ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ದಂತ ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಹೊಸ ತಂತ್ರe್ಞÁನಗಳು, ಕೋರ್ಸ್ಗಳ ಮೂಲಕ ದಂತ ವೈದ್ಯರಿಗೆ ಮಾರ್ಗದರ್ಶನ ನೀಡುವ ಕಾರ್ಯಗಳು ನಡೆಯುತ್ತಿದೆ, ಓರಲ್ ಇಂಪ್ಲಾಂಟೋಲೋಜಿಯಂತಹ ವಿಶೇಷ ಸರ್ಟಿಫಿಕೆಟ್ ಕೋರ್ಸ್ನಂತಹ ಶೈಕ್ಷಣಿಕ ತರಬೇತಿಯನ್ನು ಎಲ್ಲಾ ವಿಭಾಗಗಳು ನಡೆಸಲು ಮುಂದೆ ಬರಬೇಕು ಇದಕ್ಕೆ ನಿಟ್ಟೆ ವಿಶ್ವವಿದ್ಯಾನಿಲಯ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲತಿ ಪ್ರೊ| ರಮಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ದೇರಳಕಟ್ಟೆಯ ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟರ್ ಸೈನ್ಸ್ನ ವಿಂಶತಿ ಭವನದಲ್ಲಿ ಇತ್ತೀಚೆಗೆ ಜರಗಿದ ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟರ್ ಸೈನ್ಸ್ ಇದರ ಓರಲ್ ಇಂಪ್ಲಾಂಟೋಲೋಜಿ ವಿಭಾಗದಲ್ಲಿ ತರಬೇತಿ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮ ಮತ್ತು ನಿರಂತರ ದಂತ ವೈದ್ಯಕೀಯ ಶಿಕ್ಷಣ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟರ್ ಸೈನ್ಸ್ನ ವಿಶ್ರಾಂತ ಡೀನ್ ಮತ್ತು ಕ್ಯಾಡ್ಸ್ ನಿರ್ದೇಶಕ ಪ್ರೊ| (ಡಾ|) ಎನ್.…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ತಲಪಾಡಿಯ ಕೆ.ಸಿ ನಗರ, ಪೆÇೀಮಣ್ಣ್, ಪಂಜಳ, ಮಧವುಪೂರ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಗಿದ್ದು ಎಸ್ಸೆಸ್ಸೆಫ್ ಕೆ.ಸಿ ನಗರ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಈ ಭಾಗಗಳಿಗೆ ಉಚಿತ ಕುಡಿಯುವ ನೀರು ಸರಬರಾಜು ಮಾಡಲಾಯಿತು. ಈ ಸಂದರ್ಭ ಅಧ್ಯಕ್ಷ ರಹೀಂ ಝುಹುರಿ, ಮಾಜಿ ಕಾರ್ಯದರ್ಶಿ ಇಕ್ಬಾಲ್ ಎಂ.ಎ, ಸದಸ್ಯರಾದ ಇಸ್ಮಾಯಿಲ್ ಕೆ.ಸಿ ನಗರ, ಖಲೀಲ್, ಇಮ್ರಾನ್, ಇಸ್ಮಾಯಿಲ್ ಮದನಿ ಬಾಳೆಪುಣಿ, ಎಸ್ವೈಎಸ್ ಮುಖಂಡ ಅಬ್ಬಾಸ್ ಕೆ.ಸಿ ನಗರ, ಶರೀಫ್ ಪೂಮಣ್ಣ್, ಕರೀಂ ಪೂಮಣ್ಣ್, ಮುಸ್ತಾಫ, ಸಂಶುದ್ದೀನ್, ಮುಸ್ತಾಫ ಕೆ.ಸಿ ನಗರ ಮುಂತಾದವರು ಉಪಸ್ಥಿತರಿದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯ: ಕಿನ್ಯ ಗ್ರಾಮ ಪಂಚಾಯತ್ನ 2015-2016ನೇ ಸಾಲಿನ 2ನೇ ಹಂತದ ಗ್ರಾಮ ಸಬೆಯು ಕಿನ್ಯ ಉಕ್ಕುಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯೆ ರಶೀದ ಭಾನು ಮಾತನಾಡಿ ಜಿಲ್ಲಾ ಪಂಚಾಯತ್ ನಲ್ಲಿ ಬರುವ ಅನುದಾನವನ್ನು ಒದಗಿಸಿ ಕೊಡುವಲ್ಲಿ ಶಕ್ತಿ ಮೀರಿ ದುಡಿಯುತ್ತೇನೆ ಎಂದು ಹೇಳಿದರು. ನೋಡೆಲ್ ಅಧಿಕಾರಿಯಾಗಿ ಮಂಗಳೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಯಶೋಧರ ಜೆ. ಕಿನ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ, ಉಪಾಧ್ಯಕ್ಷರಾದ ಸಿರಾಜ್ ಕಿನ್ಯಾ, ಸದಸ್ಯರಾದ ಮೊಹಮ್ಮದ್, ಫಾರೂಕ್ ಕಿನ್ಯಾ, ಹಮೀದ್ ಕಿನ್ಯಾ, ಅಬೂಶಾಲಿ, ಮಹಾಬಲ ಪೂಂಜ, ಆಶಾಲತಾ, ಮೈಮೂನಾ, ಕುಸುಮಾ, ಹಾಗೂ ತಾಲೂಕು ಪಂಚಾಯತ್ ಸದಸ್ಯರಾದ ಸಿದ್ದೀಕ್ ತಲಪಾಡಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು,ಕಾರ್ಯದರ್ಶಿ ಸುರೇಖ ವರದಿ ಮಂಡನೆ ಮಾಡಿದರು
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ನಿಟ್ಟೆ ವಿಶ್ವವಿದ್ಯಾಲಯದ ಕ್ಷೇಮ ಕಾಲೇಜಿನ ಸ್ಕಿಲ್ ಲ್ಯಾಬ್ನಲ್ಲಿ ಎ. 16ರಂದು ನಡೆದ ಕಾರ್ಯಗಾರದಲ್ಲಿ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆಯಲ್ಲಿ ತರಬೇತಿ ನೀಡಲಾಯಿತು. ಗೈಡ್ಸ್ ಕ್ಯಾಪ್ಟನ್ ಫ್ಲೇವೀ ಡಿ’ಸೋಜ ನೇತೃತ್ವದ ಅಬ್ಬಕ್ಕ ದಳದಿಂದ ಆಯೋಜಿಸಲ್ಪಟ್ಟಿದ್ದ ಈ ಶಿಬಿರದಲ್ಲಿ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಬಂಟ್ವಾಳ ತಾಲೂಕುಗಳ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕ್ಷೇಮ ಕಾಲೇಜಿನ ಅರಿವಳಿಕೆ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ| ಶ್ರೀಪಾದ ಜಿ ಮೆಹೆಂದಳೆ ಹಾಗೂ ಡಾ| ಸುಮಲತಾ ಆರ್. ಶೆಟ್ಟಿ ಆಕಸ್ಮಿಕ ಹೃದಯ ಸ್ತಂಭನದ ತುರ್ತು ಸಂದರ್ಭದಲ್ಲಿ ನೀಡಲೇಬೇಕಾದ ಚಿಕಿತ್ಸೆಯ ಕೌಶಲ್ಯವನ್ನು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಶ್ರೀ ಪಟ್ಟೋರಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನ ಪಟ್ಟೋರಿ, ಕೊಣಾಜೆ ಇದರ ನೂತನ ಗರ್ಭಗುಡಿ, ಗೋಪುರ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಹಾಗೂ ವರ್ಷಾವಧಿ ಸಾನದಾಯನ ಜಾತ್ರಾ ಮಹೋತ್ಸವವು ಎ.20ರಿಂದ ಎ.23ರವರೆಗೆ ನಡೆಯಲಿದೆ. ಎ.20ರಂದು ಸಂಜೆ 5ಗಂಟೆಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹವಾಚನ, ಸಪ್ತಶುದ್ದಿ, ಪ್ರಸಾದಶುದ್ಧಿವಾಸ್ತು ಹೋಮ, ವಾಸ್ತು ಬಲಿ, ವಾಸ್ತುಪೂಜೆ, ಪ್ರಕಾರ ಬಲಿ, ದೈವಗಳ ಮಂಚ ಅಧಿವಾಸ, ಕಲಶಾಧಿವಾಸ, ಆಧಿವಾಸ ಹೋಮ ನಡೆಯಲಿದ್ದು ಸಂಜೆ ಆರು ಗಂಟೆಗೆ ಪಟ್ಟೋರಿ ಭಂಡಾರ ಮನೆಯಿಂದ ಶ್ರಿ ದೈವಗಳ ಭಂಡಾರ ಶ್ರೀ ಸನ್ನಿಧಿಗೆ ಬರಲಿದೆ. ಎ.21ರಂದು ಬೆಳಿಗ್ಗೆ ಗಣಪತಿ ಹೋಮ, ಬಳಿಕ ಶ್ರೀ ಪಟ್ಟೋರಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ತಂಬಿಲ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 3ಗಂಟೆಗೆ ಮಲರಾಯ ಬಂಟ ದೈವಗಳ ನೇಮ, ರಾತ್ರಿ 7ಗಂಟೆಗೆ ಪಟ್ಟೋರಿತ್ತಾಯ ದೈವದ ಕೋಟ್ಯದಾಯನ ನೇಮ ನಂತರ ಸಾಂಸ್ಕøತಿಕ ಕಾರ್ಯಕ್ರಮ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲದ ಮೊಗವೀರಪಟ್ನ ನಿವಾಸಿ ಮೀನುಗಾರ ರಾಜು ಕೊಟ್ಯಾನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಉಳ್ಳಾಲ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ಅಸ್ವೀರ್ ಯಾನೆ ಅಚ್ಚು (19), ಅಬ್ದುಲ್ ಮುತ್ತಾಲಿಪ್ ಯಾನೆ ಮುತ್ತು (20) ಹಾಗೂ ಇನ್ನೋರ್ವ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳು. ಎ.12 ಉಳ್ಳಾಲ ಕೋಟೆಪುರ ಜೆಟ್ಟಿಗೆ ಮೀನುಗಾರಿಕೆಗೆಂದು ತೆರಳುತ್ತಿದ್ದ ಸಂದರ್ಭ ಉಳ್ಳಾಲ ಕೋಟೆಪುರ ಬರಕಾ ಓವರ್ ಸೀಸ್ ಪ್ಯಾಕ್ಟರಿಯ ಸಮೀಪ ದುಷ್ಕರ್ಮಿಗಳು ಬಲವಾದ ಆಯುಧದಿಂದ ತಲೆಗೆ ಜಜ್ಜಿ ಹತ್ಯೆಗೈದಿದ್ದರು. ಆಟವಾಡುತ್ತಿದ್ದ ಮಕ್ಕಳು ಮೃತದೇಹ ಕಂಡು ಪ್ರಕರಣ ಬೆಳಕಿಗೆ ಬಂದಿತ್ತು. ಮುಂದುವರಿಯುವುದು…………..
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಮೊಗವೀರ ಮೀನುಗಾರ ರಾಜು ಕೋಟ್ಯಾನ್ ಅವರ ಶವವನ್ನು ಉಳ್ಳಾಲ ಪೊಲೀಸ್ ಠಾಣೆಯೆದುರು ಇಟ್ಟು ಮೊಗವೀರ ಸಮಾಜದವರು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆಯಿತು. ಕೋಟೆಪುರ ಸಮೀಪ ಮೊಗವೀರಪಟ್ನ ನಿವಾಸಿ ಮೀನುಗಾರ ರಾಜು ಕೋಟ್ಯಾನ್ (41) ಅವರನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈಯ್ಯಲಾಗಿತ್ತು. ಘಟನೆ ಖಂಡಿಸಿ ಮಂಗಳವಾರ ಮೊಗವೀರ ಮಹಿಳೆಯರು ಠಾಣೆಗೆ ಮುತ್ತಿಗೆ ಹಾಕಿ 24 ಗಂಟೆಯೊಳಗೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು. ಬುಧವಾರ ಬೆಳಿಗ್ಗೆ ಮೊಗವೀರಪಟ್ನದ ರಾಜು ಕೋಟ್ಯಾನ್ ಅವರ ಮನೆಯಿಂದ ಹೊರಟ ಶವಯಾತ್ರೆ ಸೀರೋಡ್ ಮೂಲಕ ಛೋಟಾ ಮಂಗಳೂರು ರಸ್ತೆಯಾಗಿ ಉಳ್ಳಾಲ ಜಂಕ್ಷನ್ನಿನಿಂದ ಹಾದು ಬಳಿಕ ಉಳ್ಳಾಲ ಠಾಣೆಯೆದರು ಇರಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉಳ್ಳಾಲದಲ್ಲಿ ಮೊಗವೀರರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದ್ದರೂ ಪೊಲೀಸರು ಈವರೆಗೆ ಆರೋಪಿಗಳನ್ನು ಬಂಧಿಸಿಲ್ಲ. ಚೂರಿ ಇರಿತ, ಹಲ್ಲೆ, ಮನೆಗಳಿಗೆ ಹಾನಿ ನಡೆದರೂ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಪತ್ತೆ ಇನ್ನೂ ಆಗಿಲ್ಲ. ಅದೇ ಮೊಗವೀರರ ಮೇಲೆ ಆರೋಪ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮೊಗವೀರಪಟ್ನ: ಮೀನುಗಾರಿಕೆಂದು ತೆರಳಿದ್ದ ವ್ಯಕ್ತಿಯ ಶವ ಕೋಟೆಪುರ ಸಮೀಪದ ಬರಾಕಾ ಫಿಶ್ ಆಯಿಲ್ ಮಿಲ್ ಮುಂಭಾಗದಲ್ಲಿ ಮುಖ ಜಜ್ಜಿದ ಸ್ಥಿತಿಯಲ್ಲಿ ಮಂಗಳವಾರ ಮಧ್ಯಾಹ್ನ ವೇಳೆ ಬೆಳಕಿಗೆ ಬಂದಿದ್ದು, ಘಟನೆಯಿಂದ ಸ್ಥಳದಲ್ಲಿ ಉದ್ವಿಘ್ನ ವಾತಾವರಣ ಉಂಟಾಗಿದೆ. ಮೊಗವೀರಪಟ್ನ ನಿವಾಸಿ ರಾಜು ಕೋಟ್ಯಾನ್ (41) ಶವ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಮಂಗಳವಾರ ನಸುಕಿನ 2 .00 ಗಂಟೆ ಸುಮಾರಿಗೆ ಮನೆಯಿಂದ ಕೋಟೆಪುರದ ಧಕ್ಕೆಗೆ ನಡೆದುಕೊಂಡು ಹೋದವರ ಶವ ಇಂದು ಮಧ್ಯಾಹ್ನ ವೇಳೆ ಪತ್ತಯಾಗಿದೆ. ಕೋಟೆಪುರ ಉಳ್ಳಾಲ ರಸ್ತೆ ಬದಿಯ ಪೊದೆಯ ಕೆಳಗಡೆ , ಬರಾಕಾ ಆಯಿಲ್ ಮಿಲ್ ಎದುರುಗಡೆಯೇ ಮೃತದೇಹ ಮುಖಕ್ಕೆ ಜಜ್ಜಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ರಸ್ತೆಯಲ್ಲಿ ಹಲವು ವಾಹನಗಳು ತೆರಳಿದ್ದರೂ, ಸಮೀಪದ ಮಿಲ್ನಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರೂ ಮಧ್ಯಾಹ್ನದ ವೇಳೆ ರಸ್ತೆಬದಿಯಲ್ಲಿ ತೆರಳುತ್ತಿದ್ದ ಮಕ್ಕಳಿಗೆ ಮೃತದೇಹ ಕಂಡುಬಂದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವ: ರಾಜು ಅವರ ಮುಖದ ಭಾಗ ಸಂಪೂರ್ಣ ಜಜ್ಜಿದ ಸ್ಥಿತಿಯಲ್ಲಿ ಕಂಡುಬಂದಿದೆ.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ತೊಕ್ಕೊಟ್ಟು ಕಾಪಿಕಾಡಿನ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ (ಸುಕಾ) ಆಶ್ರಯದಲ್ಲಿ ಕಬಡ್ಡಿ ಪೋಷಕ ಕೀರ್ತಿಶೇಷ ಎ. ಜಯಣ್ಣ ಸ್ಮರಣಾರ್ಥ ಕೊಲ್ಯಶ್ರೀ ನಾಗಬ್ರಹ್ಮಸ್ಥಾನದ ಬಳಿಯ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ಮಾಸ್ಟರ್ಸ್ ಕಬಡ್ಡಿ ಕ್ರೀಡಾ ಸಂಗಮದಲ್ಲಿ ಪುತ್ತೂರಿನ ಸಿಝ್ಲರ್ಸ್ ತಂಡ ಕೇರಳ ನೀಲೇಶ್ವರದ ವೀರಸಂಘಮ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಕಾಪಿಕಾಡು ತೊಕ್ಕೊಟ್ಟಿನ ಶ್ರೀ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ (ಸುಕಾ) ಇದರ ಆಶ್ರಯದಲ್ಲಿ ಸುಕಾ ಅಧ್ಯಕ್ಷ ಎ.ಜೆ. ಶೇಖರ್ ನೇತೃತ್ವದಲ್ಲಿ ದಿವಂಗತ ಎ. ಜಯಣ್ಣ ಸ್ಮರಣಾರ್ಥ ಹೊನಲು ಬೆಳಕಿನ ಮಾಸ್ಟರ್ಸ್ ಕಬಡ್ಡಿ ಕ್ರೀಡಾ ಸಂಗಮ -2016 ಶನಿವಾರ ರಾತ್ರಿ ನಾಗಬ್ರಹ್ಮ ದೇವಸ್ಥಾನದ ಬಳಿಯ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಪಂದ್ಯಾಟಕ್ಕೆ ಕುಂಟಾರು ರವೀಶ್ ತಂತ್ರಿ ಚಾಲನೆ ನೀಡಿದ್ದರು. ಪಂದ್ಯಾಟದಲ್ಲಿ ತೃತೀಯ ಸ್ಥಾನವನ್ನು ಶಿವಾಜಿ ತೊಕ್ಕೊಟ್ಟು ಪಡೆದರೆ, ನಾಲ್ಕನೇ ಸ್ಥಾನವನ್ನು ಉಳ್ಳಾಲ್ ಸ್ಪೋರ್ಟಿಂಗ್ ಕ್ಲಬ್ ಪಡೆದುಕೊಂಡಿತು. ಮಾಸ್ಟರ್ಸ್ ಕಬಡ್ಡಿ ಪಂದ್ಯಾಟದಲ್ಲಿ ಕೇರಳ, ದ.ಕ.ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಆಯ್ದ 18 ತಂಡಗಳು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸೂಕ್ಷ್ಮಪ್ರದೇಶ ಉಳ್ಳಾಲ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಳೆದ 2 ವರ್ಷಗಳಿಂದ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ `ಮಹಿಳಾ ಸೂಪರ್ ಕಾಪ್’ ಅನಿಸಿಕೊಂಡಿರುವ ಭಾರತಿ ಅವರು 2016 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಇಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ವೀಕರಿಸಲಿದ್ದಾರೆ. 2005 ರಲ್ಲಿ ಉಪನಿರೀಕ್ಷಕಿಯಾಗಿ ಸೇವೆ ಆರಂಭಿಸಿದ ಭಾರತಿ ಮೂಡಬಿದ್ರೆ, ಪಾಂಡೇಶ್ವರ, ಪಣಂಬೂರು ಹಾಗೂ ಸದ್ಯ ಉಳ್ಳಾಲದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೂಲತ: ಚಿಕ್ಕಮಗಳೂರು ಕಡೂರು ನಿವಾಸಿಯಾಗಿರುವ ಅವರು ಎರಡು ವರ್ಷಗಳ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಎರಡು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಉಪನಿರೀಕ್ಷಕಿ ಹುದ್ದೆಗೆ ಪರೀಕ್ಷೆ ಬರೆದು ತೇರ್ಗಡೆಯಾಗಿ, ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಆರಂಭಿಸಿದ್ದರು. ನೇರ ನಡೆಯ ವ್ಯಕ್ತಿತ್ವದವರಾಗಿರುವುದರಿಂದ ಹಲವು ಜನಪ್ರತಿನಿಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಪಣಂಬೂರು ಠಾಣೆಯಲ್ಲಿ ಕರ್ತವ್ಯದ ವೇಳೆ ನ್ಯಾಯಾಲಯದಿಂದ ವಾರೆಂಟ್ ಆಗಿದ್ದ ಕುಖ್ಯಾತ ಗಾಂಜಾ ಆರೋಪಿಯ ಬಂಧನಕ್ಕೆ ಮಧ್ಯರಾತ್ರಿ ಆತನ ಮನೆಗೆ ದಾಳಿ ನಡೆಸಿದಾಗ,…

