ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯ: ಸಾಮರಸ್ಯ ಮತ್ತು ಸೌಹಾರ್ದತೆಗೆ ಶಾಲೆಯೇ ಮೊದಲ ಪಾಠಶಾಲೆ, ಈ ಮೂಲಕ ಸಮಾಜದಲ್ಲಿ ನೆಮ್ಮದಿಯ ವಾತಾವರಣ ಮೂಡಿಸಬಹುದು ಎಂದು ತೊಕ್ಕೊಟ್ಟು ಪೆರ್ಮನ್ನೂರು ಸಂತ ಸೆಬೆಸ್ಟಿಯನ್ ಧರ್ಮ ಕೇಂದ್ರದ ಧರ್ಮಗುರು ಫಾ. ಡಾ.ಜೆ.ಬಿ ಸಲ್ದಾನ ಅಭಿಪ್ರಾಯಪಟ್ಟರು. ಕಿನ್ಯ ಬೆಳರಿಂಗೆ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಪುನ:ಪ್ರತಿಷ್ಠೆ, ಬ್ರಹ್ಮಕಲಶ ಮತ್ತು ಧರ್ಮನೇಮದ ಪ್ರಯುಕ್ತ ಮಂಗಳವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿಯೊಂದು ಧರ್ಮದ ಧಾರ್ಮಿಕ ಶುಭ ಸಮಾರಂಭಗಳಲ್ಲಿ ಎಲ್ಲ ಧರ್ಮೀಯರು ಸಮಾನವಾಗಿ ಪಾಲ್ಗೊಳ್ಳುವ ಮೂಲಕ ಕೋಮು ಸೌಹಾರ್ದತೆಯ ಜೊತೆಗೆ ಸಾಮರಸ್ಯ ವಾತಾವರಣ ಮೂಡಲು ಸಾಧ್ಯ. ಮಕ್ಕಳಿಗೆ ಶಾಲೆಯಲ್ಲಿ ಸೌಹಾರ್ದತೆಯ ಪಾಠ ಸಿಕ್ಕಾಗ ಶಿಕ್ಷಕರು ಉದಾತ್ತ ನೀತಿ ಬೋಧನೆ ಮಾಡುವುದರಿಂದ ಪರಿಸರ ಪ್ರಶಾಂತವಾಗಿರುತ್ತದೆ. ಆ ನಿಟ್ಟಿನಲ್ಲಿ ಕಿನ್ಯ ಬೆಳರಿಂಗೆಯ ಶ್ರೀ ಮಲರಾಯ ಧೂಮವತಿ ಬಂಟ ದೈವಗಳ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಧಾರ್ಮಿಕ ಸಭೆಯಲ್ಲಿ ಅನ್ಯ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬಾಳೆಪುಣಿ :ಶುಭ ಸಮಾರಂಭ ಮತ್ತು ದೈವದ ಕೋಲ ಮೊದಲಾದ ಸಂದರ್ಭದಲ್ಲಿ ಅಮಲು ಪದಾರ್ಥ ಸೇವಿಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು. ದುಶ್ಚಟಗಳಿಂದ ಮುಕ್ತರಾಗಬೇಕು. ಹಣ ಕೂಡಿಡುವ ಅತಿಯಾದ ಆಸೆಗಳೇ ಎಲ್ಲರನ್ನೂ ಹಾಳು ಮಾಡುತ್ತದೆ. ಯಾವತ್ತೂ ಹಣದ ಹಿಂದೆ ಬೀಳದೇ ಸತ್ಯ, ನ್ಯಾಯ, ಧರ್ಮವನ್ನು ಅನುಸರಿಸಬೇಕು ಎಂದು ಮಾಣಿಲ ಶ್ರೀ ಧಾಮ ಶ್ರೀ ಮಹಾಲಕ್ಷ್ಮೀಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕರೆ ನೀಡಿದರು. ಅವರು ಸೋಮವಾರ ಬಾಳೆಪುಣಿ ಗ್ರಾಮದ ಮೂಳೂರು ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನದ ಶ್ರೀ ದೇವರ ಪುನಃಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಎತ್ತಿನಹೊಳೆ ಯೋಜನೆಯಿಂದ ಸಮಾಜ ಅಧಃಪತನ : ಮಾಣಿಲ ಶ್ರೀ ಎತ್ತಿನಹೊಳೆ ಯೋಜನೆಯಿಂದ ಸಮಾಜದ ಅಧಃಪತನ ಖಂಡಿತ. ಪ್ರಜೆಗಳು ಪಾವತಿಸಿದ ತೆರಿಗೆಯನ್ನು ಪೆÇೀಲು ಮಾಡುವ ಈ ಯೋಜನೆಯ ಮೂಲಕ ಪ್ರಸ್ತುತ ಸಾವಿರಾರು ಕೋಟಿ ರೂ.ಗಳಲ್ಲದೇ ಪ್ರತಿವರ್ಷವೂ 2500 ಕೋಟಿ ರೂ.ಗಳನ್ನು ಖಾಲಿ ಮಾಡುವ ಸಾಧ್ಯತೆಯಿದೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ತಂತ್ರಜ್ಞಾನದ ಯುಗದಲ್ಲಿ ಜೀವನದ ಮೌಲ್ಯಗಳನ್ನು ಕಳೆದುಕೊಳ್ಳದೆ, ಶಿಕ್ಷಕರ ಉತ್ತಮ ಮಾರ್ಗದರ್ಶನವನ್ನು ಪಾಲಿಸುವುದರ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ಮಣಿಪಾಲ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಹಾಗೂ ಮಣಿಪಾಲ ವಿಶ್ವವಿದ್ಯಾಲಯದ ಉಪಾಧ್ಯಕ್ಷ ಡಾ.ರಾಮ್ ನಾರಾಯಣ್ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ಎ.ಬಿ.ಶೆಟ್ಟಿ ದಂತ ಮಹವಿದ್ಯಾಲಯದ 31 ನೇ ವಾರ್ಷಿಕೋತ್ಸವ ಸಮಾರಂಭವನ್ನು ಸೋಮವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಡಿಟೋರಿಯಂನಲ್ಲಿ ಉದ್ಘಾಟಿಸಿದರು. ಶಿಕ್ಷಕರು ವಿದ್ಯಾರ್ಥಿಗಳ ಮೇಲಿನ ಪ್ರೀತಿ ಮತ್ತು ಬಾಂಧವ್ಯವನ್ನು ಬೆಳೆಸುವುದರ ಮೂಲಕ ಉತ್ತಮ ಪ್ರಜೆಗಳನ್ನು ರೂಪಿಸಲು ಸಾಧ್ಯ. ಅಂತರ್ಜಾಲದ ಮೂಲಕ ಸ್ಮಾಟ್ ್ ಫೋನನ್ನೇ ಪ್ರಪಂಚವಾಗಿರಿಸಿರುವ ಯುವ ಸಮುದಾಯ ಜೀವನದ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದೆ. ಕಂಪ್ಯೂಟರಿನ ಮೌಸ್ ನಲ್ಲಿ ಯಶಸ್ಸಿದೆ ಎಂದು ಭಾವಿಸುವವರು ಜೀವನದ ಕುರಿತ ವಿಮರ್ಶೆ ಮಾಡಬೇಕಿದೆ. ಮನುಷ್ಯನ ಅಭಿವೃದ್ಧಿ ತಂತ್ರಜ್ಞಾನದಿಂದ ನಡೆಸಲು ಮುಂದಾಗಿರುವವರು ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕಿದೆ. ಇನ್ನೊಬ್ಬರನ್ನು ಬಲಿಷ್ಠರನ್ನಾಗಿಸುವುದು, ಮನುಷ್ಯನನ್ನು ಉಪಯೋಗಿಸಿ ವಸ್ತುಗಳನ್ನು ಸಂಪಾದಿಸುವ ಬದಲು ಮನುಷ್ಯನನ್ನು ಪ್ರೀತಿಸಿ ವಸ್ತುಗಳನ್ನು ಗಳಿಸಿ, ದೂರುವಿಕೆಯನ್ನು ಸವಾಲಾಗಿ ಸ್ವೀಕರಿಸುವ ಮೂಲಕ ಯಶಸ್ವಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ಕೇಂದ್ರ ಸರಕಾರ ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಾವಲಂಬನೆ ಜೀವನ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಲಿದೆ. ಮಹಿಳೆ ಸ್ವಾವಲಂಬಿಯಾದಲ್ಲಿ ಕುಟುಂಬದ ಅಭಿವೃದ್ಧಿ ಜತೆಗೆ ಗ್ರಾಮದ ಅಭಿವೃದ್ಧಿಯೂ ಸಾಧ್ಯ ಎಂದು ಸೋಮೇಶ್ವರ ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಅಭಿಪ್ರಾಯಪಟ್ಟರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು , ಸ್ತ್ರೀ ಶಕ್ತಿ ಗೊಂಚಲು ಗುಂಪುಗಳು ಕೋಟೆಕಾರು ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ತಲಪಾಡಿಯ ವಿಶ್ವಾಸ್ ಆಡಿಟೋರಿಯಂನಲ್ಲಿ ಮಂಗಳವಾರ ಜರಗಿದ ಸ್ತ್ರೀಶಕ್ತಿ ಮಹಿಳಾ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹಿಳಾ ಸಂಘಗಳಲ್ಲಿ ಸ್ವಉದ್ಯೋಗ, ಸ್ವಾವಲಂಬನೆ ಪಾಠದ ಜತೆಗೆ ಮಹಿಳಾ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತುವಂತೆ ಮಹಿಳೆಯರನ್ನು ಬೆಳೆಸಬೇಕು. ಎಲ್ಲಾ ಮಹಿಳೆಯರನ್ನು ಒಗ್ಗಟ್ಟಾಗಿಸುವ ಕಾರ್ಯಕ್ರಮ ನಡೆಸುವ ಸ್ತ್ರೀ ಶಕ್ತಿ ಸಂಘಗಳ ಕಾರ್ಯ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಆಳ್ವ ವಹಿಸಿದ್ದರು. ತಲಪಾಡಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯ: ಕಿನ್ಯ ಬೆಳರಿಂಗೆಯ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ, ಧರ್ಮನೇಮೋತ್ಸವದ ಅಂಗವಾಗಿ ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ಕಿನ್ಯ ಬೆಳರಿಂಗೆಯ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ದೈವಸ್ಥಾನದವರೆಗೆ ನಡೆದ ಹೊರೆ ಕಾಣಿಕೆ ಮೆರವಣಿಗೆಗೆ ಮುಸ್ಲಿಮರು ತಂಪು ಪಾನೀಯ ನೀಡುವುದರ ಮೂಲಕ ಸಾಮರಸ್ಯ ಮೆರೆದದರು. ಕಿನ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿರಾಜ್ ಕಿನ್ಯಾ ನೇತೃತ್ವದಲ್ಲಿ ಹೊರೆಕಾಣಿಕೆಯಲ್ಲಿ ಪಾಲ್ಗೊಂಡವರಿಗೆ ತಂಪು ಪಾನೀಯ ನೀಡಲಾಯಿತು. ಹಲವು ಕಿ.ಮೀ ನಡೆಯುತ್ತಾ ಸಾಗಿದ ಹಿಂದೂ ಭಕ್ತಾಧಿಗಳಿಗೆ ತಂಪು ಪಾನೀಯವನ್ನು ವಿತರಿಸಲಾಯಿತು. ಪ್ರತೀ ಎಲ್ಲಾ ಜಾತಿ ಧರ್ಮದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರ ಮುಖೇನ ಭಾಗದ ಜನ ಸೌಹಾರ್ದತೆ ಜತೆಗೆ ಪ್ರೀತಿಯಿಂದ ಬದುಕುತ್ತಿದ್ದೇವೆ. ಇಂತಹ ಸಂಬಂಧವನ್ನು ಗಟ್ಟಿಗೊಳಿಸುವುದು ಇಂತಹ ಕಾರ್ಯಕ್ರಮಗಳಿಂದ ಸಾಧ್ಯ ಎಂದು ಸಿರಾಜ್ ಹೇಳಿದರು. ಈ ವೇಳೆ ಕಿನ್ಯಾ ಗ್ರಾ. ಪಂ ಸದಸ್ಯರಾದ ಮಹಮ್ಮದ್, ಅಬುಸಾಲಿ, ಮಹಾಬಲ ಪೂಂಜಾ, ಫಾರುಕ್ ಕಿನ್ಯಾ ಮೊದಲಾದವರು ತಂಪುಪಾನೀಯ ಹಂಚುವ ನೇತೃತ್ವ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಿಲಾರ್: ಬೆಂಗಳೂರಿನ ರಾಜೀವ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆದ ವೈದ್ಯಕೀಯ ಸ್ನಾತ್ತಕೋತ್ತರ ಪರೀಕ್ಷೆಯಲ್ಲಿ ಫಾರೆನಿಕ್ಸ್ ಮೆಡಿಸಿನ್ ವಿಭಾಗದ ಪಿಲಾರ್ ಅಂಬಿಕಾರೋಡ್ ನಿವಾಸಿ ಡಾ.ಶೃತಿ.ಪಿ ಎಂಟನೇ ರ್ಯಾಂಕನ್ನು ಗಳಿಸಿರುತ್ತಾರೆ. ವರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಪೂರೈಸಿದ್ದು, ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತ್ತಕೋತ್ತರ ಪದವಿಯನ್ನು ಪಡೆದಿದ್ದರು. ಸದ್ಯ ಚೆನ್ನೈನ ಸವೀತಾ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಕೋಟೆಕಾರು ಸಿಂಡಿಕೇಟ್ ಬ್ಯಾಂಕಿನ ಉಪಪ್ರಬಂಧಕ ಪ್ರಭಾಕರ್ ಕೆ. ಮತ್ತು ಶಾರದಾ ದಂಪತಿ ಪುತ್ರಿ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಜನಾಡಿ: ರಾಜ್ಯದಲ್ಲಿಯೇ ಮೊದಲ ಬಾರಿ ಮಂಜನಾಡಿ ಪಂಚಾಯಿತಿಗೆ ಉಳಿದ ಪಂಚಾಯಿತಿಗಳಿಗಿಂತ ಹೆಚ್ಚುವರಿ ಅನುದಾನ ಮಂಜೂರಾಗಿದ್ದು, ಇದು ಹೆಚ್ಚು ಜನಸಂಖ್ಯೆ ಇರುವ ಮಂಜನಾಡಿ ಗ್ರಾಮದ ಅಭಿವೃದ್ಧಿಗೆ ಸಚಿವರ ಶ್ರಮದಿಂದ ದೊರೆತ ಕೊಡುಗೆ ಎಂದು ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕ ಅಭಿಯಂತರ ಎ.ಯಸ್.ರಾವ್ ಅಭಿಪ್ರಾಯಪಟ್ಟರು. ಅವರು ಮಂಜನಾಡಿ ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಯೋಜನೆ ಬಗ್ಗೆ ಮಂಜನಾಡಿಯ ಮಂಗಳಾಂತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಜರಗಿದ ವಿಶೇಷ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ಎಲ್ಲಾ ಪಂಚಾಯಿತಿಗೆ ರೂ. 75 ಲಕ್ಷ ಅನುದಾನ ಮಂಜೂರಾಗಿದೆ. ಆದರೆ ಮಂಜನಾಡಿ ಪಂಚಾಯಿತಿಗೆ ರೂ. 1.5 ಕೋಟಿ ಅನುದಾನವನ್ನು ಮಂಜೂರುಗೊಳಿಸಲಾಗಿದೆ. ಇದು ಹೆಚ್ಚು ಜನಸಂಖ್ಯೆ ಇರುವ ಮಂಜನಾಡಿ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಗ್ರಾಮದ ಜನರ ಪ್ರಸ್ತಾವನೆ ಪಡೆದು ಶಾಸಕರು ರಾಜ್ಯದಲ್ಲಿ ಪ್ರಥಮ ಬಾರಿ ಒಂದು ಪಂಚಾಯಿತಿಗೆ ದೊಡ್ಡ ಮೊತ್ತದ ಅನುದಾನವನ್ನು ದೊರಕಿಸಿದ್ದಾರೆ. ಸರಕಾರ ಸಾಮಾಜಿಕ ಆಡಿಟ್ ಅನ್ನುವ ಕಾನೂನು ಜಾರಿಗೆ ತಂದಿದ್ದು, ಇದರಲ್ಲಿ ಜನರೇ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕನಕದಾಸರ ನಂಟು ಇರುವ ಕರಾವಳಿಯಲ್ಲಿ ಇಂದು ದೌರ್ಜನ್ಯ, ಹಿಂಸೆಗಳೂ ಹೆಚ್ಚುತ್ತಿದ್ದು, ಇಂದಿನ ಕರಾವಳಿ ಮೊದಲಿನ ಕರಾವಳಿಯಾಗಿ ಉಳಿದಿಲ್ಲ ಎಂಬುದು ಆತಂಕದ ವಿಷಯವಾಗಿದೆ. ಇಂತಹ ಸಂದರ್ಭದಲ್ಲಿ ಕನಕದಾಸರ ನೆನಪು ಮತ್ತು ಅವರ ಚಿಂತನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ವಿವಿಯ ಹಳೆಸೆನೆಟ್ ಸಭಾಂಗಣದಲ್ಲಿ ಗುರುವಾರ ನಡೆದ `ಕನಕಗಂಗೋತ್ರಿ’ ಕನಕದಾಸರ ಕೀರ್ತನ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತವು ಬಹುತ್ವದ ನೆಲೆಯಲ್ಲಿ ಬೆಳೆದಿರುವಂತಹ ದೇಶವಾಗಿದ್ದು, ಇಲ್ಲಿಯ ಸಂಸ್ಕøತಿ, ಧರ್ಮ ಮುಂತಾದವುಗಳು ಬಹುತ್ವದ ಸ್ವರೂಪದಲ್ಲಿರುವುದನ್ನು ನಾವು ಗಮನಿಸಬಹುದಾಗಿದೆ. ದೇಶದಲ್ಲಿ ಹಿಂದಿನಿಂದಲೂ ಜಾತಿ, ಅಧಿಕಾರ, ಶೋಷಣೆಯ ವಿರುದ್ದ ಸಂಘರ್ಷಗಳು ನಡೆದಿರುವದನ್ನು ನಾವು ಇತಿಹಾಸದ ಮೂಲಕ ಅರಿತುಕೊಳ್ಳುತ್ತೇವೆ. ಸುಮಾರು 12ನೇ ಶತಮಾನದ ಸಮಯದಲ್ಲಿ ಶೋಷಣೆಗಳ ವಿರುದ್ದ ಧ್ವನಿ ಕೇಳಿಬಂದು ವಚನಕಾರರ ಮೂಲಕ ಪರ್ಯಾಯ ಸಂಸ್ಕøತಿಯು ಬೆಳವಣಿಗೆಗೊಂಡಿತ್ತು. ಇಂತಹ ಚಳುವಳಿಯಲ್ಲಿ ಯಾರೂ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು :ವಿವಾಹಿತ ಮಹಿಳೆಯೋರ್ವಳು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಂಡಾರ ಬೈಲು ನಿವಾಸಿ ಅಶ್ವಿನಿ(29) ಹಾಗೂ ಸಾನ್ವಿ(4), ಸಾತ್ವಿಕ್(1.8) ನಾಪತ್ತೆಯಾದವರು. ಕಳೆದ ಐದು ವರ್ಷದ ಹಿಂದೆ ಬಂಟ್ವಾಳ ತಾಲೂಕಿನ ಮಾರ್ನಬೈಲ್ ಗೆ ಅಶ್ವಿನಿಯನ್ನು ವಿವಾಹ ಮಾಡಿಕೊಡಲಾಗಿತ್ತು. ಅಸೌಖ್ಯದಿಂದ ಬಳಲುತ್ತಿದ್ದ ಅಶ್ವಿನಿ 3ತಿಂಗಳ ಹಿಂದೆ ತನ್ನ ತಾಯಿ ಮನೆಗೆ ಬಂದಿದ್ದರು. ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಯ ಬಳಿಕ ತಾಯಿ ಮನೆಯಲ್ಲಿಯೇ ಉಳಿದಿದ್ದ ಅಶ್ವಿನಿಯ ತಾಯಿಗೆ ಹೃದಯಾಘಾತವಾಗಿದ್ದ ಹಿನ್ನಲೆಯಲ್ಲಿ ಕೊಲ್ಯದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ತೆರಳಿದ್ದರು. ಮಾರ್ಚ್ 16ರಂದು ಚಿಕ್ಕಮ್ಮ ಸ್ವಸಹಾಯ ಸಂಘದ ಮೀಟಿಂಗ್ ಹೋದ ಸಮಯದಲ್ಲಿ ಅಶ್ವಿನಿ ತನ್ನ ಇಬ್ಬರು ಮಕ್ಕಳ ಜೊತೆಗೆ ಮನೆ ಬಿಟ್ಟು ಹೋದವರು ವಾಪಾಸ್ಸಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ತಂದೆ ಸುರೇಶ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ವಿದ್ಯಾ ಸಂಸ್ಥೆಗಳು ಹಣ ಮಾಡುವ ಕಂಪೆನಿಗಳಾಗದೇ, ಮಾನವೀಯತೆಗೆ ಒತ್ತು ಕೊಡುವ ಸಂಸ್ಥೆಗಳಾಗಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ಯೆನೆಪೋಯ ವಿಶ್ವವಿದ್ಯಾಲಯದ ಕಾರ್ಯವೈಖರಿ ಶ್ಲಾಘನೀಯ ಎಂದು ಜರ್ಮನಿಯ ಜೊಹನೆಸ್ ಗುಟನ್ ಬರ್ಗ್ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ನಿರ್ದೇಶಕ ಡಾ.ನೋರ್ಬರ್ಟ್ ಪೌಲ್ ಹೇಳಿದ್ದಾರೆ. ಅವರು ಜರ್ಮನಿಯ ಜೊಹನೆಸ್ ಗುಟೆನ್ ಬರ್ಗ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಯೇನೆಪೋಯ ವಿಶ್ವವಿದ್ಯಾಲಯದ ನೀತಿಶಾಸ್ತ್ರ ಕೇಂದ್ರವು ಐದು ವರ್ಷ ಪೂರೈಸಿದ ಪ್ರಯುಕ್ತ ಶುಕ್ರವಾರ ದೇರಳಕಟ್ಟೆ ಯೆನೆಪೋಯ ವೈದ್ಯಕೀಯ ಕಾಲೇಜಿನ ಉಪನ್ಯಾಸ ಕೇಂದ್ರದಲ್ಲಿ ಜರಗಿದ ಗೋಚರತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವೈದ್ಯಕೀಯ ಶಿಕ್ಷಣ ಕ್ಷೇತ್ರಗಳು ಬಹುತೇಕ ವ್ಯಾವಹಾರಿಕವಾಗಿ ಮಾರ್ಪಾಡಾಗಿವೆ. ಇದರಿಂದ ವೈದ್ಯಕೀಯ ನೀತಿಶಾಸ್ತ್ರ ಮರೆಯಾಗುತ್ತಿದೆ. ಆರ್ಥಿಕವಾಗಿಯೂ ವೈದ್ಯಕೀಯ ಕ್ಷೇತ್ರಗಳು ಹಿಂದುಳಿದಿಲ್ಲ. ಈ ನಡುವೆ ಮಾನವೀಯತೆಗೆ ಹೆಚ್ಚಿನ ಒತ್ತು ನೀಡಿ, ಬಡ ಮತ್ತು ಗ್ರಾಮೀಣ ವರ್ಗದವರ ಸೇವೆಯಲ್ಲಿ ಯೆನೆಪೋಯ ವಿಶ್ವವಿದ್ಯಾಲಯ ತೊಡಗಿರುವುದು ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ಮಾದರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೆನೆಪೋಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ರಘುವೀರ್…

