರೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ತುಳುನಾಡು ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಸೇತುವೆಯಲ್ಲಿ ಹಾಕಿದ ವಸ್ತುಗಳು,ಹೊಳೆಯಲ್ಲಿ ಶೇಖರಣೆಗೊಂಡು ಕೊಳೆತ ತ್ಯಾಜ್ಯದಲ್ಲಿ ಹುಳಗಳು ಆಗಿದೆ. ಇದರಿಂದ ಸುತ್ತಮುತ್ತಲಿನ ಮನೆಗಳ ನಿತ್ಯ ಉಪಯೋಗದ ನೀರಿನ ಬಾವಿಗಳು ಕಲುಷಿತಗೊಂಡಿದೆ ಎಂದು ಪ್ರತಿಭಟನಾ ಕಾರರು ತಿಳಿಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಮುಖ ತಾಣವಾಗಿರುವ ಉಚ್ಚಿಲ ಸೇತುವೆಯಲ್ಲಿ ತಲಪಾಡಿ, ಕೋಟೆಕಾರ್, ಸೋಮೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯಗಳನ್ನು ಇಲ್ಲಿ ಸುರಿಯಲಾಗುತ್ತಿದೆ. ಕೋಳಿ ಅಂಗಡಿಗಳ ತ್ಯಾಜ್ಯ ಅಕ್ರಮ ಕಸಾಯಿಖಾನೆಯ ತ್ಯಾಜ್ಯ, ಕ್ಯಾಟರಿಂಗ್ ನಡೆಸುವವರು ತ್ಯಾಜ್ಯವನ್ನು ಇದೇ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರೊಂದಿಗೆ ಕೇರಳದಿಂದ ಬರುವ ವಾಹನಗಳು ತ್ಯಾಜ್ಯವನ್ನು ಇದೇ ಸ್ಥಳದಿಂದ ಹಾಕುವುದರಿಂದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ : ನಿಟ್ಟೆ ವಿಶ್ವವಿದ್ಯಾನಿಲಯದ ಸಾರ್ವಜನಿಕ ಆರೋಗ್ಯ ಸ್ನಾತಕೋತ್ತರ ವಿಭಾಗದ ನಾಲ್ವರು ವಿದ್ಯಾರ್ಥಿಗಳು ಅಮೇರಿಕದ ಮಿನ್ನೆಸೋಟದ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ವಿಶ್ವವಿದ್ಯಾನಿಲಯ ಮಿನ್ನಿಯಾಪೊಲೀಸ್ನಲ್ಲಿ ಮೂರು ವಾರಗಳ ಕಾಲ ನಡೆಯಲಿರುವ ಸಾರ್ವಜನಿಕ ಆರೋಗ್ಯ ಶಿಕ್ಷಣದ ವಿಚಾರದಲ್ಲಿ ಉನ್ನತ ಅಧ್ಯಯನಕ್ಕೆ ಆಯ್ಕೆಯಾಗಿದ್ದಾರೆ. ಸಾರ್ವಜನಿಕ ಆರೋಗ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಡಾ. ಅರ್ಚನಾ ಆರ್., ಜೆನ್ನಿಫೆರ್ ಮಥಾಯಸ್, ನಿವೇದಿತಾ ಪಿ.ಜೆ., ನಿಲಿಟಾ ಸಲ್ದಾನ ಅಮೇರಿಕದ ವಿಶ್ವವಿದ್ಯಾನಿಲಯದಲ್ಲಿ ಮೂರು ವಾರಗಳ ಕಾಲ ಉನ್ನತ ಅಧ್ಯಯನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದು, ಇವರ ಅಧ್ಯಯನಕ್ಕೆ ಸುಮಾರು ೨೩ ಸಾವಿರ ಯುಎಸ್ ಡಾಲರ್ (೧೫ಲಕ್ಷ ರೂ.) ವಿದ್ಯಾರ್ಥಿ ವೇತನದೊಂದಿಗೆ ಆಯ್ಕೆಯಾಗಿದ್ದು, ನಿಟ್ಟೆ ವಿಶ್ವವಿದ್ಯಾನಿಲಯದಿಂದ ಮಿನ್ನೆಸೋಟ ವಿಶ್ವವಿದ್ಯಾನಿಲಯದ ಅಧ್ಯಯನ ಒಡಂಬಡಿಕೆಯಲ್ಲಿ ಅಮೇರಿಕಕ್ಕೆ ತೆರಳಲಿರುವ ಪ್ರಥಮ ವಿದ್ಯಾರ್ಥಿಗಳ ತಂಡವಾಗಿದೆ ಎಂದು ಕ್ಷೇಮದ ಡೀನ್ ಡಾ. ಸತೀಶ್ ಭಂಡಾರಿ ತಿಳಿಸಿದರು. ಈ ಸಂದರ್ಭದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ರಮಾನಂದ ಶೆಟ್ಟಿ, ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ಸುದೀಪ್ ಶೆಟ್ಟಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುರ್ನಾಡು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ಬೋಳಿಯಾರು ರಂತಡ್ಕದ ಜಾರದಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ -258 ರಲ್ಲಿ ಮತ ಚಲಾಯಿಸುವ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಸ್ಥರು ಸಕ್ರಿಯವಾಗಿ ಭಾಗವಹಿಸಬೇಕು. ಗ್ರಾಮೀಣ ಮಟ್ಟದ ಚುನಾವಣೆಯೇ ಪ್ರಜಾಪ್ರಭುತ್ವದ ಬಹುಮುಖ್ಯ ಆಸ್ತಿ . ಜನಸಾಮಾನ್ಯರ ನೋವುಗಳಿಗೆ ಸ್ಪಂಧಿಸುವ ಸಲುವಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಮುಟ್ಟಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಅಗತ್ಯ. ಅವರ ಆಯ್ಕೆ ಸರಿಯಾದಲ್ಲಿ ಊರಿನ ಅಭಿವೃದ್ಧಿ ಸಾಧ್ಯ ಎಂದರು.

Read More